Author: editor.udayarashmi@gmail.com

ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಒಂದು ಊರಿನಲ್ಲಿ ಒಬ್ಬ ಧನಿಕನಿದ್ದ. ಒಮ್ಮೆ ಆತ ತನ್ನ ಕುಟುಂಬದೊಂದಿಗೆ ಮಾರುಕಟ್ಟೆಗೆ ತೆರಳುತ್ತಾನೆ. ಮಾರುಕಟ್ಟೆಯಲ್ಲಿ ವಸ್ತುಗಳನ್ನು ಖರೀದಿಸುತ್ತಾ ಕೊನೆಗೆ ಬಾಳೆಹಣ್ಣಿನ ಅಂಗಡಿಯ ಮುಂದೆ ಬಂದು ನಿಲ್ಲುತ್ತಾನೆ. ಅಂಗಡಿಯ ಮುಂದೆ ನೇತುಹಾಕಿದ್ದ ಬಾಳೆಹಣ್ಣನ್ನು ನೋಡಿ ಇದರ ದರವೆಷ್ಟು ಎಂದು ವ್ಯಾಪಾರಿಯಲ್ಲಿ ಕೇಳುತ್ತಾನೆ. ಆಗ ವ್ಯಾಪಾರಿಯು ಕಿಲೋಗೆ ಅರುವತ್ತು ರೂಪಾಯಿ ಎನ್ನುತ್ತಾನೆ. ಬಾಳೆಹಣ್ಣನ್ನು ತೆಗೆದುಕೊಳ್ಳಲೇ ಎಂದು ಧನಿಕನು ತನ್ನ ಹೆಂಡತಿಯಲ್ಲಿ ಕೇಳಿದಾಗ, ಹೆಂಡತಿಯು ದರವು ಅತ್ಯಂತ ದುಬಾರಿಯಾಯಿತು ಬೇರೆಡೆ ನೋಡೋಣ ಎನ್ನುತ್ತಾಳೆ. ಇವರು ಇನ್ನೊಂದು ಅಂಗಡಿಗೆ ತೆರಳಿ ಅಲ್ಲಿ ಬಾಳೆಹಣ್ಣಿನ ದರವನ್ನು ವಿಚಾರಿಸಿದಾಗ ಕಿಲೋಗೆ ನಲುವತ್ತೊಂದು ರೂಪಾಯಿ ಎಂದು ಅಂಗಡಿಯಾತ ಹೇಳುತ್ತಾನೆ. ಧನಿಕನ ಆಶ್ಚರ್ಯಗೊಂಡು ಒಂದೇ ಗುಣಮಟ್ಟದ ಬಾಳೆಹಣ್ಣು ಹತ್ತಿರ ಹತ್ತಿರದ ಎರಡು ಅಂಗಡಿಗಳಲ್ಲಿದ್ದರೂ ದರದಲ್ಲೇಕೆ ಎಷ್ಟೊಂದು ವ್ಯತ್ಯಾಸವೆಂದು ಚಿಂತಿಸುತ್ತಾನೆ. ಧನಿಕ ಮರಳಿ ಮೊದಲನೇ ಬಾಳೆಹಣ್ಣಿನ ಅಂಗಡಿಗೆ ಬಂದು ಅಲ್ಲಿನ ವ್ಯಾಪಾರಿಯಲ್ಲಿ ನಿನ್ನ ದರವು ಹೆಚ್ಚಾಗಿದ್ದು ಪಕ್ಕದ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಪ್ರೀತಿಯ ಮಗಳೇ,ಅರೆ! ನೆನ್ನೆ ತಾನೆ ನನ್ನನ್ನು ಕಳಿಸಲು ಬಂದ ಅಮ್ಮ ಇಷ್ಟು ಬೇಗ ಪತ್ರ ಬರೆಯಲು ಕಾರಣವೇನು? ಎಂದು ಗಾಬರಿಯಾಗಬೇಡ.. ತಾಯಿ ಹೃದಯದ ಅಳಲು ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು. ನಮ್ಮ ಮನೆಯಂಗಳದಲ್ಲಿ ಚಂದದ ಪ್ರಾಕು ಧರಿಸಿ,ಎರಡು ಪುಟ್ಟ ಜುಟ್ಟು ಹಾಕಿಕೊಂಡು, ಮುಖಕ್ಕೆ ಪೌಡರ್ ಸವರಿ, ಹಣೆಗೆ ಕಾಡಿಗೆಯ ಬೊಟ್ಟುಇಟ್ಟು ಕಾಲಿನ ಗೆಜ್ಜೆಯ ಸದ್ದು ಮಾಡುತ್ತಾ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯೆಲ್ಲ ನಡೆಯುತ್ತಿದ್ದ, ಅರಳು ಹುರಿದಂತೆ ಮುದ್ದಾಗಿ ಬಾಯಿ ತುಂಬಾ ಮಾತನಾಡುತ್ತಿದ್ದ ಪುಟ್ಟ ಕಂದ ನೀನು, ಇಂದು ಕಾಲೇಜಿಗೆ ಹೋಗುವಷ್ಟು ದೊಡ್ಡವಳಾಗಿರುವೆ. ಅತ್ಯುತ್ತಮ ಅಂಕ ಗಳಿಸಿ ಒಳ್ಳೆಯ ಕಾಲೇಜಿನಲ್ಲಿ ಸೀಟು…

Read More

ವಿಜಯಪುರ: ಖೊಟ್ಟಿ ದಾಖಲೆ ಸೃಷ್ಟಿಸಿ ಭೂಗರಣ ಇಡೀ ಜಿಲ್ಲೆಯಲ್ಲಿಯೇ ಸಂಚಲನ ಮೂಡಿಸಿದ್ದು, ಈ ರೀತಿಯ ಭೂಗರಣ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.ಬಾಬಾನಗರ ನಿವಾಸಿ ಸಾಹೇಬಗೌಡ ಮಲ್ಲನಗೌಡ ರುದ್ರಗೌಡರ ಅವರಿಗೆ ವಂಚಿಸಿದ ಪ್ರಕರಣ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳನ್ನು ರಾಜು ಮಾಳಪ್ಪ ಮಾನೆ, ದಯಾನಂದ ಅಮಯ್ಯ ಸಂಗಮದ, ಕಿರಣ ವಾಸುದೇವ ಬೇಡೆಕರ, ದಶರಥ ಸಿದ್ಧರಾಮ ಹೊಸಮನಿ, ದತ್ತಾತ್ರೇಯ ಶರಣಪ್ಪ ಶಿವಶರಣ, ಸಾಕೀಫ್ ಬಷೀರ್‌ಅಹ್ಮದ್ ನಂದವಾಡಗಿ ಸೇರಿದಂತೆ ಇನ್ನೂ ಕೆಲವರು ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಸರ್ವೆಯಲ್ಲಿ ಬರುವ ರಿ.ಸ.ನಂಬರ ೪೮/*/೧ ಕ್ಷೆತ್ರ ೨೦ ಎಕರೆ ಜಮೀನು ಮಾಲೀಕನಾದ ಅರ್ಗನ್ ಉರ್ಫ್ ಅಗನು ಧೋಳು ಕಾಳೆ ಅವರ ಹೆಸರಿನಲ್ಲಿ ಖೊಟ್ಟಿ ಆಧಾರ್ ಹಾಗೂ ಪ್ಯಾನ್ ಕಾರ್ಡನ್ನು ಸೃಷ್ಟಿ ಮಾಡಿಕೊಂಡು ಅವುಗಳನ್ನು ಖರೀದಿ ಪತ್ರದಲ್ಲಿ ಖೊಟ್ಟಿ ರೀತಿಯಿಂದ ನಮೂದ ಮಾಡಿ ಖರೀದಿ ಪತ್ರ ತಯಾರು ಮಾಡಿಕೊಂಡು ದೂರುದಾರರ ಕಡೆಯಿಂದ ೪೬,೫೦,೦೦೦ ರೂ.ಗಳನ್ನು ಪಡೆದುಕೊಂಡು ವಂಚನೆ ಮಾಡಿ, ಮೋಸತನದಿಂದ ಜಮೀನು…

Read More

ಕೊಲ್ಹಾರದಲ್ಲಿನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿ ವಿಜಯಪುರ: ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ದರೋಡೆ ಮಾಡಿದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಮಹಾಂತೇಶ ಶಿವಗೊಂಡ ತಳವಾರ, ಧರೇಶ ರೇವಣಸಿದ್ಧ ದಳವಾಯಿ, ಶಿವಪ್ಪ ಶರಣಪ್ಪ ಮಾಶ್ಯಾಳ, ಸುನೀಲ ರಾಮಪ್ಪ ವಡ್ಡರ, ಶಿವಾನಂದ ದಳವಾಯಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಲಿಗೆಯಾದ ೩೨,೨೯,೩೬೪ ಲಕ್ಷ ರೂ.ಗಳ ಪೈಕಿ ೩೧,೦೪,೩೫೬ ಲಕ್ಷ ರೂ.ಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ.ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ ಮಾಹಿತಿ ನೀಡಿ, ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ನಡೆದ ಹಲ್ಲೆ, ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ನಮ್ಮ ಇಲಾಖೆಯ ತಂಡ ಯಶಸ್ವಿಯಾಗಿದ್ದು, ಕೃತ್ಯದಲ್ಲಿ ಕ್ಯಾಂಟರ ಲಾರಿ ಚಾಲಕ ಮಹಾಂತೇಶ ಶಿವಗೊಂಡ ತಳವಾರ ಅವರ ಕೈವಾಡ ಇರುವುದು ಕಂಡು ಬಂದಿದ್ದು, ಆತನ ಮಾಹಿತಿ ಮೇರೆಗೆ ಇನ್ನೂಳಿದ ೪ ಜನ ಆರೋಪಿತರು ಬುಲೆರೋ…

Read More

ವಿಜಯಪುರ: ನಗರದ ಮನಗೂಳಿ ಅಗಸಿ ಹತ್ತಿರದ ದಲಿತ ಕಾಲೋನಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ವಾರ್ಡ್ ನಂ. 23 ರ ಸಿ ಟಿ ಎಸ್ ನಂ 605/1ಎ /1/ಎ 2ದಲ್ಲಿ ಸರ್ಕಾರದಿಂದ ಕಾಯ್ದಿರಿಸಿದ ಜಾಗದಲ್ಲಿ ಸರ್ಕಾರದಿಂದ ಮಂಜೂರಾದ ಸಮುದಾಯ ಭವನ ನಿರ್ಮಾಣ ಮಾಡಲು ತಕರಾರು ತೆಗೆಯುತ್ತಿರುವ ಅನ್ಯಕೋಮಿನ ಹಿತಾಸಕ್ತವಾದಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ತಮಗೆ ನ್ಯಾಯ ಒದಗಿಸಬೇಕೆಂದು ಬಡಾವಣೆಯ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಇದಕ್ಕೂ ಮೊದಲು ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಶ್ರೀಶೈಲ್ ಕಾಖಂಡಕಿ ಅವರು ಮಾತನಾಡಿ ನಮ್ಮ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಎಂದು ಜಾಗವನ್ನು ಸರ್ಕಾರದಿಂದಲೇ ಕಾಯ್ದಿರಿಸಲಾಗಿದೆ. ಈಗ ಸರ್ಕಾರ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನವನ್ನು ಕೂಡ ಮಂಜೂರು ಮಾಡಿದೆ. ಟೆಂಡರ್ ಪ್ರಕ್ರಿಯೆಯಾದ ಕಾಮಗಾರಿಯನ್ನು ಇಲ್ಲಸಲ್ಲದ ಕಾರಣ ಹೇಳಿ ವಿನಾಕಾರಣ ತಡೆಯುಂಟು ಮಾಡುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯವಾಗಿ ದಲಿತ ಜನಾಂಗದ…

Read More

ಮುತ್ತಗಿ: ಮುಕ್ತ ಕ್ಷೇತ್ರ, ಅಶ್ವತ್ಥಾವಿರ್ಭಾವ ಶ್ರೀ ಲಕ್ಷ್ಮೀ ನರಸಿಂಹ ದೇವರ ಉತ್ಸವವು ದಿನಾಂಕ ೯ ರಿಂದ ಅವ್ಯಾಹತವಾಗಿ ಯಶಸ್ವಿ ರೀತಿಯಲ್ಲಿ ಸಾಗುತ್ತಿದೆ ಎಂದು ಮುತ್ತಗಿಯ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಅರ್ಚಕರಾದ ಶ್ರೀನಿವಾಸಾಚಾರ್ಯ ಜೋಶಿ ತಿಳಿಸಿದ್ದಾರೆ.ಇಂದು ಚತುರ್ದಸಿಯ ದಿನವಾದ ಇಂದು ಶ್ರೀ ಲಕ್ಷ್ಮೀ ನರಸಿಂಹ ದೇವರ ಪೂಜಾಲಂಕಾರವನ್ನು ಪಂ. ನರಹರಿಆಚಾರ್ಯ ಜೋಶಿ ಅವರು ನೆರವೇರಿಸಿದ್ದರು.ಪ್ರತಿ ನಿತ್ಯ ಅಭಿಷೇಕ, ಪಾಠ-ಪ್ರವಚನ, ನೈವೆದ್ಯ, ಮಹಾಮಂಗಳಾರತಿ ಹಾಗೂ ಪ್ರತಿನಿತ್ಯ ಭಕ್ತಾದಿಗಳಿಂದ ಅನ್ನ ಸಂತರ್ಪಣೆ ನಡೆಯಲಿದೆ. ೯ರಂದು ವಿ.ಪಿ.ಕಟ್ಟಿ & ಆರ್.ಪಿ.ಕಟ್ಟಿ, ೧೦ ರಂದು ಪಿ.ಎನ್.ಕುಲಕರ್ಣಿ, ೧೧ ರಂದು ಮದ್ವೇಶ ಕುಲಕರ್ಣಿ, ವಿನೋದ ಕುಲಕರ್ಣಿ, ೧೨ ರಂದು ಬಿ.ಎಚ್. ಸಾವಳಗಿ ಮತ್ತು ಕುಲಕರ್ಣಿ ಬಂದುಗಳಿಂದ, ೧೩ ರಂದು ಡಿ.ಎಸ್.ದೇಶಪಾಂಡೆ ಸಹೋದರರಿಂದ, ೧೪ ಪಿ.ಜೆ.ದೇಶಪಾಂಡೆ ಹಾಗೂ ಎ.ಜೆ ದೇಶಪಾಂಡೆ, ೧೫ರಂದು ಆರ್.ಎಸ್ & ಕೆ.ಎಸ್ ಕುಲಕರ್ಣಿ, ಸಮೀರ ಚಿಕ್ಕೋಡಿ ಅವರಿಂದ, ೧೬ ರಂದು ಪಿ.ಎಚ್.ಢಾಣಕಶಿರೂರ, ಡಾ.ರಂಗನಾಥ ಹರಪನಳ್ಳಿ, ೧೭ ರಂದು ಆರ್.ಎ.ಚೌದರಿ, ೧೮ ರಂದು ಕಿರಣ ಚೌಧರಿ, ೧೯…

Read More

ವಿಜಯಪುರ: ಕೆರೆಗೆ ನೀರು ತುಂಬುವ ಯೋಜನೆಯಡಿ ಜಂಬಗಿ, ಆಹೇರಿ, ಹುಣಶ್ಯಾಳ(ಮಾದಾಳ) ಕೆರೆಗಳನ್ನು ಪ್ರತಿವರ್ಷ ತುಂಬಬೇಕು ಮತ್ತು ಈ ಎಲ್ಲಾ ಕೆರೆಗಳನ್ನು ಇಲಾಖೆಯ ಸುಪರ್ದಿಗೆ ಪಡೆದು ಅಭಿವೃದ್ಧಿ ಪಡೆಸಿ, ನಷ್ಟಗೊಂಡ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕಳೆದ ೭ ದಿನಗಳಿಂದ ಜಂಬಗಿ ಕೆರೆಯಲ್ಲಿ ಅನಿರ್ದಿಷ್ಟ ಹೋರಾಟ ಮಾಡುತ್ತಿರುವ ರೈತರೆಲ್ಲರು ಕೂಡಿಕೊಂಡು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ನೀರು ತುಂಬಿಸುವವರೆಗೂ ಹೋರಾಟ ಜಿಲ್ಲಾಧೀಕಾರಿಗಳ ಕಚೇರಿಯಲ್ಲಿಯೇ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಸುಮಾರು ೩ ಘಂಟೆಗಳ ಕಾಲ ಜಿಲ್ಲಾಡಳಿತದ ವಿರುದ್ಧ ಘೋಷಣೆ ಹಾಕುತ್ತಾ ಕುಳಿತುಕೊಂಡರು.ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡುತ್ತಾ, ವಿಜಯಪುರ ಜಿಲ್ಲೆ ಹಾಗೂ ತಾಲೂಕಿನ ಜಂಬಗಿ ಕೆರೆಯೂ ಕೆರೆ ನೀರು ತುಂಬುವ ಯೋಜನೆಯಡಿ ಇದ್ದು, ಇಲ್ಲಿಯವರೆಗೂ ಒಮ್ಮೆಯೂ ತುಂಬಿಸಿರುವುದಿಲ್ಲ, ಹಾಗೆ ಉಳಿದಂತೆ ಆಹೇರಿ, ಹುಣಶ್ಯಾಳ(ಮಾದಾಳ) ಕೆರೆಗಳನ್ನು ಕೆರೆ ನೀರು ತುಂಬುವ ಯೋಜನೆಯಡಿ ಸೇರಿಸಬೇಕು, ಅವುಗಳನ್ನು ಪ್ರತಿವರ್ಷ ಬೇಸಿಗೆಯಲ್ಲಿ ನೀರು ತುಂಬಿಸಬೇಕು ಎಂದರು.ಈ ವೇಳೆ…

Read More

ಕಾಲೇಜುಗಳಲ್ಲಿ ರೋಸ್ಟರ ಪ್ರಕಾರ ಪ್ರವೇಶ ವಿವರಕ್ಕೆ ದವಿಪ ಆಗ್ರಹ ವಿಜಯಪುರ: ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಾಂರಭವಾಗಿದ್ದು, ಬಹುತೇಕ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪಡೆದ ಬಗ್ಗೆ ಯಾವುದೇ ಮಾಹಿತಿಯನ್ನು ಪ್ರದರ್ಶನ ಮಾಡದೇ ಈಗಾಗಲೇ ಪ್ರವೇಶ ಮುಕ್ತಾಯವಾಗಿವೆ, ಸೀಟ್ ಭರ್ತಿಯಾಗಿವೆ ಎಂಬ ಸಿದ್ದ ಉತ್ತರವನ್ನು ಶಿಕ್ಷಣ ಸಂಸ್ಥೆಗಳು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ.ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಇಲಾಖೆಯ ಸುತ್ತೋಲೆಯ ಪ್ರಕಾರ ಪ್ರವೇಶ ಪ್ರಕ್ರಿಯೆ ನಡೆಸದೆ ಶಿಕ್ಷಣವನ್ನು ವ್ಯಾಪಾರೀಕರಣ ಮಡಿಕೊಂಡಂತೆ ವರ್ತಿಸುತ್ತಿದ್ದಾರೆ. ಇಲಾಖೆಯ ನಿಯಮಾನುಸಾರ ರೋಸ್ಟರ್ ಪಾಲಿಸದೆ. ನಿಯಮ ಮೀರಿ ಬೇಕಾಬಿಟ್ಟಿಯಾಗಿ ಡೊನೇಷನ್ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದಾರೆ. ಇದರಿಂದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸಾಮಾನ್ಯ ವರ್ಗಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ…

Read More

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ, ಸಿಬ್ಬಂದಿಗಳಿಗೆ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ರಾಜ್ಯ ಸಂಘಟನಾ ಕಾರ್ಯದರ್ಶಿ, ಅವಳಿ ಜಿಲ್ಲೆಯ ಉಸ್ತುವಾರಿ ಅಶೋಕ ಹಾರಿವಾಳ ಅವರ 40 ನೇ ಜನ್ಮ ದಿನದಂಗವಾಗಿ ಕರವೇ ಕಾರ್ಯಕರ್ತರು ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಮಡುಗೌಡ ಭಾವಿಕಟ್ಟಿ, ಬಾಲಚಂದ್ರ ಮಾಕೊಂಡ, ಬಸವರಾಜ ಹೂಗಾರ, ರವಿ ವಡ್ಡರ, ಪ್ರಕಾಶ ಡೋಣೂರ, ಹಣಮಂತ ಟಕ್ಕಳಕಿ, ಚಂದ್ರಶೇಖರ ಕುಂಬಾರ, ಅಶೋಕ ನಾಟೀಕಾರ, ಮುತ್ತಪ್ಪ ಬೇಲಿ, ಶಿವು ಬೇವಿನಗಿಡದ, ಸೋಮು ಶರಣದ ಇತರರು ಇದ್ದರು.

Read More