Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ ಪಟ್ಟಣದ ಹಂಜಗಿ ರಸ್ತೆಯಲ್ಲಿರುವಚಂದ್ರಶೇಖರ್ ಸಾಲೋಟಗಿ ಎಂಬುವವರಿಗೆ ಸೇರಿದ ಜಮೀನಿನಲ್ಲಿರೋ 300 ಲಿಂಬೆ ಗಿಡಗಳು ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಲಿಂಬೆ ನಾಡಿನ ಪ್ರದೇಶ ಮೊದಲೇ ಬರಗಾಲದಿಂದ ತತ್ತರಿಸಿದೆ. ಹಾಗೂ ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಹಾಹಾಕಾರವಿದೆ. ಇಂತಹ ಸಂದರ್ಭದಲ್ಲಿ ಲಿಂಬೆ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರು ಹಾಕಿ ಬೆಳೆಸಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲಾಗಿವೆ. ಅದಲ್ಲದೇಜೀವನಕ್ಕೆ ಆಧಾರವಾಗಿದ್ದ ಲಿಂಬೆ ಗಿಡಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದು, ಈ ಸದ್ಯ ರೈತ ಗುರುಶಾಂತ ಚಂದ್ರಶೇಖರ್ ಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ, ರಾಜಕೀಯ ಮುಖಂಡ ಕಾಸುಗೌಡ ಬಿರಾದಾರ, ಅಶೋಕಗೌಡ ಬಿರಾದಾರ, ಸೋಮು ನಿಂಬರಗಿಮಠ, ಬಾಪುಗೌಡ ಬಿರಾದಾರ, ತಿಪ್ಪಣ್ಣ ಉಟಗಿ, ಸೇರಿದಂತೆ ಹಲವರು ಭೇಟಿ ನೀಡಿ ರೈತನಿಗೆ ಸ್ವಾಂತನ ಹೇಳಿದ್ದಾರೆ.
ಮುದ್ದೇಬಿಹಾಳ: ಪಟ್ಟಣದ ಶಾಂತೇಶ್ವರ ಶಿಕ್ಷಣ ಸಂಸ್ಥೆಯ ಶಾರದಾ ವಿದ್ಯಾ ಮಂದಿರದಲ್ಲಿಮೇ೨೯ ರಂದು ಸಂಜೆ ೫ಗಂಟೆಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಕಾಮರಾಜ ಬಿರಾದಾರ ತಿಳಿಸಿದರು.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕರಾದ ದಿ.ಭೋಜರಾಜ ಬಿರಾದಾರ ಅವರ ಸ್ಮರಣಾರ್ಥ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಂಡವರಿಗೆ ಪುರಸ್ಕರಿಸಲಾಗುತ್ತಿದೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಾಹಾಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ವಹಿಸಲಿದ್ದು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಅಶೋಕ ಬಿರಾದಾರ ಮತ್ತು ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಭಾಜಪಾ ಮುಖಂಡ ಎಂ.ಎಸ್.ಪಾಟೀಲ, ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರಣ್ಣ…
ಸಿಂದಗಿ: ಜಿಲ್ಲೆಯಲ್ಲಿ ಅಹಿಂದ ಮತಗಳನ್ನೂ ಒಟ್ಟುಗೂಡಿಸಿ ಅಹಿಂದ ಸಂಘಟನೆಯನ್ನು ತಳಮಟ್ಟದಿಂದ ಸಂಘಟಿಸಿ ಅಹಿಂದ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ಕೆಪಿಸಿಸಿ ವಕ್ತಾರ ಎಸ್.ಎಮ್.ಪಾಟೀಲ್ ಗಣಿಹಾರ ಇವರಿಗೆ ವಿಧಾನ ಪರಿಷತ್ ಸ್ಥಾನ ನೀಡಿ ಅವರ ಪಕ್ಷ ನಿಷ್ಠೆ ಹಾಗೂ ಅವರು ಪಕ್ಷಕ್ಕಾಗಿ ಶ್ರಮಿಸಿದ್ದನ್ನು ಗಮನಿಸಿ ಅವರಿಗೆ ಸ್ಥಾನ ಕೋಡಬೇಕು. ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರ ಗೆಲುವಿನಲ್ಲಿ ಇವರ ಪಾತ್ರ ಮುಖ್ಯವಾಗಿದೆ. ಜೊತೆಗೆ ಲೋಕಸಭೆ ಚುನಾವಣೆಯಲ್ಲಿಯೂ ಸಹ ಬಾಗಲಕೋಟೆ ಹಾಗೂ ವಿಜಯಪುರ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ ನಿಷ್ಠಾವಂತರಾಗಿ ಕಾರ್ಯ ಮಾಡಿರುತ್ತಾರೆ. ಅನೇಕ ಬಾರಿ ಪಕ್ಷದಿಂದ ಅಧಿಕಾರ ವಂಚಿತರಾದ ಮೇಲು ಪಕ್ಷದ ಮೇಲಿನ ನಿಷ್ಠೆ ಕಡಿಮೆ ಮಾಡದೇ ಪಕ್ಷದ ಪರ ದುಡಿದಿರುವ ಯಾರಾದರೂ ವ್ಯಕ್ತಿ ಇದ್ದರೇ ಅದು ಎಸ್.ಎಮ್.ಪಾಟೀಲ್ ಗಣಿಹಾರ ಅವರು ಹಾಗಾಗಿ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಡಬೇಕು ಎಂದು ಸಿಎಂ, ಡಿಸಿಎಂ, ಜಿಲ್ಲೆಯ ಸಚಿವರು, ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಲ್ಲಿ ಸಿಂದಗಿ ನ್ಯಾಯಬೆಲೆ ಅಂಗಡಿಕಾರರ ತಾಲೂಕಾಧ್ಯಕ್ಷ ಅಸ್ಲಾಂ ಗೋಟ್ಯಾಳ ಹೆಸರು…
ಸಿಂದಗಿ: ತಾಲೂಕಿನ ಮೋರಟಗಿ ಗ್ರಾಮದ ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರ ಕೈಗಾರಿಕ ತರಬೇತಿ ಕೇಂದ್ರದಲ್ಲಿ ಮೇ.೨೫ ಬುದುವಾರದಂದು ತೊಯೇಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿ. ವತಿಯಿಂದ ಅಪ್ರೆಂಟಿಸ್ ಶಿಪ್ ತರಬೇತಿ ಹಮ್ಮಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಸ್.ಬಿ.ಮಗಿ, ೯೯೪೫೪೭೭೫೨೦, ಈರಯ್ಯ ಗಣಾಚಾರಿ ೯೮೮೦೨೫೧೦೮೩ ಅವರನ್ನು ಸಂಪರ್ಕಿಸಿಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಇಂಡಿ: ಭಾನುವಾರ ಸಾಯಂಕಾಲ ಸುಮಾರಿಗೆ ಸುರಿದ ಅಕಾಲಿಕ ಗಾಳಿ ಮಳೆಗೆ ತಾಲೂಕಿನ ಲಾಳಸಂಗಿ, ಖೇಡಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಗ್ರಾಮದ ಸರ್ವೆ ನಂಬರ್ ೩೨೨ ರಲ್ಲಿ ಒಂದು ಎಕರೆ ನಿಂಬೆ ಹಾಗೂ ಒಂದುವರೆ ಎಕರೆ ಬಾಳೆ ಬೆಳೆ ಸೇರಿದಂತೆ ಮಾವಿನ ಮರಗಳು ನೆಲಕ್ಕುರುಳಿವೆ.ಚನ್ನಗೊಂಡ ವಿಠೋಬಾ ಶಿರಶ್ಯಾಡ ಎಂಬ ರೈತನ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ.ಸಾಯಂಕಾಲ ಸುಮಾರಿಗೆ ಏಕಾಏಕಿ ಬಿರುಗಾಳಿ ಪ್ರಾರಂಭವಾಗಿದ್ದು, ಜಮೀನಿನಲ್ಲಿನ ನಿಂಬೆ ಹಾಗೂ ಬಾಳೆ ಗಿಡಗಳು ಬಿರುಗಾಳಿಗೆ ನೆಲಕ್ಕೆ ಉರುಳಿದ್ದು, ರೈತನ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ರೈತ ನಿಂಬೆ ಬೆಳೆಯನ್ನು ೧೫ ವರ್ಷಗಳ ಹಿಂದೆ ನಾಟಿ ಮಾಡಿದ್ದ ಎಂದು ತಿಳಿದುಬಂದಿದೆ. ಬಾಳೆ ಗಿಡಗಳು ಸಹ ಫಸಲಿಗೆ ಬರುವ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದ್ದು ರೈತ ಚಿಂತಾಕ್ರಾಂತನಾಗಿದ್ದಾನೆ.ಸರಕಾರ ರೈತನ ಬಗ್ಗೆ ಕಾಳಜಿ ತೋರಿ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.
ವಿಜಯಪುರ: ಬದಾಮಿ ರೈಲು ನಿಲ್ದಾಣದ ವೇದಿಕೆ ನಂ ೦೨ ರ ರೈಲು ಹಳಿಯಲ್ಲಿ ಕಿ ಮೀ ನಂ ೬೬/೮೦೦-೯೦೦ ರಲ್ಲಿ ಒಬ್ಬ ಅಪರಿಚಿತ ಗಂಡಸು ವಯ ಸುಮಾರು ೬೫ ವರ್ಷದವನ ಅಪರಿಚಿತ ಶವ ರೈಲ್ವೇ ಪೊಲೀಸ್ ಇಲಾಖೆಯವರಿಗೆ ಪತ್ತೆಯಾಗಿದೆ.೦೫ ಅಡಿ ೦೭ ಇಂಚು ಎತ್ತರ, ಸಾಧಗಪ್ಪು ಮೈಬಣ್ಣ. ತೆಳ್ಳನೆಯ ಮೈಕಟ್ಟು, ಕೊಲು ಮುಖ. ನೇರವಾದ ಮೂಗು, ತಲೆಯಲ್ಲಿ ಚಿಕ್ಕ ಚಿಕ್ಕ ಬಿಳಿ ಕೂದಲು, ಬಿಳಿ ಬಣ್ಣದ ಶೇವ್ ಮಾಡಿದ ದಾಡಿ, ಮೀಸೆ, ವುಳ್ಳವನಾಗಿರುತ್ತಾನೆ. ಕಿವಿಯ ಆಲೆಗಳು ತೂತು ಇರುತ್ತವೆ. ಒಂದು ಬಿಳಿ ಬಣ್ಣದ ತುಂಬು ತೊಳಿನ ಅಂಗಿ, ಒಂದು ಬಿಳಿ ಬಣ್ಣದ ಬನಿಯನ್, ಒಂದು ಬಿಳಿ ಬಣ್ಣದ ದೊತರ, ಒಂದು ಕೇಸರಿ ದಾರದ ಉಡದಾರ, ಒಂದು ಜೋತೆ ಕೇಂಪು ಬಣ್ಣದ ಹವಾಯಿ ಚಪ್ಪಲಿಗಳು ಇದ್ದು. ಇವುಗಳ ಹೋರತಾಗಿ ಮೃತನ ಮೈಮೇಲೆ ಯಾವುದೇ ಬೆಲೆ ಬಾಳುವ ವಸ್ತುಗಳು, ನಗ ನಾಣ್ಯ ಹಾಗೂ ಗುರುತಿನ ಚೀಟಿ ಪತ್ತೆಯಾಗಿರುವುದಿಲ್ಲ.ಈ ಮೇಲೆ ನಮೂದ ಮಾಡಿದ ಅಪರಿಚಿತ ಗಂಡಸಿ…
ವಿಜಯಪುರ: ೧೧೦ ಕೆವಿ ಇಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೦ ಎಂವಿ ಪರಿವರ್ತಕಗಳ ಮಧ್ಯ ತಡೆಗೋಡೆ ಕಾಮಗಾರಿ ನಿರ್ಮಾಣ ಕೈಗೊಂಡಿರುವುದರಿಂದ ಮೇ.೨೮ರಂದು ಬೆಳಗ್ಗೆ ೬ ಗಂಟೆಯಿಂದ ಬೆಳಗ್ಗೆ ೧೧ ಗಂಟೆಯವರೆಗೆ ೩೩ಕೆವಿ ನಾದ, ೩೩ ಕೆವಿ ತಡವಲಗಾ, ೩೩ಕೆವಿ ತಾಂಬಾ, ೧೧ ಕೆವಿ ಅಂಜುಟಗಿ ಎನ್ಜಿವಾಯ್, ೧೧ ಕೆವಿ ತಡವಲಗಾ, ೧೧ ಕೆವಿ ಇಂಡಿ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಆದ ಕಾರಣ ಸಾರ್ವಜನಿಕರು ನಾಗರಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೧೧೦ ಕೆವಿ ದೇವರ ಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ ಜೋಡಿ ಮಾರ್ಗಗಳಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ೧೧ ಕೆವಿ ಯಂಕಂಚಿ ಎನ್ಜಿವಾಯ್, ೧೧ ಕೆವಿ ಯರಗಲ್ ಎನ್ಜಿವಾಐ, ೧೧ ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ ಮೇ.೨೯ ಎಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಆದ ಕಾರಣ ಸಾರ್ವಜನಿಕರು ನಾಗರಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೧೧೦ ಕೆವಿ ಮೋರಟಗಿ ಉಪಕೇಂದ್ರದಲ್ಲಿ ೧೧ ಕೆವಿ ಬ್ಯಾಂಕ್ ಹಾಗೂ ಅದರ ೧೧ ಕೆವಿ ಬ್ರೇಕರ್ ಬದಲಾಯಿಸುವ ಕಾಮಗಾರಿ ಕೈಗೊಂಡಿರುವುದರಿಂದ ಮೇ.೨೮ ರಿಂದ ಮೇ.೩೦ರ ವರಗೆ ಬೆಳಗ್ಗೆ ೧೧ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಈ ಕೆಳಕಂಡ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.೧೧ ಕೆವಿ ಯರಗಲ್ ಐಪಿ, ೧೧ ಕೆವಿ ಗಬಸಾವಳಗಿ ಐಪಿ, ೧೧ ಕೆವಿ ಕಕ್ಕಳಮೇಲಿ ಐಪಿ, ೧೧ಕೆವಿ ಕುಮಸಗಿ ಐಪಿ, ೧೧ ಕೆವಿ ಹೆಬ್ಬಾಳ ಐಪಿ, ೧೧ ಕೆವಿ ಮೋರಟಗಿ ಲೋಕಲ್ ಐಪಿ, ಹಾಗೂ ೧೧ ಕೆವಿ ಮೋರಟಗಿ ಎನ್ಜೆವಾಯ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ ಕಾರಣ ಸಾರ್ವಜನಿಕರು ನಾಗರಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಕೀಜೋಫ್ರೇನಿಯಾ ದಿನಾಚರಣೆಯಲ್ಲಿ ನ್ಯಾಯಾಧೀಶ ಲೋಕೇಶ್ ಧನಪಾಲ್ ಸಲಹೆ ವಿಜಯಪುರ: ಸ್ಕೀಜೋಫ್ರೇನಿಯಾ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆ ಬಗ್ಗೆ ಕುಟುಂಬದ ಸದಸ್ಯರು ಕಾಯಿಲೆಯ ಅರಿವಿನ ಕೊರತೆಯಿಂದ ಗಮನಹರಿಸುವುದಿಲ್ಲ. ಅದಕ್ಕಾಗಿ ಇಂಥ ಕಾಯಿಲೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಬೇಕು. ಇದರಿಂದ ಎಷ್ಟೋ ಕುಟುಂಬಗಳ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ೪ನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ ಹಾಗೂ ಪ್ರಭಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರದ ಸದಸ್ಯ ಕಾರ್ಯದರ್ಶಿಗಳಾದ ಲೋಕೇಶ ಧನಪಾಲ್ ಹವಲೆ ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಸ್ಕೀಜೋಫ್ರೇನಿಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳ್ಳಿ ಮಾತನಾಡಿ, ಮಾನಸಿಕ ಖಿನ್ನತೆಯಿಂದ…
