Author: editor.udayarashmi@gmail.com

ಸಿಂದಗಿ: ಪಟ್ಟಣದ ಹೊರವಲಯದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೧೦೪ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ೬೭ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, ೨೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೦೮ ವಿದ್ಯಾರ್ಥಿಗಳು ದ್ವಿತಿಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದು ಶಾಲೆಯ ಫಲಿತಾಂಶವು ೧೦೦ಕ್ಕೆ೧೦೦ ರಷ್ಟಾಗಿದೆ.ಸ್ನೇಹಾ ಬಂದೆ, ಸೃಷ್ಟಿ ರೊಟ್ಟಿ, ೬೧೧ (ಶೇ.೯೭.೭೬) ಅಂಕಗಳನ್ನು ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ, ಅನಮ ಬಳಗಾನೂರ ೬೦೨ (ಶೇ.೯೬.೩೨) ದ್ವಿತಿಯ ಸ್ಥಾನ, ಅನ್ನಪೂರ್ಣ ಪಾಟೀಲ ೬೦೦ (ಶೇ.೯೬) ಅಂಕಗಳನ್ನು ಗಳಿಸಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ ಹಾಗೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯೆ ಎಸ್.ಆಯ್.ಅಸ್ಕಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ಪಾಲಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಎಸ್‌ಡಿಕೆ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಅಭಿಲಾಷಾ ವಾಲಿಕಾರ ೬೧೪ (ಶೇ.೯೮.೨೪) ಅಂಕಗಳಿಸಿ ಶಾಲೆಗೆ ಪ್ರಥಮ, ಸಂತೋಷ ಹಂಗರಗಿ ೬೧೨ (ಶೇ.೯೭.೯೨) ಅಂಕಗಳಿಸಿ ಶಾಲೆಗೆ ದ್ವಿತೀಯ, ಮತ್ತು ವಿರೇಶ ಛಟ್ಟಿ ಹಾಗೂ ಅಶ್ವಿನಿ ರುದ್ರಗಂಟಿ ತಲಾ ೬೧೧ (ಶೇ.೯೭.೭೬) ಅಂಕಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಮಠ ಸೇರಿದಂತೆ ಬೋಧಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ಶಾರದಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಮೇಘಾ ಕ್ಯಾದಗಿ ೫೯೯(ಶೇ೯೫.೮೪) ಅಂಗಗಳನ್ನು ಪಡೆದು ಶಾಲೆಗೆ ಪ್ರಥಮ, ಸಾಧಿಕಾ ನಾಯ್ಕೋಡಿ ೫೯೩(ಶೇ೯೪.೮೮) ಅಂಕಗಳನ್ನು ಪಡೆದು ದ್ವಿತೀಯ, ಲಕ್ಷ್ಮಿ ಕಾಜಗಾರ ೫೪೯(ಶೇ೮೭.೮೪) ಅಂಕಗಳನ್ನು ತೃತೀಯ ಸ್ಥಾನದಲ್ಲಿ ಮತ್ತು ಆಂಗ್ಲ ಮಾಧ್ಯಮದಲ್ಲಿ ಆಶಿಯಾ ಕೇಸಾಪೂರ ೫೯೪(ಶೇ೯೫.೦೪) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ಮಿಶ್ರಿತಬೇಗಂ ಬಾಗವಾನ ೬೮೭(ಶೇ೯೩.೯೨) ಅಂಕಗಳನ್ನು ಪಡೆದು ದ್ವಿತೀಯ, ಕನಕಾ ಮುರಾಳ ೫೬೪(ಶೇ೯೦.೨೪) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ವಿಧ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಪದಾಧಿಕಾರಿಗಳು, ಮುಖ್ಯಗುರುಗಳು ಹಾಗೂ ಬೋಧಕ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಕಲಕೇರಿ: ಗ್ರಾಮದ ಆದರ್ಶ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರೌಡಶಾಲೆಯ ವಿಧ್ಯಾರ್ಥಿಗಳು ೨೦೨೩-೨೪ ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಶಾಲೆಯ ಒಟ್ಟು ಫಲಿತಾಂಶ ಶೇ.೧೦೦ ರಷ್ಟು ಬರುವ ಮೂಲಕ ಸಿಂದಗಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ. ಪರಿಕ್ಷೇಗೆ ಹಾಜರಾದ ೧೧೪ ವಿಧ್ಯಾರ್ಥಿಗಳಲ್ಲಿ ೩೬ ಮಕ್ಕಳು ಉನ್ನತ ಶ್ರೇಣಿಯಲ್ಲಿ, ೭೧ ವಿಧ್ಯಾರ್ಥಿಗಳು ಪ್ರಥಮ ಶ್ರೇಣಿ, ೦೭ ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಕುಮಾರ ಎಮ್.ಡಿ.ಯಾಸಿನ ಹೊನ್ನಳ್ಳಿ-೬೧೨ – ೯೮% ಪಡೆದು ಪ್ರಥಮ ಸ್ಥಾನ, ಸುಮಯ್ಯಾ ನಾಯ್ಕೋಡಿ -೬೦೨ – ೯೬.೩%ದ್ವಿತೀಯ ಸ್ಥಾನ, ಆಕಾಶ ಚಳ್ಳಗಿ – ೬೦೧ – ೯೬.೦೨% ತೃತೀಯ ಸ್ಥಾನ, ತಮನ್ನಾ ಜಾಗಿರದಾರ– ೫೯೭ – ೯೫.೦೫% ನಾಲ್ಕನೆ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದು, ಒಟ್ಟು ೧೬ ವಿದ್ಯಾರ್ಥಿಗಳು ಶೇಕಡಾ ೯೦ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಮಕ್ಕಳ ಸಾಧನೆಗೆ ಮುಖ್ಯಗುರುಗಳು, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿ ಶುಭ ಹಾರೈಸಿದ್ದಾರೆ.

Read More

ಕಲಕೇರಿ: ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಭೀರಲಿಂಗೇಶ್ವರ ದೇವಸ್ಥಾನದಲ್ಲಿ ಮೇ.೧೦ ರಂದು ಶುಕ್ರವಾರ ವಿವಿದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳಲಾಗಿದೆ.ಶುಕ್ರವಾರ ಬೆಳಿಗ್ಗೆ ೯ ಘಂಟೆಗೆ ಪಟ್ಟಾಧಿಕಾರ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ ೧೨ ಘಂಟೆಗೆ ವಾಲಗದ ಕಾರ್ಯಕ್ರಮ ನಡೆಯಲಿದೆ. ಸಂಜೆ ೫ ಘಂಟೆಗೆ ಜಾತ್ರಾಮಹೋತ್ಸವದ ಪ್ರಯುಕ್ತವಾಗಿ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು, ಧರ್ಮಸಭೆಯ ದಿವ್ಯಸಾನಿಧ್ಯವನ್ನು ಸರೂರ ಗುರುಪೀಠದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮಿಗಳು, ಸಾನಿಧ್ಯವನ್ನು ಹುಲಜಂತಿಯ ಮಾಳಿಂಗರಾಯ ದೇವರು, ಕಲಕೇರಿಯ ಗದ್ದಗಿಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು, ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು, ಚಟ್ಟರಕಿಯ ಕೆಂಚಪ್ಪಮುತ್ಯಾ ಪೂಜಾರಿ, ಸರೂರ ಮೂಲ ಗುರುಪೀಠದ ಸನಯ್ಯಮುತ್ಯಾ ಹಾಲಮತ ಇವರು ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ವಹಿಸಲಿದ್ದು, ಉದ್ಘಾಟಕರಾಗಿ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ ಭಾಗಿಯಾಗುವರು, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಜ್ಯೋತಿಯನ್ನು ಬೆಳಗಿಸುವರು, ಡಾ. ವೀರೇಶ ತಳ್ಳೊಳ್ಳಿ ಪುಷ್ಪಾರ್ಚನೆ ಮಾಡುವರು. ಎಂ.ಜಿ.ಎಂ.ಕೆ ಪಿಯು ಕಾಲೇಜಿನ ಪ್ರಾಚಾರ್ಯ…

Read More

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಒಟ್ಟು ೭೦ ವಿದ್ಯಾರ್ಥಿಗಳಲ್ಲಿ ೩೪ ವಿದ್ಯಾರ್ಥಿಗಳು ( ೧೫ ಗಂಡು ೧೯ ಹೆಣ್ಣು) ಡಿಸ್ಟಿಂಕ್ಶನ್, ೨೯ ವಿದ್ಯಾರ್ಥಿಗಳು ( ೧೬ ಗಂಡು ೧೩ ಹೆಣ್ಣು), ಪ್ರಥಮ ಸ್ಥಾನ, ೩ ವಿದ್ಯಾರ್ಥಿಗಳು ( ೩ ಗಂಡು) ದ್ವಿತೀಯ ಸ್ಥಾನ, ಒಬ್ಬ ವಿದ್ಯಾರ್ಥಿ ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿರುವ ಮೂಲಕ ಶಾಲೆಗೆ ಶೇ೯೮ ಫಲಿತಾಂಶ ಬಂದಿದ್ದು, ಶಾಲಾ ಬೋಧಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ನಾಜಮಿನ ನಾಯ್ಕೋಡಿ ೫೫೯ (ಶೇ.೮೯.೪೪) ಅಂಕಗಳಿಸಿ ಶಾಲೆಗೆ ಪ್ರಥಮ, ಭಾಗ್ಯಶ್ರೀ ಬಿರಾದಾರ ಮತ್ತು ಸರಸ್ವತಿ ಬಿರಾದಾರ ತಲಾ ೫೨೬ (ಶೇ.೮೪.೧೬) ಅಂಕಗಳಿಸಿ ಶಾಲೆಗೆ ದ್ವಿತೀಯ, ಮತ್ತು ಸಂಜನಾ ಪಾಟೀಲ ೫೨೪ (ಶೇ.೮೩.೮೪) ಅಂಕಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ

Read More

ಚಡಚಣ: 2023-2024 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಚಡಚಣ ತಾಲೂಕಿನ ನಿವರಗಿಯ ಶೃದ್ಧಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರತಿಭಾ ಮಲ್ಲಿಕಾರ್ಜುನ ತೆಲಗಾಂವ 91.68% ಜೊತೆಗೆ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದಿದ್ದಾಳೆ, ಕುಮಾರ ಭೀಮಾಶಂಕರ ಚನ್ನಬಸು ಮನಗೇನಿ 86.88%, ಅಂಬಿಕಾ ಮಲ್ಲಪ್ಪ ಖತಾಳೆ 75%, ಅಂಕಗಳನ್ನು ಗಳಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.10 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ದರ್ಜೆಯಲ್ಲಿ 02 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 02 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 06, ವಿದ್ಯಾರ್ಥಿಗಳು ಉತ್ತೀರ್ಣರಾಗುವದರ ಜೊತೆಗೆ ಸಂಸ್ಥಗೆ 100% ಕ್ಕೆ 100% ಫಲಿತಾಂಶ ತಂದು ಕೊಟ್ಟಿದಾರೆ ಎಂದು ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ತುಪ್ಪದ ತಿಳಿಸಿದ್ದಾರೆ.ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಆಡಳಿತ ಮಂಡಳಿಯವರು, ವಿಭಾಗ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Read More

ಢವಳಗಿಯ ಪವಿತ್ರಾ ಕೊಣ್ಣೂರ ಶೇ೯೯.೬೮ ಅಂಕ ಪಡೆದು ಜಿಲ್ಲೆಗೆ ಪ್ರಥಮ ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಢವಳಗಿ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪುತ್ರಿ ಪವಿತ್ರಾ ಕೊಣ್ಣೂರ ಇಂಗ್ಲೀಷ್ ಮಾಧ್ಯಮದಲ್ಲಿ ೬೨೩ (ಶೇ೯೯.೬೮) ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ತೃತೀಯ ಸ್ಥಾನ ಗಿಟ್ಟಿಸಿಕೊಂಡು ಅದ್ವಿತಿಯ ಸಾಧನೆ ಮಾಡಿದ್ದಾಳೆ.ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಪವಿತ್ರಾ ಇಂಗ್ಲೀಷ್ ವಿಷಯದಲ್ಲಿ ೧೨೫ಕ್ಕೆ ೧೨೪, ವಿಜ್ಞಾನ ವಿಷಯದಲ್ಲಿ ೧೦೦ಕ್ಕೆ ೯೯ ಸೇರಿದಂತೆ ಉಳಿದ ಎಲ್ಲ ವಿಷಯಗಳಿಗೆ ನೂರಕ್ಕೆ ನೂರು ಅಂಕ ಪಡೆದಿದ್ದಾಳೆ. ಪುತ್ರಿಯ ಸಾಧನೆಗೆ ತಂದೆ ಮಡಿವಾಳಪ್ಪಗೌಡ ಕೊಣ್ಣೂರ, ತಾಯಿ ಭಾರತಿ ಕೊಣ್ಣೂರ ಹರ್ಷ ವ್ಯಕ್ತಪಡಿಸಿದ್ದಾರೆ.ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ “ಉದಯರಶ್ಮಿ” ಪತ್ರಿಕೆಯೊಂದಿಗೆ ಮಾತನಾಡಿದ ವಿದ್ಯಾರ್ಥಿನಿ ಪವಿತ್ರಾ, ನನಗೆ ಇಷ್ಟೊಂದು ಅಂಕಗಳು ಬರುತ್ತೆ ಅಂದುಕೊಂಡಿರಲಿಲ್ಲ. ನನ್ನ ಸಾಧನೆಗೆ ನನ್ನ ತಂದೆ ತಾಯಿಯ ಆಶೀರ್ವಾದ, ಶಿಕ್ಷಕರ ಪರಿಶ್ರಮ ಕಾರಣ. ಮುಂದೆ ಮೆಡಿಕಲ್ ಕ್ಷೇತ್ರದಲ್ಲಿ ಕಾಲಿರಿಸುವ ಆಸೆ ನನ್ನದು ಎಂದಿದ್ದಾಳೆ. ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸನ್ಮಾನ ಮುದ್ದೇಬಿಹಾಳ:…

Read More

ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಆಕೆ ಹೆಣ್ಣು, ಅಬಲೆ ಎಂಬಂತೆ ಜನರಿಂದ ಬಿಂಬಿಸಲ್ಪಟ್ಟರೂ ಸಬಲೆಯಾಗಿದ್ದಳು. ಎಲ್ಲಿ ಬಾಗಬೇಕು, ಎಲ್ಲಿ ಎದ್ದು ನಿಲ್ಲಬೇಕು ಎಂಬುದು ಆಕೆಗೆ ಗೊತ್ತಿತ್ತು. ಗುರು ಹಿರಿಯರಿಗೆ, ಅತ್ತೆ ಮಾವನಿಗೆ, ಕೈಹಿಡಿದ ಪತಿಯ ಜೊತೆ ಗೌರವಾದರದಿಂದ ನಡೆದುಕೊಳ್ಳುತ್ತಿದ್ದ ಆಕೆ ಮೈದುನ ದುಶ್ಚಟಗಳಿಗೆ ಬಲಿಯಾದಾಗ ಆತನನ್ನು ಸರಿದಾರಿಗೆ ತರಲು ಕಠೋರವಾಗಿ ನಡೆದುಕೊಂಡಳು. ನಾದಿನಿಯರನ್ನು, ನೆಗೆಣ್ಣಿಯರನ್ನು ಪ್ರೀತಿ ವಿಶ್ವಾಸದಿಂದ ಒಲಿಸಿಕೊಂಡಳು. ಆ ಪರಶಿವನನ್ನು ಸದಾ ಕಾಲ ಭಕ್ತಿ ಭಾವದಿಂದ ಪೂಜಿಸಿ ಆತನ ಪರಮ ಸಾನಿಧ್ಯ ಪಡೆದಳು.ಗುರುವಿನ ಮಠದಾಗ ತಿರುಗಿ ಹೋದವರಾರು ಗುರುವಿನ ಮಗಳು ಗುರು ತಾಯಿ ಮಲ್ಲಮ್ಮ ಹೇಮರೆಡ್ಡೇರ ಸೊಸಿ….. ಎಂದು ನಮ್ಮ ಜನಪದರು ತಾಯಿ ಮಲ್ಲಮ್ಮನನ್ನು ಹಾಡಿ ಹೊಗಳಿದ್ದಾರೆ. ಸಂತ ಕವಿ ಶಿಶುನಾಳ ಶರೀಫರು ಮಲ್ಲಮ್ಮನ ಕುರಿತು ಗೀತೆಯನ್ನು ರಚಿಸಿದ್ದಾರೆಹೇಮರೆಡ್ಡಿ ಮಲ್ಲಮ್ಮ ಇಂದಿನ ಆಂಧ್ರಪ್ರದೇಶದಲ್ಲಿರುವ ಶ್ರೀಶೈಲ ಪ್ರಾಂತದ ದಕ್ಷಿಣದಲ್ಲಿರುವ ರಾಮಪುರದ ನಾಗಿರೆಡ್ಡಿ ಮತ್ತು ಗೌರಮ್ಮ ಎಂಬ ದಂಪತಿಗಳಿಗೆ ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿಯ ಆಶೀರ್ವಾದದಿಂದ ಹುಟ್ಟಿದ ಮಗಳು.ತಂದೆ ತಾಯಿಯರ ಒಳ್ಳೆಯ ಗುಣನಡತೆ,ಗುರುಭಕ್ತಿ,…

Read More