Author: editor.udayarashmi@gmail.com

ಆಲಮೇಲ: ಯೋಗ ಪ್ರಾಣಾಯಂ ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕತೆ ಇದ್ದು ಮನೆ ಮನೆ ಅಂಗಳದಲ್ಲಿ ಯೋಗಮಯವಾಗಬೇಕಾಗಿದೆ ಎಂದು ಯೋಗೋತ್ಸವ ಸಮಿತಿಯ ಮುಖಂಡ ಡಾ.ಶ್ರೀಶೈಲ ಪಾಟೀಲ ಹೇಳಿದರು.ಪಟ್ಟಣದ ಯೋಗೋತ್ಸವ ಸಮಿತಿ ಹಮ್ಮಿಕೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ ಉಚಿತ ಯೋಗ ಶಿಬಿರದ ಪೂರ್ವ ಭಾವಿ ಸಭೆ ಉದ್ದೇಶಿಸಿ ಮಾತನಾಡುತ್ತ ಹೇಳಿದರು.ಮನುಷ್ಯನ ಆರೋಗ್ಯ ದೃಷ್ಠಿಯಿಂದ ಪ್ರತಿಯೊಬ್ಬರಿಗೂ ಯೋಗ ಪ್ರಾಣಾಯಂ ಅವಶಕತೆ ಇದ್ದು, ಇಂದಿನ ಯುವ ಜನ ದುಶ್ಚಟಗಳಿಗೆ ಅಂಟಿಕೊಳ್ಳುತ್ತಿದ್ದು ಅದರಿಂದ ದೂರ ಮಾಡಬೇಕು ಎಂದರೆ ಪ್ರತಿನಿತ್ಯ ಯೋಗ ಪ್ರಾಣಾಯಾಂ, ಆದ್ಯತ್ಮಿಕ ಚಿಂತನೆಗಳು ಅವಶಕತೆ ಇದೆ ಅದಕ್ಕೆ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ. ಯೋಗದ ಬಗ್ಗೆ ಇಂದಿನ ಯುವಜನಕ್ಕೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕಾಗಿ ಯೋಗೋತ್ಸವ ಸಮಿತಿಯಿಂದ ವಿವಿದ ಸಂಘ ಸಂಸ್ಥೆ, ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಪ್ರಬಾತಪೇರೆ ಮಾಡಲಾಗುವದು ಮತ್ತು ದ್ವನಿ ವರ್ಧಕದ ಮೂಲಕವು ಆಲಮೇಲ ಪಟ್ಟಣ ಸೇರಿದಂತೆ ಸೂತ್ತಮೂತ್ತಲಿನ ಹಳ್ಳಿಗಳಿಗೂ ಪ್ರಚಾರ ಮಾಡಲಾಗುತ್ತೆ. ಯುವಜನತೆಯಿಂದ ವಯೋವೃದ್ದದವರು ಈ ಯೋಗ ಶಿಬಿರದಲ್ಲಿ…

Read More

ತಾಳಿಕೋಟಿ: ರೈತ ಸಂಪರ್ಕ ಕೇಂದ್ರದಲ್ಲಿ ಸನ್ 2024- 25 ನೇ ಸಾಲಿನ ಮುಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯಕ್ರಮಕ್ಕೆ ಕೃಷಿ ಅಧಿಕಾರಿ ಮಹೇಶ ಜೋಶಿ ಚಾಲನೆ ನೀಡಿದರು.ಬುಧವಾರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು ರೈತ ಸಂಪರ್ಕ ಕೇಂದ್ರದಲ್ಲಿ TS-BR. GRG-152 ತೊಗರಿ ಬೀಜ. ಹೆಸರು ಬೀಜ BGS-9 ರಿಯಾಯಿತಿ ದರದಲ್ಲಿ ಲಭ್ಯವಿದ್ದು ರೈತ ಬಾಂಧವರು ಇದರ ಸಂಪೂರ್ಣ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದ ಅವರು ಇದಕ್ಕಾಗಿ ರೈತರು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡ್. ಪಹಣಿ.ಎಫ್ಐಡಿ ಸಂಖ್ಯೆ ಹೊಂದಿರಬೇಕು. ರೈತರು ಬಿತ್ತನೆ ಬೀಜಕ್ಕೆ ಬೀಜೋಪಚಾರ ಮಾಡಬೇಕು ಪ್ರತಿ ಕೆಜಿ ಬಿಜಕ್ಕೆ 4 -5 ಗ್ರಾಂ.ಟೈರೋಡರಮಾ ಪೌಡರ ಹಚ್ಚಿ ಬೀಜೋಪಚಾರ ಮಾಡಬೇಕು ಎಂದು ತಿಳಿಸಿದರು.ಈ ಸಮಯದಲ್ಲಿ ಕೃಷಿ ಅಧಿಕಾರಿ ಎಂ.ಎಚ್.ಬೀಳಗಿ, ತಾಂತ್ರಿಕ ಅಧಿಕಾರಿ ಸಂಗಮೇಶ ಪಾಟೀಲ, ಅಕೌಂಟೆಡ್ ವಿನೋದ ನಾಯಕ, ಸಂಜೀವಿನಿ ಸಿಬ್ಬಂದಿಗಳಾದ ಕಿರಣ ಬೊಮ್ಮನಹಳ್ಳಿ, ಹನುಮಂತರಾಯ ಕುಂಟರೆಡ್ಡಿ, ಅನವುಗಾರರಾದ ಅಮರೇಶ ಅಂಗಡಿ, ರವಿ ಹೊಸಮನಿ,…

Read More

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ವಿಜಯಪುರ: ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸಲು ಸರ್ಕಾರಕ್ಕೆ ನಾನು ಸಹ ಮನವಿ ಮಾಡಿಕೊಳ್ಳುವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ನೀಡಿದರು.ಭೂ ಹಗರಣದ ವಿರುದ್ದ ಸಮರ ಸಾರಿರುವ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಬೆಂಗಳೂರಿನಲ್ಲಿ ಸಚಿವ ಡಾ.ಎಂ.ಬಿ. ಪಾಟೀಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆಯನ್ನು ಸಚಿವ ಪಾಟೀಲ ನೀಡಿದರು.ಭೂಗರಣಗಳ ಕುರಿತು ವಿವರಿಸಿದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡುತ್ತಿರುವ ಅನೇಕ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಬಡಜನರು ನಿತ್ಯ ಶೋಷಣೆಗೊಳಗಾಗುತ್ತಿದ್ದಾರೆ. ಜಮೀನು ಹಾಗೂ ನಿವೇಶನಗಳ ಖೊಟ್ಟಿ ದಾಖಲೆ ಸೃಷ್ಟಿ ಮಾಡಿ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಖರೀದಿ ಹಾಗೂ ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳು ಅವ್ಯಾಹತವಾಗಿ ನಡೆದಿವೆ ಎಂದರು. ಜನರನ್ನು ವಂಚಿಸುವ ವ್ಯವಸ್ಥಿತ ಜಾಲವೇ…

Read More

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ೧೦ ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಯ ಕಾರಣದಿಂದ ತರಬೇತಿ ಅವಧಿಯನ್ನು ಜುಲೈ ೧ರಿಂದ ೨೦೨೫ ರ ಮಾರ್ಚ್ ೩೧ರವವರೆಗೆ ೯ ತಿಂಗಳು ಅವಧಿಕೆ ಪರಿಷ್ಕರಿಸಲಾಗಿದೆ.ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ ೬ ರಂದು ಸಂದರ್ಶನ ನಿಗದಿಪಡಿಸಲಾಗಿದೆ. ಜೂನ್ ೧೦ ರಂದು ಆಯ್ಕೆ ಪಟ್ಟಿ ಹಾಗೂ ಪ್ರವೇಶ ಪತ್ರ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜೂನ್ ೧೫ ರಂದು ತರಬೇತಿಗೆ ಹಾಜರಾಗಲು ಸೂಚಿಸಲಾಗುವುದು.ವಿಜಯಪುರ ಜಿಲ್ಲೆಯಿಂದ ಒಟ್ಟು ೧೭ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸರ್ಕಾರಿ ಸೌಲಭ್ಯಗಳು, ಬ್ಯಾಂಕ್ ಸೌಲಭ್ಯಗಳು, ಕೃಷಿ ಇಲಾಖೆ ಸೌಲಭ್ಯಗಳು ಮತ್ತು ಬೆಳೆ ಪರಿಹಾರಗಳನ್ನು ಪಡೆಯಲು ಜಮೀನಿನ ಪಹಣಿ ಪತ್ರಕ್ಕೆ ಆಧಾರ ಕಾರ್ಡ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಹಣಿ ಪತ್ರಕ್ಕೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದ್ದು, ಈ ಕಾರ್ಯವನ್ನು ಮಾಡಲು ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿರುತ್ತದೆ.ಸರಕಾರದ ವಿವಿಧ ಪ್ರಯೋಜನಗಳನ್ನು ಪಡೆಯಲು ಶಾಶ್ವತ ಪರಿಹಾರದ ಅಂಗವಾಗಿ ಜಮೀನಿನ ಪಹಣಿ ಪತ್ರಕ್ಕೆ ಆಧಾರ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಲು ಗ್ರಾಮ್ ಒನ್ ಕೇಂದ್ರ, ಗ್ರಾಮ ಆಡಳಿತ ಕಚೇರಿ, ಅಥವಾ ಅಥವಾ ಆಧಾರ್ ಕಾರ್ಡ್ ಲಿಂಕ್ ಮಾಡಲು ಆಡಳಿತ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತಿಕೋಟಾ: ಜುಲೈ 31 ರಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು ಶಿಕ್ಷಕರು ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುತ್ತಾ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರಾಮಾಣಿಕವಾಗಿ ನ್ಯಾಯ ಕೊಡಬೇಕು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ.ಮೊಸಲಗಿ ಹೇಳಿದರು.ಪಟ್ಟಣದ ಸರಕಾರಿ ಎಂಪಿಎಸ್ ಶಾಲೆಯಲ್ಲಿ ಗುರುವಾರ ನಡೆದ ಮುಖ್ಯಗುರುಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿಕ್ಷಕರು ಬೋಧನೆ ಮಾಡಿದ ನಂತರ ಮಕ್ಕಳಿಂದ ಎಷ್ಟು ಕಲಿಕಾ ಪ್ರತಿಫಲ ಬರುತ್ತದೆ ಎಂದು ಆತ್ಮವಲೋಕನ‌ ಮಾಡಿಕೊಳ್ಳಬೇಕು. ಬೋಧನೆ ಯಶಸ್ವಿಯಾಗಬೇಕಾದರೆ ಮಕ್ಕಳ ಕಲಿಕೆಯ ಪ್ರತಿಫಲ ಖಾತ್ರಿಪಡಿಸಿಕೊಳ್ಳಬೇಕು.ಶೈಕ್ಷಣಿಕ ವರ್ಷದ ಆರಂಭೋತ್ಸವವು ಹಬ್ಬದ ವಾತಾವರಣದಂತೆ ಇದ್ದು, ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳಿಗೆ ಆಸಕ್ತಿದಾಯಕ ವಾತಾವರಣ ನಿರ್ಮಿಸಬೇಕು. ನಿರುಪಯುಕ್ತ ವಸ್ತುಗಳ ವಿಲೇವಾರಿ, ಶೌಚಾಲಯ ಮತ್ತು ವರ್ಗಕೋಣೆ ಸ್ವಚ್ಚತೆಯಿರಬೇಕು. ಸರ್ಕಾರಿ ಶಾಲೆಗಳಿಗೆ ಹೆಚ್ಚಿನ‌ ದಾಖಲಾತಿ ಮಾಡಬೇಕು. ಶಾಲೆಗಳಲ್ಲಿ ಸಿಗುವ ಸರ್ಕಾರಿ ಸೌಲಭ್ಯಗಳ ಕುರಿತು ಪಾಲಕರಿಗೆ ವಿವರಿಸಬೇಕು. ಅರ್ಹ ಮಕ್ಕಳ ದಾಖಲಾತಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು. ದಾಖಲಾದ ಮಗು ನಿರಂತರವಾಗಿ ಶಾಲೆಗೆ ಹಾಜರಿರುವಂತೆ ಕ್ರಮ ವಹಿಸಬೇಕು.ಎಲ್ಲ ಮಕ್ಕಳಿಗೆ ಸ್ಪಷ್ಟ ಓದು, ಶುದ್ದ ಬರಹ,…

Read More

ವಿಜಯಪುರ: ನಗರದಲ್ಲಿ ಕನ್ನಡ ರಂಗಭೂಮಿಗೆ ಹೆಸರಾದ ಮರಾಠಿ ವಿದ್ಯಾಲಯ ಶಿಕ್ಷಣ ಪ್ರಸಾರಕ ಮಂಡಳ ಮತ್ತು ಮರಾಠಿ ವಿದ್ಯಾಲಯ ಎಂಬ ಹೆಸರಿನಿಂದ 01 ಜೂನ್ 1945 ರಲ್ಲಿ ಮುಂಬೈಸರಕಾರದಿಂದ ವರ್ನಾಕ್ಯುಲರ್ ಫಾಯನಲ್ ಆಂಗ್ಲೋ ಮರಾಠಿ ಶಾಲೆ ಎಂಬ ಹೆಸರಿನಿಂದ ಮಾನ್ಯತೆ ಪಡೆದು 5ರಿಂದ 7ನೇ ತರಗತಿವರೆಗೆ ಮೊದಲ ಮರಾಠಿ ಮಾಧ್ಯಮ ಶಾಲೆ ಪ್ರಾರಂಭವಾಯಿತು.ನಂತರದಲ್ಲಿ ಅದನ್ನು 11 ನೇ ತರಗತಿವರೆಗೆ ವಿಸ್ತರಿಸಿದರು. ಆವಾಗ ಅದಕ್ಕೆ ಎಸ್ ಎಸ್ ಎಲ್ ಸಿ ಎನ್ನುತ್ತಿದ್ದರು. ಈ 80 ವರ್ಷದ ಅವಧಿಯಲ್ಲಿ ಸುಮಾರು 1 ಲಕ್ಷ 25 ಸಾವಿರ ವಿದ್ಯಾರ್ಥಿಗಳು ಕಲಿತಿರುತ್ತಾರೆ. 1951 ರಲ್ಲಿ ಪಂಚಮಿತ್ರ ಪ್ರಾಥಮಿಕ ಶಾಲೆಯನ್ನು 1 ರಿಂದ 4 ನೇ ತರಗತಿವರೆಗೆ ಪ್ರಾರಂಭಿಸಿದರು. ಇದರಿಂದ ಈ ಶಾಲೆಗೆ ಪ್ರತಿ ವರ್ಷ 40 ವಿದ್ಯಾರ್ಥಿಗಳು ಬರಲು ಅನುಕೂಲವಾಯಿತು.ನಂತರದಲ್ಲಿ ಅಂದರೆ 1963 ರಲ್ಲಿ ಈ ಶಾಲೆಯನ್ನು ಸರ್ಕಾರಕ್ಕೆ ಸೇರಿಸಿದರು. 1970ರಲ್ಲಿ ಮರಾಠಿ ವಿದ್ಯಾಲಯ ಸುವರ್ಣ ಮಟ್ಟಕ್ಕೆ ತಲುಪಿತು ಎಂದರೆ ತಪ್ಪಾಗಲಾರದು. ಏಕೆಂದರೆಆ ಅವಧಿಯಲ್ಲಿ 5 ರಿಂದ 10…

Read More

ವಿಜಯಪುರ: ಇತ್ತೀಚಿಗೆ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್ (ನಾಸಿಕ) ನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಸಿಂದಗಿ ಪಟ್ಟಣದ ಹಿರಿಯ ನ್ಯಾಯವಾದಿ ಅಶೋಕ ಗಾಯಕವಾಡ ಅವರನ್ನು ಖ್ವಾಜಾ ಸ್ಯೆಪನ ಮುಲ್ಕ ಟ್ರಸ್ಟ್ ವತಿಯಿಂದ ಸನ್ಮಾನ ಮಾಡಲಾಯಿತು.ಈ ವೇಳೆಯಲ್ಲಿ ದರ್ಗಾದ ಟ್ರಸ್ಟ್ ಅಧ್ಯಕ್ಷ ಮಹದೇವಪ್ಪ ಗಾಯಕವಾಡ ಹಾಗೂ ಶ್ರೀ ಸೋಮವಂಶ ಆರ್ಯ ಕ್ಷತ್ರಿಯ ಸೌಹಾರ್ದ ಸಹಕಾರಿ ನಿಯಮಿತ ಸಿಂದಗಿ ಅಧ್ಯಕ್ಷ ಅಂಬಾಜಿ ಗಾಯಕವಾಡ, ನಾರಾಯಣ ಅಲೋಣಿ. ಅಂಬರೀಶ್ ಚೌಗಲೆ, ಶಾಂತು ರಾಣಾಗೋಳ, ಖಾದರ್ ಭಾಷಾ ವಾಲಿಕಾರ, ರವಿಕುಮಾರ ಗಾಯಕವಾಡ, ಮಹೇಶ್ ಸುಲ್ಫಿ, ಸುರೇಶ್ ಕೋರಹಳ್ಳಿ, ಆರ್ ವಿ ಕದಂಬ, ಅವಿನಾಶ ಗಾಯಕವಾಡ, ಅನಿಲ್ ಗುಮಟೆ, ರಾಜು ಗೌಳಿ, ಅಂಬಾಜಿ ಘವಾಳ್ಕರ, ಸಿಂದಗಿಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಬಾಂಧವರು ಹಾಗೂ ಇತರೆ ಸಮಾಜ ಬಾಂಧವರು ಉಪಸ್ಥಿತರಿದ್ದರು.

Read More

ವಿಜಯಪುರ: ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಜಿಲ್ಲೆಯ ಅಹಿಂದ ವರ್ಗಗಳ ಧ್ವನಿಯಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿರುವ ಮತ್ತು ಪ್ರಾಮಾಣಿಕವಾಗಿ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿರುವ ಹಿರಿಯ ಹೋರಾಟಗಾರ ಹಾಗೂ ಕೆಪಿಸಿಸಿ ವಕ್ತಾರರಾದ ಎಸ್.ಎಂ.ಪಾಟೀಲ್ (ಗಣಿಹಾರ) ರವರಿಗೆ ವಿಧಾನಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕೆಂದು ದೇವಣಗಾಂವದ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಮಾಜಿ ಸದಸ್ಯ ಗಾಲೀಬಸಾಹೇಬ ನಾಗಾವಿ ಒತ್ತಾಯಿಸಿದ್ದಾರೆ.ವಿಜಯಪುರ ಜಿಲ್ಲಾದ್ಯಾಂತ ಅಹಿಂದ ಸಮುದಾಯವು ರಾಜಕೀಯವಾಗಿ ಕುಂಟಿತಗೊಂಡಿದ್ದು ಅಹಿಂದ ಸಮುದಾಯದ ಶಕ್ತಿಯನ್ನು ಬಲಿಷ್ಠಗೊಳಿಸಲು ಅಹಿಂದ ಸಮುದಾಯಗಳಿಗೆ ನ್ಯಾಯ ಒದಗಿಸಿ ದಂತಾಗುತ್ತದೆ. ಅಹಿಂದ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ಪ್ರಾಮಾಣಿಕವಾಗಿ ದುಡಿಯುವ ಅಹಿಂದ ನಾಯಕರನ್ನು ವಿಧಾನಪರಿಷತ್ತಿಗೆ ಅವಕಾಶ ನೀಡಬೇಕು. ಅಂತಹ ಅಹಿಂದ ನಾಯಕರನ್ನು ಅಧಿಕಾರ ನೀಡುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಬಿಜೆಪಿಯ ಟೀಕೆಗಳಿಗೆ ಸಮರ್ಥವಾಗಿ ಉತ್ತರಿಸುವ ನಾಯಕನನ್ನು ಅಹಿಂದ ಧ್ವನಿಯಾಗಿ ಗುರುತಿಸಿದಂತಾಗುತ್ತದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಕೊಡುಗೆ ಗಣನೀಯವಾಗಿದ್ದು, ಈ ಸಮುದಾಯದ ವಿಜಯಪುರ ಜಿಲ್ಲೆಯ ಪ್ರಬಲ ನಾಯಕ…

Read More