Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಮೇ.೯,೧೦ ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಮೇ. ೯ ರಂದು ಬೆಳಗ್ಗೆ ೭ ಗಂಟೆಯಿಂದ ದೇವಸ್ಥಾನದಲ್ಲಿ ಶಿವಭಜನೆ ಆರಂಭವಾಗಲಿದೆ. ಸಂಜೆ ೬ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತವೆ. ರಾತ್ರಿ ೯.೩೦ ಗಂಟೆಗೆ ಅಂಕಲಗಿಯ ಜಯಶ್ರೀ ಭಜನಾ ಸಂಘ ಹಾಗೂ ಉಮದಿಯ ಬಾಹುಸಾಹೇಬ ಮಹಾರಾಜ ಭಜನಾ ಸಂಘದಿಂದ ಭಜನಾ ಪದಗಳು ನಡೆಯಲಿವೆ.ಮೇ. ೧೦ ರಂದು ಬೆಳಗ್ಗೆ ೭.೩೦ ಗಂಟೆಗೆ ದೇವಸ್ಥಾನದ ಆವರಣದಲ್ಲಿ ಷಟ್ಸ್ಥಲ ಧ್ವಜಾರೋಹಣ ನೆರವೇರಲಿದೆ. ಬೆಳಗ್ಗೆ ೧೦.೩೦ ಗಂಟೆಗೆ ಬಸವ ಜನ್ಮಸ್ಮಾರಕದಲ್ಲಿ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವೇಶ್ವರರ ತೊಟ್ಟಿಲು ಹಾಗೂ ನಾಮಕರಣ ಸಮಾರಂಭ ನಡೆಯಲಿದೆ. ಮಧ್ಯಾನ್ಹ ೧೨.೩೦ ಗಂಟೆಗೆ ಬಸವಜನ್ಮ ಸ್ಮಾರಕದ ಮುಂಭಾಗ, ಬಸವೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.ಸಂಜೆ ೫ ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಚನ ಚಿಂತನ ಗೋಷ್ಠಿ…
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೭೫ ನೇ ಯಾತ್ರಾ ಮಹೋತ್ಸವ ಹಾಗೂ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವದಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಧರ್ಮ ಜಾಗೃತಿ ಸಮಾರಂಭದಲ್ಲಿ ಶ್ರೀಮಠದ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾಬ್ಯಾಗ್, ಪಠ್ಯ ಪರಿಕರಗಳನ್ನು ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿತರಿಸಿದರು.
ಬಸವನಬಾಗೇವಾಡಿ: ಜೀವನದಲ್ಲಿ ಯಾರೂ ದುಡಿಮೆ ಮಾಡುತ್ತಾರೋ ಅಂತಹವರು ಸುಂದರವಾದ ಜೀವನ ಸಾಗಿಸುತ್ತಾರೆ. ಜೀವನದಲ್ಲಿ ಆಚಾರ-ವಿಚಾರವಂತರಾಗಿ ಸನ್ಮಾರ್ಗದಲ್ಲಿ ಸಾಗಿದರೆ ಭಗವಂತನು ಖಂಡಿತ ಒಳ್ಳೆಯದು ಮಾಡುತ್ತಾನೆ ಎಂದು ಕೆರೂರ-ಕೊಣ್ಣೂರಿನ ಡಾ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೭೫ ನೇ ಯಾತ್ರಾಮಹೋತ್ಸವ ಹಾಗೂ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವ ಹಾಗೂ ಗುರು ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆಯಂಗವಾಗಿ ಬುಧವಾರ ಭಜನಾ ಮಂಟಪದಲ್ಲಿ ಹಮ್ಮಿಕೊಂಡಿದ್ದ ಧರ್ಮಜಾಗೃತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮರನ್ನು ಸ್ಮರಣೆ ಮಾಡುವದರಿಂದ ಘನವಾದ ಮುಕ್ತಿ ಸಿಗುತ್ತದೆ. ಪರಮಾತ್ಮ ನಿರಾಕಾರ ರೂಪದಲ್ಲಿದ್ದಾನೆ. ಮಹಾತ್ಮರ ಲೀಲೆಗಳು ಪರಮಾತ್ಮನ ಇರುವಿಕೆಯನ್ನು ತೋರಿಸುತ್ತವೆ. ಅಪ್ರತ್ಯಕ್ಷವಾಗಿರುವ ದೇವರು ಗುರುವಿನ ರೂಪದಲ್ಲಿ ಕಾಣುತ್ತಾನೆ ಎಂದು ಸಿದ್ಧಾಂತ ಶಿಖಾಮಣಿಯಿಂದ ಗೊತ್ತಾಗುತ್ತದೆ ಎಂದರು.ಬಹಿರಂಗ ಆಚಾರವೆಂದರೆ ದೇಹವನ್ನು ಶುದ್ಧಿಯಾಗಿಟ್ಟುಕೊಳ್ಳುವುದು. ಅಂತರಂಗ ಆಚಾರವೆಂದರೆ ಮಹಾತ್ಮರ ಅಮೃತವಾಣಿಗಳಿಂದ ಅಂತರಂಗವನ್ನು ಶುದ್ಧಿವಾಗುತ್ತದೆ. ನಮ್ಮ ಸಂಸ್ಕ್ರತಿ-ಸಂಸ್ಕಾರವನ್ನು ಎಂದಿಗೂ ಬಿಡಬಾರದು. ಇಂದು…
ಸಿಂದಗಿ: ೨೦೨೪ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿಂದಗಿ ವಿಧಾನಸಭಾ ಮತಕ್ಷೇತ್ರ-೩೩ರಲ್ಲಿ ಶಾಂತಿಯುತ ಮತದಾನವಾಗಿದೆ.ಬಿಸಿಲಿನ ಬರದಲ್ಲಿ ಬೆಳಿಗ್ಗೆ ಬೇಗ ಮತದಾನ ಮಾಡಿದರು. ಮಧ್ಯಾಹ್ನ ೨ ಗಂಟೆಯಿಂದ ಸಾಯಂಕಾಲದವರೆಗೆ ಕ್ಷೇತ್ರದಲ್ಲಿ ಬಿಸಿಲಿನ ಬೇಗಗೆ ಮತದಾನ ನಿರಸ ಪ್ರತಿಕ್ರಿಯೆ ಕಂಡು ಬಂದಿತ್ತು. ಆದರೆ ಬಿಸಿಲು ಇಳಿಯುವ ಸಮಯದಲ್ಲಿ ಮತದಾರರು ತೀರ್ವವಾಗಿ ಕುಟುಂಬ ಸಮೇತವಾಗಿ ಅವರವರ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದ್ದು ಕಂಡು ಬಂದಿತು. ಯಾವುದೇ ರಿತೀಯ ಅಹಿತಕರ ಘಟನೆಗಳು ಕಂಡು ಬಂದಿಲ್ಲ. ಮತಗಟ್ಟೆ ಸಂಖ್ಯೆ ೧೭೧, ೧೭೨, ೧೭೩ ಬೂತ್ನ ಆವರಣದಲ್ಲಿಯೇ ಆಗಮಿಸಿ ಚಿಟಿ ನೀಡುವ ದೃಶ್ಯ ಕಂಡು ಬಂದಿತು. ಆದರೆ ಅಧಿಕಾರಿಗಳು ಕಂಡು ಕಾಣದಂತೆ ಕುಳತಿದ್ದಾರೆ.ಒಟ್ಟು ೨,೪೦,೪೪೪ ಮತಗಳಿದ್ದು, ಅದರಲ್ಲಿ ಪುರುಷರು-೧,೨೩,೩೧೩, ಮಹಿಳೆಯರು-೧,೧೭,೧೦೦, ೧೩೮೧ ವಯಸ್ಕರು ಮತ್ತು ಇತರೆ ೨೯ ಮತಗಳಿದ್ದವು.ಒಟ್ಟು ಕ್ಷೇತ್ರದಲ್ಲಿ ೨೬೮ ಮತಗಟ್ಟಗಳಿದ್ದು, ೧೩೭ ಸೂಕ್ಷö್ಮ ಮತಗಟ್ಟೆಗಳಿದ್ದವು. ಅದರಲ್ಲಿ ಸಿಂದಗಿ ಕಾಳಿಕಾ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ೬, ಬಸವ ನಗರದ ಸರಕಾರಿ ಹೆಣ್ಣು ಮಕ್ಕಳ ಶಾಲೆ, ವಿದ್ಯಾ ನಗರದ ಸರಕಾರಿ…
ನೀತಿಸಂಹಿತೆ ಉಲ್ಲಂಘನೆ ಆರೋಪ | ಕರ್ನಾಟಕ ರಾಷ್ಟ ಸಮಿತಿ ಪಕ್ಷ ಆಗ್ರಹ ವಿಜಯಪುರ: ಕಾಂಗ್ರೆಸ್ ಮತ್ತು ಬಿಜೆಪಿ ಉಮೇದುದಾರರ ಉಮೆದುದಾರಿಕೆ ರದ್ದುಪಡಿಸುವಂತೆ ಕರ್ನಾಟಕ ರಾಷ್ಟ ಸಮಿತಿ ಪಕ್ಷದ ವಿಜಯಪುರ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾದ ಗಣಪತಿ ಲಾಲಾಸಿಂಗ್ ರಾಠೋಡ ಆಗ್ರಹಪಡಿಸಿದ್ದಾರೆ.ದಿನಾಂಕ :೦೭-೦೫-೨೦೨೪ ರಂದು ವಿಜಯಪುರ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನದ ದಿನದಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ತಮ್ಮ ಪಕ್ಷದ ಚಿಹ್ನೆ ಮತ್ತು ಅವರ ಭಾವಚಿತ್ರ ಇರುವ ಕರಪತ್ರಗಳನ್ನು ಲಕ್ಷಗಟ್ಟಲೆ ಮುದ್ರಿಸಿ ಪ್ರತಿ ಮತದಾರರ ಕೈಯಲ್ಲಿ ಕೊಟ್ಟು ಒತ್ತಾಯ ಪೂರ್ವಕವಾಗಿ ಮತದಾರರು ಮತಗಟ್ಟೆಗೆ ತರುವಂತೆ ಮಾಡಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಬಲವಂತ ಪಡಿಸಲಾಗಿದೆ. ಮತಗಟ್ಟೆಯಿಂದ ನೂರು ಮೀಟರ್ ಒಳಗಡೆ ಯಾವುದೇ ರೀತಿಯ ಪಕ್ಷದ ಪ್ರಚಾರ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಇದು ಕೇವಲ ನಾಲ್ಕು ಐದು ಹಳ್ಳಿಗಳಲ್ಲಿ ಆಗಿಲ್ಲ. ಇಡಿ ಜಿಲ್ಲೆಯಲ್ಲಿರುವ ೨೬೦೦ಕ್ಕೂ ಹೆಚ್ಚು ಮತಗಟ್ಟೆಗಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಮತದಾರರ ಮೇಲೆ ಒತ್ತಡ…
ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಪಟ್ಟಿಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ೭೫ನೇ ಯಾತ್ರಾ ಮಹೋತ್ಸವ, ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ ೨೩ನೇ ಸಂಸ್ಮರಣೋತ್ಸವ ಹಾಗೂ ಗುರು ಮಹಾಂತೇಶ್ವರ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರು ಆದ ಸಮಾಜ ಸೇವಕ ಎಸ್.ಎಸ್.ಆಲೂರ ದಂಪತಿಗಳಿಗೆ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.ಏ.೮ರ ಬುಧವಾರದಂದು ಮನಗೂಳಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇವರ ಸೇವೆಯನ್ನು ಪರಿಗಣಿಸಿ ಮಹಾಂತೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.ಡೋಣೂರು-ಕೊಟ್ಟುರು ಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕೆರೂರ-ಕೊಣ್ಣೂರ ಮಠದ ಡಾ.ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಅಮರೇಶ್ವರಮಠ ಗುಳೇದಗುಡ್ಡದ, ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಷ.ಬ್ರ.ಡಾ.ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿಯ ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಇಂಗಳೇಶ್ವರ-ವಡವಡಗಿಯ ಬೃಂಗೀಶ್ವರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಸೋಮನಗೌಡ(ಅಪ್ಪುಗೌಡ) ಪಾಟೀಲ, ಚಂದ್ರಶೇಖರ ಎಸ್.ಪಾಟೀಲ, ಎಸ್.ಜಿ.ಹಾವಣ್ಣವರ, ಎಸ್.ಆಯ್.ರೇವೂರಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತಾಳಿಕೋಟಿ : ಅಸ್ಕಿ, ಬೂದಿಹಾಳ ಪಿ.ಟಿ, ಬೆಕಿನಾಳ ಹಾಗೂ ಹುಣಶ್ಯಾಳ ಗ್ರಾಮದ ಕೆರೆಯ ವ್ಯಾಪ್ತಿಯ ಜಮೀನನ್ನು ಇಲಾಖೆಯ ಸುಪರ್ದಿಗೆ ತೆಗೆದುಕೊಂಡು ಅದನ್ನು ಅಭಿವೃದ್ಧಿಪಡಿಸಿ ಕೆರೆ ನೀರು ತುಂಬಿಸಬೇಕು ಮತ್ತು ರೈತರ ಉತಾರೆಯಲ್ಲಿ ಜಮೀನನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತಾಳಿಕೋಟಿ ತಾಲೂಕಾ ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ, ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಆಸ್ಕಿ, ಬೂದಿಹಾಳ.ಪಿ.ಟಿ, ಹುಣಶ್ಯಾಳ ಹಾಗೂ ಬೆಕಿನಾಳ ಗ್ರಾಮದಲ್ಲಿಯ ಕೆರೆಗಳು ಇಂದು ಅಕ್ಕಪಕ್ಕದ ರೈತರು ಅತಿಕ್ರಮಣ ಮಾಡಿಕೊಂಡು ಸಾರ್ವಜನಿಕರಿಗೆ ಹಾಗೂ ಜನಜಾನುವಾರುಗಳಿಗೆ ಅಲ್ಲಿ ನೀರು ಕುಡಿಯಲು ಹಾಗೂ ಬಳಸಲು ಬಿಡುತ್ತಿಲ್ಲ, ಕೇಳಿದರೆ ಇದು ನಮ್ಮ ಜಾಗ ನಮ್ಮ ಹೆಸರಲ್ಲಿ ಉತಾರೆಗಳಿವೆ ಎಂದು ದೊಡ್ಡ ಧ್ವನಿಯಲ್ಲಿ ಅಂಜಿಸುತ್ತಿದ್ದಾರೆ.ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳ ವಿಕ್ಷಣೆ ಮಾಡಿ ಕೆರೆಯ ಒಟ್ಟು ಅಳತೆ ಮಾಡಿ ಅಕ್ರಮವಾಗಿ ಅತಿಕ್ರಮಣ ಮಾಡಿ ಸಾಗುವಳಿ ಮಾಡುತ್ತಿರುವವರನ್ನು ಅಲ್ಲಿಂದ ಖಾಲಿ ಮಾಡಿಸಿ, ಅಂತವರ…
ಇಂಡಿ: ಮೇ.೭ ರಂದು ಇಂಡಿ ಮತಕ್ಷೇತ್ರದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತ ಯಂತ್ರಗಳನ್ನು ರಾತ್ರಿ ೩ ಗಂಟೆಗೆ ವಿಜಯಪುರಕ್ಕೆ ರವಾನಿಸಲಾಗಿದೆ ಎಂದು ಸಹಾಯಕ ಚುನಾವಣೆ ಅಧಿಕಾರಿ ಮತ್ತು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.೨೬೮ ಮತ ಯಂತ್ರಗಳನ್ನು ಪೋಲಿಸ ಬಂದೋಬಸ್ತಿನಲ್ಲಿ ಇಂಡಿಯ ಆದರ್ಶ ಪ್ರೌಢಶಾಲೆಯಿಂದ ವಿಜಯಪುರದ ಸೈನಿಕ ಶಾಲೆಗೆ ಕಳುಹಿಸಲಾಗಿದೆ.ಈ ವೇಳೆಯಲ್ಲಿ ತಹಸೀಲ್ದಾರ ಮಂಜುಳಾ ನಾಯಕ, ಡಿ.ಎಸ್.ಪಿ ಎಚ್.ಎಸ್.ಜಗದೀಶ, ಪಿಎಸ್ಐ ಮಂಜುನಾಥ ಹುಲಕುಂದ, ಪಿಡಿಒ ಬಸವರಾಜ ಬಬಲಾದ, ಬಸವರಾಜ ರಾಹೂರ,ಆರ್.ಬಿ.ಮೂಗಿ ಮತ್ತಿತರಿದ್ದರು.
ದೇವರಹಿಪ್ಪರಗಿ: ತಾಲ್ಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಶ್ರೀಗುರು ವೀರಘಂಟಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ.ದಿ:೧೦ ರಂದು ಶುಕ್ರವಾರ ಬೆಳಿಗ್ಗೆ ಬಸವ ಜಯಂತಿ ಅಂಗವಾಗಿ ವೀರಘಂಟಿ ಮಡಿವಾಳೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ೧೦ ಗಂಟೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಹಾಗೂ ಬಸವೇಶ್ವರ ವೃತ್ತದ ಪ್ರತಿಮೆಗೆ ಪೂಜೆ, ರಾತ್ರಿ ೭ ಗಂಟೆಗೆ ಬಸವೇಶ್ವರರ ತೊಟ್ಟಿಲು ಕಾರ್ಯಕ್ರಮ ಹಾಗೂ ಧಾರ್ಮಿಕ ಪ್ರವಚನ ಮುಕ್ತಾಯ ಸಮಾರಂಭ ಜರುಗಲಿದೆ.ದಿ:೧೧ ರಂದು ಶನಿವಾರ ಬೆಳಿಗ್ಗೆ ವೀರಘಂಟಿ ಮಡಿವಾಳೇಶ್ವರರ ಉತ್ಸವ ಮೂರ್ತಿಯೊಂದಿಗೆ ಪಲ್ಲಕ್ಕಿ ಉತ್ಸವ, ನಂದಿಕೋಲ ಮೆರವಣಿಗೆ, ಸುಮಂಗಲೆಯರ ಕುಂಭ, ಕಳಸಕನ್ನಡಿಯೊಂದಿಗೆ ಸಕಲ ವಾಧ್ಯವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಮಹಾಪ್ರಸಾದ ವಿತರಣೆಯಾಗಲಿದೆ. ಸಾಯಂಕಾಲ ೫ ಗಂಟೆಗೆ ಜಂಗಿ ನಿಕಾಲಿ ಕುಸ್ತಿಗಳು ಹಾಗೂ ರಾತ್ರಿ ೧೦.೩೦ ಗಂಟೆಗೆ ಸಿದ್ದು ಮೇಲಿನಮನಿ ಅವರ ದೀಪಕ ಮೆಲೋಡಿಸ್ದಿಂದ ಸಂಗೀತ ಸಂಜೆ ಜರುಗಲಿದೆ.ಮಹೋತ್ಸವದಲ್ಲಿ ಬೀದರ ಚಳಕಾಪೂರ ಮಠದ ಶಂಕರಾನಂದ ಸ್ವಾಮೀಜಿ, ಜಾಲವಾದ ಗ್ರಾಮದ ಮಹಾಂತಲಿಂಗ ಶ್ರೀ, ನಂದವಾಡಗಿಯ ಚನ್ನಬಸವ…
ದೇವರಹಿಪ್ಪರಗಿ: ಯಾಳವಾರ ಗ್ರಾಮದ ಗುರು ಮಹಾಂತ ಶಿವಾಚಾರ್ಯರ ಜಾತ್ರಾ ಹಾಗೂ ನಮ್ಮೂರ ಹೆಮ್ಮೆ ನಮ್ಮೂರ ಮಹೋತ್ಸವ ಗುರುಮಠದಲ್ಲಿ ಜರುಗಲಿದೆ.ದಿ:೧೧ ಶನಿವಾರದಂದು ಸಾಯಂಕಾಲ ೬ ಗಂಟೆಗೆ ಮಹಾಂತೇಶ್ವರ ಗದ್ದುಗೆಗೆ ಕಳಸಾರೋಹಣ ಹಾಗೂ ಆಧ್ಯಾತ್ಮ ಪ್ರವಚನ ಮಂಗಲ ನೆರವೇರಲಿದೆ. ಸಂಜೆ ೭ ಗಂಟೆಗೆ ಅನುದಿನ ಅನುಸರಿಸು ಸಂಸ್ಥೆ ವತಿಯಿಂದ ನಮ್ಮೂರ ಉತ್ಸವ ನಮ್ಮ ಹೆಮ್ಮೆ ರೈತೋತ್ಸವ ಮತ್ತು ೨೦೧ ಎತ್ತಿನ ಬಂಡಿ ಮೆರವಣಿಗೆ ಮಹಾಲಿಂಗೇಶ್ವರ ಕ್ರೀಡಾಂಗಣದಲ್ಲಿ ಜರುಗಲಿದೆ.ದಿ:೧೨ ಭಾನುವಾರರದಂದು ಬೆಳಿಗ್ಗೆ ಬ್ರಾಹ್ಮಿ ಮುಹರ್ತದಲ್ಲಿ ಗುರುಗಳ ಗದ್ದುಗೆ ಮಹಾರುದ್ರಾಭಿಷೇಕ ಮಹಾಮಂಗಳಾರತಿ, ೯ ಗಂಟೆಗೆ ಜಗದ್ಗುರು ದಾರುಕಾಚರ್ಯರ ಅಡ್ಡಪಲ್ಲಕ್ಕಿ ಉತ್ಸವ ಮಧ್ಯಾನ್ಹ ಮಹಾಪ್ರಸಾದ ಸಾಯಂಕಾಲ ಹೆಡಗಾಪೂರ ಶಿವಲಿಂಗೇಶ್ವರ ಸಂಸ್ಥಾನಮಠ ಹಾಗೂ ಗುರುಮಾಂತೇಶ್ವರ ಗುರುಮಠದ ಷ.ಬ್ರ ದಾರುಕಲಿಂಗ ಶಿವಾಚರ್ಯರ ಸಾನಿಧ್ಯದಲ್ಲಿ ಶ್ರೀಗುರುಮಹಾಂತೇಶ್ವರ ಮಹಾರಥೋತ್ಸವ ಜರುಗಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಯಾಳವಾರ, ನಾಗರಾಳ, ಕಡಕೋಳ, ಭೈರವಾಡಗಿ, ಕಾಮನಕೇರಿ ಗ್ರಾಮಗಳ ಸದ್ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
