Author: editor.udayarashmi@gmail.com

೩ ನೇ ದಿನಕ್ಕೆ ಕಾಲಿಟ್ಟ ಜಂಬಗಿ(ಆ), ಹುಣಶ್ಯಾಳ ಕೆರೆ ನೀರು ತುಂಬಿಸುವ ಸತ್ಯಾಗ್ರಹ ವಿಜಯಪುರ: ಜಿಲ್ಲೆಯ ೨ನೇ ಅತೀ ದೊಡ್ಡ ಕೆರೆ ಜಂಬಗಿ ಆಗಿದ್ದು, ಈ ವರ್ಷ ಭೀಕರ ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಕೆರೆ ನೀರು ತುಂಬುವ ಯೋಜನೆಯಡಿ ತುಂಬಿಸಲು ಈಗಾಗಲೇ ಎರಡು ಬಾರಿ ನೀರು ಹರಿಸಿ ಈಗ ಮೂರನೇ ಬಾರಿ ನೀರು ಹರಿಸುತ್ತಿದ್ದರೂ ಜಂಬಗಿ ಕೆರೆಗೆ ಒಂದು ಹನಿ ನೀರು ಕೂಡ ಹರಿಸದೇ, ಕಳೆದ ೧೦ ವರ್ಷಗಳಿಂದ ಈ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ಈ ಭಾಗದ ಕೆರೆ ತುಂಬಿಸಬೇಕು ಎಂದು ಮಲ್ಲಿಕಾರ್ಜುನ ಸ್ವಾಮಿಜಿ ಆಗ್ರಹಿಸಿದರು.ಶನಿವಾರ ಅವರು ಹೋರಾಟಕ್ಕೆ ಬೆಂಬಲ ನೀಡಿ ಮಾತನಾಡಿದರು.ಈ ಭಾಗದ ರೈತರಿಗೆ ನ್ಯಾಯ ಸಿಗಬೇಕಾದರೆ ಕೆರೆ ನೀರು ತುಂಬುವ ಯೋಜನೆಯಡಿ ಜಂಬಗಿ, ಹುಣಶ್ಯಾಳ ಮಾದಾಳ ಕೆರೆಗೆ ನೀರು ಹರಿಸಬೇಕು, ಇಲ್ಲವಾದಲ್ಲಿ ಈ ಭಾಗದ ಎಲ್ಲಾ ರೈತರು, ಮಹಿಳೆಯರು, ಮಕ್ಕಳು, ಜಾನುವಾರುಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಿ ನೀರು ಹರಿಸುವವರೆಗೂ ಅಲ್ಲಿಯೇ ಸತ್ಯಾಗ್ರಹ ಮಾಡಬೇಕಾಗುತ್ತದೆ‌.…

Read More

ಕೆಂಭಾವಿ ವಾರ್ಡ್ ನಂಬರ್ 13ರಲ್ಲಿ ನೀರಿನ ಸಮಸ್ಯೆ | ಸ್ಪಂದಿಸದ ಅಧಿಕಾರಿಗಳು ಸುರಪುರ: ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ನೀರಿಗಾಗಿ ನಿತ್ಯ ಅಲೆದಾಡುವ ಪರಿಸ್ಥಿತಿರೊದಗಿದ್ದು, ವಾರ್ಡ್ ನಂಬರ್ 13 ಕುಂಬಾರ ಓಣಿಯ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ.ಈ ಕುರಿತು ಅದೆಷ್ಟೋ ಬಾರಿ ಮುಖ್ಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಸಾರ್ವಜನಿಕರಿಗೆ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಮಾಡಿಸೋಣ, ಮಾಡುತ್ತೇವೆ ಎಂದು ಹೇಳಿ ಕಳಿಸಿಕೊಡುತ್ತಾರೆ ಮತ್ತು ಹೇಳಿದ್ದೇವೆ ಮಾಡ್ತಾರೆ ಅಂತ ಹೇಳಿ ಇಲ್ಲ ಸಲ್ಲದ ನೆಪ ಹೇಳಿ ಕಳಿಸುತ್ತಾರೆ ಎಂಬುದು ನಾಗರಿಕರ ದೂರು.ಕುಂಬಾರ್ ಓಣಿ ಸಾರ್ವಜನಿಕರು ಫೋನ್ ಮಾಡಿದರೂ ಕೂಡ ಫೋನ್ ರಿಸೀವ್ ಮಾಡದ ಮುಖ್ಯ ಅಧಿಕಾರಿ ಸಾರ್ವಜನಿಕರು ಈ ರೀತಿಯಾಗಿ ಸಮಸ್ಯೆ ತೋಡಿಕೊಂಡರೂ ಅದಕ್ಕೂ ತಮಗೂ ಸಂಬಂಧವೇ ಇಲ್ಲದೆ ಇರೋ ತರ ವರ್ತಿಸುತ್ತಾರೆ ಎಂದು ಮುಖ್ಯಾಧಿಕಾರಿಗೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.ಬೋರ್ವೆಲ್ ರಿಪೇರಿಗಾಗಿ ಇದನ್ನು ಸರಿ ಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಮುಂದೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ವಾರ್ಡಿನ ಜನರು ಎಚ್ಚರಿಕೆ ನೀಡಿರುತ್ತಾರೆ.

Read More

ನ್ಯಾಯಾಧೀಶ ಸಂತೋಷ ಎಸ್ ಕುಂದರ್ ರಿಗೆ ಕಾವ್ಯಾರ್ಪಣೆ ಮೂಲಕ ಬೀಳ್ಕೊಡುಗೆ ವಿಜಯಪುರ: ಸೊನ್ನೆಯಿಂದಲೇ ಪರಿಶ್ರಮಿಸಿ ಆರಂಭಿಸಿದ ಕಾರ್ಯ ನೂರಕ್ಕೆ ನೂರು ಯಶಸ್ವಿ ಆಗಲು ಸಾಧ್ಯವಾಗುತ್ತದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಸಂತೋಷ ಎಸ್ ಕುಂದರ್ ಅವರು ಹೇಳಿದರು.ನ್ಯಾಯಾಧೀಶರಾದ ಕುಂದರ ಅವರು ವರ್ಗಾವಣೆ ಆಗಿರುವ ನಿಮಿತ್ಯ ಅವರಿಗೆ ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರೊಬೊನೊ, ಪೆನಲ್, ಡಿಫೆನ್ಸ್ ಕೌಂಸಿಲ್, ಮದ್ಯಸ್ಥಗಾರ ವಕೀಲರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಕಾವ್ಯಾರ್ಪಣೆ ಮತ್ತು ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಸಮಾಜದಲ್ಲಿರುವ ವಿವಿಧ ಕಾಯಕ ನಿರತರು ತಮ್ಮ ಕಾರ್ಯವನ್ನು ಪ್ರಮಾಣಿಕವಾಗಿ ನೂರಕ್ಕೆ ನೂರರಷ್ಟು ಅದರಲ್ಲೇ ತಲ್ಲೀನರಾಗಿ ಶ್ರಮಿಸಿದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ, ನಾವು ಮಾಡುವ ಕೆಲಸ ಸಮಾಜಕ್ಕೆ ದಾರಿ ದೀಪವಾಗಬೇಕು ಎಂದ ಅವರು ವಿಜಯಪುರದ ಜನರ ಹೃದಯ ವಿಶಾಲತೆ ಮೆಚ್ಚುವಂತಹದ್ದು, ಇಲ್ಲಿಯ ಉತ್ತಮ ಸಂಸ್ಕಾರ ಶ್ಲಾಘನಿಯ…

Read More

ವಿದ್ಯಾರ್ಥಿ, ಪಾಲಕರಿಗೆ ಅನುಕೂಲವಾಗಲು ಹೆಲ್ಪ್ ಲೈನ್ ಆರಂಭಿಸಲು ಸರ್ಕಾರಕ್ಕೆ ಮನವಿ ವಿಜಯಪುರ: ಜಿಲ್ಲೆಯಲ್ಲಿ ಡೊನೇಷನ್ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡೊನೇಷನ್ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಧ್ಯಾರ್ಥಿ, ಪಾಲಕರಿಗೆ ಅನುಕೂಲವಾಗಲು ಸರ್ಕಾರ ಕೊಡಲೇ ಹೆಲ್ಪ್ಲೈನ್ ಆರಂಭಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಶನಿವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.ಮನವಿ ಸಲ್ಲಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ, ಜಿಲ್ಲೆಯಲ್ಲಿ ದುಡ್ಡು ಇದ್ದವರಿಗೆ ಮಾತ್ರ ವಿದ್ಯಾಭ್ಯಾಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಪ್ರಕಟವಾಗಿ ಮುಂದಿನ ಶಿಕ್ಷಣಕ್ಕೆ ಅಣಿಯಾಗುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಡೊನೇಶನ್ ಹಾವಳಿ ಎದುರಿಸಬೇಕಾಗಿದೆ. ಇದರಿಂದ ಎಷ್ಟೋ ಜನ ವಿದ್ಯಾರ್ಥಿಗಳ ಶಿಕ್ಷಣದ ಕನಸು ಕಮರುತ್ತಿದೆ. ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕ ಪಡೆದು ಉತ್ತಮ ಶಿಕ್ಷಣ ನೀಡಬೇಕಾದ ವಿದ್ಯಾಸಂಸ್ಥೆಗಳು ಸರಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಹಣ ವಸೂಲಿ ಮಾಡುತ್ತಿವೆ. ಡೊನೇಷನ್ ಹೆಸರಿನಲ್ಲಿ ಹಗಲು ದರೋಡೆ…

Read More

ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಇರುತ್ತದೆ. ಸೂಕ್ತ ವೇದಿಕೆ ಸಿಕ್ಕಾಗ ಅದು ಹೊರಗಡೆ ಬರುತ್ತದೆ. ನಾವು ಯಾವ ಶಾಲೆಯಲ್ಲಿ ಓದುತ್ತೇವೆ ಎನ್ನುವುದು ಮುಖ್ಯವಲ್ಲ. ಕಠಿಣ ಪರಿಶ್ರಮವೇ ನಮ್ಮ ಸಾಧನೆಗೆ ಮಾರ್ಗವಾಗುತ್ತದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್‌ರವರು ಹೇಳಿದರು.ಶನಿವಾರದಂದು ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಮಾತನಾಡಿದ ಅವರು. ಎಲ್ಲಿಯೇ ಓದಿದರೂ ಶ್ರದ್ಧೆಯಿಂದ ಅಭ್ಯಾಸ ಮಾಡಿ, ಮುಂದೆ ಬರಬೇಕು. ಕಲಿತ ಶಾಲೆ, ತಂದೆ-ತಾಯಿಯರ ಕೀರ್ತಿ ಬೆಳಗುವ ಮಕ್ಕಳು ನಾವಾಗಬೇಕು. ಸತತ ಪ್ರಯತ್ನ ಕಠಿಣ ಪರಿಶ್ರಮ, ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಹಾಗೂ ಸಾಧಿಸಬೇಕೆಂಬ ಛಲವೊಂದಿದ್ದರೆ ಎಂತಹ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.ಈ ವೇಳೆಯಲ್ಲಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಮಾತನಾಡುತ್ತ. ನಮ್ಮ ಜೀವನದಲ್ಲಿ ಎದುರಾಗುವ ಎಲ್ಲ ಸಂಕಷ್ಟ, ನೋವು-ನಲಿವು, ಅಡೆತಡೆ, ತೊಂದರೆ, ಸಮಸ್ಯೆ ಮತ್ತು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಸೋಲೇ ಗೆಲುವಿನ ಮೂಲ…

Read More

ಇಂಡಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.ಅನ್ಯಕೋಮಿನ ಯುವಕ ಸೋಹೇಲ್ ಹೊನಮುರಗಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಮಹಾರಾಷ್ಟ್ರಕ್ಕೆ13-05-2024 ಕರೆದುಕೊಂಡು ಹೋಗಿ 17-05-2024 ವಿಜಯಪುರ ಜಿಲ್ಲೆಗೆ ಸೋಹೇಲ್ ಬಿಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಆರೋಪಿ ಸೋಹೇಲ್ ವಿರುದ್ಧ ಕಲಂ 366, 376(2) (ಐ), ಐಪಿಸಿ & 4, 6, 12, pocso act 2012 ಅಡಿಯಲ್ಲಿ ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಇಂಡಿ: ಪರಿಶುದ್ಧವಾದ ಪವಿತ್ರವಾದ ಜೀವನ ರೂಪಿಸಿಕೊಳ್ಳಲು ಆಧ್ಯಾತ್ಮ ಜ್ಞಾನದ ಅರಿವು ಬೇಕು. ಆಧ್ಯಾತ್ಮದ ಜ್ಞಾನ ಬದುಕನ್ನು ವಿಕಾಸಗೊಳಿಸಿ ಸನ್ಮಾರ್ಗದತ್ತ ಕರೆತರಲು ಸಹಕಾರಿಯಾಗುತ್ತದೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಪಾಲಿಸಬೇಕಿದೆ. ಇಂದು ಮಾನವ ಧಮಧ ಉಳಿದರೆ ಎಲ್ಲ ಧರ್ಮಗಳು ಉಳಿಯಲು ಸಾದ್ಯ ಎಂದು ದಿವ್ಯ ಸಾನಿಧ್ಯ ವಹಿಸಿದ ಖೇಡಗಿ ವಿರಕ್ತಮಠದ ಶಿವಬಸವ ರಾಜೇಂದ್ರ ಶ್ರೀಗಳು ಹೇಳಿದರು.ಅವರು ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಗುಪ್ತಾಯಿದೇವಿ ಜಾತ್ರಾ ಮಹೋತ್ಸವ ಮತ್ತು ನೂತನವಾಗಿ ನಿರ್ಮಿಸಿದ ಭವ್ಯಗೋಪುರ ಕಳಸಾರೋಹಣ ಕಾರ್ಯಕ್ರಮದ ಸಾನಿದ್ಯ ವಹಿಸಿ ಮಾತನಾಡಿದರು.ಮಳೆ ಬೆಳೆ ಚೆನ್ನಾಗಿ ಬಂದು ನಾಡು ಸುಭೀಕ್ಷವಾಗಬೇಕಾದರೆ ಪ್ರತಿಯೊಬ್ಬರು ಧರ್ಮ ಮಾರ್ಗದಲ್ಲಿ ಸಾಗಬೇಕು ಎಂದರು.ದೇವಸ್ಥಾನ ಸಮಿತಿಯ ಸತೀಶ ಚಾಂದಕವಟೆ ಮಾತನಾಡಿ ಮನಸ್ಸು ಶುದ್ದವಾಗಿಟ್ಟುಕೊಳ್ಳಬೇಕು. ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆಯಾದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುತ್ತದೆ. ದೇಗುಲಗಳು ಮನಸ್ಸಿಗೆ ನೆಮ್ಮದಿ ನೀಡುವ ಸ್ಥಳ ಎಂದರು.ದೇವಸ್ಥಾನ ಸಮಿತಿಯ ಧರ್ಮಣ್ಣ ಮರಗೂರ, ಕಾಶಿನಾಥ ಲಚ್ಯಾಣ, ಶಿವಲಿಂಗ ಲಚ್ಯಾಣ, ದೀಲಪ್ಪ ಮರಗೂರ, ಬಸವರಾಜ ಹೆಗೊಂಡೆ, ಶಿವರಾಯ…

Read More

ತಂಪೆರೆದ ಮಳೆ | ಕೃಷಿ ಚಟುವಟಿಕೆ ಚುರುಕು | ಉತ್ತಮ ಮಳೆ-ಬೆಳೆಯ ನಿರೀಕ್ಷೆ – ಇಲಾಹಿ ಇ. ಜಮಖಂಡಿಚಿಮ್ಮಡ: ಕಳೆದ ನಾಲ್ಕು ದಿನಗಳಲ್ಲಿ ಸುರಿದ ಮಳೆಯಿಂದ ಕೆಂಡದಂತಾಗಿದ್ದ ಈ ಭಾಗದ ವಾತಾವರಣ ತಂಪೆರೆದಂತಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಖುಷಿಯಿಂದಲೇ ಅವರು ಬಿತ್ತನೆ ಕಾರ್ಯಕ್ಕೆ ಅಣಿಯಾಗಿದ್ದಾರೆ.ಕಳೆದ ಒಂದು ತಿಂಗಳಿನಿಂದ ಜಮೀನಗಳನ್ನು ಹದಮಾಡಿ ಗದ್ದೆಗಳಲ್ಲಿ ತಿಪ್ಪೆಗೊಬ್ಬರವನ್ನು ಮಿಶ್ರಣಗೊಳಿಸಿಕೊಂಡು ಮಳೆಗಾಗಿ ಜಾತಕ ಪಕ್ಷಿಯಂತೆ ಕಾಯುತಿದ್ದ ರೈತರಿಗೆ ಕಳೆದ ಮಂಗಳವಾರ ಹಾಗೂ ಗುರುವಾರ ರಾತ್ರಿ ಸುರಿದ ಮಳೆ ಅವರಲ್ಲಿ ಆಶಾ ಭಾವನೆ ಮೂಡಿಸಿದ್ದು ವರುಣದೇವನ ಮೇಲೆ ಭಾರ ಹಾಕಿ ಬಹುತೇಕ ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ.ಕಳೆದ ಎಪ್ರಿಲ್ ನಲ್ಲಿಯೇ ಸುರಿಯುವ ಅಶ್ವಿನಿ, ಭರಣಿ ಮಳೆಗಳು ಕೈಕೊಟ್ಟರೂ ಮುಂಗಾರು ಪೂರ್ವ ಕೃತ್ತಿಕಾ ಮಳೆ ಪ್ರಾರಂಭಗೊಂಡಿದ್ದು ರೈತರಲ್ಲಿ ಉತ್ತಮ ಮಳೆ, ಬೆಳೆಯ ನಿರೀಕ್ಷೆ ಮೂಡಿಸಿದೆ.ಈ ಬಾರಿಯೂ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಇಲ್ಲಿನ ಘಟಪ್ರಭಾ ಎಡದಂಡೆ ಕಾಲುವೆಗೆ ಹತ್ತು ದಿನದಗಳಂತೆ ಎರಡುಬಾರಿ ನೀರು ಹರಿಸಿದ್ದರಿಂದ ಈ ಭಾಗದ ಕೆರೆಗಳು ಭರ್ತಿಯಾಗಿದ್ದು…

Read More

ವಿಜಯಪುರ: ಮಹಾವಿದ್ಯಾಲಯದ ಪ್ರಾಂಶುಪಾಲರುಗಳು ಕಲಿಕೆಯಲ್ಲಿ ತಮ್ಮ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವಂತಹ, ಹೊಸ ಹೊಸ ಕೌಶಲ್ಯ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಹೇಳಿದರು.ಅವರು ಗುರುವಾರಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಆವರಣದಲ್ಲಿರುವ ಡಾ.ಫ.ಗು. ಹಳಕಟ್ಟಿ ಇಂಜನೀಯರಿಂಗ್ ಮಹಾವಿದ್ಯಾಲಯದ ಸಭಾಂಗಣದಲಿ Navigating Youth Towards AmruthaKal: Knowledge Transfer Through Technology and Skill Development” ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಕುಲಸಚಿವರಾದ ರಾಜಶ್ರೀ ಜೈನಾಪೂರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಹೆಚ್ಚನ ಅಂಕ ಗಳಿಸುವದಕ್ಕಿಂತಲೂ ತಮ್ಮ ಜೀವನಕ್ಕೆ ಉಪಯುಕ್ತವಾಗುವ ಕೌಶಲಗಳನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಹೇಳಿದರು.ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೇ ಗೋಷ್ಠಿಯನ್ನು ಶ್ರೀನಿವಾಸ ಪಿ, ಅವರು “RevolutionisingArtificalInteligence in Knowledge Transfer”ಎಂಬ ವಿಷಯದ ಬಗ್ಗೆ, ಎರಡನೇ ಗೋಷ್ಠಿಯನ್ನು ಐಐಟಿ ದೆಹಲಿಯ ಡಿಎಸ್. ಮಂಜುನಾಥ ಅವರು “ToC Critical Chain-Theory of Constriants…

Read More

ಇಂಡಿ: ಹೊಲದಲ್ಲಿ ಕೊಳವೆ ಬಾವಿ ನಿರ್ಮಿಸುವ ಪೂರ್ವಭಾವಿಯಾಗಿ ಜಮೀನು ಮಾಲಿಕರು ೧೫ ಮುಂಚಿತವಾಗಿ ತಹಸೀಲ್ದಾರ, ಗ್ರಾ.ಪಂ, ಗ್ರಾಮ ಲೆಕ್ಕಿಗ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂತರ್ಜಲ ವಿಭಾಗ, ಪಂಚಾಯತ ಇಂಜಿನಿಯರಿಂದ ಇಲ್ಲವೆ ಪುರಸಭೆ ಇವರಿಗೆ ಸಂಬಂದಿತ ಇಲಾಖೆಗೆ ಲಿಖಿತ ಮಾಹಿತಿ ನೀಡತಕ್ಕದ್ದು ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸಬಾಭವನದಲ್ಲಿ ಕೊಳವೆ ಭಾವಿ ಏಜನ್ಸಿ ಮಾಲಿಕರಿಂದ ನಡೆದ ಸಭೆಯಲ್ಲಿ ಕೊಳವೆ ಬಾವಿ ಕೊರೆಯುವ ಕುರಿತು ಪಾಲಿಸ ಬೇಕಾದ ನಿಯಮಗಳ ಮಾಹಿತಿ ನೀಡುವ ಸಭೆಯಲ್ಲಿ ಮಾತನಾಡುತ್ತಿದ್ದರು.ವಿಫಲವಾದ ಕೊಳವೆ ಬಾವಿಯಾದಲ್ಲಿ ಅದನ್ನು ಮುಚ್ಚಲು ತೆಗೆದುಕೊಳ್ಳಲು ಬೇಕಾದ ಕ್ರಮಗಳ ಕುರಿತು ಮತ್ತು ಕೊಳವೆ ಬಾವಿ ಕೊರೆಯುವ ಕಾರ್ಯ ಮುಗಿದ ನಂತರ ಕೊರೆಯುವ ಏಜನ್ಸಿಯವರು ಕೊಳವೆ ಬಾವಿಗೆ ಸಾರ್ವಜನಿಕರ ಸುರಕ್ಷತೆಗಾಗಿ ಸ್ಟೀಲ್ ಪ್ಲೇಟಿನಿಂದ ಮುಚ್ಚಬೇಕು ಎಂದರು.ಕೊರೆದ ಕೊಳವೆಬಾವಿಯನ್ನು ಮುಚ್ಚಳದ ಮೇಲಕ್ಕೆ ಒಂದರಿಂದ ಎರಡು ಅಡಿಗಳಷ್ಟು ಹಸಿ ಮಣ್ಣಿನಿಂದ ಮುಚ್ಚಿ ಮುಳ್ಳಿನ ಗಿಡಗಳನ್ನು ಇಡಬೇಕು ಎಂದು ಹೇಳಿ ಇದರಂತೆ ೨೧ ನಿಯಮಗಳನ್ನು ಪಾಲಿಸಬೇಕು…

Read More