Author: editor.udayarashmi@gmail.com

ಎಚ್.ಡಿ.ಕೋಟೆ ತಾಲೂಕಿನ ಕಾಡಂಚಿನ ಭಾಗದಲ್ಲಿ ಸಚಿವ ಸಂಪುಟ ಸಭೆಗೆ ಮನವಿ ಉದಯರಶ್ಮಿ ದಿನಪತ್ರಿಕೆ ಸರಗೂರು: ಅವಳಿ ತಾಲೂಕಿನ ಜನ ಎದುರಿಸುತ್ತಿರುವ ಸಮಸ್ಯೆಗಳ ವಾಸ್ತವಾಂಶ ಗೊತ್ತಾಗಬೇಕಾದರೆ, ರಾಜ್ಯ ಸರ್ಕಾರ, ಕಾಡಂಚಿನ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಚರ್ಚಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನ್ ಗೌಡ ಸಿ ಅವರು ಮನವಿ ಮಾಡಿದರು.ಅರಣ್ಯ ಇಲಾಖೆ ಮತ್ತು ಹಾರ್ಟ್ ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಹಳೆಹೆಗ್ಗೂಡಿಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಉಚಿತ ಜನ-ಜಾನುವಾರುಗಳ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಹುಲಿ ದಾಳಿ ಬಳಿಕ ಹಳೆಹೆಗ್ಗೂಡಿಲು ಗ್ರಾಮದ ಜನರು ಭಯಭೀತರಾಗಿದ್ದಾರೆ. ಆವೇಶದಲ್ಲಿ ಸಣ್ಣ ತಪ್ಪು ಮಾಡಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ರೈತರನ್ನು ಕ್ಷಮಿಸಿ, ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಸರ್ಕಾರ ಹಿಂಪಡೆಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಶಾಸಕರು, ಸಚಿವರು, ಸರ್ಕಾರದ ಮೇಲೆ ಒತ್ತಡ ಏರಿ, ಸಚಿವ ಸಂಪುಟ ಸಭೆಯಲ್ಲಿ ಕೇಸ್ ಹಿಂಪಡೆಯುವಂತೆ ಮಾಡಬೇಕು ಎಂದು ಚಂದನ್ ಗೌಡ ಮನವಿ ಮಾಡಿದರು.ಮುಳುಗಡೆ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮೀಪದ ಅಸ್ಕಿ ಕಾರ್ಯಕ್ಷೇತ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಯೋಜನೆಯಡಿ ಮಂಜೂರಾಗಿದ್ದ ಮನೆಯನ್ನು ನಿರ್ಮಿಸಿ ಫಲಾನುಭವಿಯಾದ ಅಸ್ಕಿ ಗ್ರಾಮದ ಪ್ಯಾಟಿ ಈರಮ್ಮನವರಿಗೆ “ವಾತ್ಸಲ್ಯ ಮನೆ” ಹಸ್ತಾಂತರ ಕಾರ್ಯಕ್ರಮ ನಡೆಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದ ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯ್ಕ್ ಅವರು ಮಾತನಾಡಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಆಶಾದಾಯಕ ಕಾರ್ಯಕ್ರಮವಾದ ವಾತ್ಸಲ್ಯ ಮನೆ ರಚನೆ, ಮಾಸಾಶಾನ ಪಲಾನುಭವಿಗಳಿಗೆ, ನಿರ್ಗತಿಕರಿಗೆ, ಸೂರಿಲ್ಲದವರಿಗೆ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಪೂಜ್ಯರು ವಾತ್ಸಲ್ಯ ಮನೆ ರಚನೆ ಮಾಡುತ್ತಿದ್ದು, ಯೋಜನೆ ಅಡಿಯಲ್ಲಿ ಸುಮಾರು ೧೮೦೦೦ ವಾತ್ಸಲ್ಯ ಪಲಾನುಭವಿಗಳಿಗೆ ಪ್ರತಿ ತಿಂಗಳು ಒಂದು ಸಾವಿರ ಮಾಸಾಶಾನ ಬರುತಿದ್ದು, ಸುಮಾರು ೮೦೦ ವಾತ್ಸಲ್ಯ ಮನೆ ರಚನೆ ಮಾಡಿದ್ದು ಪಲಾನುಭವಿಗಳು ನೆಮ್ಮದಿಯ ಜೀವನ ನಡೆಸಲು ಪೂಜ್ಯರು ದಾರಿಮಾಡಿ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೇ ಪೂಜ್ಯರು ಕೆರೆ ಹೂಳೆತ್ತುವುದು, ಸುಜ್ಞಾನ ಶಿಷ್ಯ ವೇತನ, ಜ್ಞಾನ ದೀಪ ಶಿಕ್ಷಕರ ನೇಮಕಾತಿ ಸೇರಿದಂತೆ ಹಲವಾರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಗೌಡಗೆರೆ ಹಳ್ಳಿಯಲ್ಲಿ ಎದುರು -ಬದುರು ನಿಂತು ಕಾಳಗ ಮಾಡುವ ಮದಗಜಗಳ ಅಪರೂಪದ ಉಬ್ಬು ಶಿಲ್ಪ ಪತ್ತೆಯಾಗಿದ್ದು,ರಾಷ್ಟ್ರೀಯ ಸಂಶೋಧನಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಕ್ಷೇತ್ರ ಕಾರ್ಯದಲ್ಲಿ ಉಬ್ಬು ಶಿಲ್ಪವನ್ನು ಸಂಶೋಧಿಸಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಅಪರೂಪದ ಶಿಲ್ಪ ಪತ್ತೆಯಾಗಿದ್ದು,ಇದನ್ನು ಇತಿಹಾಸ ಸಂಶೋಧಕ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಅಧ್ಯಕ್ಷ ಲಾಯಪ್ಪ ಇಂಗಳೆ ಅವರು ಗುರುತಿಸಿದ್ದಾರೆ.ದೇವಗಿರಿ ಯಾದವರು ಎಂದು ಹೆಸರುವಾಸಿಯಾದ ಸೇವುಣರ ರಾಜ್ಯಧಾನಿ ಗೌಡಗೆರೆ ಹಳ್ಳಿಗೆ ಸೇರಿದ ಕೋಟೆಯಲ್ಲಿ ಕೆತ್ತಲಾದ ಮದಗಜಗಳ ಉಬ್ಬು ಶಿಲ್ಪವು ರಾಜಧಾನಿ ರಕ್ಷಣೆಗೆ ಶಕ್ತಿಶಾಲಿ ಗಜಪಡೆ, ಮತ್ತು ರಕ್ಷಣಾ ವ್ಯವಸ್ಥೆ ಹೊಂದಿರುವುದಕ್ಕೆ ಸಾಕ್ಷಿಯಾಗಿದೆ. ಎಂದು ಇತಿಹಾಸಕಾರ ಲಾಯಪ್ಪ ಇಂಗಳೆ ಅವರು ತಿಳಿಸಿದ್ದಾರೆ.ಕ್ಷೇತ್ರಕಾರ್ಯದಲ್ಲಿ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಪ್ರಮುಖರಾದ ಬಸವರಾಜ ಕುಬಕಡ್ಡಿ, ಉಮೇಶ ಶಿವಶರಣ ಭೀಮರಾಯ ಕುಂಟೋಜಿ ಪ್ರಶಾಂತಗೌಡ ಪಾಟೀಲ ಉಪಸ್ಥಿತರಿದ್ದರು.

Read More

ದಾವಣಗೆರೆ ದಕ್ಷಿಣ – ಬಾಗಲಕೋಟೆ ಉಪಚುನಾವಣೆ ಗೆಲ್ಲುವುದು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯ | ನಾಯಕರಿಗೆ ಸುರ್ಜೇವಾಲಾ ಟಾರ್ಗೆಟ್! ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಾಮಾನ್ಯವಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿತ್ತು, ಆದರೆ ಬುಧವಾರ ನಡೆದ ಶಾಸಕಾಂಗ ಸಭೆ ವಿಭಿನ್ನವಾಗಿತ್ತು.ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಉಪ ಚುನಾವಣೆ ಬಗ್ಗೆ ಚರ್ಚಿಸಲಾಯಿತು, ಕಾಂಗ್ರೆಸ್ ನಾಯಕರ ಚರ್ಚೆ ಹೋಟೆಲ್ ಕೊಠಡಿಯನ್ನು ವಾರ್ ರೂಂ ಆಗಿ ಬದಲಾಯಿಸಿತ್ತು.ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆಯನ್ನು ಉಪ ಚುನಾವಣೆಯಲ್ಲಿ ಹೇಗೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಪ್ರಾರಂಭಿಸಿದರು. ಎನ್‌ಡಿಎ (ಬಿಜೆಪಿ-ಜೆಡಿಎಸ್) ವಿರುದ್ಧ “ಒಗ್ಗಟ್ಟಾಗಿ” ಹೋರಾಡಬೇಕು ಇಲ್ಲದಿದ್ದರೇ ಕ್ಷೇತ್ರಗಳನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.ನಾವು ಹಿಂದಿನ ಮೂರು ಉಪಚುನಾವಣೆಗಳನ್ನು ಗೆದ್ದಿದ್ದೇವೆ ಮತ್ತು ಈ ಎರಡೂ ಉಪಚುನಾವಣೆಗಳನ್ನು ಗೆಲ್ಲಲೇಬೇಕು ಎಂದು ಸುರ್ಜೇವಾಲಾ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.…

Read More

ಕುಡಿಯಲು ನೀರಿಲ್ಲದೆ ಹತ್ತಳ್ಳಿ ಗ್ರಾಮದಲ್ಲಿ ನೂರಾರು ಪಕ್ಷಿಗಳ ಸಾವು | ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಹತ್ತಳ್ಳಿ ಗ್ರಾಮದ ಬೋರಿ ಹಳ್ಳದಲ್ಲಿ ನೂರಾರು ಪಕ್ಷಿಗಳು ಹಾಗೂ ಕೆಲವು ಕಾಡು ಪ್ರಾಣಿಗಳು ಸತ್ತಿರುವ ಘಟನೆಗೆ ಹಳ್ಳದ ಬದಿಯಲ್ಲಿರುವ ಗ್ರಾಮ ಪಂಚಾಯತಿ ಹಾಗೂ ಚಡಚಣ ಪಟ್ಟಣ ಪಂಚಾಯತಿಯವರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ. ಊರಿನ ಘಟಾರ (ಕಲುಷಿತ) ನೀರನ್ನು ನೇರವಾಗಿ ಬೋರಿ ಹಳ್ಳಕ್ಕೆ ಹರಿಬಿಟ್ಟಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಮತ್ತು ಬೇಸಿಗೆಯ ಕಾಲದಲ್ಲಿ ಹಳ್ಳ ಸಂಪೂರ್ಣ ಬತ್ತಿರುವದರಿಂದ ಪಕ್ಷಿಗಳ ಸಾವಿಗೆ ಕಾರಣವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಳ್ಳದ ಸುತ್ತಮುತ್ತ ನವಿಲುಗಳು, ಬಾತುಕೋಳಿಗಳು ಸೇರಿದಂತೆ ವಿವಿಧ ಪಕ್ಷಿಗಳು ಹಾಗೂ ನರಿ ಮುಂತಾದ ಕಾಡು ಪ್ರಾಣಿಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗುತ್ತಿವೆ. ಹಳ್ಳದಲ್ಲಿ ನಿಂತ ನೀರು ದುರ್ವಾಸನೆಯಿಂದ ಕಲುಷಿತಗೊಂಡಿದ್ದು, ಇದನ್ನು ಕುಡಿದ ಪಕ್ಷಿಗಳು ಮತ್ತು ಪ್ರಾಣಿಗಳು ಸಾವನ್ನಪ್ಪುತ್ತಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾಷ್ಟ್ರಪಕ್ಷಿ ನವಿಲುಗಳ ಸಾವು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು ಕೇಂದ್ರ ಸರ್ಕಾರ ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ದಿನಾಚರಣೆಯ ಆಚರಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಬುಧವಾರ ತಹಸೀಲ್ದಾರ ಮೂಲಕ ಸಲ್ಲಿಸಿದರು.ಮನವಿ ಪತ್ರ ಸಲ್ಲಿಸುವ ಮುನ್ನ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜಮಾಯಿಸಿ ಸಭೆ ನಡೆಸಿದ ಅವರು ನಂತರ ಪ್ರತಿಭಟನೆ ಮೆರವಣಿಗೆ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯ ಆರ್.ಜಿ.ಅಳ್ಳಗಿ, ತಾಲೂಕಾಧ್ಯಕ್ಷ ಎಫ್.ಡಿ.ಮೇಟಿ, ತಾಲೂಕು ಕಾರ್ಯದರ್ಶಿ ಎಸ್.ಕೆ.ಸೋಮನಕಟ್ಟಿ ಮಾತನಾಡಿ, ಕೇಂದ್ರ ಸರ್ಕಾರವು ಪಿಂಚಣಿದಾರರನ್ನು ವರ್ಗೀಕರಿಸುವ ಮತ್ತು ಪಿಂಚಣಿ ವ್ಯತ್ಯಾಸಗಳನ್ನು ಕಾಯ್ದುಕೊಳ್ಳುವ ವಿವಾದಾತ್ಮಕ ಕ್ರಮವನ್ನು ಜಾರಿಗೆ ತಂದಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ. ಈ ಕಾಯ್ದೆಯ ಜಾರಿಯಿಂದಾಗಿ ನಿವೃತ್ತಿಯ ದಿನಾಂಕದ ಆಧಾರದ ಮೇಲೆ ಪಿಂಚಣಿದಾರರನ್ನು ವರ್ಗೀಕರಿಸಲಾಗುತ್ತದೆ. ಇದರಿಂದಾಗಿ ಕೇಂದ್ರವೇತನ ಆಯೋಗದ ಶಿಫಾರಸುಗಳ ಪ್ರಯೋಜನಗಳು ಹಳೆಯ…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಖ್ಯಾತ್ ನಾಟಕಕಾರ ವಿಲಿಯಂ ಶೇಕ್ಸಪೀಯರ್ ರಂಗಭೂಮಿ ಎಂದರೆ ಕೇವಲ ಸ್ಥಳವಲ್ಲ, ಅದೊಂದು ಅನುಭವ, ಮನುಷ್ಯ-ಮನುಷ್ಯನಾಗಿ ಬದುಕುವುದನ್ನು ಕಲಿಯುವ, ಹಂಚಿಕೊಳ್ಳುವ ಶ್ರೇಷ್ಠ ಕಲೆಯಾಗಿದೆ” ಎಂದು ಹೇಳಿದ್ದಾರೆ.ನಮ್ಮ ದೇಶೀಯ ನಾಟಕ, ರಂಗಭೂಮಿ, ನೃತ್ಯ, ಸಂಗೀತ ಮತ್ತು ಇತರ ಲಲಿತ ಕಲೆಗಳನ್ನು ಪ್ರೋತ್ಸಾಹಿಸುವುದು ಮತ್ತು ಆ ಎಲ್ಲ ಕಲೆಗಳ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಈ ದಿನದ ಆಚರಣೆಯ ಪ್ರಮುಖ ಉದ್ಧೇಶವಾಗಿದೆ.ಅಷ್ಟೇ ಅಲ್ಲದೇ ಇಂದಿನ ಡಿಜಿಟಲ್ ಯುಗದಲ್ಲಿ ಲೈವ ಪ್ರದರ್ಶನ ನೀಡುವ ಕಾರ್ಯಕ್ರಮಗಳ ಕುರಿತು ನೆನಪಿಸುವುದು, ಮಹತ್ವವನ್ನು ತಿಳಿಸುವದು ಮತ್ತು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿರುವ ದೇಶೀಯ ನಾಟಕದ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವುದು ಇದರ ಮುಖ್ಯ ಆಶಯವಾಗಿದೆ.ಈ ದಿನದಂದು ಪ್ರಪಂಚದಾದ್ಯಂತ ವಿವಿಧ ನಾಟಕೋತ್ಸವ ಮತ್ತು ರಂಗ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಮಹತ್ವದ್ದಾಗಿದೆ.ವಿಶ್ವ ರಂಗಭೂಮಿ ದಿನದ ಆಚರಣೆಯ ಉದ್ಧೇಶ೧೯೬೧ ರಲ್ಲಿ ಅಂತರಾಷ್ಟ್ರೀಯ ರಂಗಭೂಮಿ ಸಂಸ್ಥೆ ಮಾರ್ಚ ೨೭ ರಂದು ವಿಶ್ವ ರಂಗಭೂಮಿ ದಿನವನ್ನಾಗಿ ಆಚರಸಲು ಕರೆ…

Read More

ಏಪ್ರೀಲ್ 2ರ ಗುರುವಾರ ಎರಡನೇ ಶ್ರೀಶೈಲ ಎಂದೇ ಪ್ರತೀತವಾದ ಸುಕ್ಷೇತ್ರ ಗೋಲಗೇರಿಯ ಶ್ರೀ ಗೋಲ್ಲಾಳೇಶ್ವರ ಜಾತ್ರೆಯ ನಿಮಿತ್ಯ ಈ ವಿಶೇಷ ಲೇಖನ ಉದಯರಶ್ಮಿ ದಿನಪತ್ರಿಕೆ ಪಡೆದವ.ಗೋಲಗೇರಿ ಹತ್ತಿರದಡವಳರ ಬಿಲ್ಲುಗ ಮತ್ತು ದುಗ್ಗಳಾದೇವಿ ಪುತ್ರ ಗೋಲ್ಲಾಳ ಶ್ರೀಶೈಲಕ್ಕೆ ತೆರಳುತ್ತಿದ್ದ ಭಕ್ತರಿಗೆ ತನಗೂಂದು ಲಿಂಗ ತರಲು ನಂದಯ್ಯ ಎನ್ನುವನಿಗೆ ಹೇಳುತ್ತಾನೆ. ಇದನ್ನು ಮರೆತು ಬಂದ ನಂದಯ್ಯ ಗೋಲಗೇರಿ ಹತ್ತಿರಕ್ಕೆ ಬರುತ್ತಿದ್ದಂತೆ ಅಲ್ಲೆ ಇದ್ದ ಕುರಿ ಹಿಕ್ಕಿಯೊಂದನ್ನುತೆಗೆದುಕೊಂಡು ಗೋಲ್ಲಾಳನಿಗೆ ಅದೇ ಲಿಂಗವೆಂದು ಕೊಡುತ್ತಾನೆ. ಇದನ್ನು ನಂಬಿದ ಗೋಲ್ಲಾಳ ಅದನ್ನು ಗೊಬ್ಬರದ ಗುಂಡಿಯಲ್ಲಿ ಇಟ್ಟು ನಂದಯ್ಯ ಹೇಳಿದಂತೆ ಪೂಜಿಸುತ್ತಾ‌ನೆ. ಶಿವ ಈತನ ಭಕ್ತಿಗೆ ಒಲಿದ ಕಾರಣಕ್ಕೆ ಶಿವ-ಗೊಲ್ಲಾಳ ಒಂದೇ ಎನ್ನುವ ಭಾವ ಭಕ್ತರದು.ಇದೇ ದಿನಾಂಕ 2/04/26 ಗುರುವಾರ ಶ್ರೀ ಗೊಲ್ಲಾಳೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ. ಇಲ್ಲಿನ ರಥೋತ್ಸವ ಉತ್ತರ ಕರ್ನಾಟಕ ಹೈದರಾಬಾದ್ ಕರ್ನಾಟಕ ಗಡಿ ಬಾಗ ದೊಡ್ಡ ಆಕರ್ಷಣೆ..ದೇವಸ್ಥಾನ ದರ್ಮದರ್ಶಿಗಳ ನೇತೃತ್ವದಲ್ಲಿ ರಥೋತ್ಸವ ಭವ್ಯವಾಗಿ ಜರಗುವದು. ಗುಂಗಿ ಹುಳಗಳ ರೂಪದಲ್ಲಿ ಬರುವ ದೇವರು ತೇರು ಎಳೆಯಲು ಅನುಮತಿ…

Read More

ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವ ಉದ್ಘಾಟನೆಯಲ್ಲಿ ಡಾ.ರವೀಂದ್ರ ಮದ್ರಕಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ ಎಂದು ಯಶೋಧಾ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಮದ್ರಕಿ ಹೇಳಿದರು.ಯಶೋಧಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ವತಿಯಿಂದ ಆಯೋಜಿಸಲಾದ ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಗೌರವ ಅತಿಥಿಯಾದ ಡಾ.ಕಮಲಾ ಮದ್ರಕಿ ಮಾತನಾಡಿ, ವಿದ್ಯಾರ್ಥಿಗಳು ಪಾಠಗಳ ಜೊತೆಗೆ ಕ್ರೀಡೆಗಳಲ್ಲಿಯೂ ತೊಡಗಿಸಿಕೊಂಡು ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶೋಕಕುಮಾರ ರಾ.ಜಾಧವ ಮಾತನಾಡಿ, ಕ್ರೀಡೆಗಳು ಆರೋಗ್ಯಕರ ಜೀವನಕ್ಕೆ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ರಮೇಶ್ ಚೌಧರಿ, ಪ್ರಾಂಶುಪಾಲರಾದ ಪ್ರೊ.ಗುರುಶಾಂತ್.ಪಿ ಹಾಗೂ ನರ್ಸಿಂಗ್ ಸಲಹೆಗಾರರಾದ ವೈ.ವೈ.ಕಡಗಬಾವಿ, ವಿಜಯಕುಮಾರ ಚವ್ಹಾಣ, ಚಾಂದವಸೀಮ ಮುಕಾದಮ ಭಾರತ ಸೇವಾದಳದ…

Read More