Author: editor.udayarashmi@gmail.com

ಚಡಚಣ: ತಾಲೂಕಿನ ನಿವರಗಿ ಗ್ರಾಮದ ಶ್ರೇಯಾ ಮಹೇಶ ಮುರಗುಂಡೆ 10ನೇ ತರಗತಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ 94.6 ಅಂಕ ಪಡೆದುಕೊಂಡು ವಿಜಯಪುರದ ರೂಪಾದೇವಿ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇವರ ಈ ಸಾಧನೆಗೆ ಪೋಷಕರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ವಿಜಯಪುರ: ಇತ್ತೀಚೆಗೆ ನಡೆದ ಸಿ.ಬಿ.ಎಸ್.ಸಿ 10 ನೇ ತರಗತಿ ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಿಹೀರ್ ಮಹೇಶ ದೇಶಪಾಂಡೆ ಶೇ.98 ಅಂಕ ಪಡೆದು ವಿಜಯಪುರ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಿಗೆ ದ್ವಿತೀಯ ಗಳಿಸಿದ್ದಾನೆ. ಅಲ್ಲದೇ, ಈ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ಪಾಸಾಗುವ ಮೂಲಕ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಲು ಕಾರಣರಾಗಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶಾಲೆಯ ಪ್ರಾಚಾರ್ಯ ಬಂದನಾ ಬ್ಯಾನರ್ಜಿ, ಈ ಬಾರಿ ಸಿ.ಬಿ.ಎಸ್.ಸಿ ಪರೀಕ್ಷೆಗೆ 101 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಹೃದಯ ದೇವೆಂದ್ರ ಕೋಠಾರಿ ಶೇ.97.60 ಅಂಕ ಗಳಿಸಿ ಶಾಲೆಗೆ ದ್ವಿತೀಯ ಹಾಗೂ ನಿಶಿತಾ ವಿ ಶಹಾ ಶೇ.97.20 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ, 17 ವಿದ್ಯಾರ್ಥಿಗಳು ಶೇ.90 ಕ್ಕಿಂತಲೂ ಹೆಚ್ಚು ಅಂಕ, 52 ವಿದ್ಯಾರ್ಥಿಗಳು ಡಿಸ್ಟಿಂಕ್ಷಷನ್ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ…

Read More

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಆಕ್ಷೇಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.10ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ…

Read More

ತಿಕೋಟಾ: ತಾಲೂಕಿನ ರೈತರು ಸಂಕಷ್ಟದಲ್ಲಿದ್ದು ಕಬ್ಬಿನ ಬಿಲ್ ಪಾವತಿಸುವಂತೆ ತಹಸೀಲ್ದಾರ ಸುರೇಶ ಮುಂಜೆ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮನವಿ ಸಲ್ಲಿಸಿದರು.ತಿಕೋಟಾ ತಾಲೂಕಾ ಅದ್ಯಕ್ಷ ಸಾತಲಿಂಗಯ್ಯಾ ಸಾಲಿಮಠ ಮಾತನಾಡಿ, ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು ಕಳೆದ ಆರು ತಿಂಗಳುಗಳಿಂದ ಕಾರ್ಖಾನೆ ಮಾಲಿಕರು ಹಣ ಪಾವತಿಸದೆ ಸತಾಯಿಸುತ್ತಿದ್ದು ಇದರಿಂದ ರೈತರಿಗೆ ಹಣ ಬಾರದೇ ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಜಮಖಂಡಿ ಶುಗರ್ಸ, ಸಾಯಿಪ್ರೀಯಾ ಶುಗರ್ಸ ಅಲಬಾಳ, ಬಸವೇಶ್ವರ ಶುಗರ್ಸ ಕಾರಜೋಳ ಇನ್ನು ಹಲವು ಸಕ್ಕರೆ ಕಾರ್ಖಾನೆ ಮಾಲಿಕರು ಕಬ್ಬಿನ ಬಿಲ್ಲು ರೈತರಿಗೆ ಪಾವತಿಸಬೇಕಿದೆ, ಆದಷ್ಟು ಬೇಗನೆ ಬಿಲ್ ಪಾವತಿಸದಿದ್ದಲ್ಲಿ ಹೋರಾಟ, ರಸ್ತಾರೋಕೊ ಅನಿವಾರ್ಯವಾಗುತ್ತದೆ, ಇದಕ್ಕೆ ಆಸ್ಪದ ಕೊಡದೆ ರೈತರಿಗೆ ಅನೂಕೂಲ ಮಾಡಿಕೋಡಬೇಕೆಂದು ತಹಸೀಲ್ದಾರ ಅವರಿಗೆ ಮನವಿ ಮಾಡಲಾಯಿತು.ತಿಕೋಟಾ ತಹಸೀಲ್ದಾರ ಸುರೇಶ ಮುಂಜೆ ಪೋನ ಮುಖಾಂತರ ಕೃಷಿ ಅಧಿಕಾರಿಗಳಾದ ಎಸ ಜಿ ಹಿರೇಂಟ ಜಮಖಂಡಿ ಶುಗರ್ಸ ಇವರ ಜೊತೆ ಮಾತನಾಡಿ, ಆದಷ್ಟು ಬೇಗನೆ ಕಬ್ಬಿನ ಬಿಲ್ಲು ಪಾವತಿಸುವುದಾಗಿ ಭರವಸೆ ನೀಡಿದ್ದಾರೆಂದು ಹೇಳಿದರು.ಇದೆ…

Read More

ವಿಜಯಪುರ: ಪಡಗಾನೂರಿನ ನಮ್ಮ ಮಕ್ಕಳ ಧಾಮವನ್ನು ಬಾಲ ನ್ಯಾಯ ಕಾಯಿದೆ ಅಡಿಯಲ್ಲಿ ನೋಂದಣಿ ನವೀಕರಿಸಲು ಸಾರ್ವಜನಿಕರ ಪರವಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮುಖಂಡರು ಮಾತನಾಡಿ, ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ಹದ್ದಿಯಲ್ಲಿ ಬರುವ ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಅಡಿಯಲ್ಲಿ ನಮ್ಮ ಮಕ್ಕಳ ಧಾಮ ಎಂಬ ಹೆಸರಿನ ಮಕ್ಕಳ ಮನರ್ವಸತಿ ಕೇಂದ್ರವನ್ನು ೧೬ ವರ್ಷಗಳಿಂದ ನಡೆಸಲಾಗುತ್ತಿದೆ. ಈ ಧಾಮವು ಸರ್ಕಾರದ ಯಾವುದೇ ಅನುದಾನ ಪಡೆಯದೇ ಸಮುದಾಯದ ನಾಯಕತ್ವದಲ್ಲಿ ನಮ್ಮಂತಹ ಮಹಾ ದಾನಿಗಳ ಮೂಲಕವೇ ನಡೆಯುತ್ತಿದೆ. ನಾವು ಕಂಡಿರುವಂತೆ ಸದರಿ ಧಾಮವು ಮಕ್ಕಳ ಸ್ನೇಹಿ ವಾತಾವರಣ ಹೊಂದಿದ್ದು, ಮಕ್ಕಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಲಭ್ಯ ಇವೆ.ಸಧ್ಯ ನಮ್ಮ ಮಕ್ಕಳ ಧಾಮದ ನೋಂದಣಿ ನವೀಕರಿಸಬೇಕಾಗಿದ್ದು , ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆಯವರು ದಿನಾಂಕ : ೨೭/೦೩/೨೦೨೪ ಮತ್ತು ೧೮/೦೪/೨೦೨೪ ರಂದು ಎರಡು ಬಾರಿ ತಮಗೆ ಪತ್ರ ನೀಡಿದರೂ ಸಹ ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ…

Read More

ದಾವಣಗೆರೆಯಲ್ಲಿ ಪುಟ್ಟರಾಜ ಗುರು ಅಭಿಮಾನಿ ಭಕ್ತರ ಸಮಾವೇಶದ ಸಮಾರೋಪ ದಾವಣಗೆರೆ: ಗುರು ಪುಟ್ಟರಾಜರು ರಚಿಸಿದ ಸಾಹಿತ್ಯ ಅದು ಲಿಂಗ ಮೆಚ್ಚಿದ ಸಾಹಿತ್ಯ. ಅದು ಸಾವಿರದ ಸಾಹಿತ್ಯ. ಸಾವಿರದ ಸಾಹಿತ್ಯ ಸಾವಿರ ಸಾವಿರ ಮನೆಗಳಿಗೆ ತಲುಪಿಸುವ ಅಭಿಯಾನ ಯಶಸ್ವಿಯಾಗಿದ್ದು ಇದಕ್ಕೆ ಕಾರಣೀಭೂತರಾದ ಸದಸ್ಯರಿಗೆ ಅಭಿನಂದಿಸುತ್ತೇನೆ. ಗುರು ಸಾಹಿತ್ಯ ಪ್ರಚಾರ ಸೇವೆ ಮುಂದುವರಿಸಿಕೊಂಡು ಹೋಗಲು ಬಯಸಿದ್ದು, ಇದಕ್ಕೆ ತಮ್ಮೆಲ್ಲರ ತನು ಮನ ಧನದ ಸಹಕಾರ ಇರಲಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ ವೇ. ಚನ್ನವೀರಸ್ವಾಮಿ ಹಿರೇಮಠ ಹೇಳಿದರು.ಅವರು ನಗರದ ಕುವೆಂಪು ಕನ್ನಡ ಭವನದಲ್ಲಿ, ಗದುಗಿನ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯು ಹಮ್ಮಿಕ್ಕೊಂಡಿದ್ದ, ಪುಟ್ಟರಾಜ ಗುರುವರ್ಯರ ಅಭಿಮಾನಿ ಭಕ್ತರ ಸಮಾವೇಶದ ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಕದಳಿ ವೇದಿಕೆ ರಾಜ್ಯ ಉಪ ಸಂಚಾಲಕರಾದ ಶ್ರೀಮತಿ ಪ್ರಮಿಳಾ ನಟರಾಜ ದಾವಣಗೆರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪೂಜ್ಯಗುರು ಪುಟ್ಟರಾಜರ ಒಡನಾಟ ಅವರ ಲಿಂಗಪೂಜಾ ವೈಭವ…

Read More

ತಿಕೋಟಾ: ತಾಲೂಕು ವ್ಯಾಪ್ತಿಯ ಲೋಹಗಾಂವ, ಬಾಬಾನಗರ, ಕನಮಡಿ ಮತ್ತು ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರಂಭಿಸಲಾದ ಕೂಸಿನ ಮನೆಗಳಿಗೆ ನೂಡಲ್ ಅಧಿಕಾರಿಗಳು ಹಾಗೂ ವಿಜಯಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಗ್ರಾ), ಎಸ್.ಸಿ.ಮ್ಯಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರಂಭಿಸಲಾದ ಕೂಸಿನ ಮನೆಗಳು ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲಕರವಾಗಿವೆ. ಗ್ರಾಮೀಣ ಭಾಗದ ಜನರು ತಮ್ಮ ೦೩ ವರ್ಷದೊಳಗಿನ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಟ್ಟು ನಿಶ್ಚಿಂತೆಯಿಂದ ಕೂಲಿ ಕೆಲಸಕ್ಕೆ ತೆರಳಲು ಈ ಕೇಂದ್ರಗಳು ಸಹಕಾರಿಯಾಗಿವೆ. ಈ ಕೇಂದ್ರದಲ್ಲಿ ಮಕ್ಕಳಿಗೆ ಆಟ ಪಾಠದ ಜೊತೆಗೆ ಪೌಷ್ಠೀಕ ಆಹಾರವನ್ನು ಒದಗಿಸಲಾಗುತ್ತಿದೆ ಎಂದರು.ಶ್ರೀಮತಿ ಶೋಭಕ್ಕ ಶಿಳೀನ, ಸಹಾಯಕ ನಿರ್ದೇಶಕರು (ಗ್ರಾಉ&ಪಂರಾ) ತಾಲೂಕು ಪಂಚಾಯತಿ ತಿಕೋಟಾ ಅವರು ಮಾತನಾಡಿ ತಿಕೋಟಾ ತಾಲೂಕಿನಾದ್ಯಂತ ೧೦ ಕೂಸಿನ ಮನೆಗಳು ಮಂಜೂರಾಗಿದ್ದು…

Read More

ಚಿಮ್ಮಡ: ಮಂಗಳವಾರ ರಾತ್ರಿ ಸುರಿದ ಜೋರು ಮಳೆಯಿಂದ ಈ ಭಾಗದ ವಾತಾವರಣ ತಂಪೆರೆದಂತಾಗಿದ್ದು ರೈತರು ಹರ್ಷವ್ಯಕ್ತಪಡಿಸಿದ್ದಾರೆ. ಆದರೆ ಗ್ರಾಮದಲ್ಲಿ ನಡೆಯುತ್ತಿರುವ ಮೂರು ಮುಖದವ್ವದೇವಿ ಜಾತ್ರೆಗೆ ಆಗಮಿಸಿದ ಭಕ್ತರು ಹೈರಾಣಾಗಿದ್ದಾರೆ.ರಾತ್ರಿ ೮.೦೦ಘಂ. ಯಿಂದ ಸುಮಾರು ೩ ಘಂ.ಗಳ ಕಾಲ ಸುರಿದ ಮಳೆಯಿಂದಾಗಿ ಗ್ರಾಮದಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಬ್ರಹತ್ ಜಾತ್ರೆ ಅಸ್ತವ್ಯಸಥಗೊಂಡಿದೆ, ಎತ್ತಿನಬಂಡಿ, ಟ್ರ್ಯಾಕ್ಟರ್ ಮುಂತಾದ ವಾಹನಗಳಲ್ಲಿ ಅಡುಗೆ ಸಾಮಗ್ರಿಗಳೊಂದಿಗೆ ಆಗಮಿಸಿದ ಸಾವಿರಾರು ಜನ ಭಕ್ತಾಧಿಗಳು ಈ ಅಕಾಲಿಕ ಮಳೆಯಿಂದ ಪರಿತಪಿಸುವಂತಾಯಿತು. ಅವರ ವಸತಿಗಾಗಿ ಹಾಕಿದ ಶಾಮಿಯಾನ ಕಿತ್ತು ಹೋದ ಪರಿಣಾಮ ಭಕ್ತರು ಶಾಲೆ, ಮಠ, ಮಂದಿರಗಳಲ್ಲಿ ಆಶ್ರಯ ಪಡೆದರು, ರಾತ್ರಿಯಿಡೀ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸೊಳ್ಳೆಗಳ ಕಾಟದಿಂದಾಗಿ ಗ್ರಾಮಸ್ಥರು ಜಾಗರಣೆ ಮಾಡುವಂತಾಯಿತು,ಆದರೆ ವ್ಯಾಪಾರಿಗಳು ನಮಗೆ ಹಾನಿಯಾದರೂ ಪರವಾಗಿಲ್ಲ ಮಳೆಯಾಗಿದ್ದು ತುಂಬಾ ಖುಷಿಯಾಗಿದೆ, ಮೂರುಮಕದವ್ವ ಈ ಮಳೆ ಮೂಲಕ ನಮಗೆಲ್ಲ ಆಶೀರ್ವದಿಸಿದ್ದಾರೆಂದು ವ್ಯಾಪಾರಿ ಮಂಜುನಾಥ ತೊರವಿ ಅಭಿಪ್ರಾಯ ವ್ಯಕ್ತಪಡಿಸಿದರು.ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಮಳೆಯಿಲ್ಲದೇ ಹಲವಾರು ಕೊಳವೆ ಬಾವಿಗಳು ಕೈಕೊಟ್ಟಿದ್ದರ ಪರಿಣಾಮ…

Read More

೨ ದಿನದಲ್ಲಿ ಕೆರೆಗೆ ನೀರು ತುಂಬಿಸದಿದ್ದರೆ ಸಾವಿರಾರು ರೈತರೊಂದಿಗೆ ಕೆರೆಯಲ್ಲಿಯೆ ಕುಳಿತು ಧರಣಿ ಸತ್ಯಾಗ್ರಹದ ಎಚ್ಚರಿಕೆ ವಿಜಯಪುರ: ಜಂಬಗಿ ಕೆರೆ ಜಿಲ್ಲೆಯಲ್ಲಿಯೇ ೨ನೇ ಅತೀದೊಡ್ಡ ಕೆರೆಯಾಗಿದ್ದು, ಹಾಗೂ ಹುಣಶ್ಯಾಳ (ಮಾದಾಳ) ಕೆರೆಗಳಲ್ಲಿ ನೀರು ತುಂಬಿದರೆ ಸುತ್ತಮುತ್ತಲಿನ ೫-೬ ಹಳ್ಳಿಗಳ ರೈತರಿಗೆ ಜನ ಜಾನುವಾರುಗಳಿಗೆ ಕುಡಿಯಲು ನೀರಿನ ಅನುಕೂಲವಾಗುವುದು ಮಾತ್ರವಲ್ಲದೇ, ಅಂತರ್ಜಲ ಮಟ್ಟ ಹೆಚ್ಚಾಗಿ ನೀರಿನ ಮೂಲಗಳು ಅಭಿವೃದ್ಧಿ ಹೊಂದುತ್ತವೆ. ಇದರಿಂದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಆಹೇರಿ ಗ್ರಾಮದ ಮಾಜಿ ಗ್ರಾ.ಪಂ ಚೇರಮನ್ ಬಸವರಾಜ ಗಾಣಿಗೇರ ಮಾತನಾಡಿ, ಜಿಲ್ಲೆಯ ಎಲ್ಲಾ ಕೆರೆಗಳು ತುಂಬುತ್ತಿದ್ದರೂ ಜಂಬಗಿ ಹಾಗೂ ಹುಣಶ್ಯಾಳ ಕೆರೆ ಮಾತ್ರ ತುಂಬದೇ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಲ್ಲಿಯವರೆಗೆ ಕೆರೆ ನೀರು ತುಂಬದೇ ಪುರಾಣ ಹೇಳುತ್ತಿದ್ದಾರೆ, ಕೇಳಿದರೆ ನಿಮಗೆ ನೀರು ಬರುವುದಿಲ್ಲ, ನೀವು ಮೇಲಿನ ಅಧಿಕಾರಿಗಳಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದರು.ವಿಜಯಪುರ…

Read More