Author: editor.udayarashmi@gmail.com

ವಿಜಯಪುರ: ಲಿಂಗಾಯತ ಮುಖಂಡರಾದ ಎ.ಬಿ.ಪಾಟೀಲ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಅವರು ತಮ್ಮ ಸ್ವ-ಸಾಮರ್ಥ್ಯದಿಂದ ಬೆಳೆದಿದ್ದಾರೆ ಹೊರತು, ಅವರಿಗೆ ರಾಜಕೀಯವಾಗಿ ರಮೇಶ ಜಿಗಜಿಣಗಿ ಅವರು ಬೆಳೆಸಿಲ್ಲ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ರಮೇಶ ಜಿಗಜಿಣಗಿ ಅವರಿಗೆ ಪತ್ರಿಕಾ ಹೇಳಿಕೆ ಮೂಲಕ ಉತ್ತರ ನೀಡಿದ ಅವರು, 1983 ರಿಂದ ಕಳೆದ 40 ವರ್ಷಗಳ ಅವಧಿಯಲ್ಲಿ ಜಿಗಜಿಣಗಿ ಅವರು ಶಾಸಕರು, ಸಚಿವರು, ಸಂಸದರು ಹಾಗೂ ಕೇಂದ್ರ ಮಂತ್ರಿಗಳಾಗಿ ಸತತ ಅಧಿಕಾರ ಅನುಭವಿಸುತ್ತಿದ್ದಾಗ ಒಬ್ಬನೇ ಒಬ್ಬ ಕಾರ್ಯಕರ್ತನನ್ನು, ಯಾವುದೇ ಸಮುದಾಯದವರನ್ನು ಬೆಳೆಸಿಲ್ಲ ಎಂದಿದ್ದಾರೆ.ಕಳೆದ 30 ವರ್ಷಗಳಿಂದ ಆರು ಬಾರಿ ಸಂಸದರಾಗಿರುವ ಇವರು ರಾಜಕೀಯವಾಗಿ ನಾಯಕರನ್ನು ಬೆಳೆಸುವುದು ಇರಲಿ, ಒಬ್ಬರಿಗಾದರೂ ದೆಹಲಿಗೆ ಕರೆದುಕೊಂಡು ಹೋಗಿ, ತಮ್ಮ ಬಂಗಲೆಯನ್ನು ತೋರಿಸಿದ್ದಾರೆಯೇ? ಎಂದು ಸಂಗಮೇಶ ಬಬಲೇಶ್ವರ ಪ್ರಶ್ನಿಸಿದ್ದಾರೆ.ದೆಹಲಿಯಂತೂ ದೂರದ ಮಾತು, ಭೂತನಾಳ ಕೆರೆ ಪಕ್ಕದಲ್ಲಿರುವ ಐಶಾರಾಮಿ ಬಂಗಲೆಗೆ ಜಿಲ್ಲೆಯಿಂದ ಹುಡುಕಿಕೊಂಡು ಬರುವ ಬಿಜೆಪಿ ಕಾರ್ಯಕರ್ತರನ್ನು ಒಳಗೆ ಬಿಟ್ಟುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿರುವ ಸಂಗಮೇಶ ಬಬಲೇಶ್ವರ, ಚುನಾವಣೆ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ವಿಶ್ವದ ಅತಿ ದೊಡ್ಡ ಪ್ರಜಾತಂತ್ರ ರಾಷ್ಟ್ರವಾದ ಭಾರತದಲ್ಲಿ ಇದೀಗ ಮತ್ತೊಂದು ಬಾರಿ ಚುನಾವಣೆ ಎಂಬ ಪ್ರಜಾಪ್ರಭುತ್ವದ ಮಹಾಯಜ್ಞ ಪ್ರಾರಂಭವಾಗಿದೆ.. ಭಾರತ ಒಂದು ಸಾಂವಿಧಾನಿಕ ರಾಷ್ಟ್ರವಾಗಿದ್ದು ಇಲ್ಲಿ ಗಣತಂತ್ರ ವ್ಯವಸ್ಥೆಯು ಜಾರಿಯಲ್ಲಿದೆ. 29 ರಾಜ್ಯಗಳ 550ಕ್ಕೂ ಹೆಚ್ಚು ಲೋಕಸಭಾ ಸೀಟುಗಳು ಮತ್ತು ನಮ್ಮ ಕರ್ನಾಟಕ ರಾಜ್ಯದಲ್ಲಿ 224 ವಿಧಾನಸಭಾ ಸೀಟುಗಳು ಮತ್ತು 28 ಲೋಕಸಭಾ ಸೀಟುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಪ್ರಜಾಪ್ರತಿನಿಧಿಗಳ ಆಯ್ಕೆ ನಡೆಯುತ್ತದೆ. ವಿವಿಧ ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಪ್ರಣಾಳಿಕೆಗಳೊಂದಿಗೆ ಜನರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ಪಣತೊಟ್ಟು ಚುನಾವಣೆಯ ಅಖಾಡಕ್ಕೆ ಇಳಿಯುತ್ತವೆ. ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ, ಪುರಸಭೆ, ನಗರ ಸಭೆ, ಮಹಾನಗರಪಾಲಿಕೆ ವಿಧಾನಸಭಾ ಸದಸ್ಯರು ಮೆಂಬರ್ ಆಫ್ ಲೆಜಿಸ್ಲೇಟಿವ್ ಅಸೆಂಬ್ಲಿ (ಮೇಲ್ಮನೆ ಮತ್ತು ಕೆಳಮನೆ ಸದಸ್ಯರು) ಮೆಂಬರ್ ಆಫ್ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರು ರಾಜ್ಯದಲ್ಲಿ ಆಡಳಿತದ ಭಾಗವಾಗಿ ಚುನಾಯಿಸಲ್ಪಟ್ಟರೆ ಲೋಕಸಭೆಯಲ್ಲಿ ಲೋಕಸಭಾ ಮತ್ತು…

Read More

“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್.ಕೆ. ಬೆಂಗಳೂರು ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, ( ಕೇಂದ್ರ ಮತ್ತು ರಾಜ್ಯ ಸೇರಿ )ಐಎಎಸ್ ಅಧಿಕಾರಿಗಳಿಂದ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ ಶ್ರದ್ಧೆಯಿಂದ ಮತ್ತು ಕಷ್ಟಪಟ್ಟು ಓದುತ್ತಾರೆ.ಕೆಲಸ ಸಿಕ್ಕ ನಂತರ ಅಲ್ಲಿಗೆ ಅವರ ಓದು ಪರಿಶ್ರಮ ಮತ್ತು ಬುದ್ದಿಯ ಬೆಳವಣಿಗೆ ಹೆಚ್ಚು ಕಡಿಮೆ ನಿಂತು ಹೋಗುತ್ತದೆ..ಕೆಲಸ ಸೇರಿದ ನಂತರ ಒಮ್ಮೆ ತಮ್ಮ ಆಫೀಸಿನ ಕೆಲಸ ಪ್ರಾರಂಭ ಮಾಡುವ ಅವರು ಖಚಿತ ಸಂಬಳದ ಭದ್ರತೆಯೊಂದಿಗೆ ಫೈಲುಗಳಲ್ಲಿ ಮುಳುಗಿ ಹೋಗುತ್ತಾರೆ. ಯಾವುದೇ ಹೊಸತನಕ್ಕೂ ತಮ್ಮನ್ನು ತೆರೆದು ಕೊಳ್ಳುವುದಿಲ್ಲ ಮತ್ತು ನಮ್ಮ ಸರ್ಕಾರಿ ವ್ಯವಸ್ಥೆ ಅದಕ್ಕೆ ಪ್ರೋತ್ಸಾಹವೂ ಕೊಡುವುದಿಲ್ಲ..ಸಾಕಷ್ಟು ಅಧಿಕಾರಿಗಳು ತಮ್ಮ ಯೌವನದ ದಿನಗಳಲ್ಲಿ ಸರ್ಕಾರಿ ಕೆಲಸ ಪ್ರಾರಂಭಿಸಿದರೆ ಮತ್ತೆ ಬದುಕಿನ ಬಗ್ಗೆ ಹಿಂತಿರುಗಿ ನೋಡುವುದು ನಿವೃತ್ತಿಯ ಸಮಯದಲ್ಲಿ..ಸಾಮಾನ್ಯವಾಗಿ ನಮ್ಮ ವ್ಯವಸ್ಥೆಯಲ್ಲಿ ಸರ್ಕಾರದ ಕೆಲಸ ಪಡೆಯುವುದೇ ಜೀವನದ ಸಾರ್ಥಕತೆ ಎಂದು ಭಾವಿಸಲಾಗುತ್ತದೆ. ಕೆಲಸ ದೊರೆತ ನಂತರ…

Read More

ಚಿಮ್ಮಡ: ಕ್ಷೇತ್ರದಾದ್ಯಂತ ಈ ಬಾರಿ ಗ್ರಾಮ, ಪಟ್ಟಣಗಳಲ್ಲಿ ಕಾಂಗ್ರೆಸ್ ಪರ ಅಲೆಯಿದ್ದು ಸಹೋದರಿ ಸಂಯುಕ್ತಾ ಪಾಟೀಲ ಗೆಲುವು ನಿಶ್ಚಿತ ಎಂದು ಬಾಗಲಕೋಟ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಸಹೋದರಿ ಸಂಪ್ರದಾ ಪಾಟೀಲ ಹೇಳಿದರು.ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತ ಸಾರ್ವಜನಿರನ್ನುದೇಶಿಸಿ ಮಾತನಾಡಿದ ಅವರು ಹಿಂದಿನ ಸಂಸದರು ಚುನಾವಣೆ ಸಂಧರ್ಬಗಳಲ್ಲಿ ಮಾತ್ರ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಹಾಗೂ ಬಿಜೇಪಿಯ ಒಡೆದು ಆಳುವ ನೀತಿ ಇಲ್ಲಿನ ಮತದಾರರಲ್ಲಿ ಬೇಸರ ತರಿಸಿದೆ ಅಲ್ಲದೇ ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳು ಸಾರ್ವಜನಿಕರಲ್ಲಿ ಕಾಂಗ್ರೆಸ್ ಕುರಿತ ಭರವಸೆ ಮೂಡಿಸಿದೆ, ಇದರಿಂದ ಎಲ್ಲ ವರ್ಗಗಳ ಮತದಾರರು ಕಾಂಗ್ರೆಸ್ ನತ್ತ ಒಲವು ತೋರುತಿದ್ದು ಇದು ಕಾಂಗ್ರೆಸ್ ಪಕ್ಷಕ್ಕೆ ಸುಲಭ ಜಯ ತಂದು ಕೊಡಲಿದೆ ಎಂದರು.ಶನಿವಾರ ರಾತ್ರಿ ಗ್ರಾಮದ ಪ್ರತೀ ವಾರ್ಡಗಳ ಮನೆ ಮನೆಗಳಿಗೆ ಭೇಟಿನೀಡಿ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಸಹೋದರಿ ಸಂಪ್ರದಾ ಪಾಟೀಲ ಮತಯಾಚನೆ ನಡೆಸಿದರು.ಗ್ರಾಮ ಘಟಕದ ಅಧ್ಯಕ್ಷ ಉಮೇಶ…

Read More

ವಿಜಯಪುರ: ನಾಗಠಾಣ ಮತಕ್ಷೇತ್ರದ ಕನ್ನೂರು ಗ್ರಾಮದಲ್ಲಿ ಭಾನುವಾರ ಜೆಡಿಎಸ್, ಬಿಜೆಪಿ, ಶಿವಸೇನಾ ಹಾಗೂ ಕೆಆರ್.ಎಸ್. ಪಕ್ಷಗಳ ಹಲವಾರು ಪ್ರಮುಖರು ಅಭ್ಯರ್ಥಿ ರಾಜು ಆಲಗೂರ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಸೇರಿದರು.ಗ್ರಾಮದ ಸಾಯಬಣ್ಣ ಅಡಹಳ್ಳಿ, ಸತೀಶ ಪಾಟೀಲ, ಈರಪ್ಪ ಅಡಹಳ್ಳಿ, ಆನಂದ ಬೆಳುಂಡಗಿ, ಮಲ್ಲಿಕಾರ್ಜುನ ಬೆಳುಂಡಗಿ, ಸಂಜಯ ಬೆಳುಂಡಗಿ, ಸದು ಬೆಳುಂಡಗಿ, ಪ್ರವೀಣ ಬೆಳುಂಡಗಿ, ಪ್ರಮೋದ ಬೆಳುಂಡಗಿ, ಪುಟ್ಟುಗೌಡ ಪಾಟೀಲ, ಈರಣ್ಣ ಅಡಹಳ್ಳಿ, ಸಿದ್ದರಾಮ ಅಡಹಳ್ಳಿ, ಅಮಸಿದ್ಧ ಅಡಹಳ್ಳಿ, ಅಪ್ಪಾಸಾಹೇಬ ಬೆಳುಂಡಗಿ, ಸೋಮು ಬೆಳುಂಡಗಿ, ವಿಜಯಕುಮಾರ ಅಡಹಳ್ಳಿ, ಆನಂದ ಅಡಹಳ್ಳಿ, ಕಾರ್ತಿಕ ಮಾಳಿ, ಸೋಮು ಮೇತ್ರಿ ಅನೇಕರು ಕಾಂಗ್ರೆಸ್ ಸೇರಿದರು.ಸಭೆಯಲ್ಲಿ ಮಾತನಾಡಿದ ಪ್ರೊ.ರಾಜು ಆಲಗೂರರು, ಜೆಡಿಎಸ್ ಹಾಗೂ ಬಿಜೆಪಿ ಜನ ವಿರೋಧಿಯಾಗಿವೆ. ಅವುಗಳು ಜನರಿಂದ ದೂರವಾಗಿದ್ದಕ್ಕೆ ನೀವೆಲ್ಲ ಕಾಂಗ್ರೆಸ್ ಸೇರಿದ್ದೇ ಸಾಕ್ಷಿ. ನನ್ನ ಮೇಲೆ ನೀವು ವಿಶ್ವಾಸ ಇಟ್ಟಿದ್ದಕ್ಕೆ ಪ್ರತಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದರು.ಮುಖಂಡರಾದ ಡಿ.ಎಲ್.ಚವ್ಹಾಣ, ಜಗದೀಶ ಪಾಟೀಲ, ಚಂದ್ರಾಮ ಬೆಳುಂಡಗಿ, ಕಾಳಪ್ಪ ಬೆಳುಂಡಗಿ, ಈರಪ್ಪ ಬೆಳುಂಡಗಿ, ಬಾಳು ಜೀರಗಿಹಾಳ, ಲಾಲಪ್ಪ…

Read More

ವಿಜಯಪುರ: ‘ನಗುʼ ಎಲ್ಲರ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ. ವಿಶ್ವದಾದ್ಯಂತ ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ ದಿನವನ್ನು ಆಚರಿಸಲಾಗುತ್ತದೆ. ಎಲ್ಲ ಕಾಯಿಲೆಗಳನ್ನು ದೂರ ಮಾಡುವ ಶಕ್ತಿ ನಗುವಿಗಿದೆ. ನಗು ನಮ್ಮ ದೇಹಾರೋಗ್ಯವನ್ನು ಮಾತ್ರವಲ್ಲ ಮನಸ್ಸಿನ ಆರೋಗ್ಯವನ್ನು ಉತ್ತಮ ಗೊಳಿಸುತ್ತದೆ. ಮೇ 5ರಂದು ಈ ಬಾರಿ ವಿಶ್ವ ನಗುವಿನ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕ ಏಕತೆ ಮತ್ತು ಸ್ನೇಹದ ಭಾವವನ್ನು ಬೆಳೆಸುವದೇ ಈ ದಿನದ ಉದ್ದೇಶವಾಗಿದೆ. ನಗು ಎಲ್ಲರಿಗೂ ಆರೋಗ್ಯಕರ. ಇದು ವಿಶ್ವದ ಶ್ರೇಷ್ಠ ಔಷಧಿಗಳಲ್ಲಿ ಒಂದಾಗಿದೆ. ನಗು ಒಂದು ಕಲೆಯಾಗಿದೆ. ಜಗತ್ತನ್ನು ಬದುಕಲು ಉತ್ತಮ ಸ್ಥಳವನ್ನಾಗಿ ಮಾಡಲು ನಗು ಒಂದು ಸರಳ ಮಾರ್ಗವಾಗಿದೆ. ಈ ನಗು ಭಾಷೆ, ರಾಜ್ಯ, ದೇಶ, ಜಾತಿ, ಧರ್ಮಗಳನ್ನೆಲ್ಲವನ್ನೂ ಮೀರಿದ ಸಾರ್ವತ್ರಿಕ ಭಾಷೆಯಾಗಿದೆ. ನಿಜವಾದ ನಗು ನಮ್ಮ ಸ್ವಂತ ಚೈತನ್ಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗೇ, ನಮ್ಮ ಸುತ್ತಮುತ್ತಲಿನವರ ಮನಸ್ಸನ್ನು ಕೂಡ ಅರಳಿಸುತ್ತದೆ, ಸಂಬಂಧಗಳನ್ನು ಸರಿಪಡಿಸುತ್ತದೆ. ನಗು ಉದ್ವೇಗವನ್ನು ನಿವಾರಿಸಿ, ಅಪರಿಚಿತರ ನಡುವಿನ…

Read More

ಚಿಕ್ಕಗಲಗಲಿ & ಕಂಬಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಅಧಿಕಾರದಲ್ಲಿದ್ದಾಗ ನಾವು ಮಾಡುವ ಕೆಲಸಗಳನ್ನು ಜನ ಸ್ಮರಿಸುವಂತಿರಬೇಕು. ಆದರೆ, ಸಂಸದ ರಮೇಶ ಜಿಗಜಿಣಗಿ ಜಿಲ್ಲೆಯ ಜನ ನೆನಪಿಡುವ ಯಾವ ಕೆಲಸಗಳನ್ನೂ ಮಾಡಿಲ್ಲ ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಮತ್ತು ಕಂಬಾಗಿಯಲ್ಲಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಸಂಸದರಾಗಿ ಹೈದರಾಬಾದ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಿದರು. ಇಎಸ್ಐ ಆಸ್ಪತ್ರೆ ನಿರ್ಮಿಸಿದರು. ಪ್ರಕಾಶ ಹುಕ್ಕೇರಿ ಸಂಸದರಾಗಿ ಚಿಕ್ಕೋಡಿ ಮತಕ್ಷೇತ್ರದಲ್ಲಿ ಸವಳು- ಜವಳು ಬಗೆ ಹರಿಸುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಇದರಿಂದಾಗಿ ಜನ ಈಗಲೂ ಅವರನ್ನು ಸ್ಮರಿಸುತ್ತಾರೆ. ಇವರ ಅಭಿವೃದ್ಧಿ ಕಾರ್ಯಗಳನ್ನು ನೋಡಿಯಾದರೂ ಸಂಸದ ರಮೇಶ ಜಿಗಜಿಣಗಿ ವಿಜಯಪುರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಬೇಕಿತ್ತು. ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಂಸತ್ತಿಗೆ ಹೋಗಿ ಪ್ರಯೋಜನವಾದರೂ…

Read More

ವಿಜಯಪುರ: ಪ್ರಧಾನಿ ಮೋದಿ ಮತ್ತು ಸಂಸದ ಜಿಗಜಿಣಗಿ ಅವರಿಗೆ ಮತ ಕೇಳಲು ಮುಖ ಉಳಿಸಿಕೊಂಡಿಲ್ಲ. ಅವರಿಗೆ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ತಿಕೋಟಾ ತಾಲೂಕಿನ ಧನರ್ಗಿ ಮತ್ತು ಘೋಣಸಗಿ ಹಾಗೂ ವಿಜಯಪುರ ನಗರದ ಭೂತನಾಳ ತಾಂಡಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.ಪ್ರಧಾನಿ ಮೋದಿ ಮತ್ತು ಸಂಸದ ರಮೇಶ ಜಿಗಜಿಣಗಿ ಮತ ಕೇಳಲು ಯಾವುದೇ ಮುಖ ಉಳಿಸಿಕೊಂಡಿಲ್ಲ. ಚಿತ್ತೂ ಇಲ್ಲ‌, ಪಟ್ಟೂ ಇಲ್ಲ. ಎಲ್ಲ ಕಡೆ ಮೋದಿ ಮತ್ತು ಸಂಸದರ ವಿರೋಧಿ ಗಾಳಿ ಬೀಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈಗ ಎಲೆಕ್ಟ್ರಾಲ್ ಬಾಂಡ್ ಹಗರಣದ ಚರ್ಚೆ ವ್ಯಾಪಕವಾಗಿದ್ದು, ಜನಜಾಗೃತರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರದಲ್ಲಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಈಗ ಜನಮನಗೆದ್ದಿವೆ. ಹೀಗಾಗಿ ಮತದಾರರು…

Read More

ವಿಜಯಪುರ: ಪ್ರಧಾನಿ ಮೋದಿ ಮತ್ತು ಸಂಸದ ಜಿಗಜಿಣಗಿ ಅವರಿಗೆ ಮತ ಕೇಳಲು ಮುಖ ಉಳಿಸಿಕೊಂಡಿಲ್ಲ. ಅವರಿಗೆ ಮತ ಕೇಳುವ ನೈತಿಕತೆಯೇ ಇಲ್ಲ ಎಂದು ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ತಿಕೋಟಾ ತಾಲೂಕಿನ ಧನರ್ಗಿ ಮತ್ತು ಘೋಣಸಗಿ ಹಾಗೂ ವಿಜಯಪುರ ನಗರದ ಭೂತನಾಳ ತಾಂಡಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.ಪ್ರಧಾನಿ ಮೋದಿ ಮತ್ತು ಸಂಸದ ರಮೇಶ ಜಿಗಜಿಣಗಿ ಮತ ಕೇಳಲು ಯಾವುದೇ ಮುಖ ಉಳಿಸಿಕೊಂಡಿಲ್ಲ. ಚಿತ್ತೂ ಇಲ್ಲ‌, ಪಟ್ಟೂ ಇಲ್ಲ. ಎಲ್ಲ ಕಡೆ ಮೋದಿ ಮತ್ತು ಸಂಸದರ ವಿರೋಧಿ ಗಾಳಿ ಬೀಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈಗ ಎಲೆಕ್ಟ್ರಾಲ್ ಬಾಂಡ್ ಹಗರಣದ ಚರ್ಚೆ ವ್ಯಾಪಕವಾಗಿದ್ದು, ಜನಜಾಗೃತರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರದಲ್ಲಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಈಗ ಜನಮನಗೆದ್ದಿವೆ. ಹೀಗಾಗಿ ಮತದಾರರು…

Read More

ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪಂಚಮಸಾಲಿ ಸಮುದಾಯ | ಬೃಹತ್ ಚಿಂತನಾ ಸಮಾವೇಶ ಇಂಚಗೇರಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆಗಿರುವ ಅನ್ಯಾಯ ಸರಿದೂಗಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದು ಅಗತ್ಯವಾಗಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಇಲ್ಲಿ ಶನಿವಾರ ರಾತ್ರಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಕಳೆದ ಕೆಲ ವರ್ಷಗಳಿಂದ ನಮ್ಮ ಸಮಾಜ ತುಳಿತಕ್ಕೆ ಒಳಗಾಗಿದೆ. ನನಗೆ ಟಿಕೆಟ್ ನೀಡಿ ಶಾಸಕನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಪಕ್ಷದವರು ಅಧಿಕಾರದಲ್ಲಿದ್ದಾಗ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಲಿಲ್ಲ. ನಮ್ಮನ್ನು ಗೌರವಿಸಿದ್ದು, ಆತ್ಮಾಭಿಮಾನ ಹೆಚ್ಚಿಸಿದ್ದು ಕಾಂಗ್ರೆಸ್ ಪಕ್ಷ. ಹಾಗಾಗಿ ವಿದ್ಯಾವಂತ, ಸಜ್ಜನರಾಗಿರುವ ಅಭ್ಯರ್ಥಿ ಆಲಗೂರರಿಗೆ ಮತ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ಅವರಿಂದ ಎಲ್ಲ ಸಮಾಜದ ಜನರಿಗೆ ಒಳಿತಾಗಲಿದೆ ಎಂದು ಹೇಳಿದರು.ಬಿಜೆಪಿಯವರಿಗೆ ಸುಳ್ಳೇ ಆಧಾರ. ಜಿಗಜಿಣಗಿಯವರು ಸುಳ್ಳು ಆಪಾದನೆ ಮಾಡುವುದರಲ್ಲಿ ನಿಸ್ಸೀಮರು. ಮಾಡಿರುವ ಕೆಲಸ ಹೇಳದೇ ವಾಮ ಮಾರ್ಗದಲ್ಲಿ ಚುನಾವಣೆ ಎದುರಿಸುತ್ತ ಬಂದಿದ್ದಾರೆ. ಹಾಗಾಗಿ ಸಮಾಜ ಒಟ್ಟಾಗಿ ಈ ಸಲ…

Read More