Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಶಿಕ್ಷಣ ಇಲಾಖೆ ಆದೇಶ | ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಈ ನಿರ್ಣಯ ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದ್ದು, “ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುವಂತೆ” ಸೂಚಿಸಿದ್ದಾರೆ.2023–24ನೇ ಸಾಲಿನ ಫಲಿತಾಂಶವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏಪ್ರಿಲ್ 8ರಂದು ಪ್ರಕಟಿಸುವಂತೆ ಈ ಹಿಂದೆ ಆದೇಶಿಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಇನ್ನೂ ಫಲಿತಾಂಶ ಪ್ರಕಟಗೊಂಡಿಲ್ಲ.ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ಇದೇ ಮೇ 29 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ…
ವಿಜಯಪುರ: ಮಕ್ಕಳಲ್ಲಿ ಕಂಡು ಬರುವ ಚಂಚಲತೆ ಮತ್ತು ಅತೀ ಚಟುವಟಿಕೆಯ(ADHD) ಕಾಯಿಲೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಮೇ 27 ರಿಂದ ಜೂನ್ 1 ರ ವರೆಗೆ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಾಲೇಜಿನ ಕೌಮಾರಭೃತ್ಯ ವಿಭಾಗದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದೆ.ಮಕ್ಕಳು ಒಂದೇ ಜಾಗದಲ್ಲಿ ಕುಳಿತುಕೊಳ್ಳದಿರುವುದು, ಹೋಂ ವರ್ಕ್ ಅಥವಾ ಶಾಲೆಯ ಚಟುವಟೆಕೆಗಳು ಸೇರಿದಂತೆ ದಿನನಿತ್ಯದ ಕೆಲಸಗಳನ್ನು ಮಾಡಲು ಹಿಂಜರಿಯುವುದು, ದೈನಂದಿನ ಚಟುವಟಿಕೆಗಳಲ್ಲಿ ಬಲು ಬೇಗನೆ ಬೇಸರಗೊಳ್ಳುವುದು ಅಟೇನ್ಷನ್ ಡೆಫಿಸಿಟ್ ಹೈಪರ್ಆಕ್ಟಿವಿಟಿ ಡಿಸರ್ಡರ್(ADHD) ಕಾಯಿಲೆಯ ಪ್ರಮುಖ ಲಕ್ಷಣಗಳಾಗಿವೆ. ಇಂಥ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಈ ಶಿಬಿರದಲ್ಲಿ ಉಚಿತ ತಪಾಸಣೆ ಮತ್ತು ಔಷಧಿ ವಿತರಣೆ ನಡೆಯಲಿದೆ. ಪಾಲಕರು ಇದರ ಸದುಪಯೋಗ ಪಡದುಕೊಳ್ಳಬೇಕು ಎಂದು ಡಾ. ಸಂಜಯ ಕಡ್ಲಿಮಟ್ಟಿ ಅವರು ತಿಳಿಸಿದ್ದಾರೆ.ಆಸಕ್ತರು ಮೊ. ಸಂ. 8197378138ಗೆ ಸಂಪರ್ಕಿಸಲು ಕೋರಲಾಗಿದೆ.
ದೇವರಹಿಪ್ಪರಗಿ: ಗ್ರಾಮೀಣ ಪ್ರದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆದು ಬಡ ಕುಟುಂಬಗಳ ಸುಗಮ ಸಂಸಾರ ನಿರ್ವಹಣೆಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಮಂಗಳವಾರ ಆಗಮಿಸಿದ ದೇವೂರ, ದೇವೂರ ಎಲ್.ಟಿ ೧ ಮತ್ತು ೨ ರ ಮಹಿಳೆಯರು ಗ್ರಾಮ ಹಾಗೂ ತಾಂಡಾಗಳಲ್ಲಿ ಮಾಡಲಾಗುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ರೇಣುಕಾ ಪಾಟೀಲ ಮಾತನಾಡಿ, ದೇವೂರ ಗ್ರಾಮ ಮತ್ತು ತಾಂಡಾಗಳಲ್ಲಿ ಅಕ್ರಮವಾಗಿ ಸಾರಾಯಿ ತಯಾರಿಸಿ ಸಿದ್ಧಾರೂಢ ಬೋರಗಿ, ಅನಸೂಬಾಯಿ ಮಾದೇವಪ್ಪ ಸುಂಬಡ ಮಾಲೀಕತ್ವದ ಕಿರಾಣಿ ಅಂಗಡಿ, ಅಪ್ಪಾಸಾಹೇಬಗೌಡ ಪಾನ್ ಶಾಪ್, ಬಾಸು ರಾಠೋಡ, ಶಂಕರ ರಾಠೋಡ ಸಂತೋಷ ರಾಠೋಡರ ದಾಬಾಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನೀಸಿದರೆ ನೀವಾರು ಕೇಳುವವರು ಎಂದು ನಮಗೆ ದಬಾಯಿಸುತ್ತಾರೆ. ಅಕ್ರಮ ಮದ್ಯ ಮರಾಟದ…
ಇಂಡಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ನಡೆದಿದೆ.ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದಾಗ ಈಜಲು ಬಾರದೇ ಅಮಿತ ರಾಠೋಡ(12), ಸುದೀಪ ಜಾಧವ್ (13) ಮೃತಪಟ್ಟಿರುವ ದುರ್ದೈವಿಗಳು. ಸ್ಥಳಕ್ಕೆ ಇಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಂಡಿ ಶಹರ್ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಸ್ಕಿ, ಬೆಕಿನಾಳ, ಬೂದಿಹಾಳ(ಪಿ.ಟಿ) ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹ ಕಲಕೇರಿ: ಸಮೀಪದ ಆಸ್ಕಿ ಕೆರೆಯಲ್ಲಿ ನೂರಾರು ರೈತರು ಆಸ್ಕಿ, ಬೆಕಿನಾಳ, ಹಾಗೂ ಬೂದಿಹಾಳ ಪಿ.ಟಿ ಕೆರೆ ನೀರು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಬೆಳಗಿನಿಂದ ಅನಿರ್ದಿಷ್ಠ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ.ಗ್ರಾಮದ ಮುಖ್ಯ ಬಜಾರದಿಂದ ಹಲಗಿ ಸದ್ದಿನೊಂದಿಗೆ ರೈತರು ವಿವಿಧ ಘೋಷಣೆಗಳನ್ನು ಕೂಗುತ್ತಾ ಕೆರೆಯಡೆಗೆ ಹೆಜ್ಜೆ ಹಾಕುತ್ತಾ ಕೆರೆಗೆ ನೀರು ಹರೆಸುವವರೆಗೆ ಧರಣಿ ಮುಂದುವರೆಯುವುದು ಎಂಬುದು ಧರಣಿ ನಿರತರ ಬೇಡಿಕೆಯಾಗಿತ್ತು,ಆಸ್ಕಿ ಗ್ರಾಮದ ರೈತ ಸಂಘದ ಅಧ್ಯಕ್ಷ ಸಂಗನಗೌಡ ಬಿರಾದಾರ ಅವರು ಮಾತನಾಡುತ್ತಾ, ಈ ವರ್ಷದ ಭೀಕರ ಬರಗಾಲದ ನಿಮಿತ್ಯವಾಗಿ ಭಾಗದಲ್ಲಿ ಎಲ್ಲ ಹಳ್ಳ, ಕೆರೆಗಳು ಬತ್ತಿಹೋಗಿ ಬಾವಿ ಹಾಗೂ ಕೊಳವೆ ಬಾವಿಯಲ್ಲಿನ ನೀರು ಕಡಿಮೆಯಾಗಿ ಕೃಷಿಗೆ ನೀರಿಲ್ಲದೇ, ಜನ ಜಾನುವಾರುಗಳಿಗೆ ಕುಡಿಯಲು ಹನಿ ನೀರು ಇಲ್ಲದೇ ಹರಸಾಹಸ ಪಡುವಂತಾಗಿದೆ ಎಂದರುರೈತ ಸಂಘದ ತಾ. ಉಪಾಧ್ಯಕ್ಷ ಗೌಡಪ್ಪಗೌಡ ಹಳಿಮನಿ ಮಾತನಾಡುತ್ತಾ ಈ ವರ್ಷದಲ್ಲಿ ಅಡವಿಯಲ್ಲಿ ಮಾನವರಿಗೆ ಮತ್ತು ನಮ್ಮ…
ಬಿಜೆಪಿ ನಗರ ಮಂಡಲ ರೈತ ಮೋರ್ಚಾ ವತಿಯಿಂದ ಬ್ರಹತ್ ಪ್ರತಿಭಟನೆ ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿರುವ ಕಾಂಗ್ರೆಸ್ ಸರ್ಕಾರದ ಸಾಧನೆ ಮಾತ್ರ ಶೂನ್ಯ. ಗ್ಯಾರಂಟಿ ಗುಂಗಿನಲ್ಲಿರುವ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಅಭಿವೃದ್ಧಿ ಸಂಪೂರ್ಣ ಮರೆತಿದ್ದಾರೆ. ತಮ್ಮದೆ ಪಕ್ಷದ ಶಾಸಕರು ಕೂಡ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಅದೇ ಅವರ ಕಳಪೆ ಆಡಳಿತ ತೋರಿಸುತ್ತದೆ.ಅಭಿವೃದ್ಧಿ ಕಾಮಗಾರಿಗೆ ಹಣ ನೀಡದ ಸರ್ಕಾರ, ರೈತರ ಏಳಿಗಾಗಿ ರಚನೆಗೊಂಡಿರುವ ರೈತ ಉತ್ಪಾದಕರ ಸಂಸ್ಥೆಗಳಿಗೆ ನೀಡಬೇಕಾದ ಹಣ ಬಾಕಿ ಉಳಿಸಿಕೊಳ್ಳುವ ಮೂಲಕ ಅನ್ನದಾತರಿಗೂ ಅನ್ಯಾಯ ಮಾಡಿದೆ. ಹಣ ನೀಡದೆ ಇರುವುದರಿಂದ ೧೦ ಲಕ್ಷ ರೈತರಿಗೆ ಹಾಗೂ ೧೨ ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.…
ವಿಜಯಪುರ: ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಮುಂಗಾರು ಪೂರ್ವ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ಸನ್ನದರಾಗಬೇಕು. ನಗರ ಹಾಗೂ ಪಟ್ಟಣ, ಹಳ್ಳಿಗಳಲ್ಲಿರುವ ರಾಜಕಾಲುವೆಗಳ ಸ್ವಚ್ಚತೆಗೆ ಆಧ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಜರುಗಿದ ಬರಪರಿಸ್ಥಿತಿ ಹಾಗೂ ಮುಂಗಾರು ಪೂರ್ವ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್, ಜುಲೈ ಹಾಗೂ ಅಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆ ಆಗುವ ಸಂಭವ ಇದೆ. ನಗರ ಪ್ರದೇಶಗಳಲ್ಲಿ ಮಳೆನೀರು ಸರಾಗವಾಗಿ ಹರಿಯುವಂತೆ ಚರಂಡಿ ಹಾಗೂ ರಾಜಕಾಲುವೆಗಳನ್ನು ಸ್ವಚ್ಚತೆ ಮಾಡಬೇಕು. ಯಾವುದೇ ಕಾರಣಕ್ಕು ರಸ್ತೆ ಹಾಗೂ ಮನೆಗಳ ಒಳಗೆ ಮಳೆನೀರು ನುಗ್ಗದಂತೆ ನೋಡಿಕೊಳ್ಳಬೇಕು ಎಂದರು.ಪ್ರವಾಹ ಪರಿಸ್ಥಿತಿ ಉಂಟಾದರೆ ಯಾವುದೇ ರೀತಿಯ ಜೀವ ಹಾನಿಯಾಗದಂತೆ ತಡೆಯಲು ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸ್ಥಳಗಳ ಬಗ್ಗೆ ಮಾಹಿತಿ ಪಡೆದು ಮುನ್ನೆಚ್ಚರಿಕೆಯಾಗಿ ಅಲ್ಲಿ ಅಗತ್ಯ ಸಿದ್ಧತೆಗಳಾದ ದೋಣಿ,…
ಚಿಮ್ಮಡ: ಪರೀಕ್ಷಾ ಸಮಯದಲ್ಲಿ ಪುಸ್ತಕ ಹಿಡಿಯುವುದಕ್ಕಿಂತ ಸತತ ಅಧ್ಯಯಣದಿಂದಲೇ ಸಾಧನೆ ಮಾಡಲು ಸಾಧ್ಯವೆಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಅಭೀವೃದ್ದಿ ಸಮೀತಿ ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಾಧಕರ ಸತ್ಕಾರ” ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಡು ಬಡವರ ಮಕ್ಕಳೇ ರಾಜ್ಯದಾದ್ಯಂತ ಸಾಧನೆ ಮಾಡಿದ್ದು ಅದರಲ್ಲು ವಿದ್ಯಾರ್ಥಿನಿಯರೇ ಹೆಚ್ಚಿನ ಪ್ರಮಾಣದಲ್ಲಿ ರ್ಯಾಂಕ ಪಡೆದದ್ದು ಸೋಜಿಗದ ಸಂಗತಿ ಏಕೆಂದರೆ ವಿದ್ಯಾರ್ಥಿಗಳೂ ಸಮ ಪ್ರಮಾಣದಲ್ಲಿ ವಿದ್ಯಾರ್ಜನೆ ಮಾಡಿದರೂ ರ್ಯಾಂಕ್ ಪಟ್ಟಿಯಲ್ಲಿ ಬರುತ್ತಿಲ್ಲ ಇದು ಪಾಲಕರು ಎಚ್ಚೆತ್ತುಕೊಳ್ಳಬೇಕಾದ ಸಂಗತಿ. ತಮ್ಮ ಮಕ್ಕಳು ಅಭ್ಯಾಸದ ಸಮಯವನ್ನು ಮೊಬೈಲ್, ದುಶ್ಚಟಗಳತ್ತ ಬಳಸುತಿದ್ದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಶ್ರೀಮತಿ ಎಂ.ಎಸ್. ಜಿಟ್ಟಿ ಮಾತನಾಡಿ ಹಲವಾರು ಕೊರತೆಗಳ ನಡುವೇಯೂ ನಮ್ಮ ಶಾಲೆ ಖಾಸಗೀ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವುದು ಸಂತೋಷದ ಸಂಗತಿ ಎಂದರುರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿದರು.ಎಸ್ಡಿಎಂಸಿ…
ವಿಜಯಪುರ: ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ೩೩ನೇ ಪುಣ್ಯತಿಥಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀಮತಿ ಇಂದಿರಾ ಗಾಂಧಿಯವರ ನಿಧನದ ನಂತರ ದೇಶದ ಪ್ರಧಾನ ಮಂತ್ರಿ ಜವಾಬ್ದಾರಿ ವಹಿಸಿಕೊಂಡ ರಾಜೀವ ಗಾಂಧಿಯವರು ಶ್ರೀ ರಾಜೀವ ಗಾಂಧಿಯವರು ಪಂಚಾಯತ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇಂದು ನಾವೆಲ್ಲರೂ ಬಳಸುತ್ತಿರುವ ಮೊಬೈಲ್ ಫೋನ ಪರಿಚಯಿಸಿದ್ದಲ್ಲದೆ ಕಂಪ್ಯೂಟರ್ಗಳನ್ನು ಬಳಸಲು ಕಾರಣೀಭೂತರಾದರು. ಅದರಂತೆ ೧೮ ವರ್ಷದ ಯುವಕ ಯುವತಿಯರಿಗೆ ಮತದಾನ ಹಕ್ಕನ್ನು ನೀಡಿದರು. ದೇಶಕ್ಕೆ ಅವರ ಕೊಡುಗೆ ಅಪಾರವಾದದ್ದು ಹಾಗೂ ಮಾದರಿಯಾಗಿದೆ. ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ಟಿಟಿಇ ಉಗ್ರರ ಕೃತ್ಯಕ್ಕೆ ಬಲಿಯಾದರು. ಅವರ ಆದರ್ಶಗಳು, ದೇಶದ ಜನತೆಯ ಬಗೆಗಿನ ಕಾಳಜಿ ಅವಿಸ್ಮರಣೀಯವಾಗಿದೆ ಹಾಗೂ ಅವರೊಬ್ಬ ದೂರದೃಷ್ಠಿಯುಳ್ಳ ನಾಯಕರಾಗಿದ್ದರು ಎಂದು ಹೇಳಿದರು.ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಜಿಲ್ಲಾ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ಸರ್ವೇ ಜನೋ ಸುಖಿನೋ ಭವಂತು..ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ..ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಜೀವನಮಟ್ಟವನ್ನು ನಿರ್ಧರಿಸುತ್ತದೆ. ಅಪರೂಪದ ಕೆಲವು ಆಕಸ್ಮಿಕ ಸಂದರ್ಭಗಳಲ್ಲಿ ಮಾತ್ರ ಇದಕ್ಕೆ ಅಪವಾದ ಇರಬಹುದು..ಧರ್ಮದ ಆಧಾರದ ಮೇಲೆ ದೇಶದ ನಿರ್ಮಾಣ, ಭಯೋತ್ಪಾದನೆಗೆ ಸಹಕಾರ, ಕೋವಿಡ್ ವೈರಸ್ ದಾಳಿ, ಅಮೆರಿಕ ದೇಶದ ವಿರೋಧದ ಕಾರಣದಿಂದ ಅವರ ನೆರವಿನ ಖೋತಾ, ದೇಶದ ರಾಜಕಾರಣಿಗಳ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮುಂತಾದ ಅನೇಕ ಕಾರಣಗಳಿಗಾಗಿ ಅದು ಈ ಪರಿಸ್ಥಿತಿ ತಲುಪಿರಬಹುದು..ಇದು ಸಹ ಶಾಶ್ವತವೇನು ಅಲ್ಲ. ದೇಶ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆದರೆ ಮತ್ತೆ ಕೆಲವೇ ವರ್ಷಗಳಲ್ಲಿ ಸುಸ್ಥಿತಿಗೆ ಮರಳಬಹುದು. ಹಾಗಾಗಲಿ ಎಂದು ಶುಭ ಹಾರೈಸುತ್ತಾ..ಮುಖ್ಯವಾಗಿ ಭಾರತದ ಕೆಲವು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಪಾಕಿಸ್ತಾನದ ಆ ದುಸ್ಥಿತಿಯನ್ನು…
