Author: editor.udayarashmi@gmail.com

ವಿಜಯಪುರ: ಬಸವದಿ ಶರಣರು ಭೇದವಿಲ್ಲದ ನಿರ್ಮಾಣ ಮಾಡಿದರು. ವಚನ ಸಾಹಿತ್ಯ ಜನಸಾಮಾನ್ಯರಿಗೂ ಅರ್ಥವಾಗುವಂಥದ್ದು. ಕಾಯಕದಲ್ಲಿ ನಿರಂತನಾಗಿರಬೇಕು, ಹುಸಿ ಹೇಳದೆ ಸತ್ಯ ಪ್ರತಿಪಾದಿಸಬೇಕು, ಸಮಾಜ ಸುಧಾರಣೆ ವಚನದ ಆಶಯ ಎಂದು ಸಿಂದಗಿ ಎಚ್ ಜಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ ಆರ್ ಹೆಗ್ಗಣದೊಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಶನಿವಾರ ಅನ್ನಪೂರ್ಣ ಮಹದೇವಪ್ಪ ಕಾಗಲ್ಕರ್ ದಿ ಭೀಮಕ್ಕ ರಾಮಚಂದ್ರ ಕಾಗಲ್ಕರ್ ದತ್ತಿ ಹಾಗೂ ಶ್ರೀಮತಿ ಶಾಂತಾಬಾಯಿ ಸುಖರಾಮ್ ನೂಲಿ ಕರ್ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರಿಗೆ ಮುಖ್ಯ ವಾಹಿನಿಗೆ ತರುತ್ತಿರುವುದು ಶ್ಲಾಘನೀಯ ಎಂದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ ತಿಕೋಟ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದರಾಮಯ್ಯ ಲಕ್ಕುಂಡಿಮಠ ಮಾತನಾಡಿ, ಪ್ರಗತಿಪರ ಸಮಾಜದ ನಿರ್ಮಾಣವೇ ವಚನ ಸಾಹಿತ್ಯ. ಶ್ರದ್ಧೆಯಿಂದ ಮಾಡಿದ ಕಾಯಕ ಪೂಜೆಗಿಂತ ಶ್ರೇಷ್ಠ ಇಂದು ವಚನ ಸಾಹಿತ್ಯ ಸುಂದರ ಬದುಕಿನ ಸಾಹಿತ್ಯವಾಗಿದೆ ಎಂದರು.ಶರಣರ ವಚನ ಸಾಹಿತ್ಯ ಕುರಿತು ಮಮತಾ ಮುಳಸಾವಳಗಿ ಉಪನ್ಯಾಸ ನೀಡಿ, ಪ್ರಬುದ್ಧತೆಯ ಮೊಹೊನ್ನತ್ತ ಶಿಖರ ವಚನ ಸಾಹಿತ್ಯ.…

Read More

ಸಿಂದಗಿ: ರಕ್ತ ಯಾವುದೋ ಅಂಗಡಿ-ಮುಂಗಟ್ಟುಗಳಲ್ಲಿ ಸಿಗುವ ವಸ್ತುವಲ್ಲ. ಮಾನವನ ದೇಹದಲ್ಲಿ ಉತ್ಪತ್ತಿಯಾಗುವ ಸಂಪನ್ಮೂಲ ಎಂದು ರಕ್ತ ನಿಧಿ ಭಂಡಾರದ ವೈದ್ಯೆ ಡಾ. ಜನುಷಾ ಹೇಳಿದರು.ಪಟ್ಟಣದ ಕೆ.ಎಸ್.ಆರ್.ಟಿ.ಸಿ ಆವರಣದಲ್ಲಿ ಸಿಂದಗಿ ಕೆ.ಎಸ್.ಆರ್.ಟಿ.ಸಿ ನಿಯಂತ್ರಣ ಘಟಕ, ವಿಜಯಪುರ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಯುವಕರು ಯಾವುದೇ ತಪ್ಪು ಭಾವನೆ ಇಲ್ಲದೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನದಿಂದ ಆರೋಗ್ಯ ಸಮತೋಲನ ಕಾಪಾಡಲು ಸಹಾಯಕಾರಿಯಾಗಿದೆ ಎಂದರು.ಈ ವೇಳೆ ೧೭ಕ್ಕೂ ಅಧಿಕ ಯುವಕರು ರಕ್ತದಾನ ಮಾಡಿದರು. ಇದೇ ಸಂದರ್ಭದಲ್ಲಿ ಆನಂದ ಬಡಿಗೇರ್, ಮಹ್ಮದಆರೀಫ ಹವಾಲ್ದಾರ್, ಅರುಣಕುಮಾರ, ವಿಶಾಲ ಕೌಲಗಿ, ಬಿಬಿಖತೀಜಾ, ರಾಜಕುಮಾರ್ ನರಗೋದಿ, ಪ್ರಕಾಶ್ ಕೌಲಗಿ, ರಾಜು ಸೇರಿದಂತೆ ಡಿ ವರ್ಗದ ನೌಕರರು, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಸಿಂದಗಿ: ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ೧ ಫಲಿತಾಂಶದಲ್ಲಿ ಪಟ್ಟಣದ ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪವಿತ್ರಾ ದೇವರಮನಿ ೬೧೮ ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು ಹೆಮ್ಮೆಯ ವಿಷಯ ಎಂದು ಇಂಡಿ ಪಟ್ಟಣದ ಆರ್‌ಎಂಎಸ್ ಶಾಲೆಯ ಶಿಕ್ಷಕಿ ಸುನಿತಾ ಸಾಲಿ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದರು.ಪಟ್ಟಣದ ಶ್ರೀವೇಂಕಟೇಶ್ವರ ವಿದ್ಯಾವರ್ಧಕ ಸಂಘದ ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಶ್ರೀ ಎಚ್.ಟಿ.ಕೆ.(ಚೌಧರಿ) ಕನ್ನಡ ಮಾಧ್ಯಮ ಪ್ರೌಢಶಾಲೆಯ ಆವರಣದಲ್ಲಿ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ೧ರಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನ, ಕಲಿಕೆ ಮತ್ತು ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪ್ರಕಾಶ ಚೌಧರಿ ಅವರು ಆಕ್ಷಫರ್ಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಶ್ರೀ ಎಚ್.ಟಿ.ಕೆ.(ಚೌಧರಿ) ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮತ್ತು ಶೈಕ್ಷಣಿಕ ಮಾರ್ಗದರ್ಶನ ನೀಡುವ ಮೂಲಕ ಅವರು ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿದ್ದಾರೆ ಎಂದು…

Read More

ಬಸವನಬಾಗೇವಾಡಿ: ತಾಲೂಕಿನ ಟಕ್ಕಳಕಿಯಲ್ಲಿರುವ ಬಸವನಬಾಗೇವಾಡಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಥಮ ವರ್ಷದ ಡಿಪ್ಲೋಮಾ ಅಟೋಮೊಬೈಲ್ ಇಂಜಿನಿಯರಿಂಗ್, ಪುಡ್ ಪ್ರೋಸಿಂಗ್ ಮತ್ತು ಪ್ರಿಜರ್ವೇಶನ್ ವಿಭಾಗಗಳಿಗೆ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದು. ಪ್ರವೇಶ ಪಡೆದುಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮತ್ತು ಶುಲ್ಕದೊಂದಿಗೆ ಆಪ್ಲೈನ್ ಮುಖಾಂತರ ಮೇ. ೩೦ ರೊಳಗೆ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಪ್ರವೇಶ ನೇರವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯಲ್ಲಿರುವ ಸಹಾಯವಾಣಿ ಕೇಂದ್ರದ ಮೊಬೈಲ್ ಸಂಖ್ಯೆಗಳಾದ ೯೪೪೯೧೮೩೬೦೨,೭೦೧೯೭೩೭೫೨೫,೮೧೪೭೦೫೧೨೪೯, ೮೮೮೪೫೬೬೭೮೮ ಸಂಪರ್ಕಿಸಬಹುದಾಗಿದೆ ಎಂದು ಬಸವನಬಾಗೇವಾಡಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಪ್ರದೀಪ ನಾಗನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಮುದ್ದೇಬಿಹಾಳ ತಹಶೀಲ್ದಾರ ಕಚೇರಿಯಲ್ಲಿ ಮೇ.೨೧ರಂದು ಬೆಳಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (೯೩೬೪೦೬೨೫೨೮) ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್ -೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್‌ಸ್ಪೆಕ್ಟರ್ -೨ (ಮೊ:೯೩೬೪೦೬೨೬೩೯) ಇವರು ಅಂದು ಬೆಳಿಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್…

Read More

ವಿಜಯಪುರ ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ೪೦ ಬಾಲ್ಯವಿವಾಹ ತಡೆ ವಿಜಯಪುರ: ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಅದರ ಆಚರಣೆಗೆ ಒಪ್ಪಿಗೆ ನೀಡಿದರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ರ ಕಲಂ ೯, ೧೦ ಹಾಗೂ ೧೧ರ ಪ್ರಕಾರ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಗಳವರೆಗೂ ವಿಸ್ತರಿಸಬಹುದಾದ ದಂಡವಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕದ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು ಆಗಿದ್ದು, ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿಯನ್ನು ನೀಡಲಾಗಿದೆ. ಅದಲ್ಲದೇ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಅದರ ಪ್ರತಿಫಲ ವಿಜಯಪುರ ಜಿಲ್ಲೆಯಲ್ಲಿ ೨೦೨೩-೨೪ನೇ ಸಾಲಿನಲ್ಲಿ ಒಟ್ಟು ೧೪೦ ದೂರುಗಳು ಮಕ್ಕಳ ಸಹಾಯವಾಣಿ-೧೦೯೮/೧೧೨ ಸ್ವೀಕರಿಸಿದ್ದು, ಅದರಲ್ಲಿ ೧೨೫ ಬಾಲ್ಯವಿವಾಹಗಳನ್ನು ಸಂಬಂಧಪಟ್ಟ ಎಲ್ಲ ಬಾಲ್ಯವಿವಾಹ ನಿಷೇಧಾಧಿಕಾರಿಗಳ ಸಹಯೋಗದೊಂದಿಗೆ ತಡೆಗಟ್ಟಿದ್ದು, ೦೯ ಬಾಲ್ಯವಿವಾಹ ಪ್ರಕರಣಗಳಲ್ಲಿ ಎಫ್.ಐ.ಆರ್…

Read More

ವಿಜಯಪುರ: ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ ೩೬೦೧೦.೨೦ ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದು ರೈತರ ಬರ ಪರಿಹಾರ ಹಣವಾಗಿರುವುದರಿಂದ ಯಾವುದೇ ಕಾರಣಕ್ಕೂ ರೈತರ ಸಾಲಗಳಿಗೆ ಈ ಹಣವನ್ನು ಕಡಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ.ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಅವರು, ರಾಜ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಇದನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿಜಯಪುರ ಸಹಕಾರ ಸಂಘಳ ಇಲಾಖೆಯ ಉಪ ನಿಬಂಧಕರಿಗೆ ಸೂಚಿಸಲಾಗಿದೆ. ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಬರ ಪರಿಹಾರದ ಹಣ ರೈತರು ಬೀಜ, ರಸಗೊಬ್ಬರ, ಹೊಲದ ಉಳುಮೆ, ಬಿತ್ತನೆಗೆ ಸಿದ್ಧಮಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾಗಿ ಬ್ಯಾಂಕ್‌ಗಳು ರೈತರಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Read More

ವಿಜಯಪುರ: ಸಾಧನೆಗೆ ಸೌಕರ್ಯಗಳಿಗಿಂತ ಆತ್ಮಸ್ಥೈರ್ಯ, ಕಠಿಣ ಪರಿಶ್ರಮ, ಛಲ ಬಹಳ ಮುಖ್ಯ. ಉನ್ನತ ಗುರಿ ಸಾಧಿಸಲು ವಿದ್ಯಾರ್ಥಿಗಳಿಗೆ ಬಡತನ ಅಡ್ಡಿ ಆಗಬಾರದು. ನಿರಂತರ ಅಧ್ಯಯನಶೀಲರಾದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದಲ್ಲಿ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಶುಭಹಾರೈಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದಿನ ವಿದ್ಯಾರ್ಥಿಗಳು ಸಂಸ್ಕಾರಯುತವಾಗಿ ದೃಢ ಸಂಕಲ್ಪದೊಂದಿಗೆ ಗುರಿ ಸಾಧನೆಗೆ ಮುಂದಾಗಬೇಕು. ನಿರಂತರ ಪರಿಶ್ರಮ ಶ್ರದ್ಧೆಯಿಂದ ಪ್ರಯತ್ನಪಟ್ಟಲ್ಲಿ ಗುರಿ ಸಾಧನೆ ಸುಲಭವಾಗುತ್ತದೆ. ಕಡು ಬಡತನವು ಸಾಧನೆಗೆ ಪ್ರೇರಕ ಶಕ್ತಿ ಎಂಬುದಕ್ಕೆ ದಾನಮ್ಮ ಕುಂಬಾರ ಅವಳೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿದರು.ಶಾಲೆಗೆ ಟಾಪರ್ ವಿದ್ಯಾರ್ಥಿನಿ ದಾನಮ್ಮ ಕುಂಬಾರ ಮಾತನಾಡಿ, ನನ್ನ ತಂದೆ-ತಾಯಿ ಇಬ್ಬರೂ ಪಾರ್ಶ್ವವಾಯು ಪೀಡಿತರಾಗಿ ಕುಟುಂಬ ನಿರ್ವಹಣೆ ದುಸ್ತರವಾಗಿದ್ದರೂ ಸಹಿತ ಅವರ ಆರೈಕೆ ಮಾಡುತ್ತಾ ನಿರಂತರ ಪ್ರಯತ್ನಶೀಲತೆ ಗುಣವನ್ನು ಮೈಗೂಡಿಸಿಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದದ್ದು ನನಗೆ ಹೆಮ್ಮೆ ತಂದಿದೆ ಎಂದು ಹೇಳಿದರು.ಡಿಸಿಸಿ…

Read More

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ದರೋಡೆ ನಡೆದಿದೆ.ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ತಡರಾತ್ರಿ ಕ್ಯಾಂಟರ್ ವಾಹನ ತಡೆದ ದುಷ್ಕರ್ಮಿಗಳು ಚಾಲಕ ಮತ್ತೋರ್ವನ ಮೇಲೆ ಖಾರದ ಪುಡಿ ಎರಚಿ ರಾಡ್ ನಿಂದ ಹಲ್ಲೆ ಮಾಡಿ ಕ್ಯಾಂಟರ್ ನಲ್ಲಿದ್ದ ರೂ. 32 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.ಈ ಘಟನೆಯಲ್ಲಿ ದರೋಡೆಕೋರರಿಂದ ಹಲ್ಲೆಗೀಡಾದ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಕ್ಲೀನರ್ ಮಲ್ಲು ಕೊಡಚಿ ಅವರಿಗೆ ಕೊಲ್ಹಾರ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸುದ್ದಿ ತಿಳಿದ ತಕ್ಷಣ ವಿಜಯಪುರ ಎಸ್ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ದರೋಡೆಗೆ ಒಳಗಾದವರಿಂದ ಮತ್ತು ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದು ಆರೋಪಿಗಳ ಬಂಧನಕ್ಕೆ ಸೂಚನೆ ನೀಡಿದ್ದಾರೆ.ಘಟನೆಯ ಹಿನ್ನೆಲೆ: ಕಲಬುರಗಿ ಜಿಲ್ಲೆಯ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವರು ರೈತರಿಂದ ಹತ್ತಿ ಸಂಗ್ರಹಿಸಿದ್ದರು. ಅಲ್ಲದೇ, ಈ ಹತ್ತಿಯನ್ನು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರೋ ಹತ್ತಿ ಕಾರ್ಖಾನೆಯಲ್ಲಿ ಮಾರಾಟಕ್ಕೆ…

Read More

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೇಯರ್ ಮತ್ತು ಖಾಸಗಿ ವ್ಯಕ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ವಿಜಯಪುರದಲ್ಲಿ ನಡೆದಿದೆ.ಪ್ರಕಾಶ ಸಿಂಗೆ ಎಬುವರು ತಮ್ಮ ನಾಲ್ಕು ಎಕರೆ ಜಮೀನಿನ ತತ್ಕಾಲ ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸಕ್ಕಾಗಿ ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರು ರೂ. 47,500 ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಕಾಶ ಸಿಂಗೆ ಲೋಕಾಯುಕ್ತರ ಮೊರೆ ಹೋಗಿದ್ದರು.ಈ ಮಧ್ಯೆ ತತ್ಕಾಲ ಪೋಡಿ ಮಾಡಿಕೊಡಲು ಲಂಚ ಪಡೆಯುವಾಗ ಧಾಳಿ ನಡೆಸಿದ ಪೊಲೀಸರು ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರನ್ನು ಬಂಧಿಸಿದ್ದಾರೆ. ಅಲ್ಲದೇ, ರೂ. 47,500 ಹಣವನ್ನು ವಶಪಡಿಸಿಕೊಂಡಿದ್ದಾರೆ.

Read More