Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ಮಕ್ಕಳಲ್ಲಿ ಜ್ಞಾನದ ಶಕ್ತಿ ಹೊರಹೊಮ್ಮಬೇಕಾದರೆ ಪಾಲಕರು ಅದಕ್ಕೆ ಪೂರಕ ವಾತಾವರಣ ಸೃಷ್ಟಿಸಿ ಮಕ್ಕಳ ಜ್ಞಾನಾರ್ಜನೆಗೆ ಒತ್ತು ನೀಡಬೇಕು ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಶ್ರೀ ಜಟ್ಟಿಂಗೇಶ್ವರ ಕೋಚಿಂಗ್ ಕ್ಲಾಸಿಸ್ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಎಸ್ಸೆಸ್ಸೆಲ್ಸಿ -ಪಿಯುಸಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಯುವ ಶಿಕ್ಷಕರ ನಿಸ್ವಾರ್ಥ ಶೈಕ್ಷಣಿಕ ಸೇವೆ ಗ್ರಾಮದ ಪ್ರಗತಿಯ ಸಂಕೇತವಾಗಿದೆ. ಕಠಿಣ ಪರಿಶ್ರಮದಿಂದ ಮಹೋನ್ನತ ಸಾಧನೆ ಮಾಡುವ ಛಲ ವಿದ್ಯಾರ್ಥಿಗಳಲ್ಲಿ ಗಟ್ಟಿಯಾಗಬೇಕು. ಜೀವನದ ಗುರಿ ಸಾಧನೆಗೆ ನಿರಂತರ ಪ್ರಯತ್ನಶೀಲತೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.ಇಂಡಿ ಬಸವೇಶ್ವರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಜಟ್ಟೆಪ್ಪ ಕೋಟಗೊಂಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಜತೆಗೆ ಉತ್ತಮ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಲು ಪೋಷಕರು ಮುಂದಾಗಬೇಕು ಎಂದು ಹೇಳಿದರು.ಎಸ್ಸೆಸ್ಸೆಲ್ಸಿ-ಪಿಯುಸಿ ವಿಭಾಗದ ಸಾಧಕ ವಿದ್ಯಾರ್ಥಿಗಳಾದ ಸಮರ್ಥ ಡಂಗಿ,ಸೌಮ್ಯ ರೂಗಿ, ಜ್ಯೋತಿ ಮಾವಿನಹಳ್ಳಿ, ಪ್ರಿಯಾಂಕ ಗಿಣ್ಣಿ, ಆರತಿ ಪೂಜಾರಿ, ಮಂಜುನಾಥ ಪೂಜಾರಿ,…
ಇಂಡಿ: ತಾಲೂಕಿನ ಬಬಲಾದ ಸಸ್ಯಕ್ಷೇತ್ರದಿಂದ ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ ೪೭ ಸಾವಿರ ಸಸಿಗಳನ್ನು ವಿತರಿಸಲಾಗುವದೆಂದು ವಲಯ ಅರಣ್ಯ ಆಧಿಕಾರಿ ಮಂಜುನಾಥ ಧುಳೆ ತಿಳಿಸಿದ್ದಾರೆ.ಪಟ್ಟಣದ ಸಾಮಾಜಿಕ ಅರಣ್ಯ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು ಜೂ.೩ ರಿಂದ ರೈತರಿಗೆ, ಸಂಘಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ಸಸಿಗಳನ್ನು ವಿತರಿಸಲಾಗುವದು.ಸಸಿಗಳು ೬೯ ಮತ್ತು ೮ ೧೨ ಬ್ಯಾಗ್ ಸೈಜ್ ನಲ್ಲಿ ವಿತರಿಸಲಾಗುವದು. ೬೯ ಬ್ಯಾಗ ಸೈಜ್ ಗೆ ದರ ರೂ ೩ ರೂ ಮತ್ತು ೮೧೨ ಬ್ಯಾಗ ಸೈಜ್ ಗೆ ದರ ರೂ ೬ ರೂ ನಿಗದಿಪಡಿಸಲಾಗಿದೆ ಎಂದರು.ನುಗ್ಗೆ, ಸಾಗವಾನಿ, ಮಹಾಗನಿ, ತಪಸಿ, ಹುಣಸೆ, ಸಸಿಗಳು ೬೯ ಬ್ಯಾಗ ಸೈಜಿನಲ್ಲಿ ಮತ್ತು ಮಹಾಗನಿ, ಸಾಗವಾನಿ, ಹುಣಸೆ, ಬದಾಮ, ಮೆಹಂದಿ, ಶ್ರೀಗಂಧ, ರಕ್ತ ಚಂದನ, ಬಾರೆ, ಪೆರು, ನಿಂಬೆ, ನುಗ್ಗೆ ೮೧೨ ಬ್ಯಾಗ ಸೈಜ್ ನಲ್ಲಿ ದೊರೆಯುತ್ತವೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಹೋರ್ತಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಲ್.ಜಿ.ನಾದ, ಗಸ್ತು ವನಪಾಲಕ ಡಿ.ಎ.ಮುಜಗೊಂಡ, ಇಂಡಿ ಉಪ…
“ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ)- ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ, ಮೊ:9449234142 ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ
ಇಂಡಿ: ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ನೀವು ಮಾಡುವ ರಕ್ತದಾನ ಇನ್ಯಾರದೋ ಜೀವಕ್ಕೆ ವರದಾನ ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ, ನೀವು ಉಡುಗೊರೆಯಾಗಿ ನೀಡಲಿರುವ ರಕ್ತಕ್ಕಾಗಿ ಒಂದು ಅಮೂಲ್ಯ ಜೀವ ಕಾಯುತ್ತಿದೆ ಎಂದು ಆಧ್ಯಾತ್ಮ ಪ್ರವಚನಕಾರ ಮೈತ್ರಾದೇವಿ ಹೇಳಿದರು.ಸೋಮವಾರ ತಾಲೂಕಿನ ಹಿರೇಮಸಳಿ ಗ್ರಾಮದ ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅನ್ನದಾನ, ವಿದ್ಯಾದಾನ, ನೇತ್ರದಾನ ಹಾಗೂ ರಕ್ತದಾನವು ಅತಂತ್ಯ ಶ್ರೇಷ್ಠವಾದ ಕಾರ್ಯಗಳಾಗಿವೆ. ಪ್ರತಿಯೊಬ್ಬರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದ್ಯೆಂದು ಹೇಳಿದರು.ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರ ತಂಡ ಜನರ ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ನೀಡಿದರು. ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ, ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ಆಸ್ಪತ್ರೆಗೆ ಬರುವಂತೆ ತಿಳಿಸಿದರು.ಶಿಬಿರದಲ್ಲಿ ಗ್ರಾಪಂ ಅಧ್ಯಕ್ಷೆ ಕಸ್ತೂರಿಬಾಯಿ ದೊಡಮನಿ, ಗ್ರಾಪಂ ಸದಸ್ಯರಾದ ಶಿವನಗೌಡ ಪಾಟೀಲ, ಮಹಮ್ಮದಲಿ ಗೊಗಿಹಾಳ, ಶ್ರೀಕೃಷ್ಣ ಸುಣಗಾರ, ಬೊಜಪ್ಪ ಚಾಣಕೊಟೆ, ಅಶೋಕ ಮರಡಿ, ರಾಜಕುಮಾರ ಹುಬ್ಬಳ್ಳಿ, ಶಿವಾನಂದ ಕ್ಷತ್ರಿ, ಪ್ರವೀಣ…
ಸಿಂದಗಿ: ಎಲ್ಲೆಡೆ ಸ್ಚಚ್ಚತೆ ಕಾಪಾಡಬೇಕು. ರೋಗಿಗಳಿಗೆ ಸರಕಾರದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ಕಾರಣಕ್ಕೂ ತಾರತಮ್ಯ ಸಲ್ಲದು. ಸಿಬ್ಬಂದಿಯವರು ನಿಯಮಿತವಾಗಿ ಕರ್ತವ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಆಸ್ಪತ್ರೆಯ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಸೂಚಿಸಿದರು.ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಬೇಟಿ ನೀಡಿ ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿನ ಅವಧಿ ಮೀರಿದ ಇಂಜೆಕ್ಷನ್ ಕಂಡು ಸಂಬಂಧಿಸಿದ ಅಧಿಕಾರಿಗಳ ಮೇಲೆ ಲೋಕಾಯುಕ್ತರು ಕೆಂಡಾಮಂಡಲವಾದರು. ಇದನ್ನು ನೀವು ಹೇಗೆ ಇಟ್ಟುಕೊಂಡಿದ್ದೀರಿ ಇರುವ ನಾಲ್ಕು ಬಾಕ್ಸ್ಗಳು ಹಾಗೆ ಇವೇ ಅವುಗಳನ್ನು ನೀವು ಉಪಯೋಗಿಸಲ್ಲ ಎಂದ ಮೇಲೆ ತರಿಸಿಕೊಂಡು ಹಾಳು ಮಾಡಿ ಸರಕಾರಕ್ಕೆ ನಷ್ಟವನ್ನುಂಟು ಮಾಡುವುದೇಕೆ ಎಂದು ಪ್ರಶ್ನೀಸಿದರು.ಮಹಿಳಾ ವಾರ್ಡ್, ಪುರುಷರ ವಾರ್ಡ್, ಐಸಿಯು ಘಟಕ, ಎಆರ್ಟಿ ಕೇಂದ್ರ, ಔಷಧಿ ವಿತರಣಾ ಕೇಂದ್ರ, ತುರ್ತು ಪರಿಸ್ಥಿತಿ ನಿಗಾ ಘಟಕ, ಹೆರಿಗೆ ಘಟಕ, ನವಜಾತ ಶಿಶು ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆ ಮತ್ತು ಸೌಲಭ್ಯಗಳ ಕುರಿತಾಗಿ ಚಿಕಿತ್ಸೆಗೆ…
ವಿಜಯಪುರ: ನಗರದಲ್ಲಿ ನಕಲಿ ಭೂ ದಾಖಲೆ ಸೃಷ್ಠಿಸಿ ಜನರನ್ನು ವಂಚಿಸುತ್ತಿರುವ ಭೂ-ಮಾಫಿಯಾವನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕೆಂದು ಮಾಜಿ ಸಚಿವ ಅಪ್ಪಾಸಾಹೇಬ(ಅಪ್ಪು) ಮ. ಪಟ್ಟಣಶೆಟ್ಟಿ ಆಗ್ರಹಿಸಿದ್ದಾರೆ.ಈ ಕುರಿತು ಮಂಗಳವಾರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಬೇಟಿ ಮಾಡಿ ಮನವಿ ಮಾಡಿದ ಅವರು, ನಗರದಲ್ಲಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡುತ್ತಿರುವ ಅನೇಕ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಬಡಜನರು ನಿತ್ಯ ಶೋಷಣೆಗೊಳಗಾಗುತ್ತಿದ್ದಾರೆ. ಜಮೀನು ಹಾಗೂ ನಿವೇಶನಗಳ ಖೊಟ್ಟಿ ದಾಖಲೆ ಸೃಷ್ಟಿ ಮಾಡಿ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಖರೀದಿ ಹಾಗೂ ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳು ಅವ್ಯಾಹತವಾಗಿ ನಡೆದಿವೆ. ಜನರನ್ನು ವಂಚಿಸುವ ವ್ಯವಸ್ಥಿತ ಜಾಲವೇ ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ಈ ಜಾಲಕ್ಕೆ ಈಗಾಗಲೇ ನೂರಾರು ಜನ ಹಣ-ಆಸ್ತಿ ಕಳೆದುಕೊಂಡಿದ್ದಾರೆ. ಇಂತಹ ವಂಚಕರ ಜಾಲ ವಿಜಯಪುರ ಜಿಲ್ಲೆ ಹಾಗೂ ನಗರದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಸಾಕಷ್ಟು ಬಡ ಜನರು ಈಗಾಗಲೇ ಮೋಸ ಹೋಗಿದ್ದಾರೆ. ಕಷ್ಟಪಟ್ಟು ದುಡಿದು, ಸಾಲ-ಸೋಲ ಮಾಡಿ ನಿವೇಶನ, ಜಮೀನು…
ದೇವರಹಿಪ್ಪರಗಿ: ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ತಹಶೀಲ್ದಾರರು ಉತ್ತಮ ಕಾರ್ಯ ಮಾಡಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಪಾಟೀಲ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ದೇವೂರ ಗ್ರಾಮದ ರಸ್ತೆ ಸಮಸ್ಯೆ ನಿವಾರಿಸಿ ಪರಿಹಾರ ದೊರಕಿಸಿದ ಕಾರಣ ತಹಶೀಲ್ದಾರ ಪ್ರಕಾಶ ಸಿಂದಗಿ ಅವರನ್ನು ಸನ್ಮಾನಿಸಿ ಮಾತನಾಡಿದರು. ಪ್ರತಿಯೊಂದು ಗ್ರಾಮದಲ್ಲಿ ರೈತರು ಜಮೀನುಗಳ ರಸ್ತೆ ವಿಷಯದಲ್ಲಿ ಸಮಸ್ಯೆ ಎದುರಿಸುತ್ತಿದ್ದು, ಕೆಲವರು ಹಲವು ವರ್ಷಗಳಿಂದ ಪೊಲೀಸ್ ಠಾಣೆ, ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದಾರೆ. ಅದಾಗ್ಯೂ ನ್ಯಾಯ ದೊರೆತಿಲ್ಲ. ಆದರೆ ನಮ್ಮ ತಾಲ್ಲೂಕಿನ ತಹಶೀಲ್ದಾರರು ದಿಟ್ಟ ಕ್ರಮ ಕೈಗೊಂಡು ರಸ್ತೆ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಅವರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಎಂದರು.ರೈತಸಂಘದ ಗ್ರಾಮ ಘಟಕದ ಅಧ್ಯಕ್ಷ ಹಣಮಂತ್ರಾಯ ಪಾಟೀಲ, ಸೋಮು ಸಜ್ಜನ, ಶಿವಪುತ್ರಗೌಡ ಪಾಟೀಲ, ಶ್ರೀಮಂತ ರಾಠೋಡ, ಅಮೀನಪ್ಪಗೌಡ ಬಿರಾದಾರ, ಸುರೇಶ ಪವಾರ, ಸಾಹೇಬಗೌಡ ಬಿರಾದಾರ, ಮಂಜುನಾಥ ನಾಯಿಕ, ಮಡಿವಾಳಪ್ಪಗೌಡ ಬಿರಾದಾರ, ತುಕಾರಾಮ…
ದೇವರಹಿಪ್ಪರಗಿ ಕೃಷಿ ಕೇಂದ್ರ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟ ಮಳಿಗೆಗಳಿಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿಲಿಯಂ ರಾಜಶೇಖರ ಭೇಟಿ ದೇವರಹಿಪ್ಪರಗಿ: ಪಟ್ಟಣದ ಕೃಷಿ ಕೇಂದ್ರ ಸೇರಿದಂತೆ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟ ಮಳಿಗೆಗಳಿಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿಲಿಯಂ ರಾಜಶೇಖರ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಮಂಗಳವಾರ ಆಗಮಿಸಿದ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ತಂಡ ಮುಂಗಾರು ಬಿತ್ತನೆಗೆ ಅಗತ್ಯವಾದ ಬೀಜ, ರಸಗೊಬ್ಬರಗಳ ಪರಿಶೀಲನೆ ಕೈಗೊಂಡರು. ನಂತರ ಪಟ್ಟಣದ ವಿವಿಧ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ಮಾರಾಟಗಾರರು ರೈತರಿಗೆ ಉತ್ತಮ ಸಲಹೆಯೊಂದಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಬೇಕು ಹಾಗೂ ಕಡ್ಡಾಯವಾಗಿ ರಶೀದಿ ನೀಡಬೇಕು. ಈ ಸಂದರ್ಭದಲ್ಲಿ ಕೃತಕ ಅಭಾವ ಸೃಷ್ಟಿಸುವುದು, ದರಗಳಲ್ಲಿ ವ್ಯತ್ಯಾಸ ಮಾಡುವಂತ ಚಟುವಟಿಕೆಗಳು ಹಾಗೂ ಮುಖ್ಯವಾಗಿ ದೂರುಗಳು ಕಂಡು ಬಂದಲ್ಲಿ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಜಿಲ್ಲಾ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ, ಜಾರಿದಳದ…
ಬಸವನಬಾಗೇವಾಡಿ: ಈ ವರ್ಷ ಮುಂಗಾರು ಮಳೆ ಉತ್ತಮ ನಿರೀಕ್ಷೆ ಮೂಡಿಸಿದೆ. ಮುಂಗಾರು ಬಿತ್ತನೆಗೆ ಬೇಕಾಗುವ ಎಲ್ಲ ಉತ್ಪನ್ನಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ರೈತ ಬಾಂಧವರು ಮತ್ತೆ ಸಾಲಗಾರರ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಕಳೆದ ವರ್ಷ ಬರಗಾಲದಿಂದ ರೈತ ಬಾಂಧವರು ಮೊದಲೇ ಸಂಕಷ್ಟದಲ್ಲಿದ್ದಾರೆ. ಈ ವರ್ಷ ಬೀಜಗಳ ದರ ಶೇ. ೬೦ ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ರೈತ ಬಾಂಧವರ ಗಾಯದ ಮೇಲೆ ಬರ ಎಳೆದಂತೆ ಮಾಡಿದೆ. ಕೂಡಲೇ ರಾಜ್ಯ ಸರ್ಕಾರ ಬೀಜಗಳ ದರ ಕಡಿಮೆ ಮಾಡಬೇಕೆಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ ಆಗ್ರಹಿಸಿದ್ದಾರೆ.
