Author: editor.udayarashmi@gmail.com

ಮುದ್ದೇಬಿಹಾಳ: ತಾಲೂಕಿನ ನಾಲತವಾಡದ ವಿರೇಶ್ವರ ವೃತ್ತದ ಬಳಿ ಲೈಸನ್ಸ್ ಇಲ್ಲದೇ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.ಯಾದಗಿರಿ ಜಿಲ್ಲೆ ಗಡಿ ಭಾಗದ ಎಣ್ಣಿವಡಗೇರಿ ಗ್ರಾಮದ ರೇವಣಸಿದ್ದಯ್ಯ ಹಿರೇಮಠ ಬಂಧಿತ ಆರೋಪಿ. ತನ್ನ ಪಾಯಿದೆಗೋಸ್ಕರ ಯಾವುದೇ ಪಾಸ್ ಪರ್ಮಿಟ ಮತ್ತು ಲೈಸನ್ಸ್ ಇಲ್ಲದೇ ಅನಧಿಕೃತವಾಗಿ ಮಧ್ಯವನ್ನು ತನ್ನ ಬಳಿ ಇಟ್ಟುಕೊಂಡು ನಾಲತವಾಡದ ವೀರೇಶ್ವರ ವೃತ್ತದ ಬಳಿ ನಿಂತು ಮಾರಾಟ ಮಾಡುತ್ತಿರುವಾಗ ಬಂಧಿಸಿ, ಅಂದಾಜು 36 ರೂಪಾಯಿಯ ಮುಖಬೆಲೆಯ ಒಟ್ಟು 90 ಟೆಟ್ರಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ ಷಹಜಹಾನ್ ನಾಯಕ ನೀಡಿದ ದೂರಿನ ಆಧಾರದ ಮೇಲೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ 33 ನೇ ವಾರ್ಡ್ ಭವಾನಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.ವಿಜಯಪುರ ನಗರದ ವಾರ್ಡ್ ನಂ. 33 ನೇ ವಾರ್ಡಿನ ಶಾಸ್ತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು, ವಿಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಪ್ರತಿ ಮನೆಗಳಲ್ಲಿ ಸಿಕ್ಕ ಅದ್ಬುತ…

Read More

ಇಂಡಿ: ತಾಲೂಕಾ ಆಡಳಿತ ಹಾಗೂ ತಾಲೂಕು ಸ್ವಿಪ್ ಸಮೀತಿ ತಾಲೂಕ ಪಂಚಾಯತ ಇಂಡಿ ವತಿಯಿಂದ ದಿನಾಂಕ 04/05/2024ರಂದು ಮತದಾನ ಜಾಗೃತಿ ಕುರಿತು ಎಲ್ಲಾ ಗ್ರಾಮ ಪಂಚಾಯಿತ ವ್ಹಿ.ಆರ್.ಡಬ್ಲ್ಯೂ,ಯು.ಆರ್.ಡಬ್ಲ್ಯೂ.ಎಮ್.ಆರ್.ಡಬ್ಲ್ಯೂ ಹಾಗೂ ತಾಲೂಕ ವಿವಿಧ ವಿಕಲಚೇತನರ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ 80 ಕ್ಕಿಂತ ಹೆಚ್ಚು ವಿಕಲಚೇತನರ ಇಂಧನ ಚಾಲಿತ ತ್ರಿ ಚಕ್ರ ವಾಹನಗಳ ಬೈಕ್ ಜಾಥಾವನ್ನು ಇಂಡಿ ತಾಲ್ಲೂಕಿನ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳರವರು ಹಸಿರು ನಿಶಾನೆ ತೋರಿಸುವ ಮುಖಾಂತರ ಚಾಲನೆ ನೀಡಿದರು.ಚಾಲನೆಯನ್ನು ನೀಡಿ ಮಾತನಾಡಿದ ಅವರು. 2024ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯನ್ನು ಮೇ 07ರಂದು ನಡೆಯಲಿದ್ದು ಅಂದು ತಮ್ಮ ಕುಟುಂಬದ ಸಮ್ಮೆತರಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವುದರ ಮೂಲಕ ದೇಶ ಕಟ್ಟುವುದು ಅವಶ್ಯವಿದೆ, ಮತಗಟ್ಟೆಗಳಲ್ಲಿ ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಸ್ವಿಪ್ ಸಮೀತಿಯ ಅಧ್ಯಕ್ಷ ನೀಲಗಂಗಾ ಬಬಲಾದ ಮೇಡಂ ಮಾತನಾಡಿ ಸಾರ್ವತ್ರಿಕ ಲೋಕಸಭಾ ಚುನಾವಣೆ…

Read More

ವಿಜಯಪುರ: ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧವನ್ನು ಶನಿವಾರ ಹಿಂಪಡೆದಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರ ಪಾಲಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ವರದಾನವಾಗಿದ್ದು, ರೈತರ ಮೊಗದಲ್ಲಿ ಹರ್ಷವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹಾಗೂ ಬಿಜೆಪಿ ಮುಖಂಡ ಟಿ.ಟಿ.ಹಗೇದಾಳ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಈರುಳ್ಳಿ ರಫ್ತಿಗೆ ಹೇರಿದ್ದ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್‌ ಪಡೆಯಲಾಗಿದೆ. ಈರುಳ್ಳಿ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಬಹುದು. ಆದರೆ, ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಪಕ್ಕದ ಮಹಾರಾಷ್ಟ್ರದ ಬಿಟ್ಟರೆ ಕರ್ನಾಟಕದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಭಾಗದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಗಾರರಿದ್ದಾರೆ. ಎಲ್ಲರಿಗೂ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬಹಳ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

Read More

ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಸೌಕರ್ಯಗಳು ಚಡಚಣ: ಮೇ.೦೭ ರ ಮಂಗಳವಾರದಂದು ನಡೆಯಲಿರುವ ೨೦೨೪ ನೇ ಸಾಲಿನ ಲೋಕಸಭಾ ಕ್ಷೇತ್ರದ ಸದಸ್ಯರ ಚುನಾವಣೆಯ ಮುನ್ನಾ ದಿನವಾದ ಸೋಮವಾರದಂದು ಸಾಯಂಕಾಲ ೦೫ ಗಂಟೆಗೆ ರೇವತಗಾಂವ ಗ್ರಾಮದ ನಾಲ್ಕು ಮತಗಟ್ಟೆಗಳಿಗೆ ನೇಮಗೊಂಡ ಸಿಬ್ಬಂದಿ ಮತದಾನಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ತೆಗೆದುಕೊಂಡು ಆಗಮಿಸಿದರು.ವಿಶೇಷ ಮೆಡಿಕಲ್ ಕಿಟ್: ಬಿಸಿಲಿನ ತಾಪಮಾನ ಹಾಗೂ ಶಾಖಾಘಾತದ ಹಿನ್ನಲೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮೆಡಿಕಲ್ ಕಿಟ್, ಓಆರ್‌ಎಸ್ ಕಿಟ್‌ಗಳನ್ನು ಮಸ್ಟರಿಂಗ್ ಸಂದರ್ಭದಲ್ಲಿಯೇ ಒದಗಿಸಲಾಗಿದೆ.ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲ ಮತಗಟ್ಟೆಗಳಿಗೆ ಅವಶ್ಯಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ, ಅಂಗವಿಕಲರಿಗೆ ರ‍್ಯಾಂಪ್, ವೀಲ್‌ಚೇರ್ ವ್ಯವಸ್ಥೆ ಮಾಡಿದೆ. ತೀವ್ರ ಬಿಸಿಲಿನ ಬೇಗೆ ಇರುವುದರಿಂದ ಫ್ಯಾನ್ ವ್ಯವಸ್ಥೆಯನ್ನು ಗ್ರಾಮ ಪಂಚಾಯತ್ ಅಧಿಕಾರಿಗಳು ಮಾಡಿದ್ದಾರೆ.ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಕೆಲವು ನಿಯಮಗಳನ್ನು ತಿಳಿಸಲು ಬಿತ್ತಿ ಪತ್ರಗಳನ್ನು ಅಂಟಿಸಲಾಗಿದೆ. ಅದರಲ್ಲಿ ವಿವಿ ಪ್ಯಾಟ್ ಮಶಿನ್ ಮೂಲಕ ಮತಚಲಾಯಿಸಿದ ಮೇಲೆ…

Read More

ಕೊಲ್ಹಾರ: ತಾಲೂಕ ಸ್ವೀಪ್ ಸಮಿತಿ, ತಾಲೂಕ ಪಂಚಾಯತ್ ಹಾಗೂ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸುಭದ್ರ ದೇಶ ನಿರ್ಮಾಣಕ್ಕೆ ಎಲ್ಲ ನಾಗರಿಕರು ಕಡ್ಡಾಯವಾಗಿ ಮಂಗಳವಾರ ನಡೆಯುವ ಮತದಾನದಲ್ಲಿ ತಪ್ಪದೇ ಮತ ಚಲಾಯಿಸಿ ಲೋಕಸಭೆ ಚುನಾವಣೆಯನ್ನು ಯಶಸ್ವಿಗೊಳಿಸಿಬೇಕೆಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿರವರು ಮನವಿ ಮಾಡಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಲೋಕಸಭಾ ಚುನಾವಣೆ ೨೦೨೪ ರ ಹಿನ್ನಲೆಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಯಾಣಿಕರೊಂದಿಗೆ ಮಾಹಿತಿ ವಿನಿಮಯ ನೀಡಿ, ಚುನಾವಣಾ ಆಯೋಗ ಗುರುತು ಮಾಡಿರುವ ದಾಖಲೆಗಳೊಂದಿಗೆ ತಪ್ಪದೇ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಹಿರಿಯಯರು, ವಿಶೇಷ ಚೇತನರಿಗೆ ಪ್ರಥಮ ಆದ್ಯತೆ ನೀಡಿ, ನಾಗರಿಕರು ಶಾಂತಿಯುತವಾಗಿ ಸಹಕರಿಸಿ ತಾಲೂಕಿನಲ್ಲಿ ೧೦೦ ರಷ್ಟು ಮತದಾನ ಆಗುವಂತೆ ತಾವೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.ಈ ಸಮಯದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಕಿರ್ತಿ ರವರು ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಕುರಿತ ಪೋಸ್ಟರ್ಗಳನ್ನು ಗೋಡೆಗಳ ಮೇಲೆ…

Read More

ಮುದ್ದೇಬಿಹಾಳ: ಲೋಕಸಭಾ ಚುನಾವಣೆ ೨೦೨೪ ರ ಕರ್ತವ್ಯದಲ್ಲಿ ಭಾಗಿಯಾಗಿರುವ ಪೊಲೀಸ್, ಪ್ಯಾರಾ ಮಿಲಿಟರಿ ಮತ್ತು ಸಶಸ್ತ್ರ ಸೀಮಾ ಬಲ ಯೋಧರಿಗೆ ರವಿವಾರ ಜ್ಞಾನಭಾರತಿ ಶಾಲೆ ಪಕ್ಕದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಮಲೇರಿಯಾ ಹಾಗೂ ಪೈಲೇರಿಯಾ ರೋಗಗಳ ತಪಾಸಣೆ ನಡೆಸಲಾಯಿತು.ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ (ಡಿವಿಬಿಡಿಸಿಪಿ) ಅಡಿ ತಾಲೂಕು ಆರೋಗ್ಯ ಇಲಾಖೆಯಿಂದ ನಡೆದ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ಆರ್‌ಡಿಟಿ ಕಿಟ್ ಹಾಗೂ ರಕ್ತ ಲೇಪನ ತಗೆದು ರಕ್ತ ಪರೀಕ್ಷೆ ನಡೆಸಿ ಮುಂಜಾಗ್ರತೆಯಾಗಿ ಮಲೇರಿಯಾ ಮತ್ತು ಪೈಲೇರಿಯಾ ರಕ್ತ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಲಾಯಿತು.ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಛಲವಾದಿ ಮಾತನಾಡಿ ಭಾರತದೇಶವನ್ನು ೨೦೨೫ರ ವೇಳೆಗೆ ಮಲೇರಿಯಾ ಮುಕ್ತ ಮಾಡುವ ಗುರಿ ಹೊಂದಲಾಗಿದೆ ಹಾಗೂ ೨೦೨೭ರ ವೇಳೆಗೆ ಆನೆಕಾಲು / ಫೈಲೇರಿಯಾ ಗುರಿ ಸಾಧನೆಯ ಉದ್ದೇಶವನ್ನು ಹೊಂದಿದೆ. ಅನೇಕ ಮೈಲುಗಲ್ಲುಗಳನ್ನು ಈಗಾಗಲೇ ಕ್ರಮಿಸಲಾಗಿದ್ದು ಜಿಲ್ಲೆಯಾದ್ಯಂತ ಮಲೇರಿಯಾ ಮುಂಜಾಗ್ರತಾ ನಿಯಂತ್ರಣಕ್ಕೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೊರರಾಜ್ಯದಿಂದ ಇಲ್ಲಿಗೆ ಚುನಾವಣಾ ಭದ್ರತೆಗಾಗಿ ಆಗಮಿಸಿರುವ ಯೋಧರಿಗೂ…

Read More

ದೇವರಹಿಪ್ಪರಗಿ: ಪಶುಆಸ್ಪತ್ರೆಯ ವೈದ್ಯರು ನಿಗದಿತ ಸಮಯಕ್ಕೆ ಬಂದು ಚಿಕಿತ್ಸೆ ನೀಡದ ಪರಿಣಾಮ ಎಮ್ಮೆ ಸಾವಿಗೀಡಾಗಿದೆ ಎಂದು ಆರೋಪಿಸಿ ರೈತರು ಎಮ್ಮೆಯ ಕಳೇಬರದೊಂದಿಗೆ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಕೈಗೊಂಡರು.ಪಟ್ಟಣದಲ್ಲಿ ಸೋಮವಾರ ಈ ಘಟನೆ ಜರುಗಿದ್ದು, ಈ ಕುರಿತು ರೈತ ಹಾಗೂ ಎಮ್ಮೆಯ ಮಾಲೀಕ ಅಜೀಜ್ ಯಲಗಾರ ಮಾತನಾಡಿ, ಎಮ್ಮೆ ಕಳೆದ ೫ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಕಾರಣ ದಿ;೨ ರಂದು ಆಸ್ಪತ್ರೆಗೆ ತೆರಳಿ ಎಮ್ಮೆಗೆ ಚಿಕಿತ್ಸೆ ನೀಡುವಂತೆ ಕೇಳಿಕೊಂಡಿದ್ದೇ ಆದರೆ ವೈದ್ಯರು ಅನಗತ್ಯ ಕಾರಣ ನೀಡಿ ಚಿಕಿತ್ಸೆ ನೀಡದೇ ಇದ್ದ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ಎಮ್ಮೆ ಹೆಚ್ಚು ಜ್ವರದಿಂದ ಬಳಲಿ ಸಾವಿಗೀಡಾಯಿತು. ವೈದ್ಯರು ಸ್ವಲ್ಪವೇ ಮಾನವೀಯತೆ ಮೆರೆದಿದ್ದರೇ ನನ್ನ ಲಕ್ಷ ರೂ. ಬೆಲೆ ಬಾಳುವ ಎಮ್ಮೆ ಬದುಕುತ್ತಿತ್ತು. ಆದರೆ ಅವರ ಬೇಜವಾಬ್ದಾರಿ ವರ್ತನೆ ಹಾಗೂ ನಡುವಳಿಕೆ ಇಂದು ಮೂಕ ಪ್ರಾಣಿಯ ಸಾವಿಗೆ ಕಾರಣವಾಗಿದೆ. ವೈದ್ಯರ ಈ ತೆರನಾದ ವರ್ತನೆ ಇದೇ ಮೊದಲಲ್ಲ. ಇಲ್ಲಿನ ಅನೀಲ ಕಕ್ಕಳಮೇಲಿ ಹಾಗೂ ಚಿಕ್ಕರೂಗಿ ಪಶುಆಸ್ಪತ್ರೆಯ ನಾಗೇಂದ್ರ ಹರಸೂರ…

Read More

ದೇವರಹಿಪ್ಪರಗಿ: ಲೋಕಸಭಾ ಚುನಾವಣಾ ಅಂಗವಾಗಿ ಚುನಾವಣಾ ಸಾಮಗ್ರಿಗಳನ್ನು ಪಡೆದ ಸಿಬ್ಬಂದಿ ನಿಗದಿ ಪಡಿಸಿದ ಗ್ರಾಮಗಳ ಮತಗಟ್ಟೆಗಳಿಗೆ ತೆರಳುವ ಮುನ್ನ ಪರಿಶೀಲನೆ ನಡೆಸಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕೆ ಕಾಲೇಜು ಆವರಣದಲ್ಲಿ ಸೋಮವಾರ ಸೇರಿದ ೨೩ ಸೆಕ್ಟರ್‌ಗಳ ೨೫೨ ಮತಗಟ್ಟೆಗಳ ಚುನಾವಣಾ ಸಿಬ್ಬಂದಿ ತಮಗೆ ನಿಗದಿಪಡಿಸಿದ ಮತಗಟ್ಟೆಗಳ ಮಾಹಿತಿ ಹಾಗೂ ಸಾಮಗ್ರಿಗಳನ್ನು ಪಡೆದು ಪರಿಶೀಲನೆ ನಡೆಸಿದರು. ನಂತರ ಊಟ ಸೇವಿಸಿ ನಿಗದಿತ ಸಮಯಕ್ಕೆ ಬಸ್ ಹಾಗೂ ಕ್ರೂಸರ್‌ಗಳಲ್ಲಿ ಪ್ರಯಾಣ ಬೆಳೆಸಿದರು.ದೇವರಹಿಪ್ಪರಗಿ ಮತಕ್ಷೇತ್ರದ ಕುರಿತಾಗಿ ತಹಶೀಲ್ದಾರ ಪ್ರಕಾಶ ಸಿಂದಗಿ ಮಾಹಿತಿ ನೀಡಿ ಒಟ್ಟು ೨೫೨ ಮತಗಟ್ಟೆಗಳಲ್ಲಿ ೦೫ಪಿಂಕ್‌ಮತಗಟ್ಟೆ, ೦೧ ಯುವಸಮೂಹ, ೦೧ ವಿಕಲಹೀನತೆಯ ವಿಶೇಷ ಮತಗಟ್ಟೆಗಳಿವೆ. ಕ್ಷೇತ್ರದಲ್ಲಿ ೧೧೩೬೫೦ ಪುರುಷರು, ೧೦೯೭೩೬ ಮಹಿಳೆಯರು ಸೇರಿದಂತೆ ೨೨೩೪೦೭ ಮತದಾರರಿದ್ದಾರೆ. ಇವರ ಮತದಾನದ ಕಾರ್ಯಕ್ಕೆ ೨೫೨ ಪಿಆರ್‌ಓ, ೨೫೨ಎಪಿಆರ್‌ಓ ೨೫೨ಪಿಓ, ೨೫೨ಪಿಓ೨ ಹಾಗೂ ಮೀಸಲು ಸಿಬ್ಬಂದಿ ಸೇರಿದಂತೆ ಒಟ್ಟು ೧೨೨೪ ಸಿಬ್ಬಂದಿಗಳು. ೨೩ ಸೆಕ್ಟರ್ ಅಧಿಕಾರಿಗಳು, ೨೩ ಮಾಸ್ಟರ್ ಟ್ರೇನರ್‌ಗಳು, ೧೫ ಮೈಕ್ರೋ ಆಬ್ರ‍್ವರ್, ೪೦೦ ಪೊಲೀಸ್ ಸಿಬ್ಬಂದಿ…

Read More

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೭೫ ನೇ ಯಾತ್ರಾ ಮಹೋತ್ಸವ, ತಪೋಭೂಷಣ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವದಂಗವಾಗಿ ಸೋಮವಾರ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶಿವಧೀಕ್ಷಾ ಕಾರ್ಯಕ್ರಮ ನೆರವೇರಿತು.

Read More