Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಕೀಲ ವೃತ್ತಿ ಕೇವಲ ಉದ್ಯೋಗವಲ್ಲ, ಇದು ನ್ಯಾಯ ವ್ಯವಸ್ಥೆಯ ಪ್ರಮುಖ ಕಂಬ ಎಂದು ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ ಜಿ. ಹೇಳಿದರು.ಅವರು ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನೆಲೆ ಮಂಗಳವಾರ ಪಟ್ಟಣದ ನ್ಯಾಯಾಲಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.ವಕೀಲರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ನಾನು ಮಾಡುವೆ. ವಕೀಲರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ನಿರ್ಧಾರಗಳಿಗೆ ಅವಕಾಶ ನೀಡುವುದಿಲ್ಲ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ, ಜಾತಿಗೆ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಎಲ್ಲ ವಕೀಲರು ನನ್ನ ಕುಟುಂಬ ಎಂದು ಭಾವಿಸಿ ಅವರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವೆ ಎಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಚುನಾವಣೆಗೂ ಪೂರ್ವದಲ್ಲಿ ಸಂಘದ ಸರ್ವ ಸದಸ್ಯರೊಂದಿಗೆ ಚರ್ಚಿಸಿ ಮತ ನೀಡುವ ಭರವಸೆ ನೀಡಿದರು.ಹಿರಿಯ, ಕಿರಿಯ ಹಾಗೂ ಯುವ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೌಟುಂಬಿಕ ಕಲಹ ಹಾಗೂ ಒತ್ತಡಗಳಿಂದ ತಮ್ಮ ಸಮಸ್ಯೆಗಳನ್ನು ನಿರ್ಲಕ್ಷಿಸಿ ಜೀವನವನ್ನು ಸಾಗಿಸುತ್ತಿರುವ ಮಹಿಳೆಯರ ಮನಸ್ಸನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಸಮಾಜ ಕಾರ್ಯಕರ್ತೆ ರಶ್ಮಿ ನೂಲಾನವರ ಹೇಳಿದರು.ಸಿಂದಗಿ ತಾಲೂಕಿನ ರಾಂಪುರ ಪಿಎ ಗ್ರಾಮದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಶ್ರೀಧರ ವಿದ್ಯಾವರ್ಧಕ ಸಂಘ, ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಿಂದಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಸಂಗಮ ಸಮಾಜ ಸೇವಾ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರ ಏಳಿಗೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರವು ಒಂದು ಎಂದರು.ಈ ವೇಳೆ ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಸಿಂತಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಸುನಿತಾ ಕಪ್ಪೆಣವರ ಮಾತನಾಡಿ,…
ಸಿಂದಗಿಯಲ್ಲಿ ಅಶೋಕ ಲಾಂಛನ ಸ್ತಂಭ ವೃತ್ತ ನಿರ್ಮಾಣ, ಗಾಂಧಿ ಪುತ್ಥಳಿ ಅನಾವರಣ, ನೂತನ ಹೈಟೆಕ್ ಅಂಬುಲೆನ್ಸ್ ಮತ್ತು ಡಯಾಲಿಸಿಸ್ ಕೇಂದ್ರ, ಪಿಡಿಯಾಟ್ರಿಕ್ ಐಸಿಯು ಘಟಕಗಳ ಉದ್ಘಾಟನೆ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಉನ್ನತಿಕರಣಕ್ಕೆ ಇನ್ನು ಹೆಚ್ಚಿನ ರೀತಿಯ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಶಾಸಕ ಅಶೋಕ ಮನಗೂಳಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸಹಕಾರ ನೀಡುತ್ತೇನೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಸಿಂದಗಿ ನಗರದ ನೂತನ ಗಾಂಧಿ ಪುತ್ಥಳಿ ಅನಾವರಣ, ರಾಷ್ಟ್ರೀಯ ಲಾಂಛನ ಅಶೋಕ ಸ್ತಂಭ, ನಗರಸಭೆ ಕಾರ್ಯಾಲಯ ಉದ್ಘಾಟನೆ, ನೂತನ ಹೈಟೆಕ್ ಅಂಬುಲೆನ್ಸ್ ಮತ್ತು ಡಯಾಲಿಸಿಸ್ ಕೇಂದ್ರ, ಪಿಡಿಯಾಟ್ರಿಕ್ ಐಸಿಯು ಘಟಕಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವ ಮತ್ತು ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಪ್ರಯತ್ನದಿಂದ ನಗರದ ೫೦ಸಾವಿರಕ್ಕೂ ಹೆಚ್ಚು ಜನತೆಯ ಕನಸಿನಂತೆ ಸಿಂದಗಿ ನಗರಸಭೆಯಾಗಿ ಪರಿವರ್ತನೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೇ ಪ್ರಪ್ರಥಮ ಅಶೋಕ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಸಿಂದಗಿ ಮತ್ತು ಆಲಮೇಲ ತಾಲೂಕು ಕಾನೂನು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಜಕ್ಕಣ್ಣ ಸೀತಿಮನಿ ಹಾಗೂ ರೇಬ್ಬಣ್ಣ ಸೀತಿಮನಿ ಅವರಿಗೆ ಆದೇಶವನ್ನು ಪತ್ರ ನೀಡಲಾಯಿತು.ಬ್ಲೂ ಇಂಡಿಯಾ ಪಾರ್ಟಿಯ ನೂತನ ಕಾನೂನು ಘಟಕದ ರಾಜ್ಯಾಧ್ಯಕ್ಷರನ್ನಾಗಿ ಕಲ್ಲಪ್ಪ ಮರೆಪ್ಪ ಬಳುಂಡಗಿ, ಸಿಂದಗಿ ತಾಲೂಕಾಧ್ಯಕ್ಷರನ್ನಾಗಿ ಜಕ್ಕಣ್ಣ ಭೀಮರಾಯ ಸೀತಿಮನಿ ಹಾಗೂ ಆಲಮೇಲ ತಾಲೂಕಾಧ್ಯಕ್ಷರನ್ನಾಗಿ ರೇಬ್ಬಣ್ಣ ಬೀರಪ್ಪ ಸೀತಿಮನಿ ಅವರನ್ನು ಆಯ್ಕೆಮಾಡಲಾಗಿದೆ ಎಂದು ಬ್ಲೂ ಇಂಡಿಯಾ ಪಾರ್ಟಿ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ಅವರು ಆದೇಶಿಸಿದ್ದಾರೆ.
ದಿ. ಎಂ.ಸಿ.ಮನಗೂಳಿ ಅವರ ೫ನೇ ಪುಣ್ಯಸ್ಮರಣೆ ನಿಮಿತ್ತ ಹೊನಲು ಬೆಳಕಿನ ವಾಲಿಬಾಲ್ “ಭಗೀರಥ ಕಪ್” ಕಾರ್ಯಕ್ರಮಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದಿ. ಎಂ.ಸಿ.ಮನಗೂಳಿ ಅವರು ಕಡು ಬಡುತನದಲ್ಲಿ ಹುಟ್ಟಿದರು ಜನಸೇವೆ ಮಾಡಬೇಕೆಂಬ ಬಯಕೆ ಅವರಲ್ಲಿ ಬಹಳಷ್ಟಿತ್ತು. ಅದರ ಫಲವಾಗಿ ಅವರು ಸಚಿವರಾಗಿ ಆಯ್ಕೆಯಾಗಿ ಜಿಲ್ಲೆಗೆ ಅನೇಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಒಬ್ಬ ದೀಮಂತ ವ್ಯಕ್ತಿಯಾಗಿದ್ದರು ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಸಿಂದಗಿ ಪಟ್ಟಣದ ಎಚ್.ಜಿ.ಕಾಲೇಜಿನ ಮೈದಾನದಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ ಹಾಗೂ ಎಂ.ಸಿ.ಮನಗೂಳಿ ಪ್ರತಿಷ್ಠಾನದ ವತಿಯಿಂದ ಎಂ.ಸಿ.ಮನಗೂಳಿ ಅವರ ೫ನೇ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡ ಹೊನಲು ಬೆಳಕಿನ ವಾಲಿಬಾಲ್ ಭಗೀರಥ ಕಪ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಮುಖೇನ ನಾವೆಲ್ಲ ಕಾರ್ಯನಿರ್ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ದಿ.ಎಂ.ಸಿ.ಮನಗೂಳಿ ಅವರ ಸುಪುತ್ರ ಶಾಸಕ ಅಶೋಕ ಮನಗೂಳಿ ಅವರೇ ನೀದರ್ಶನ. ಅಶೋಕ ಮನಗೂಳಿ ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ ಆಲಮೇಲದ ಬೆರಗು ಪ್ರಕಾಶನದ ಪ್ರಕಾಶಕಿ ವಿಜಯಲಕ್ಷ್ಮೀ ರಮೇಶ ಕತ್ತಿ ರವರ ಮನೆಗೊಂದು ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮ ಜರುಗಿತು.ಉದ್ಘಾಟನೆ ಮಾಡಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ರವರು, ಇಂದು ಡಿಜಿಟಲ್ ಪರಿಣಾಮವಾಗಿ ಪುಸ್ತಕಗಳನ್ನು ಕೊಳ್ಳುವವರಿಲ್ಲ, ಓದುವವರಿಲ್ಲ ಎಂಬ ಕೊರಗು ನಮ್ಮ ಸಾಹಿತಿಗಳಲ್ಲಿ , ಪ್ರಕಾಶಕರಲ್ಲಿ ಆತಂಕ ಮನೆ ಮಾಡಿದೆ. ಇದನ್ನು ಮನಗಂಡು ನಮ್ಮ ಪ್ರಾಧಿಕಾರ ಮಹತ್ವಾಕಾಂಕ್ಷೆ ಯೋಜನೆ ಮನೆಗೊಂದು ಗ್ರಂಥಾಲಯ ಅಡಿಯಲ್ಲಿ ರಾಜ್ಯದಲ್ಲಿ ಕನಿಷ್ಠ ಒಂದು ಲಕ್ಷ ಮನೆಗಳಲ್ಲಿ ಅಸ್ತಿತ್ವಕ್ಕೆ ತರುವ ಸಲುವಾಗಿ ಪ್ರತಿ ಜಿಲ್ಲಾವಾರು ಹತ್ತು ಜನ ಸದಸ್ಯರು ತಂಡದೊಂದಿಗೆ ಪ್ರತಿ ನಿತ್ಯ ೫-೬ ಮನೆಗೊಂದು ಗ್ರಂಥಾಲಯ ಸ್ಥಾಪನೆ ಮಾಡುವ ಕಾರ್ಯ ಮಾಡುತ್ತಿದೆ. ಅದರಂತೆಯೇ ಇಂದು ವಿಜಯಪುರ ಜಿಲ್ಲೆಯಲ್ಲಿ ಆಲಮೇಲ ತಾಲ್ಲೂಕಿನ ಉಪನ್ಯಾಸಕರು ಪ್ರೊಫೆಸರ್ ಡಾ.ರಮೇಶ ಕತ್ತಿ ರವರ ಮನೆಯಲ್ಲಿ ಉದ್ಘಾಟನೆ ಮಾಡುವ ಸೌಭಾಗ್ಯ ದೊರೆಯಿತು. ಉದ್ಘಾಟನೆ ಮಾಡಿ ಮನೆಯಲ್ಲಿನ ಅಚ್ಚುಕಟ್ಟಾದ ಗ್ರಂಥಾಲಯ ವೀಕ್ಷಣೆ ಮಾಡಿದಾಗ ರಾಜ್ಯದ ಹೆಸರಾಂತ ಸಾಹಿತಿಗಳ…
ವಿಜಯಪುರದಲ್ಲಿ ಬಸವ ತಿಳುವಳಿಕೆ ಸಂಶೋಧನಾ ಕೇಂದ್ರ ಪುಣೆಯ ವಿಜಯಪುರ ಜಿಲ್ಲಾ ಶಾಖೆಯ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆ , ಈ ಆಧ್ಯಾತ್ಮಿಕ ಕೇಂದ್ರ ಹಲವು ವರ್ಷಗಳಿಂದ ಬಸವಣ್ಣನವರ ಆದರ್ಶಗಳನ್ನು ಆಧರಿಸಿದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಕೇಂದ್ರವಾಗಿ, ಬೆಳೆಯುವ ಗುರಿಯನ್ನು ಹೊಂದಿದೆ. ಮತ್ತು ಶರಣರ ಪರಂಪರೆಯ ಅಧ್ಯಯನಕ್ಕೆ ಒಂದು ಪ್ರಮುಖ ವೇದಿಕೆಯಾಗಿದೆ. ಬಸವಾದಿ ಶರಣರ ತತ್ವ, ಸಂದೇಶಗಳನ್ನು ನ್ಯಾಯ, ಸಮಾನತೆ ಮತ್ತು ಸಮುದಾಯದ ಏಕತೆಗಾಗಿ, ಶರಣ ಸತ್ಸಂಗ ಕಾರ್ಯಕ್ರಮಗಳ ಮೂಲಕ, ಶರಣರ ಚಿಂತನೆಗಳನ್ನು ಪ್ರೋತ್ಸಾಹಿಸುತ್ತಾ, ವಚನ ಪರಿಷ್ಕರಣೆ, ವಚನಗಳ ಪ್ರಚಾರ ಮತ್ತು ಪ್ರಸಾರ ಮಾಡುತ್ತ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಮೌಲಿಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದೆ. ಪುಣೆಯಲ್ಲಿ ಇದರ ಮುಖ್ಯ ಕೇಂದ್ರವಿದ್ದು.. ಇತೀಚೆಗೆ ವಿಜಯಪುರದಲ್ಲಿ ಅದರ ಶಾಖೆಯನ್ನು ಉದ್ಘಾಟಿಸಲಾಯಿತು. ವಿಜಯಪುರ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಸಂಸ್ಥಾಪಕ ಅಧ್ಯಕ್ಷರುಡಾ ಶಶಿಕಾಂತ ಪಟ್ಟಣಗೌರವಾಧ್ಯಕ್ಷರುಡಾ. ಸರಸ್ವತಿ ಪಾಟೀಲಅಧ್ಯಕ್ಷರುಪ್ರೊ. ಆರ್.ಎಸ್.ಬಿರಾದಾರ.ಉಪಾಧ್ಯಕ್ಷರುಶ್ರೀ ಸಿದ್ದಪ್ಪ ಪಡನಾಡ ಶ್ರೀ ಜಿ.ಬಿ ಸಾಲಕ್ಕಿಪ್ರಧಾನ ಕಾರ್ಯದರ್ಶಿಗಳುಡಾ.…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಪುರಸಭೆ ಆವರಣದಲ್ಲಿ ನಡೆದ ಶಾಲೆ ಮಕ್ಕಳ ಸಾಂಸ್ಕೃತಿಕ ಕಲಾ ಪ್ರದರ್ಶನದಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಪ್ರಸ್ತುತ ಪಡಿಸಿದ ಕಿತ್ತೂರು ಸಂಸ್ಥಾನದ ವೀರ ರಾಣಿ ಚೆನ್ನಮ್ಮಳ ಬಲಗೈ ಭಂಟ ಸಂಗೊಳ್ಳಿ ರಾಯಣ್ಣನ ಪ್ರಮುಖ ಪಾತ್ರದ ರೂಪಕ ನಾಟಕ ನೋಡುಗರ ಮೆಚ್ಚುಗೆ ಪಾತ್ರವಾಯಿತು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧದ ಅವರ ಸಾವಿನವರೆಗೂ ಹೋರಾಡಿದ್ದು, ಥ್ಯಾಖರೆ, ರಾಣಿ ಚನ್ನಮ್ಮ ಮತ್ತು ರಾಯಣ್ಣನ ತಾಯಿ ಕೆಂಚವ್ವಳೊಂದಿಗಿನ ಸಂಭಾಷಣೆಗಳ ಮಕ್ಕಳ ಅಭಿನಯದ ಕಿರು ನಾಟಕ ಸೇರಿದ ಸಭಿಕರನ್ನು ಭಾವದ್ವೇಗಗೊಳಿಸಿತು. ದೇಶಭಕ್ತಿಯ ರಾಯಣ್ಣ ಕಚ್ಚೆದೆಯ ಮಾತುಗಳಿಗೆ ಬಂದ ಹರ್ಷೋದ್ಘಾರ, ಶಿಳ್ಳೆ, ಚಪ್ಪಾಳೆ ಮುಗಿಲು ಮುಟ್ಟಿತು.ಕೆಚ್ಚೆದೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ದೇಶಭಕ್ತಿಯ ಮಕ್ಕಳ ಮನೋಜ್ಞ ಪ್ರದರ್ಶನ ಪುರಸಭೆಯಿಂದ ಪ್ರಥಮ ಬಹುಮಾನ ಪಡೆದುಕೊಂಡು, ಶಾಲೆಯ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸೇರಿದಂತೆ ಹಲವರು ಅಭಿನಂದಿಸಿ ಶ್ಲಾಘಿಸಿದರು.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಒಂದು ಸಂಸ್ಥೆ ಸ್ಥಾಪನೆಯಾದ ದಿನವನ್ನು ಸಂಸ್ದಾಪನಾ ದಿನವನ್ನಾಗಿ ಆಚರಿಸುವ ಮೂಲಕ ಸಂಸ್ಥೆಯ ಸಾಧನೆಗಳನ್ನು ಮೆಲುಕು ಹಾಕುತ್ತಾ ಭವಿಷ್ಯದ ಗುರಿಗಳನ್ನು ನಿಗದಿಪಡಿಸುವ ವಿಶೇಷ ದಿನವಾಗಿದೆ ಎಂದು ಸಹಕಾರಿ ನಿರ್ದೇಶಕ ವೈ ಟಿ ಪಾಟೀಲ ಹೇಳಿದರು.ಪಟ್ಟಣದ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕೆಂಭಾವಿ ಕಾರ್ಯಕ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 18 ನೇ ವರ್ಷದ ವಾರ್ಷಿಕೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಾಮಾನ್ಯವಾಗಿ, ಈ ದಿನದಂದು ಸಂಸ್ಥೆಯು ಕಳೆದ ವರ್ಷದ ಸಾಧನೆಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ಮುಂದಿನ ಬೆಳವಣಿಗೆಯ ಯೋಜನೆಗಳನ್ನು ರೂಪಿಸುತ್ತಾ ಶೇರುದಾರರ ಹಾಗೂ ಸಿಬ್ಬಂದಿ ಮತ್ತು ಗ್ರಾಹಕರಲ್ಲಿ ಒಗ್ಗಟ್ಟು, ಕೃತಜ್ಞತೆ ಮತ್ತು ಪ್ರೇರಣೆಯನ್ನು ಮೂಡಿಸುತ್ತದೆ ಎಂದರು.ಸಹಕಾರಿಯ ಅಧ್ಯಕ್ಷ ಶಾಂತಗೌಡ ಎಂ ಬಿರಾದಾರ, ಉಪಾಧ್ಯಕ್ಷ ಶರಣಬಸವ ಡಿಗ್ಗಾವಿ, ನಿರ್ದೇಶಕರಾದ, ಸಂಗನಗೌಡ ಮರಡ್ಡಿ, ರಾಮನಗೌಡ ವಂದಗನೂರ ಯಾಳಗಿ, ಎಸ್ ವೈ ಕರಡಕಲ್, ಮಲ್ಲನಗೌಡ ಪೋಲೀಸ್ ಪಾಟೀಲ, ಅಯ್ಯನಗೌಡ ಲಕ್ಕುಂಡಿ, ಮಲ್ಲರಡ್ಡಿ ಮಲ್ಲಾಬಾದಿ, ಸಿದ್ದನಗೌಡ ಶಿವಪುರ, ರವೀಂದ್ರ ಧರಿ, ಡಾ ಪ್ರವೀಣ್ ಪಾಟೀಲ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭೂಮಿ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ವಿಜಯಪುರ ಜಿಲ್ಲೆಯು ತೃತೀಯ ಸ್ಥಾನ ಪಡೆದಿರುವುದಕ್ಕೆ ಕಂದಾಯ ಇಲಾಖೆ ಭೂಮಿ ಉಸ್ತುವಾರಿ ಕೋಶದಿಂದ ಅಭಿನಂದನಾ ಪತ್ರ ನೀಡಲಾಗಿದೆ.ಡಿಸೆಂಬರ್–೨೦೨೫ ಮಾಹೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಒಟ್ಟು ೧೪,೦೬೦ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಶೀಘ್ರವಾಗಿ ವಿಲೇವಾರಿ ಮಾಡಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.ಡಿಸೆAಬರ್–೨೦೨೫ ಮಾಹೆಯಲ್ಲಿ ಜಿಲ್ಲೆ ೫.೫೨ ಸಿಗ್ಮಾ ಮೌಲ್ಯವನ್ನು ಸಾಧಿಸಿದ್ದು, ಇದರ ಫಲವಾಗಿ ವಿಲೇವಾರಿ ಸೂಚ್ಯಾಂಕ (ಆisಠಿosಚಿಟ Iಟಿಜex) ೪.೫೮೭೬೬ ದಾಖಲಾಗಿದೆ. ಈ ಸಾಧನೆ ಜಿಲ್ಲೆಯಲ್ಲಿ ಭೂಮಿ ಯೋಜನೆಯ ಅನುಷ್ಠಾನವು ಪರಿಣಾಮಕಾರಿಯಾಗಿ ನಡೆಯುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಈ ಮಹತ್ವದ ಕಾರ್ಯಸಾಧನೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದ ಸಂಬಂಧಿತ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮರ್ಪಿತ ಸಹಕಾರ, ಕಾರ್ಯತತ್ಪರತೆ ಮತ್ತು ಹೊಣೆಗಾರಿಕೆ ಪ್ರಮುಖ ಕಾರಣವಾಗಿದೆ ಎಂದು ಭೂಮಿ ಉಸ್ತುವಾರಿ ಕೋಶ ತಿಳಿಸಿದೆ.ಜಿಲ್ಲೆಯ ಈ ಸಾಧನೆಗೆ ಭೂಮಿ ಉಸ್ತುವಾರಿ ಕೋಶದ ಪರವಾಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಅವರ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು–ಸಿಬ್ಬಂದಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು…
