Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಜಗನ್ನಾಥ್ ಹಲಮಡಗಿ ಅವರು ಜುಲೈ ೧೬ ಮತ್ತು ೧೭ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.​ಜುಲೈ ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದಲ್ಲಿರುವ ಆಸ್ಪತ್ರೆ, ಶಾಲೆ, ಪೊಲೀಸ್ ಠಾಣೆ, ವಸತಿ ನಿಲಯ, ಅಂಗನವಾಡಿ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ ೪ ಗಂಟೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ.​ಜುಲೈ ೧೭ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ರವರೆಗೆ ಜಿಲ್ಲೆಯ ವಿವಿಧ ಶಾಲೆ, ಆಸ್ಪತ್ರೆ, ಅಂಗನವಾಡಿ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಪರಿಶೀಲನೆ ನಡೆಸಿ, ನಂತರ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಾಜಿ ಪ್ರಧಾನಿ ದೇವೇಗೌಡರ ನಿಲುವಿಗೆ ನನ್ನ ಸಂಪೂರ್ಣ ಬೆಂಬಲ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಮಣ್ಣಿನ ಮಗ ಮಾಜಿ ಪ್ರಧಾನಿಗಳಾದ ದೇವೇಗೌಡರು ವಿಧಾನ ಸೌಧದಲ್ಲಿ ಧರಣಿ ಕೂರುವುದಾಗಿ ಘೋಷಿಸಿದ್ದು, ಅವರ ಈ ನಿಲುವಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಟೌನ್ ಶಿಪ್ ಯೋಜನೆ ರದ್ದುಗೊಳಿಸುವವರೆಗೂ ನಾನೂ ಸಹ ವಿಧಾನಸೌಧದೊಳಗೆ ಧರಣಿ ಕೂರುವುದಾಗಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಘೋಷಿಸಿದ್ದಾರೆ.ಸಮೃದ್ಧವಾದ ಬಾಳೆ, ತೆಂಗು, ಅಡಕೆ, ತರಕಾರಿ ಸೇರಿದಂತೆ ಹಲವು ಬಗೆಯ ಬೆಳೆಗಳನ್ನು ಬೆಳೆಯುವ ಜೊತೆಗೆ ಪ್ರತಿ ತಿಂಗಳು 6 ಲಕ್ಷಕ್ಕಿಂತ ಹೆಚ್ಚು ಲೀಟರ್ ಹಾಲು ನೀಡುವ ಹಚ್ಚ ಹಸಿರಾದ ಸಂಪತ್ಬರಿತ ಸಾವಿರಾರು ಎಕರೆ ಭೂಮಿಯನ್ನು ಟೌನ್ ಶಿಪ್ ಹೆಸರಿನಲ್ಲಿ ಸರ್ಕಾರ ಬಲವಂತದಿಂದ ರೈತರಿಂದ ಕಸಿದುಕೊಳ್ಳಲು ಹುನ್ನಾರ ನಡೆಸಿದೆ. ಇಂತಹ ಭೂಮಿಯಲ್ಲಿ ಟೌನ್ ಶಿಫ್ ಮಾಡುವುದು ಸರಿಯಲ್ಲ.ಆದ್ದರಿಂದ ಕೂಡಲೇ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸಬೇಕು ಹಾಗೂ ಭೂ ಸ್ವಾಧೀನ ವಿರೋಧಿಸುತ್ತಿರುವ ರೈತರ…

Read More

ವಿಜಯಪುರ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಲ್ಲಿ `ಕೋಟಿ’ ಮೌಲ್ಯದ ಮಾದಕ ದ್ರವ್ಯ ಜಪ್ತಿ | ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ಸಂದೀಪ ಪಾಟೀಲ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರು ಸಂಕಲ್ಪ ಮಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ ಮಾದಕ ದ್ರವ್ಯ ವಸ್ತುಗಳ ಮಾರಾಟ ಜಾಲಗಳನ್ನು ಮಟ್ಟ ಹಾಕಲು ಶ್ರಮಿಸಲಾಗುತ್ತಿದ್ದು, ಕಳೆದ ವರ್ಷ ಹಾಗೂ ಪ್ರಸಕ್ತ ವರ್ಷದ ಜೂನ್ ಮಾಸಾಂತ್ಯದವರೆಗೆ ೯೮,೭೬,೭೨೦ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತು ಮಾಡಿ ೭೩ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೆಳಗಾವಿ ವಿಭಾಗದಲ್ಲಿ ಡ್ರಗ್ಸ್ ಭೇದಿಸುವ ಪ್ರಕರಣದಲ್ಲಿ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ಸಂದೀಪ ಪಾಟೀಲ ಮಾಹಿತಿ ನೀಡಿದರು.ವಿಜಯಪುರದಲ್ಲಿ ಡ್ರಗ್ ಫ್ರೀ ಕರ್ನಾಟಕ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಅಭಿಯಾನ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಮಾದಕ ದ್ರವ್ಯ ಮಾರಾಟ ಜಾಲವನ್ನು ಬೇಧಿಸಲು ಪ್ರಯತ್ನಿಸಲಾಗುತ್ತಿದೆ, ಹೀಗಾಗಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರ್ವಕಾಲಕ್ಕೂ ವಿಶ್ವ ಸಂಗೀತ ಇತಿಹಾಸದಲ್ಲಿ ಅಜರಾಮರವಾಗಿ ನಿಲ್ಲುವಂತಹ ಗಾಯಕಿ ಗಾನಕೋಗಿಲೆ ಎಸ್.ಜಾನಕಿ ಕಂಠ ಮಾಧುರ್ಯಕ್ಕೆ ಎಂತಹವರನ್ನು ಮಂತ್ರಮುಗ್ಧರನ್ನಾಗಿ ಮಾಡುವಂತಹ ಶಕ್ತಿ ಇದೆ. ಅವರು ದೈಹಿಕವಾಗಿ ದೂರವಾಗಿರಬಹುದು. ಆದರೆ ಅವರ ಗಾಯನ ಪ್ರತಿನಿತ್ಯ ಎಲ್ಲರ ಮನಸ್ಸಿನಲ್ಲೂ ಮಿಗುನುಗುತ್ತಿರುತ್ತವೆ ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈಚೆಗೆ ನಿಧನರಾದ ಬಹುಭಾಷೆ ಸಿನಿಮಾ ಹಿನ್ನೆಲೆ ಗಾಯಕಿ ಗಾನಕೋಗಿಲೆ ಎಸ್.ಜಾನಕಿ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಸೇರಿದಂತೆ ವಿಶ್ವ ಕಂಡ ಈ ಶತಮಾನದ ಶ್ರೇಷ್ಠ ಗಾಯಕಿಯರಲ್ಲಿ ಎಸ್. ಜಾನಕಿ ಅಗ್ರಸ್ಥಾನದಲ್ಲಿದ್ದಾರೆ. ಸುಮಾರು ೧೬ಕ್ಕೂ ಅಧಿಕ ಭಾಷೆಗಳಲ್ಲಿ ೪೮ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಅವರು, ಲತಾ ಮಂಗೇಶ್ಕರ್ ಅವರ ನಂತರ ವಿವಿಧ ಭಾಷೆಗಳಲ್ಲಿ ಅತಿ ಹೆಚ್ಚು ಹಾಡುಗಳನ್ನು ಹಾಡಿದ ಅಪರೂಪದ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದರು.ಈ ವೇಳೆ ಜಿಲ್ಲಾ ಕನ್ನಡ ಸಾಹಿತ್ಯ…

Read More

ಲಾರಿ ಸೇರಿದಂತೆ ಎಲ್ಲ ದೊಡ್ಡ ವಾಹನಗಳು ಸಂಚರಿಸುತ್ತಿವೆಯಾದರೂ ಬಸ್ ಸಂಚಾರವಿಲ್ಲ ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ದುರಸ್ತಿ ಸಲುವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಿರುವುದರಿಂದ ಕಳೆದ ನಾಲ್ಕು ತಿಂಗಳಿಂದ ಸಾರಿಗೆ ಸಂಸ್ಥೆಯ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.ವಿಜಯಪುರ ಕಲಬುರಗಿ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ, ಔರಾದ ಸದಾಶಿವಘಡ ರಾಜ್ಯ ಹೆದ್ದಾರಿ 34, ಅದರಲ್ಲಿ ಬರುವ ಈ ಸೇತುವೆಯ ಮೇಲ್ಭಾಗ ಕಿತ್ತು ಹೋಗಿ ಪ್ರಯಾಣಕ್ಕೆ ಸಂಚಕಾರ ಎದುರಾಗಿತ್ತು.ಆದ್ದರಿಂದ ಕಳೆದ ಎಪ್ರಿಲ್ 23 ರಿಂದ ಎರಡು ತಿಂಗಳುಗಳ ಕಾಲ ಸೇತುವೆ ದುರಸ್ತಿ ಮಾಡುವ ಸಲುವಾಗಿ ಸಾರಿಗೆ ಸಂಸ್ಥೆಯ ಬಸ್ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಿಲಾಗಿತ್ತು.ಸದ್ಯ ದ್ವಿಚಕ್ರ ಹಾಗೂ ಸಣ್ಣ ವಾಹನಗಳನ್ನು ಸೇತುವೆ ಮೇಲೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಹಾಗೂ ದೊಡ್ಡ ದೊಡ್ಡ ಲಾರಿಗಳು ಕೂಡ ಸಂಚರಿಸುತ್ತಿವೆ, ಆದರೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಮಾತ್ರ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯಂಕಂಚಿ ಗ್ರಾಮದ ಮಾರ್ಗವಾಗಿ ಸಿಂದಗಿಯೆಡೆಗೆ ಅಕ್ರಮವಾಗಿ ಸಾದಾ ಮರಳು ಸಾಗಾಟ ಮಾಡುತ್ತಿದ್ದ ನಂಬರಿಲ್ಲದ ಟ್ರ‍್ಯಾಕ್ಟರ್ ಹಾಗೂ ಟ್ರೇಲರ್‌ನ್ನು ಸಿಂದಗಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿರುವ ಘಟನೆ ಯಂಕಂಚಿ-ಸಿಂದಗಿ ರಸ್ತೆಯ ಸವಹಳ್ಳದ ಸಮೀಪ ನಡೆದಿದೆ.ಖಚಿತ ಮಾಹಿತಿಯ ಮೇರೆಗೆ, ಮೇಲಾಧಿಕಾರಿಗಳ ಸೂಚನೆಯಂತೆ ಸಿಂದಗಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ ನಂದಶೆಟ್ಟಿ, ವಾಯ್.ಕೆ.ಉಕಮನಾಳ ಕಾರ್ಯಾಚರಣೆ ನಡೆಸಿದರು. ಈ ವೇಳೆ ಯಂಕಂಚಿ ಮಾರ್ಗದಿಂದ ಬರುತ್ತಿದ್ದ ಕುಬೋಟಾ ಕಂಪನಿಯ ನಂಬರಿಲ್ಲದ ಟ್ರ‍್ಯಾಕ್ಟರ್‌ನ್ನು ತಡೆಹಿಡಿಯಲು ಪೊಲೀಸರು ಸೂಚನೆ ನೀಡಿದಾಗ, ಚಾಲಕ ಸ್ವಲ್ಪ ದೂರ ವಾಹನ ಚಲಾಯಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.ಪಂಚರ ಸಮ್ಮುಖದಲ್ಲಿ ವಾಹನವನ್ನು ಪರಿಶೀಲಿಸಿದಾಗ ಟ್ರೇಲರ್‌ನಲ್ಲಿ ಅಂದಾಜು ಒಂದು ಬ್ರಾಸ್ ಸಾದಾ ಮರಳು ಯಾವುದೇ ಅಧಿಕೃತ ಅನುಮತಿ ಇಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಟ್ರ‍್ಯಾಕ್ಟರ್ ಹಾಗೂ ಟ್ರೇಲರ್ ಸೇರಿ ಸುಮಾರು ರೂ.೨ ಲಕ್ಷ ಮೌಲ್ಯದ ವಾಹನ ಹಾಗೂ ರೂ.೪…

Read More

ಅಂತರಸಂತೆ ಯುವಪಡೆಯ ಸಮಾಜಸೇವೆಗೆ ಡಿ.ಸುಂದರ್ ದಾಸ್ ಮೆಚ್ಚುಗೆ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಅಂತರಸಂತೆ ಯುವಪಡೆಯು 4 ವರ್ಷಗಳಲ್ಲಿ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದೆ. ಅದರಲ್ಲಿಯೂ ಸಾವಿನ ಮನೆಗೆ ಸಾಂತ್ವನ ಎಂಬ ಕಾರ್ಯಕ್ರಮ ಆಯೋಜಿಸಿ ಗ್ರಾಮದಲ್ಲಿ ಯಾರ ಮನೆಯಲ್ಲಾದರೂ ಸಾವಾದರೆ ಆ ಮನೆಗೆ ಹೋಗಿ ಅಲ್ಲಿ ಒಂದಿಷ್ಟು ಸೇವಾ ಕಾರ್ಯದ ಜತೆಗೆ ಊಟದ ವ್ಯವಸ್ಥೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ. ನಾನು ಇಂತಹ ಕಾರ್ಯಕ್ರಮವನ್ನು ಬೇರೆಲ್ಲೂ ನೋಡಿಲ್ಲ. ಇದು ಉತ್ತಮ ಕೆಲಸ ಎಂದು ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಡಿ.ಸುಂದರ್ ದಾಸ್ ಹೇಳಿದರು.ತಾಲೂಕಿನ ಅಂತರಸಂತೆ ಗ್ರಾಮದಲ್ಲಿ ನಡೆದ ಅಂತರಸಂತೆ ಯುವಪಡೆಯ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯುವ ಸಂಘಟನೆ ಒಂದು ವಿಶೇಷ ಪಡೆಯಾಗಿದೆ. ಇಂತಹ ಸಂಘಟನೆ ಮತ್ತಷ್ಟು ವರ್ಷ ಮುಂದುವರಿಯಲಿ, ಜತೆಗೆ ಊರಿನ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿರಲಿ ಎಂದು ಆಶಿಸಿದರು.ನಿವೃತ್ತ…

Read More

ಅವಳಿ ಜಿಲ್ಲೆಯ ರೈತರು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಮಟ್ಟಿಹಾಳ ಕ್ರಾಸ್‌ನಲ್ಲಿರುವ ಮುಳವಾಡ ಏತ ನೀರಾವರಿಯ ಕಾರ್ಯಾಲಯಗಳ ಮುಂದೆ ಏತನೀರಾವರಿ ಯೋಜನೆಯ ಮೂಲಕ ಕಾಲುವೆಗಳಿಗೆ ಕೃಷ್ಣಾ ನದಿ ನೀರನ್ನು ಹರಿಸಬೇಕೆಂದು ಆಗ್ರಹಿಸಿ ಅವಳಿ ಜಿಲ್ಲೆಯ ರೈತರು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹೋರಾಟ ಯಶಸ್ವಿಯಾಯಿತು.ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯು ಅವಳಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಮಳೆ ಪ್ರಮಾಣ ಅಧಿಕವಾಗದೇ ಇರುವದನ್ನು ಗಮನಿಸಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಎನ್ನುವ ಮುಂದಾಲೋಚನೆಯಿಂದ ಕಳೆದ ಒಂದು ವಾರದ ಹಿಂದೆ ಜುಲೈ ೧೪ ರೊಳಗಾಗಿ ಆಲಮಟ್ಟಿ ಆಣೆಕಟ್ಟಿನ ಹಿನ್ನೀರಿನಲ್ಲಿ ಬರುವ ಎಡದಂಡೆ ಮತ್ತು ಬಲದಂಡೆ ಕಾಲುವೆ ಮುಳವಾಡ ಏತ ನೀರಾವರಿಯ ಮೂರು ಹಂತದ ಕಾಲುವೆಗಳಲ್ಲಿ ಕೃಷ್ಣೆಯು ತುಂಬಿ ಹರಿಯುತ್ತಿರುವದರಿಂದ ಜನ ಜಾನುವಾರುಗಳಿಗೆ ರೈತರಿಗೆ ಅನುಕೂಲವಾಗಲು ನೀರನ್ನು ಬಿಡಬೇಕೆಂದು ಕರೆಕೊಟ್ಟಿದ್ದರು.ಆದರೆ ೧೪ ರೊಳಗಾಗಿ ಸರಕಾರ ನೀರು ಬಿಡಲು ಹಿಂದೇಟು ಹಾಕಿದ ಪ್ರಯುಕ್ತ ಸಾವಿರಾರು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ರೈತರ ಜಮೀನುಗಳಿಗೆ ನೀರಾವರಿ ಹಾಗೂ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಳವಾಡ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಕಾಲುವೆಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ರೈತರು ಆಗ್ರಹಿಸಿದರು.ಬುಧವಾರ ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಬೆಳೆಗಳು ನೀರಿನ ಅಭಾವದಿಂದ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಗೊಂಡಿದೆ. ಈ ಹಿನ್ನೆಲೆ ರೈತರ ಹಿತದೃಷ್ಟಿಯಿಂದ ಮುಳವಾಡ ಏತ ನೀರಾವರಿ ಯೋಜನೆಯ ಎಲ್ಲಾ ಕಾಲುವೆಗಳಿಗೆ ಕೂಡಲೇ ನೀರು ಹರಿಸಿ ಬೆಳೆಗಳನ್ನು ಉಳಿಸಬೇಕು ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಪ್ರಸ್ತುತ ಆಲಮಟ್ಟಿ ಜಲಾಶಯದಲ್ಲಿ ಸುಮಾರು 95 ಟಿಎಂಸಿ ನೀರು ಸಂಗ್ರಹವಿದ್ದು, ಸಮರ್ಪಕವಾಗಿ ಕಾಲುವೆಗಳಿಗೆ ನೀರು ಹರಿಸಿದರೆ ರೈತರು ಹಾಗೂ…

Read More