Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಹುಟ್ಟು ಹೋರಾಟಗಾರ, ರೈತ ಮುಖಂಡ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಪಕ್ಷದ ವರಿಷ್ಠರು ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಬಂದೇನವಾಜ ವಾಲೀಕಾರ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್.ಕೆ.ಬೆಳ್ಳುಬ್ಬಿ ಅವರು ಕೊರ್ತಿ ಕೊಲ್ಹಾರ ಸೇತುವೆ ನಿರ್ಮಾಣವಾಗುವಲ್ಲಿ ನಿರಂತರವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಜಿಲ್ಲೆಯ ನೀರಾವರಿ ಯೋಜನೆ ಜಾರಿಗೆಗಾಗಿ ಹೋರಾಟ ಮಾಡುವ ಮೂಲಕ ನೀರಾವರಿ ಯೋಜನೆ ಅನುಷ್ಠಾನವಾಗುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ. ಇವರು ತೋಟಗಾರಿಕೆ ಸಚಿವರಾಗಿದ್ದ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಸ್ಥಾಪನೆಯಾಗುವಲ್ಲಿ ಸಹಕಾರ ನೀಡಿದ್ದಾರೆ. ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆ ಸೇರಿದಂತೆ ೧೪ ಲೋಕಸಭಾ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಪಕ್ಷದ ಧೀಮಂತ ನಾಯಕರೆನಿಸಿಕೊಂಡಿರುವ ಇವರಿಗೆ ಪಕ್ಷದ ವರಿಷ್ಠರು ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡುವ ಮೂಲಕ…
ಬಸವನಬಾಗೇವಾಡಿ: ತಾಲೂಕಿನ ಯಂಬತ್ನಾಳ ಗ್ರಾಮದ ಶಿಕ್ಷಕ, ರೈತ ಶಿವಾನಂದ ಮಂಗನಾವರ ಅವರು ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವದನ್ನು ಗಮನಿಸಿ ಬೆಂಗಳೂರಿನ ಪರಿಪೂರ್ಣ ಪ್ರತಿಷ್ಠಾನ, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ೨೦೨೪ ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪರಿಪೂರ್ಣ ಪ್ರತಿಷ್ಠಾನ ಪೌಂಡೇಶನ ಸಂಸ್ಥಾಪಕ ಅಧ್ಯಕ್ಷ ರವಿಕೋಟಿ ಸೂರ್ಯ, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ ಇತರರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.
ಬಸವನಬಾಗೇವಾಡಿ: ಪಟ್ಟಣದ ಮರಗಮ್ಮದೇವಿ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮ ಮಂಗಳವಾರ ಶ್ರದ್ಧಾ-ಭಕ್ತಿ, ಸಂಭ್ರಮದಿಂದ ಜರುಗಿತು.ಜಾತ್ರಾಮಹೋತ್ಸವದಂಗವಾಗಿ ಮರಗಮ್ಮದೇವಿಗೆ ಬೆಳಗ್ಗೆ ವಿಶೇಷ ಪೂಜೆ ಜರುಗಿತು. ಜನರು ಕುಟುಂಬ ಸಮೇತರಾಗಿ ಆಗಮಿಸಿ ದೇವಿ ದರ್ಶನ ಪಡೆದುಕೊಂಡು ಕಾಯಿ-ಕರ್ಪೂರ, ನೇವೈದ್ಯ ಅರ್ಪಿಸಿ ಧನ್ಯತಾಭಾವ ಅನುಭವಿಸಿದರು.ಜಾತ್ರಾಮಹೋತ್ಸವದಂಗವಾಗಿ ಬೆಳಗ್ಗೆ ದೇವಸ್ಥಾನದಿಂದ ಪಲ್ಲಕ್ಕಿ ಹಾಗೂ ದೇವಸ್ಥಾನದ ಕಳಸವು ಬಸವೇಶ್ವರ ದೇವಸ್ಥಾನದ ಬಸವ ತೀರ್ಥ ಬಾವಿಗೆ ವಾದ್ಯಮೇಳದೊಂದಿಗೆ ಗಂಗಾಸ್ಥಳಕ್ಕೆ ತೆರಳಿತು. ಗಂಗಾಸ್ಥಳ ಪೂಜೆ ನಂತರ ಪಲ್ಲಕ್ಕಿ ಉತ್ಸವ ಹಾಗೂ ಕಳಸವು ಅದ್ದೂರಿ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ದೇವಸ್ಥಾನಕ್ಕೆ ಮರಳಿತು. ಮೆರವಣಿಗೆ ದೇವಸ್ಥಾನಕ್ಕೆ ಮರಳಿದ ನಂತರ ಕಳಸಾರೋಹಣ ನೆರವೇರಿಸಿ ಮರಗಮ್ಮದೇವಿಗೆ ಭಕ್ತರ ಸಮ್ಮುಖದಲ್ಲಿ ಉಡಿ ತುಂಬಿ ಉತ್ತಮ ಮಳೆ-ಬೆಳೆಗೆ, ಭಕ್ತರಿಗೆ ಸುಖ-ನೆಮ್ಮದಿ ನೀಡಲೆಂದು ಪ್ರಾರ್ಥನೆ ಸಲ್ಲಿಸಲಾಯಿತು. ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಸುತ್ತಟ್ಟಿಯ ಝಾಂಜಾ ಮೇಳ, ಬಸವನಬಾಗೇವಾಡಿಯ ಡೊಳ್ಳು ಮೇಳ, ಚಿಮ್ಮಲಗಿಯ ಕರಡಿ ಮಜಲು ಸೇರಿದಂತೆ ವಿವಿಧ ಜೋಗಮ್ಮರ ಕುಣಿತ ಮೆರಗು ತಂದಿತ್ತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿದ ಅಡ್ಡೆಯ ಮೇಲೆ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಶ್ಯಾಡ ಗ್ರಾಮದಲ್ಲಿ ನಡೆದಿದೆ.ಹಣಮಂತರಾಯಗೌಡ ಪಾಟೀಲ ಬಂಧಿತ ಆರೋಪಿ. ಇನ್ನು ಅಕ್ರಮವಾಗಿ ಶಿರಶ್ಯಾಡ ಗ್ರಾಮದಲ್ಲಿರುವ ಜಮೀನಿನಲ್ಲಿ ಅಕ್ರಮವಾಗಿ ಶೆಡ್ನಲ್ಲಿ ಪಡಿತರ ಅಕ್ಕಿಯಾದ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿದರು. ಅದಕ್ಕಾಗಿ ಪೊಲೀಸರು ದಾಳಿಗೈದು 1,89,290 ಮೌಲ್ಯದ 8230 ಕೆಜಿ ಅಕ್ಕಿಯನ್ನು ಜಪ್ತಿಗೈದಿದ್ದಾರೆ. ಅಲ್ಲದೇ, ವಾಹನ ಸಮೇತ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಹಾರ ನಿರೀಕ್ಷಿಕ ಪರಮಾನಂದ ಹೂಗಾರ, ಗ್ರಾಮೀಣ ಪೋಲಿಸ್ ಠಾಣಾ ಪಿ ಎಸ್ ಐ ಮಂಜುನಾಥ ಹುಲಕುಂದ, ಎ ಎಸ್ ಐ ಪಿ.ಐ ಅರವತ್ತಿ, ಎಸ್ ಎಚ್ ನರೋಟಿ, ಎಸ್ ವೈ ಜೇರಟಗಿ, ಆರ್ ಗಡೇದ ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಶಿಥಿಲ ಕೊಠಡಿಯಲ್ಲೇ ಮಕ್ಕಳಿಗೆ ವಿದ್ಯಾರ್ಜನೆ | ಮಕ್ಕಳನ್ನು ಶಾಲೆಗೆ ಸೇರಿಸಲು ಪಾಲಕರ ಹಿಂದೇಟು – ಇಲಾಹಿ ಇ. ಜಮಖಂಡಿಚಿಮ್ಮಡ: ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎರಡೂ ಕೋಣೆಗಳ ಛಾವಣಿ ಶಿಥಿಲಗೊಂಡು ಕುಸಿಯುವ ಹಂತದಲ್ಲಿದ್ದರೂ ಮಕ್ಕಳು ಪ್ರತಿದಿನ ಅನಿವಾರ್ಯವಾಗಿ ಇಂತಹ ಕಟ್ಟಡದಲ್ಲಿಯೇ ವಿದ್ಯಾರ್ಜನೆ ಮಾಡುವ ಸ್ಥಿತಿ ನಿರ್ಮಾಣಗೊಂಡಿದ್ದು ಮಕ್ಕಳನ್ನು ಶಾಲೆಗ ಕಳುಹಿಸಲು ಪಾಲಕರು ಹಿಂದೇಟು ಹಾಕುತಿದ್ದಾರೆ.ಸುಮಾರು ಇಪ್ಪತೈದು ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಈ ಕಟ್ಟಡಗಳು ಸಂಪೂರ್ಣ ಶಿಥಿಲಗೊಂಡಿದ್ದು ಗೋಡೆಗಳು ಬಿರುಕುಗೊಂಡಿವೆ, ಪಿಲ್ಲರ್ ಗಳಂತೂ ಸಿಮೆಂಟೆಲ್ಲ ಉದುರಿ ಅಸ್ತಿಪಂಜರದಂತಾಗಿವೆ ಇಂತಹ ಶಾಲೆಗಳಲ್ಲಿ ಮಕ್ಕಳು ವಿದ್ಯಾರ್ಜನೆ ಮಾಡುವುದಾದರೂ ಹೇಗೆ? ಎಂದು ಪಾಲಕರು ಪ್ರಶ್ನಿಸುತಿದ್ದಾರೆ.ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವಾರು ಬಾರಿ ಲಿಖಿತವಾಗಿ, ಮೌಖಿಕವಾಗಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಕೈ ಮುಗಿದು ಒಳಗೆ ಬರಬೇಕಾದಂತಹ ಜ್ಞಾನದೇಗುಲಗಳು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ ದೋರಣೆಯಿಂದ ಜೀವ ಕೈಯ್ಯಲ್ಲಿ ಹಿಡಿದು ಒಳಗೆ ಬರುವ ಸ್ಥಿತಿ ನಿರ್ಮಾಣಗೊಂಡಿದೆ.ವಿಚಿತ್ರವೆಂದರೆ ಈ ಶಿಥಿಲ ಶಾಲಾ ಕಟ್ಟಡಗಳ ಹಿಂಬದಿಯಲ್ಲಿಯೇ ಕಳೆದ…
ವಿಜಯಪುರ: ಸ್ವಾತಂತ್ರ್ಯ ವೀರ ಸಾವರ್ಕರ 141ನೇ ಜಯಂತಿ ಅಂಗವಾಗಿ ಮಂಥನ ವಿಜಯಪುರ ಚಿಂತಕರ ಚಾವಡಿಯ ವತಿಯಿಂದ ವೀರ್ ಸಾವರ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಥನ ಸದಸ್ಯರಾದ ಶ್ರೀಧರ ಪಾರಶೆಟ್ಟಿ, ಬಸವರಾಜ ದಂಡೋತಿ, ಚನ್ನಬಸು ಕೋರಿ, ಶ್ರೀಮತಿ ಮನಿಷಾ ಕುಲಕರ್ಣಿ, ರಘೂತ್ತಮ ಅರ್ಜುಣಗಿ, ಶ್ರೀರಂಗ ಪುರಾಣಿಕ ಇನ್ನಿತರರು ಉಪಸ್ಥಿತರಿದ್ದರು..
ವಿಜಯಪುರ: ಸಮಾಜವನ್ನು ಸಂಸ್ಕಾರಯುತವಾಗಿ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಮಕ್ಕಳಿಗೆ ಎಳೆಯ ಹಂತದಲ್ಲೇ ದೊರೆಯುವ ಶಿಕ್ಷಣ ಗುಣಮಟ್ಟವಾಗಿದ್ದರೆ ನಾಳಿನ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ಆ ಹಂತದಲ್ಲಿ ಆರಂಭಿಕ ಶಿಕ್ಷಣವನ್ನು ಉತ್ತಮ ಶಿಕ್ಷಣವನ್ನು ನೀಡಿ ಭಾರತವನ್ನು ಭವಿಷ್ಯದಲ್ಲಿ ಭದ್ರ ಪಡಿಸಬೇಕಾಗಿದೆ ಎಂದು ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ಅಧ್ಯಕ್ಷ ಸುನಿಲ ಜೈನಾಪುರ ಅವರು ಹೇಳಿದರು.ನಗರದ ಆಲಕುಂಟೆ ಬಡಾವಣೆಯಲ್ಲಿ ಪೀನ್ಯಾಕಲ್ ಕರಿಯರ್ ಬಿಲ್ಡರ್ಸ್ ನಲ್ಲಿ ಜರುಗಿದ ಬೇಸಿಗೆ ಶಿಬಿರ ಮುಕ್ತಾಯ ಹಾಗೂ ನೂತನ ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟನೆ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಎಳೆಯ ವಯಸ್ಸಿನಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಮತ್ತು ಕಲಿಕಾ ಹಾಗೂ ಗ್ರಹಿಕ ಸಾಮರ್ಥ್ಯ ಹೆಚ್ಚಿಸುವಲ್ಲಿ ಶಿಕ್ಷಕ – ಪಾಲಕರ ಜವಾಬ್ದಾರಿ ಗುರುತರವಾಗಿದೆ ಎಂದರು.ಸಾಹಿತಿ ಶಿವಶರಣಪ್ಪ ಶಿರೂರ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದಲ್ಲಿ ದೇಶಪ್ರೇಮದ ಪಠ್ಯಗಳನ್ನು ಹೆಚ್ಚಿಸಬೇಕು ಸದೃಢ ಭಾರತದ ಸದ್ದುದ್ದೇಶದಿಂದ ವಿದ್ಯಾರ್ಥಿಗಳನ್ನು ಅಣೆಗೊಳಿಸಬೇಕು. ಭಾರತೀಯ ಸಂಸ್ಕೃತಿಯ ಆಚಾರ…
ಮುದ್ದೇಬಿಹಾಳ: ರವಿವಾರ ಸಂಜೆ ಪಟ್ಟಣದಲ್ಲಿ ಸದ್ದು ಮಾಡಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎನ್ನುವ ಪ್ರಕರಣ ಭಾರಿ ತಿರುವು ಪಡೆದುಕೊಂಡಿದ್ದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಒಟ್ಟು ಎರಡು ಎಫ್ಆಯ್ಆರ್ಗಳು ದಾಖಲಾಗಿವೆ.ಪ್ರಕರಣ ಹಿಂದೆ ಪ್ರೇಮ ಪಯಣ ಇರೋದಾಗಿ ಗಾಯಾಳುವಿನ ತಂದೆ ರಾಮನಗೌಡ ಸ್ಪಷ್ಟಪಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಚಿತ್ರೀಕರಿಸಿದ ವಿಡಿಯೋ ನೀಡಿರುವ ಅವರು, ನನ್ನ ಮಗ ಮತ್ತು ಮದರಿ ಕುಟುಂಬದ ಐಶ್ವರ್ಯ ಎಂಬ ಹುಡುಗಿ ಇಬ್ಬರೂ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನಾನೇ ಅವರ ತಂದೆಗೆ ಹೇಳಿ ನಿಮ್ಮ ಮಗಳಿಗೆ ಬುದ್ದಿವಾದ ಹೇಳಿ ಎಂದು ಹೇಳಿದ್ದೆ. ಆ ಹುಡುಗಿ ಬಿಡದೇ ಬೇರೆಯವರ ಕಡೆಯಿಂದ ತಮ್ಮ ಮನೆಗೆ ನನ್ನ ಮಗನನ್ನು ಕರೆಸುತ್ತಿದ್ದಳು. ಘಟನೆಯ ದಿನವೂ ಮನೆಯವರೆಲ್ಲರೂ ಹೊಂಚು ಹಾಕಿ ಮದುವೆ ಮಾಡಿಸುವದಾಗಿ ಹೇಳಿ ಮನೆಗೆ ಒಬ್ಬನನ್ನೇ ಕರೆಯಿಸಿ ರಾಡ್ನಿಂದ ಹಲ್ಲೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮುತ್ತಣ್ಣ ಮದರಿ, ಸೀಮಾ ಮದರಿ, ಅಪ್ಪು ಮದರಿ,…
ವಿಜಯಪುರ :ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಜಯಕುಮಾರ ಕುಡಿಗನೂರ ಅವರು ಆಗ್ರಹಿಸಿದರು.ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಬರೆದಿಟ್ಟ ಡೆತ್ ನೋಟ್ನಲ್ಲಿ, ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಾದ ೧೮೭ ಕೋಟಿ ರೂ.ಗಳನ್ನು ಸಚಿವರ ಸೂಚನೆ ಮೇರೆಗೆ ನಕಲಿ ಖಾತೆಗಳಿಗೆ ವರ್ಗಾಯಿಸಿ ಅವ್ಯವಹಾರ ನಡೆಸಲಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ. ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧಿಕಾರಿಗಳು ನಕಲಿ ಖಾತೆಗಳನ್ನು ತೆರೆದು ಈ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಎಲ್ಲರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕಾಂಗ್ರೆಸ್ ಸರಕಾರದ ಭ್ರಸ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಯ ಬೇರೆ ಅಗತ್ಯವಿಲ್ಲ. ಅಂದು ಬಿಜೆಪಿ ಸರಕಾರವಿದ್ದಾಗ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ ವಿಪಕ್ಷ ನಾಯಕ, ಈಗಿನ ಮುಖ್ಯಮಂತ್ರಿ…
ಇಂಡಿ: ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೋಷಕರಿಗೆ ನೀಡುತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.ಶಿಶು ಅಭಿವೃದ್ಧಿ ಯೋಜನೆ ಇಂಡಿಯವರು ಮಕ್ಕಳ ಪೋಷಕರಿಗೆ ಕಳಪೆ ಗುಣಮಟ್ಟದ ಬೆಲ್ಲ, ಖಾರದ ಪುಡಿ, ದವಸ ಧಾನ್ಯಗಳು ನೀಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೇ, ಪಾಕೇಟ್ ಮೇಲಿನ ದಿನಾಂಕ ಅಳಿಸಿಹಾಕಿ ಡೆಟ್ ಬಾರ್ ಆಗಿರುವ ಪದಾರ್ಥಗಳನ್ನು ನೀಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
