Author: editor.udayarashmi@gmail.com

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ, ಮುಂಡರಗಿ-ಗದಗ ಘಟನೆ ಒಂದು… ಶುಭ ಕಾರ್ಯಕ್ರಮರಲ್ಲಿ ಭಾಗವಹಿಸಿದ್ದ ಆಕೆಗೆ ಕುಂಕುಮ, ಹೂವು ಕೊಡಲು ತಡವರಿಸಿದಾಗ ಅವರನ್ನು ಮುಂದಕ್ಕೆ ಕಳುಹಿಸಿದ ಆ ಹೆಣ್ಣು ಮಗಳು ಹುಸಿ ನಕ್ಕ ಘಳಿಗೆ ಮರೆಯಲಾಗದು.ಘಟನೆ ಎರಡು….ತನ್ನದೇ ಮಗನ ಮದುವೆಯಲ್ಲಿ ಆಮಂಗಳೆಯಾದ ತನ್ನಿಂದ ಅಶುಭವಾಗಬಾರದೆಂದು ಮಂಟಪದಿಂದ ತುಸು ದೂರವೇ ಕುಳಿತ ತಾಯಿ.ಘಟನೆ ಮೂರು… ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನು ಕಳೆದುಕೊಂಡು ಓದು ಮುಂದುವರಿಸಿ ಉದ್ಯೋಗ ಹೊಂದಿ ತನ್ನ ಮಗನೊಂದಿಗೆ ಬದುಕು ಕಟ್ಟಿಕೊಂಡಿರುವ ಹೆಣ್ಣು ಮಗಳು ಸಂಬಂಧಿಕರೊಂದಿಗೆ ಹೋಗಿದ್ದ ಪ್ರವಾಸದಲ್ಲಿ ತನಗೆ ಅನುಕೂಲಕರವಾದ ಸಭ್ಯ ಬಟ್ಟೆ ಧರಿಸಿದಾಗ್ಯ್ಯೂ ಸ್ವತಹ ಒಡಹುಟ್ಟಿದವರೇ ಹೀಯಾಳಿಸಿ ಮಾತನಾಡಿದ್ದು.ಘಟನೆ ನಾಲ್ಕು…. ಗಂಡ ಸತ್ರು ಆಕೆಯ ಸೊಕ್ಕು ಅಡಗಿಲ್ಲ…ಉರೀತಾಳೆ ಎಂದು ಆಕೆಯ ಆತ್ಮಾಭಿಮಾನವನ್ನು ಸೊಕ್ಕೆಂದು ಪರಿಗಣಿಸಿದ್ದು.ಒಂದೇ ಎರಡೇ ಇಂಥ ನೂರು ಸಾವಿರ ಉದಾಹರಣೆಗಳು ಈ ಸಮಾಜದಲ್ಲಿ ಗಂಡನನ್ನು ಕಳೆದುಕೊಂಡ ಹೆಣ್ಣು ಮಕ್ಕಳು ಅನುಭವಿಸುವುದನ್ನು ಕಾಣುತ್ತೇವೆ.ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ರು ಎಂಬ ಘನಂದಾರಿ ಕೆಲಸ ಶತಶತಮಾನಗಳಿಂದ ಭಾರತ ದೇಶದಲ್ಲಿ…

Read More

ಭೂಮಾಫಿಯಾ ಪ್ರಕರಣದ ತನಿಖೆ ಸಿ.ಓ.ಡಿಗೆ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿ ವಿಜಯಪುರ: ನಗರ ಮತ್ತು ಜಿಲ್ಲೆಯಲ್ಲಿ ನಕಲಿ ಭೂಧಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿರುವ ಭೂಮಾಫಿಯಾ ಮಟ್ಟ ಹಾಕಲು ಈ ಪ್ರಕರಣದ ಸಮಗ್ರ ತನಿಖೆಯನ್ನು ಹಾಕಲು ಸಿ.ಓ.ಡಿಗೆ ವಹಿಸುವಂತೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಭೂ ಅಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘವಾಗಿ ವಿವರಿಸಿದರು.ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಭೂದಾಖಲೆ ಸೃಷ್ಟಿಸಿ ಜಿಲ್ಲೆಯಲ್ಲಿ ಭೂಮಿ ಮತ್ತು ನಿವೇಶನ ಮಾರಾಟ ಮಾಡಿರುವ ನೂರಾರು ಪ್ರಕರಣಗಳು ನಡೆದಿದ್ದು ಕೆಲವೊಂದು ಪ್ರಕರಣಗಳು ಮಾತ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಇನ್ನೂ ಹಲವಾರು ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ, ಇಂತಹ ಪ್ರಕರಣಗಳಿಗೆ ನೂರಾರು ಜನ ತಮ್ಮ ಜಮೀನು ಮತ್ತು ನಿವೇಶನಗಳು ಕಳೆದುಕೊಂಡಿದ್ದಾರೆ, ಖೋಟ್ಟಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಪ್ರಕರಣಗಳು ನನ್ನ ಗಮನಕ್ಕೆ ನಾನು ಹಲವಾರು ಬಾರಿ ಪತ್ರಿಕಾಗೋಷ್ಠಿ ಮುಖಾಂತರ ಹಾಗೂ ನಾನು ಪ್ರತ್ಯಕ್ಷವಾಗಿ ಹಿಂದಿನ ಸರ್ಕಾರದ ಗಮನಕ್ಕೂ ತಂದರೂ…

Read More

ವಿಜಯಪುರದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅವಲೋಕನ ಸಭೆ ವಿಜಯಪುರ:`ನನಗೆ ಸೋಲು ಗೆಲುವು ಮುಖ್ಯವಲ್ಲ, ನನ್ನ ಕಾರ್ಯಕರ್ತ ಬಂಧುಗಳ ಸ್ಪೂರ್ತಿ ಸದಾ ನನ್ನ ಜೊತೆಗಿರುವುದೇ ನನ್ನ ಆಸ್ತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ವಿಜಯಪುರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಲಿತನಾದ ನಾನು ಈ ಮಟ್ಟಕ್ಕೆ ಬೆಳೆಯಲು ಕಾರ್ಯಕರ್ತ ಬಂಧುಗಳ ಅನುಗ್ರಹವೇ ಕಾರಣ, ರಾಜಕಾರಣದಲ್ಲಿ ಜಾತಿ ಎಂಬುದು ಮುಖ್ಯವಲ್ಲ, ಕೇವಲ ಒಂದೇ ಸಮಾಜದ ಬೆಂಬಲದಿಂದ ರಾಜಕಾರಣದಲ್ಲಿ ಬೆಳೆಯಲು ಸಾಧ್ಯವಿಲ್ಲ, ಉತ್ತಮ ನಾಯಕನಾಗಿ ಬೆಳೆದು ಬರಲು ಎಲ್ಲ ಸಮಾಜಗಳ ಆಶೀರ್ವಾದ, ಬೆಂಬಲವೇ ಕಾರಣ ಎಂದರು.ನನ್ನ ಅನುಭವ ಚುನಾವಣೆಗಳಲ್ಲಿ ಪ್ರಸಕ್ತ ಚುನಾವಣೆ ಅತ್ಯಂತ ಮಹತ್ವದ್ದು, ಸಣ್ಣ ಪುಟ್ಟ ಗೊಂದಲಗಳು ಸಹ ಇಲ್ಲದೇ ಅತ್ಯಂತ ಸುಸೂತ್ರವಾಗಿ ನಡೆದ ಚುನಾವಣಾ ಇದಾಗಿದೆ, ಕಾರ್ಯಕರ್ತರ, ಮುಖಂಡರ ಶ್ರಮಕ್ಕೆ ನಾನು ಬೆಲೆ ಕಟ್ಟಲು ಸಾಧ್ಯವಿಲ್ಲ, ಈ ಋಣವನ್ನು ನಾನು ಜೀವನದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು…

Read More

ಕೇರಳದಲ್ಲಿ ತಂತ್ರಿಗಳಿಂದ “ಶತ್ರು ಭೈರವಿ ಯಾಗ” | 21ಮೇಕೆ, 3ಎಮ್ಮೆ, 21 ಕುರಿ & 5ಹಂದಿಗಳ ಬಲಿ | ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ನಂಬಿರುವ ಶಕ್ತಿ, ದೇವರು ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಈ ಕುರಿತು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಶಿವಕುಮಾರ್ ಅವರು, ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ “ರಾಜಕಂಟಕ”, “ಮಾರಣ ಮೋಹನ ಸ್ತಂಭನ” ಯಾಗ ಪ್ರಯೋಗ ನಡೆಸಲಾಗುತ್ತಿದೆ. ಯಾರು ಈ ಯಾಗ ಮಾಡಿಸುತ್ತಿದ್ದಾರೆ ಎಂಬ ವಿವರವನ್ನು ಈ ಯಾಗದಲ್ಲಿ ಪಾಲ್ಗೊಂಡವರೇ ನಮಗೆ ತಿಳಿಸಿದ್ದಾರೆ ಎಂದರು.ಅಘೋರಿಗಳ ಮೂಲಕ ಈ ಯಾಗ ನಡೆಯುತ್ತಿದೆ.…

Read More

ಮುದ್ದೇಬಿಹಾಳ: ಪಟ್ಟಣದ ಹೊರಪೇಟ ಗಲ್ಲಿಯಲ್ಲಿರುವ ಸಿದ್ಧಗಾಂಗಾ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮೆ೩೧ ರಂದು ಬೆಳಿಗ್ಗೆ ೧೦ ಗಂಟೆಗೆ ವಿಶ್ವ ತಂಬಾಕು ನಿಷೇಧ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ಧಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು, ಕಿರಿಯಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗರಾಜ ಪೂಜಾರ ಮತ್ತು ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಸವರಾಜ ನಾಗರಾಳ, ಪ್ರಭಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ, ವಿ.ವಿ ಸಂಘದ ಅಧ್ಯಕ್ಷ ವಿ.ಎಸ್.ಮೇಟಿ, ಪ್ರಾಂಶುಪಾಲೆ ರಾಜಶ್ರೀ ಮೇಟಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,…

Read More

“ವಿದ್ಯಾರ್ಥಿ ನಿಧಿ”- ಮಂಡ್ಯ ಮ.ನಾ.ಉಡುಪ ಠಕ್ಕನರಿ ಮತ್ತು ಕೊಕ್ಕರೆ ಅದೊಂದು ದೊಡ್ಡ ಕಾಡು. ಆ ಕಾಡಿನ ಒಡೆಯ ವನರಾಜ ಸಿಂಹ. ಒಮ್ಮೆ ಸಿಂಹವು ಜಿಂಕೆಯನ್ನು ಬೇಟೆಯಾಡಿ ತಿನ್ನುವಾಗ ಜಿಂಕೆಯ ಮೂಳೆ ಸಿಂಹದ ಗಂಟಲಿನೊಳಗೆ ಸಿಕ್ಕಿ ಸಿಂಹವು ಸಾಯುವ ಪರಿಸ್ಥಿತಿಗೆ ತಲುಪಿತು.ಚಾಣಾಕ್ಷ ನರಿಯು ಸಿಂಹದ ಮಂತ್ರಿಯಾಗಿತ್ತು. ಅದು ರಾಜನ ಈ ಅವಸ್ಥೆ ನೋಡಲಾಗದೇ ಕೊಕ್ಕರೆಯ ಬಳಿ ಹೋಗಿ” ನೋಡು ನಮ್ಮ ರಾಜನಿಗೆ ಗಂಟಲಿನಲ್ಲಿ ಮೂಳೆಸಿಕ್ಕಿ ಸಾಯುವ ಪರಿಸ್ಥಿತಿ ಬಂದಿದೆ. ನೀನು ಅವನ ಗಂಟಲಿನೊಳಗೆ ಸಿಕ್ಕಿರುವ ಮೂಳೆ ತೆಗೆದು ಪ್ರಾಣಭಿಕ್ಷೆ ನೀಡಿದರೆ ನಿನಗೆ ಜೀವಮಾನದಲ್ಲಿ ಪಡೆಲಾಗದ ಬಹುಮಾನ ಕೊಡಿಸುವೆ..”ಎಂದು ಪುಸುಲಾಯಿಸಿ ಸಿಂಹದ ಬಳಿ ಕರೆದುಕೊಂಡು ಹೋಯಿತು .ಸಿಂಹದ ಬಾಯೊಳಗಿನ ಮೂಳೆಯನ್ನು ತನ್ನ ಉದ್ದವಾದ ಕೊಕ್ಕಿನಿಂದ ತೆಗೆಯಿತು. ನಂತರ ನರಿಯ ಬಳಿ” ಗೆಳೆಯ ನನ್ನ ಕೆಲಸ ಮುಗಿದಿದೆ . ನನಗೆ ಬರಬೇಕಾದ ಬಹುಮಾನ ಕೊಡಿಸು..” ಎಂದಿತು.ಆಗ ಸಿಂಹವು” ನೋಡು ನೀನು ನನ್ನ ಬಾಯೊಳಗೆ ತಲೆಯನ್ನು ಹಾಕಿದಾಗ ನಿನ್ನ ತಿನ್ನದೇ ಬಿಟ್ಟಿರುವುದೇ ದೊಡ್ಡ ಬಹುಮಾನ . ಅದಕ್ಕಿಂತಲೂ…

Read More

ವಿಜಯಪುರ: ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ತೊರವಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಏಳು ದಿನಗಳ ಎನ್.ಎಸ್.ಎಸ್ ಶಿಬಿರದ ಅಂಗವಾಗಿ ಮಂಗಳವಾರ ಜಲ ಸಂರಕ್ಷಣೆ ಅಭಿಯಾನದ ಉದ್ಘಾಟನೆ ನಡೆಯಿತು.ಪರಿಸರ ತಜ್ಞ ಮತ್ತು ಹೈ ಲರ್ನ್ ಎಜ್ಯುಟೆಕ್ ಇನ್ಸ್ಟಿಟ್ಯೂಟ್ ನಿರ್ದೇಶಕರಾಗಿದ್ದರು. ಸಿರಾಜುದ್ದೀನ್ ಹೊರಗಿನಮನಿ ಅಭಿಯಾನಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪರಿಸರ ಮತ್ತು ಜಲಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಕುರಿತು ಎನ್.ಎಸ್.ಎಸ್ ಶಿಬಿರಾರ್ಥಿಗಳು ಜನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಇದೇ ವೇಳೆ ತೊರವಿ ಗ್ರಾಮದ ಹನುಮಂತ ದೇವಸ್ಥಾನದ ಆವರಣದಲಿ ಜಲ ಸಂರಕ್ಷಣೆ ಅಭಿಯಾನ ಕುರಿತು ಜನಜಾಗೃತಿ ಜಾಥಾ ಮತ್ತು ಬೀದಿ ನಾಟಕ ನಡೆಯಿತು.ಈ ಸಂದರ್ಭದಲ್ಲಿ ಶಿಬಿರದ ಸಂಚಾಲಕ ಡಾ. ರಾವ್ ಸಾಹೇಬ ಎ. ದೇಶಮುಖ, ಬಿ.ಎಲ್.ಡಿ.ಈ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಡಾ. ವಿಜಯಲಕ್ಷ್ಮಿ ಬೆನಕಟ್ಟಿ, ಡಾ. ಸುನಿತಾ, ಕಾಲೇಜಿನ ಎನ್.ಎಸ್.ಎಸ್ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Read More

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ಕಾರಕ್ಕೆ ಮನವಿ ವಿಜಯಪುರ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಹಣಕಾಸು ವಂಚನೆಯ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಬೇಕೆಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಈ ಕುರಿತು ಗುರುವಾರ ಮನವಿ ಪ್ರತಿಯನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ ಅವರು, ಮಹರ್ಷಿ ವಾಲ್ಮೀಕಿ ಕಾರ್ಪೊರೇಷನ್‌ನ ಹಿರಿಯ ಲೆಕ್ಕಾಧಿಕಾರಿ ಚಂದ್ರಶೇಖರ್ ಅವರು ಆರು ಪುಟಗಳ ಆತ್ಮಹತ್ಯೆ ಪತ್ರವನ್ನು ಬಿಟ್ಟು ದುರಂತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ತಮ್ಮ ಟಿಪ್ಪಣಿಯಲ್ಲಿ, ಅವರು ತಮ್ಮ ಸಾವಿಗೆ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ವ್ಯವಸ್ಥಾಪಕರು ಸೇರಿದಂತೆ ನಿಗಮದ ಸಚಿವರು, ಹಿರಿಯ ಅಧಿಕಾರಿಗಳು ಕಾರಣ ಎಂದು ಹೆಸರಿಸಿದ್ದಾರೆ. ಈ ವರ್ಷದ ಮಾರ್ಚ್ ಮತ್ತು ಮೇ ನಡುವೆ ಎಂಜಿ ರಸ್ತೆಯಲ್ಲಿರುವ ಖಾತೆಗೆ 187.3 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿದ್ದು, ವಹಿವಾಟು ನಡೆಸುವ ಮುನ್ನ ಪಾಲಿಕೆ ಅಧಿಕಾರಿಗಳ ಸಹಿ ನಕಲಿಯಾಗಿದೆ. ಪರಿಶಿಷ್ಟ ಪಂಗಡದವರಿಗೆ ಆರ್ಥಿಕ ನೆರವು ನೀಡಲು ಮತ್ತು ಅವರ…

Read More

ಸಿಂದಗಿ: ಪಟ್ಟಣದ ಪತ್ರಕರ್ತ ಗುಂಡು ಕುಲಕರ್ಣಿಗೆ ಜೀವ ಬೆದರಿಕೆ ಹಾಕಿದ ಸಿಪಿಐ ನಾನಾಗೌಡ ಪಾಟೀಲ, ಪಿಎಸ್‌ಐ ಭೀಮಪ್ಪ ರಬಕವಿ ಹಾಗೂ ಪೇದೆ ಸುರೇಶ ಕೊಂಡಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪತ್ರಕರ್ತರು ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಪತ್ರಕರ್ತ ಗುಂಡು ಕುಲಕರ್ಣಿ, ಅಕ್ರಮ ಮರಳು ಸಾಗಣೆ ಕುರಿತು ವರದಿ ಮಾಡಿದ್ದಕ್ಕಾಗಿ ನನ್ನನ್ನು ಮೇ.೮ರ ತಡರಾತ್ರಿ ಪಿಎಸ್‌ಐ ಭೀಮಪ್ಪ ರಬಕವಿ ಹಾಗೂ ಪೇದೆ ಸುರೇಶ ಕೊಂಡಿ ಅಪಹರಿಸಿ ಪಟ್ಟಣದ ಹೊರವಲಯಕ್ಕೆ ಕರೆದೊಯ್ದು ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ ವರದಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ನನಗೆ ಏನಾದರೂ ಆದರೆ ಈ ಮೂರು ಜನ ಅಧಿಕಾರಿಗಳೇ ಕಾರಣ ಎಂದು ಹೇಳಿದರು.ಈ ವೇಳೆ ಪತ್ರಕರ್ತರಾದ ಡಿ.ಬಿ.ವಡವಡಗಿ, ಪರಶುರಾಮ ಶಿವಶರಣ, ನಾಗೇಶ ನಾಗೂರ, ಗುರುರಾಜ ಮಠ, ಸುದರ್ಶನ ಜಂಗಣ್ಣಿ, ಭೋಜರಾಜ ದೇಸಾಯಿ ಇದ್ದರು.

Read More