Author: editor.udayarashmi@gmail.com

ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ – ಪುಣೆ *ಉದಯರಶ್ಮಿ ದಿನಪತ್ರಿಕೆ ಶರಣ ಧರ್ಮ ಉದ್ಧಾರಕರ ಪರಂಪರೆಯಲ್ಲಿ ಶ್ರೀ ಸರ್ಪಭೂಷಣ ಶಿವಯೋಗಿಗಳು ಒಬ್ಬರು.ಕನ್ನಡ ನಾಡಿನಲ್ಲಿ ಹದಿನೆಂಟನೆ ಶತಮಾನವು ಆಧ್ಯಾತ್ಮಿಕವಾಗಿ ಅವನತಿಯನ್ನು ಹೊಂದಿತ್ತು . ಯುದ್ಧಕಾಲದ ತಂತ್ರ ,ಮೋಸ, ಪಿತೂರಿಗಳಿಂದ ನೀತಿಧರ್ಮಗಳು ಶಿಥಿಲವಾಗಿ ಜನಜೀವನದಲ್ಲಿ ಕಷ್ಟ ನಷ್ಟಗಳನ್ನುಂಟು ಮಾಡಿದ್ಧವು. ಇಂತಹ ಪರಿಸ್ಥಿತಿಯಲ್ಲಿ ಧರ್ಮವನ್ನೂ, ಶಾಂತಿಯನ್ನೂ ಸ್ಥಾಪಿಸಿ, ಜನತೆಗೆ ದಾರಿತೋರಲು ಜನ್ಮತಾಳಿದ ಮಹಾಪುರುಷರೇ ಸರ್ವಭೂಷಣ ಶಿವಯೋಗಿಗಳುಬಾಲ್ಯಶ್ರೀ ಸರ್ಪಭೂಷಣ ಶಿವಯೋಗಿಗಳು ಬೆಂಗಳೂರು ನಗರದ ಸಮೀಪದಲ್ಲಿರುವ ಚಿಕ್ಕಬಾಣಾವರ ಎಂಬ ಗ್ರಾಮದಲ್ಲಿ ಲಿಂಗಾಯತ ಬಣಜಿಗ ಮತಸ್ಥರಾದ ಮಲ್ಲಿಕಾರ್ಜುನಪ್ಪ ಮತ್ತು ಚೆನ್ನಮ್ಮ ಎಂಬ ದಂಪತಿಗಳಿದ್ದರು. ಇವರು ವೃತ್ತಿಯಲ್ಲಿ ವ್ಯಾಪಾರಿಗಳು. ಚಿಕ್ಕಬಾಣಾವರದಲ್ಲಿ ವ್ಯಾಪಾರಕ್ಕೆ ಸಾಕಾದಷ್ಟು ಅವಕಾಶವಿಲ್ಲದ್ದರಿಂದ ಬೆಂಗಳೂರಿಗೆ ಅರಸಿ ಬಂದು ನೆಲೆಸಿ, ಮಾಮೂಲಪೇಟೆಯಲ್ಲಿ ಒಂದು ಅಡಿಕೆ ಅಂಗಡಿಯನ್ನು ಪ್ರಾರಂಭಿಸಿದರು. ಇವರಿಗೆ ಐದು ಜನ ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣುಮಗಳು. ಗಂಡು ಮಕ್ಕಳಲ್ಲಿ ಕೊನೆಯವರೇ ಸರ್ಪಭೂಷಣ ಶಿವಯೋಗಿ, ಇವರು ಕ್ರಿ.ಶ.1795 ರಲ್ಲಿ ಜನಿಸಿದರು. ಮಗುವಿಗೆ ಸಪ್ಪಣ್ಣನೆಂದು ನಾಮಕರಣ ಮಾಡಿದರು. ಎಳೆಗೂಸಿಗೆ ಸರ್ಪಭೂಷಣ ಎಂದು…

Read More

ವಿಜಯಪುರದ ತನು ಫೌಂಡೇಶನ್ ಗೆ ಈಗ ದಶಮಾನೋತ್ಸವ ಸಂಭ್ರಮ | ’ಅಂತರಾಗ್ನಿ’ ಕೃತಿ ಲೋಕಾರ್ಪಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ ವರ್ಷಗಳಿಂದ ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿರುವ ವಿಜಯಪುರದ “ತನು ಫೌಂಡೇಶನ್” ದಶಮಾನೋತ್ಸವ ಸಂಭ್ರಮದತ್ತ ಹೆಜ್ಜೆಯಿಟ್ಟಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಾಧಕರಿಗೆ “ತನು ಕನ್ನಡ ಮನ ಕನ್ನಡ” ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ನವೆಂಬರ್ 23 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾಯಂಕಾಲ 5:00 ಗಂಟೆಗೆ ಜರುಗಲಿದೆ.ಕಾರ್ಯಕ್ರಮವನ್ನು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಯಶೋಧ ಆಸ್ಪತ್ರೆಯ ಸಿಇಓ ಡಾ|| ರವೀಂದ್ರ ತೋಟದ ವಹಿಸಲಿದ್ದು, ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಾದ ಡಾ|| ಪ್ರಭುಗೌಡ ಬಿ ಎಲ್ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಉಪವಿಭಾಗಾಧಿಕಾರಿ ಬಸವರಾಜ ಯಲಿಗಾರ, ಹೋಟೆಲ್ ಉದ್ಯಮಿ ಶಾಂತೇಶ್ ಕಳಸಗೊಂಡ, ದ್ರೋಣ ಅಕಾಡೆಮಿ ಅಧ್ಯಕ್ಷರಾದ ಕಲ್ಮೇಶ್ ಆಸಂಗಿ, ಹಿರಿಯ ವೈದ್ಯರಾದ ಡಾ|| ಸನ್ಮತಿ…

Read More

ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಕಡಿವಾಣ ಹಾಗೂ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಕಾಲೇಜಿನಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಘಟಕ ಸ್ಥಾಪಿಸಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು. ಜಿಲ್ಲೆಯ ಎಲ್ಲ ಶಾಲಾ-ಕಾಲೇಜ್‌ಗಳಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಘಟಕ ಸ್ಥಾಪನೆ ಮಾಡಿ, ಘಟಕಗಳ ಮೂಲಕ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಎಲ್ಲ ಪ್ರೌಢಶಾಲಾ, ಪದವಿಪೂರ್ವ, ಪದವಿ ಕಾಲೇಜ್ ಪ್ರಾಂಶುಪಾಲ, ಮುಖ್ಯೋಪಾಧ್ಯಾಯ ಹಾಗೂ ವಸತಿ ನಿಲಯಗಳ ವಾರ್ಡನ್‌ಗಳಿಗೆ ಡಿಸೆಂಬರ್ ಮೊದಲನೇ ವಾರದಲ್ಲಿ ನಗರದ…

Read More

’ಉದಯರಶ್ಮಿ’ ದಿನಪತ್ರಿಕೆ ಸಂಪಾದಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಿಂದಗಿ ನಗರದ ಸಮಾಜಸೇವಕ ಹಾಗೂ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಿ) ಅವರು ನೊಂದವರ ಕಣ್ಣೀರು ಒರೆಸಲು ಸದಾ ಮುಂಚೂಣಿಯಲ್ಲಿರುವವರು. ರಾಜಕೀಯ ರಂಗದಲ್ಲಿ ಇಂತಹ ವ್ಯಕ್ತಿತ್ವದವರು ಅಪರೂಪ ಎಂದು ’ಉದಯರಶ್ಮಿ’ ದಿನಪತ್ರಿಕೆ ಸಂಪಾದಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘಿಸಿದರು.ನಗರದ ತಮ್ಮ ಸ್ವಗ್ರಹ ’ರಮ್ಯರಶ್ಮಿ’ ವಿಲ್ಲಾದಲ್ಲಿ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಿ) ಅವರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದ ಶ್ರೀಶೈಲಗೌಡ ಅವರನ್ನು ಹತ್ತಿರದಿಂದ ಕಂಡಿರುವ ನನಗೆ ಅವರ ವ್ಯಕ್ತಿತ್ವದ ಪರಿಚಯವಿದೆ. ಯಾರನ್ನೂ ನೋಯಿಸದ ಇವರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರವಾಗಿದೆ. ಕಲುಷಿತಗೊಂಡಿರುವ ಇಂದಿನ ರಾಜಕೀಯ ವ್ಯವಸ್ಥೆ ಬದಲಾಗಲು ಈ ರಂಗದಲ್ಲಿ ಇಂಥವರ ಸಂಖ್ಯೆ ವೃದ್ಧಿಸಬೇಕು ಎಂದು ಇಂದುಶೇಖರ ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮತ್ತು…

Read More

ಕರ್ನಾಟಕ ಬಾಲ ವಿಕಾಸ ಅಕಾಡೆಮಿ & ಮಕ್ಕಳ ಅಕಾಡೆಮಿಯ “ಮಕ್ಕಳ ರಜತ ರಂಗೋತ್ಸವ” ಉದ್ಘಾಟಿಸಿದ ಮಕ್ಕಳ ತಜ್ಞ ಡಾ.ರಾಜನ್ ದೇಶಪಾಂಡೆ ಅಭಿಮತ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಮಕ್ಕಳ ಸೃಜನಶೀಲ ವ್ಯಕ್ತಿತ್ವ ರೂಪಿಸುವಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಪಾತ್ರ ಅನನ್ಯವಾಗಿದ್ದು ಅಕಾಡೆಮಿಯ ಅಧ್ಯಕ್ಷರಾಗಿರುವ ಸಂಗಮೇಶ ಬಬಲೇಶ್ವರ ಅವರು, ವಿಶೇಷ ಮತ್ತು ವಿಭಿನ್ನ ಕಾರ್ಯ ಚಟುವಟಿಕೆಗಳ ಮೂಲಕ ನಾಡಿನ ಮಕ್ಕಳನ್ನು ತಲುಪುತ್ತಿರುವುದು ಅತ್ಯಂತ ಅಭಿಮಾನದ ಸಂಗತಿ ಎಂದು ನಾಡಿನ ಖ್ಯಾತ ಮಕ್ಕಳ ತಜ್ಞ ಡಾ. ರಾಜನ್ ದೇಶಪಾಂಡೆ ಹೇಳಿದರು.ಅವರು ನಗರದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಸಭಾಭವನದಲ್ಲಿ ನಡೆದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಹಾಗೂ ಮಕ್ಕಳ ಅಕಾಡೆಮಿ ಸಹಯೋಗದಲ್ಲಿ ನಡೆದ ಮಕ್ಕಳ ರಜತ ರಂಗೋತ್ಸವ 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಈ ನಾಡಿನ ಮಕ್ಕಳ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ. ರಾಜನ್ ದೇಶಪಾಂಡೆ ಸರ್ ಅವರ ನೇತೃತ್ವದ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿಯಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಕ್ಕಳಿಗೆ ತಲೆನೋವು ಹೆಚ್ಚಾಗಿದೆ. ನಿರಂತರವಾಗಿ ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಳ್ಳುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನ.07 ರಂದು ಸುಪ್ರೀಂ ಕೋರ್ಟ್ ಆದೇಶದಂತೆ ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಚಡಚಣ ಪಟ್ಟಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೀದಿ ನಾಯಿಗಳನ್ನು ನಿಯಂತ್ರಿಸುವ ವಿಶೇಷ ಕಾರ್ಯಾಚರಣೆ ಬುಧವಾರದಿಂದ ಆರಂಭಿಸಲಾಗಿದೆ.ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿಯೂ ಬೀದಿ ನಾಯಿಗಳನ್ನು ಹಿಡಿದು, ಅವುಗಳಿಗೆ ಹುಚ್ಚುನಾಯಿ (ರೇಬಿಸ್) ರೋಗ ಪ್ರತಿಬಂಧಕ,ನಿರೋಧಕ ಲಸಿಕೆ(ಆಂಟಿ ರಾಬಿಸ್ ವ್ಯಾಕ್ಸಿನ್)ನೀಡಲಾಗುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಹೆಣ್ಣು ನಾಯಿಗಳಿಗೆ ಸಂತಾನ ಹರಣ (ಸ್ಟೆರಿಲೈಜೇಶನ್) ಪ್ರಕ್ರಿಯೆಯನ್ನೂ ಕೈಗೊಳ್ಳಲಾಗುತ್ತದೆ. ಸರ್ಕಾರ ನಿರ್ದೇಶಿಸಿದಂತೆ ಈ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ ಗ್ರಾಮ-ಹಳ್ಳಿಗಳಲ್ಲಿಯೂ ಬೀದಿ ನಾಯಿಗಳನ್ನು ಹಿಡಿದು ಆಂಟಿ ರಾಬಿಸ್ ವ್ಯಾಕ್ಸಿನ್ ಹಾಕಲಾಗುತ್ತದೆ ಎಂದು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಎಸ್.ಗಂಗನಳ್ಳಿ ಹೇಳಿದರು.ಬೀದಿ ನಾಯಿಗಳ ದಾಳಿಯಿಂದ ಮಕ್ಕಳಿಗೆ ಗಂಭೀರ ಗಾಯವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಮುಸ್ಸಂಜೆ ತಿಕೋಟಾ ತಾಲೂಕಿನ‌ ಸೋಮದೇವರಹಟ್ಟಿ ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿ.ಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಿಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ ರೂ.20 ಲಕ್ಷ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ, ದೇವಸ್ಥಾನದ ಸಮೀಪ ಪಿ.ಆರ್.ಇ.ಡಿ ನಿಧಿಯಲ್ಲಿ ರೂ.11 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೊಜನೆಗೆ ಚಾಲನೆ ಹಾಗೂ ರೂ. 5 ಲಕ್ಷ ವೆಚ್ಚದ ಹೈಮಾಸ್ಕ್ ದೀಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ದೇವಸ್ಥಾನದ ಜಗನು ಮಹಾರಾಜರು ಸೋಮದೇವರಹಟ್ಟಿ ತಾಂಡಾದಲ್ಲಿರುವ…

Read More

39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಉದ್ಗಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಹಾನುಭೂತಿ ಒಗ್ಗೂಡಿ ಸಾಗಬೇಕು ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ ಡಾ. ಬಿದರಿಯವರ ಅಶ್ವಿನಿ ಇನಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಉದ್ಗಾಟಿಸಿ ಅವರು ಮಾತನಾಡಿದರು.ಪ್ರತಿ ಮಗುವಿಗೆ ಜ್ಞಾನ, ನಾವೀನ್ಯತೆ ಮತ್ತು ಆರೈಕೆ ಈ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಹವ್ಯಾಸಗಳು ನಮ್ಮ ಬದುಕನ್ನು ರೂಪಿಸುತ್ತವೆ. ಮಕ್ಕಳ ಬಾಲ್ಯಾವಸ್ಥೆ ಅವರ ಬದುಕಿಗೆ ಅತ್ಯವಶ್ಯಕವಾದ ಮೂಲಭೂತ ಬುನಾದಿಯನ್ನು ಹಾಕಿದರೆ ಪ್ರೌಢಾವಸ್ಥೆಯಲ್ಲಿ ಅವುಗಳನ್ನು ಪರಿಪಾಲಿಸುವುದು ಸರಳವಾಗುತ್ತದೆ.ನಾವು ಚಿಕ್ಕಂದಿನಲ್ಲಿ ಮಕ್ಕಳಿಗೆ ನಿತ್ಯವಿಧಿಗಳನ್ನು ಸರಿಯಾದ ಕ್ರಮದಲ್ಲಿ ಅನುಸರಿಸಲು ಅಭ್ಯಾಸ ಮಾಡಿಸಬೇಕು ಎಂಬುದನ್ನು ಈ ಹಿಂದಿನ ಸಂಚಿಕೆಯಲ್ಲಿ ಅರಿತಿದ್ದೇವೆ. ಹಾಗೆ ಮಕ್ಕಳಲ್ಲಿ ನಿತ್ಯ ಕರ್ಮಗಳನ್ನು, ಒಳ್ಳೆಯ ಆಹಾರದ ಅಭ್ಯಾಸಗಳನ್ನು ಚಿಕ್ಕಂದಿನಲ್ಲಿಯೇ ಅವರ ಜೀವನದ ಭಾಗವಾಗಿ ರೂಢಿಸಬೇಕು. ಆಹಾರದ ರುಚಿ, ಸತ್ವ, ಹಣ್ಣು ತರಕಾರಿಗಳ ಸೇವನೆಯಿಂದಾಗುವ ಪ್ರಯೋಜನಗಳು ನಾರಿನ ಪದಾರ್ಥಗಳ, ದ್ವಿದಳ ಧಾನ್ಯಗಳ ಕುರಿತ ಜ್ಞಾನವನ್ನು ಪಾಲಕರಾದವರು ಪ್ರತಿದಿನ ಮಾಹಿತಿಯ ರೂಪದಲ್ಲಿ ಮಕ್ಕಳೊಂದಿಗೆ ಹಂಚಿಕೊಳ್ಳಬೇಕು.ಮಕ್ಕಳು ಆಟ ಪಾಠಗಳಲ್ಲಿ ಭಾಗಿಯಾಗಬೇಕು. ಆಟಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಹೊಂದಾಣಿಕೆ, ಅಭಿಮಾನ ಮತ್ತು ಆತ್ಮಸ್ಥೈರ್ಯಗಳನ್ನು ಬೆಳೆಸುತ್ತವೆ. ಮಕ್ಕಳು ಸರಿಯಾದ ಸಮಯಕ್ಕೆ ನಿದ್ರೆ ಮಾಡಲು ಕೂಡ ರೂಢಿಸಬೇಕು. ನಿಯಮಿತವಾದ ಆಹಾರ ಸೇವನೆ, ಒಳ್ಳೆಯ ನಿದ್ರೆ, ಆಟೋಟಗಳು ಮತ್ತು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡರೆ ಒಳ್ಳೆಯ ಜೀವನವನ್ನು ಸಾಗಿಸಲು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲಶಕ್ತಿ ಅಭಿಯಾನದ “ಜಲ ಸಂಚಯ–ಜನ ಭಾಗಿದಾರಿ” ವಿಶೇಷ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಭಾರತ ಸರಕಾರದಿಂದ ನೀಡುವ ರಾಷ್ಟ್ರೀಯ ಪುರಸ್ಕಾರ ವಿಜಯಪುರ ಜಿಲ್ಲೆಗೆ ದೊರಕಿರುವುದು ಸಂತಸ ತಂದಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ 11 ಸಾವಿರಕ್ಕೂ ಹೆಚ್ಚು ಚಿಕ್ಕ-ಚಿಕ್ಕ ಚೆಕ್ ಡ್ಯಾಂ, ಬಾಂದಾರಗಳ ನಿರ್ಮಾಣದಿಂದ ಮಳೆ ನೀರು ಇಂಗಿ ಅಂತರ್ ಜಲ ವೃದ್ಧಿಗೆ ಕಾರಣವಾಗಿದೆ. ಇದನ್ನು ಮನಗೊಂಡು ಭಾರತ ಸರ್ಕಾರದಿಂದ ಕೊಡಮಾಡುವ “ಜಲ್ ಸಂಚಯ-ಜನ ಭಾಗಿದಾರಿ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದಕ್ಕೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆನಂದ ಕೆ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ವಿಜಯಪುರ ಮಹಾನಗರ ಆಯುಕ್ತ ವಿಜಯ ಮೆಕ್ಕಳಕಿ ಉಪಸ್ಥಿತರಿದ್ದರು.

Read More