Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ, ಪಿಂಚಣಿ, ಉಚಿತ ಬಸ್ ಪಾಸ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸುವಂತೆ ಸದಸನದಲ್ಲಿ 15ಕ್ಕೂ ಹೆಚ್ಚು ಸಲ ಧ್ವನಿ ಎತ್ತಿರುವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಕುಮಠೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಗೋದಾಮು ಮತ್ತು ಎನ್.ಆರ್.ಎಲ್.ಎಂ ಶೆಡ್ ಉದ್ಘಾಟಿಸಿ ಅವರು ಮಾತನಾಡಿದರು.ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧನಾಗಿದ್ದೇನೆ. ಮುಂದೆಯೂ ಗ್ರಾ. ಪಂ. ಸದಸ್ಯರ ಪರ ಧ್ವನಿ ಎತ್ತುತ್ತೇನೆ. ಕೇರಳ ಮಾದರಿಯಲ್ಲಿ ಸದಸ್ಯರಿಗೆ ಸೌಲಭ್ಯ ಒದಗಿಸಲು ಮುಂದೆಯೂ ಧ್ವನಿ ಎತ್ತುತ್ತೇನೆ ಎಂದು ಅವರು ಹೇಳಿದರು.ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಗ್ರಾ. ಪಂ. ಸದಸ್ಯರು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಗ್ರಾಮ ಸ್ವರಾಜ್ಯ ಕನಸು ನನಸಾಗಲು ಮಾದರಿ ಕೆಲಸ ಮಾಡಬೇಕು ಎಂದು ಅವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಇನಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಅಸಿಸ್ಟಂಟ್ ಪ್ರೊಫೆಸರ್ ಮತ್ತು ನರ್ಸಿಂಗ್ ಸೈಕ್ಯಾಟ್ರಿಕ್ ವಿಭಾಗದ ಮುಖ್ಯಸ್ಥ ಡಾ. ಎಂ. ಬಿ. ತಡಲಗಿ ಅವರನ್ನು ಸರಕಾರ ಕರ್ನಾಟಕ ಶುಶ್ರೂಷ ಪರಿಷತ್ತಿನ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.ಡಾ. ಎಂ. ಬಿ.ತಡಲಗಿ ಅವರನ್ನು ನಾಮನಿರ್ದೇಶನ ಮಾಡಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸೇರಿದ ಸರ್ವೇ ನಂಬರ 596 ರ 5 ಎಕರೆ 30 ಗುಂಟೆ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣ ಭಸ್ಮವಾಗಿದೆ.ಜಮೀನಿನಲ್ಲಿ ಹಾಯ್ದು ಹೋಗಿರುವ ವಿದ್ಯುತ್ ಕಂಬಗಳಲ್ಲಿನ ತಂತಿ ಇಳಿಬಿದ್ದಿರುವ ಪರಿಣಾಮ ಗಾಳಿಗೆ ಘರ್ಷಣೆ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನುತ್ತಾರೆ ಸ್ಥಳೀಯ ರೈತರು.ರಾತ್ರಿ 9 ಘಂಟೆ ವೇಳೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಲು ಸ್ಥಳದಲ್ಲಿ ಇದ್ದ ಜನರು, ಯುವಕರು,ರೈತರು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ ಕೊನೆಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದರು.ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ಹಾನಿ ಉಂಟಾಗಿದೆ, ಅಲ್ಲದೇ ಹೊಲದಲ್ಲಿರುವ ಪೈಪ್ ಗಳು, ಕೇಬಲ್ ಗಳು ಸಂಪೂರ್ಣ ಸುಟ್ಟು ಹೋಗಿವೆ.ಹೊಲವನ್ನು ಮಾಡಿರುವ ರೈತ ಹಾಗೂ ಅವರ ಪತ್ನಿಯ ಗೋಳು ಜನರ ಕಣ್ಣಲ್ಲಿ ನೀರು ತರಿಸಿತು.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ನೀಡುವ ೨೦೨೬ ರ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ.ಮಾಜಿ ಸಚಿವ ದಿ. ಎಂ.ಸಿ.ಮನಗೂಳಿ ಸ್ಮರಣಾರ್ಥ ನೀಡಲಾಗುವ ‘ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಯನ್ನು ಬೆಂಗಳೂರಿನ ಅಂಕಿತ ಪುಸ್ತಕ ಪ್ರಕಾಶನ ಆಯ್ಕೆಯಾಗಿದ್ದು ರೂ.೨೫ ಸಾವಿರ ನಗದು, ಪ್ರಶಸ್ತಿಫಲಕ ಒಳಗೊಂಡಿದೆ. ಅಂಕಿತ ಪ್ರಕಾಶನವು ಕಳೆದ ೩೦ವರ್ಷಗಳಲ್ಲಿ ಸಾವಿರಪುಸ್ತಕಗಳನ್ನು ಪ್ರಕಟಿಸಿದ್ದು ಬಹುದೊಡ್ಡ ಸಾಧನೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ.ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಕಲಬುರಗಿಯ ಹಿರಿಯ ಸಾಹಿತಿ ಡಾ.ಶ್ರೀಶೈಲ ನಾಗರಾಳ ಅವರಿಗೆ ನೀಡಲು ತೀರ್ಮಾನಿಸಿದ್ದು ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಫೆಬ್ರವರಿ ಮೊದಲ ವಾರದದಲ್ಲಿ ಕಡಣಿಯಲ್ಲಿ ನಡೆಯುವ ೯ನೇ ವರ್ಷದ ಸಂಭ್ರಮ ಹಾಗೂ ೨೫ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್.ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಡಚಣದಲ್ಲಿ ಸಂಗಮೇಶ್ವರ ಜಾತ್ರೆಯ ಸಂಭ್ರಮ | ಪಲ್ಲಕ್ಕಿ ಹಾಗೂ ನಂದಿ ಧ್ವಜದ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಆರಾಧ್ಯ ದೈವ ಶ್ರೀ ಸಂಗಮೇಶ್ವರ ದೇವರ ಜಾತ್ರೆಯು ಜ.18 ರಿಂದ ಅದ್ದೂರಿಯಾಗಿ ಆರಂಭಗೊಂಡಿದ್ದು, ಜಾತ್ರೆಯ 2ನೇ ದಿನವಾದ ಸೋಮವಾರ ಸಾಯಂಕಾಲ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟ ಪಲ್ಲಕ್ಕಿ ಹಾಗೂ ನಂದಿ ಧ್ವಜದ ಮೇರವಣಿಗೆಯು ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನದ ಮೂಲಕ 9.00 ಗಂಟೆಗೆ ಶ್ರೀ ಸಂಗಮೇಶ್ವರ ದೇವಸ್ಥಾನ ತಲುಪಿತು.ನಂತರ 9.00 ಗಂಟೆಗೆ ಜಾತ್ರೆಯ ನಿಮಿತ್ಯ ದೇವಸ್ಥಾನದ ಪಕ್ಕದಲ್ಲಿರುವ ಎತ್ತರದ ವಿಶಾಲವಾದ ಮೈದಾನದಲ್ಲಿ ಶ್ರೀ ದತ್ತ ಇಂಡಿಯಾ ಶುಗರ್ ಹಾವಿನಾಳ ಕಾರ್ಖಾನೆಯ (ಒಂದು ಲಕ್ಷ ರೂಪಾಯಿ ದೇಣಿಗೆ) ಸಹಯೋಗದೊಂದಿಗೆ ಆಯೋಜಿಸಿದ್ದ ಆಕರ್ಷಕ ಚಿತ್ರ-ವಿಚಿತ್ರವಾದ ಮದ್ದು ಸುಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಜಾತ್ರೆಯ ಅಂಗವಾಗಿ ಏರ್ಪಡಿಸಲಾಗಿದ್ದ ಮದ್ದು ಸುಡುವ ಕಾರ್ಯಕ್ರಮದಲ್ಲಿ ಪಟಾಕಿಗಳು ಹೊರಹೊಮ್ಮಿಸಿದ ಶಬ್ದ, ಮೂಡಿಸಿದ ಬೆಳಕಿನ ಚಿತ್ತಾರ ಸೇರಿದ ಜನಸಾಗರವನ್ನು ಖುಷಿಪಡಿಸುವಲ್ಲಿ ಯಶಸ್ವಿಯಾಯಿತು. ವಿಧ ವಿಧವಾದ ಬಣ್ಣಗಳ ಬಾಣ ಬಿರುಸು ಆಕಾಶಕ್ಕೆ ನೆಗೆದು…
ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ. ಕೋಟೆ: ಆದಿವಾಸಿ ಮತ್ತು ಬುಡಕಟ್ಟು ಜನರಲ್ಲಿ ಆರೋಗ್ಯ ಬಗ್ಗೆ ಅರಿವು ಮೂಡಿಸುವ ಮೂಲಕ, ನಮ್ಮ ತಾಲೂಕಿನಲ್ಲಿ ಸಿಕೆಲ್ ಸೆಲ್ (ಕುಡಗೋಲು) ರೋಗ ಮರುಕಳಿಸದಂತೆ ಜಾಗೃತವಹಿಸಬೇಕಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಹೇಳಿದರು.ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹೆಚ್ ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ ಡಿ ಕೋಟೆ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್ ಡಿ ಕೋಟೆ ವತಿಯಿದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನ ಕಾರ್ಯಕ್ರಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಾಗೃತಿ ಕಾರ್ಯಕ್ರಮಗಳ ಮೂಲಕ ಆದಿವಾಸಿ ಜನರಲ್ಲಿ ಆರೋಗ್ಯ ಕಾಳಜಿ ಬಗ್ಗೆ ಅರಿವು ಮೂಡಿಸಿ, ರೋಗಗಳು ಉದ್ಭವಿಸದಂತೆ ನಾವು ನೀವೆಲ್ಲರೂ ಸಹಕರಿಸಬೇಕಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಈ ಹಿಂದೆ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಿ, ಅಂಕಗಳಿಕೆ ಎಂಬುದು ಉದ್ಯೋಗದ ಭಾಗವಷ್ಟೇ, ಸಚ್ಚಾರಿತ್ರ್ಯದ ಸನ್ಮಾರ್ಗ ತೋರುವುದೇ ಶಿಕ್ಷಣದ ಅಂತಿಮ ಗುರಿಯಾಗಬೇಕು ಎಂದು ಉಪನ್ಯಾಸಕ ಡಾ.ಯಂಕನಗೌಡ ಎಸ್ ಪಾಟೀಲ ಹೇಳಿದರು.ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವ ಮತ್ತು ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸತ್ಪ್ರಜೆಗಳಾಗಿ ಬಾಳಲು ಸಾಧ್ಯ ಎಂದವರು. “ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ” ಎಂಬಂತೆ ಪತ್ನಿ ಮತ್ತು ಪತಿಯರು ಒಂದಾಗಿ, ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಮುಖ್ಯ ಶಿಕ್ಷಕ ಬಾಬು ಪಟೇಲ್ ಯಲ್ಗೋಡ ಹಾಗೂ ಅವರ ಧರ್ಮಪತ್ನಿ ಮಾಸಾಬಿ ಯಲ್ಗೋಡ ಇವರ ಮಹಾನ್ ಕಾರ್ಯಕ್ಕೆ ಸಾಥ್ ನೀಡುತ್ತಿರುವ ಆಡಳಿತ ಮಂಡಳಿಯ ಸರ್ವ ಸದಸ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯ, ಕಳೆದ ಮೂರು ದಶಕಗಳಿಂದ ನೂರಾರು ವಿದ್ಯಾರ್ಥಿಗಳ ಬಾಳಲಿ ಜ್ಞಾನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಮಧೇನು ಕಲ್ಪವೃಕ್ಷವಾಗಿರುವ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸ್ಮರಣೆ ಮಾಡಲು ಪೂರ್ವ ಜನ್ಮದ ಪುಣ್ಯ ಮಾಡಿರಬೇಕು ಎಂದು ಗುರು ರಾಘವೇಂದ್ರ ಸೇವಾ ಸಮಿತಿಯ ಪ್ರಮುಖ ಪ್ರಕಾಶ ಅಕ್ಕಲಕೋಟ ಹೇಳಿದರು.ಗ್ರಾಮದ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ವಿಜಯಪುರದ ಗುರು ರಾಘವೇಂದ್ರ ಸೇವಾ ಸಮಿತಿಯಿಂದ ಮಂತ್ರಾಲಯ ಪಾದಯಾತ್ರೆ ಹೊರಡುವ ಭಕ್ತಾದಿಗಳಿಗೆ ದಾಸೋಹ ಸೇವೆ ಮಾಡುತ್ತಿರುವ ನಿಮಿತ್ತ ನಡೆದ ೨೫ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಅವಳಿ ಜಿಲ್ಲೆಯ ಸಾಕಷ್ಟು ಭಕ್ತರು ಯಲಗೂರಿನಿಂದ ಹುಲ್ಲೂರು, ಮುದ್ದೇಬಿಹಾಳ ಮಾರ್ಗವಾಗಿ ಮಂತ್ರಾಲಯಕ್ಕೆ ಪಾದಯಾತ್ರೆ ಬೆಳೆಸುತ್ತಾರೆ. ಯಲಗೂರಿನಿಂದ ಮುದ್ದೇಬಿಹಾಳದವರೆಗಿನ ೨೫ ಕಿಮೀ ಅಂತರದಲ್ಲಿ ಪಾದಯಾತ್ರಿಗಳಿಗೆ ಯಾವುದೇ ಸೌಲಭ್ಯವಿರಲಿಲ್ಲ. ಇದರಿಂದ ಪಾದಯಾತ್ರಿಕರು ಪ್ರಯಾಸ ಪಡುತ್ತಿದ್ದರು. ಇದನ್ನು ತಪ್ಪಿಸಲು ಮಧ್ಯವರ್ತಿ ಸ್ಥಳವಾದ ಹುಲ್ಲೂರು ಬಸ್ ನಿಲ್ದಾಣದ ಬಳಿ ಗುರು ರಾಘವೇಂದ್ರ ಸೇವಾ ಸಮಿತಿಯಿಂದ ೨೦೦೧ರಿಂದ ದಾಸೋಹ ಸೇವೆ ಆರಂಭಿಸಲಾಗಿದ್ದು ನಿರಂತರವಾಗಿ ನಡೆದುಕೊಂಡು ಬಂದಿದೆ. ರಾಯರ ಕೃಪೆಯಿಂದ ನಮಗೆಲ್ಲ ಒಳ್ಳೆಯದಾಗಿದೆ ಎಂದರು.ಗೋಪಾಲಾಚಾರ್ಯ ಹಿಪ್ಪರಗಿ ಮಾತನಾಡಿ, ಪಾದಯಾತ್ರಿಕರ ಕಷ್ಟಗಳನ್ನು ಅರಿತು ದಾಸೋಹ ಸೇವೆ ಆರಂಭಿಸಿದ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ವಿದ್ಯಾಲಯದ ಮೂಲಭೂತ ಸೌಲಭ್ಯಗಳು, ಅನುದಾನ ಬಳಕೆ, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ದಿಸಲು ಕಾಲೇಜು ಅಭಿವೃದ್ದಿ ಸಮೀತಿಯ ಪಾತ್ರವೂ ಮಹತ್ವದ್ದಾಗಿದ್ದು. ಕ್ರಿಯಾಶೀಲ ಸಮೀತಿಯಿಂದ ಅಭಿವೃದ್ಧಿ ಸಾಧ್ಯವೆಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಹೇಳಿದರು.ಗ್ರಾಮದ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದ ಪಾಲಕರ ಸಭೆಯಲ್ಲಿ ಕಾಲೇಜು ಅಭಿವೃದ್ದಿ ಸಮೀತಿಯ ಅಧ್ಯಕ್ಷ, ಉಪಾಧ್ಯಕ್ಷ, ಸರ್ವಸದಸ್ಯರ ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಅವರು ವಿದ್ಯಾಲಯದ ಅಗತ್ಯಗಳಿಗೆ ಗ್ರಾಮದ ಪ್ರತಿಯೊಬ್ಬರು ಸ್ಪಂದನೆ ನಿರಂತರವಾಗಿರಲಿದ್ದು ಪಧಾದಿಕಾರಿಗಳು ನಿರಂತರ ಸಂಪರ್ಕದಿಂದ ವಿದ್ಯಾಲಯಕ್ಕೆ ಯಾವುದೇ ಸಮಸ್ಯೆ ಬಾರದಂತೆ ಸ್ಪಂದಿಸಬೇಕೆಂದು ಸಲಹೆ ನೀಡಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ. ಕಾಳಪ್ಪ ಬಡಿಗೇರ ಮಾತನಾಡಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಬೀರಪ್ಪ ಹಳೆಮನಿ, ಶಂಕರಗೌಡ ಬ. ಪಾಟೀಲ, ರಾಚಯ್ಯ ಮಠಮತಿ, ನಿಂಗಣ್ಣ ಪೂಜಾರಿ, ಪ್ರಭು ಮುಧೋಳ, ಪ್ರಕಾಶ ಪಾಟೀಲ, ಪಿರಸಾಬ ನದಾಫ, ಪ್ರಾಶುಪಾಲೆ ಶ್ರೀಮತಿ ಎಸ್.ಕೆ. ರಾಠೋಡ ಉಪಸ್ಥಿತರಿದ್ದರು.ಕಾಲೇಜು ಅಭಿವೃದ್ದಿ ಸಮೀತಿಗೆ ನೂತನ ಅಧ್ಯಕ್ಷರಾಗಿ ಅವ್ವನಪ್ಪ ಮುಗಳಖೋಡ ಉಪಾಧ್ಯಕ್ಷರಾಗಿ ಬಸಪ್ಪ ಮಮದಾಪೂರ, ಗಟಿಗೆಪ್ಪ ಜಂಗನೂರ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಜನವರಿ 29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ ಹಾಗೂ ಶೋಭಾಯಾತ್ರೆ ಜರುಗಲಿದೆ.ಈ ಕಾರ್ಯಕ್ರಮ ನಿಮಿತ್ಯ ಸೋಮವಾರ ಎಲ್ಲ ಮಠಾದೀಶರು ನೇತೃತ್ವದಲ್ಲಿ ಎಲ್ಲ ಸಮುದಾಯದ ಹಿಂದೂಗಳ ಮನೆಗೆ ತೆರಳಿ ಕಾರ್ಯಕ್ರಮದ ಸಂಪರ್ಕ ಅಭಿಯಾನ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ತಾರಾಪೂರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಗುರು ಸಂಸ್ಥಾನ ಹಿರೇಮಠ ಚಂದ್ರಶೇಖರ ಶಿವಾಚಾರ್ಯರು, ಅರ್ಜುಣಗಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಕುಮಸಗಿಯ ಶಿವಾನಂದ ಮಹಾಸ್ವಾಮಿಗಳು ನೇತೃತ್ವದಲ್ಲಿ ಪಟ್ಟಣ ಪ್ರತಿಯೊಂದು ನಗರಗಳಿಗೆ ತೆರಳಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಹ್ವಾನಿಸಿದರು.ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮುಖಂಡ ಜಿ.ಸಿ. ಪಷುಪತಿಮಠ ಮಾತನಾಡಿ, 29 ರಂದು ನಡೆಯುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಿಮಿತ್ಯ ಶೋಭಾಯಾತ್ರೆ ನಡೆಯಲಿದ್ದು, ಈ ಶೋಭಾಯಾತ್ರೆಯಲ್ಲಿ ಹಿಂದೂ ಧರ್ಮದ ಎಲ್ಲ ಸಮಾಜದ ಸಾದು ಸಂತರ, ಮಹಾನ ನಾಯಕರ, ಹೋರಾಟಗಾರ ಭಾವ ಚಿತ್ರಗಳೊಂದಿಗೆ ಶೋಭಾಯಾತ್ರೆ ಮಾಡಲಾಗುವದು. ಸೋಮವಾರ ಎಲ್ಲ ಸ್ವಾಮಿಜಿಗಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸಂಪರ್ಕ…
