Subscribe to Updates
Get the latest creative news from FooBar about art, design and business.
Author: editor.udayarashmi@gmail.com
“ಸಿನಿ ತಿರುಳು” – ವೀಣಾ ಹೇಮಂತಗೌಡ ಪಾಟೀಲ್. ಮುಂಡರಗಿ-ಗದಗ ಉತ್ತರ ಭಾರತದ ಸೂರಜ್ ಮುಖಿ ಎಂಬ ಗ್ರಾಮದ ಯುವಕ ದೀಪಕ್ ಕುಮಾರ್ ಮದುವೆಯಾಗಿ ತನ್ನ ಪತ್ನಿ ಪೂಲ್ ಕುಮಾರಿ ಯೊಂದಿಗೆ ತನ್ನೂರಿಗೆ ಮರಳಿ ಬರುತ್ತಿದ್ದನು. ರೈಲಿನಲ್ಲಿ ಮತ್ತೂ ಎರಡು ಜೋಡಿ ವಧು ವರರು ಇದ್ದು, ಇಳಿ ಸಂಜೆಯ ಹೊತ್ತಿನಲ್ಲಿ ಎಲ್ಲರೂ ನಿದ್ರಾವಶರಾಗಿದ್ದಾಗ ಮುಸುಗು ಹಾಕಿಕೊಂಡು ಮಲಗಿದ್ದ ವಧುಗಳಲ್ಲಿ ತನ್ನ ಪತ್ನಿ ಎಂದು ಬೇರೊಬ್ಬ ಹೆಣ್ಣುಮಗಳನ್ನು ಎಬ್ಬಿಸಿ ಕರೆದುಕೊಂಡು ಬಂದದ್ದು ಮನೆಗೆ ಬಂದ ನಂತರ ಎಲ್ಲರಿಗೂ ನಡೆದ ತಪ್ಪಿನ ಅರಿವಾಗುತ್ತದೆ. ಈತನ ಜೊತೆಗೆ ಬಂದ ಮಹಿಳೆ ತನ್ನ ಉದ್ದೇಶ ಸಾಧನೆಗಾಗಿ ಬಂದಿದ್ದು ಆಕೆಯ ನಡಾವಳಿ ತುಸು ಸಂಶಯದಿಂದ ಕೂಡಿರುತ್ತದೆ. ಇತ್ತ ಆತನ ಪತ್ನಿ ಫೂಲ್ ಕುಮಾರಿ ಕೊನೆಯ ಸ್ಟೇಷನ್ ನಲ್ಲಿ ಇಳಿದು ಜೊತೆಯಲ್ಲಿ ತನ್ನ ಪತಿ ಇಲ್ಲದೆಯಿದ್ದದ್ದು ನೋಡಿ ಗಾಬರಿಯಾಗುತ್ತಾಳೆ. ಸ್ಟೇಷನ್ ನಲ್ಲಿ ತನಗೆ ಪರಿಚಯವಾದ ಅನಾಥ ವ್ಯಕ್ತಿಯ ಜೊತೆಗೆ ಹೋಗಿ ಸ್ಟೇಷನ್ ಮಾಸ್ಟರ್ ರಲ್ಲಿ ಆಕೆ ದೂರನ್ನು ನೀಡುತ್ತಾಳೆ. ಸ್ಟೇಷನ್ ನಲ್ಲಿ…
“ವಿದ್ಯಾರ್ಥಿ ನಿಧಿ”- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಮೂರ್ಖನ ಸಹವಾಸ ಅಕ್ಬರ್ ಬಾದಶಹನ ಮನಸ್ಸಿನಲ್ಲಿ ‘ಮೂರ್ಖರ ಜೊತೆಗೆ ಕೆಲಸ ಮಾಡುವ ಸಂದರ್ಭ ಬಂದರೆ ಏನು ಮಾಡಬಹುದು?’ ಎಂಬ ಚಿಂತೆಯು ಸದಾ ಕೊರೆಯುತ್ತಿತ್ತು. ಈ ವಿಚಾರವನ್ನು ಅಕ್ಬರನು ಮರೆಯಲು ಸತತವಾಗಿ ಪ್ರಯತ್ನಿಸುತ್ತಿದ್ದರೂ ಬಿಡದೇ ಪ್ರಶ್ನೆಯು ಈತನನ್ನು ಕಾಡುತ್ತಿತ್ತು. ಒಂದು ದಿನ ಅಕ್ಬರ್ ದರ್ಬಾರನ್ನು ಕರೆದಿದ್ದ, ಆಗ ಅಕ್ಬರನಿಗೆ ಆತನ ಚಿಂತೆಯೂ ನೆನಪಾಯಿತು. ಆಗ ತನ್ನ ಸಭೆಯಲ್ಲಿ ‘ಮೂರ್ಖರ ಜೊತೆಯಲ್ಲಿ ಕೆಲಸ ಮಾಡುವ ಸಂದರ್ಭ ಬಂದರೆ ಏನು ಮಾಡಬೇಕು’ ಎಂದು ಎಲ್ಲರನ್ನು ಕೇಳಿದ. ಅಕ್ಬರನ ಪ್ರಶ್ನೆಗೆ ಬೀರಬಲ್ಲನು ಮುಗುಳ್ನಕ್ಕು ಮೌನವಾಗಿ ಕುಳಿತುಕೊಂಡು ಬಿಟ್ಟ.ಈ ಪ್ರಶ್ನೆಯನ್ನು ಅಕ್ಬರ್ ಒಬ್ಬ ಪಂಡಿತನ ಬಳಿ ಕೇಳುತ್ತಾನೆ, ಆಗ ಆ ಪಂಡಿತನು ಅಂತಹ ಮೂರ್ಖರಿದ್ದರೆ ಅವರ ತಲೆ ಬೋಳಿಸಿ ಕತ್ತೆಯ ಮೇಲೆ ಮೆರವಣಿಗೆ ಮಾಡಬೇಕು ಎಂದು ಉತ್ತರಿಸುತ್ತಾನೆ. ಇನ್ನೊಬ್ಬ ಪಂಡಿತ ಮಹಾರಾಜಾ, ಅಂತಹ ಮೂರ್ಖನ ಸಹವಾಸವಾದರೆ ಆತನ ಮುಖಕ್ಕೆ…
ಬೆಂಗಳೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್’ಡಿ.ದೇವೇಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಿದೆ. ರಾಜ್ಯದಲ್ಲಿ ಕೊಲೆ, ಕಳ್ಳತನ,ದರೋಡೆ ಹೆಚ್ಚಾಗಿದೆ. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂದು ಕಿಡಿಕಾರಿದರು.ಪೆನ್ಡ್ರೈವ್ ವಿಚಾರದಲ್ಲಿ ದೇವರಾಜೇಗೌಡ ಸತ್ಯವನ್ನೇ ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಪ್ರೈನ್ಡ್ರೈವ್ ಬಿಡುಗಡೆ ಮಾಡಿದರು ಎಂದು ಸುಳ್ಳು ಹೇಳುವುದಕ್ಕಾಗಿ ಡಿ.ಕೆ.ಶಿವಕುಮಾರ್ ಅಮಿಷ ಒಡ್ಡಿರುವ ವಿಚಾರದಲ್ಲಿ ಸತ್ಯವಿದೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಬಂಧನವಾಗಿದೆ.…
ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ: ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 1 ವರ್ಷಗಳು ಕಳೆದಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಪೂರೈಸಿದ್ದು ವರುಷ ಮಾತ್ರ. ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ವ್ಯಂಗ್ಯವಾಡಿದ್ದಾರೆ.ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ: ನಿರುದ್ಯೋಗದ ಭವಣೆ ಹೆಚ್ಚಿತು. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು, ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು, ದುಳಿದವರ ಅಭಿವೃದ್ಧಿ, ಹಿಂದುಳಿಯಿತು.ಬೆಳೆಯೆಲ್ಲ ಒಣಗಿತು, ರೈತರ ಬಾಳು ಗೋಳಾಯಿತು ಎಂದು ಟೀಕಿಸಿದ್ದಾರೆ.ರಾಜ್ಯ ಬಿಜೆಪಿ ನಾಯಕರು ಇಂದು ಸರ್ಕಾರದ ವಿರುದ್ಧ ಆರೋಪ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ…
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ: ಸಿಎಂ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ 52,009 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬುವುದು ಬಿಜೆಪಿಯ ಅಪ್ಪಟ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ, “ನಮ್ಮ ಸರ್ಕಾರ ಬಂದು ಇಂದಿಗೆ ಒಂದು ವರ್ಷ ತುಂಬಿದೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಂಭ್ರಮಾಚರಣೆ ನಡೆಸಲು ಆಗಿಲ್ಲ. ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು” ಎಂದರು.“ಅಭದ್ರತೆಯ ಆತಂಕ ಇರಲೇಬಾರದೆಂದು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಟ್ಟಿದ್ದೀರಿ. ರಾಜ್ಯದ ಮತದಾರರ ಪ್ರಜ್ಞಾವಂತಿಕೆ, ಅವರ ವಿಶ್ವಾಸವನ್ನು ನಾವು ಕಳೆದುಕೊಳ್ಳುವುದಿಲ್ಲ” ಎಂದು ತಿಳಿಸಿದರು.“ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ…
ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಚತಾ ಸಿಬ್ಬಂದಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ.ಡಿಸೆಂಬರ್ 21, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.ಮೀಸಲಾತಿ ನಿಯಮಗಳು ಹೀಗಿವೆ..ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.ಪ್ರತಿವರ್ಷ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿ ಸಿಬ್ಬಂದಿಯನ್ನು ಪಡೆಯಲು ಷರತ್ತುಗಳನ್ನು ನಮೂದಿಸಬೇಕು.ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು.ಟೆಂಡರ್ ಅಂಗೀಕರಿಸುವ ಪ್ರಾಧಿಕಾರ ಕಡ್ಡಾಯವಾಗಿ…
11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ | ನಾಮಪತ್ರ ಸಲ್ಲಿಸಲು ಜೂ.3 ಕೊನೆಯ ದಿನ | ಜೂ.13ರಂದು ಸಂಜೆ 5ಕ್ಕೆ ಮತ ಎಣಿಕೆ ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್ 13ರಂದು ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚು.ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.ವಿಧಾನಸಭೆಯಿಂದ ವಿಧಾನಪರಿಷತ್ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್.ಬೋಸರಾಜ್, ಕೆ.ಗೋವಿಂದರಾಜ್, ಡಾ.ತೇಜಶ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿ ಕುಮಾರ್, ಎಸ್.ರುದ್ರೇಗೌಡ, ಎಚ್.ಹರೀಶ್ ಕುಮಾರ್, ಬಿ.ಎಂ.ಫಾರೂಕ್ ಅವರ ಅವಧಿ ಕೊನೆಗೊಳ್ಳಲಿದೆ. ಈ ಹಿನ್ನೆಲೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.-ಮೇ 27ರಂದು ಚುನಾವಣಾ ಅಧಿಸೂಚನೆ-ಜೂ.…
೫ ನೇ ದಿನಕ್ಕೆ ಕಾಲಿಟ್ಟ ಜಂಬಗಿ(ಆ), ಹುಣಶ್ಯಾಳ(ಮಾದಾಳ) ಕೆರೆ ನೀರು ತುಂಬಿಸುವ ಸತ್ಯಾಗ್ರಹ ವಿಜಯಪುರ : ಜಂಬಗಿ (ಆ), ಮಾದಾಳ, ಹುಣಶ್ಯಾಳ ಕೆರೆಗೆ ನೀರು ಹರಿಸಬೇಕೆಂದು ಕಳೆದ ೪ ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹವು ಸೋಮವಾರ ೫ನೇ ದಿನಕ್ಕೆ ಕಾಲಿಡಲಾಗಿದೆ. ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಕೆರೆ ನೀರು ತುಂಬದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರೊಂದಿಗೆ ಹೋರಾಟ ನಡೆಸುತ್ತಿದ್ದು, ಕೂಡಲೇ ನೀರು ಹರಿಸಬೇಕು ಇಲ್ಲ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.ರೈತ ಸಂಘದ ವಿಜಯಪುರ ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ ಅವರು ಮಾತನಾಡುತ್ತಾ ಜಂಬಗಿ ಕೆರೆಗೆ ನೀರು ತುಂಬಿಸಬೇಕು, ಇಲ್ಲವಾದಲ್ಲಿ ಬುಧವಾರದಂದು ನೂರಾರು ರೈತರೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಕಿ ಜಂಬಗಿ ಕೆರೆಗೆ ನೀರು ತುಂಬಿಸಬೇಕು ಎಂದು ಆಗ್ರಹಿಸುತ್ತೇವೆ. ನೀರು ಹರಿಸುವವರೆಗೂ ಅಲ್ಲಿಯೇ ಕುಳಿತು ಮಕ್ಕಳು, ಮಹಿಳೆಯರು ಹಾಗೂ ಧನಕರುಗಳೊಂದಿಗೆ ಧರಣಿ…
ಚಡಚಣ: ಇದೇ ೨೨ರಿಂದ ಮೇ ೨೪ ರ ಶುಕ್ರವಾರದವರೆಗೆ ರೇವತಗಾಂವ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಜಾತ್ರಾ, ಮಹಾದ್ವಾರ ಕಳಸಾರೋಹಣ ಹಾಗೂ ಸುಮಂಗಲೆಯರ ಕುಂಭ ಮೇಳದೊಂದಿಗೆ ಕಾಶೀ ಜಗದ್ಗುರುಗಳ ಸಾರೋಟ ಉತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಬುಧವಾರ ಬೆಳಗ್ಗೆ ೧೦ ಗಂಟೆಗೆ ಟ್ರ್ಯಾಕ್ಟರ್ ಟ್ರೇಲರ್ ಎಳೆಯುವ ಸ್ಪರ್ಧೆ ನಡೆಯಲಿದೆ. ಸಾಯಂಕಾಲ ೦೬ ಗಂಟೆಗೆ ನಂದಿಧ್ವಜ ಮೆರವಣಿಗೆಯು ಕೃಷ್ಣಪ್ಪ ಹೂಗಾರರವರ ಮನೆಯಿಂದ ವಿವಿಧ ವಾದ್ಯವೈಭವಗಳೊಂದಿಗೆ ಹೋರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ತಲುಪುವುದು. ನಂತರ ರಾತ್ರಿ ೦೯ ಗಂಟೆಗೆ ಚಿತ್ರ ವಿಚಿತ್ರವಾದ ಮದ್ದು ಸುಡುವುದು. ರಾತ್ರಿ ೧೦ ಗಂಟೆಗೆ ಪ್ರಸಾದ ಕಡಾಯಿಗೆ ನೀರು ಹಾಕುವ ಕಾರ್ಯಕ್ರಮ ಜರುಗುವುದು.ಗುರುವಾರ ನಸುಕಿನ ಜಾವ ೦೫ ಗಂಟೆಗೆ ಶ್ರೀ ರೇವಣಸಿದ್ದೇಶ್ವರರಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಭಕ್ತರಿಂದ ದೀರ್ಘದಂಡ ನಮಸ್ಕಾರವು ನಡೆಯಲಿದೆ. ನಂತರ ಭಕ್ತರಿಗೆ ಮಹಾಪ್ರಸಾದ ವಿತರಣೆ. ಮುಂಜಾನೆ ೧೦:೩೦ ಕಾಶೀ ಜಗದ್ಗುರುಗಳಾದ ಡಾ. ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯರ ಸುಮಂಗಲೆಯರ ಕುಂಭ…
