Author: editor.udayarashmi@gmail.com

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೭೫ ನೇ ಯಾತ್ರಾ ಮಹೋತ್ಸವ, ತಪೋಭೂಷಣ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವದಂಗವಾಗಿ ಸೋಮವಾರ ಸುಭಾಸಗೌಡ ಪಾಟೀಲ, ವಿಶ್ವನಾಥಗೌಡ ಪಾಟೀಲ ಅವರಿಂದ ವೀರಶೈವ ಧರ್ಮ ಧ್ವಜಾರೋಹಣ ನೆರವೇರಿತು. ನಂತರ ಸಾಮೂಹಿಕ ಶಿವದೀಕ್ಷಾ ಕಾರ್ಯಕ್ರಮ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಇಂಗಳೇಶ್ವರದ ಬೃಂಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ನೆರವೇರಿತು.ನಂತರ ಕುಂಭಮೇಳ ಹಾಗೂ ಸಕಲ ವಾದ್ಯ ಮೇಳದೊಂದಿಗೆ ಚನ್ನಗೌಡ ಸಂಗನಗೌಡ ಪಾಟೀಲ ಅವರ ಮನೆಯಿಂದ ಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ನೂತನ ರಜತ ಮೂರ್ತಿ, ಲಿಂ.ಉಮೇಶ ಮಹಾಜನಶೆಟ್ಟಿ ಮಲಘಾಣ ಅವರ ಸೇವೆಯ ರಜತ ಕಳಸ, ಮಹಾಜನಶೆಟ್ಟಿ ಭಕ್ತರ ಸೇವೆಯೊಂದಿಗೆ ಕಳಸಾಗಮನ, ಲಿಂ. ಶಿವಯ್ಯ ಲಟಗಿ, ಸಿದ್ದಯ್ಯ ಮಠ, ಸಿದ್ದಯ್ಯ ಮಠ, ವಿವೇಕಾನಂದ ಮಠ, ಮಹಾಂತಯ್ಯ ತಂಬೂರಿಯವರ ಪೌರೋಹಿತ್ಯದಲ್ಲಿ ಗುರು ಮಹಾಂತೇಶ್ವರರ, ಗುರು ಸಂಗನಬಸವ ಶಿವಾಚಾರ್ಯರ ಕರ್ತೃ ಗದ್ದುಗೆಗಳಿಗೆ ಯರನಾಳದ ಸಂಗನಬಸಪ್ಪ ತಳೇವಾಡ ಅವರ ಕುಟುಂಬದಿಂದ,ಅನೇಕ ಭಕ್ತರ ಸೇವೆಯಿಂದ ರುದ್ರಾಭಿಷೇಕ,…

Read More

ಬಸವನಬಾಗೇವಾಡಿ: ಇಲ್ಲಿಯ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಯ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣೆಯ ಸಿಬ್ಬಂದಿಗಳ ಮಕ್ಕಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಆರೈಕೆ ಕೇಂದ್ರವನ್ನು ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಮಕ್ಕಳು ಇರದೇ ಇರುವದರಿಂದಾಗಿ ಕೇವಲ ಸಿಬ್ಬಂದಿಗಳು ಮಾತ್ರ ಕಂಡುಬಂದರು.

Read More

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಮೇ.೭ ರಂದು ನಡೆಯಲಿರುವ ವಿಜಯಪುರ ಮೀಸಲು ಲೋಕಸಭಾ ಮತಕ್ಷೇತ್ರದ ಚುನಾವಣೆಗೆ ಜಿಲ್ಲೆಯ ವಿವಿಧೆಡೆಗಳಿಂದ ನಿಯೋಜಿಸಿದ ಚುನಾವಣಾ ಸಿಬ್ಬಂದಿಗಳು ಚುನಾವಣೆ ಸಾಮಗ್ರಿಗಳನ್ನು ಪರಿಶೀಲಿಸಿದ ನಂತರ ತಮ್ಮ ನಿಗದಿ ಪಡಿಸಿದ ವಾಹನಗಳ ಮೂಲಕ ತಮ್ಮ ತಮ್ಮ ಮತಗಟ್ಟೆ ಕೇಂದ್ರಗಳಿಗೆ ತೆರಳಿದರು.ಬಸವೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಚುನಾವಣೆ ಸಿಬ್ಬಂದಿಗಳಿಗೆ ಮಾಹಿತಿ ಕೇಂದ್ರ, ಹಾಜರಾತಿ ವಿಭಾಗ, ಕಾಯ್ದಿರಿಸಿದ ಸಿಬ್ಬಂದಿಗಳಿಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಬೆಳಗ್ಗೆ ಉಪಹಾರ ವ್ಯವಸ್ಥೆ, ಮಧ್ಯಾನ್ಹದ ಊಟದ ವ್ಯವಸ್ಥೆ, ಬಿಸಿಲಿನ ಪ್ರಖರತೆ ಇರುವದರಿಂದಾಗಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ, ಊಟದಲ್ಲಿ ಮಜ್ಜಿಗೆ, ಶರಬತ್ ತಾಲೂಕಾಡಳಿತವು ವ್ಯವಸ್ಥೆ ಮಾಡಿತ್ತು.ಪ್ರತಿ ಮತಗಟ್ಟೆ ಕೇಂದ್ರಗಳಿಗೆ ನಿಯೋಜಿಸಿರುವ ಸಿಬ್ಬಂದಿ ಮಾಹಿತಿಯನ್ನು ಬೋರ್ಡ್ಗಳಿಗೆ ಹಚ್ಚಲಾಗಿತ್ತು. ಸಿಬ್ಬಂದಿಗಳು ಇದರ ಸಹಾಯದಿಂದ ತಮಗೆ ಯಾವ ಮತಗಟ್ಟೆ ಕೇಂದ್ರಕ್ಕೆ ನಿಯೋಜನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುತ್ತಿರುವುದು ಕಂಡುಬಂದಿತ್ತು.ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿಗಳು ಒಂದು ವೇಳೆ ತಮ್ಮೊಂದಿಗೆ ಮಕ್ಕಳನ್ನು ಕರೆದುಕೊಂಡು ಬಂದರೆ ಮಕ್ಕಳಿಗಾಗಿ ಮಹಿಳಾ ಮತ್ತು ಮಕ್ಕಳ…

Read More

– ಬಸವರಾಜ ನಂದಿಹಾಳಬಸವನಬಾಗೇವಾಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ನಡೆಯಲಿರುವ ವಿಜಯಪುರ ಮೀಸಲು ಮತಕ್ಷೇತ್ರದ ಲೋಕಸಭಾ ಚುನಾವಣೆಯ ಮತದಾನ ಮೇ. ೭ ರಂದು ಬೆಳಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಡೆಯಲು ಕ್ಷಣ ಗಣನೆ ಆರಂಭಗೊಂಡಿದೆ. ಮತಕ್ಷೇತ್ರದಲ್ಲಿರುವ 230 ಮತಗಟ್ಟೆಗಳು ಸಿದ್ದಗೊಳ್ಳುತ್ತಿವೆ. ಮತಗಟ್ಟೆಗೆ ರ್ಯಾಂಪ್, ಬೆಳಕಿನ ವ್ಯವಸ್ಥೆ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ೧೨೨ ಸ್ಥಳದಲ್ಲಿ ೨೩೦ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತಕ್ಷೇತ್ರದಲ್ಲಿ ೧,೧೦,೨೪೬ ಪುರುಷ ಮತದಾರರು, ೧,೦೭,೩೦೭ ಮಹಿಳಾ ಮತದಾರರು, ೧೫ ಇತರೆ ಮತದಾರರು ಸೇರಿ ಒಟ್ಟು ೨,೧೭,೫೬೮ ಮತದಾರರು ಇದ್ದಾರೆ.೨೩೦ ಮತಗಟ್ಟೆಗಳಲ್ಲಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೩೧, ಬಸವನಬಾಗೇವಾಡಿಯ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೭೭, ಟಕ್ಕಳಕ್ಕಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೯೧, ನಿಡಗುಂದಿ ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೨೧೬,…

Read More

ಬಸವನಬಾಗೇವಾಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯಂಗವಾಗಿ ಮೇ. ೭ ರಂದು ನಡೆಯಲಿರುವ ಮತದಾನಕ್ಕೆ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಶೇ.೧೦೦ ರಷ್ಟು ಮತದಾನದ ಗುರಿಯೊಂದಿಗೆ ಮತದಾನ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಆಲಮಟ್ಟಿ ವಿಶೇಷ ಭೂಸ್ವಾಧಿನಾಧಿಕಾರಿ ಗಂಗಪ್ಪ ಎಂ. ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿರುವ ಸಹಾಯಕ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರವು ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಮೂರು ತಾಲೂಕುಗಳನ್ನು ಒಳಗೊಂಡಿದೆ. ಈ ಮತಕ್ಷೇತ್ರದಲ್ಲಿ ೧೨೨ ಸ್ಥಳದಲ್ಲಿ ೨೩೦ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತಕ್ಷೇತ್ರದಲ್ಲಿ ೧,೧೦,೨೪೬ ಪುರುಷ ಮತದಾರರು, ೧,೦೭,೩೦೭ ಮಹಿಳಾ ಮತದಾರರು, ೧೫ ಇತರೆ ಮತದಾರರು ಸೇರಿ ಒಟ್ಟು ೨,೧೭,೫೬೮ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ೨೧ ಸೆಕ್ಟರ್ಗಳನ್ನಾಗಿ ವಿಂಗಡಿಸಲಾಗಿದೆ. ೨೩೦ ಮತಗಟ್ಟೆಗಳಲ್ಲಿ ೮ ವಿಶೇಷ ಮತಗಟ್ಟೆ ಎಂದು ಗುರುತಿಸಿಲಾಗಿದೆ. ೧೧೫ ಮತಗಟ್ಟೆಗಳಿಗೆ ವೆಬ್ ಕ್ಯಾಮರಾ ಅಳವಡಿಸಲಾಗಿದೆ. ೧೦ ಮತಗಟ್ಟೆಗಳಿಗೆ ವಿಡಿಯೋ ಗ್ರಾಫರ್, ೧೧ ಮತಗಟ್ಟೆಗಳಿಗೆ ಮೈಕ್ರೊಅಬ್ಸರವರ್ ನೇಮಕ ಮಾಡಲಾಗಿದೆ. ಅವಶ್ಯಕತೆ ಕಂಡು…

Read More

ಬಸವನಬಾಗೇವಾಡಿ: ಇಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಎಸ್.ಕೆ.ಬೆಳ್ಳುಬ್ಬಿ, ಸೋಮನಗೌಡ ಪಾಟೀಲರು ಸೇರಿ 83 ಸಾವಿರ ಮತ ಪಡೆದಿದ್ದಾರೆ. ಬಿಜೆಪಿ, ಜೆಡಿಎಸ್ ಎರಡು ಪಕ್ಷದ ಮತಗಳು ಸೇರಿದರೆ ಇದೇ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳು ಲೀಡ್ ಪಡೆಯಬಹುದು. ಎರಡು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಮತಯಾಚನೆ ಮಾಡುವ ಮೂಲಕ ಹೆಚ್ಚಿನ ಮತಗಳು ರಮೇಶ ಜಿಗಜಿಣಗಿ ಅವರಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ರೋಡ್ ಶೋ ಮೂಲಕ ಮತಯಾಚಿಸಿದ ನಂತರ ಮಾತನಾಡಿದ ಅವರು,ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಬಸವಣ್ಣನವರ ವಚನಗಳ ಪುಸ್ತಕಗಳನ್ನು ವಿವಿಧ ಭಾಷೆಗಳಲ್ಲಿ ಭಾಷಾಂತರಿಸುವುದರೊಂದಿಗೆ ಅವರ ಕಾಯಕ ದಾಸೋಹ ಸಿದ್ದಾಂತವನ್ನು ದೇಶ ಸೇರಿದಂತೆ ವಿವಿಧ ದೇಶಗಳಿಗೆ ಹರಡುವಂತೆ ಮಾಡಿದ್ದಾರೆ ಎಂದರು.ಯುಪಿಎ ಸರ್ಕಾರದಲ್ಲಿ ಸೈನಿಕರ ಕೈಯಲ್ಲಿ ಗನ್ ಗಳಿದ್ದವು. ಆದರೆ ಚಲಾಯಿಸುವಂತಿರಲಿಲ್ಲ. ಮೋದಿ ಅವರು ಅಧಿಕಾರಕ್ಕೆ ಒಂದು ಗುಂಡಿಗೆ…

Read More

ಇಂಡಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಎಸ್ ಬಿ ಕೆಂಬೋಗಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಆದೇಶ ಪತ್ರ ನೀಡಿದ್ದಾರೆ.ಗುರುವಾರ, ಬೆಂಗಳೂರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಛೇರಿಯಲ್ಲಿ ವಿಜಯಪುರ ಜಿಲ್ಲಾ ನೂತನ ಅಧ್ಯಕ್ಷರನ್ನಾಗಿ ಎಸ್ ಬಿ ಕೆಂಬೋಗಿ ಅವರನ್ನು ಆಯ್ಕೆ ಮಾಡಿದರು. ಆ ನಂತರ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿದ ಅವರು, ಜಿಲ್ಲೆಯ ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಬೇಕು ನಿಲ್ಲಬೇಕು. ರಾಜ್ಯ ರೈತ ಸಂಘವು ಕೆಲವು ಸೈದ್ದಾಂತಿಕ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದು, ಈ ವಿಚಾರಗಳಿಗೆ ಮತ್ತು ಸಂವಿಧಾನ ಬದ್ದ ನೀತಿ ನಿಯಮಗಳನ್ನು ಗಾಳಿಗೆ ತೋರದೆ ಶಿಸ್ತಿನಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಯಾವುದೇ ಮತ ಜಾತಿಗಳಿಗೆ ಮತ್ತು ಯಾವುದೇ ರಾಜಕೀಯ ಪಕ್ಷಗಳ ಸೋಂಕಿಲ್ಲದೇ‌ ಪ್ರಾಮಾಣಿಕವಾಗಿ ಸಂಘ ನೀಡಿರುವ ಜವಾಬ್ದಾರಿ ಹುದ್ದೆಯನ್ನು ನಿಷ್ಠೆಯಿಂದ ಮಾಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಲಿಂಗಸೂಗುರ ತಾಲ್ಲೂಕು ರೈತ ಸಂಘದ…

Read More

ದೇವರಹಿಪ್ಪರಗಿ: ರಸ್ತೆ ಪಕ್ಕ ನಿಂತಿದ್ದ ಲಾರಿಯ ಹಿಂಬದಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.ಪಟ್ಟಣದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಪಟ್ಟಣದ ಪಾಟೀಲ ಪೆಟ್ರೋಲ್ ಪಂಪ್ ಹತ್ತಿರ ನಿಂತಿದ್ದ ಲಾರಿಯ ಹಿಂಬದಿಗೆ ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಕೆಎ-೩೨ ಎಫ್ ೨೬೨೬ ಸಂಖ್ಯೆಯ ಬಸ್ ಅಪ್ಪಳಿಸಿದ ಪರಿಣಾಮ ಬಸ್‌ನಲ್ಲಿ ಇದ್ದ ಪ್ರಯಾಣಿಕರಲ್ಲಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ.ಅಫಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಪೊಲೀಸರು ಹೆಚ್ಚಿನ ಗಾಯಗಳಿಂದ ನರಳುತ್ತಿದ್ದ ಗಬಸಾವಳಗಿ ಗ್ರಾಮದ ಮಹಿಳೆಗೆ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಪರಿಣಾಮ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಚಾಲಕನ ಅಜಾಗರೂಕ ಚಾಲನೆಯೇ ಅಫಘಾತಕ್ಕೆ ಮೂಲಕಾರಣ ಎಂದು ಪ್ರಯಾಣಿಕರು ಹಾಗೂ ಪ್ರತ್ಯಕ್ಷದರ್ಶಿಗಳು ದೂರುವುದು ಕಂಡು ಬಂತು.

Read More

ದೇವರಹಿಪ್ಪರಗಿ: ೧೦ ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿಯವರನ್ನು ಮತ್ತೇ ಪ್ರಧಾನಿಯನ್ನಾಗಿ ಮಾಡೋಣ. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಎಂದು ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಹೊಸನಗರದಲ್ಲಿ ಶನಿವಾರ ಸಾಯಂಕಾಲ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಪ್ರಚಾರದ ನೇತೃತ್ವ ವಹಿಸಿ ಮಾತನಾಡಿದರು. ಪ್ರಧಾನಿ ಮೋದಿಯವರ ಹತ್ತು ವರ್ಷದ ಆಡಳಿತದಲ್ಲಿ ಇಡೀ ಜಗತ್ತೇ ಭಾರತದತ್ತ ನೋಡುವಂತಾಯಿತು. ಮೇಕ್ ಇಂಡಿಯಾ ಹಾಗೂ ಕರೋನಾ ಲಸಿಕೆ ಮೂಲಕ ಭಾರತದ ತಂತ್ರಜ್ಞಾನ ಹಾಗೂ ವೈದ್ಯಕೀಯ ನೆರವನ್ನು ಜಗತ್ತಿನ ವಿವಿಧ ದೇಶಗಳಿಗೆ ನೀಡಲಾಯಿತು. ಇಂಥ ಸಾಧನೆಗೆ ಕಾರಣರಾದ ವ್ಯಕ್ತಿ ಮೂರನೆಯ ಬಾರಿಗೆ ಪ್ರಧಾನಿ ಹುದ್ದೆಯಲ್ಲಿ ಇರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಇನ್ನೂ ರಮೇಶ ಜಿಗಜಿಣಗಿ ಅವರು ಸಹ ಒಂದು ಲಕ್ಷ ಕೋಟಿ ಅನುದಾನದ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇವರ ಆಯ್ಕೆ ಮೂಲಕ ಪ್ರಧಾನಿಯವರ ಕೈ ಬಲಪಡಿಸೋಣ ಎಂದರು.ಸುರೇಶ ಒಂಟೆತ್ತಿನ, ಸಲಬಯ್ಯ ಸದಯ್ಯನಮಠ, ಪ್ರವೀಣ ನಾಯ್ಕೋಡಿ, ಕುಮಾರ…

Read More