Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಾತಿಗಾಗಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ದಿನಾಂಕ:೧೦-೦೨-೨೦೨೬ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. ೭೫% ರಷ್ಟು ಹಾಗೂ ಇತರೆ ವರ್ಗಕ್ಕೆ ಶೇ.೨೫% ರಷ್ಟು ವಿದ್ಯಾರ್ಥಿಗಳಿಗೆ ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.ಈ ವಸತಿ ಶಾಲೆಗಳಲ್ಲಿ ಶೇ. ೫೦% ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರಿಸಿದೆ. ಪೋಷಕರ ಆದಾಯ ರೂ.೨.೫೦ ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿದ್ಯಾರ್ಥಿಗಳು ಸೇವಾಸಿಂಧುಪೋರ್ಟಲ್ ನೇರವಾಗಿ ವೆಬ್ಸೈಟ್ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿಯ ದೂರವಾಣಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೫–೨೬ನೇ ಸಾಲಿಗೆ ಬೆಂಗಳೂರಿನ ಆಶೀರ್ವಾದ ನಿಯಮಿತ ಸಂಸ್ಥೆಯಲ್ಲಿ ಕೌಶಲ್ಯ ತರಬೇತಿ ಪಡೆಯಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಈ ತರಬೇತಿಗೆ ಅರ್ಜಿಯನ್ನು ದಿನಾಂಕ ೩೧-೦೧-೨೦೨೬ರ ಒಳಗಾಗಿ ಸಲ್ಲಿಸಬಹುದಾಗಿದೆ.ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು ಹಾಗೂ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ೮ನೇ ತರಗತಿ, ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೋಮಾ, ಪಿಯುಸಿ ಉತ್ತೀರ್ಣರಾದ ಅಥವಾ ಪದವಿ ಉತ್ತೀರ್ಣ-ಅನುತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ ಕನಿಷ್ಠ ೧೮ ವರ್ಷ ಹಾಗೂ ಗರಿಷ್ಠ ೩೫ ವರ್ಷಗಳೊಳಗಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿ ಇರುವವರು ಈ ತರಬೇತಿಗೆ ಅರ್ಹರಲ್ಲ.ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ರಸ್ತೆ ವಿಜಯಪುರ–೫೮೬೧೦೯ ಇಲ್ಲಿಗೆ ಸಂಪರ್ಕಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಖ್ಯಾತ ಉದ್ಯಮಿ ಡಿ. ವೈ. ಉಪ್ಪಾರ ಅವರ ನಿಧನಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕಂಬನಿ ಮಿಡಿದಿದ್ದಾರೆ.ಬಸವನ ಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಸಾಮಾನ್ಯ ಕುಟುಂಬದಿಂದ ಬಂದ ಅವರು, ಗುತ್ತಿಗೆ ಕಾಮಗಾರಿಗಳ ಕ್ಷೇತ್ರದಲ್ಲಿ ಗುಣಮಟ್ಟದ ಕಾಮಗಾರಿಗಳ ಮೂಲಕ ಹೆಸರು ಮಾಡಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ನಾಡಿನಲ್ಲಿ ಹೆಸರಾಂತ ಕಾಮಗಾರಿಗಳನ್ನು ಮಾಡಿ ಅವರು ಯುವ ಗುತ್ತಿಗೆದಾರರಿಗೆ ಮಾದರಿಯಾಗಿದ್ದರು.ಶೈಕ್ಷಣಿಕ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಅಪಾರ ಕೊಡುಗೆ ನೀಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿದ್ದ ಅವರು, ಬಡವರಿಗೂ ಸಾಕಷ್ಟು ನೆರವು ನೀಡಿದ್ದರು. ತಮ್ಮ ಜನಪ ಕೆಲಸಗಳ ಮೂಲಕ ಹೆಸರು ಮಾಡಿದ್ದಾರೆ. ಯಂಕಂಚಿ ದಾವಲಮಲಿಕ ಭಕ್ತರಾಗಿದ್ದ ಅವರು, ವಿನಮ್ರತೆ, ಶಿಸ್ತು, ಪ್ರಾಮಾಣಿಕತೆ, ಕಠಿಣ ಪರಿಶ್ರಮ, ದೂರದೃಷ್ಠಿಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು. ನನಗೂ ಆತ್ಮೀಯರಾಗಿದ್ದ ಅವರ ವ್ಯಕ್ತಿತ್ವ ಸದಾ ಸ್ಮರಣೀಯವಾಗಿರಲಿದೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಸೈಕ್ಲಿಂಗ್ ಗ್ರುಪ್ ನ 17 ಜನ ಸದಸ್ಯರು ಭಾರತದಲ್ಲಿಯೇ ಅತ್ಯಂತ ಕಠಿಣ ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ 42ಕಿ.ಮೀ ವಿಭಾಗದಲ್ಲಿ ಭಾಗವಹಿಸಿ, ಪೂರ್ಣಗೊಳಿಸಿರುವುದು ವಿಜಯಪುರದ ಕ್ರೀಡಾ ಇತಿಹಾಸದಲ್ಲಿಯೇ ವಿಶೇಷ ದಾಖಲೆಯ ಕ್ಷಣ ಎಂದು ಗ್ರುಪ್ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಹೇಳಿದರು.ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ 42ಕಿ.ಮೀ ವಿಭಾಗದಲ್ಲಿ ಭಾಗವಹಿಸಿದ ಸದಸ್ಯರನ್ನು ಸನ್ಮಾನಿಸಿ, ಮಾತನಾಡಿದ ಅವರು, ಈ ಹಿಂದೆ 70 ಮತ್ತು 80ರ ದಶಕದಲ್ಲಿ ನಗರದಲ್ಲಿ ಪುಟ್ ಬಾಲ್ ಪ್ರಖ್ಯಾತ ಕ್ರೀಡೆ ಆಗಿತ್ತು. ಕ್ರಮೇಣ ಪುಟ್ ಬಾಲ್ ಆಸಕ್ತಿ ಕಳೆದುಕೊಂಡು ಕ್ರಿಕೆಟ್ ಬೆಳೆದು ನಿಂತಿತ್ತು. ಇತ್ತಿಚೇಗೆ ಸೈಕ್ಲಿಂಗ್ ಮತ್ತು ಮ್ಯಾರಥಾನ್ ಓಟದ ಮೂಲಕ ಯುವಕರು ಹೆಚ್ಚು ಹೆಚ್ಚು ಆಕರ್ಷಣೆಯಲ್ಲಿ ತೊಡಗಿ ಓಟಗಳಲ್ಲಿ ಭಾಗವಹಿಸುವುದು ಮತ್ತು ಪರಿಸರ ರಕ್ಷಣೆಯಲ್ಲಿ ಮುಂದಾಗಿರುವುದು ವಿಶೇಷವಾಗಿದೆ ಎಂದರು.ಪ್ರೋಕ್ಯಾಂ ಸ್ಲ್ಯಾಂ ಎಂದರೆ, ಬೆಂಗಳೂರಿನಲ್ಲಿ ಟಿಸಿಎಚ್ 10ಕಿ.ಮೀ, ದೆಹಲಿಯ ವೇದಾಂತ ಹಾಫ್ ಮ್ಯಾರಥಾನ್ 21ಕಿ.ಮೀ ಕಲ್ಕತ್ತಾದ ಟಾಟಾ ಸ್ಟೀಲ್ 25ಕಿ.ಮೀ ಓಟವನ್ನು ನಿಗದಿತ ಅವಧಿಯಲ್ಲಿ ಓಡಿದಾಗ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹೇ ಲೈಲಾ,ಮೊದಲೇ ನಾನು ಬಯಲು ಸೀಮೆಯಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ. ನಿನ್ನಂತಹ ಕಡಲ ತೀರದ ಬಟ್ಟಲುಗಣ್ಣಿನ ಚೆಲುವಿ ಕಣ್ಣಿಗೆ ಬಿದ್ದಾಗ ಬೆರಳುಗಳು ಗೀಚಿದ ಕವಿತೆಗಳಿಗಳಿಗೆ ಲೆಕ್ಕವಿಲ್ಲ. ನಮ್ಮೀರ್ವರ ನವಿರಾದ ಪ್ರೇಮ ಕತೆಯನ್ನು ಪದಗಳಲ್ಲಿ ಕಟ್ಟಿಕೊಡುವುದು ನನ್ನಂತಹ ಒರಟನಿಗೆ ತುಸು ಕಷ್ಟವೇ ಅನ್ನು. ಮೊದಲ ಸಲದ ಪ್ರೀತಿಯೇ ಅಂಥದ್ದು ಏನೋ ವಿನೂತನ.ನಮ್ಮಲ್ಲೆಲ್ಲ ಹೋಳಿ ಹಬ್ಬವೆಂದರೆ ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಎರಚಿ ಸಂಭ್ರಮಿಸುವುದು ಸಾಮಾನ್ಯ. ನಿಮ್ಮಲ್ಲಿ ಪುರುಷರು ಮೇಳವನ್ನು ಕಟ್ಟಿಕೊಂಡು ಬಣ್ಣ ಬಣ್ಣದ ಧಿರಿಸು ಧರಿಸಿ ಹಾಡು ನರ್ತನದ ಮೂಲಕ ಆಚರಿಸುವ ಹಬ್ಬ ನನಗೆ ಎಲ್ಲಿಲ್ಲದ ಕುತೂಹಲ ಮೂಡಿಸಿತ್ತು. ಅಂದೇ ಮನಸ್ಸಿನಲ್ಲಿ ನಿನ್ನೊಲವು ಸುತ್ತಿ ಸುಳಿದು. ಪ್ರೀತಿಯೆಂಬ ಬಣ್ಣದ ಓಕುಳಿಯಾಟ ಆರಂಭವಾಗಿತ್ತು. ಬಣ್ಣದಾಟದಲ್ಲಿ ಕಣ್ಣಿಗೆ ಬಿದ್ದವಳು ಪ್ರಥಮ ನೋಟದಲ್ಲೇ ಹೃದಯ ಗೆದ್ದವಳು ನಿದಿರೆ ಕದ್ದವಳು ಎಂದು ಆಶು ಕವನವನ್ನು ಹೇಳುತ್ತ ಮೃದುವಾದ ಕೈ ಸವರಿ ಸಪೂರ ಗಲ್ಲವನು ಸವರಿದ್ದು ಇನ್ನೂ ನೆನಪಿದೆ.ಆಗ ಕಡುಬಡತನದ…
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಹಣವಿರುವ ಶ್ರೀಮಂತರಿಗೆ ಚಿನ್ನ ಅಥವಾ ಬೆಳ್ಳಿ ಖರೀದಿಸುವುದು ದೊಡ್ಡ ವಿಷಯವೇ ಅಲ್ಲ. ಹೂಡಿಕೆ ಮಾಡಬೇಕು ಅಥವಾ ತಾವು ಧರಿಸಬೇಕು ಎಂದಾಗಲೆಲ್ಲ ವಡವೆ ಕೊಂಡುಕೊಳ್ಳುತ್ತಾರೆ.ಬಡವರಿಗೆ ಅದೇ ಒಂದು ದೊಡ್ಡ ವಿಷಯ. ಯಾವುದೋ ಕಾಲಕ್ಕೆ ಅಬ್ಬಬ್ಬಾ ಎಂದರೆ 3-4 ಗ್ರಾಂ ತೆಗೆದುಕೊಂಡು ಅದಕ್ಕೆ ಉಬ್ಬಿಹೋಗುತ್ತಾರೆ.ಆದರೆ ಮಧ್ಯಮ ವರ್ಗದ ತೋಳಲಾಟ ಇದೆಯಲ್ಲ, ಅದು ಹೇಳತೀರದು. ಸಮಾಜದ ಮುಂದೆ ತಮ್ಮ ಬಡತನವನ್ನು ತೋರಿಸಿಕೊಳ್ಳಲು ತಮ್ಮ ಅಹಂ ಬಿಡುವುದಿಲ್ಲ. ಬೇರೆಯವರು ಹಾಕಿರುವುದನ್ನು ನೋಡಿ ತಮಗೂ ಆ ರೀತಿಯ ಒಡವೆ ಬೇಕೆಂದು ಮನಸು ಕೇಳದೆ ಇರುವುದಿಲ್ಲ. ಆದರೆ ಕೊಂಡುಕೊಳ್ಳಲು ಹಣವಿರುವುದಿಲ್ಲ. ಈ ಎಲ್ಲಾ ಇಲ್ಲಗಳ ನಡುವೆ ಅಲ್ಪ ಸ್ವಲ್ಪ ಹಣ ಉಳಿಸುತ್ತಾ 100 ಗ್ರಾಂ 200 ಗ್ರಾಂಗಳಷ್ಟೇ ಮಾಡಿಸಿಕೊಂಡುಬಿಟ್ಟಿರುತ್ತಾರೆ. ಹತ್ತಿರದವರ ವಿಶೇಷ ದಿನಗಳಲ್ಲಿ ಉಡುಗೊರೆಕೊಡಬೇಕೆಂದಾಗಲೆಲ್ಲಾ, ಹಾಗೋ ಹೀಗೋ ಮಾಡಿ 5-10 ಗ್ರಾಂ ಒಡವೆ ಕೊಟ್ಟುಬಿಡುತ್ತಿದ್ದರು. ಆದರೆ ಈವಾಗ ಹಣ ಕೊಟ್ಟು ಸುಮ್ಮನಾಗಿಬಿಡೋಣ ಎಂಬ ಮನಸ್ಥಿತಿ ಉಂಟಾಗಿದೆ.ಹಾಗಾಗುತ್ತಿರುವುದು ಏಕೆ? ಈ ಚಿನ್ನ ಬೆಳ್ಳಿಯ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕಿಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು ಸಮೀಪಿಸುತ್ತಿವೆ. ಅಬ್ಬಾ! ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧನಾಗಬೇಕೆಂಬುದೇ ದೊಡ್ಡ ಟೆನ್ಷನ್ ಆಗಿ ಬಿಟ್ಟಿದೆ. ಹೆಚ್ಚುತ್ತಿರುವ ಒತ್ತಡಕ್ಕೆ ಉಪ್ಪು ಸುರಿದಂತೆ ಹೆತ್ತವರ ಬೈಗುಳ, ಓದು ಎನ್ನುವ ಒತ್ತಾಯ,. ಈ ಸಲ ಹೆಚ್ಚು ಅಂಕ ತೆಗೆಯಲೇಬೇಕು ಎನ್ನುವ ಹೇರಿಕೆಯ ಮಾತುಗಳು ನೀನು ಚೆನ್ನಾಗಿ ಓದಿದರೆ ಒಳ್ಳೆಯ ಅಂಕಗಳನ್ನು ಪಡೆದೇ ಪಡೆಯುತ್ತಿಯಾ ಗಂಭೀರವಾಗಿ ಓದು ಎಂಬ ಶಿಕ್ಷಕರ ಹಿತ ನುಡಿಗಳು. ಅಯ್ಯೋ! ಒಂದೇ ಎರಡೇ ತಲೆ ಸಿಡಿದು ಮೂರಾ ಬಟ್ಟೆ ಆಗುತ್ತಿದೆ. ಇದು ಶಂಕರನ ಅಳಲು. ಶಂಕರ ಎದುರಿಸುತ್ತಿರುವುದು ಹೊರಗಿನ ಒತ್ತಡ. ಇದನ್ನು ಪ್ರೆಜ್ಯೂಮ್ ಪ್ರೆಶರ್ ಎನ್ನುವರು. ಸಾಮಾನ್ಯವಾಗಿ ಹೊರ ಒತ್ತಡವನ್ನು ಎಲ್ಲ ವಿದ್ಯಾರ್ಥಿಗಳು ಎದುರಿಸುತ್ತಾರೆ.ಪರೀಕ್ಷೆ ಸಮೀಪಿಸಿದಂತೆ ಎಲ್ಲಿಲ್ಲದ ತಲೆನೋವು ವಕ್ಕರಿಸಿಕೊಳ್ಳುತ್ತದೆ. ಒಂದು ವೇಳೆ ಫೇಲ್ ಆಗಿಬಿಟ್ಟರೆ ಎಂದು ನೆನೆದು ಬೆವರು ಕಿತ್ತು ಬರುತ್ತದೆ.ಊಟ ಆಟ ಯಾವುದರಲ್ಲೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನಲ್ಲಿ ೯ ಹಾಗೂ ೧೧ನೇ ತರಗತಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ ೭ರಂದು ನಡೆಯಲಿದೆ.೯ನೇ ತರಗತಿ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಹಾಗೂ ೧೧ನೇ ತರಗತಿಯ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಆರ್.ಬಿ.ಪಿ.ಜಿ ಹಳಕಟ್ಟಿ ಹೈಸ್ಕೂಲಿನಲ್ಲಿ ಫೆ.೭ರ ಬೆಳಿಗ್ಗೆ ೧೧:೧೫ ರಿಂದ ಮಧ್ಯಾಹ್ನ ೧:೪೫ರವರೆಗೆ ನಡೆಯಲಿದ್ದು, ಪರೀಕ್ಷಾರ್ಥಿಗಳು ಅಂದು ಬೆಳಿಗ್ಗೆ ೧೦:೩೦ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.ಪ್ರವೇಶ ಪತ್ರಗಳನ್ನು ವೆಬ್ಸೈಟ್ ïhttps://cbseitms.nic.in/2025/nvsಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೩೧ ರವರೆಗೆ ವಿಸ್ತರಿಸಲಾಗಿದೆ.ಬಿ.ಎಡ್ ಕಾಲೇಜುಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ದೂರವಾಣಿ ಸಂಖ್ಯೆ:೦೮೩೫೫೨-೨೯೫೫೨೩ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ, ವಿಜಯಪುರ (ಮೊ:೮೧೨೩೭೧೦೭೬೬), ಬಾಗೇವಾಡಿ (ಮೊ:೯೯೭೨೩೪೦೭೨೧) ಮುದ್ದೇಬಿಹಾಳ (ಮೊ:೮೭೨೨೪೪೫೫೨) ಸಿಂದಗಿ (ಮೊ:೯೦೩೫೫೫೮೬೦೯) ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಋಣ ತೀರಿಸಲು ಸಾಧ್ಯವಿಲ್ಲ – ಶಾಸಕ ಅನೀಲ ಚಿಕ್ಕಮಾದು ಭಾವುಕ ನುಡಿ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಹುಣಸೂರು ತಾಲೂಕಿನಲ್ಲಿ ನಮ್ಮ ಕುಟುಂಬಕ್ಕೆ ಅವಕಾಶ ಸಿಕ್ಕಿದ್ದು ಒಂದು ಬಾರಿ ಮಾತ್ರ. ಆದರೆ ಹೆಚ್ ಡಿ ಕೋಟೆ ಕ್ಷೇತ್ರದ ಜನ ನಮ್ಮ ಕುಟುಂಬಕ್ಕೆ ಮೂರು ಬಾರಿ ಅವಕಾಶ ಕೊಟ್ಟಿದ್ದಾರೆ. ಈ ಮೂಲಕ ನಮಗೆ ರಾಜಕೀಯ ಪುನರ್ಜನ್ಮ ನೀಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಡಾ. ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ. ಎಸ್ಸಿ-ಎಸ್ಟಿಯವರಾದ ನಾವು ಗ್ರಾ.ಪಂ., ತಾಲೂಕು ಜಿ.ಪಂ. ಜಿಲ್ಲಾ ಪಂಚಾಯತ್ ಸದಸ್ಯರೂ ಆಗುತ್ತಿರಲಿಲ್ಲ. ಇವತ್ತು ನಾನು ಎರಡು ಬಾರಿ ಶಾಸಕರಾಗಿ ಇನ್ನೂ ಸರ್ಕಾರಿ ಕಾರಿನಲ್ಲಿ ಓಡಾಡುತ್ತಿದ್ದೇನೆ ಎಂದರೆ ಅದಕ್ಕೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಕಾರಣ. ಅವರ ಆದರ್ಶ ತತ್ವಗಳನ್ನು ನಾವು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂಬೇಡ್ಕರ್…
