Author: editor.udayarashmi@gmail.com

ದೇವರಹಿಪ್ಪರಗಿ: ರಾಜ್ಯದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ವಚನಸಾಹಿತ್ಯ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶಗಳು ನಮ್ಮೇಲ್ಲರಿಗೂ ಆದರ್ಶಪ್ರಾಯವಾಗಿವೆ ಎಂದು ಶಿಕ್ಷಕ ಸೋಮನಗೌಡ ಪಾಟೀಲ ಹೇಳಿದರು.ತಾಲ್ಲೂಕಿನ ಪಡಗಾನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಬಸವೇಶ್ವರರ ಹಾಗೂ ಹೇಮರಡ್ಡಿ ಮಲ್ಲಮ್ಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಮುಖ್ಯಗುರು ಡಿ.ಎಚ್.ರಾಠೋಡ ಮಾತನಾಡಿ, ಮಲ್ಲಮ್ಮ ಓರ್ವ ಮಹಿಳೆಯಾಗಿ, ಆದರ್ಶ ಸೊಸೆಯಾಗಿ, ಅತ್ತಿಗೆಯಾಗಿ, ಶಿವಭಕ್ತೆಯಾಗಿ ಆದರ್ಶಗಳನ್ನು ಬಿಂಬಿಸುವ ಮೂಲಕ ಇಂದಿನ ಮಹಿಳಾಸಂಕುಲಕ್ಕೆ ಮಾದರಿಯಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಗ್ರಾಮದ ಬಸವೇಶ್ವರ ವೃತ್ತ ಹಾಗೂ ಹೇಮರಡ್ಡಿ ಮಲ್ಲಮ್ಮ ವೃತ್ತಗಳಿಗೆ ತೆರಳಿ ಗ್ರಾಮಸ್ಥರೊಂದಿಗೆ ಸೇರಿ ಪೂಜೆ ಸಲ್ಲಿಸಲಾಯಿತು.ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಗುರುರಾಜ ಆಕಳವಾಡಿ, ಸುಭಾಸ ಹೊಸಟ್ಟಿ, ನಾಗಯ್ಯ ಹಿರೇಮಠ, ಕೆ.ಎಮ್.ನಂದಿ, ಎಸ್.ಜಿ.ತಾವರಖೇಡ, ಗೊಲ್ಲಾಳ ಬಿರಾದಾರ, ಕಲ್ಲು ಜೋಗೂರ, ರಾಜು ಪಾಟೀಲ, ಪಂಡಿತ ಕೊಟ್ಯಾಳ, ಭೀಮರಾಯ ಬಾಗೇವಾಡಿ, ಗೋವಿಂದಗೌಡ ಪಾಟೀಲ, ವಿಶಾಲಗೌಡ ಪಾಟೀಲ, ಬಸವರಾಜ ದ್ಯಾವಿನಾಳ ಇತರರು ಇದ್ದರು.

Read More

ದೇವರಹಿಪ್ಪರಗಿ: ಇವ ನಮ್ಮವ, ಇವ ನಮ್ಮವ ಎನ್ನುವ ಮೂಲಕ ವಿಶ್ವಭಾತೃತ್ವವನ್ನು ವಿಶ್ವಕ್ಕೆ ಸಾರಿ ಬಸವಣ್ಣ ಮಹಾಮಾನವತಾವಾದಿ ಎನಿಸಿದ್ದಾರೆ ಎಂದು ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಬಸವ ಜಯಂತ್ಯುತ್ಸವ ಹಾಗೂ ಶ್ರೀ ಬಸವಶ್ರೀ ಪ್ರಶಸ್ತಿ ವಿತರಣಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.ವಚನ ಸಾಹಿತ್ಯವೇ ನಮ್ಮ ಗ್ರಂಥ, ಸಂವಿಧಾನ ಮೂಲ ಆಶಯಗಳನ್ನು ಅಂದೇ ತಮ್ಮ ವಚನಗಳ ಮೂಲಕ ಸಾರಿದ ಬಸವಣ್ಣ ಅಸಮಾನತೆಯ ವಿರುದ್ಧ ಸಮರ ಸಾರಿದ ಕ್ರಾಂತಿಯೋಗಿ. ಬಸವಣ್ಣನ ವಚನಗಳ ಸೂಕ್ಷ್ಮ ಅಧ್ಯಯನ ಇಂದು ಅತ್ಯಂತ ಅಗತ್ಯವಾಗಿದೆ ಎಂದು ಕವನ ವಾಚಿಸಿ ಆಶೀರ್ವಚನ ನೀಡಿದರು.ಸಿಂದಗಿಯ ಸಾಹಿತಿ ರಾ.ಶಿ.ವಾಡೇದ ಹಾಗೂ ಶಿಕ್ಷಕಿ ಮಹಾದೇವಿ ಪಾಟೀಲ ಮಾತನಾಡಿ, ಕಾಯಕ ತತ್ವದ ಮಹತ್ವವನ್ನು ಜಗಕ್ಕೆ ಸಾರುವ ಮೂಲಕ ನಮ್ಮಲ್ಲಿ ಕರ್ತವ್ಯಪ್ರಜ್ಞೆಯನ್ನು ಜಾಗೃತಗೊಳಿಸಿದ ಮಹಾನುಭಾವ ಅಣ್ಣ ಬಸವಣ್ಣ ಎಂದರು.ಶ್ರೀಬಸವಶ್ರೀ ಪ್ರಶಸ್ತಿ ವಿಜೇಯರಾದ ಡಾ.ಬಾಬು ಶಿವಸಿಂಪಿಗೇರ ಹಾಗೂ ಬಸವರಾಜ ಹಡಪದ ಮಾತನಾಡಿ, ಬಸವಣ್ಣನವರು ಸಾಗರದ ಪ್ರತೀಕ ಅವರನ್ನು ಅರಿಯಬೇಕಾದರೆ ಆಳಕ್ಕೆ ಇಳಿಯಬೇಕು. ಬಸವಣ್ಣ ಎಂಬ…

Read More

ಆಲಮೇಲ: ಪಟ್ಟಣದ ಗ್ರಾಮೀಣ ಅಭಿವೃದ್ದಿ ವಿದ್ಯಾರ್ವಧಕ ಸಮಿತಿಯ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ ೮೬ ರಷ್ಟು ಆಗಿದ್ದು ಒಟ್ಟು ೭೧ ವಿದ್ಯಾರ್ಥಿಗಳಲ್ಲಿ ೬೩ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೫ ವಿದ್ಯಾರ್ಥಿಗಳು ಡಿಸ್ಟಿಂಗ್‌ಷ್ಯನ್, ೪೫ ವಿದ್ಯಾರ್ಥಿಗಳು ಪ್ರಥಮ ದರ್ಜೇಯಲ್ಲಿ, ೧೧ ವಿದ್ಯಾರ್ಥಿಗಳು ದ್ವಿತಿಯ ದರ್ಜೇಯಲ್ಲಿ, ಇಬ್ಬರು ವಿದ್ಯಾರ್ಥಿಗಳು ಥ್ರಿತೀಯ ದಜೇಯಲ್ಲಿ ಉತ್ತಿರ್ಣರಾಗಿದ್ದಾರೆ.ವೈಷ್ಣವಿ ಎಸ್. ಘಾಳಿಮಠ ಶೇ.೫೬೪(೯೦.೨೪) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಅಶ್ವಿನಿ ಬಿ. ಹಿರೇಮಠ ೫೫೩(೮೮.೪೮)ಅಂಕಗಳು ಪಡೆದು ದ್ವಿತಿಯ ಸ್ಥಾನ, ಪ್ರತೀಕ್ಷಾ ಅಂಬೂರೆ ೫೫೨(೮೮.೩೨) ಅಂಕಗಳನ್ನು ಪಡೆದು ತೃತಿಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಶಿವುಕುಮಾರ ಗುಂದಗಿ ಮತ್ತು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಶ್ಲಾಘಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಎಸ್.ಆರ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಸವನಬಾಗೇವಾಡಿ: ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಪ್ರೇರಣೆಯಿಂದ ಜೋಡೆತ್ತಿನ ಕೃಷಿ ಪುನಶ್ಚೇತನದ ಉದ್ದೇಶದಿಂದ ಸಿದ್ದೇಶ್ವರರ ಜನ್ಮಸ್ಥಳ ಬಿಜ್ಜರಗಿಯಿಂದ ನಂದಿಯಾತ್ರೆಯನ್ನು ಆರಂಭಿಸಲಾಗಿತ್ತು. ಈ ನಂದಿಯಾತ್ರೆಯಿಂದಾಗಿ ಅನೇಕ ಕಡೆಗಳಲ್ಲಿ ಜೋಡೆತ್ತು ಸಂರಕ್ಷಣೆಗೆ ಅನೇಕ ಸಮಿತಿಗಳನ್ನು ರಚಿಸಲಾಗಿದೆ. ಇಂದು ಜೋಡೆತ್ತುಗಳನ್ನು ಉಳಿಸಿದರೆ ಮಾತ್ರ ಮುಂದೆ ನಮಗೆ ಅನ್ನ ಸಂಪತ್ತು ಸಿಗುತ್ತದೆ ಎಂಬ ಜಾಗೃತಿ ಮೂಡಿಸಲು ಬಸವ ತತ್ವ ಪುನಶ್ಚೇತನ ಸಂಕಲ್ಪ ಸಮ್ಮೇಳನವನ್ನು ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಮೇ. ೧೨ ರಂದು ಬೆಳಗ್ಗೆ ೯ ಗಂಟೆಗೆ ವಿರಕ್ತಮಠದ ಗವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಬಿ ಪೌಂಡೇಶನ ಸಂಸ್ಥಾಪಕ ಬಸವರಾಜ ಬಿರಾದಾರ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜೋಡೆತ್ತು ಹೊಂದಿರುವ ರೈತರಿಗೆ ಪ್ರೋತ್ಸಾಹ ಧನವವಾಗಿ ರೂ. ೫,೫೦೦ ಗಳನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ೩೦ ಜೋಡೆತ್ತು ಸಂಘಗಳನ್ನು ರಚಿಸಲಾಗಿದೆ. ಜೋಡೆತ್ತಿನ ಕೃಷಿ ನಾಶವಾಗುತ್ತಿರುವ ಇಂದಿನ ಕಾಲದಲ್ಲಿ ಜೋಡೆತ್ತಿನ ಕೃಷಿ ಅವಲಂಬಿತ ಉದ್ಯೋಗಗಳಾದ ಬಡಿಗತನ, ಕಂಬಾರಿಗೆ, ಕುಂಬಾರಿಗೆ, ಚಮ್ಮಾರಿಕೆ ಸೇರಿದಂತೆ ಅನೇಕ ಗ್ರಾಮೀಣ ಉದ್ಯೋಗಗಳು ನಶಿಸಿಹೋಗುತ್ತಿರುವದನ್ನು…

Read More

ಬಸವನಬಾಗೇವಾಡಿ: ೧೨ ನೇ ಶತಮಾನದಲ್ಲಿ ಬಸವಣ್ಣನವರು ಮಹಾಮಾನವತಾವಾದಿಯಾಗಿ ಬಹುತ್ವ ಭಾರತದ ಪ್ರತಿನಿಧಿಯಾಗಿ ಬಾಳಿದ ಪರಿಣಾಮವಾಗಿ ದೇಶದ ವಿವಿಧೆಡೆಗಳಿಂದ ಬಸವ ಕಲ್ಯಾಣಕ್ಕೆ ಅನೇಕ ಶರಣರು ಆಗಮಿಸಿದರು. ಬಸವಣ್ಣನವರು ಸಮಷ್ಟಿ ಪ್ರಜ್ಞೆ ಇಟ್ಟುಕೊಂಡಿದ್ದರು ಎಂದು ಚಿಂತಕ, ವಿಮರ್ಶಕ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಬಸವ ಚಿಂತನ ಸಮಾವೇಶದಲ್ಲಿ ಮಾತನಾಡಿದ ಅವರು, ಬಸವಣ್ಣನವರ ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯಾ ಇವ ನಮ್ಮವ, ಇವ ನಮ್ಮವ…. ಎಂಬ ವಚನ ಮಾನವತೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ಆಗಿನ ಕಾಲದಲ್ಲಿಯೇ ಬಸವಣ್ಣನವರು ಎಲ್ಲ ಜನಾಂಗವನ್ನು ಅನುಭವ ಮಂಟಪಕ್ಕೆ ಬರಮಾಡಿಕೊಂಡಿದ್ದರು. ಅಸ್ಪೃಶ್ಯರಲ್ಲಿಯೂ ಇದ್ದ ಮೇಲು-ಕೀಳು ಸಹ ಹೋಗಲಾಡಿಸಲು ಪ್ರಯತ್ನಿಸಿದ್ದನ್ನು ಅವರ ವಚನದಿಂದ ನಾವು ತಿಳಿದುಕೊಳ್ಳಬಹುದು. ಬಸವಣ್ಣನವರ ವ್ಯಕ್ತಿತ್ವ, ಶಕ್ತಿಯಿಂದಾಗಿ ಅವರು ನೆಲೆಸಿದ ಸ್ಥಳಗಳೆಲ್ಲವೂ ಪುಣ್ಯಕ್ಷೇತ್ರಗಳಾಗಿವೆ ಎಂದರು.೧೯೧೩ ರಲ್ಲಿ ಹರ್ಡೇಕರ ಮಂಜಪ್ಪನವರು ಸಾರ್ವಜನಿಕವಾಗಿ ಬಸವ ಜಯಂತಿ ಆಚರಣೆ ಆರಂಭಿಸಿದರು. ಇದರ ಫಲವಾಗಿ ಇಂದು ಎಲ್ಲೆಡೆ ಸಾರ್ವಜನಿಕವಾಗಿ ಬಸವ ಜಯಂತಿ ಆಚರಣೆಗೊಳ್ಳುತ್ತಿದೆ. ಬಸವಾದಿ…

Read More

ಕಲಕೇರಿಯಲ್ಲಿ ನಡೆದ ಧರ್ಮಸಭೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಅಭಿಮತ ಕಲಕೇರಿ: ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಸಾಗುತ್ತಿರುವ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ ಮತ್ತು ಉತ್ತಮ ಸಂಸ್ಕಾರದಲ್ಲಿ ಹಿಂದುಳಿಯುತ್ತಿರುವುದು ಕಳವಳಕಾರಿ ವಿಷಯವಾಗಿದ್ದು, ಈ ಕುರಿತು ನಾವೆಲ್ಲ ಚಿಂತನೆ ಮಾಡುವುದು ಅನಿವಾರ್ಯವಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಲಕ್ಷಾಂತರ ಹಣವನ್ನು ಖರ್ಚು ಮಾಡುವ ನಾವು ಅದರ ಜೊತೆಗೆ ಉತ್ತಮ ಸಂಸ್ಕಾರ ನೀಡಿದರೆ ಮಾತ್ರ ಮಗುವಿನಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಲು ಸಾಧ್ಯ. ಈ ದಿಸೆಯಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಮಕ್ಕಳಿಗೆ ನೀಡಿ ಸುಂದರ ಮತ್ತು ಶ್ರೇಷ್ಠ ಸಮಾಜ ನಿರ್ಮಿಸಲು ಮುಂದಾಗೋಣ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಹೇಳಿದರು.ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಪಟ್ಟಾಧಿಕಾರದ ಪ್ರಯುಕ್ತವಾಗಿ ಭೀರಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡ ಧರ್ಮಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸರೂರ ಗುರುಪೀಠದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮಿಗಳು, ಹುಲಜಂತಿಯ ಮಾಳಿಂಗರಾಯ ದೇವರು, ಡಾ.ವೀರೇಶ ತಳ್ಳೊಳ್ಳಿ,…

Read More

ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಬಸವೇಶ್ವರ ಪೌಢಶಾಲೆಯ ವಿಧ್ಯಾರ್ಥಿಗಳು ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ರೋಷನ್ ರಾಠೋಡ್ ೫೬೯ (೯೧.೦೪%) ಅಂಕ ಪಡೆದು ಪ್ರಥಮ ಸ್ಥಾನ, ಗೊವಿಂದ್ ಚವ್ಹಾಣ ೫೪೮ (೮೭.೬೮%) ಅಂಕ ಪಡೆದು ದ್ವಿತೀಯ ಸ್ಥಾನ, ಮಲ್ಲಮ್ಮ ಜಂಬಗಿ ಹಾಗೂ ಕಾಂಚನಾ ರಾಠೋಡ ೫೩೩ (೮೫.೨೮%) ಅಂಕ ಪಡೆದು ತೃತೀಯ ಸ್ಥಾನ ಹಾಗೂ ಅಂಭಿಕಾ ಮೋಪಗಾರ ೫೨೮ (೮೪.೪೮%) ಅಂಕ ಪಡೆದು ನಾಲ್ಕನೇಯ ಸ್ಥಾನ ಪಡೆದುಕೊಂಡಿದ್ದಾರೆ, ಶಾಲೆಯ ಒಟ್ಟು ಫಲಿತಾಂಶ ಶೇ ೭೯.೫೦ ರಷ್ಟಾಗಿದ್ದು, ವಿಧ್ಯಾರ್ಥಿಗಳ ಸಾಧನೆಗೆ ಮುಖ್ಯಗುರು ಜಗದೀಶ ಗುಮಶೆಟ್ಟಿ ಹಾಗೂ ಶಿಕ್ಷಕ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದ ಶ್ರೀ ಬೀರೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.ಪ್ರವೀಣ ಹಬಗೊಂಡೆ ಶೇ.೯೫.೨೦% ಪ್ರಥಮ, ಸ್ನೇಹಲ್ ಬಿರಾದಾರ ಶೇ.೮೯.೧೨% ದ್ವಿತೀಯ, ಸವಿತಾ ಖರಾತ ಶೇ.೮೮.೮೦% ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಉಳಿದಂತೆ ಆದರ್ಶ ಪಾಟೀಲ ಶೇ.೮೪.೧೬, ವರಲಕ್ಷ್ಮಿ ಹಬಗೊಂಡೆ ಶೇ.೮೪% ಅಂಕಗಳನ್ನು ಪಡೆದಿದ್ದಾರೆ.ವಿದ್ಯಾರ್ಥಿಗಳ ಫಲಿತಾಂಶಕ್ಕೆ ಶಾಲೆಯ ಮುಖ್ಯ ಗುರುಗಳಾದ ಬಿ.ಎಸ್.ಬನಸೋಡೆ, ಶಿಕ್ಷಕ ಸಿಬ್ಬಂದಿ ವರ್ಗ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

Read More

ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಬಸವೇಶ್ವರ ಪೌಢಶಾಲೆಯ ವಿಧ್ಯಾರ್ಥಿಗಳು ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ರೋಷನ್ ರಾಠೋಡ್ ೫೬೯ (೯೧.೦೪%) ಅಂಕ ಪಡೆದು ಪ್ರಥಮ ಸ್ಥಾನ, ಗೊವಿಂದ್ ಚವ್ಹಾಣ ೫೪೮ (೮೭.೬೮%) ಅಂಕ ಪಡೆದು ದ್ವಿತೀಯ ಸ್ಥಾನ, ಮಲ್ಲಮ್ಮ ಜಂಬಗಿ ಹಾಗೂ ಕಾಂಚನಾ ರಾಠೋಡ ೫೩೩ (೮೫.೨೮%) ಅಂಕ ಪಡೆದು ತೃತೀಯ ಸ್ಥಾನ ಹಾಗೂ ಅಂಭಿಕಾ ಮೋಪಗಾರ ೫೨೮ (೮೪.೪೮%) ಅಂಕ ಪಡೆದು ನಾಲ್ಕನೇಯ ಸ್ಥಾನ ಪಡೆದುಕೊಂಡಿದ್ದಾರೆ, ಶಾಲೆಯ ಒಟ್ಟು ಫಲಿತಾಂಶ ಶೇ ೭೯.೫೦ ರಷ್ಟಾಗಿದ್ದು, ವಿಧ್ಯಾರ್ಥಿಗಳ ಸಾಧನೆಗೆ ಮುಖ್ಯಗುರು ಜಗದೀಶ ಗುಮಶೆಟ್ಟಿ ಹಾಗೂ ಶಿಕ್ಷಕ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮುದ್ದೇಬಿಹಾಳ: ಇಲ್ಲಿನ ವೀರಶೈವ ವಿದ್ಯಾವರ್ಧಕ ಸಂಘದ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.ಶ್ರೀಗೌರಿ ಸಂಕೀನಮಠ ೫೫೬ (ಶೇ೮೮.೯೬) ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ, ಮಲ್ಲಿಕಾರ್ಜುನ ಕನ್ನೂರ ೫೫೦ (ಶೇ೮೮) ಅಂಕಗಳನ್ನು ಗಳಿಸುವ ಮೂಲಕ ದ್ವಿತಿಯ, ಭಾವನಾ ಕವಡಿಮಟ್ಟಿ ೫೪೨ (ಶೇ೮೬.೭೨) ಅಂಕಗಳನ್ನು ಗಳಿಸುವ ಮೂಲಕ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಶಾಲೆಯ ಒಟ್ಟು ೫೧ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೩ ವಿದ್ಯಾರ್ಥಿಗಳು ಡಿಸ್ಟಿಂಗ್ಷನ್, ೩೨ ವಿದ್ಯಾರ್ಥಿಗಳು ಪ್ರಥಮ, ೧೩ ವಿದ್ಯಾರ್ಥಿಗಳು ದ್ವಿತೀಯ, ೩ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ನೂರಕ್ಕೆ ನೂರು ಬಂದಿದೆ.ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿ.ಎಂ.ನಾಗಠಾಣ ಸೇರಿದಂತೆ ಬೋಧಕ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More