Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ತಾಲೂಕಿನ ನೆರಬೆಂಚಿ ಗ್ರಾಮದ ಅಕ್ಷತಾ ಪ್ರವೀಣ ಮಡಿವಾಳರ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮನೆಗೆಲಸ ಮಾಡಿಕೊಂಡಿದ್ದ ಅಕ್ಷತಾ ಮಲ ವಿಸರ್ಜನೆಗೆಂದು ಮೇ೧೩ ರಂದು ಹೋದವಳು ಇಲ್ಲಿಯವರೆಗೆ ಮನೆಗೆ ವಾಪಸ್ ಬಂದಿರುವದಿಲ್ಲ ಎಂದು ಅವಳ ಪತಿ ಪ್ರವೀಣ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ವಿಜಯಪುರ: ವಿಜಯಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ.೨೭ ಹಾಗೂ ೨೮ ರಂದು ಬೆಳಗ್ಗೆ ೯ ಗಂಟೆಯಿಂದ ರಾಮನಗರದ ಟೊಯೊಟಾ ಕಿರ್ಲೋಸ್ಕರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್ಸ್, ಫಿಟ್ಟರ್, ಮೇಕ್ತನಿಸ್ಟ್, ಟರ್ನರ್, ಡೀಸೆಲ್ ಮೆಕ್ಯಾನಿಕ್, ಎಂ ಎಂ ವಿ, ಟಿ ಡಿ ಎಂ ವೃತ್ತಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಒಂದು ಪ್ರತಿ ತಮ್ಮ ಮಾಹಿತಿ ಹಾಗೂ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳ ದಾಖಲೆ ಹಾಗೂ ಭಾವಚಿತ್ರ ದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಸದುಪಯೋಗ ಪಡಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಸರಕಾರಿ ಐ ಟಿ ಐ ಪ್ರಾಚಾರ್ಯರು, ದೂರವಾಣಿ ಸಂಖ್ಯೆ; ೦೮೩೫೨-೬೦೩೬೦ ಅಥವಾ ೯೮೮೬೪೩೭೫೧೭ ಕ್ಕೇ ಕರೆಮಾಡಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ಮಾನವೀಯತೆ ಇದು ಮಾನವರ ಅಸ್ತಿತ್ವದ ಮೂಲತತ್ವವಾಗಿದೆ ಎಂದು ಉದ್ಯಮಿ ಸುಖ್ರಾಜ ಪೋರವಾಲ ಹೇಳಿದರು.ನಗರದ ಬಿಎಲ್ಡಿಇ ಆಸ್ಪತ್ರೆಯ ಆವರಣದಲ್ಲಿ ಗುರುವಾರ ಪತ್ನಿ ದಿ:ಸುಂದರದೇವಿ ಅವರ ೭ನೇ ಪುಣ್ಯಸ್ಮರಣೆ ನಿಮಿತ್ತ ಆಸ್ಪತ್ರೆಯ ರೋಗಿಗಳ ಸಂಬಂಧಿ ಹಾಗೂ ಸಿಬ್ಬಂದಿಗೆ ಉಪಹಾರ ವಿತರಿಸಿ ಮಾತನಾಡಿದರು.ನಮ್ಮ ಜೀವನದಲ್ಲಿ ಯಾವುದು ಶಾಶ್ವತವಲ್ಲ. ನಮ್ಮ ಕೆಲವು ಕಾರ್ಯಗಳು ಮಾತ್ರ ಶಾಶ್ವತ ನೆನಪುಗಳಿಗೆ ಕಾರಣವಾಗುತ್ತವೆ. ಕಳೆದ ೭ ವರ್ಷದ ಹಿಂದೆ ಪತ್ನಿ ನಿಧನರಾದ ತಕ್ಷಣ ಅವರ ಎರಡು ಕಣ್ಣು ಸೇರಿದಂತೆ ದೇಹವನ್ನು ಆಸ್ಪತ್ರೆಗೆ ದಾನ ಮಾಡಿ ಅವರ ಜೀವನದ ಸಾರ್ಥಕತೆಯನ್ನು ಸಾರಲಾಯಿತು. ನಾವು ಸಹ ಅಷ್ಟೇ ಇದ್ದಷ್ಟು ದಿನ ಉಳಿದವರ ಸೇವೆಗೆ ಸ್ವಲ್ಪ ಕಾಲಾವಕಾಶ ನೀಡೋಣ ಎಂದು ಹೇಳುತ್ತಾ ಇಂದಿನ ಈ ಕಾರ್ಯಕ್ಕೆ ಹೀರಾಚಂದ್ ಗಾಂಧಿ ಪ್ರೇರಣೆ ನೀಡಿದ್ದು ಅವರ ಮಾರ್ಗದರ್ಶನ ಅತ್ಯಂತ ಸಮಯೋಚಿತ ಎಂದರು.ರಿತೇಶಕುಮಾರ ಪೋರವಾಲ್, ಹೀರಾಚಂದ ಗಾಂಧಿ, ಇಂದುಮತಿ, ನೇಹಾ, ರಿಷಬ್ ಸೇರಿದಂತೆ ಸಮುದಾಯದ ಪ್ರಮುಖರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.
ವಿಜಯಪುರ: ಭಾರತದಲ್ಲಿ ಹುಟ್ಟಿ ಇಡೀ ವಿಶ್ವದಲ್ಲಿ ಹರಡಿರುವ ತಥಾಗತ ಗೌತಮ ಬುದ್ಧರ ಬೌದ್ಧ ಧಮ್ಮವನ್ನು ಉಳಿಸಲು ಮತ್ತು ಅದನ್ನು ಬೆಳೆಸಲು ಧಮ್ಮದ ಉಪಾಸಕರ ಮೇಲೆ ಬಹು ದೊಡ್ಡ ಜವಾಬ್ದಾರಿಯಿಂದ ಎಂದು ಚಿಂತಕ ಜೆ. ಎಸ್. ಪಾಟೀಲ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ನಗರದ ಸಾರಿಪುತ್ರ ಬುದ್ಧ ವಿಹಾರದಲ್ಲಿ ತಥಾಗತ ಗೌತಮ ಬುದ್ಧರ ೨೫೬೮ ನೇ ಜನ್ಮ ಜಯಂತಿ ಪ್ರಯುಕ್ತ ಆಯೋಜಿಸಿದ ಸಮಾರಂಭದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡಿದ ಅವರು, ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ಚೇತನ ಗೌತಮ್ ಬುದ್ಧರನ್ನು ನಮಗೆಲ್ಲ ಪರಿಚಯಿಸಿದವರು ಭೋದಿಸತ್ವ ಬಾಬಾಸಾಹೇಬ ಅಂಬೇಡ್ಕರವರು. ಅವರು ತೋರಿದ ಬುದ್ಧರ ಮಾರ್ಗ ನಮಗೆಲ್ಲ ಇಂದು ವಿಮೋಚನೆಗೆ ಬಹುದೊಡ್ಡ ಸಾಧನವಾಗಿದೆ. ಭಾರತ ಜಗತ್ತಿಗೆ ಬೆಳಕಾಗಿ ವಿಶ್ವಕ್ಕೆ ಗುರುವಾಗಿ ಕಂಡಿದ್ದು ಬುದ್ಧರ ಜ್ಞಾನದ ಕಾರಣಕ್ಕಾಗಿ ಜಗತ್ತಿನ ಪ್ರಥಮ ವಿಜ್ಞಾನಿ ಕಾರಣ ಹಾಗೂ ಪರಿಣಾಮದ ತತ್ವವನ್ನು ತಿಳಿಸಿದ ಮೊದಲ ವಿಜ್ಞಾನಿ ಗೌತಮರು ಎಂದು ಹೇಳಿದರು.ಬಾಬಾಸಾಹೇಬ್ ಅಂಬೇಡ್ಕರ್ ಕಂಡ ಪ್ರಬುದ್ಧ ಭಾರತ ಕನಸನ್ನು ನನಸು ಮಾಡುವ ಜವಾಬ್ದಾರಿ ಅವರ…
ಅಧಿಕಾರಿಗಳಿಂದ ಅಸ್ಕಿ, ಬೆಕಿನಾಳ, ಬೂದಿಹಾಳ(ಪಿ.ಟಿ) ಕೆರೆಗಳಿಗೆ ನೀರು ತುಂಬಿಸುವ ಮನವರಿಕೆ ಕಲಕೇರಿ: ಸಮೀಪದ ಆಸ್ಕಿ ಕೆರೆಯಲ್ಲಿ ನೂರಾರು ರೈತರು ಆಸ್ಕಿ, ಬೆಕಿನಾಳ, ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ತಾಳಿಕೋಟಿ ತಹಶಲ್ದಾರರಾದ ಕೀರ್ತಿ ಚಾಲಕ ಮತ್ತು, ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳಾದ ಇಇ ಎಸ್.ಎನ್, ಬಂಡಿವಡರ್, ಸೆಕ್ಷನ ಆಫೀಸರ್ ಪ್ರವೀಣ ಗುಡಗುಂಟಿ ಅವರ ಮಧ್ಯವಸ್ತಿಕೆಯಲ್ಲಿ ಬುಧವಾರ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಜೂನ ೬ರ ನಂತರ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಡನೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು, ಜಿಲ್ಲಾಧಿಕಾರಿಗಳು, ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಸಭೆ ಮಾಡಿ ಅಧಿಕೃತವಾಗಿ ಯಾವ ರೀತಿ ಈ ೩ ಕೆರೆಗಳನ್ನು ತುಂಬಿಸಬೇಕು ಎಂದು ತಜ್ಞರಿಂದ ಸಮೀಕ್ಷೆ ಮಾಡಿಸಿ ನಂತರದಲ್ಲಿ ಒಂದು ನಿರ್ಣಯಕ್ಕೆ ಬರಬಹುದು ಎಂದು ಹೋರಾಟಕ್ಕೆ ಕುಳಿತ ರೈತರೊಡನೆ ಕೀರ್ತಿ ಚಾಲಕ ಅವರು ಮನವರಿಕೆ ಮಾಡಿದ ನಂತರ ಹೋರಾಟವನ್ನು ಹಿಂಪಡೆಯಲಾಯಿತು.ಈ…
ವಿಶೇಷಚೇತನರಿಗೆ ಉದ್ಯೋಗ ನೀಡಿಕೆ :ತಿಕೋಟಾ ತಾಲೂಕು ಮುಂಚೂಣಿ ತಿಕೋಟಾ: ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ವತಿಯಿಂದ ಜರುಗಿದ ರೋಜಗಾರ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಶೋಭಕ್ಕ ಶಿಳೀನ ಅವರು ಮಾತನಾಡಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬಿಜ್ಜರಗಿ ಗ್ರಾಮದಲ್ಲಿ ಸುಮಾರು ೨೫ಕ್ಕೂ ಅಧಿಕ ಜನ ವಿಶೇಷಚೇತನರು ಕೂಲಿ ಕೆಲಸ ನಿರ್ವಹಿಸಿ, ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿಯೇ ವಿಶೇಷಚೇತನರಿಗೆ ಉದ್ಯೋಗ ನೀಡಿಕೆಯಲ್ಲಿ ತಿಕೋಟಾ ತಾಲೂಕು ಮುಂಚೂಣಿಯಲ್ಲಿದೆ. ಯೋಜನೆಯಡಿ ತಾಲೂಕು ವ್ಯಾಪ್ತಿಯಲ್ಲಿ ೪೭೨ ವಿಶೇಷಚೇತನರಿಗೆ ಉದ್ಯೋಗ ಖಾತ್ರಿ ಕಾರ್ಡ್ ನೀಡಲಾಗಿದ್ದು, ಈಗಾಗಲೇ ೮೪ ಜನರು ಕೆಲಸ ನಿರ್ವಹಿಸಿದ್ದು, ೯೯೩ ಮಾನವ ದಿನಗಳನ್ನು ಸೃಜನೆ ಮಾಡಿದ್ದಾರೆ. ಜಿಲ್ಲೆಯಲ್ಲಿಯೇ ಅಧಿಕ ಮಾನವ ದಿನ ಸೃಜನೆಯಾಗಿದ್ದು ನಮ್ಮ ತಾಲೂಕಿನಲ್ಲಿಯೇ ಎಂದರು. ಇದರಲ್ಲಿ ಬಿಜ್ಜರಗಿಯಲ್ಲಿಯೇ ೬೦ ಜನ ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ ೨೫ ಜನರಿಗೆ ಈಗಾಗಲೇ ಉದ್ಯೋಗ ನೀಡಲಾಗಿದ್ದು ಅವರೇ ೩೪೨…
ತಿಕೋಟಾ: ತಾಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ತಿಕೋಟಾ ತಹಶಿಲ್ದಾರ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿ ಕೂಡಲೇ ಬಗೆಹರಿಸಬೇಕು. ಇಲ್ಲವಾದಲ್ಲಿ ತಹಶಿಲ್ದಾರರ ಕಛೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮನವಿ ಸಲ್ಲಿಸಿ ಮಾತನಾಡುತ್ತಾ, ತಾಲೂಕಿನಲ್ಲಿ ಮುಂಗಾರು, ಹಿಂಗಾರು ಸಂಪೂರ್ಣ ನಷ್ಟಗೊಂಡಿರುವ ಹಿನ್ನಲೆಯಲ್ಲಿ ವಿಫತ್ತು ನಿರ್ವಹಣಾ ಕಾನೂನಿನಡಿ ಪ್ರತಿ ಹೆಕ್ಟರಗೆ ೮೫೦೦ ರಾಜ್ಯ ಮತ್ತು ೮೫೦೦ ಕೇಂದ್ರದ ಪರಿಹಾರ ಗರಿಷ್ಟ ೨ ಹೆಕ್ಟರೆಗೆ ಪರಿಹಾರ ಹಾಕಬೇಕು, ಆದರೆ ಕೇಂದ್ರ ಸರಕಾರ ನೀಡಿದ ಪರಿಹಾರದಲ್ಲಿಯೇ ೨೦೦೦ ಕಡಿತ ಮಾಡಿರುವುದು ಖಂಡನೀಯ, ಅದನ್ನು ಕೂಡಲೇ ರಾಜ್ಯ ಸರಕಾರ ೨೦೦೦+೮೫೦೦ ಸೇರಿಸಿ ಒಟ್ಟಾರೆ ೧೦೫೦೦ ರೈತರ ಪ್ರತಿ ಹೆಕ್ಟರಗೆ ಹಾಕಬೇಕು. ಬರಗಾಲ ಪರಿಹಾರ ಸಮೀಕ್ಷೆ ಸರಿಯಾಗಿ ಮಾಡದೇ, ಬೇಜವ್ದಾರಿಯಿಂದ ಹೊರಗುತ್ತಿಗೆ ಮೂಲಕ ಮನಸ್ಸಿಗೆ ಬಂದ ಹಾಗೆ ಸರ್ವೇ ಮಾಡಿ ಕೈತೊಳೆದುಕೊಂಡಿದ್ದಾರೆ, ಆದರೆ ನಿಜವಾಗಿ ತಾಲೂಕಿನ ಎಲ್ಲಾ ನಷ್ಟಗೊಂಡ ರೈತರಿಗೆ…
ವಿಜಯಪುರ: ಇತ್ತೀಚೆಗೆ ನಿಧನರಾದ ಜನಸಂಘದ ಹಿರಿಯರು, ತಾಳಿಕೋಟಿ ಪಟ್ಟಣದ ಮುಖಂಡರಾದ ಬಾಳುಸಿಂಗ್ ರಾಮಸಿಂಗ್ ವಿಜಾಪುರ ಅವರ ಮನೆಗೆ ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಜನಸಂಘದ ಕಾಲದಿಂದಲೂ ನಮ್ಮ ಪಕ್ಷದ ಸಂಟನೆಗಾಗಿ ಶ್ರಮಿಸಿರುವುದು, ತಮ್ಮ ಜೊತೆಗಿದ್ದ ಆತ್ಮೀಯ ಒಡನಾಟ ಬಗ್ಗೆ ಕುಟುಂಬದವರೊಂದಿಗೆ ಹಂಚಿಕೊಂಡರು. ಭಾರತೀಯ ಜನತಾ ಪಕ್ಷ ಸಂಘಟನೆಗೆ ಬಾಳುಸಿಂಗ್ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದರು.ಈ ಸಂದರ್ಭದಲ್ಲಿ ರಜಪೂತ್ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ, ಸುರೇಶ ಹಜೇರಿ, ರತನಸಿಂಗ್ ಕೊಕಟನೂರ, ರಮೇಶ ಗೌಡಗೇರಿ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಚಿಮ್ಮಡ: ಸರಕಾರಿ ಶಾಲೆಗಳೆಂದರೆ ಕೊಳಕು, ಅಲ್ಲಿ ಕಲಿಯುವವರು ಅಸಮರ್ಥರು ಎಂಬ ಮಾನಸಿಕ ಭಾವನೆ ಹೊಂದಿರುವ ಪಾಲಕರಿಗೆ ಪ್ರಸಕ್ತ ಎಸ್ಎಸ್ಎಲ್ಸಿ ಫಲಿತಾಂಶ ಎಚ್ಚರಿಸಿದೆ. ಸರಕಾರಿ ಶಾಲೆಗಳ ಕುರಿತ ಅಸಡ್ಡೆ ಭಾವನೆ ಬೇಡ ಎಂದು ಸ್ಥಳಿಯ ವಿರಕ್ತಮಠದ ಪ್ರಭು ಶ್ರೀ ಹೇಳಿದರು.ಗ್ರಾಮದ ಬನಶಂಕರಿದೇವಿ ಕಲ್ಯಾಣ ಮಂಟಪದಲ್ಲಿ ಶ್ರೀ ಬನಶಂಕರಿದೇವಿ ಸೇವಾ ಸಮೀತಿಯಿಂದ ಗುರುವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಮಾತನಾಡಿದ ಅವರು ಪ್ರತೀ ಮಗುವಿನಿಂದ ಲಕ್ಷಾಂತರ ರೂ. ದೇಣಿಗೆ (ಡೊನೇಷನ್) ಪಡೆದುಕೊಂಡು, ಕಲಿಯುವ ಸಾಮರ್ಥ್ಯವಿರುವ ಮಕ್ಕಳನ್ನು ಮಾತ್ರ ನೊಂದಾಯಿಸಿಕೊಳ್ಳುವ ಖಾಸಗೀ ಶಾಲೆಗಳೂ ಮಾಡದಷ್ಟು ಸಾಧನೆ ನಮ್ಮ ಸರಕಾರಿ ಶಾಲೆಗಳು ಸಾಧಿಸಿದ್ದು ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಕಲಿಸಿದರೆ ಶಾಲೆಗಳು ಮತ್ತಷ್ಟು ಸುಧಾರಣೆ ಕಾಣಲಿವೆಯಲ್ಲದೇ ಅಭೀವೃದ್ದಿಯೂ ಹೊಂದಲಿವೆಯೆಂದರು.ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿ ವಿದ್ಯೆ ಕಸಿಯಲಾಗದ ಸಂಪತ್ತು, ಸಾಧಿಸುವ ಛಲವಿದ್ದವರಿಗೆ ಯಾವುದೇ ಸಮಸ್ಯೆ ಅಡ್ಡಿಯಾಗದು, ಎರಡೂ ಕಾಲಿಲ್ಲದವರೂ ಎವರೆಷ್ಟ ಶಿಖರವೇರಿದ ಇತಿಹಾಸ ದೇಶ ಹೊಂದಿದೆ ಎಂದರು.ಸಮಾಜದ ಮುಖ್ಯಸ್ಥ…
ಮುದ್ದೇಬಿಹಾಳ: ಬ್ಯಾಂಕ್ ನಲ್ಲಿದ್ದ ಹಣ ಡ್ರಾ ಮಾಡಿಕೊಂಡು ಬೈಕ್ ನಲ್ಲಿಟ್ಟು ಎಳೆನೀರು ಕುಡಿಯುವಷ್ಟರಲ್ಲಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದ ಹುಡಕೋ ಗೇಟ್ ಬಳಿ ಬುಧವಾರ ಸಂಭವಿಸಿದೆ.ಪಟ್ಟಣದ ನಿವಾಸಿಯಾಗಿರುವ ಶಿಕ್ಷಕರೊಬ್ಬರು ಮನೆ ಕಟ್ಟಿಸಲು ಅವಶ್ಯವಾಗಿರುವ ೩ಲಕ್ಷಕ್ಕೂ ಅಧಿಕ ಹಣವನ್ನು ದಂಪತಿ ಸಮೇತ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಕರ್ನಾಟಕ ಬ್ಯಾಂಕ್ ಗೆ ತೆರಳಿ ಮಧ್ಯಾಹ್ನ ಡ್ರಾ ಮಾಡಿಕೊಂಡಿದ್ದರು. ಆ ಹಣವನ್ನು ತಮ್ಮ ದ್ವಿ ಚಕ್ರ ವಾಹನದ ಹಿಂಬದಿ ಇರುವ ಬ್ಯಾಗ್ ನಲ್ಲಿಟ್ಟು ಎಳೆನೀರು ಕುಡಿಯಲೆಂದು ಮುಖ್ಯ ರಸ್ತೆಯಲ್ಲಿಯೇ ಬೈಕ್ ನಲ್ಲಿಸಿ ಎಳೆನೀರು ಖರೀದಿಸಲು ಪತಿ ತೆರಳಿದರೆ, ಹತ್ತಿರವಿರುವ ಬೇಕರಿಯಲ್ಲಿ ತಿನಿಸು ತರಲು ಪತ್ನಿ ತೆರಳಿದ್ದಾರೆ. ಬ್ಯಾಂಕ್ ನಿಂದಲೇ ಇವರನ್ನು ಬೆನ್ನಟ್ಟಿದ ಖದೀಮರ ತಂಡ ಬೈಕ್ ಹತ್ತಿರ ಯಾರೂ ಇಲ್ಲದ್ದನ್ನು ಗಮನಿಸಿ ಸಲೀಸಾಗಿ ಹಣ ತೆಗೆದುಕೊಂಡು ವಿಜಯಪುರ ರಸ್ತೆಯ ಕಡೆಗೆ ಸಾಗಿದ್ದಾನೆ. ಈ ಘಟನೆ ಸಿಸಿಟಿವಿ ಯೊಂದರಲ್ಲಿ ಸೆರೆಯಾಗಿದ್ದು ಬೈಕ್ ನಿಂದ ಹಣ ಎಗರಿಸುವವರೆಗೆ ಕಾಣುತ್ತಿದ್ದು ಮುಖ ಕಂಡಿಲ್ಲ. ಎಳೆನೀರು ಮಾರಾಟಗಾರ ಬಿಸಿಲಿನ…
