Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಬದುಕಿನುದ್ದಕ್ಕೂ ಮರಗಳನ್ನು ಮಕ್ಕಳಂತೆ ಬೆಳೆಸಿ ,ಆರೈಕೆ ಮಾಡುತ್ತಾ , ಹಸಿರೇ ಉಸಿರಾಗಿಸಿಕೊಂಡ ಸಾಲುಮರದ ತಿಮ್ಮಕ್ಕನ ಹೆಸರು ಅಜರಾಮರ ಎಂದು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನ ಸ್ಮರಣಾರ್ಥವಾಗಿ ಶನಿವಾರ ಸಸಿ ಕಾಲೇಜು ಆವರಣದಲ್ಲಿ ನೆಟ್ಟು ನಮನ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮನೆ ಹೊಲ ಗದ್ದೆಗಳಲ್ಲಿ ಗಿಡ ಮರ, ಬಳ್ಳಿಗಳನ್ನು ಬೆಳೆಸಲು ಮುಂದಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ ನಾಗಪ್ಪ ಚಾವಲ್ಕರ್ ಸಾಲು ಸಾಲು ಮರ ಗಿಡ ನೆಡುವ ಮೂಲಕ ಪರಿಸರ ಸ್ನೇಹಿಯಾಗಿ ಬದುಕಿದ ತಿಮ್ಮಕ್ಕ ನಮಗೆಲ್ಲ ಮಾದರಿ ಎಂದರು.ತಿಮ್ಮಕ್ಕನ ಸಾಧನೆಯನ್ನು ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ವಿಶ್ವವಿದ್ಯಾಲಯಗಳು, ಸಂಘ ಸಂಸ್ಥೆಗಳು, ಪ್ರಶಸ್ತಿ, ಪುರಸ್ಕಾರ ನೀಡಿ ಗೌರವಿಸಿವೆ ಎಂದು ಹೇಳಿದರು.ದೈಹಿಕ ನಿರ್ದೇಶಕ ಡಾ ಪ್ರಸಾದ ಭಂಡಾರಿ,…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ೧ದಿನದ ಕಾರ್ಯಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಜಿನಿಯರಿಂಗ್ ಕಂಪ್ಯೂಟರ್ ಕ್ಷೇತ್ರಗಳಿಗಷ್ಟೇ ಸೀಮಿತವಾಗದೆ ಎಲ್ಲ ಕ್ಷೇತ್ರಗಳಲ್ಲೂ ಎಐ ಅವಶ್ಯಕತೆ ಇದೆ ಎಂದು ಹಿರಿಯ ಸಾಪ್ಟವೇರ್ ಇಂಜಿನಿಯರ್ ರಮೇಶ್ ಉಪ್ಪಲದಿನ್ನಿ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಐಐಸಿ ಇಂಟರ್ನಶಿಪ್ ಚಟುವಟಿಕೆ ಕೋಶ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಶುಕ್ರವಾರದಂದು ಜರುಗಿದ “ಅವಿಷ್ಕಾರಕರು ಮತ್ತು ಉದ್ಯಮಶೀಲರಿಗೆ ಎಐ ಮತ್ತು ೧೪.೦ ಉಪಕರಣಗಳು ” ಎಂಬ ವಿಷಯದ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಆಧುನಿಕ ತಂತ್ರಜ್ಞಾನ ಎಐ ಅದರ ಬಳಕೆ ಮತ್ತು ವಿದ್ಯಾರ್ಥಿಗಳು ಪ್ರೊಜೆಕ್ಟ್ ಅಥವಾ ಯಾವುದೇ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಟ್ ಜಿಪಿಟಿ, ಜೆಮಿನಿ, ಬಳಿಸುತ್ತಿರುವುದನ್ನು ನಾವಿಂದು ಕಾಣುತ್ತಿದ್ದೇವೆಎಐ ಎಂದರೇನು, ಹೇಗೆ ಕಾರ್ಯನಿರ್ವಹಿಸುತ್ತದೆ, ಅದಕ್ಕೆ ಯಾರು ತರಬೇತಿ ಮಾಡುತ್ತಾರೆ ಅಲ್ಲದೆ ಮನುಷ್ಯನ ಬುದ್ಧಿಶಕ್ತಿಯ…
ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ತಾಲೂಕಿನ ಆರೇಶಂಕರ (ಬಡಾವಣೆ) ಗ್ರಾಮದಲ್ಲಿ ನೂತನ ಮಾರುತೇಶ್ವರ ರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ, ದೇವಸ್ಥಾನ ಉದ್ಘಾಟನೆ ಸಮಾರಂಭ ನವೆಂಬರ್ ೨೫/೨೬ ರಂದು ಎರಡು ದಿನ ಜಾತ್ರೆ ಜರುಗಲಿದೆ.ನ,೨೫ ರಂದು ನೂತನ ಮಾರುತೇಶ್ವರ ಮೂರ್ತಿಯನ್ನು ಸಕಲ ವಾದ್ಯ ವೈಭವಗಳಿಂದ ಬರಮಾಡಿಕೋಳ್ಳಲಾಗುವುದುಅಂದೇ ರಾತ್ರಿ ೯ ಗಂಟೆಗೆ ಸುಪ್ರಸಿದ್ಧ ಗೀ ಗೀ ಪದಗಳು, ಜರುಗಲಿವೆ. ಹುಲಿಕಾಂತೇಶ್ವರ ಹರದೇಶಿ ಗೀ ಗೀ ಪದ ಕಲಾ ಮೇಳ ಬಣದಾಳ, ಹಾಗೂ ಮಹಾಲಕ್ಷ್ಮಿ ಗೀ ಗೀ ಪದ ನಾಗೇಶ್ ಮೇಳ ದೇವರ ಗೆಣ್ಣೂರ ಈ ಎರಡು ಕಲಾ ತಂಡದಿಂದ ಗೀ ಗೀ ಪದಗಳು ಜರುಗಲಿವೆ .ನ ೨೬ ರಂದು ನೂತನ ಮಾರುತೇಶ್ವರ ಮೂರ್ತಿಗೆ ಹೋಮ ಹವನ ಮತ್ತು ರುದ್ರಾಭಿಷೇಕ ದೊಂದಿಗೆ ಪ್ರತಿಷ್ಠಾಪನೆ ಮಾಡಲಾಗುವುದು. ಕಳಸಾಹರೋಣ ಮತ್ತು ನೂತನ ದೇವಸ್ಥಾನ ಉದ್ಘಾಟನೆ ನೆರವೇರಲಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಂಪ್ರದಾಯಿಕ ಛಟ್ಟಿ ಜಾತ್ರೆಯ ಅಂಗವಾಗಿ ರಾವುತರಾಯನು ಪಲ್ಲಕ್ಕಿ ಉತ್ಸವದ ಮೂಲಕ ಮಲ್ಲಯ್ಯನ ದೇವಸ್ಥಾನ ಪ್ರವೇಶಿಸಿದನು.ಪಟ್ಟಣದಲ್ಲಿ ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ನಂತರ ಜರುಗುವ ರಾವುತರಾಯನ ಪಲ್ಲಕ್ಕಿ ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಮಲ್ಲಯ್ಯನ ದೇವಸ್ಥಾನ ತಲುಪಿದ ರಾವುತರಾಯನು ಪಲ್ಲಕ್ಕಿ ಉತ್ಸವ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ನಂತರ ದೇವಸ್ಥಾನದಲ್ಲಿ ಆಸೀನನಾದನು. ಛಟ್ಟಿ ಅಂಗವಾಗಿ ಕಾರ್ತಿಕೋತ್ಸವ ಹಾಗೂ ಮಹಾಪ್ರಸಾದ ನೆರವೇರಿಸಲಾಗುತ್ತಿದೆ. ನಂತರ ಪಲ್ಲಕ್ಕಿ ಉತ್ಸವದ ಮೂಲಕ ಮರಳಿ ಪಟ್ಟಣದ ತನ್ನ ದೇವಸ್ಥಾನಕ್ಕೆ ಮರಳುವನು.ಸಾಂಪ್ರದಾಯಿಕವಾಗಿ ರಾವುತರಾಯ ಹೊರವಲಯದ ಮಲ್ಲಯ್ಯನ ದೇವಸ್ಥಾನದಲ್ಲಿ ಷಷ್ಠಿಯವರೆಗೆ ಅಂದರೆ ಆರು ದಿನಗಳವರೆಗೆ ಇದ್ದು ನಂತರ ಮರಳಿ ತನ್ನ ಮೂಲಸ್ಥಾನಕ್ಕೆ ಮರಳುವನು. ಈ ಛಟ್ಟಿ ಜಾತ್ರೆಯ ಅಂಗವಾಗಿ ಪ್ರತಿ ವರ್ಷ ಜಾನುವಾರಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ ಹಾಗೂ ಅತ್ಯುತ್ತಮ ರಾಸುಗಳಿಗೆ ಬಹುಮಾನ ವಿತರಣೆಗಳು ಪ್ರತಿವರ್ಷದಂತೆ ಈ ಬಾರಿಯು ಜರುಗಲಿವೆ.ಕಾರಣಿಕರ ಹೇಳಿಕೆಗಳು: ಪ್ರತಿವರ್ಷವು ಛಟ್ಟಿ ಜಾತ್ರೆಯ ಸಂದರ್ಭದಲ್ಲಿ ಶೀಡಗಟ್ಟಿ ಎಂಬ ಸ್ಥಳದಲ್ಲಿ ಕಾರಣಿಕರು ಹೇಳಿಕೆಗಳನ್ನು ಹೇಳುವ ಪದ್ಧತಿಯಿದ್ದು, ಈ ವರ್ಷ…
ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ | ಜಿಲ್ಲಾ ನ್ಯಾಯಾಧೀಶ ಹರೀಶ್ ಎ. ಸುದ್ದಿಗೋಷ್ಠಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ ೧೩ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ಅವರು ತಿಳಿಸಿದರು.ಶನಿವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಡಿಸೆಂಬರ್ ೧೩ ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೬೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬೪ ಅಂಗನವಾಡಿ ಸಹಾಯಕಿಯರ ಆಯ್ಕೆಯಾಗಿ ಅರ್ಜಿ ಆಹ್ವಾನಿಸಿ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾದ ೫೮ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೫೯ ಅಂಗನವಾಡಿ ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿಯನ್ನು ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದೆ.ಅದರಂತೆ ೦೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೦೧ ಅಂಗನವಾಡಿ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಮಾತ್ರ ದಿನಾಂಕ : ೨೧-೧೧-೨೦೨೫ ರಿಂದ ೨೯-೧೧-೨೦೨೫ರ ವರೆಗೆ ಪೂರಕ ದಾಖಲಾತಿಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಇಂಡಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೋರಟಗಿಯಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಾರ್ಯಕ್ರಮ | ಎಎಸ್ಐ ನದಾಫ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂಸ್ಕೃತಿ ಉಳ್ಳಂತ ದೇಶ ನಮ್ಮದು, ಹೀಗಾಗಿ ನಮ್ಮ ದೇಶದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ, ತಾವೆಲ್ಲರೂ ಕಾನೂನು ಪಾಲನೆ ಮಾಡುವುದರ ಜೊತೆಗೆ ಪ್ರತಿಯೊಂದು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ಹೊರ ಪೊಲೀಸ್ ಠಾಣೆಯ ಎಎಸ್ಐ ಎಲ್ ಯು ನದಾಫ್ ಹೇಳಿದರು.ಗ್ರಾಮದ ಶ್ರೀ ಸಿದ್ದರಾಮೇಶ್ವರ ಕಾಲಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಲೈಂಗಿಕ ದೌರ್ಜನ್ಯ ತಡೆ ಹಾಗೂ ಕಾನೂನು ಪಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಇತ್ತೀಚಿಗೆ ಪೋಕ್ಸೋ, ಅತ್ಯಾಚಾರ, ಅಪಹರಣದಂತ ದೂರುಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಕಾನೂನು ಜಾಗ್ರತಿ ಮೂಡಿಸುವ ಮೂಲಕ ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಬದುಕಿನಲ್ಲಿ ಒಮ್ಮೆ ಈ ತರಹದ ದೂರುಗಳಲ್ಲಿ ಶಾಮಿಲು ಆದರೆ ಇಡೀ ಜೀವನವೇ ಸರ್ವನಾಶವಾಗುತ್ತದೆ ವಿದ್ಯಾರ್ಥಿಗಳಾದ ತಾವುಗಳು ಕಾನೂನು ಪಾಲನೆ ಮಾಡುವುದರ ಜೊತೆಗೆ ಇತರರನ್ನು ತಿಳಿಹೇಳಬೇಕು ಎಂದರು.ನಂತರ ಪ್ರಾಚಾರ್ಯ ಡಾ. ವೀರಭದ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಆರೋಗ್ಯವಾಗಿರಬೇಕೆಂದರೆ ನಿರಂತರವಾಗಿ ಆಟೋಟದಲ್ಲಿ ಪಾಲ್ಗೊಳ್ಳಬೇಕು. ಮೋಬೈಲ್ ಗೀಳಿನಿಂದ ಹೊರ ಬರಬೇಕೆಂದು ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲಯನ್ಸ್ ಪುಟಬಾಲ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ೧೭ ವರ್ಷದ ವಯೋಮಿತಿ ಬಾಲಕರ ಪುಟ್ಬಾಲ್ ಪಂದ್ಯಾವಳಿಗೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಮಕ್ಕಳ ಮಾನಸಿಕ, ದೈಹಿಕ ಆರೋಗ್ಯತ್ತ ಗಮನ ಹರಿಸಬೇಕು. ಮಕ್ಕಳೆ ಮುಂದಿನ ಪ್ರಜೆಗಳು. ನಾವೆಲ್ಲ ಅವರ ಕಡೆ ಗಮನ ಹರಿಸದ ಕಾರಣ ದಾರಿ ತಪ್ಪುತ್ತಿದ್ದಾರೆ. ರಾಜ್ಯೋತ್ಸವ ನಿಮಿತ್ಯವಾಗಿ ಹಮ್ಮಿಕೊಂಡ ಲಯನ್ಸ್ ಪುಟಬಾಲ ಕ್ಲಬ್ ಮಕ್ಕಳಿಗಾಗಿ ಹಮ್ಮಿಕೊಂಡ ಪುಟಬಾಲ್ ಪಂದ್ಯಾವಳಿ ಯಶಸ್ವಿಯಾಗಲಿ, ಎಲ್ಲ ಮಕ್ಕಳ ಇದರಲ್ಲಿ ಪಾಲ್ಗೊಂಡು ಆರೋಗ್ಯಕರ ಚಟುವಟಿಕೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಡಾ.ಮಾಸ್ತಿಹೊಳಿ ಮಕ್ಕಳಿಗೆ ಪ್ರೋತ್ಸಾಹ ನುಡಿ ಹೇಳಿದರು.ಇದೇ ಸಂದರ್ಭದಲ್ಲಿ ಡಾ. ಅಶೋಕಕುಮಾರ ಜಾಧವ ಮಾತನಾಡಿ, ಪುಟ್ಬಾಲ್ ಪಂದ್ಯಾವಳಿಯೂ ಇತ್ತೀಚಿನ ದಿನದಲ್ಲಿ ಮರೆಯಾಗುತ್ತಿದೆ. ಮಕ್ಕಳಿಗೆ ಈ ಆಟ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಸಿರಸಗಿ ಆದರ್ಶಗ್ರೂಪ್ ಆಪ್ ಟ್ರಸ್ಟ್ ಮತ್ತು ಕಾನೂನು ಸೇವಾ ಸಮಿತಿ ಸಿಂದಗಿ ಇವರ ಸಹಯೋಗದಲ್ಲಿ ‘ರೆಹಮತಬಿ ಎ ಸಿರಸಗಿ ಮೆಮೊರಿಯಲ್ ಕಾನೂನು ಮಹಾವಿದ್ಯಾಲಯ ಮತ್ತು ವಿದ್ಯಾರ್ಥಿ ಒಕ್ಕೂಟ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ, ಎಲ್.ಎಲ್.ಬಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನ.23 ರಂದು ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಕಲಕೇರಿ ಗ್ರಾಮದ ಆದರ್ಶ ಕ್ಯಾಂಪಸ್ ನಲ್ಲಿ ಜರುಗಲಿದೆ.ಸಿಂದಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಕುಲಪತಿಗಳಾದ ಪ್ರೊ.ಸಿ.ಬಸವರಾಜ ಉಪಸ್ಥಿತರಿರುವರು.ಅಧ್ಯಕ್ಷತೆಯನ್ನು ಸಿರಸಗಿ ಆದರ್ಶ ಗ್ರೂಪ್ ಆಪ್ ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ಜಹಾಂಗೀರಬಾಶ್ಯಾ ಸಿರಸಗಿ ವಹಿಸುವರು.ಅತಿಥಿಗಳಾಗಿ ಸಿಂದಗಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಆರ್.ಎ.ಮುಲ್ಲಾ, ಸಿವಿಲ್ ನ್ಯಾಯಾಧೀಶೆ ಪಂಕಜಾ ಕೊಣ್ಣೂರ, ದೇವರಹಿಪ್ಪರಗಿ ಮತಕ್ಷೇತ್ರ ಶಾಸಕ ರಾಜುಗೌಡ ಪಾಟೀಲ ಹಾಗೂ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹೃದಯದ ಹೃದಯವೇನೀ ಕಣ್ಣಿಗೆ ಬಿದ್ದಾಗಿನಿಂದ ಎಂಥ ತ್ರಿಪುರ ಸುಂದರಿಯರಿಗೂ ಮನಸ್ಸು ಸೋಲುತ್ತಿಲ್ಲ. ಮುಷ್ಟಿಯಷ್ಟಿರುವ ಹೃದಯದಲ್ಲಿ ನೂರಾರು ಕನಸುಗಳು ತಾವಾಗಿಯೇ ಗೂಡು ಕಟ್ಟಿಕೊಂಡಿವೆ. ನಿನ್ನ ಒಪ್ಪಿಗೆ ಕಾಯದೇ ಬೆಚ್ಚನೆಯ ಎದೆಯಲ್ಲಿ ನಿನ್ನಂದ ಬಚ್ಚಿಟ್ಟುಕೊಂಡು ಹೋದಲ್ಲೆಲ್ಲ ನಿನ್ನನ್ನು ಕರೆದೊಯ್ಯುತಿರುವೆ. ಲೋಕದಲ್ಲೆೆಲ್ಲ ನೀನೇ ತುಂಬಿರುವೆ.ಈ ಪುಟ್ಟ ಹೃದಯವನು ಮನಸಾರೆ ನಿನ್ನ ಕೈಲಿಡಲು ಕಣ್ಣ ರೆಪ್ಪೆಗಳನು ಅಂಟಿಸದೇ ಕಾಯುತಿರುವೆ. ಪ್ರಪಂಚವು ಒಪ್ಪಲಿ ಬಿಡಲಿ ನಾನೆಂದಿಗೂ ನಿನ್ನವನೇ ಗೆಳತಿ. ಸಣ್ಣ ಸಣ್ಣ ಆಸೆಗಳ ಸಂಭ್ರಮ, ಹೊತ್ತು ಗೊತ್ತಿಲ್ಲದೇ ನಿದ್ದೆ ಕೆಡಿಸುತಿದೆ. ನಿನ್ನ ಮೈ ಮಾಟದ ಅಂದ ಚೆಂದದ ಬಣ್ಣನೆ ಕೇಳಿದರೆ ಹುಟ್ಟುಗುರುಡನೂ ನಿನ್ನ ಕಿರು ಬೆರಳನು ಹಿಡಿಯಲು ಹಟ ಹಿಡಿಯುತ್ತಾನೆ. ಅಂತಾದ್ರಲ್ಲಿ ನಾನಾವ ಲೆಕ್ಕ? ಇನ್ನಾರಾದರೂ ನಿನ್ನ ಕೈ ಕೇಳಿ, ನೀ ಒಪ್ಪಿಬಿಟ್ಟರೆ ಎಂಬ ಚಿಂತೆ ಕಾಡುತಿದೆ. ಪ್ರೇಮಲೋಕದಲ್ಲಿ ಕೊನೆಯಾಗದ ಪ್ರೇಮಗೀತೆಯನ್ನು ಜೊತೆ ಜೊತೆಯಲ್ಲಿ ಹಾಡುವಾಸೆ ಕೇಳು ಸಿಂಗಾರಿ. ಅಳಿಸಲಾಗದ ಬಂಧನದಲ್ಲಿ ಬಂಧಿಸಿಕೊಳ್ಳುವ ಆಸೆ. ಹದಿ ಹರೆಯದ ಹುಡುಗರನ್ನು…
