Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಣಗಿ ಗ್ರಾಮದ ವಿಜಯಕುಮಾರ ಶರಣಪ್ಪ ಗುಗ್ಗರಿ ಅವರ ಮಾಲೀಕತ್ವದ ರಿಸನಂ ೧೯೧/೧ ಕ್ಷೇತ್ರ ೫ ಎಕರೆ ಪೈಕಿ ೧ -೫ ವಿಸ್ತೀರ್ಣದ ಜಮೀನಿನಲ್ಲಿ ಸಿಡಿಮದ್ದು ಮಾರಾಟ ಮತ್ತು ಸಂಗ್ರಹಣೆ ಗೋದಾಮು ನಿರ್ಮಾಣ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಈ ಕುರಿತಾದ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ ೩೦ ದಿನಗಳೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.ವಿಶ್ವ ವಿಕಲಚೇತನರ ದಿನಾಚರಣೆ-೨೦೨೫ರ ಕಾರ್ಯಕ್ರಮದಲ್ಲಿ ತಾಲೂಕಿಗೊಬ್ಬರಂತೆ ವಿಕಲಚೇತನ ಸಾಧಕರಿಗೆ ಸನ್ಮಾನಿಸಲಾಗುವುದು. ನವೆಂಬರ್ ೨೫ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು, ನವೆಂಬರ್ ೧೯, (ಕರ್ನಾಟಕ ವಾರ್ತೆ): ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಓಚಿegಟeಡಿiಚಿ ಜಿoತಿಟeಡಿi) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis ) ಪ್ರಕರಣಗಳು ಕಂಡುಬAದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.೧. ನೇಗ್ಲೇರಿಯಾ ಫೌಲೇರಿ (ಓಚಿegಟeಡಿiಚಿ ಜಿoತಿಟeಟಿ) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.೨. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ೩. ನೇಗ್ಲೇರಿಯಾ…
ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣರಲ್ಲಿ ಸುರಕ್ಷಿತ ನೈರ್ಮಲ್ಯ ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯ ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ನವೆಂಬರ್ ೧೯ ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ “೧೯ನೇ ನವೆಂಬರ್ ೨೦೨೫ ರಿಂದ ೧೦ನೇ ಡಿಸೆಂಬರ್ ೨೦೨೫ರ ವರೆಗೆ ನಮ್ಮ ಶೌಚಾಲಯ – ನಮ್ಮ ಭವಿಷ್ಯ ಎಂಬ ಶಿರೋನಾಮೆಯಡಿ ವಿಶೇಷ ಅಭಿಯಾನವನ್ನು ಆಯೋಜಿಸಲು ನಿರ್ದೇಶನ ನೀಡಿರುವ ಪ್ರಯುಕ್ತ ಈ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಿ ಎಂದು ಜಿಪಂ ಸಿಇಓ ರಿಷಿ ಆನಂದ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಅಭಿಯಾನವು ಆರೋಗ್ಯ, ಘನತೆ ಮತ್ತು ಸಾಮಾಜಿಕ ಸಮೃದ್ಧಿಗಾಗಿ ನೈರ್ಮಲ್ಯ ಮತ್ತು ಸ್ವಚ್ಛತೆಯ ಪ್ರಾಮುಖ್ಯತೆಯ ಮೇಲೆ ಮಾತ್ರವಲ್ಲದೆ, ವೈಯಕ್ತಿಕ ಮನೆ ಶೌಚಾಲಯಗಳು ಮತ್ತು ಸಮುದಾಯದ ನೈರ್ಮಲ್ಯ ಸಂಕೀರ್ಣಗಳು ಎರಡಕ್ಕೂ…
ನಾಲತವಾಡದಲ್ಲಿ ಸ್ಮಶಾನ ಅತಿಕ್ರಮಣ | ಸರ್ಕಾರಿ ಕಚೇರಿಗೆ ಬಾಡಿಗೆ | ತಹಸೀಲ್ದಾರಗೆ ದೂರು ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸ್ಮಶಾನ ಜಾಗೆಯನ್ನು ಕಾನೂನುಬಾಹಿರವಾಗಿ ನೊಂದಣಿ ಮಾಡಿ ಅಕ್ರಮ ಕಟ್ಟಡಗಳನ್ನು ಕಟ್ಟಿ, ಸಂಘ ಸಂಸ್ಥೆಗಳಿಗೆ ಮತ್ತು ಸರ್ಕಾರಿ ಕಟ್ಟಡಗಳಿಗೆ ಬಾಡಿಗೆ ನೀಡಲಾಗಿದೆ ಎಂದು ಆರೋಪಿಸಿ, ಕೂಡಲೇ ಈ ಜಾಗೆಯನ್ನು ಸರ್ವೇ ಮಾಡಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಹೋರಾಟಗಾರ ಶಿವಾನಂದ ವಾಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಬಗ್ಗೆ ಉದಯರಶ್ಮಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ತಾಲೂಕಿನ ನಾಲತವಾಡ ಪಟ್ಟಣದ ಸ.ನಂ-೬೧೫ ಈ ಆಸ್ತಿಯು ಸ್ಮಶಾನ. ಇಲ್ಲಿ ಅನೇಕರು ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಿಸಿರುತ್ತಾರೆ, ಹಾಗೂ ಕೆಲವು ಜಾಗ ಸಂಘ ಸಂಸ್ಥೆಗೆ ನೀಡಿದ್ದರು ಇನ್ನು ಕೆಲವರಲ್ಲಿ ಸರಕಾರದ ಕಟ್ಟಡಗಳಿವೆ. ಕೆಲವು ಜನ ಸ್ಮಶಾನ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿ ಅದನ್ನು ಸರ್ಕಾರಿ ಕಛೇರಿಗೆ ಬಾಡಿಗೆ ನೀಡಿರುತ್ತಾರೆ. ಸ್ಮಶಾನ ಜಾಗವನ್ನು ಯಾವದೇ ಕಾರಣಕ್ಕೂ ಮಾರಾಟ ಮಾಡಬಾರದು ಎಂದು ಕಂದಾಯ ಇಲಾಖೆಯ ನಿಯಮ ಇದ್ದರು ಕೂಡ ಸರಕಾರಿ ಜಾಗವನ್ನು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮೊಬೈಲ್ ಟವರ್ ಅಳವಡಿಕೆ ಕಾಮಗಾರಿಯನ್ನು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಇಲ್ಲಿನ ಗಣೇಶ ನಗರದ ಹುನಗುಂದ ಲೇಔಟ್ ನ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿದರು.ಇಲ್ಲಿನ ಸರ್ವೇ ನಂ ೭೮ ರಲ್ಲಿ ಹಲವು ಮನೆಗಳು ನಿರ್ಮಾಣಗೊಂಡಿದ್ದು, ಸಾಕಷ್ಟು ಕುಟುಂಬಗಳು ವಾಸವಾಗಿವೆ. ಇಲ್ಲಿ ಟವರ್ ನಿರ್ಮಿಸುವದರಿಂದ ಅಲ್ಲಿಂದ ಬಿಡುಗಡೆಯಾಗುವ ವಿಕಿರಣದಿಂದ ಬಡಾವಣೆಯಲ್ಲಿ ವಾಸವಾಗಿರುವ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುವದರಿಂದ ಈ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.ಪತ್ರಕ್ಕೆ ಎಸ್.ಎಸ್.ಚಿನಿವಾರ, ಎಂ.ಎಸ್.ಯರಗಲ್ಲ, ಕೆ.ಎಂ.ಲಮಾಣಿ, ಬಿ.ಎಂ.ಪತ್ತಾರ, ಜಿ.ಎಚ್.ಚೌವ್ಹಾಣ, ಆರ್.ಸಿ.ಹುನಗುಂದ, ಡಾ.ರಂಗನಾಥ ವೈದ್ಯ, ಶಿವಾನಂದ ಮುದ್ನಾಳ, ಟಿ.ಕೆ.ಲಮಾಣೀ. ಜಿ.ಆರ್.ಕಲಬುರ್ಗಿ ಸೇರಿದಂತೆ ಇತರರು ಸಹಿ ಹಾಕಿದ್ದಾರೆ.
ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠದ ಅಧ್ಯಕ್ಷ ಅರವಿಂದ ಕೊಪ್ಪ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೃಷಿ ಪರಿಸರದಲ್ಲಿ ಸೇರಿಸಲಾಗುತ್ತಿರುವ ಹಾನಿಕಾರಕ ರಾಸಾಯನಿಕಗಳನ್ನು ತಪ್ಪಿಸುವ ಮೂಲಕ ಆರೋಗ್ಯಕರ ಬೆಳೆಗಳನ್ನು ಬೆಳೆಯಲು ಮತ್ತು ದೀರ್ಘಕಾಲೀನ ಸುಸ್ಥಿರತೆಯನ್ನು ಉತ್ತೇಜಿಸಲು ಲಭ್ಯವಿರುವ ಪರಿಸರಾತ್ಮಕ ಪದ್ಧತಿಗಳೊಂದಿಗೆ ನಡೆಸುವ ಅನುಸಂಧಾನವೇ ಸಾವಯವ ಕೃಷಿ ಎಂದು ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠದ ಅಧ್ಯಕ್ಷ ಅರವಿಂದ ಕೊಪ್ಪ ಹೇಳಿದರು.ಪಟ್ಟಣದ ತಹಸೀಲ್ದಾರ ಕಛೇರಿ ಹಿಂಭಾಗದಲ್ಲಿರುವ ಆದಿತ್ಯ ಫ್ಲಾಜಾ ಸಭಾಂಗಣದಲ್ಲಿ ಅಮೃತ ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯಡಿ ಸ್ಥಾಪಿಸಲಾದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ, ಬಸರಕೋಡದ ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ ಹಾಗೂ ಸಾಂಗಲಿಯ ಪ್ರೋ ಅಗ್ರೋ ಬಯೋಟೆಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸಾವಯವ ಕೃಷಿ ಕಾರ್ಯಾನುಭವ ಹಾಗೂ ಒಳಸುಳಿಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ನೈಸರ್ಗಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಮಣ್ಣಿನ ಆರೋಗ್ಯ ವೃದ್ಧಿಸುವ ಜೊತೆ ಜೈವಿಕ ನಿಯಂತ್ರಕಗಳ ಮೂಲಕ ಸುಸ್ಥಿರ ಕೃಷಿಗೆ ಮುನ್ನುಡಿ ಬರೆಯಲು ಮತ್ತೆ ನಾವೆಲ್ಲ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಮಕ್ಕಳಲ್ಲಿ ಅಗಾಧವಾದ ಪ್ರತಿಭೆಗಳಿರುತ್ತವೆ. ಅವುಗಳನ್ನು ಹೆಕ್ಕಿ ತೆಗೆಯುವ ವೇದಿಕೆ ಸಿಗದ ಕಾರಣ ಹಿಂದೆ ಬಿದ್ದಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಸರಕಾರ ೨೦೦೨ರಲ್ಲಿ ಪಠ್ಯದ ಜೊತೆಗೆ ಕಲಿಕೋತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ ಹೇಳಿದರು.ಸಿಂದಗಿ ತಾಲೂಕಿನ ಯರಗಲ್ ಬಿ.ಕೆ ಗ್ರಾಮದ ಶ್ರೀ ಸಿದ್ದಶಂಕರಾನಂದ ಸ್ವಾಮೀಜಿ ಪ್ರೌಡಶಾಲೆಯಲ್ಲಿ ವಿಜಯಪುರ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವುಗಳ ಸಹಯೋಗದಲ್ಲಿ ಗಬಸಾವಳಗಿ ಕ್ಲಸ್ಟರ ಮಟ್ಟದ ಕಲಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮಗುವಿನ ಪ್ರಗತಿ ಎಲ್ಲಿ ಅಡಗಿದೆ ಎಂದರೆ ಶಾಲಾ ತರಗತಿ ಕೋಣೆಯಲ್ಲಿ ಅಡಗಿದೆ. ಬರೀ ಅಕ್ಷರ ಜ್ಞಾನ ಪಡೆಯುವುದರಿಂದ ಮಗುವಿನ ಅಭಿವೃದ್ಧಿ ಅಸಾಧ್ಯ. ಪ್ರತಿಭೆಗಳಲ್ಲಿ ಬಾಗವಹಿಸುವುದು ಅತ್ಯಗತ್ಯ. ಸೂಕ್ತ ಪ್ರತಿಭೆಗಳನ್ನು ಹೊರ ತೆಗೆಯುವುದೆ ಈ ವೇದಿಕೆಯ ಮುಖ್ಯ ಉದ್ದೇಶವಾಗಿದೆ. ಕಾರಣ ಶಿಕ್ಷಕರು ಶಿಕ್ಷಣದ ಜೊತೆಗೆ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರ ತರುವಲ್ಲಿ ಶಿಕ್ಷಕರ ಜವಾಬ್ದಾರಿ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ತೆಯ…
ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಥಮ ದರ್ಜೆ ಕಾಲೇಜಿಗೆ ಅವಶ್ಯವಿರುವ ಕಂಪೌಂಡ ನಿರ್ಮಾಣ, ಪ್ರತ್ಯೇಕವಾದ ವಿದ್ಯುತ್ ಟ್ರಾನ್ಸಫರ್ಮನ್ನು ಅಳವಡಿಸುವುದು ಹಾಗೂ ಬಳಸದೇ ಇರುವ ವಿದ್ಯಾರ್ಥಿಗಳ ವಸತಿ ನಿಲಯವನ್ನು ಶೀಘ್ರವಾಗಿ ಆರಂಭಿಸಲು ಇಲಾಖೆಯೊಂದಿಗೆ ಸಂಪರ್ಕಿಸಿ ಮುಂಬರುವ ದಿನಗಳಲ್ಲಿ ಕಾರ್ಯವನ್ನು ಮಾಡಲಾಗುವುದು ಎಂದು ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಬೇರೆ ಬೇರೆ ವಿಶ್ವವಿದ್ಯಾಲಯಗಳಿಂದ ಮತ್ತು ಕಾಲೇಜುಗಳಿಂದ ನೂರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ ವಿಚಾರ ಸಂಕೀರ್ಣ, ಒಂದು ದಿನದ ಕಾರ್ಯಗಾರಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಆಧುನಿಕ ಕಲಿಕಾ ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು. ಯುವಕರು ಈ ದೇಶದ ಆಸ್ತಿ. ಅವರಲ್ಲಿರುವ ಜ್ಞಾನದ ಸಂಪತ್ತನ್ನು ಉನ್ನತಿಕರಿಸಲು ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಶ್ರಮಿಸಬೇಕು. ವಿದ್ಯಾರ್ಥಿಗಳಲ್ಲ್ಲಿ ಕೀರ್ತಿ, ಸಂಪತ್ತು ಎಲ್ಲವೂ ದೊರೆಯುತ್ತದೆ, ವಿಧ್ಯಾರ್ಥಿಗಳಲ್ಲಿ ಇಂತಹ ಕಲಿಕಾ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿರುವ ಹೊನಲು ಬೆಳಕಿನ ಕ್ರಿಕೆಟ್ ಲೀಗ್ ಪಂದ್ಯಗಳು ಪ್ರತಿವರ್ಷದಂತೆ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ (ಪುಣ್ಯತಿಥಿ) ಅಂಗವಾಗಿ ಡಿ.೬ ಪ್ರಾರಂಭವಾಗುವುದು ಎಂದು ಎಸ್.ಪಿ.ಎಲ್. ಮುಖ್ಯ ಸಂಯೋಜಕ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಎಸ್.ಪಿ.ಎಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ಮಾಡುವುದು ಎಸ್.ಪಿ.ಎಲ್ ಸಂಯೋಜಕರು ಮಾಡಿಕೊಂಡು ಬಂದಿರುವುದು ರೂಢಿ. ಈ ಬಾರಿ ಸಿಂದಗಿ ಹೆಸರು ಮತ್ತಷ್ಟು ಪ್ರಚಲಿತಗೊಳಿಸಲು ಜಿಲ್ಲೆಯ ಪ್ರಮುಖ ಆಟಗಾರರು ಪಾಲ್ಗೊಳ್ಳಲಿರುವ ೮ ತಂಡದ ಮಾಲೀಕರು ತಮ್ಮ ತಂಡದಲ್ಲಿ ಕೂಡಿಸಿಕೊಂಡಿರುವುದು ತಾಲೂಕು ಮತ್ತು ಗ್ರಾಮೀಣ ಆಟಗಾರರಿಗೆ ವಿಶೇಷ ಅನುಭವ ದೂರಕಲಿದೆ.ಡಿ.೬ರಿಂದ ಪ್ರಾರಂಭವಾಗುವ ಹೊನಲು ಬೆಳಕಿನ ಕ್ರಿಕೇಟ್ ಲೀಗ್ ಪಂದ್ಯಕ್ಕೆ ಪ್ರಥಮ ಬಹುಮಾನ ರೂ.೨ಲಕ್ಷ ಯುವ ಉದ್ಯಮಿ ವೆಂಕಟೇಶ್ ಆರ್ ಗುತ್ತೇದಾರ, ದ್ವಿತೀಯ ಬಹುಮಾನ ರೂ.೧ಲಕ್ಷ ಬಿಜೆಪಿ ಮುಖಂಡ ರವಿ ನಾಯ್ಕೋಡಿ, ತೃತೀಯ ಬಹುಮಾನ ರೂ.೫೦ಸಾವಿರ ರೈತ ಮುಖಂಡ ಪೀರು ಕೇರೂರ ಹಾಗೂ ನಾಲ್ಕನೆಯ…
