Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಐತಿಹಾಸಿಕ ಭೂತನಾಳ ಕೆರೆಗೆ ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದು, ಇದರಿಂದ ನಗರದ ಜನತೆಗೆ ಎಳ್ಳಷ್ಟು ನೀರಿನ ಅಭಾವ ಉಂಟಾಗುವುದಿಲ್ಲ.ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ, ಆಲಮಟ್ಟಿ ಜಲಾಶಯದಿಂದ ಮೇ.9 ರಿಂದ 28 ರವೆರಗೆ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು, ನಗರದ ಭೂತನಾಳ ಕೆರೆಯ ಮೇಲೆ ಅವಲಂಬನೆ ಇರುವ ಮಹಾನಗರ ಪಾಲಿಕೆ ವ್ಯಾಪ್ತಿಯ 4,5,6,10,12 ವಾರ್ಡಗಳಿಗೆ, ಬೇಸಿಗೆ ಮುಗಿಯುವರೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಯಾವುದೇ ತೊಂದರೆ ಆಗುವುದಿಲ್ಲ. ಇದರಿಂದ ನಗರದ ಜನತೆಯ ನೀರಿನ ಭವಣೆ ತಪ್ಪಿಸಿದಂತಾಗುತ್ತದೆ ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಂದಗಿ: ಎಲ್ಲ ಮಕ್ಕಳು ಇಂತಹ ಬೇಸಿಗೆ ಕಾಲದಲ್ಲಿ ತಂದೆ ತಾಯಿ, ಮನೆಗಳನ್ನು ಬಿಟ್ಟು ಇಷ್ಟೆಲ್ಲಾ ಮಂತ್ರಗಳನ್ನು ಒಂದು ತಿಂಗಳು ಕಲಿಯುತ್ತಿರುವುದು ಸಂತಸ ತಂದಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗತ್ಪಾಂದಗಳ ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಒಂದು ತಿಂಗಳ ಕಾಲ ಜರುಗಿದ ಸಂಸ್ಕಾರ ಶಿಬಿರದಲ್ಲಿ ಭಾಗವಹಿಸಿ ಮಕ್ಕಳಿಗೆ ಶ್ರೀಶೈಲ ಪೀಠದ ಜಗದ್ಗುರುಗಳು ಆಶೀರ್ವದಿಸಿ ಮಾತನಾಡಿದ ಅವರು, ಶೋಡಶೋಪಚಾರ ಮಂತ್ರ ಮತ್ತು ರುಧ್ರ ನಾಮಕ ಅಧ್ಯಾಯಗಳನ್ನು ಶುದ್ಧವಾಗಿ ಸ್ಪಷ್ಟವಾಗಿ ಹೇಳುವುದನ್ನು ಕೇಳಿ ಸಂತೋಷ ಪಟ್ಟರು. ಇನ್ನೂ ೧೫ದಿನಗಳ ಸಮಯದಲ್ಲಿ ಚಮಕ್ ಅಧ್ಯಾಯ, ಪುರುಷಸೂಕ್ತ, ಅಂತ್ಯ ಸಂಸ್ಕಾರದ ವಿಧಿ ವಿಧಾನಕ್ಕೆ ಬೇಕಾಗುವ ಮಂತ್ರ, ವರದಾಶಂಕರ ವೃತದ ಪೂಜಾ ಕ್ರಮ ಹಾಗೂ ಊಟದ ಮಂತ್ರ ಸೇರಿದಂತೆ ಅನೇಕ ವಿಚಾರಗಳನ್ನು ಮಕ್ಕಳಿಗೆ ಕಲಿಸಿ ಎಂದು ಸಲಹೆ ನೀಡಿದರು.ಈ ವೇಳೆ ಜಗದ್ಗುರುಗಳಿಗೆ ಮಕ್ಕಳು ಗುರು ಕಾಣಿಕೆ ಸಮರ್ಪಿಸಿ ಆಶೀರ್ವಾದ ಪಡದುಕೊಂಡರು. ಬಳಿಕ ಶಿಬಿರದ ಮಕ್ಕಳಿಗೆ ಮೃತ್ಯುಂಜಯ ಕತ್ತಿ ಅವರ ಮಗಳು ಪೂರ್ವಿ ಕತ್ತಿ ಸ್ವಯಂ ರಕ್ಷಣೆಗಾಗಿ ಕರಾಟೆ…
ಸಿಂದಗಿ: ಶಿಕ್ಷಣದಿಂದ ಮಾತ್ರ ಈ ದೇಶ ಬಲಿಷ್ಠವಾಗಲಿದೆ. ಯೋಗ್ಯ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಬದುಕನ್ನೇ ಉತ್ತಮವಾಗಿ ರೂಪಿಸಬಲ್ಲದು ಎಂದು ಶ್ರೀಶೈಲ ಪೀಠದ ಪರಮ ಪೂಜ್ಯ ಜಗದ್ಗುರು ಡಾ.ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.ತಾಲೂಕಿನ ಕನ್ನೋಳ್ಳಿ ಹಿರೇಮಠದ ಶ್ರೀಜಗದುರು ದಾರುಕಾಚಾರ್ಯರ ಜಾತ್ರಾ ಮಹೋತ್ಸವ ಮತ್ತು ಲಿಂ.ಶ್ರೀ ಮರುಳಾರಾಧ್ಯ ಶಿವಾಚಾರ್ಯರ ೧೧೦ ನೇ ಜಯಂತ್ಯುತ್ಸವದ ನಿಮಿತ್ಯ ಶ್ರೀ ಸಿದ್ದಲಿಂಗೇಶ್ವರ ಜ್ಞಾನಜ್ಯೋತಿ ವಿದ್ಯಾಪ್ರಸಾರ ಸಂಘದ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮಾತೋಶ್ರೀ ಬಸಲಿಂಗಮ್ಮ ಭಾಳಪ್ಪ ಭೂಸನೂರ ಕಲಾ, ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವನನ್ನು ಮಹಾದೇವನನ್ನಾಗಿ ಪರಿವರ್ತಿಸುವ ಮಹಾಶಕ್ತಿ ಶಿಕ್ಷಣಕ್ಕೆ ಇದೆ. ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿದ್ದಲ್ಲಿ ಭಾರತ ಜಗತ್ತಿಗೆ ದೊಡ್ಡ ಶಕ್ತಿಯಾಗಿ ಹೊರ ಹೊಮ್ಮಲಿದೆ ಎಂದ ಅವರು ಲಿಂ.ಮರುಳಾರಾಧ್ಯ ಶಿವಾಚಾರ್ಯರು ಸದಾ ಭಕ್ತರ ಕಲ್ಯಾಣವನ್ನು ಬಯಸಿ ಅವರ ಮುಖದಲ್ಲಿಯೇ ಪರಮಾತ್ಮನನ್ನು ಕಂಡಂತವರು. ಧಾರ್ಮಿಕ ಸಂಸ್ಕಾರ, ಸಾಮಾಜಿಕ ಪ್ರಜ್ಞೆಯನ್ನು ಭಕ್ತರಲ್ಲಿ ಮೂಡಿಸಿ ಜನಮಾನಸದಲ್ಲಿ ಚಿರಸ್ಥಾಯಿಯಾದವರು ಎಂದರು.ಈ ವೇಳೆ…
“ಜಯ್ ನುಡಿ” (ವ್ಯಕ್ತಿತ್ವ ವಿಕಸನ ಲೇಖನ)ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ‘ತಿರುಕನ ಕನಸು’ ಕವಿತೆ ಕೇಳದವರು ತುಂಬ ಕಡಿಮೆ. ನನಸಾಗದ ಕನಸಿನ ಕುರಿತು ಮಾತನಾಡುವಾಗೊಮ್ಮೆ ನಿನ್ನದು ತಿರುಕನ ಕನಸಾಯಿತೆಂದು ಉದ್ಗರಿಸುವುದುಂಟು.ಆ ಕವಿತೆ ಎಷ್ಟು ಸಲ ಕೇಳಿದರೂ ಮತ್ತೆ ಮತ್ತೆ ಕೇಳಬೇಕೆನ್ನುವಂತಿದೆ ಅನ್ನುವವರೂ ಉಂಟು. ಆ ಕವಿತೆಯಲ್ಲಿ ಏನಾಗುತ್ತದೆ ಅಂತ ನೋಡೋಣ ಬನ್ನಿ. ಮುಪ್ಪಿನ ಷಡಕ್ಷರಿ ಕವಿಯ ’ತಿರುಕನ ಕನಸು’ ಕವಿತೆಯಲ್ಲಿ ಭಿಕ್ಷುಕನೊಬ್ಬನು ಮುರುಕು ಛತ್ರದಲ್ಲಿ ಮಲಗಿರುವಾಗ ಕನಸೊಂದನ್ನು ಕಾಣುತ್ತಾನೆ. ಕನಸಿನಲ್ಲಿ ಆಕಸ್ಮಿಕವಾಗಿ ಅರಸನಾಗುತ್ತಾನೆ. ಸಕಲ ಭೋಗ ಭಾಗ್ಯಗಳೊಂದಿಗೆ ರಾಜ್ಯವನ್ನಾಳುತ್ತಾನೆ. ಒಮ್ಮೆ ಸೇವಕರು ಅವಿಧೇಯರಾಗಿ ನಡೆದುಕೊಂಡರೆಂದು ಕಾಲಿನಿಂದ ಜಾಡಿಸಿ ಒದೆಯುತ್ತಾನೆ. ಆಗ ಅವನ ಕಾಲ ಬಳಿ ಇದ್ದ ಮಡಿಕೆ ಉರುಳಿ ಒಡೆದು ಹೋಗುತ್ತದೆ. ತಿರುಪೆ ಎತ್ತಿ ತಂದಿದ್ದ ಹಿಟ್ಟೂ ಸಹ ಚೆಲ್ಲಿ ಹೋಗುತ್ತದೆ. ಕೊನೆಯಲ್ಲಿ ಅರಮನೆಗೆ ವೈರಿಗಳು ಮುತ್ತಿದಂತಾಗಿ ಎಚ್ಚರವಾಗುತ್ತದೆ. ತಾನು ಅದುವರೆಗೂ ಕಂಡದ್ದು ಕನಸು ಎಂದು ಅವನಿಗೆ ಅರ್ಥವಾಗುತ್ತದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ತಿರುಕನ ಕನಸು ಅಲ್ಲಿದ್ದ ವೈಭೋಗಗಳೆಲ್ಲವೂ ಸುಳ್ಳೇ ಆಗಿದ್ದರೂ ಕನಸಿನ…
“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ, ಮುಂಡರಗಿ-ಗದಗ ಗ್ರಾಮೀಣ ಜನರ ಬದುಕಿನ ಬವಣೆಗಳನ್ನು ನೀಗಿಸುವ, ಅವರಿಗೆ ಸ್ಥಳೀಯವಾಗಿ ಆಡಳಿತ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಯಾಗಿರುವ ಸ್ಥಳೀಯ ಆಡಳಿತಾತ್ಮಕ ವ್ಯವಸ್ಥೆಯನ್ನೇ ಪಂಚಾಯತ್ ರಾಜ್ ಎಂದು ಕರೆಯುವುದು. ಇದನ್ನು ಮುಖ್ಯವಾಗಿ ಮೂರು ವಲಯಗಳಲ್ಲಿ ಗುರುತಿಸಲಾಗಿದ್ದು ಗ್ರಾಮ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕುಗಳ ವ್ಯಾಪ್ತಿಯಲ್ಲಿ ತಾಲೂಕು ಪಂಚಾಯಿತಿ ಮತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯಿತಿ/ ಪರಿಷತ್ ಎಂದು ಗುರುತಿಸಲಾಗಿದೆ.20 ಲಕ್ಷಕ್ಕಿಂತಲೂ ಕಡಿಮೆ ಮತದಾರರನ್ನು ಹೊಂದಿರುವ ಭಾಗದಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇವಲ ಎರಡು ರೀತಿಯ ಪಂಚಾಯತ್ ವ್ಯವಸ್ಥೆಗಳು ಇದ್ದು ಆಡಳಿತ ನಡೆಸಲು ಅನುಕೂಲ ಕಲ್ಪಿಸಲಾಗಿದೆ.ಎಲ್ಲಾ 3 ಪಂಚಾಯಿತಿ ವ್ಯಾಪ್ತಿಗಳಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಚುನಾವಣೆಗಳು ಜರುಗುತ್ತವೆ. ಆಯಾ ಪಂಚಾಯಿತಿಗಳ ವ್ಯಾಪ್ತಿಗಳಲ್ಲಿ ಇರುವ ಜನರು ಮತದಾನದ ಹಕ್ಕನ್ನು ಹೊಂದಿರುತ್ತಾರೆ. ಈ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸದಸ್ಯರು ಕಡ್ಡಾಯವಾಗಿ ಇರಲೇಬೇಕು. ಇದರ ಜೊತೆಗೆ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧ್ಯಕ್ಷರು ಮತ್ತು ಮಹಿಳಾ ಸದಸ್ಯರು ಮೂರನೇ ಒಂದು…
ವಿಜಯಪುರ: ಬೆಂಗಳೂರಿನ ಬಸವಾನುಯಾಯಿ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರ್ ಬಸನಗೌಡ ಬಿ. ಪಾಟೀಲ(63) ಅಣ್ಣ ಬಸವಣ್ಣನವರ ತತ್ವಗಳ ಪ್ರಸಾರಕ್ಕಾಗಿ ಕಳೆದ 12 ವರ್ಷಗಳಿಂದ ಬಸವಜ್ಯೋತಿ ಯಾತ್ರೆ ನಡೆಸುತ್ತಿದ್ದು, ಈಗ ಮತ್ತೆ ಬಸವನ ಬಾಗೇವಾಡಿಯಿಂದ ವಿಜಯಪುರವರೆಗೆ ಓಡಿಕೊಂಡು ಬಸವಜ್ಯೋತಿ ತರಲಿದ್ದಾರೆ.ವಿಜಯಪುರ ಜಿಲ್ಲೆ ಹಂದಿಗನೂರ ಗ್ರಾಮದವರಾಗಿರುವ ಬಸನಗೌಡ ಬಿ. ಪಾಟೀಲ ಮೇ 9 ರಂದು ಗುರುವಾರ ಮಧ್ಯರಾತ್ರಿ 12 ಗಂಟೆಗೆ ಅಣ್ಣ ಬಸವಣ್ಣನವರ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಹೊರಡಲಿರುವ ಇವರು, ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ವಿಜಯಪುರ ನಗರದಲ್ಲಿರುವ ಬಸವೇಶ್ವರ ಸರ್ಕಲ್ ತಲುಪಲಿದ್ದಾರೆ. ಬಸನಗೌಡ ಬಿ. ಪಾಟೀಲ ಜೊತೆಗೆ ಈ ಬಾರಿ ಮ್ಯಾರಾಥಾನ್ ನಲ್ಲಿ ಹೆಸರು ಮಾಡಿರುವ ಅಲ್ಟ್ರಾ ರನ್ನರ್ ಜಗದೀಶ ದಮಾನಿಯಾ(63), ಡಾ. ಚಂದ್ರಶೇಖರ ಚಿಮಕೋಡೆ, ಮಲ್ಲಿಕಾರ್ಜುನ ಅವಂತಿ ಹಾಗೂ ಡಾ. ಅಭಿನಂದ ಬೆಡಗೆ ಕೂಡ ಪಾಲ್ಗೋಳ್ಳುತ್ತಿದ್ದಾರೆ. ಇವರು ಮಸ್ಸೂರಿಯಿಂದ ಯಮನೌತ್ರಿವರೆಗೆ ಕಳೆದ ಆರು ವರ್ಷಗಳಿಂದ ಪಾಲ್ಗೋಳ್ಳುತ್ತಿದ್ದಾರೆ. ಅಲ್ಲದೇ, ಬೆಂಗಳೂರಿನಿಂದ ಚೆನೈವರೆಗೆ 340 ಕಿ. ಮೀ. ನ್ನು ಏಳು ದಿನಗಳಲ್ಲಿ ಓಡುವ ಮೂಲಕ ಗಮನಾರ್ಹ…
ಸಚಿವ ಎಂ.ಬಿ.ಪಾಟೀಲರ ಜೊತೆ ಊಟ | ಮನೆಯವರ ಜೊತೆ ಮಾತು | ದೇಗುಲಗಳ ದರ್ಶನ ವಿಜಯಪುರ: ಜೋರಾದ ಮಳೆ ಬಂದು ಈ ಬಿರು ಬೇಸಿಗೆಯಲ್ಲಿ ಒತ್ತಡದ ಸೆಖೆ ತಂದಂತೆ ಮಂಗಳವಾರ ಲೋಕಸಭೆ ಚುನಾವಣೆ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು ಬಂತು.ಚುನಾವಣೆ ಘೋಷಣೆಗೂ ಮುನ್ನವೇ ಕಳೆದ ನಾಲ್ಕು ತಿಂಗಳಿಂದಲೇ ಪ್ರೊ.ರಾಜು ಆಲಗೂರರು ಕಾಲಿಗೆ ಚಕ್ರ ಕಟ್ಟಿದ್ದರು. ನೂರಾ ಇಪ್ಪತ್ತು ದಿನಗಳಿಂದ ಕ್ಷೇತ್ರದ ಊರುಗಳನ್ನು ಸುತ್ತಲು ಆರಂಭಿಸಿದ್ದರು. ಯಾಕೆಂದರೆ ಅವರಿಗೆ ಗೊತ್ತಿತ್ತು, ಈ ಸಲ ಟಿಕೆಟ್ ತಮಗೇ ಎಂದು! ಅಂದುಕೊಂಡಂತೆ ಮೊದಲ ಪಟ್ಟಿಯಲ್ಲಿಯೇ ವಿಜಯಪುರದಿಂದ ಇವರಿಗೆ ಟಿಕೆಟ್ ಘೋಷಣೆಯಾಯಿತು. ಅದೂ ಜಿಲ್ಲೆಯಿಂದ ರಾಜ್ಯದಲ್ಲೇ ದಾಖಲೆ ಎನ್ನುವಂತೆ ಇವರೊಬ್ವರದೇ ಹೆಸರು ಪಕ್ಷದ ಹೈಕಮಾಂಡ್ ಅಂಗಳ ತಲುಪಿತ್ತು. ಮುಂದೆ ಇವರು ತಿರುಗಿ ನೋಡದೇ ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡರು. ಮೊದಲ ದಿನದಿಂದ ಮತದಾನದ ಕೊನೆಯ ದಿನದವರೆಗೂ ಇವರ ವೇಗ ಎಲ್ಲೂ ಕಮ್ಮಿಯಾಗಲಿಲ್ಲ.ಕುಟುಂಬದ ಜೊತೆ ಸಮಯ..ಬೆಳಗ್ಗೆ ಬೇಗನೇ ಎದ್ದ…
ಮುದ್ದೇಬಿಹಾಳ: ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯಲಿರುವ ೩ನೇ ಹಂತದ ಮತದಾನಕ್ಕೆ ತಾಲೂಕು ಆಡಳಿತ ಸಂಪೂರ್ಣ ಸಿದ್ಧವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ರಾಜಶೇಖರ ವಿಲಿಯಮ್ಸ್ ತಿಳಿಸಿದರು.ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮತಕ್ಷೇತ್ರದಲ್ಲಿ ಒಟ್ಟು ೨೪೫ ಮತಗಟ್ಟೆಗಳಿದ್ದು ಒಟ್ಟು ೨೨೩೬೫೬ ಮತದಾರರಿದ್ದಾರೆ. ಅದರಲ್ಲಿ ೧೧೨೬೯೪ ಪುರುಷ ಮತದಾರರು, ೧೧೦೯೩೭ ಮಹಿಳಾ ಮತದಾರರು ಸೇರಿದಂತೆ ಇತರೆ ೨೫ ಮತದಾರರಿದ್ದಾರೆ. ೧೨೩ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಮತಗಟ್ಟೆಗಳಲ್ಲಿ ಮೈಕ್ರೋ ಆಬ್ಸರ್ವರ್ ನೇಮಕ ಮಾಡಲಾಗಿದೆ. ಮತಕ್ಷೇತ್ರದಲ್ಲಿ ೩ ಸೂಕ್ಷ್ಮ ಮತಗಟ್ಟೆಗಳು, ೨ಅತೀ ಸೂಕ್ಷö್ಮ ಮತಗಟ್ಟೆಗಳನ್ನಾಗಿ ಗುರುತಿಸಲಾಗಿದೆ. ಮತಗಟ್ಟೆಗಳಿಗೆ ಚುನಾವಣಾ ನಿಯೋಜಿತ ಸಿಬ್ಬಂದಿಗಳು ತೆರಳಲು ೨೯ ಕೆಎಸ್ಆರ್ಟಿಸಿ ಬಸ್ ಹಾಗೂ ೨೨ ಕ್ರೂಜರಗಳ ವ್ಯವಸ್ಥೆ ಮಾಡಲಾಗಿದೆ. ಸೆಕ್ಟರ್ ಅಧಿಕಾರಿಗಳಿಗೆ ೧೮ ವಾಹನ, ಪ್ಲಾಯಿಂಗ್ ಸ್ವಾಡಗಳಿಗೆ ೩ ವಾಹನ ಮತ್ತು ತುರ್ತು ಸಂದರ್ಭಕ್ಕೆ ಬಳಸಿಕೊಳ್ಳಲು ೩ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.ಮತಕ್ಷೇತ್ರದಲ್ಲಿ ಒಟ್ಟು ೫ ಪಿಂಕ್, ಸಖಿ, ಯುವ, ಅಂಗವಿಕಲ, ಧ್ಯೇಯ ಆಧಾರಿತ…
ಮುದ್ದೇಬಿಹಾಳ: ತಾಲೂಕಿನ ನಾಲತವಾಡದ ವಿರೇಶ್ವರ ವೃತ್ತದ ಬಳಿ ಲೈಸನ್ಸ್ ಇಲ್ಲದೇ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.ಯಾದಗಿರಿ ಜಿಲ್ಲೆ ಗಡಿ ಭಾಗದ ಎಣ್ಣಿವಡಗೇರಿ ಗ್ರಾಮದ ರೇವಣಸಿದ್ದಯ್ಯ ಹಿರೇಮಠ ಬಂಧಿತ ಆರೋಪಿ. ತನ್ನ ಪಾಯಿದೆಗೋಸ್ಕರ ಯಾವುದೇ ಪಾಸ್ ಪರ್ಮಿಟ ಮತ್ತು ಲೈಸನ್ಸ್ ಇಲ್ಲದೇ ಅನಧಿಕೃತವಾಗಿ ಮಧ್ಯವನ್ನು ತನ್ನ ಬಳಿ ಇಟ್ಟುಕೊಂಡು ನಾಲತವಾಡದ ವೀರೇಶ್ವರ ವೃತ್ತದ ಬಳಿ ನಿಂತು ಮಾರಾಟ ಮಾಡುತ್ತಿರುವಾಗ ಬಂಧಿಸಿ, ಅಂದಾಜು 36 ರೂಪಾಯಿಯ ಮುಖಬೆಲೆಯ ಒಟ್ಟು 90 ಟೆಟ್ರಾ ಪ್ಯಾಕೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ ಷಹಜಹಾನ್ ನಾಯಕ ನೀಡಿದ ದೂರಿನ ಆಧಾರದ ಮೇಲೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
