Author: editor.udayarashmi@gmail.com

ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕ ದತ್ತು ಪಡೆದು ಬಸವ ಜಯಂತಿ ಆಚರಿಸಿದ ದಂಪತಿ ವಿಜಯಪುರ: ನಗರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕ ದತ್ತು ಪಡೆದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಸಂಗಮೇಶ ಬಬಲೇಶ್ವರ ದಂಪತಿ ಮಾನವೀಯ ಕಳಕಳಿ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.ಶುಕ್ರವಾರ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಕು.ಅಭಿಷೇಕ ಅಶೋಕ್ ಜಾದವ ಆಗಮಿಸಿದ್ದರು. ನಾಲ್ಕು ತಿಂಗಳ ಹಿಂದೆ ತಾಯಿಯನ್ನು ನಾಲ್ಕು ವರ್ಷದ ಹಿಂದೆ ತಂದೆಯನ್ನು ಕಳೆದುಕೊಂಡಿರುವ ಅಭಿಷೇಕ ತನ್ನ ಶಿಕ್ಷಣವನ್ನ ಮುಂದುವರಿಸುವುದು ಹೇಗೆ ಎಂಬ ಚಿಂತೆಯಲ್ಲಿರುವ ಸಂದರ್ಭದಲ್ಲಿಯೇ ಅಂತಹ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರಿಗೆ ಅವರ ಧರ್ಮಪತ್ನಿ ಶ್ವೇತಾ ಬಬಲೇಶ್ವರವರು ” ನಮ್ಮ ಮನೆಗೆ ಬರುವ ಅಜ್ಜಿಯೊಬ್ಬರು ಹೇಳುತ್ತಿದ್ದರು ಇದೇ ಸಂಗಮೇಶ್ವರ ಕಾಲೋನಿಯಲ್ಲಿಯೇ ಒಬ್ಬ ಮಗು ತಂದೆ ತಾಯಿಯನ್ನು ಕಳೆದುಕೊಂಡು ಮುಂದಿನ ಶಿಕ್ಷಣಕ್ಕಾಗಿ ತೊಂದರೆ ಅನುಭವಿಸುತ್ತಿರುವುದಾಗಿ ತಿಳಿಸಿದ್ದಾರೆ. ಆ ಮಗುವನ್ನು…

Read More

ಸ್ಯಾಮ್ ಪಿತ್ರೋಡಾ ಜನಾಂಗೀಯ ನಿಂದನೆ ಹೇಳಿಕೆಗೆ ಖಂಡನೆ | ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ…

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ವಿಜಯಪುರ: ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಭಿನಂದನೆ ತಿಳಿಸಿದ್ದಾರೆ.ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ವಿಜಯಪುರ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 11 ನೇ ಸ್ಥಾನ (ಕಳೆದ ಬಾರಿಯೂ 11 ನೇ ಸ್ಥಾನ) ಪಡೆದಿದ್ದು, ಶೇ.79.31 ಫಲಿತಾಂಶ ಹೊಂದಿದೆ.ಪರೀಕ್ಷೆಗೆ ಹಾಜರಾದ ಒಟ್ಟು 40368 ವಿದ್ಯಾರ್ಥಿಗಳಲ್ಲಿ 15615 ಬಾಲಕರು, 16401 ಬಾಲಕಿಯರು ಸೇರಿ ಒಟ್ಟು 32016 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಜಿಲ್ಲೆಯಲ್ಲಿ ಈ ಬಾರಿಯ ಫಲಿತಾಂಶ ವೃದ್ಧಿಗಾಗಿ ಶಿಕ್ಷಣ ಇಲಾಖೆ ವತಿಯಿಂದ ಹಲವು ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲಾ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ದರು. ಡಿಸೆಂಬರ್ ವೇಳೆಗೆ ಎಲ್ಲಾ ವಿಷಯವಾರು ಭೋದನೆಯನ್ನು ಮುಕ್ತಾಯಗೊಳಿಸಿ, ಮಾರ್ಚ್…

Read More

ಆಲಮಟ್ಟಿ: ಆಲಮಟ್ಟಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲ್ಲಿರುವ 116 ಕೆರೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ ತಿಂಗಳು ಕಾಲುವೆಗೆ ನೀರು ಹರಿಸಿದಾಗ 116 ಕೆರೆಗಳ ಪೈಕಿ ಅರ್ಧದಷ್ಟು ಮಾತ್ರ ಕೆರೆಗಳಿಗೆ ನೀರು ಸೇರಿದ್ದು ಮಧ್ಯದಲ್ಲಿ ರೈತರು ಹಳ್ಳಕ್ಕೆ ನೀರು ಹರಿಸಿದ ಪರಿಣಾಮ ಕೆಲವೊಂದು ಭಾಗದಲ್ಲಿ ಕೆರೆಗಳಿಗೆ ನೀರು ತಲುಪಿಲ್ಲ ಇದರಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗಿದೆ ಪ್ರತಿ ಬಾರಿಯು ನೀರು ಹರಿಸಿದ ಸಂದರ್ಭದಲ್ಲಿ ಕಾಲುವೆ ಕೊನೆಯ ಅಂಚಿನವರೆಗೆ ನೀರು ತಲುಪುವದಿಲ್ಲ ಇದರಿಂದ ಕೊನೆಯ ಭಾಗದ ರೈತರು ನೀರಿನಿಂದ ವಂಚಿತರಾಗಿದ್ದಾರೆ.ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಿರುವದರಿಂದ ಬಹುತೇಕ ಕೆರೆಗಳಲ್ಲಿಯ ನೀರು ಬತ್ತಿ ಹೋಗಿವೆ ಜಲಾಶಯದಲ್ಲಿ ಇನ್ನು ಒಟ್ಟು ನೀರಿನ ಸಂಗ್ರಹ…

Read More

ವಿ.ಎಂ.ಎಸ್.ಗೋಪಿ ✍️ಸಾಹಿತಿ, ಬೆಂಗಳೂರು. ಮೇ -10 ರಂದು ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ದಿನ. ಶುಭಕಾರ್ಯಗಳಿಗೆ ಶುಭ ಹಾಡುವ ಶುಭದಿನ ಅಕ್ಷಯ ತೃತೀಯ ಮತ್ತು ಅಕ್ಷಯ ತದಿಗೆಯನ್ನು ಸಡಗರದಿಂದ ಆಚರಿಸಲು ಚಿನ್ನದಂಗಡಿಗಳು ಶೃಂಗಾರಗೊಂಡಿವೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಗ್ರಾಹಕರು ಕೊಳ್ಳಲು ಮುಂದಾಗುವುದು ಸಾಮಾನ್ಯವಾಗಿ ಚಿನ್ನ, ಬೆಳ್ಳಿ ಹಾಗೂ ವಜ್ರದ ಆಭರಣಗಳು ಮನೆಯಲ್ಲಿ ಚಿನ್ನದ ಆಭರಣದ ಪೆಟ್ಟಿಗೆ ತೆರೆದು ನೋಡಿದರೂ ಸಮಾಧಾನವಿಲ್ಲ. ಇನ್ನಷ್ಟು ಒಡವೆಗಳನ್ನು ಖರೀದಿಸುವ ಆಸೆ. ಪ್ರತಿ ವರ್ಷ ಅಕ್ಷಯ ತೃತೀಯದ ದಿನ ಖರೀದಿಸಿದ ಚಿನ್ನದ ಒಡವೆಗಳೆಲ್ಲ. ರಾಶಿ ರಾಶಿಯಾಗಿ ಪೆಟ್ಟಿಗೆಯಲ್ಲಿವೆ. ಈ ವರ್ಷವೂ ಯಾವುದೋ ಒಂದು ಚಿನ್ನದ ಆಭರಣ ಖರೀದಿಸಿ ಆ ಪೆಟ್ಟಿಗೆಯಲ್ಲಿ ಸೇರಿಸಿಟ್ಟರೆ ಸಮಾಧಾನ. ಅಕ್ಷಯ ತೃತೀಯದಂದು ಚಿನ್ನಾಭರಣ ವಾಹನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದರೆ. ಅದೃಷ್ಟ ದೊರೆಯುತ್ತದೆ. ಮತ್ತಷ್ಟು ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಯೋಗ ಬರುತ್ತದೆ. ಈ ದಿನದಂದು ಯಾವುದೇ ಶುಭಕಾರ್ಯಕ್ರಮ ಆರಂಭಿಸಿದರೂ ಅದರಲ್ಲಿ ಸಂಪೂರ್ಣ ಯಶಸ್ಸು ಸಿಗುತ್ತದೆ ಎಂದು ಜನರು ನಂಬುತ್ತಾರೆ.…

Read More

ಢವಳಗಿ: ಸಮೀಪದ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಭಾಗ್ಯಶ್ರೀ ಬಸವರಾಜ ಹಡಪದ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 625ಕ್ಕೆ 521 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದ್ದಿದ್ದಾಳೆ.ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು ಸೇರಿದಂತೆ ತಂದೆ-ತಾಯಿ ಹರ್ಷ ವ್ಯಕ್ತಪಡಿಸಿದರು.

Read More

ಸಿಂದಗಿ: ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಶ್ರೀ ಸಂಗಮೇಶ್ವರ ವಿದ್ಯಾಲಯದ ಮಲ್ಲಿಕಾರ್ಜುನ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಪೂಜಾ ಹಳೆಮನಿ ೫೬೮ (ಶೇ.೯೦.೮೮) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಪೂಜಾ ಗುತ್ತರಗಿ ೫೪೮ (ಶೇ.೮೭.೬೮) ದ್ವಿತೀಯ ಸ್ಥಾನ, ಬೋರಮ್ಮ ಹೊಸಮನಿ ೫೩೩ (ಶೇ.೮೫.೨೫) ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯ ಫಲಿತಾಂಶ ೧೦೦ಕ್ಕೆ ೯೪% ರಷ್ಟಾಗಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಅಧ್ಯಕ್ಷೆ ಸಾವಿತ್ರಿ ಅರಳಗುಂಡಗಿ, ಪ್ರಧಾನ ಕಾರ್ಯದರ್ಶಿ ಮಹಾನಂದ ಪರಗೊಂಡ, ಆಡಳಿತ ಮಂಡಳಿ ಹಾಗೂ ಶಾಲೆಯ ಮುಖ್ಯಗುರುಗಳು ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಶುಭಕೋರಿದ್ದಾರೆ.

Read More

ಸಿಂದಗಿ: ತಾಲೂಕಿನ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರ ಗೋಲಗೇರಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಮೇ.೧೨ರಂದು ಬೆಳಿಗ್ಗೆ ೦೯ಗಂಟೆಯಿಂದ ಸಾಯಂಕಾಲ ೦೪ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಸದರಿ ಗ್ರಾಮಗಳ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಮೇ.೧೦ರಂದು ಬೆಳಿಗ್ಗೆ ೧೦ಗಂಟೆಗೆ ಬಸವ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಹಾಗೂ ಮೇ.೧೨ರಂದು ಬೆಳಿಗ್ಗೆ ೧೦ಗಂಟೆಗೆ ಶಂಕರಾಚಾರ್ಯರ ಜಯಂತಿಯನ್ನು ಲೋಕಸಭಾ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಅನುಸರಿಸುತ್ತಾ ಸರಳವಾಗಿ ಕಾರ್ಯಾಲಯದ ಸಭಾ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಗಳನ್ನು ನೇರವೇರಿಸಲಾಗುವುದು. ಕಾರಣ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.

Read More