Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದಲ್ಲಿ ಕಳೆದ ಐದು ವಾರದಿಂದ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಗ್ರಾಮದೇವತೆಗೆ (ದ್ಯಾಮವ್ವದೇವಿ) ಹಿಡಿದ ವಾರದ ವಾರದ ಕೊನೆಯ ದಿನ ಮಂಗಳವಾರ ಜನರು ಶ್ರದ್ದಾ ಭಕ್ತಿಯಿಂದ ಉಡಿತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಬೆಳಗ್ಗೆಯಿಂದಲೇ ತಂಡೋಪತಂಡವಾಗಿ ಮಹಿಳೆಯರು ತಮ್ಮ ಮಕ್ಕಳು, ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಯಿ, ಕರ್ಪೂರ, ಜೋಳದ ಕಡಬು, ಹೂರಣದ ಕಡಬು ಸೇರಿದಂತೆ ವಿವಿಧ ನೈವೇದ್ಯ, ಬಾಳೆಹಣ್ಣು, ಉಡಕ್ಕಿ ಸಾಮಾನುಗಳೊಂದಿಗೆ ಗ್ರಾಮದೇವಿಯ ದೇವಸ್ಥಾನಕ್ಕೆ ಆಗಮಿಸಿ ಗ್ರಾಮದೇವಿ ದರ್ಶನ ಪಡೆದು ದೇವಿಗೆ ಉಡಿ ತುಂಬಿ ತಮ್ಮ ಭಕ್ತಿ ಸಮರ್ಪಿಸುವುದು ಕಂಡುಬಂದಿತು.ಪಟ್ಟಣದ ಗ್ರಾಮದೇವತೆ (ದ್ಯಾಮವ್ವದೇವಿ)ಯ ಉಡಿ ತುಂಬುವ ಕಾರ್ಯಕ್ರಮದಂಗವಾಗಿ ಸಂಜೆ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನದಿಂದ ಬಸವೇಶ್ವರ ಭಾವಚಿತ್ರದೊಂದಿಗೆ ಗ್ರಾಮದೇವಿಗೆ ಸೀರೆ-ಕುಪ್ಪಸ, ಬಾಳೆಹಣ್ಣು, ಉಡಿ ತುಂಬುವ ಸಾಮಾನುಗಳನ್ನು ದೈವಮಂಡಳಿಯು ವಾದ್ಯಮೇಳದೊಂದಿಗೆ ಮೆರವಣಿಗೆ ಮೂಲಕ ಗ್ರಾಮದೇವಿ ದೇವಸ್ಥಾನಕ್ಕೆ ತಂದಿತ್ತು. ನಂತರ ದೇವಸ್ಥಾನದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ನೆರವೇರಿಸಿ ಉಡಿ ತುಂಬಿ ನಾಡಿಗೆ ಉತ್ತಮ ಮಳೆ-ಬೆಳೆ ನೀಡಿ ಎಲ್ಲ ಜನರನ್ನು ಸುಖ-ಸಂತೋಷ-ನೆಮ್ಮದಿಯಿಂದ ಇಡುವಂತೆ ದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ…

Read More

ಮುದ್ದೇಬಿಹಾಳ: ಪಟ್ಟಣದಲ್ಲಿ ರವಿವಾರ ಸದ್ದು ಮಾಡಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣದ ಹಿಂದೆ ಪ್ರೇಮ್ ಕಹಾನಿ ಇರೋದು ಖಚಿತವಾಗಿದೆ.ರಾಹುಲ್ ಬಿರಾದಾರ ಮತ್ತು ಐಶ್ವರ್ಯ ಮದರಿ ಒಟ್ಟಿಗೆ ತೆಗೆಸಿಕೊಂಡಿರುವ ಫೋಟೋ “ಉದಯರಶ್ಮಿ” ಗೆ ಲಭ್ಯವಾಗಿದ್ದು ಫೋಟೋಗಳಲ್ಲಿ ಇವರಿಬ್ಬರೂ ಸಲುಗೆಯಿಂದಿರೋದು ಸಾಬೀತಾಗಿದೆ.ಕಳೆದ ಕೆಲವು ವರ್ಷಗಳ ಹಿಂದೆ ಇವರಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದು ಇವರ ಪ್ರೀತಿಗೆ ಮನೆಯವರು ಅಡ್ಡಿಯಾಗಿದ್ದಾರೆ ಎನ್ನಲಾಗಿದೆ. ಮೊದಲು ಪ್ರೀತಿಸಿ ಏಕಾಏಕಿ ನಿರಾಕರಿಸಿದ ಐಶ್ವರ್ಯಳ ಪ್ರೀತಿ ಮರು ಪಡೆಯಬೇಕು ಮತ್ತು ಆಕೆಯನ್ನ ಮದುವೆಯಾಗಬೇಕು ಎಂದು ರಾಹುಲ್ ಸಾಕಷ್ಟು ಪ್ರಯತ್ನಿಸಿದ್ದಾನೆ. ಮನೆ ಎದುರೆಲ್ಲ ಹುಚ್ಚನಂತೆ ಬೈಕ್ ಒದರಿಸುತ್ತ ಓಡಾಡಿದ್ದಾನೆ. ಯಾವುದೂ ಪ್ರಯೋಜನಕ್ಕೆ ಬಾರದಿದ್ದಾಗ ಮೊಬೈಲ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವದಾಗಿ ಬೆದರಿಸಿದ್ದಾನೆ ಎನ್ನಲಾಗಿದೆ.ಜೊತೆಗಿರುವ ಫೋಟೋಗಳು ಆಚೆ ಹೋದರೆ ಏಶ್ವರ್ಯಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತದೆ ಎಂದು ಅರಿತ ಆಕೆಯ ಮನೆಯವರು ಬುದ್ದಿವಾದ ಹೇಳಲು ಮುಂದಾಗಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನೆಯ ಸತ್ಯಾ ಸತ್ಯತೆಯ ಹಿಂದೆ ಬೆನ್ನಟ್ಟಿದ ಪೊಲೀಸರು…

Read More

ಮುದ್ದೇಬಿಹಾಳ: ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳರನ್ನು ಎಂಎಲ್‌ಸಿ ಮಾಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಪದ್ಮಾವತಿ ವಾಲಿಕಾರ ಭಾಜಪಾ ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಸಂಘಟನೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೂಚಬಾಳರು ಅಪಾರ ಅಭಿಮಾನಿ ಬಳವನ್ನು ಹೊಂದಿದ್ದಾರೆ. ಪಕ್ಷದಲ್ಲಿ ಎಂತಹದ್ದೇ ಭಿನ್ನಾಭಿಪ್ರಾಯಗಳಿದ್ದರೂ ಸೂಕ್ತ ಪರಿಹಾರ ಕಂಡುಕೊಳ್ಳುವ ಇವರಿಗೆ ಎಂಎಲ್‌ಸಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Read More

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಅಲ್ಪ ಸಂಖ್ಯಾತರ ಮುಖಂಡನನ್ನು ಎಂಎಲ್‌ಸಿಯನ್ನಾಗಿ ಮಾಡಬೇಕು ಎಂದು ಮಾಜಿ ಪುರಸಭೆ ಸದಸ್ಯ ಪಿಂಟು ಸಾಲಿಮನಿ ಮತ್ತು ಕಾಂಗ್ರೇಸ್ ಮುಖಂಡ ಹುಸೇನ ಮುಲ್ಲಾ ಕಾಂಗ್ರೇಸ್ ಪಕ್ಷದ ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.ಅಲ್ಪಸಂಖ್ಯಾತರು ಕಾಂಗ್ರೇಸ್ ಪಕ್ಷಕ್ಕಾಗಿ ಸಾಕಷ್ಟು ಶ್ರಮನಿಸಿದ್ದಾರೆ. ಆದರೆ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುತ್ತಿಲ್ಲ. ಸಧ್ಯ ಅವಕಾಶವಿದ್ದು ಜಿಲ್ಲೆಯ ಯಾರಾದರೂ ಒಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಎಂಎಲ್‌ಸಿಯಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Read More

೫೧.೫ ಕೋಟಿ ಶೇರು ಬಂಡವಾಳ | ಶೇರುದಾರರಿಗೆ ೨೫% ಡಿವಿಡೆಂಟ್ | ಕೇವಲ ೧೨ ಗಂಟೆಯಲ್ಲಿ ಸಾಲ ಮಂಜೂರು ವಿಜಯಪುರ: ಸಿದ್ಧಸಿರಿ ೧೯ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ಸಿದ್ಧಸಿರಿ ಮಹಿಳಾ ಶಾಖೆ ಸಭಾಂಗಣದಲ್ಲಿ ಸಿಬ್ಬಂದಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಶಿಬಿರ ಉದ್ದೇಶಿಸಿ ವ್ಯವಸ್ಥಾಪಕ ನಿರ್ದೇಶಕ ಜೋತಿಬಾ ಖಂಡಾಗಳೆ ಮಾತನಾಡಿ, ಸಿದ್ಧಸಿರಿ ಸೌಹಾರ್ದ ಸಹಕಾರಿಯು ಅತೀ ವೇಗವಾಗಿ ಬೆಳೆಯುತ್ತಿದ್ದು ಗ್ರಾಹಕರ ಪ್ರೀತಿಗೆ ಪಾತ್ರವಾಗಿದೆ, ಗ್ರಾಹಕರ ಅನುಕೂಲಕ್ಕಾಗಿ ಸಿದ್ಧಸಿರಿ “ಎಕ್ಸ್ಪ್ರೆಸ್ ಸಾಲಯೋಜನೆ” ಪ್ರಾರಂಭಿಸಿದ್ದು ಸಾಲ ಬೇಡಿಬಂದ ಗ್ರಾಹಕರಿಗೆ ಕೇವಲ ೧೨ ಗಂಟೆಯಲ್ಲಿ ಸಾಲ ಮಂಜೂರು ಮಾಡಲಾಗುವದು, ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರ ನಿರ್ಣಯದಂತೆ ವಿಜಯಪುರ ನಗರದಲ್ಲಿ ಬಡ ಬೀದಿಬದಿ ವ್ಯಾಪಾರಿಗಳಿಗಾಗಿ ಶೂನ್ಯ ಬಡ್ಡಿದರಲ್ಲಿ “ಕೇಸರಿ ಸ್ವಾವಲಂಬಿ ಯೋಜನೆಯಡಿಯಲ್ಲಿ” ಸಾಲ ವಿತರಿಸಲಾಗುತ್ತಿದೆ ಎಂದರು.ಸಭೆಯನ್ನು ಉದ್ದೇಶಿಸಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಕೇವಲ ೧೮ ವರ್ಷಗಳಲ್ಲಿ ಸಿದ್ಧಸಿರಿ ಸೌಹಾರ್ದವು ರೂ.೩೪೧೩ ಕೋಟಿ ಠೇವಣಿ ಸಂಗ್ರಹಿಸಿ ಶೇಅರುದಾರರಿಗೆ ೨೫% ಡಿವಿಡೆಂಡ್ ನೀಡಲಾಗಿದೆ, “ಧನೇನ ದೀನಂ…

Read More

ಇಂಡಿ: ಜೀವನಕ್ಕೆ ಆಶ್ರಯವಾಗಿದ್ದ, ಟ್ಯಾಂಕರ ಮೂಲಕ ನೀರು ಹಾಕಿ ಮಗುವಿನಂತೆ ಬೆಳೆಸಿದ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದಷ್ಟು ಹಾನಿಯಾಗಿದ್ದು, ಆ ಕುಟುಂಬ ಸಂಕಷ್ಟದಲ್ಲಿದೆ‌. ಈ ಕೂಡಲೇ ಸರಕಾರ ಆ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಮೈತ್ರಿ ಪಕ್ಷದ ಮುಖಂಡರು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಹಂಜಗಿ ರಸ್ತೆಯಲ್ಲಿ ಬರುವ ಗುರುಶಾಂತ. ಚಂದ್ರಶೇಖರ ಸಾಲೋಟಗಿ ಅವರಿಗೆ ಸೇರಿದ್ದ ಜಮೀನು ಸರ್ವೇ ನಂ- 975/5ರಲ್ಲಿ ಬರುವ 3ಏಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಸುಮಾರು 10 ವರ್ಷದಿಂದ ಲಿಂಬೆ ಗಿಡಗಳನ್ನು ಟ್ಯಾಂಕರ ಮೂಲಕ ನೀರು ಹಾಕಿ ಮಗುವಿನಂತೆ ಜೋಪಾನ ಮಾಡಿ ಬೆಳೆಸಲಾಗಿತ್ತು. ಆದರೆ ಆಕಸ್ಮಿಕ ಬೆಂಕಿಗೆ ಆಹುತಿಯಾದ ರೈತನ ಕುಟುಂಬಕ್ಕೆ ಬರಶೀಡಿಲ ಬಡಿದಂತಾಗಿದೆ‌. ಕೂಡಲೇ ಸರಕಾರ ಆ ಕುಟುಂಬದ ಆಶ್ರಯ ಬರಬೇಕೆಂದು ಎಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ…

Read More

ಚಡಚಣ: ಸರ್ಕಾರಿ ಶಾಲೆಗಳು ಸ್ವಚ್ಛವಾಗಿರುವಂತೆ ಮಾಡಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸ್ಥಳೀಯ ನಿವಾಸಿಗಳ ಸಹಕಾರ ಅಗತ್ಯ ಎಂದು ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಆರ್.ಎನ್.ಹತ್ತಳ್ಳಿಯವರು ಹೇಳಿದರು.ಶಾಲಾ ಆರಂಭೋತ್ಸವದ ಮನ್ನ ದಿನವಾದ ಬುಧವಾರದಂದು ಶಾಲಾ ಆವರಣ ಹಾಗೂ ಶಾಲೆಗಳ ಕೋಣೆಗಳ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾತನಾಡಿದ ಅವರು. ಸರ್ಕಾರಿ ಶಾಲೆಗಳು ಸಾರ್ವಜನಿಕರ ಆಸ್ತಿ. ಇದನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಶಾಲೆಯ ಜವಾಬ್ಧಾರಿಯಾಗಿದೆ. ಸಾರ್ವಜನಿಕರು ಶಾಲಾ ಆವರಣದಲ್ಲಿ ಕಸ ಕಡ್ಡಿ ಹಾಕದಂತೆ ತಡೆಯುವ ಕಾರ್ಯ ಆಗಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಗೆ ಪೂರಕ ಪರಿಸರ ಕಲ್ಪಿಸುವ ಕರ್ತವ್ಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಯುವಕರದ್ದು ಆಗಿರಬೇಕು ಎಂದು ಹೇಳಿದರು.ಈ ವೇಳೆಯಲ್ಲಿ ಶಾಲೆಯ ಶಿಕ್ಷಕರಾದ ಎಸ್.ಡಿ.ಆದಿಗೊಂಡೆಯವರು ಮಾತನಾಡುತ್ತ. ಶಾಲೆ ಸುತ್ತಮುತ್ತಲಿನ ಯುವ ಮುಖಂಡರು ಸೇರಿದಂತೆ ಸಂಘ, ಸಂಸ್ಥೆ ಪದಾಧಿಕಾರಿಗಳ ನೆರವನ್ನು ಪಡೆದು ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸುವ ಅಗತ್ಯವಿದೆ. ತಾವು ವಾಸಿಸುವ ಸುತ್ತಮುತ್ತಲಿನ ಸ್ಥಳ ಮತ್ತು…

Read More

ಇಂಡಿ: ಇಸ್ಲಾಂ ಕಮೀಟಿ ಅಧ್ಯಕ್ಷರಾಗಿ ಇಬ್ರಾಹಿಂ ಚಪ್ಪರಬಂದ ಅವರನ್ನು ಹಾಗೂ ಉಪಾಧ್ಯಕ್ಷರಾಗಿ ಬಾಬು ಹುಸೇನಸಾಬ ಮಕಾಂದರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ತಾಲ್ಲೂಕಿನ ಲಚ್ಯಾಣ ಗ್ರಾಮದ ಇಸ್ಲಾಂ ಕಮೀಟಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಶುಕ್ರವಾರ ಸಮುದಾಯದ ಹಿರಿಯರು ಆಯ್ಕೆ ಮಾಡಿದರು.ಇನ್ನು ಸದಸ್ಯರಾಗಿ ಬಾಬುಲಾಲ ಮುಜಾವರ, ಮದರಸಾಬ ಮಕಾಂದಾರ, ಬಾಬುಸಾಬ ಅತ್ತಾರ, ಹಾಜಿಸಾಬ, ಶೇಖ್, ದಸಗೀರಸಾಬ, ಶೇಖ್, ಸೈಪನಸಾಬ ಚಪ್ಪರಬಂದ, ಲಾಡ್ಲೆಮಶಾಕ ನದಾಪ, ಸೈಪನಸಾಬ ಮುಲ್ಲಾ ಅವರನ್ನು ಜಮಾತೆ ಇಸ್ಲಾಂ ಕಮೀಟಿಯ ಸರ್ವ ಸದಸ್ಯರು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ 2024 ರಿಂದ ಮುಂದಿನ 3 ವರ್ಷಗಳ ಕಾಲದ ಅವಧಿ ವರೆಗೆ ಆಯ್ಕೆ ಮಾಡಲಾಗಿದೆ.

Read More

ದೇವರಹಿಪ್ಪರಗಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಅಹಿಂದ ವರ್ಗಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ಕೋಲಿ ಕಬ್ಬಲಿಗ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದ್ದಾರೆ.ಪಟ್ಟಣದಲ್ಲಿ ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಅಹಿಂದ ಮತಗಳ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಜೊತೆಗೆ ಜಿಲ್ಲೆಯಲ್ಲಿ ಅಹಿಂದ ಮತದಾರರ ಸಂಖ್ಯೆಯೂ ಸಹ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ, ದಲಿತಪರ ನಾಯಕರು ಸಹ ಸಾಕಷ್ಟು ಅವಕಾಶವಂಚಿತರಾಗಿದ್ದಾರೆ.ಜಿಲ್ಲೆಯ ದೇವರಹಿಪ್ಪರಗಿ, ವಿಜಯಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಅಹಿಂದ ಅಭ್ಯರ್ಥಿಗಳಿಗೆ ಅವಕಾಶ ನೀಡಿತ್ತು. ಈ ಕಾರಣದಿಂದ ಜಿಲ್ಲೆಯ ಎಲ್ಲ ಅಹಿಂದ ಮತಗಳು ಒಂದಾಗಿ ಇತರ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವಂತಾಯಿತು.ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಅಹಿಂದ ವರ್ಗಗಳನ್ನು ಹೆಚ್ಚಾಗಿ ನೆಚ್ಚಿಕೊಂಡಿದ್ದು ಈಗ ಅವುಗಳಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ ತಾನಾಗಿ ಒದಗಿ ಬಂದಿದ್ದು,ಈ ಮೂಲಕ ಜಿಲ್ಲೆಯ ಅಹಿಂದ ವರ್ಗದ ಯಾವುದೇ ಸೂಕ್ತ ನಾಯಕರಿಗೆ ಅವಕಾಶ…

Read More

ವರ್ಷದಿಂದ ಸ್ಥಗಿತಗೊಂಡ ರಸ್ತೆ ಕಾಮಗಾರಿ | ಪರದಾಡುತ್ತಿರುವ ಸಾರ್ವಜನಿಕರು ಚಿಮ್ಮಡ: ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ಪ್ರಾರಂಭಿಸಬೇಕೆಂದು ಈ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.ತಗ್ಗು ದಿನ್ನೆಗಳಿಂದ ಕೂಡಿದ ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ ಹಿನ್ನೆಲೆ ಕಳೆದ ವರ್ಷವೇ ಗುಂಪು ಕಾಮಗಾರಿಯೊಂದಿಗೆ ಸೇರಿಸಿ ಟೆಂಡರ್ ಮಾಡಲಾಗಿತ್ತು. ಗುತ್ತಿಗೆದಾರರು ಕೂಡ ೯೦೦ ಮೀ. ಉದ್ದದ ಈ ರಸ್ತೆಗೆ ದಪ್ಪ ಜಲ್ಲಿ ಸುರಿಯುವ ಮೂಲಕ ಕಾಮಗಾರಿಯನ್ನು ಪ್ರಾರಂಭಿಸಿದ್ದರು, ಆದರೆ ಕಳೆದ ಒಂದು ವರ್ಷದಿಂದ ಯಾವುದೇ ಚಟುವಟಿಕೆ ಇಲ್ಲದೇ ಕಾಮಗಾರಿ ಸ್ಥಗಿತಗೊಂಡಿದ್ದರಿಂದ ಈ ಜಲ್ಲಿ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸುವುದು ದುಸ್ತರವಾಗಿದೆ. ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ಏಕೈಕ ಮಾರ್ಗ ಇದಾಗಿದ್ದರಿಂದ ಕೃಷಿಕರ ಗೋಳು ಹೇಳತೀರದು, ಅಲ್ಲದೇ ಸೀಮಿ ಲಕ್ಕವ್ವದೇವಿ ದೇವಸ್ಥಾನಕ್ಕೆ, ಹಾಗೂ ಪ್ರಾಥಮಿಕ ಶಾಲೆಗೆ ಬರಲು ಈ ಮಾರ್ಗವನ್ನೇ ಅವಲಂಭಿಸಿರುವುದರಿಂದ ಈ ಜಲ್ಲಿ ತುಂಬಿದ…

Read More