Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಿಲ್ಲದೇ ಕೊಠಡಿ ಬಿಕೋ ಎನ್ನುವಂತಿದ್ದು, ವಿವಿಧೆಡೆ ತೆರಳುವ ಬಸ್ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡುವಂತಾಗಿದೆ.ಪಟ್ಟಣ ಹಾಗೂ ತಾಲ್ಲೂಕು ಕೇಂದ್ರ ಸ್ಥಳದ ಬಸ್ ನಿಲ್ದಾಣ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿದೆ. ಆದರೆ ಅಗತ್ಯವಾದ ಸಿಬ್ಬಂದಿಗಳಿಲ್ಲದೇ ಬಣಗುಡುತ್ತಿದೆ. ಮುಖ್ಯವಾಗಿ ಬಸ್ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ ಸಾರಿಗೆ ನಿಯಂತ್ರಕರು ಇಲ್ಲದೇ ಇದ್ದು, ಕೊಠಡಿಯನ್ನು ಮುಚ್ಚಲಾಗಿದೆ. ಇದರಿಂದ ಬಸ್ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡಿ ಇತರರನ್ನು ಕೇಳುವಂತಾಗಿದೆ.ಸ್ಥಳೀಯ ಬಸ್ ನಿಲ್ದಾಣಕ್ಕೆ ಕನಿಷ್ಠ ಇಬ್ಬರು ಸಾರಿಗೆ ನಿಯಂತ್ರಕರ ಅಗತ್ಯತೆಯಿದೆ. ಆದರೆ ಇಲ್ಲಿ ಕೇವಲ ಒಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಅವರು ಸಹ ಕೆಲಸದ ಒತ್ತಡ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ರಜೆ ಪಡೆದಿದ್ದು ಪ್ರಯಾಣಿಕರಿಗೆ ಮಾಹಿತಿದಾರರು ಇಲ್ಲದಂತಾಗಿದೆ. ಬಸ್ ನಿಲ್ದಾಣದ ಕ್ಷೇತ್ರ ಹಾಗೂ ಕಾರ್ಯಕ್ಕೆ ಅನುಗುಣವಾಗಿ ಪ್ರಸ್ತುತ ಇಬ್ಬರು ಸಾರಿಗೆ ನಿಯಂತ್ರಕರು ಹಾಗೂ ಒಬ್ಬರು ಭದ್ರತಾ ಸಿಬ್ಬಂದಿಯ ಅಗತ್ಯತೆಯಿದ್ದು ಕೂಡಲೇ ಇವರನ್ನು ನೇಮಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು.ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣಕ್ಕೆ ಸಿಬ್ಬಂದಿ…
ದೇವರಹಿಪ್ಪರಗಿ: ಅಭಿವೃದ್ಧಿಯ ಹೆಸರಲ್ಲಿ ರಸ್ತೆ ಕಾಮಗಾರಿಗಾಗಿ ಎಡ ಬಲಗಳಲ್ಲಿಯ ಮರಗಳ ಮಾರಣಹೋಮ ನಡೆಯುತ್ತಿದ್ದರೂ ಕಂಡು ಕಾಣದಂತಿರುವ ಅರಣ್ಯ ಇಲಾಖೆಯ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪಟ್ಟಣದ ಇಂಡಿ ರಸ್ತೆಯಲ್ಲಿ ದ್ವಿಪಥ ರಸ್ತೆಗಾಗಿ ಕಾಮಗಾರಿ ಆರಂಭಿಸಲಾಗಿದ್ದು, ರಸ್ತೆ ಬದಿಯ ಚರಂಡಿ ನಿರ್ಮಾಣಕ್ಕಾಗಿ ಅಂಬೇಡ್ಕರ್ ವೃತ್ತದಿಂದ ಕೆಇಬಿವರೆಗಿನ ಎಡಬಲಗಳಲ್ಲಿನ ಹತ್ತು ವರ್ಷಗಳ ಹಿಂದೆ ನೆಟ್ಟ ೧೦೦ ಕ್ಕೂ ಹೆಚ್ಚು ಮರಗಳನ್ನು ಬೇರು ಸಮೇತ ಕಿತ್ತುಹಾಕಲಾಗಿದೆ. ಸಾಮಾನ್ಯವಾಗಿ ಅಭಿವೃದ್ಧಿ ಕಾರ್ಯಗಳಿಗೆ ಮರಗಳ ತೆರವು ಕಾರ್ಯಕ್ಕೆ ಅರಣ್ಯ ಇಲಾಖೆಯ ಅನುಮತಿ ಬೇಕು. ಆದರೆ ಇಲ್ಲಿ ಅರಣ್ಯ ಇಲಾಖೆಯ ಗಮನ ತಂದು ಮರಗಳನ್ನು ಕಡಿತಗೊಳಿಸಲಾಗಿದೆಯೋ ಹೇಗೆ ಎಂಬುದರ ಕುರಿತು ಮಾಹಿತಿಯಿಲ್ಲ.ಒಂದೆಡೆ ದಿನದಿಂದ ದಿನಕ್ಕೆ ಕಾಡು ಬೆಳೆಸಿ, ನಾಡು ಉಳಿಸಿ, ಮನೆಗೊಂದು ಮರ ಬೆಳೆಸಿ ಎಂಬ ಘೋಷಣೆಗಳೊಂದಿಗೆ ಪರಿಸರ ಉಳಿವಿಗಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೇ, ಇಲ್ಲಿ ಮಾತ್ರ ಮರಗಳ ಜಾಗೃತಿ ಬದಲು ದುರ್ಗತಿ ಎನ್ನುವಂತಾಗಿದೆ. ತಾಪಮಾನದ ಹೆಚ್ಚಳ, ಆಮ್ಲಜನಕದ ಕುಸಿತ, ಬಿಸಿಗಾಳಿ ಬಿಸುವಿಕೆ, ಮಳೆಪ್ರಮಾಣದಲ್ಲಿ ಇಳಿಕೆಯಂತ ಎಚ್ಚರಿಕೆಗಳ ನಡುವೆಯೂ ಪಟ್ಟಣದ ಮರಗಳನ್ನು ಬೇಕಾಬಿಟ್ಟಿಯಾಗಿ…
ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.೦೭ರಂದು ಬೆಳಿಗ್ಗೆ ೭ರಿಂದ ಸಂಜೆ ೬ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೯,೪೬,೦೯೦ ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು ೨೦೮೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಇದೇ ಮೇ.೭ ರಂದು ನಡೆಯುವ ಮತದಾನ ಹಾಗೂ ಜೂನ್. ೪ ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಮತದಾರರ ವಿವರ: ಜಿಲ್ಲೆಯಲ್ಲಿ ೯,೮೭,೯೭೪ ಗಂಡು, ೯,೫೭,೯೦೬ ಹೆಣ್ಣು ಹಾಗೂ ೨೧೦ ಇತರೆ ಮತದಾರರು ಸೇರಿದಂತೆ ಒಟ್ಟು ೧೯,೪೬,೦೯೦ ಮತದಾರರಿದ್ದಾರೆ. ೮೫ ವರ್ಷಕ್ಕಿಂತ ಮೇಲ್ಪಟ್ಟು ಒಟ್ಟು ೨೩೫೭ ಮತದಾರರ ಪೈಕಿ ೨೧೭೦ ಮತದಾರರು ತಮ್ಮ ಮನೆಯಿಂದ ಮತ ಚಲಾಯಿಸಿದ್ದು, ಶೇ.೯೨.೦೬ ರಷ್ಟು ಮತದಾನವಾಗಿದೆ. ಅದರಂತೆ ಶೇ.೪೦ಕ್ಕಿಂತ ಹೆಚ್ಚಿನ ದಿವ್ಯಾಂಗವಿರುವ (ಪಿಡಬ್ಲೂಡಿ) ಒಟ್ಟು ೮೮೬ ಮತದಾರರ ಪೈಕಿ ೮೫೪ ಮತದಾರರು…
ಸಿಂದಗಿ: ಕಾಂಗ್ರೆಸ್ ಪಕ್ಷದ ಕೊಡುಗೆ ಸಮಾಜಕ್ಕೆ ಅನನ್ಯವಾಗಿದೆ. ಸವದಿ ಅವರಿಗೆ ಟಿಕೆಟ್ ತಪ್ಪಿಸಿದ್ದು ಜಿಗಜಿಣಗಿ ಎಂದು ಸಮಾಜದ ಮುಖಂಡ, ಕಾಂಗ್ರೆಸ್ ಪಕ್ಷದ ಸದಸ್ಯ ಸುರೇಶ ಮಳಲಿ ಎಂದು ಹೇಳಿದರು.ಭಾನುವಾರ ಸಾಯಂಕಾಲ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಾಣಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ಸುರೇಶ ಮಳಲಿ ಮಾತನಾಡಿ, ಗಾಣಿಗ ಸಮುದಾಯಕ್ಕೆ ೨ಎ ಮೀಸಲಾತಿ ನೀಡಿದ್ದು ಆಗಿನ ಕಾಂಗ್ರೆಸ್ ಸರಕಾರ ಮತ್ತು ವಿರಪ್ಪ ಮೋಯ್ಲಿ ಅವರ ಸರಕಾರ ಕಾಂಗ್ರೆಸ್ ಕೊಡುಗೆ ಸಮಾಜಕ್ಕೆ ಅನನ್ಯ. ಗಾಣಿಗ ಸಮಾಜವನ್ನು ಜಿಗಜಿಣಗಿ ಅವರು ಆಯ್ಕೆ ಮತ್ತು ಅಧಿಕಾರಕ್ಕೆ ಮಾತ್ರ ಬಳಸಿಕೊಂಡಿದ್ದಾರೆ. ಗಾಣಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದ್ದೆ ಬಿಜೆಪಿಯವರ ಸಾಧನೆ. ಪಕ್ಷದಿಂದ ಸವದಿ ಅವರು ಹೊರ ಬರಲು ಜಿಗಜಿಣಗಿ ಅವರ ಹಿನ್ನಲೆ ಸಹಕಾರವಿದೆ. ಕಾರಣ ಸಮಾಜ ಬಾಂಧವರು ಕಾಂಗ್ರೆಸ್ ಪಕ್ಷದ ಆಲಗೂರ ಅವರಿಗೆ ಮತ ನೀಡಿ ಬೆಂಲಿಸಿ ಎಂದರು.ಈ ವೇಳೆ ಗೋಲ್ಲಾಳಪ್ಪಗೌಡ ಪಾಟೀಲ ಮಾತನಾಡಿ, ಜಿಲ್ಲೆಗೆ ಜಿಗಜಿಣಗಿ ಅವರು ಕೊಡುಗೆ ಶೂನ್ಯ. ಮಂಜುರಾದ ಆಲಮೇಲ…
ಸಿಂದಗಿ: ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕೊಡಿಸುವ ಸಲುವಾಗಿ ಜಯಬಸವ ಮೃತ್ಯುಂಜ ಸ್ವಾಮೀಜಿ ಸತತವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಅದಕ್ಕೇ ಕಾಂಗ್ರೆಸ್ ನಾಯಕರ ಕೊಡುಗೆ ಏನು ಎಂಬುದು ಸಮಾಜದ ಮುಖಂಡ, ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಪ್ರಶ್ನಿಸಿದರು.ಭಾನುವಾರದಂದು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ, ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಪ್ರತಿಯೊಂದು ಪಕ್ಷದಲ್ಲಿ ಎಲ್ಲ ಸಮಾಜದ ನಾಯಕರಿರುವುದು ಸಹಜ. ಆದರೆ ಇಡೀ ಪಂಚಮಸಾಲಿ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದೆ ಎನ್ನುವುದು ಖಂಡನೀಯ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕೊಡಿಸುವ ಸಲುವಾಗಿ ಜಯ ಬಸವ ಮೃತ್ಯುಂಜ ಸ್ವಾಮೀಜಿ ಸತತವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಅದಕ್ಕೇ ಕಾಂಗ್ರೆಸ್ ನಾಯಕರ ಕೊಡುಗೆ ಏನು ಎಂದು ಪ್ರಶ್ನಿಸಿದರು. ಬಸನಗೌಡ ಪಾಟೀಲ ಯತ್ನಾಳ ಅವರು ಸಮಾಜದ ಉದ್ದಾರಕ್ಕಾಗಿ ಸರಕಾರದ ಪ್ರತಿನಿಧಿಯಾಗಿದ್ದರೂ ಹೋರಾಡಿದ್ದಾರೆ.ಈ ವೇಳೆ ಅಶೋಕ ಅಲ್ಲಾಪೂರ, ಸಿದ್ದರಾಮ ಪಾಟೀಲ, ಜೆಡಿಎಸ್ ತಾಲೂಕಾಧ್ಯಕ್ಷ ಎಮ್.ಎನ್.ಪಾಟೀಲ ಮಾತನಾಡಿ,…
ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಸಮಗಾರ ಸಮಾಜವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಜು ಆಲಗೂರ ರವರಿಗೆ ಮತ ಚಲಾಯಿಸಬೇಕೆಂದು ಜಿಲ್ಲೆಯ ಸಮಗಾರ ಸಮಾಜದ ಮುಖಂಡರು ಭಾನುವಾರ ಮನವಿ ಮಾಡಿದ್ದಾರೆ.ಕಾಂಗ್ರೆಸ್ ಪಕ್ಷವು ದೀನ ದಲಿತರ ಹಾಗೂ ಬಡವರ ಪಕ್ಷವಾಗಿದ್ದು, ಈ ವರ್ಗಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಇದರ ಲಾಭವನ್ನು ಸಮಗಾರ ಸಮಾಜ ಕೂಡ ಪಡೆದುಕೊಂಡಿದೆ. ಸ್ವಾತಂತ್ರ್ಯ ದೊರೆತಾಗ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದ ಸಮಾಜವು ಕಾಂಗ್ರೆಸ್ ಪಕ್ಷವು ಜಾರಿಗೆ ತಂದ ಭೂಸುಧಾರಣೆ ಕಾಯ್ದೆ, ಉಳುವವನೇ ಭೂ ಒಡೆಯ ಇಂಥ ಯೋಜನೆಗಳ ಲಾಭ ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ಆಡಳಿತದ ಸಮಯದಲ್ಲಿ ಶಿಕ್ಷಣವನ್ನು ಪಡೆದು ಸರಕಾರಿ ಉದ್ಯೋಗಿಗಳಾಗಿ ಆ ಮೂಲಕ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ಥಿತಿವಂತರಾಗಲು ಕಾರಣವಾಯಿತು. ಅನೇಕ ಯುವಕರು ಉನ್ನತ ಶಿಕ್ಷಣ ಪಡೆದು ದೊಡ್ಡ ದೊಡ್ಡ ಕಂಪನಿಗಳಲ್ಲೂ ಉದ್ಯೋಗಿಗಳಾಗಿ ಕೆಲವರು ವಿದೇಶಕ್ಕೂ ಕೂಡ ಹೋಗಿ ಉದ್ಯೋಗ ಮಾಡಲು ಕಾಂಗ್ರೆಸ್ ಪಕ್ಷವು ಕಾರಣವಾಗಿದೆ. ಇಷ್ಟೆಲ್ಲ ಪ್ರಯೋಜನಗಳನ್ನು ಪಡೆದ ಸಮಗಾರ ಸಮಾಜವು ಈಗ ಕಾಂಗ್ರೆಸ್ ಪಕ್ಷದ ಋಣ ತೀರಿಸುವ…
ವಿಜಯಪುರ: ಎಐಸಿಸಿ ಧುರೀಣ ರಾಹುಲ್ ಗಾಂಧಿ ವಿಜಯಪುರಕ್ಕೆ ಬಂದಾಗ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರೇ ಆ ಸಭೆಯಲ್ಲಿ ಇರಲಿಲ್ಲ, ಅವರ ಫೋಟೋ ಸಹ ಬ್ಯಾನರನಲ್ಲಿ ಅಲ್ಲಿರಲಿಲ್ಲ, ರಾಹುಲ್ ಗಾಂಧೀ ಆಲಗೂರ ಅವರ ಹೆಸರು ಸಹ ಉಲ್ಲೇಖಿಸಿ ಮತಯಾಚಿಸಲಿಲ್ಲ, ಪ್ರಚಾರ ಸಭೆಗೆ ಅಭ್ಯರ್ಥಿಯನ್ನೇ ಆಹ್ವಾನಿಸದೆ ಕಾಂಗ್ರೆಸ್ ಈಗಾಗಲೇ ಸೋಲು ಒಪ್ಪಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಲಿ ಶಾಸಕರಾಗಿದ್ದ ಪ್ರೊ.ರಾಜು ಆಲಗೂರ ಅವರಿಗೆ ಕಾಂಗ್ರೆಸ್ ಪಕ್ಷ 2018 ರಲ್ಲಿ ಟಿಕೆಟ್ ಏಕೆ ನಿರಾಕರಣೆ ಮಾಡಿತು? 2024 ರ ಚುನಾವಣೆಯಲ್ಲಿಯೂ ಸಹ ಅವರಿಗೆ ಕಾಂಗ್ರೆಸ್ ಟಿಕೇಟ್ ನಿರಾಕರಣೆ ಮಾಡಿತ್ತು, ಈಗ ಲೋಕಸಭೆಗೆ ಯಾರೊಬ್ಬರು ಅಭ್ಯರ್ಥಿಯೇ ಕಾಂಗ್ರೆಸ್ ಬಳಿ ಇರದ್ದರಿಂದ ಅನಿವಾರ್ಯವಾಗಿ ಆಲಗೂರ ಅವರ ಕೊರಳಿಗೆ ಈ ಜವಾಬ್ದಾರಿ ವಹಿಸಿದೆ ಎಂದರು.ಈ ಹಿಂದೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಿದ ಗುತ್ತಿಗೆದಾರರು ಸಹ ಈ ಸರ್ಕಾರದ ಮೇಲೆ ಅಸಮಾಧಾನಗೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ, ರಾಜ್ಯ ಕಾಂಗ್ರೆಸ್…
ವಿಜಯಪುರ: ಜಿಲ್ಲೆಯ ಯಾವುದೇ ಮತಗಟ್ಟೆಯಲ್ಲಿ ಕೂಡ ಪಿಆರ್ಒ ಹೊರತುಪಡಿಸಿ ಯಾವುದೇ ಅಧಿಕಾರಿಯಾಗಲಿ, ಸಿಬ್ಬಂದಿ ಮತ್ತು ಮತದಾರರಿಗೆ ಮೊಬೈಲ್ ತೆಗೆದುಕೊಂಡು ಒಯ್ಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರವಿವಾರ ಸಂಜೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳೊಂದಿಗೆ ಮತದಾನ ಸಿದ್ದತೆ ಕುರಿತು ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಮತಗಟ್ಟೆಯಲ್ಲಿ ಪಿಆರ್ಒ ಮಾತ್ರ ಮೊಬೈಲ್ ಒಯ್ಯತಕ್ಕದ್ದು ಮತ್ತು ಅದನ್ನು ಕೂಡಾ ಸೈಲೆಂಟ್ ಮೋಡನಲ್ಲಿ ಇರಿಸಬೇಕು ಎಂದರು.ಮೇ.7 ರಂದು ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ ಜರುಗಿಸಲು, ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಆಯೋಗ ಸೂಚಿಸಿರುವ ನಿಮಯಗಳನ್ನು ಪಾಲಿಸಿ ಕರ್ತವ್ಯ ಪ್ರಜ್ಞೆ ಮೆರೆದು ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಇವಿಎಂ ಸಾಗಿಸುವ ವಾಹನಗಳಿಗೆ ಈಗಾಗಲೇ ಜಿಪಿಎಸ್ ಅಳವಡಿಸಲಾಗಿದ್ದು, ವಾಹನಗಳು ನಿಗದಿತ ಹಾದಿಯಲ್ಲಿ ಸಂಚರಿಸಬೇಕು. ಹಾಗೂ ಯಾವುದೇ ಕಾರಣಕ್ಕೂ ಎಲ್ಲಿಯೂ ಮಾರ್ಗ ಮಧ್ಯದಲ್ಲಿ ನಿಲ್ಲಿಸಬಾರದು ಎಂದು ಸೂಚಿಸಿದರು.ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ…
ಗೆಲುವು ನನ್ನದೇ | ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ವಿಶ್ವಾಸ | ಡಿಎಸ್ಎಸ್ ಬಗ್ಗೆ ನನಗೆ ಗೌರವವಿದೆ ವಿಜಯಪುರ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯೂ ನಾನು ಗೆಲ್ಲುತ್ತೇನೆ ಎಂದು ಸಂಸದ ಹಾಗೂ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ರವಿವಾರ ಪತ್ರಿಕಾಗೋಷ್ಟಿ ನಡಸಿದ ಅವರು, ಕಳೆದ ಚುನಾವಣೆಗಿಂತಲೂ ಈ ಚುನಾವಣೆಯಲ್ಲಿ ಒಂದು ಮತ ಹೆಚ್ಚಿಗೆ ಪಡೆಯುತ್ತೇನೆ. ಒಂದು ಮತದ ಅಂತರದಿಂದಾದರೂ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದರು.ನಾನು ಸಮಾಜದ ಎಲ್ಲ ವರ್ಗದ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ. ಜಿಲ್ಲೆಯಲ್ಲಿ ಎಲ್ಲಿಯೇ ಪ್ರಚಾರಕ್ಕೆ ಹೋದರೂ ಜನತೆ ನನಗೆ ಹೆಚ್ಚಿನ ಪ್ರ್ರೀತಿ, ಒಲವು ತೋರಿಸುತ್ತಿದ್ದಾರೆ. ನನ್ಮ ಬಗ್ಗೆ ಯಾರು ಏನೇ ಅಪಪ್ರಚಾರ ಮಾಡಿದರೂ ಜನರು ಅದಕ್ಕೆ ಕಿವಿಗೊಡುವುದಿಲ್ಲ.ಈ ಚುನಾವಣೆಯಲ್ಲೂ ನನ್ನ ಗೆಲುವು ನಿಶ್ಚಿತ ಎಂದರು.ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ನನ್ನ ಸಮುದಾಯದಿಂದಲೇ ನಾನು ಅಂತರ ಕಾಯ್ದುಕೊಂಡಿದ್ದೇನೆ. ಎಲ್ಲ ಸಮುದಾಯದವರನ್ನು ನನ್ನ ಜೊತೆಗೆ ತೆಗೆದುಕೊಂಡು ಬಂದಿದ್ದೇನೆ. ಅವರನ್ನು…
ಮೊದಲ ಪುಟ ವಿಜಯಪುರ: ಸುಳ್ಳು ಹೇಳುವ ಮೋದಿ ಮತ್ತು ಬಿಜೆಪಿಯನ್ನು ಮನೆಗೆ ಕಳುಹಿಸುವ ಸಮಯ ಬಂದಿದ್ದು, ಮಂಗಳವಾರ ಮತದಾರರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕು ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಹೊನವಾಡ, ಬಬಲೇಶ್ವರ ತಾಲೂಕಿನ ಅರ್ಜುಣಗಿ, ಕಾತ್ರಾಳ ಮತ್ತು ಹಲಗಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದ ಅವರು, ಜಿಲ್ಲೆ, ದೇಶದ ಭವಿಷ್ಯ ನಿರ್ಣಯಿಸುವ ಶುಭ ಘಳಿಗೆ ಈಗ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರಿಗೆ ಮತ ಹಾಕಿ ಗೆಲ್ಲಿಸೋಣ ಎಂದು ಅವರು ಹೇಳಿದರು.ನರೇಂದ್ರ ಮೋದಿ ಅವರಿಗೆ 10 ವರ್ಷ ಮೋದಿಗೆ ಅವಕಾಶ ನೀಡಿದ್ದು ಸಾಕು. ಜಿಗಜಿಣಗಿ ಅವರಿಗೆ ಆರು ಬಾರಿ ಅವಕಾಶ ನೀಡಿದ್ದೂ ಸಾಕು. ಮೋದಿ ಅವರು ನೀಡಿದ ಭರವಸೆಗಳೆಲ್ಲವೂ ಹುಸಿಯಾಗಿವೆ. ಬೆಲೆ ಏರಿಕೆ, ನಿರುದ್ಯೋಗ, ಅಭಿವೃದ್ಧಿಯ ಕಡೆಗಣನೆಯಿಂದಾಗಿ ರೈತರು,…
