Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪ್ರಜ್ವಲ್ ಅವರನ್ನು ಬಂಧಿಸಬೇಕೆಂದು ನೈತಿಕತೆ ಇಲ್ಲದ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಜೀವನದಲ್ಲಿ ಆದರ್ಶವಿಲ್ಲದ ಎಡಚರ ಸಾಹಿತಿಗಳು ಈ ವಿಷಯದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ನಿಜವಾಗಲೂ ಈ ಬುದ್ದಿ ಜೀವಿ ಸಾಹಿತಿಗಳಿಗೆ ಸಮಾಜದ ಬಗ್ಗೆ ಕಳಕಳಿ ಇದ್ದರೆ ನೇಹಾ ಅವರ ಹತ್ಯೆಯನ್ನು ಖಂಡಿಸಬೇಕಾಗಿತ್ತು. ತಮಗೆ ಬೇಕಾದ ಹಾಗೆ ವರ್ತಿಸುತ್ತಿರುವ ಸಾಹಿತಿಗಳ ವರ್ತನೆ ಖಂಡನೀಯವಾಗಿದೆ. ಪ್ರಶಸ್ತಿ ಆಸೆಗಾಗಿ ಸರಕಾರದ ಪರವಾಗಿ ಸದಾ ಕೆಲಸ ಮಾಡುತ್ತಿರುವ ಈ ಬುದ್ಧಿಜೀವಿಗಳ ಬಗ್ಗೆ ಸಮಾಜದಲ್ಲಿ ಗೌರವವಿಲ್ಲ.. ಅಪರಾಧ ಮಾಡಿದವರ ಕುರಿತು ಕಾನೂನು ಕ್ರಮ ಸರ್ಕಾರ ಕೈಗೊಳ್ಳುತ್ತದೆ ಎನ್ನುವ ಸಾಮಾನ್ಯ ಜ್ಞಾನ ಇವರಿಗೆ ಇದ್ದಂತೆ ಇಲ್ಲ. ಸರಕಾರದ ಮೇಲೆ ಇವರಿಗೆ ವಿಶ್ವಾಸವಿಲ್ಲ ಎಂದು ತೋರುತ್ತದೆ. ಇಂತಹ ಸಾಹಿತಿಗಳಿಂದ ನಾವು ಏನನ್ನು ನಿರೀಕ್ಷಿಸುವುದಿಲ್ಲ. ಈಗಾಗಲೇ ಮೂಲೆಗುಂಪಾಗಿದ್ದಾರೆ. ತಮ್ಮ ಇರುವಿಕೆಯನ್ನು ವ್ಯಕ್ತಪಡಿಸುವ ಕಾರಣಕ್ಕಾಗಿ ಬಹುಶಃ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರಬಹುದು ಎಂದು ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ಪಟ್ಟಣದ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ಮುಖಂಡ ದಯಾನಂದ ಜಾಲಗೇರಿ ಅವರ ಮಗ ಶಿವಶಂಕರ್ ಜಾಲಗೇರಿ ಅವರು 10ನೇ ತರಗತಿಯ ಐಸಿಎಸ್ಇ ಸಿಲಬಸ್ ನಲ್ಲಿ ಶೇ.92 ರಷ್ಟು ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯಿಂದ ಶಂಕರಗೌಡ ಬಿರಾದಾರ ಸನ್ಮಾನಿಸಿದರು.ಶಿವಶಂಕರ ಜಾಲಗೇರಿ ಅವರು 10ನೇ ತರಗತಿಯ ಐಸಿಎಸ್ಇ ಸಿಲಬಸ್ ನಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯಿಂದ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸನ್ಮಾನಿಸಿದರು.ಶಂಕರಗೌಡ ಬಿರಾದಾರ ಮಾತನಾಡಿ, 10ನೇ ತರಗತಿಯ ಐಸಿಎಸ್ಇ ಸಿಲಬಸ್ ಪರೀಕ್ಷೆಯಲ್ಲಿ 600ಕ್ಕೆ 549 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದು ಶೇ. 92 ಉತ್ತೀರ್ಣನಾಗಿರುವುದು ಬಸವನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಈತನು ಸಂಡೂರ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಮುಂಬರುವ ದಿನಗಳಲ್ಲಿ ಶಿವಶಂಕರನು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಸಾಗಿ ಬಸವ ನಾಡಿಗೆ ಒಳ್ಳೆಯ ಹೆಸರನ್ನು ತರುವ…
ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದ ಪರಶುರಾಮ ದೊಡಮನಿ ತೋಟದ ಬಾವಿಯಲ್ಲಿ ಗುರುವಾರ ಆಕಸ್ಮಿಕವಾಗಿ ಶಿವಶಂಕ್ರೆಪ್ಪ ಅಂಬೇಕರ ಅವರ ಎತ್ತು ಬಿದ್ದ್ತಿತು. ಈ ಎತ್ತನ್ನು ಸ್ಥಳೀಯ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಎತ್ತನ್ನು ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆ ತಂದರು. ಈ ಕಾರ್ಯಾಚರಣೆ ಸುಮಾರು ಮೂರು ಗಂಟೆ ಕಾಲ ನಡೆಯಿತು. ಬಾವಿಯಿಂದ ಸಿಬ್ಬಂದಿಗಳು ಸುರಕ್ಷಿತವಾಗಿ ಮೇಲಕ್ಕೆ ತಂದು ಎತ್ತಿನ ಮಾಲೀಕರಿಗೆ ಒಪ್ಪಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಬಸಪ್ಪ ಜಾಲಗೇರಿ, ನಾರಾಯಣ ರಾಠೋಡ, ಮಲ್ಲಿನಗೌಡ ಬಿರಾದಾರ, ಅಶೋಕ ನಾಯಕ, ಮುತ್ತಣ್ಣ ಲಮಾಣಿ, ನಾಗಪ್ಪ ಉಂಡಿ ಇದ್ದರು ಎಂದು ಅಗ್ನಿಶಾಮಕ ಠಾಣಾಧಿಕಾರಿ ಸಂಗಮೇಶ ಶಿವಪೂಜೆ ತಿಳಿಸಿದ್ದಾರೆ.
ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮಕ್ಕೆ ಉರ್ದು ಪದವಿ ಪೂರ್ವ ಕಾಲೇಜು ಮಂಜೂರ ಮಾಡುವ ಮೂಲಕ ಹೆಣ್ಣುಮಕ್ಕಳ ಉನ್ನತ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಮಸ್ಥರು ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಸರಕಾರಿ ಉರ್ದು ಪದವಿ ಪೂರ್ವ ಕಾಲೇಜು ಬಹುದಿನಗಳ ಬೇಡಿಕೆಯಾದ್ದು, ಈಗಾಗಲೇ ಗ್ರಾಮದಲ್ಲಿ ಸರಕಾರಿ ಉರ್ದು ಪ್ರೌಢಶಾಲೆಯಿದೆ. ಪ್ರೌಢಶಾಲೆಯ ವ್ಯಾಸಂಗದ ನಂತರ ಕಾಲೇಜು ಅಧ್ಯಯನ ಅಗತ್ಯವಾಗಿದೆ. ಹುಣಶ್ಯಾಳ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಹಳಷ್ಟು ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗಾಗಿ ಪದವಿಪೂರ್ವ ಕಾಲೇಜು ಅಗತ್ಯವಾಗಿದೆ.ಗ್ರಾಮದಲ್ಲಿ ಈಗ ಇರುವ ಪ್ರೌಡಶಾಲೆಯ ನಂತರ ಬಹಳಷ್ಟು ವಿದ್ಯಾರ್ಥಿಗಳು ಶಾಲೆ ಬಿಡುವಂತಾಗಿದ್ದು, ಅದರಲ್ಲಿ ವಿಶೇಷವಾಗಿ ಹೆಣ್ಣುಮಕ್ಕಳು ಬಹುತೇಕ ಶಾಲೆ ತೊರೆಯುತ್ತಿದ್ದಾರೆ. ಈಗ ಕಾಲೇಜು ಶಿಕ್ಷಣ ಪಡೆಯಲು ಸಿಂದಗಿ, ವಿಜಯಪುರಕ್ಕೆ ತೆರಳುವ ಅನಿವಾರ್ಯತೆಯಿದೆ. ಈಗ ಹುಣಶ್ಯಾಳ ಗ್ರಾಮದಲ್ಲಿ ಕಾಲೇಜು ಆರಂಭಗೊಂಡಿದ್ದೇಯಾದಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಯಲಗೋಡ, ಆಲಗೂರ, ಕೆರುಟಗಿ, ತುರಕನಗೇರಿ, ರಾಂಪೂರ, ಅಸಂತಾಪೂರ ಹೀಗೆ ಹಲವು ಗ್ರಾಮಗಳ ವಿದ್ಯಾರ್ಥಿನೀಯರಿಗೆ ಅನುಕೂಲವಾಲಿದೆ.ಹುಣಶ್ಯಾಳ ಗ್ರಾಮದಲ್ಲಿ ಸರಕಾರಿ ಪದವಿಪೂರ್ವ…
ವಿಜಯಪುರ: ಮುಂಜಾಗೃತ ಕ್ರಮವಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಂಡು ಡೆಂಗ್ಯೂ ರೋಗದ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯಾದ ಡಾ.ಕೆ.ಡಿ. ಗುಂಡಬಾವಡಿ ಹೇಳಿದರು.ಅವರು ಶುಕ್ರವಾರ ನಗರ ಸ್ಯಾಟಲೈಟ್ ಬಸ್ನಿಲ್ದಾಣದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ “ ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ” ಎಂಬ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮನೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವುದರಿಂದ ರೋಗಗಳಿಂದ ದೂರ ಇರಬಹುದು. ವ್ಯಯಕ್ತಿಕ ಸ್ವಚ್ಚತೆಯೊಂದಿಗೆ ಪರಿಸರದ ಸ್ವಚ್ಚತೆಗೂ ಆದ್ಯತೆ ನೀಡಿ ರೋಗ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾರ್ವಜನಿಕರು ಪಣ ತೋಡಬೇಕು ಎಂದು ಕರೆ ನೀಡಿದರು.ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಯಾದ ಡಾ. ಜೈಬುನ್ನಿಸಾಬೇಗಂ ಬೀಳಗಿ ಮಾತನಾಡಿ, ಡೆಂಗ್ಯು ರೋಗವು ಈಡಿಸ್ ಈಜಿಪ್ತ ಹೆಣ್ಣು ಸೊಳ್ಳೆಯಿಂದ ಹರಡುತ್ತಿದ್ದು, ನಿಂತ ನೀರಿನಲ್ಲಿ ಈ ಸೊಳ್ಳೆಗಳು ಉತ್ಪತ್ತಿಯಾಘುತ್ತವೆ ಹಾಗಾಗಿ ಮನೆಯ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಜಾಥಾ ಕಾರ್ಯಕ್ರಮವು ನಗರದ ಸ್ಯಾಟಲೈಟ್ ಬಸ್ನಿಲ್ದಾಣ…
ವಿಜಯಪುರ: ೨೦೨೪-೨೫ನೇ ಸಾಲಿಗೆ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಕರ್ನಾಟಕ ಸರ್ಕಾರದದಿಂದ ಅನುದಾನ ಪಡೆದ ಹಾಗೂ ಎಬಿಸಿಟಿಯ ಮಾನ್ಯತೆ ಪಡೆದ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಡಿಪ್ಲೋಮಾ ಕೋರ್ಸ್ ಗೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸ್ ಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್ಷಿಪ್, ಕಮರ್ಶಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿಯರಿಂಗ, ಹಾಗೂ ಅನುದಾನ ರಹಿತ ಕೋರ್ಸ್ಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್(ಫಾರ್ ವಿಜ್ಯುವಲಿ ಇಂಪರ್ಡ್)ಮ ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಸ್ಎಸ್ಎಲ್ಸಿಯಲ್ಲಿ ಕನಿಷ್ಠ ಶೇ.೩೫ ಅಂಕಗಳನ್ನು ಪಡೆದಿರಬೇಕು. ವಿಶೇಷಚೇತನ ಪ್ರಮಾಣಪತ್ರವನ್ನು ಒಳಗೊಂಡಿರಬೇಕು. ಪ್ರವೇಶಕ್ಕೆ ಅರ್ಜಿಗಳನ್ನು ನಗದು ಅಥವಾ ಡಿಡಿಯ ಮೂಲಕ ಶುಲ್ಕ ಪಾವತಿಸಿ(ಸಾಮನ್ಯ ವರ್ಗದ ಅಭ್ಯರ್ಥಿಗಳಿಗೆ ೧೦೦ರೂ. ಎಸ್ಸಿ,ಎಸ್ಟಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ೫೦ರೂಪಾಯಿ) ಜೆಎಸ್ಎಸ್ ವಿಶೇಷಚೇತನರ ಕಾಲೇಜುನಿಂದ ಪಡೆದುಕೊಳ್ಳಬಹುದು. ಅಥವಾ ಸಂಸ್ಥೆಯ ವೆಬ್ಸೈಟ್ www.jsspda.org ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ಸೈಟ್ ಅಥವಾ ೯೮೪೪೬೪೪೯೩೭…
ವಿಜಯಪುರ: ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಪಾರ್ಸಿ ಮತ್ತು ಸಿಖ್) ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ/ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು, ಸರ್ಕಾರಿ ಮುಸ್ಲಿಂ ವಸತಿ ಶಾಲೆ/ಕಾಲೇಜು, ಮತ್ತು ಇಂಟಿಗ್ರೇಟೆಡ್ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಪ್ರಥಮ ಪಿಯುಸಿ (ವಿಜ್ಞಾನ ಹಾಗೂ ವಾಣಿಜ್ಯ) ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಕೆಗೆ ಮೇ.೨೭ ಕೊನೆಯ ದಿನವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟು ಪ್ರವೇಶ ಮೀಸಲಿರಿಸಿದೆ. ವೀಕಲಚೇತನರಿಗೆ ಶೇ.೩ರಷ್ಟು, ಪ.ಜಾತಿ, ಪ.ಪಂಗಡ ಹಾಗೂ ಹಿಂದೂಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.೨೫ರಸ್ಟು ಪ್ರವೇಶಾತಿ ಮೀಸಲಿರಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ನೋಟ್ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ…
ವಿಜಯಪುರ: ವಿಜಯಪುರ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪಕೇಂದ್ರಕ್ಕೆ ಸಂಬಂಧಿಸಿದಂತೆ ಮೇ.೧೮ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪವಿಭಾಗದ ಕಚೇರಿಯಲ್ಲಿ ರೈತರು ಹಾಗೂ ಸಾರ್ವಜನಿಕರು ಸಮಸ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ವಿಜಯಪುರ ಹೆಸ್ಕಾಂ ಗ್ರಾಮೀಣ ಉಪವೀಭಾಗದ ಕಚೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಗೊಲಗುಂಬಜ್ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಮೇ.೧೮ರಂದು ಬೆಳಗ್ಗೆ ೧೦ ಗಂಟೆಗೆ ಅಂತರಾಷ್ಟಿçÃಯ ವಸ್ತು ಸಂಗ್ರಹಾಲಯದ ದಿನಾಚರಣೆ ನಡೆಯಲಿದೆ. ವಿಜಯಪುರದ ಸಿಕಾಬ್ ಎಅರ್ಎಸ್ಐ, ಇನಾಮ್ದಾರ್ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಎಸ್. ಮೇತ್ರಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿ.ಬಿ. ದರ್ಬಾರ್ ಪಿ.ಯು. ಕಾಲೇಜಿನ ಇತಿಹಾಸ ವಿಭಾಗದ ಅನಿಲ್ಕುಮಾರ್ ಜಿ. ತೊಬ್ಬಿ, ವಿಶೇಷ ಉಪನ್ಯಾಸ ನೀಡಲಿದ್ದಾರೆ. ಧಾರವಾಢ ವಲಯದ ಅಧೀಕ್ಷಕ ಪುರಾತತ್ವವಿದರಾದ ಡಾ. ರೇಷ್ಮ. ಅರ್. ಸಾವಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.ಜನಸಾಮಾನ್ಯರಲ್ಲಿ ವಿಶೇಷವಾಗಿ ಮಕ್ಕಳಲ್ಲಿ ನಮ್ಮ ದೇಶದ ಚರಸಾಂಸ್ಕöÈತಿಕ ಸಂಪತ್ತಿನ ಬಗೆಗೆ ತಿಳಿವಳಿಕೆ ನೀಡಿ ಅಂತಹ ಸಂಪತ್ತನ್ನು ಸಂರಕ್ಷಿಸಲು ಪ್ರೇರೇಪಿಸುವುದು ಹಾಗೂ ಸಂಶೋಧನೆಯಲ್ಲಿ ಪ್ರಾಚ್ಯವಸ್ತುಗಳನ್ನು ಕುರಿತು ಮಾಹಿತಿಯನ್ನು ಬಳಸಿಕೂಳ್ಳುವಂತೆ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಈ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಲೇಖನ, ಚಿತ್ರಕಲೆ (ಡ್ರಾಯಿಂಗ್) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಗುವುದು.ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಈ ಕಾರ್ಯಕ್ರಮವನ್ನು…
ವಿಜಯಪುರ: ಒಂದು ದೇಶದ ಅಭಿವೃದ್ಧಿ ಅಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ಸದೃಡ ದೇಶ ಕಟ್ಟುವಲ್ಲಿ ಕಾರ್ಮಿಕರು ಶ್ರಮ ಅಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿಗಳಾದ ಸಂತೋಷ ಎಸ್. ಕುಂದರು ಹೇಳಿದರು.ಅವರು ಬುಧವಾರ ನಗರದ ಶಿವಗಿರಿ ರಸ್ತೆಗೆ ಇರುವ ಲೊಯೋಲ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಲೊಯೋಲ ಕೈಗಾರಿಕಾ ತರಭೇತಿ ಸಂಸ್ಥೆ ಹಾಗೂ ಬಿಜಾಪುರ ನಗರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಯೂನಿಯನ್(ರಿ), ವಿಜಯಪುರ ಇವರ ಆಶ್ರಯದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ-೨೦೨೪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಬೆಳವಣಿಗೆಗೆ ಕಾರ್ಮಿಕರ ಕೊಡುಗೆ ಅನನ್ಯವಾಗಿದೆ. ಕಾರ್ಮಿಕರಿಗೆ ಏನಾದರೂ ತೊಂದರೆ ಊಂಟಾದರೆ ಉಚಿತ ಕಾನೂನು ಸೇವಾ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾದರ್ ಟಿಯೋಲ್ ಮಚಾದೋ ಪ್ರಾಸ್ತಾವಿಕವಾಗಿ ಮಾತನಾಡಿ, ಹಲವಾರು ಯೋಜನೆಗಳು ಕಾರ್ಮಿಕರಿಗಿದ್ದು, ಅವುಗಳನ್ನು…
