Subscribe to Updates
Get the latest creative news from FooBar about art, design and business.
Author: editor.udayarashmi@gmail.com
“ವೀಣಾಂತರಂಗ”- ವೀಣಾ ಹೇಮಂತ ಗೌಡ ಪಾಟೀಲ್, ಮುಂಡರಗಿ-ಗದಗ ವಿವಿಧ ಸಂಸ್ಕೃತಿಗಳು, ಜಾತಿಗಳು, ಮತಗಳು, ಆಚರಣೆಗಳು ರೂಢಿಯಲ್ಲಿರುವ ಭಾರತ ದೇಶದಲ್ಲಿ ಒಂದು ಅಲಿಖಿತ ಸಾಮಾಜಿಕ ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲವೊಮ್ಮೆ ಪುರಾತನ ಎಂದೆನ್ನಿಸಿದರೂ ಕೂಡ ನಮ್ಮ ಸಂಸ್ಕೃತಿಯ ಮೂಲ ಬೇರುಗಳನ್ನು ಎತ್ತಿ ಹಿಡಿಯುವ ಮಾನವೀಯ ಪ್ರಜ್ಞೆಯನ್ನು ಒಳಗೊಂಡಿರುವ ಕೆಲ ಸಾಮಾಜಿಕ ನಿಯಮಾವಳಿಗಳು ಇಂದಿಗೂ ನಮ್ಮ ಸಮಾಜದ ಸ್ವಾಸ್ಥ್ಯವನ್ನು ಕಾಯುತ್ತವೆ.ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ಬರುತ್ತದೆ ಎನ್ನುವಾಗ ಜಾರಿಯಾಗುವ ಚುನಾವಣಾ ನೀತಿಸಂಹಿತೆಯಂತೆ ನಮ್ಮ ಸಾಮಾಜಿಕ ನೀತಿ ಸಂಹಿತೆಯು ಕೂಡ ಬದಲಾಗುತ್ತಿರುವ ಸಾಮಾಜಿಕ ಸ್ಥಿತ್ಯಂತರಗಳ ಜೊತೆ ಜೊತೆಗೆ ಪರಿಷ್ಕರಣೆಗೊಳ್ಳುತ್ತಲೇ ಇರಬೇಕು ಮತ್ತು ಕಡ್ಡಾಯವಾಗಿ ಪಾಲಿಸಲೇಬೇಕು ಎಂಬುದು ಪ್ರಸಕ್ತ ಸಾಮಾಜಿಕ ಅವಶ್ಯಕತೆಯನ್ನು ಸೂಚಿಸುತ್ತದೆ.ಕೇವಲ ಎರಡೇ ದಶಕಗಳಲ್ಲಿ ಇಡೀ ಜಗತ್ತು ಗ್ಲೋಬಲ್ ವಿಲೇಜ್ ಆಗಿ ಮಾರ್ಪಟ್ಟಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಅಂಗೈಯಲ್ಲಿ ಈ ಬೃಹತ್ ಬ್ರಹ್ಮಾಂಡವನ್ನು ನೋಡಬಹುದಾಗಿದೆ… ಆದರೆ ದೀಪದ ಅಡಿಯಲ್ಲಿಯೇ ಕತ್ತಲೆ ಇರುವಂತೆ ಪ್ರತಿಯೊಂದು ವೈಜ್ಞಾನಿಕ ಆವಿಷ್ಕಾರದ ಹಿಂದೆ ಕೆಲ ಕರಾಳತೆಗಳು ಅಡಗಿವೆ. 21ನೇ ಶತಮಾನದ…
Udayarashmi kannada daily newspaper Udayarashmi kannada daily newspaper
ಮುದ್ದೇಬಿಹಾಳ: ಯಾವುದೇ ಸೂಕ್ತ ಕಾರಣಗಳಿಲ್ಲದೇ ಬಂದ ಮಾಡಲಾದ ಬಸ್ ಸೇವೆಗಳನ್ನು ಪುನರ್ ಆರಂಭಿಸಬೇಕು ಮತ್ತು ಅವಶ್ಯವಿರುವ ಕೆಲ ಹೊಸ ಬಸ್ ಸೇವೆಗಳನ್ನು ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದ ಮರ್ಚೆಂಟ್ ಅಸೋಸಿಯೇಶನ್, ನಗರಾಭಿವೃದ್ಧಿ ಹೋರಾಟ ವೇದಿಕೆ ಸೇರಿದಂತೆ ವಿವಿದ ಪ್ರಗತಿಪರ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶುಕ್ರವಾರ ಸಂಜೆ ಕೆಎಸ್ಆರ್ಟಿಸಿ ಘಟಕಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಗ್ರಾಮದೇವತೆ ದೇವಸ್ಥಾನದಿಂದ ಶುರುವಾದ ಪ್ರತಿಭಟನೆ ಮುಖ್ಯ ಬಜಾರ, ಬಸವೇಶ್ವರ ವೃತ್ತ ಮಾರ್ಗವಾಗಿ ಬಸ್ ನಿಲ್ದಾಣದ ವರೆಗೆ ಸಾರಿಗೆ ಮಂತ್ರಿಗೆ ಧಿಕ್ಕಾರ ಹಾಕುತ್ತ ಸಾಗಿತು. ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಹೋರಾಟಗಾರ ಬಸವರಾಜ ನಂದಿಕೇಶ್ವರಮಠ, ಬಿ.ಎಸ್.ಮೇಟಿ, ಉಮೇಶ ಜತ್ತಿ ಮತ್ತೀತರರು ಮಾತನಾಡಿ, ಬಹು ದಿನಗಳಿಂದ ಪಟ್ಟಣದಿಂದ ಆಲಮಟ್ಟಿ ರೇಲ್ವೆ ನಿಲ್ದಾಣಕ್ಕೆ ಬಸ್ ಸೌಲಭ್ಯ ಇತ್ತು. ಇದು ದೂರದ ಊರುಗಳಿಗೆ ರೈಲ್ಗಳ ಮೂಲಕ ಹೋಗುವ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿತ್ತು. ಅದರಂತೆ ಇನ್ನೂ ಅನೇಕ ಬಸ್ಗಳು ಇಲ್ಲಿಂದಲೇ ಹೊರಡುತ್ತಿದ್ದವು. ಈ ಎಲ್ಲ ಬಸ್ಗಳು ಬಂದ್ ಮಾಡಿದ ಕಾರಣ ಸಾರ್ವಜನಿಕರಿಗೆ…
ಡಿಎಚ್ಓ ಅವರನ್ನು ತರಾಟೆಗೆ ತೆಗೆದುಕೊಂಡ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯಲ್ಲಿ ಕೆಲ ಹೆರಿಗೆತಜ್ಞ ಆಸ್ಪತ್ರೆಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸೂಚನೆಗಳನ್ನ ನೀಡಿದರೂ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದೆ. ಅಲ್ಲದೇ ಅಂತಹ ಆರೋಪ ಕೇಳಿಬಂದ ಆಸ್ಪತ್ರೆಗಳ ಸ್ಕ್ಯಾನಿಂಗ್ ಸೆಂಟರ್ ಮಾತ್ರ ಸೀಜ್ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.ಶುಕ್ರವಾರ ವಿಜಯಪುರದ ಅಥಣಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಕ್ರಮ ತೆಗೆದುಕೊಳ್ಳಲು ವಿಳಂಬ ಮಾಡಿದ್ದಲ್ಲದೇ, ಆಸ್ಪತ್ರೆ ಸೀಜ್ ಮಾಡದೇ ಕೇವಲ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಿರುವ ಕ್ರಮ ಸರಿಯಲ್ಲ ಎಂದು ಡಿಎಚ್ಓ ಅವರನ್ನು ದೂರವಾಣಿಯಲ್ಲಿ ತರಾಟೆಗೆ ತೆಗೆದುಕೊಂಡರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಳೆದ…
ಆಲಮಟ್ಟಿ: ಇಲ್ಲಿಯ ಜಲಾಶಯದಿಂದ ಸ್ಥಳಿಯ ರೈತರ ಜಮೀನುಗಳಿಗೆ ನೀರು ಒದಗಿಸದೆ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ತೆಲಂಗಾಣ ಮೂಲದ ಬಾಡಿಗೆ ರೈತರಿಗೆ ನೀರು ಒದಗಿಸಲು ಕಳೆದ ಕೆಲದಿನಗಳಿಂದ ಆಲಮಟ್ಟಿ ಜಲಾಯಶಯದ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನದಿ ಪಾತ್ರಕ್ಕೆ ನಿತ್ಯ ೨೫೦೦ ಕ್ಯುಸೆಕ್ ನೀರು ಹರಿಬಿಡಲಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘ ಆರೋಪಿಸಿದೆ.ನೀರು ಬಿಡುಗಡೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಶನಿವಾರ ಇಲ್ಲಿಯ ಕೆಬಿಜೆಎನ್ ಎಲ್ ಉಪ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದ ರೈತರು ನೀರು ನಿಲ್ಲಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮುಖಂಡರು, ಕುಡಿಯುವ ನೀರಿಗಾಗಿ ಹಾಗೂ ಜಲಚರಗಳಿಗಾಗಿ ಮೀಸಲಿಟ್ಟಿರುವ ನೀರಲ್ಲಿಯೇ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರು ಹರಿಸಲು ಆರಂಭಿಸಿದ್ದಾರೆ. ಇದರಿಂದ ಜಿಲ್ಲೆಯ ರೈತರು ಕುಡಿಯುವ ನೀರಿಗಾಗಿ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆ ವಿಜಯಪುರ ಜಿಲ್ಲಾಧಿಕಾರಿಗಳು ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ಅನುಮತಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು ಆಯುಕ್ತರ ಆದೇಶದ ಮೇರೆಗೆ ಆಲಮಟ್ಟಿ ಲಾಲ ಬಹದ್ದೂರ ಜಲಾಶಯದ…
ಯುಜಿಡಿ ಸಂಸ್ಕರಣಾ ಘಟಕದಲ್ಲಿ ಮಕ್ಕಳ ಸಾವು ಪ್ರಕರಣ | ಘಟನಾ ಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ ಮುದ್ದೇಬಿಹಾಳ: ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೊಸಂಬೆ ಹಾಗೂ ಶೇಖರಗೌಡ ರಾಮತನಾಳ ಭೇಟಿ ನೀಡಿ ಘಟಕದಲ್ಲಿ ರಕ್ಷಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು ಪರಿಶೀಲಿಸಿ, ಮೃತಪಟ್ಟ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು.ಯುಜಿಡಿ ಮಲಿನ ನೀರು ಸಂಸ್ಕರಣಾ ಘಟಕದಲ್ಲಿ ಖುದ್ಧು ಪರೀಶೀಲನೆ ನಡೆಸಿದ ಆಯೋಗದ ಸದಸ್ಯ ಕೋಸಂಭೆ ಹಾಗೂ ರಾಮತನಾಳ ಅವರು, ಮುಖ್ಯರಸ್ತೆಗೆ ಹೊಂದಿಕೊಂಡಿರುವ ಘಟಕದ ಸುತ್ತಲ್ಲೂ ಯಾವುದೇ ತಂತಿಬೇಲಿ, ತಡೆಗೋಡೆ ನಿರ್ಮಿಸದಿರುವುದು, ಕನಿಷ್ಠ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಹಾಗೂ ಸೂಕ್ತ ಸಿಬ್ಬಂದಿ ನಿಯೋಜಿಸದ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೂರು ಮಕ್ಕಳ ಸಾವಿಗೆ…
ವಿಜಯಪುರ: ಅಮ್ಮ ಎಂದರೆ ಮಮತೆಯ ಕಡಲು, ಸ್ವಾಭಿಮಾನದ ಪ್ರತೀಕ ಪ್ರತಿಯೊಬ್ಬರ ಬದುಕಿನ ಸ್ಫೂರ್ತಿ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾ ಅಕ್ಕನವರು ಹೇಳಿದರುಜಿಲ್ಲೆಯ ಸಿಂದಗಿ ಪಟ್ಟಣದ ಲಿಟಲ್ ವಿಂಗ್ಸ್ ಶಾಲೆಯ ವತಿಯಿಂದ ಜ್ಯೋತಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು ತಾಯಿಯು ಮಮತೆಯ ಆಗರ ಕರುಣೆಯ ಕಡಲು ,ಪ್ರೀತಿಯ ಸೆಲೆಯಾಗಿದ್ದಾಳೆ. ತಾಯಿಯ ಜಗತ್ತಿನ ಸರ್ವ ಶ್ರೇಷ್ಠ ವ್ಯಕ್ತಿಯಾದ ಅಮ್ಮನಿಗೆಂದೇ ಕೇವಲ ಒಂದು ವಿಶೇಷ ದಿನವನ್ನು ಮೀಸಲಿಟ್ಟರೆ ಸಾಲದು ಅದು ನಿತ್ಯ ನಿರಂತರವಾಗಿರಬೇಕು ಎಂದರು.ಈ ಸಂದರ್ಭದಲ್ಲಿ ಅತಿಥಿಯಾಗಿ ಮಾತನಾಡಿದ ಶಕುಂತಲಾ ಹಿರೇಮಠ, ಇಡೀ ಜೀವನವನ್ನೇ ಮಕ್ಕಳಿಗಾಗಿ ಬಂಧು ಬಳಗಕ್ಕಾಗಿ ಮೀಸಲಿಡುವ ಅಮ್ಮನ ಪ್ರೀತಿ ಕಾಳಜಿ ತ್ಯಾಗಕ್ಕೆ ಕೃತಜ್ಞತೆ ಸಲ್ಲಿಸಲು ಅಮ್ಮನ ಮಮತೆಯನ್ನು ಸ್ಮರಿಸುವ ದಿನವಿದು. ಅವಳ ಋಣವನ್ನು ಎಷ್ಟು ಜನ್ಮವೆತ್ತಿ ಬಂದರೂ ತೀರಿಸಲಾಗದು ಎಂದರು.ಮಹಾನಂದ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆ ನಿರ್ದೇಶಕಿ ಭಾರತಿ ಚೌದರಿ ಅಧ್ಯಕ್ಷತೆ ವಹಿಸಿದ್ದರು. ಪಾಲಕರ ಪ್ರತಿನಿಧಿಯಾಗಿ ಕಾವೇರಿ…
ಸಿಂದಗಿ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಕೊಲೆಯನ್ನು ಖಂಡಿಸಿ ಸಿಂದಗಿ ತಹಶಿಲ್ದಾರ ಕಚೇರಿಯ ಮುಂದೆ ವಿಜಯಪುರ ತಳವಾರ ಪರಿವಾರ ಹಿತರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹೋರಾಟಗಾರ ಶಿವಾಜಿ ಮೆಟಗಾರ, ಅಂಜಲಿ ಅಂಬಿಗೇರ ಹತ್ಯೆ ಮಾಡಿದ ದುಷ್ಕರ್ಮಿಗೆ ಉಗ್ರವಾದ ಶಿಕ್ಷೆಯನ್ನು ವಿಧಿಸಿ ಇಂತಹ ಘಟನೆಗಳು ರಾಜ್ಯದಲ್ಲಿ ಮತ್ತೆ ಮರುಕಳಿಸುವಂತಾಗಬಾರದು ಎಂದು ಎಚ್ಚರಿಸಿದರು.ತಳವಾರ ಸಮಾಜದ ಮುಖಂಡ ಮಡಿವಾಳ ನಾಯ್ಕೋಡಿ ಮಾತನಾಡಿ, ಅಂಜಲಿ ಅಂಬಿಗೇರ ಕುಟುಂಬಕ್ಕೆ ಅವಳೇ ಆಸರೆಯಾಗಿದ್ದು, ತಂದೆ-ತಾಯಿ ಇಲ್ಲದೆ ಅಜ್ಜಿ ಮತ್ತು ಸಹೋದರಿಯೊಂದಿಗೆ ಜೀವನ ಸಾಗಿಸುತ್ತಿದ್ದಳು. ಮೃತ ಅಂಜಲಿಯ ಕುಟುಂಬಕ್ಕೆ ಸರ್ಕಾರವು ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಿಂದಗಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಣಮಂತ ಸುಣಗಾರ, ಪುರಸಭೆಯ ಸದಸ್ಯರಾದ ಬಸವರಾಜ ಯರನಾಳ, ಗೋಲ್ಲಾಳ ಬಂಕಲಗಿ, ಅನೀಲ ಕಡಕೋಳ, ಸಂತೋಷ ಹರನಾಳ, ಮಲ್ಲು ಕುರಿ, ನಾಗು ತಳವಾರ, ಪರಶುರಾಮ ಕೋಟಾರಗಸ್ತಿ, ವಿಜಯಕುಮಾರ ಯಾಳವಾರ, ಈರಣ್ಣ ಕುರಿ, ರಾಜಕುಮಾರ ನಾಯ್ಕೋಡಿ, ಹಣಮಂತ ಹಿಪ್ಪರಗಿ, ಮಲ್ಲು ನಾಯ್ಕೋಡಿ, ಕುಮಾರ ನಾಯ್ಕೋಡಿ,…
ಇಂಡಿ: ಕೃಷ್ಣಾ ಮುಖ್ಯ ಕಾಲುವೆಯಿಂದ ಕಾಲುವೆಯ ಕೊನೆಯ ಭಾಗದ ವರೆಗೆ ನೀರು ಹರಿಸಲಾಗಿದೆ ಎಂದು ಕೃಷ್ಣಾ ಬಾಗ್ಯ ಜಲ ನಿಗಮದ ಅಧಿಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ ತಿಳಿಸಿದ್ದಾರೆ.ಕಳೆದ ಬಾರಿ ಕೃಷ್ಣಾ ಮುಖ್ಯ ಕಾಲುವೆಯಿಂದ ೧೩೫ ಕಿ.ಮಿ ಮಾತ್ರ ನೀರು ಹರಿಯಬಿಡಲಾಗಿತ್ತು. ಇದರಿಂದ ಆ ಭಾಗದ ಜನರು ಸತ್ಯಾಗ್ರಹ ಮಾಡಿದ್ದರು ಎಂದರು.ಕೆಂಬಾವಿಯ ೦ ಕಿ.ಮಿಯಿಂದ ಸಿಂದಗಿ ತಾಲೂಕಿನ ಬಳಗಾನೂರ ಕೆರೆಯ ವರೆಗೆ ನಂತರ ಬಳಗಾನೂರ ಕೆರೆಯಿಂದ ಇಂಡಿ ತಾಲೂಕಿನಿಂದ ಚಡಚಣ ತಾಲೂಕಿನ ದಸೂರ ವರೆಗೆ ನೀರು ಹರಿಸಿದ್ದು ಆ ನೀರು ನಂತರ ಭೀಮಾ ನದಿ ಸೇರುತ್ತದೆ ಎಂದರು.ಇದರಿಂದ ಸಿಂದಗಿ,ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಕೆರೆ ತುಂಬಿಸುವದರ ಜೊತೆಗೆ ಜನ ಜಾನುವಾರುಗಳಿಗೆ ಕುಡಿಯಲು ನೀರು ಅನುಕೂಲ ವಾಗುತ್ತದೆ ಎಂದರು.ಸಹಾಯಕ ಕಾರ್ಯ ಪಾಲಕ ಅಭಿಯಂತರ ಶ್ರೀಮಂತ ಅಂಗಡಿ, ಜಿ.ಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ಎಇಇ ಆರ್.ಎಸ್.ರುದ್ರವಾಡಿ,ಸಾಜಿದ ನಲವತ್ತವಾಡ, ಮಲ್ಲಿಕಾರ್ಜುನ ತೆಲಂಗಿ, ಸಾದಿಕ ಹೊನ್ನುಟಗಿ ಮತ್ತಿತರಿದ್ದರು.
ಇಂಡಿ: ತಾಲೂಕಿನಲ್ಲಿ ಒಟ್ಟು ೪೨೩೨೦ ಜನ ರೈತರಿಗೆ ೬೪ ಕೋಟಿ ೭೧ ಲಕ್ಷ ೯೬೭೯೫ ರೂ, ಗಳು ಮಂಜೂರಿಯಾಗಿದ್ದು, ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ತಹಸೀಲ್ದಾರ ಮಂಜುಳಾ ನಾಯಕ ತಿಳಿಸಿದ್ದಾರೆ.ಅವರು ಪಟ್ಟಣದ ತಹಸೀಲ್ದಾರ ಕಚೇರಿಯ ಸಬಾಭವನದಲ್ಲಿ ನಡೆದ ಬೆಳೆ ಪರಿಹಾರ ಕುರಿತು ಅಧಿಕಾರಿಗಳು ಮತ್ತು ತಾಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು.ರೈತರಲ್ಲಿ ಕೆಲವು ರೈತರ ಖಾತೆಗಳು ಸ್ಥಗಿತಗೊಂಡಿವೆ, ಕೆಲವು ರೈತರ ಆಧಾರ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಲಿಂಕ್ ಇಲ್ಲದಿರುವದು, ಕೆಲವು ರೈತರ ಹೆಸರುಗಳು ಬ್ಯಾಂಕ್ ಖಾತೆಯಲ್ಲಿ ಮತ್ತು ಆಧಾರ ಕಾರ್ಡಗಳಲ್ಲಿ ಬೇರೆ ಬೇರೆಯಾಗಿರುವದು, ರೈತರು ಬೇರೆ ಕಡೆಗೆ ಹೋಗಿರುವದು, ತೀರಿ ಕೊಂಡಿರುವ ರೈತರ ಕುರಿತು ಬ್ಯಾಂಕಿನಲ್ಲಿ ಸಮಸ್ಯೆ ಇರಬಹುದು.ಎನ್ ಪಿ ಸಿ ಐ ಮಾಡಿಸದಿರುವದು, ಇಂತಹ ಸಮಸ್ಯಗಳಿಂದ ಒಟ್ಟು ತಾಲೂಕಿನಲ್ಲಿ ೩೨೬೬ ರೈತರ ಖಾತೆಗಳಿಗೆ ಪರಿಹಾರದ ಹಣ ಜಮೆಯಾಗಿಲ್ಲ. ಈ ಬಗ್ಗೆ ರೈತರು ಭಯ ಪಡುವ ಅಗತ್ಯವಿಲ್ಲ. ಇಂತಹ ರೈತರು ಕೂಡಲೇ ತಮ್ಮ ತಮ್ಮ ಬ್ಯಾಂಕಗಳಿಗೆ ಭೇಟಿ ನೀಡಿ…
