Author: editor.udayarashmi@gmail.com

ಅತ್ಯಾಚಾರ ಸೇರಿದಂತೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.ಅತ್ಯಾಚಾರ ಸೇರಿದಂತೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಹಾಸನದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಎಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯ ನಂತರ ಪ್ರಜ್ವಲ್ ಅವರು ದೇಶವನ್ನು ತೊರೆದಿದ್ದರು. ಈ ಕುರಿತ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ಬಳಿಕ ಪ್ರಜ್ವಲ್‌ ಪತ್ತೆಗೆ ಲುಕ್‌ ಔಟ್‌ ನೊಟೀಸ್‌ ಮತ್ತು ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಲಾಗಿತ್ತು. ಪ್ರಜ್ವಲ್ ಅವರ ರಾಜತಾಂತ್ರಿಕ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ತ್ರಿಭುಜಕ್ಕೆ ಇರುವುದು ಮೂರು ಬಾಹುಗಳು ಮತ್ತು ಮೂರು ಕೋನಗಳು. ಈ ಮೂರು ಬಾಹುಗಳು ಒಂದನ್ನೊಂದು ಮೂರು ಕೋನಗಳಲ್ಲಿ ಸಂಧಿಸದೆ ಇದ್ದರೆ ಅದನ್ನು ತ್ರಿಭುಜವೆಂದು ಪರಿಗಣಿಸಲಾಗುವುದಿಲ್ಲ. ಹಾಗೆಯೇ ಮಕ್ಕಳ ಆಂತರಿಕ ಬೆಳವಣಿಗೆಯಲ್ಲಿ ಇರುವ ಮೂರು ಭುಜಗಳು ಪಾಲಕರು, ಶಿಕ್ಷಕರು ಮತ್ತು ಮಕ್ಕಳು. ಈ ಮೂರು ಜನರು ಒಬ್ಬರಿಗೊಬ್ಬರು ಪೂರಕವಾಗಿ ಕಾರ್ಯನಿರ್ವಹಿಸಲೆಬೇಕು ಅದು ಅವಶ್ಯಕವೂ ಹೌದು ಅನಿವಾರ್ಯವೂ ಹೌದು. ಎಲ್ಲೋ ಒಂದೆಡೆ ಓದಿದ ನೆನಪು ಪಾಲಕರು ಮತ್ತು ಶಿಕ್ಷಕರ ಮೀಟಿಂಗ್ ನಲ್ಲಿ ಮಕ್ಕಳು ಹಾದಿ ತಪ್ಪಿರುವುದಕ್ಕೆ ಕಾರಣಗಳನ್ನ ಕೇಳಿದಾಗ ಶಿಕ್ಷಕರು ಹೇಳಿದ್ದು ಪಾಲಕರು ಮಕ್ಕಳನ್ನು ಸರಿಯಾಗಿ ಕಾಳಜಿ ಮಾಡುವುದಿಲ್ಲ ಎಂದು, ಎಷ್ಟೋ ಜನ ಪಾಲಕರಿಗೆ ತಮ್ಮ ಮಕ್ಕಳು ಯಾವ ತರಗತಿಯಲ್ಲಿ ಓದುತ್ತಿದ್ದಾರೆ ಎಂಬ ನೆನಪು ಕೂಡ ಇರುವುದಿಲ್ಲ, ಇನ್ನೂ ಕೆಲವು ಪಾಲಕರು ಮಕ್ಕಳ ಪಠ್ಯಪುಸ್ತಕದ ಬ್ಯಾಗನ್ನು ತಾವೇ ತರಗತಿಯ ಕೋಣೆಯವರೆಗೂ ತಂದುಕೊಡುವುದರಿಂದ ಹಿಡಿದು ಮನೆ ಕೆಲಸಗಳನ್ನು ಕೂಡ ತಾವೇ ಮಾಡುವಷ್ಟು ವಿಪರೀತ ಎನಿಸುವಷ್ಟು…

Read More

ಬಬಲೇಶ್ವರ: ರೈತರ ವಿವಿಧ ಸಮಸ್ಯೆ ಬಗೆಹರಿಸಲು ರೈತಸಂಘ ಆಗ್ರಹ ಬಬಲೇಶ್ವರ: ತಾಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ತಿಕೋಟಾ ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಿ ಕೂಡಲೇ ಬಗೆಹರಿಸಬೇಕು ಇಲ್ಲವಾದಲ್ಲಿ ತಹಶೀಲ್ದಾರ ಕಛೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.ಈ ವೇಳೆ ತಾಲೂಕಾ ಅಧ್ಯಕ್ಷ ಮಕಬುಲ ಖೀಜಿ ಮನವಿ ಸಲ್ಲಿಸಿ ಮಾತನಾಡುತ್ತಾ, ತಾಲೂಕಿನಲ್ಲಿ ಮುಂಗಾರು, ಹಿಂಗಾರು ಸಂಪೂರ್ಣ ನಷ್ಟಗೊಂಡಿರುವ ಹಿನ್ನಲೆಯಲ್ಲಿ ವಿಪತ್ತು ನಿರ್ವಹಣಾ ಕಾನೂನಿನಡಿ ಪ್ರತಿ ಹೆಕ್ಟರಗೆ ೮೫೦೦ ರಾಜ್ಯ ಮತ್ತು ೮೫೦೦ ಕೇಂದ್ರದ ಪರಿಹಾರ ಗರಿಷ್ಟ ೨ ಹೆಕ್ಟರೆಗೆ ಪರಿಹಾರ ಹಾಕಬೇಕು, ಆದರೆ ಕೇಂದ್ರ ಸರಕಾರ ನೀಡಿದ ಪರಿಹಾರದಲ್ಲಿಯೇ ೨೦೦೦ ಕಡಿತ ಮಾಡಿರುವುದು ಖಂಡನೀಯ, ಅದನ್ನು ಕೂಡಲೇ ರಾಜ್ಯ ಸರಕಾರ ೨೦೦೦+೮೫೦೦ ಸೇರಿಸಿ ಒಟ್ಟಾರೆ ೧೦೫೦೦ ರೈತರ ಪ್ರತಿ ಹೆಕ್ಟರಗೆ ಹಾಕಬೇಕು. ಬರಗಾಲ ಪರಿಹಾರ ಸಮೀಕ್ಷೆ ಸರಿಯಾಗಿ ಮಾಡದೇ, ಬೇಜವ್ದಾರಿಯಿಂದ ಹೊರಗುತ್ತಿಗೆ ಮೂಲಕ ಮನಸ್ಸಿಗೆ ಬಂದ ಹಾಗೆ ಸರ್ವೇ…

Read More

ಕ್ಲೋಜರ್ ಕಾಮಗಾರಿಗೆ ಅನುದಾನ ನೀಡಿ | ಜಿಲ್ಲೆಯ ಎಲ್ಲಾ ಕಾಲುವೆ ಸ್ವಚ್ಛಗೊಳಿಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಸಲು ಆಗ್ರಹ ವಿಜಯಪುರ: ಜಿಲ್ಲೆಯಲ್ಲಿ ಎಲ್ಲಾ ಏತನೀರಾವರಿ ಕಾಲುವೆಗಳಲ್ಲಿ ಹುಳು ತುಂಬಿ ಕಂಠಿಗಳು ಬೆಳೆದು ನೀರು ಮುಂದೆ ಹೋಗದಂತಾಗಿದೆ, ಇದರಿಂದ ಸಾಕಷ್ಟು ಸಮಸ್ಯೆಗಳು ಉಂಟಾಗಿದ್ದು, ಕಳೆದ ೨ ವರ್ಷಗಳಿಂದ ಈ ಕೆಲಸಗಳಿಗೆ ಅನುದಾನ ಇಲ್ಲವೆಂದು ಎಲ್ಲಾ ಕಾಲುವೆಗಳಲ್ಲಿ ಸ್ವಚ್ಚತೆ ಮಾಡದೇ ಹಾಗೆ ಬಿಟ್ಟಿರುತ್ತಾರೆ, ಕೆಲವು ಕಡೆ ರೈತರೆ ಸ್ವತಃ ಹಣ ಖರ್ಚು ಮಾಡಿ ಸ್ವಚ್ಚತೆ ಮಾಡಿರುವುದು ಇದೆ ಎಂದು ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ಮೋಹನರಾಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿ, ಈ ವರ್ಷವಾದರೂ ಎಲ್ಲಾ ಕಾಲುವೆಗಳನ್ನು ಮಳೆಗಾಲದಲ್ಲಿ ಆಣೆಕಟ್ಟಿನಿಂದ ನೀರು ಬಿಡುವ ಮುಂಚಿತವಾಗಿ ಸ್ವಚ್ಚತೆ ಮಾಡಬೇಕೆಂದು ಮತ್ತು ಅದಕ್ಕೆ ಅವಶ್ಯಕವಾದ ಹಣವನ್ನು ಪ್ರತಿವರ್ಷ ತೆಗೆದಿಡಬೇಕು. ಹಾಗೆ…

Read More

ವಿಜಯಪುರ: ಬೇಸಿಗೆ ಶಿಬಿರಗಳನ್ನು ಹಮ್ಮಿಕೊಳ್ಳುವದರಿಂದ ಮಕ್ಕಳಲ್ಲಿರುವ ಸೃಜನಶೀಲತೆ ಹಾಗು ವ್ಯಕ್ತಿತ್ವ ಬೆಳವಣಿಗೆ ಹೊಂದಲು ಸಾಧ್ಯ. ವಿದ್ಯೆಯೊಂದಿಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಿಬಿರಗಳು ಮಹತ್ವ ಪಡೆದುಕೊಂಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಸೋಮವಾರ ಸಂಜೆ ಬಿ ಎಲ್ ಡಿ ಈ ಆಸ್ಪತ್ರೆ ರಸ್ತೆಯ ಶಿವಾಲಯ ಸಭಾಂಗಣದಲ್ಲಿ ಪಿಟ್ನೆಸ್ ಕಾನ೯ರ ಹಾಗು ಬೇಸ್ಟ ಮಾಟಿ೯ಯಲ್ ಕಲಾ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಹಾಸಿಂಪೀರ ವಾಲಿಕಾರ ಅವರು, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕಾರ್ಯ ಬೇಸಿಗೆ ಶಿಬಿರಗಳು ಯಶಸ್ವಿಯಾಗಿ ಮಾಡಿದ್ದು ಮಕ್ಕಳ ಕ್ರಿಯಾಶೀಲ ಚಟುವಟಿಕೆ ಪಾಲಕರು ಕಣ್ಣಾರೆ ಕಂಡು ಸಂತೋಷಗೊಂಡಿರುವುದು ಪ್ರಶಂಸನೀಯ ಎಂದರು.ಪಿಟ್ನಸ ಕಾನ೯ರ ಮುಖ್ಯಸ್ಥ ಜಗದೀಶ ಗುಳೆದಗುಡ್ಡ ಮಾತನಾಡಿ. ಯೋಗಾಸನ, ಸಂಗೀತ, ನೃತ್ಯ, ಕರಾಟೆ, ಭರತನಾಟ್ಯ ವಚನ ನೃತ್ಯ, ಈಜು, ಕುದುರೆ ಸವಾರಿ ಮುಂತಾದ ವಿಷಯ ಹಾಗು ಸ್ಪಧೆ೯ಗಳಲ್ಲಿ ಎರಡು ನೂರು ವಿದ್ಯಾರ್ಥಿ ಶಿಬಿರಾರ್ಥಿಗಳಿಗೆ ಉತ್ತಮ ತರಬೇತಿ ನೀಡಿದ್ದು ಆನಂದನ್ನುಂಟು ಮಾಡಿದೆ. ಶಿಬಿರಾಥಿ೯ ಮಕ್ಕಳಲ್ಲಿರುವ…

Read More

ದೇವರಹಿಪ್ಪರಗಿ: ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವಂತ ದುಷ್ಪರಿಣಾಮಗಳ ಬಗ್ಗೆ ಯುವಜನತೆ ಅರಿತು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದಲ್ಲಿ ಬುಧವಾರ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಮಾತನಾಡಿ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಇಂತಹ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಸರಕಾರ ನಿರ್ಬಂಧ ಹೇರಿದ್ದರೂ ಸಹ ಎಗ್ಗಿಲ್ಲದೆ ಎಲ್ಲೆಡೆ ಮಾರಾಟ ಮಾಡಿ ಸಾರ್ವಜನಿಕರಿಗೆ ಮೋಸ ಮಾಡಲಾಗುತ್ತಿದೆ. ಇದು ತಪ್ಪು. ತಕ್ಷಣವೇ ತಂಬಾಕು, ಮಾವಾ ಸೇರಿದಂತೆ ತಂಬಾಕುಯುಕ್ತ ಪದಾರ್ಥಗಳ ಬಗ್ಗೆ ಯುವಕರು ಅರಿಯಬೇಕು ಹಾಗೂ ಸೇವನೆ, ಮಾರಾಟ ನಿಲ್ಲಿಸಬೇಕೆಂದು ಸೂಚಿಸಿದರು.ನಂತರ ೨೦ಕ್ಕೂ ಹೆಚ್ಚು ಪಾನ ಶಾಪ್‌ಗಳ ಮೇಲೆ ದಾಳಿ ನಡೆಸಿ ಅಂಗಡಿಕಾರರಿಗೆ ದಂಡ ವಿಧಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಂದೀಪ ಕಡ್ಲೇವಾಡ, ಎಎಸ್‌ಐ ಡಿ.ಎಚ್.ಬಗಲಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮನಗೌಡ ನೀರಲಗಿ, ಸಮುದಾಯ ಆರೋಗ್ಯ ಅಧಿಕಾರಿ ಕಿರಣ ಪಾಟೀಲ ಸೇರಿದಂತೆ ಆರೋಗ್ಯ, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದಲ್ಲಿ ಬುಧವಾರ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ತಂಬಾಕು ತನಿಖಾದಳದ ಸದಸ್ಯರ ತಂಡ ಕೊಟ್ಟಾ ೨೦೦೩ ಕಾಯ್ದೆ ಅಡಿ ದಾಳಿ ನಡೆಸಿತು.ಜಿಲ್ಲಾ ಸರ್ವೇಕ್ಷಣಾಧಿಕಾರಿಣಿ ಡಾ.ಕವಿತಾ ದೊಡ್ಡಮನಿ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯನ್ನು ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿಯಿಂದ ಪ್ರಾರಂಭಿಸಿ ಮುಖ್ಯ ಬಜಾರದಿಂದ ಇಂದಿರಾ ವೃತ್ತದವರೆಗೆ ಮಾರ್ಗಮಧ್ಯದಲ್ಲಿ ಇರುವ ಹೋಟಲ್ ಸೇರಿದಂತೆ ಪಾನ್‌ಶಾಪ್‌ಗಳಿಗೆ ದಾಳಿಮಾಡಿ ದಂಡ ವಿಧಿಸಲಾಯಿತು.ಮಾರ್ಗದ ಮಧ್ಯೆ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಕರಿಗೆ/ವ್ಯಾಪಾರಸ್ಥರಿಗೆ ಕೊಟ್ಟಾ ೨೦೦೩ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ಒಟ್ಟು ರೂ.೨೨೦೦ ದಂಡ ವಸೂಲು ಮಾಡಿ ಬಿಸಿ ಮುಟ್ಟಿಸಿದರು. ಕೆಲವು ಕಡೆ ಕಾಯ್ದೆಯ ಸೆಕ್ಷನ್ ೪ ಮತ್ತು ೬(ಎ)ಗಳ ನಾಮಫಲಕಗಳನ್ನು ಅಳವಡಿಸಿ ತಂಬಾಕು ಉತ್ಪನ್ನಗಳ ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.ಆರೋಗ್ಯ ಇಲಾಖೆಯಿಂದದಾಳಿಯಲ್ಲಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ, ಕ್ಷೆತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಎಸ್.ತೇರದಾಳ, ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಛಲವಾದಿ, ಎಮ್.ಎಸ್.ಗೌಡರ, ಎಸ್.ಆರ್.ಸಜ್ಜನ,…

Read More

ಕಳಪೆ ಬೀಜ, ಗೊಬ್ಬರ, ಕೀಟನಾಶಕ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ ವಿಜಯಪುರ: ೨೦೨೪-೨೫ನೇ ಮುಂಗಾರು ಹಂಗಾಮಿನ ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ಸರಕಾರದ ನಿಗದಿತ ಪಡೆಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ಶಾಶ್ವತ ಲೈಸನ್ಸ್ ರದ್ದು ಮಾಡಬೇಕು, ಹಾಗೆ ರೈತ ಸಂಪರ್ಕ ಕೇಂದ್ರದಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಒದಗಿಸಿ ರೈತರಿಗೆ ಅನ್ಯಾಯವಾಗದಂತೆ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೃಷಿ ಆಯುಕ್ತ ವೈ.ಎಸ್.ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತುಈ ವೇಳೆ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡಿ, ಜಿಲ್ಲೆಯಲ್ಲಿ ಅಧಿಕೃತ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರು ಪ್ರತಿವರ್ಷ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ, ಉದಾ : ಹತ್ತಿ ಬೀಜ- ನಾರ್ಥ ಸೀಡ್ಸ್ ಸಂಕೇತ, ಮತ್ತು ಯು ಎಸ್ ಅಗ್ರಿ ಸೀಡ್ಸ್ ೭೦೬೭ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ…

Read More

ವಿಜಯಪುರ: ಕನ್ನಡ ಅನ್ನದ ಭಾಷೆಯಾಗಬೇಕು. ಜಾಗತೀಕರಣದ ಪ್ರಭಾವದಿಂದ ಕನ್ನಡ ನಾಡು ನುಡಿಗೆ ಹಿನ್ನಡೆ ಆಗುತ್ತಿರುವುದು ವಿಷಾದನೀಯ. ಕನ್ನಡಿಗರು ಇತರ ಭಾಷೆಯ ವ್ಯಾಮೋಹದಿಂದ ತಮ್ಮ ಮಕ್ಕಳನ್ನು ಜಾಗತೀಕರಣದ ಪೈಪೋಟಿಗೆ ವಾಲುತ್ತಿರುವುದು ಕನ್ನಡ ಭಾಷೆಗೆ ಹಿನ್ನಡೆಯಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಡಾ.ಸಂಗಮೇಶ ಮೇತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜಿಲ್ಲಾ,ತಾಲೂಕ, ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜರುಗಿದ ದಿ ಗೌರಮ್ಮ ಕೊಟ್ರಬಸಯ್ಯ ತಂಬ್ರಹಳ್ಳಿಮಠ ದತ್ತಿ. ದತ್ತಿ ದಾನಿಗಳು ಶ್ರೀ ಅಭಿನವ ಶಿವಪುತ್ರ ಸ್ವಾಮಿಜಿ ಹಾಗು ದಿ ರಾಮರಾವ ಪ್ರಭಾಕರ ಶಂಕರ ದತ್ತಿ. ದತ್ತಿ ದಾನಿಗಳು ಸರೋಜಾ ರಾಮರಾವ ಕುಲಕರ್ಣಿ ಇವರುಗಳ ದತ್ತಿ ನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಾನಪದ ಸಾಹಿತ್ಯ ಕನ್ನಡ ಸಾಹಿತ್ಯದ ತಾಯಿಬೇರು.ಕನ್ನಡ ಉಳಿದರೆ ಕನ್ನಡಿಗರ ಉಳಿವು. ಸರ್ಕಾರ ಮಾತೃ ಭಾಷೆಗೆ ಪ್ರಾಧ್ಯಾನತೆ ನೀಡಬೇಕು ಎಂದರು.ಸಭೆಯ ಅಧ್ಯಕ್ಷತೆ ವಹಿಸಿದ ತಿಕೋಟಾ ವಸತಿ ಶಾಲೆಯ ಪ್ರಾಧ್ಯಾಪಕ ಸೂರ್ಯಕಾಂತ ಹೊಸಮನಿ ಮಾತನಾಡಿ, ರಾಜಕೀಯವು ಸಮಾಜದಲ್ಲಿ ಬೇದ…

Read More

ಇಂಡಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಇಂಡಿ ತಾಲೂಕಾ ಅಧ್ಯಕ್ಷರಾಗಿ ತಮ್ಮಾರಾಯ ಆಸಂಗಿ ಅವರನ್ನು ಆಯ್ಕೆ ಮಾಡಿ ಜಿಲಾಧ್ಯಕ್ಷ ಎಸ್.ಬಿ. ಕೆಂಬೋಗಿ ಆದೇಶ ಪತ್ರ ನೀಡಿದ್ದಾರೆ.ಇಂಡಿ ಪಟ್ಟಣದ ಹಳೆ ತಹಶೀಲ್ದಾರ ಕಛೇರಿ ಹತ್ತಿರ ಇರುವ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಛೇರಿಯಲ್ಲಿ ಇಂಡಿ ತಾಲೂಕಾ ನೂತನ ಅಧ್ಯಕ್ಷರಾಗಿ ತಮ್ಮಾರಾಯ ಆಸಂಗಿ ಅವರನ್ನು ಆಯ್ಕೆ ಮಾಡಿದರು.ನಂತರ ಜಿಲಾಧ್ಯಕ್ಷ ಎಸ್.ಬಿ. ಕೆಂಬೋಗಿ ಮಾತನಾಡಿದ ಅವರು, ತಾಲೂಕ ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಬೇಕು ನಿಲ್ಲಬೇಕು. ರಾಜ್ಯ ರೈತ ಸಂಘವು ಕೆಲವು ಸೈದ್ದಾಂತಿಕ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದು, ಈ ವಿಚಾರಗಳಿಗೆ ಮತ್ತು ಸಂವಿಧಾನ ಬದ್ದ ನೀತಿ ನಿಯಮಗಳನ್ನು ಗಾಳಿಗೆ ತೋರದೆ ಶಿಸ್ತಿನಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಯಾವುದೇ ಮತ ಜಾತಿಗಳಿಗೆ ಮತ್ತು ಯಾವುದೇ ರಾಜಕೀಯ ಪಕ್ಷಗಳ ಸೋಂಕಿಲ್ಲದೇ ಪ್ರಾಮಾಣಿಕವಾಗಿ ಸಂಘ ನೀಡಿರುವ ಜವಾಬ್ದಾರಿ ಹುದ್ದೆಯನ್ನು ನಿಷ್ಠೆಯಿಂದ ಮಾಡಬೇಕೆಂದು ಹೇಳಿದರು.

Read More