Author: editor.udayarashmi@gmail.com

ವಿಜಯಪುರ: ರಾಜ್ಯದಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ವಿಜಯಪುರ ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ್ ಕನ್ನಡ ಮಾಧ್ಯಮ ಶಾಲೆಯು 100 ಕ್ಕೆ 98% ರಷ್ಟು ಸಾಧನೆ ಮಾಡಿದೆ. ಶಾಲೆಯ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಪರೀಕ್ಷೆಯಲ್ಲಿ ಕಲ್ಪನಾ ಗುರವ್ ಎಂಬ ವಿದ್ಯಾರ್ಥಿನಿ 579 ಅಂಕ ಗಳಿಸಿ ಶೇ.92.64 ಪ್ರತಿಶತದೊಂದಿಗೆ ಶಾಲೆಗೆ ಪ್ರಥಮ ರ‌್ಯಾಂಕ್ ಗಳಿಸಿದ್ದಾಳೆ. ಮಲ್ಲಿಕಾರ್ಜುನ ಬ್ಯಾಲ್ಯಾಳ್ ಎಂಬ ವಿದ್ಯಾರ್ಥಿ 578 ಅಂಕ ಗಳಿಸಿ ಶೇ.92.48% ಪ್ರತಿಶತದೊಂದಿಗೆ ಶಾಲೆಗೆ ಎರಡನೇ ರ‌್ಯಾಂಕ್ ಪಡೆದಿದ್ದಾನೆ . ಪ್ರತೀಕ್ಷಾ ಕಾಂಬಳೆ ಎಂಬ ವಿದ್ಯಾರ್ಥಿನಿ ಶೇ. 92.% ಪ್ರತಿಶತದೊಂದಿಗೆ 575 ಅಂಕ ಪಡೆದು ಮೂರನೇ ರ‌್ಯಾಂಕ್ ಪಡೆದಿದ್ದಾಳೆ. ಪ್ರಫುಲ್ ವಾಲಿಕಾರ ಎಂಬ ವಿದ್ಯಾರ್ಥಿ 572 ಅಂಕ ಪಡೆದು ಶೇ.91.52% ಪ್ರತಿಶತ ಪಡೆದು ನಾಲ್ಕನೆಯ ಸ್ಥಾನ ಪಡೆದಿದ್ದಾನೆ . 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದು 12 ವಿದ್ಯಾರ್ಥಿ ಗಳು ಪ್ರಥಮ ಶ್ರೇಣಿಯಲ್ಲಿ…

Read More

ಮುದ್ದೇಬಿಹಾಳ: ತಾಲೂಕಿನ ತಾರನಾಳ ಗ್ರಾಮದ ಅಂಗನವಾಡಿಯಲ್ಲಿ ವಿತರಿಸಲಾದ ಪೌಷ್ಟಿಕ ಅಹಾರ ಪದಾರ್ಥಗಳು (ರವಾ, ಬೆಲ್ಲ, ಉಪ್ಪಿಟ್ಟು÷ಚಟ್ನಿ) ಅತ್ಯಂತ ಕಳಪೆ ಮಟ್ಟದ್ದಾಗಿವೆ. ಅಲ್ಲದೇ ಮೊಟ್ಟೆ ಸೇರಿದಂತೆ ಇನ್ನುಳಿದ ಅಹಾರ ಪದಾರ್ಥಗಳನ್ನು ಮಕ್ಕಳಿಗೆ, ಗರ್ಭಿಣಿ ಬಾಣಂತಿಯರಿಗೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.ಕಳಪೆ ಮಟ್ಟದ್ದಾಗಿವೆ ಎಂದು ದೂರಿದ ಅಹಾರ ಪದಾರ್ಥಗಳ ಫೋಟೋ ಕ್ಲಿಕ್ಕಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಗ್ರಾಮಸ್ಥರು, ಪೌಷ್ಠಿಕ ಅಹಾರ ಪದಾರ್ಥಗಳನ್ನು ಸೇವಿಸಿ ಗರ್ಭಿಣಿಯರು ಆರೋಗ್ಯಯುತ ಮಗುವಿಗೆ ಜನ್ಮ ನೀಡಲಿ, ಮಕ್ಕಳು ದೈಹಿಕವಾಗಿ ಸದೃಢರಾಗಲಿ ಎಂಬುದು ಈ ಯೋಜನೆಯ ಉದ್ದೇಶ. ಆದರೆ ಈ ಯೋಜನೆ ಸದುಪಯೋಗವಾಗುತ್ತಿಲ್ಲ. ಕಳಪೆ ಗುಣಮಟ್ಟದ ಅಹಾರಪದಾರ್ಥಗಳನ್ನು ವಿತರಣೆ ಮಾಡುತ್ತಿದ್ದಾರೆ. ಅಲ್ಲದೇ ಇನ್ನುಳಿದ ಅಹಾರ ಪದಾರ್ಥಗಳನ್ನು ನೀಡುತ್ತಿಲ್ಲ. ಮೊಟ್ಟೆಯನ್ನಂತೂ ಕಂಡೇ ಇಲ್ಲ. ಅಪೌಷ್ಠಿಕ ಅಹಾರ ಸೇವಿಸಿದ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರಾದರೆ ಆದರ ಹೊಣೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೇ ಹೊರಬೇಕಾಗುತ್ತದೆ. ಈ ಕೂಡಲೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ಮೋರಟಗಿ: ೨೦೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗ್ರಾಮದ ಕಲ್ಪವೃಕ್ಷ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ೬೬ ವಿದ್ಯಾರ್ಥಿಗಳಲ್ಲಿ ೬೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುತ್ತಮ ಶ್ರೇಣಿ ೨೦, ಪ್ರಥಮ ಶ್ರೇಣಿ ೩೯, ದ್ವಿತೀಯ ಶ್ರೇಣಿ ೪ ವಿದ್ಯಾರ್ಥಿಗಳು ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ೭೬ ವಿದ್ಯಾರ್ಥಿಗಳಲ್ಲಿ ೭೦ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಅತ್ಯುನ್ನತ ಶ್ರೇಣಿ ೧೮, ಪ್ರಥಮ ಶ್ರೇಣಿ ೪೫, ದ್ವಿತೀಯ ಶ್ರೇಣಿ ೬ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆಆಂಗ್ಲ ಮಾಧ್ಯಮ ಪ್ರೌಢ ಶಾಲೆ೧) ಅಶುತೋಷ ೬೧೩ (೯೮.೦೮%)೨) ತನುಷಾ ಮಂದೇವಾಲಿ ೫೯೯ (೯೫.೮೪%)೩) ರಮ್ಯಾ ತಮಗೊಂಡ ೫೮೫ (೯೩.೬೦%)೪) ಪ್ರಸಾದ ರಾಠೋಡ ೫೮೫ (೯೩.೬೦)ಕನ್ನಡ ಮಾಧ್ಯಮ ಪ್ರೌಢ ಶಾಲೆ೫) ಭಗವಂತ್ರಾಯ ಮುದ್ದಾ ೫೯೪ (೯೫.೦೪%)೬) ದ್ಯಾವಮ್ಮ ನಾಯ್ಕೋಡಿ ೫೭೬ (೯೨.೧೬%)೭) ಸುನೀಲ ಆಸಂಗಿಹಾಳ ೫೭೨ (೯೧.೫೨%)ಉತ್ತಮ ಸಾದನೆ ಮಾಡಿ ಶಾಲೆಯ ಕೀರ್ತಿ ಹೆಚ್ಚಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಆಡಳಿತ ಮಂಡಳಿ ಅಭಿನಂದನೆಗಳನ್ನು ಸಲ್ಲಿಸಿ ವಿದ್ಯಾರ್ಥಿಗಳ ಜೀವನ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು…

Read More

ಬಸವನಬಾಗೇವಾಡಿ: ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ನಂದಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಉತ್ತಮ ಫಲಿತಾಂಶ ನೀಡಿದ್ದಾರೆ. ಈ ಪ್ರೌಢಶಾಲೆಯಲ್ಲಿ ೧೫ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಇದರಲ್ಲಿ ೧೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಮೃತಾ ರಾಠೋಡ ಶೇ. ೯೧, ಸಹನಾ ಅವಟಿ ಶೇ. ೮೯, ಶ್ರವಣಕುಮಾರ ಅರಕೇರಿ ಶೇ. ೮೬ ಅಂಕ ಪಡೆದುಕೊಂಡಿದ್ದಾರೆ.ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಭಿನಂದನೆಗಳನ್ನು ಶಾಲೆಯ ಮುಖ್ಯಸ್ಥ ಬಸವರಾಜ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಮೇ.೧೦ ರಂದು ಬೆಳಗ್ಗೆ ೧೦.೩೦ ಗಂಟೆಗೆ ತಾಲೂಕಾಡಳಿತದಿಂದ ಸಾಂಸ್ಕ್ರತಿಕ ನಾಯಕ ವಿಶ್ವಗುರು, ಮಹಾಮಾನವತಾವಾದಿ ಬಸವಣ್ಣನವರ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ಆದೇಶನ್ವಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಇನ್ನೂ ಜಾರಿಯಲ್ಲಿರುವುದರಿಂದ ಸರಳವಾಗಿ, ಸಾಂಕೇತಿಕವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಸರ್ವ ಸಮಾಜ ಬಾಂಧವರು, ಬಸವ ಭಕ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

– ಬಸವರಾಜ ನಂದಿಹಾಳಬಸವನಬಾಗೇವಾಡಿ: ಸಮಾಜ ಸುಧಾರಕ, ದಾರ್ಶನಿಕ, ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಮೇ.೧೦ ರಂದು ಇರುವ ಹಿನ್ನೆಲೆಯಲ್ಲಿ ಬಸವ ಜನಿಸಿದ ಬಸವನಬಾಗೇವಾಡಿಯ ಪಟ್ಟಣದಲ್ಲಿ ಬಸವ ಜಯಂತಿ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ.ಕಳೆದ ಕೆಲ ದಿನಗಳಿಂದ ಬಸವ ಜನ್ಮಸ್ಮಾರಕ, ಬಸವೇಶ್ವರ ದೇವಸ್ಥಾನದಲ್ಲಿ ಮಂಡಳಿಯ ಸಿಬ್ಬಂದಿ ಸ್ವಚ್ಛತೆಯಲ್ಲಿ ತೊಡಗಿರುವದು ಕಂಡುಬಂದಿತ್ತು. ಬಸವೇಶ್ವರ ದೇವಸ್ಥಾನ, ಬಸವಜನ್ಮ ಸ್ಮಾರಕ ಸೇರಿದಂತೆ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಬಸವೇಶ್ವರರ ಪ್ರತಿಮೆಯ ಸುತ್ತ ವಿದ್ಯುದೀಪದ ಅಲಂಕಾರ ಮಾಡಲಾಗಿದೆ.ನಾಡಿನಲ್ಲಿ ಅಕ್ಷಯ ತೃತೀಯ ಬಸವ ಜಯಂತಿಯಂದು ಶುಭ ಕಾರ್ಯ ಸೇರಿದಂತೆ ಚಿನ್ನದ ಖರೀದಿಯಲ್ಲಿ ಜನರು ತೊಡಗುತ್ತಾರೆ. ಬಸವ ಜಯಂತಿ ಬರುವದೇ ನಾಡಿಗೆ ದೊಡ್ಡ ಸಡಗರ, ಸಂಭ್ರಮ. ಬಸವ ಜಯಂತಿಯನ್ನು ಜನರು ಶ್ರದ್ದಾ ಭಕ್ತಿಯಿಂದ ಆಚರಿಸುವದು ವಿಶೇಷ. ಬಸವೇಶ್ವರರ ತತ್ವ ಗಳನ್ನು ಜಗತ್ತಿನಲ್ಲಿ ಅಳವಡಿಸಿಕೊಳ್ಳುವದು ತುಂಬಾ ಮುಖ್ಯವಾಗಿದೆ. ಇಂದು ಜಗತ್ತಿನ ಅನೇಕ ಜ್ವಲಂತ ಸಮಸ್ಯೆಗಳಿಗೆ ಬಸವೇಶ್ವರರ ಸಂದೇಶಗಳು ಪರಿಹಾರ ನೀಡುತ್ತವೆ. ಇವು ಜಗತ್ತಿನಲ್ಲಿ ಪ್ರಸಾರವಾಗಿ ಅವು ಜಾರಿಗೆ ಬರಬೇಕಿದೆ. ಇಂದು ಕೇವಲ ಬಸವೇಶ್ವರರ ಹೆಸರನ್ನು…

Read More

ಇಂಡಿ: ಪ್ರಕೃತಿಯೂ ರೈತರಿಗೆ ತೊಂದರೆ ಕೊಡುತ್ತಿದೆ. ಅತೀವೃಷ್ಠಿ, ಅನಾವೃಷ್ಠಿ ಹೊಡೆತಕ್ಕೆ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೈತರ ಜ್ವಲಂತ ಸಮಸ್ಯೆಗಳಿವೆ. ಅದಕ್ಕೆ ರೈತರ ಗಟ್ಟಿ ಧ್ವನಿಯಾಗಿ ಸರಕಾರ ಗಮನ ಸೆಳೆಯಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಭೀಮನಗೌಡ ಪಾಟೀಲ ಹೇಳಿದರು.ಬುಧವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ಅಕ್ಕ ಮಹಾದೇವಿ ಬ್ಯಾನರ್ ಕಾರ್ಯಾಲಯದಲ್ಲಿ, ರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲೆಯ ನೂತನ ಅಧ್ಯಕ್ಷ ಎಸ್ ಬಿ ಕೆಂಬೋಗಿ ಅವರಿಗೆ “ಸ್ನೇಹ ಸಂಗಮ‌” ಸ್ನೇಹಿತರ ಬಳಗದಿಂದ ಸನ್ಮಾನಿಸಿ ಮಾತನಾಡಿದರು.ಇಂದು ಬಿತ್ತನೆಯ ಬೀಜ, ಗೊಬ್ಬರದಿಂದ ಹಿಡಿದು ಮಾರುಕಟ್ಟೆಯವರೆಗೂ ರೈತರಿಗೆ ಅನ್ಯಾಯವಾಗುತ್ತಿದೆ. ರೈತರು ಸಂಘಟನೆಯಾಗದಿದ್ದರೆ ಪರಿಸ್ಥಿತಿ ತುಂಬಾ ಗಂಭೀರವಾಗುತ್ತಿದೆ.ಇಂದು ರೈತರು ಸಮಸ್ಯೆಗಳು ಬೆಟ್ಟದಷ್ಟು, ಬೃಹದಾಕಾರವಾಗಿ ಬೆಳೆದಿವೆ. ಅದಲ್ಲದೇ ಬೇರೆ-ಬೇರೆ ತಿರುವು ಪಡೆದು ರಾಜಕೀಯ ಸ್ವರೂಪ ಪಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.ಮುಖಂಡ ಪಾಪು ಕಿತಲಿ‌ ಮಾತನಾಡಿ ರೈತರು ಇಂದು ಕೃಷಿ ಕಸುಬು ತೊರೆದು ಬೇರೆ ವೃತ್ತಿಯತ್ತ ಮುಖಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ‌. ನಮ್ಮ ವಿಜಯಪುರ…

Read More

ವಿಜಯಪುರ: ೨೦೨೪-೨೫ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಮೇ.೧೪ ಕೊನೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೆರಿಟ್ ಮೇಲೆ ಆಯ್ಕೆಯಾದ ಆಯ್ಕೆಯಾದ ವಿದ್ಯಾಥಿಗಳು ಪಟ್ಟಿಯನ್ನು ಮೇ.೧೫ ರಂದು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗುವುದು. ಮೇ.೧೬ ಆಯ್ಕೆಯಾದ ವಿಧ್ಯಾರ್ಥಿಗಳು ಮೂಲ ದಾಖಲೆ ಹಾಗೂ ಶುಲ್ಕದೊಂದಿಗೆ ಪ್ರವೇಶಾತಿಯನ್ನು ಪಡೆಯಲು ಕೊನೆಯ ದಿನಾವಾಗಿದೆ ಎಂದು ಸರಕಾರಿ ಪಾಲಿಟೆಕ್ನಿಕ್ ವಿಜಯಪುರದ ಪ್ರಾಚಾರ್ಯುರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪ್ರತಿಭಾವಂತ ಪರಿಶಿಷ್ಟ ಜಾತಿ, ಸೇರಿರುವ ೬ನೇ ತರಗತಿ ವಿದ್ಯಾರ್ಥಿಗಳನ್ನು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಮೇ.೨೧ ರೊಳಗೆ ಆನ್ ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರಾದ ಪುಂಡಲಿಕ್ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೬ನೇ ತರಗತಿಯ ಪ್ರವೇಶಕ್ಕಾಗಿ ಮೇ.೧೯ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ಅರ್ಜಿ ಸಲ್ಲಿಸಿದ ಆಯಾ ತಾಲೂಕಿನ ವಸತಿ ಶಾಲೆಯಲ್ಲಿ ಪಡೆಯಬಹುದಾಗಿದೆ.ಪ್ರವೇಶ ಪರೀಕ್ಷೆಗಳು ನಡೆಯುವ ಕೇಂದ್ರಗಳ ವಿಳಾಸ ಹಾಗೂ ಪ್ರಾಂಶುಪಾಲರ ಸಂಪರ್ಕ ಸಂಖ್ಯೆ:ತಿಕೋಟಾದ ಡಾ. ಎ.ಪಿ.ಜೆಅಬ್ದುಲ್ ಕಲಾಂ ವಸತಿಶಾಲೆ, ಅರಕೇರಿ (೮೯೭೧೪೫೯೬೮೩), ಸರಕಾರಿ ಮುಸ್ಲಿಂ ವಸತಿ ಶಾಲೆ ಅಫಜಲಪುರಟಕ್ಕೆ ವಿಜಯಪುರ (೮೩೧೦೮೩೦೪೦೭) ಚಡಚಣ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಲಹಳ್ಳಿ (೯೬೨೦೮೨೮೧೮೫) ಸಿಂದಗಿಯ ಎಚ್. ಜಿ. ಪಿಯು ಕಾಲೇಜು ವಿವೇಕಾನಂದ ಸರ್ಕಲ್ ಸಿಂದಗಿ, ಹೆಚ್.ಟಿ. ಕುಲಕರ್ಣಿ, ಪ್ರೌಢಶಾಲೆ, ಸಿಂದಗಿ(೯೯೮೦೯೫೨೯೬೦), ಶಾಂತೇಶ್ವರ ಪಿಯು ಕಾಲೇಜು ಬಸ್‌ಸ್ಟ್ಯಾಂಡ್ ಹತ್ತಿರ ಮಿನಿವಿಧಾನಸೌಧ ಇಂಡಿ (೭೮೯೨೩೭೧೭೦೯), ಅಭ್ಯುದಯ ಆಂಗ್ಲ ಮಾಧ್ಯಮ ಶಾಲೆ ಮುದ್ದೇಬಿಹಾಳ (೭೨೫೯೧೭೯೩೯೮), ಎಂ.ಜಿ.ಎಂ.ಕೆ ಆಂಗ್ಲ ಮಾಧ್ಯಮ ಶಾಲೆ…

Read More