Author: editor.udayarashmi@gmail.com

ವಿಜಯಪುರ: ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ ಮುಖ್ಯ ಎಂದು ಸತತವಾಗಿ ಬಿಜೆಪಿಗೆ ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯು ಮೇ.7 ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಮತದಾರರು ಬಿಜೆಪಿ ಅಭ್ಯರ್ಥಿಯಾಗಿರುವ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮತ ಹಾಕುವ ಮೂಲಕ ಜಾತಿಗಿಂತ ದೇಶದ ಹಿತವೇ ಮುಖ್ಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿ ಮಾದರಿಯಾಗಬೇಕು ಎಂದು ಬಿಜೆಪಿ ಜಿಲ್ಲಾ‌ ಮಾಧ್ಯಮ ಪ್ರಮುಖ ವಿಜಯ್ ಜೋಶಿ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ಚದ ಬಿಜೆಪಿ ಸರ್ಕಾರದಲ್ಲಿ ಗೂಡ್ಸ್ ರೈಲಿನಂತೆ ನಿಧಾನಗತಿಯಲ್ಲಿದ್ದ ದೇಶದ ಆರ್ಥಿಕ ಬೆಳವಣಿಗೆ ವಂದೇ ಭಾರತ್ ರೈಲಿನಷ್ಟೇ ವೇಗ ಪಡೆದುಕೊಂಡಿದೆ. ಎಲ್ಲದಕ್ಕೂ ಮೇಡ್ ಇನ್ ಚೈನಾ ಎನ್ನುತ್ತಿದ್ದವರನ್ನು ಹೊಡೆದೋಡಿಸಿ ಮೇಕ್ ಇನ್ ಇಂಡಿಯಾ ಎನ್ನುವಂತೆ ಮಾಡಿದ್ದಾರೆ.‌ ಪ್ರಭು ಶ್ರೀರಾಮನ ಅಸ್ತಿತ್ವ ಪ್ರಶ್ನಿಸುತ್ತಿದ್ದವರ ಬಾಯಲ್ಲೇ ಜೈ ಶ್ರೀರಾಮ ಎನ್ನುವಂತೆ…

Read More

ವಿಜಯಪುರ: ಎಸ್‌.ಎಂ.ವಿ.ಟಿ. ಬೆಂಗಳೂರು ಎಕ್ಸ್‌ ಪ್ರೆಸ್‌ ವಿಶೇಷ ರೈಲನ್ನು ಒಂದು ಟ್ರಿಪ್‌ ಓಡಿಸಲಿದೆ.ರೈಲು ಸಂಖ್ಯೆ 06231 ಎಸ್‌.ಎಂ.ವಿ.ಟಿ. ಬೆಂಗಳೂರು –ವಿಜಯಪುರ ಎಕ್ಸ್‌ ಪ್ರೆಸ್‌ ವಿಶೇಷ ರೈಲು ಎಸ್‌.ಎಂ.ವಿ.ಟಿ. ಬೆಂಗಳೂರಿನಿಂದ ದಿನಾಂಕ 06.05.2024ರಂದು 19:00 ಗಂಟೆಗೆ ಹೊರಡಲಿದ್ದು ವಿಜಯಪುರವನ್ನು ಮರುದಿನ ಬೆಳಿಗ್ಗೆ 10:30 ಗಂಟೆಗೆ ತಲುಪಲಿದೆ. ಮಾರ್ಗದಲ್ಲಿ ವಿವಿಧ ನಿಲ್ದಾಣಗಳಲ್ಲಿ ಈ ರೈಲಿನ ಆಗಮನ/ನಿರ್ಗಮನ ಸಮಯ ಈ ರೀತಿ ಇದೆ:ಚಿಕ್ಕ ಬಾಣಾವರ 19:40/19:42 ಗಂಟೆ; ತುಮಕೂರು -20:30/20:32 ಗಂಟೆ; ಅರಸೀಕೆರೆ- 22:05/22:10 ಗಂಟೆ; ಬೀರೂರು -22:50/22:52 ಗಂಟೆ; ಚಿಕ್ಕಜಾಜೂರು- 23:43/23:45 ಗಂಟೆ; ಚಿತ್ರದುರ್ಗ- 00:20/00:25 ಗಂಟೆ; ರಾಯದುರ್ಗ- 02:20/02:22 ಗಂಟೆ; ಬಳ್ಳಾರಿ ಕಂಟೋನ್ಮೆಂಟ್‌- 03:43/03:45 ಗಂಟೆ; ತೋರಣಗಲ್ಲು – 04:08/04:10 ಗಂಟೆ; ಹೊಸಪೇಟೆ- 04:45/04:50 ಗಂಟೆ; ಕೊಪ್ಪಳ- 05:18/05:20 ಗಂಟೆ; ಗದಗ- 06:08/06:10 ಗಂಟೆ; ಹೊಳೆಆಲೂರು- 06:53/06:55 ಗಂಟೆ; ಬಾದಾಮಿ- 07:18/07:20 ಗಂಟೆ; ಬಾಗಲಕೋಟೆ- 07:55/07:57 ಗಂಟೆ; ಆಲಮಟ್ಟಿ- 08:40/08:42 ಗಂಟೆ; ಬಸವನ ಬಾಗೇವಾಡಿ ರೋಡ್‌- 08:58/09:00 ಗಂಟೆ ಮತ್ತು ಇಬ್ರಾಹಿಂಪುರ- 09:28/09:30…

Read More

ಮರ್ಯಾದಾ ಹತ್ಯೆಯ ಈರ್ವರು ಆರೋಪಿಗಳಿಗೆ ಗಲ್ಲು! ವಿಜಯಪುರ: ಮರ್ಯಾದಾ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು ಉಳಿದ ಐದು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಸ್ಪೇಶಲ್ ಕೋರ್ಟ್ ಆದೇಶ ಹೊರಡಿಸಿದೆ.30.06.2017 ರಂದು ಒಂಬತ್ತು ತಿಂಗಳು ಗರ್ಭಿಣಿ ಯುವತಿಯನ್ನು ಅವಳ ಸಂಬಂಧಿಕರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದ ಮೊದಲ ಆರೋಪಿ ಇಬ್ರಾಹಿಂಸಾಬ ಮಹ್ಮದಸಾಬ ಅತ್ತಾರ ಮತ್ತು ಅಕ್ಬರ್ ಮಹ್ಮದಸಾಬ ಅತ್ತಾರ ಅವರಿಗೆ ಗಲ್ಲು ಶಿಕ್ಷೆ ಮತ್ತು ರೂ. ತಲಾ ರೂ. 49250 ದಂಡ ವಿಧಿಸಲಾಗಿದೆ. ಅಲ್ಲದೇ, ಈ ಪ್ರಕರಣದಲ್ಲಿ ಶಾಮೀಲಾಗಿರುವ ರಮಜಾನಬಿ ಮಹ್ಮದಸಾಬ ಅತ್ತಾರ, ದಾವಲಬಿ ಉರ್ಫ್ ಸಲ್ಮಾ ಬಂದೇನವಾಜ ಜಮಾದಾರ, ಅಜಮಾ ಜಿಲಾನಿ ದಖನಿ, ಜಿಲಾನಿ ಅಬ್ದುಲಖಾದರ ದಖನಿ ಮತ್ತು ದಾವಲಬಿ ಸುಭಾನ ದನ್ನೂರ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 15000 ದಂಡ ವಿಧಿಸಿದೆ ಎಂದು ಸರಕಾರಿ ಅಭಿಯೋಜಕ ಎಸ್. ಎಸ್. ಲೋಕೂರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಘಟನೆ ಹಿನ್ನೆಲೆ: ವಿಜಯಪುರ ಜಿಲ್ಲೆಯ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ-ಗದಗ ಭಾರತೀಯ ಶಾಸ್ತ್ರೀಯ ನೃತ್ಯ.. ಒಂದು ಅವಲೋಕನ ಆ ಒಂದು ಹಾಲ್ನಲ್ಲಿ ಕುಳಿತಿದ್ದ ಎಲ್ಲ ಮಕ್ಕಳು, ಹಿರಿಯರಾದಿಯಾಗಿ ಸಂಗೀತದ ತಾಳಕ್ಕೆ ತಕ್ಕಂತೆ ತಮ್ಮ ತಲೆಯನ್ನು ಕುಣಿಸುತ್ತಾ ಕಾಲ್ ಬೆರಳನ್ನು ನೆಲಕ್ಕೆ ಕುಟ್ಟುತ್ತಿದ್ದರು. ಇದುವೇ ನೃತ್ಯದ ಮೂಲನೃತ್ಯ ಜೀವನದ ಒಂದು ಭಾಗ, ಜೀವನವೇ ಆಗಿದೆ. ನಮ್ಮೆಲ್ಲಾ ನೋವು ನಿರಾಸೆಗಳನ್ನು ಮರೆಯಲು ಹುಮ್ಮಸ್ಸನ್ನು ಪಡೆಯಲು ಮತ್ತೆ ಜೀವನ್ಮುಖತೆಯನ್ನು ಹೊಂದಲು ನೃತ್ಯವು ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತದೆ. ಅಂತಹ ನೃತ್ಯ ವನ್ನು ಪ್ರಸಿದ್ಧಿಗೊಳಿಸಲು ತಮ್ಮ ತಮ್ಮ ಸುರಕ್ಷತಾ ವಲಯಗಳಿಂದ ಹೊರಬಂದು ಸಾಕಷ್ಟು ಕಷ್ಟನಿಷ್ಠುರಗಳ ನಡುವೆ ಭಾರತೀಯ ಶಾಸ್ತ್ರೀಯ ನೃತ್ಯವನ್ನು ಜಗತ್ತಿಗೆ ಪರಿಚಯಿಸಿದವರು.ಪಾಶ್ಚಾತ್ಯ ವೇಷ ಧರಿಸಿದ ಹೆಣ್ಣು ಮಗಳು ತಾನು ಭೇಟಿ ಕೊಡಲು ಬಯಸಿದ ಕ್ಲಬ್ ಬಾಗಿಲು ಮುಚ್ಚಿದ್ದನ್ನು ಕಂಡು ಪಕ್ಕದಲ್ಲಿರುವ ಸಭಾಂಗಣಕ್ಕೆ ಬಂದು ಕುಳಿತಳು. ಅಲ್ಲಿ ನಡೆಯುತ್ತಿದ್ದ ನೃತ್ಯವನ್ನು ಕಂಡು ಪರವಶಳಾದ ಆಕೆ ನೃತ್ಯ ಮುಗಿಯುತ್ತಿದ್ದಂತೆ ಗ್ರೀನ್ ರೂಮಿಗೆ ಹೋಗಿ ಆ ನೃತ್ಯವನ್ನು ಮಾಡುತ್ತಿದ್ದ ತಂಡದ ಮಹಾ ಗುರುವಿನ ಬಳಿ ಹೋಗಿ…

Read More

ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹೈದರಾಬಾದ್: ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ.ಚುನಾವಣಾ ರ್ಯಾಲಿಯಲ್ಲಿ ಮಕ್ಕಳನ್ನು ತೊಡಗಿಸಿಕೊಂಡ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅವರ ಸಂಪುಟ ಸಹೋದ್ಯೋಗಿ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ, ಗೋಶಾಮಹಲ್ ಶಾಸಕ ಟಿ. ರಾಜಾ ಸಿಂಗ್, ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮತ್ತು ಹೈದರಾಬಾದ್‌ನ ಬಿಜೆಪಿ ನಾಯಕ ಟಿ. ಯಮನ್ ಸಿಂಗ್ ವಿರುದ್ಧ ಹೈದರಾಬಾದ್ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಬಿಜೆಪಿ ಚುನಾವಣಾ ಪ್ರಚಾರದ ಪೋಟೋ ವೈರಲ್‌ ಆಗಿದೆ. ಅದರಲ್ಲಿ ಮಕ್ಕಳು ಬಿಜೆಪಿ ಫಲಕಗಳು ಮತ್ತು ಬಲೂನ್‌ಗಳನ್ನು ಹಿಡಿದಿದ್ದರು ಮತ್ತು ಸಚಿವರು ಮತ್ತು ಇತರ ಬಿಜೆಪಿ ಪದಾಧಿಕಾರಿಗಳೊಂದಿಗೆ ವೇದಿಕೆಯಲ್ಲಿ ನಿಂತುಕೊಂಡಿದ್ದಾರೆ.ಮೊಘಲ್‌ಪುರ…

Read More

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದ್ದಾರೆ.“ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ” ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ, ಈ ಮನವಿಯನ್ನು ಪುರಸ್ಕರಿಸದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಹಾಗೂ ವಿಶೇಷ ತನಿಖಾ ತಂಡದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದ ಮಂಡನೆ ಮಾಡಿದರು.

Read More

ವಿಜಯಪುರ: ೨೦೨೪ರ ಚುನಾವಣೆಯ ವಿಜಯಪುರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ರಮೇಶ ಜಿಗಜಿಣಗಿಯವರಿಗೆ ಮಾದಿಗ ಸಮಾಜದ ಬೆಂಬಲಾರ್ಥಕವಾಗಿ ಇಂದು ನಗರದ ಬಿಜೆಪಿ ಪ್ರಚಾರ ಕಚೇರಿಯಲ್ಲಿ ಮಾದಿಗ ಸಮಾಜದ ಬೆಂಬಲವನ್ನು ಸೂಚಿಸಲಾಯಿತು.ಈ ಸಮಯದಲ್ಲಿ ಬಿಜೆಪಿ ಎಸ್.ಸಿ.ಮೋರ್ಚಾ ನಗರ ಮಂಡಲ ಕಾರ್ಯದರ್ಶಿ ಹಾಗೂ ಕರ್ನಾಟಕ ಮಾದಿಗ ಜನಸಂಘ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಸದಾನಂದ ಗುನ್ನಾಪೂರ ಮಾತನಾಡಿ, ಕಾಂಗ್ರೆಸ್ ಸರಕಾರವು ತನ್ನ ಅಧಿಕಾರ ಅವಧಿಯಲ್ಲಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದು ಬಿಟ್ಟರೆ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ, ಕಾಂಗ್ರೆಸ್ ಅವಧಿಯಲ್ಲಿ ಆರ್ಥಿಕ ಮಟ್ಟವು ೧೪ನೇ ಮಟ್ಟಕ್ಕೆ ಇದ್ದಿದ್ದು, ಸದ್ಯಕ್ಕೆ ಬಿಜೆಪಿ ಸರಕಾರದಲ್ಲಿ ೪ನೇ ಮಟ್ಟಕ್ಕೆ ಬಂದಿದೆ. ಕಾಂಗ್ರೆಸ್ ತನ್ನ ಅಧಿಕಾರಕ್ಕಾಗಿ ತುರ್ತು ಪರಿಸ್ಥಿತಿ ಹೇರಿ ಅಧಿಕಾರ ಶಾಹಿ ಧೋರಣೆಯನ್ನು ತೋರಿದ್ದು ಬಿಟ್ಟರೆ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ ಎಂದರು.ಕರ್ನಾಟಕ ಮಾದಿಗ ಜನಸಂಘ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಪರಶುರಾಮ ರೋಣಿಹಾಳ ಮಾತನಾಡಿ, ಬಿಜೆಪಿಯು ತನ್ನ ೧೦ ವರ್ಷಗಳ ಅಧಿಕಾರಾವಧಿಯಲ್ಲಿ ನಿರ್ಗತಿಕರಿಗೆ ಮನೆ, ಸುಸಜ್ಜಿತ ರಸ್ತೆ ಸುಧಾರಣೆ,…

Read More

ಬಾಗಲಕೋಟ: ಬಾಗಲಕೋಟೆ ಅಭಿವೃದ್ಧಿಗೆ ಈ ಬಾರಿ ಯುವಕನಾದ ನನಗೆ ಬಹುಮತದಿಂದ ಆರಿಸಿ ತರುವ ಮೂಲಕ ಅಭಿವೃದ್ಧಿಗೆ ನಾಂದಿಹಾಡಬೇಕೆಂದು ಪಕ್ಷೇತರ ಅಭ್ಯರ್ಥಿ ದತ್ತಾತ್ರೇಯ ತಾವರೆ ಹೇಳಿದರು ನಗರದಲ್ಲಿ ಹಮ್ಮಿಕೊ೦ಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ನಾನು ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲೆಯ ಜನತೆಯ ಆಶೀರ್ವಾದ ಹಾಗೂ ಬೆ೦ಬಲದೊ೦ದಿಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಾನುಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮೊಟ್ಟ ಮೊದಲಿಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಅವರ ಭವಿಷ್ಯ ನಿರ್ಮಾಣದ ಹಿತದೃಷ್ಟಿಯಿಂದ ವಿಜಯಪುರ ಬಾಗಲಕೋಟ ಅವಳಿ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾದ ಕಲ್ಯಾಣ ಕರ್ನಾಟಕ ೩೭೧ ಜೆ ಮೀಸಲಾತಿ ಕಲ್ಪಿಸುವಲ್ಲಿ ನಿರಂತರ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ, ರಸಗೊಬ್ಬರ, ಬಿತ್ತನೆ ಬೀಜ, ರೈತರ ದಾರಿ ಸಮಸ್ಯೆ ಸೇರಿದ೦ತೆ ಕೃಷಿ ಕಾಯಕಕ್ಕೆಅನುಕೂಲವಾಗುವ ಸಕಲ ಸೌಲಭ್ಯ ಕಲ್ಪಿಸಲು ಪ್ರಯತ್ನಮಾಡುವೆ. ಪೌರ ಕಾರ್ಮಿಕರನ್ನು ಖಾಯಂ ನೌಕರರನ್ನಾಗಿಸಲು ಪ್ರಯತ್ನ ಮಾಡುತ್ತೇನೆ. ನಿರ್ಗತಿಕರಿಗೆ ವೃದ್ಧರಿಗೆ ಸರ್ಕಾರದಿಂದ ಜಿಲ್ಲೆಯಲ್ಲಿ ವೃದ್ಧಾಶ್ರಮ, ಅನಾಥಾಶ್ರಮ,…

Read More

ವಿಜಯಪುರ: ರಾಜ್ಯದಲ್ಲಿ ಅಹಿಂದ ವರ್ಗದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕೈ ಬಲಪಡಿಸಲು ಜಿಲ್ಲೆಯ ಅಹಿಂತ ವರ್ಗದ ಜನತೆ ಈ ಸಾರಿ ಜಿಲ್ಲಾ ಅದ್ಯಕ್ಷರು, ತಾಲೂಕಾ ಅಧ್ಯಕ್ಷರು ಹಾಗೂ ಅಹಿಂದ ವರ್ಗದ ಎಲ್ಲ ಸಂಘಟನೆಗಳು ಕಾರ್ಯನಿರತರಾಗಿದ್ದಾರೆ. ಅಹಿಂದ ಬಹುಸಂಖ್ಯಾತರ ವರ್ಗದವರಾದ ರಾಜು ಆಲಗೂರ್ ರವರನ್ನು ಬೆಂಬಲಿಸುವುದಾಗಿ ತೀರ್ಮಾನಿಸಲಾಗಿದೆ.ಕಳೆದ ೭೦ ವರ್ಷಗಳಿಂದ ಅಹಿಂದ ವರ್ಗವು ತುಳಿತಕ್ಕೆ ಒಳಪಡುತ್ತಿದ್ದು, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಹಿಂದ ವರ್ಗ ಬೆಂಬಲಿಸಬೇಕೆಂದು ಅಹಿಂದ ರಾಜ್ಯ ಅದ್ಯಕ್ಷರಾದ ಪ್ರಭುಲಿಂಗ ದೊಡನಿ ರವರು ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಅಹಿಂದ ವರ್ಗದ ಜನತೆಯನ್ನು ಸಂಘಟಿಸುತ್ತಿದ್ದಾರೆ. ಅಹಿಂದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಯಾಕೂಬ ಜತ್ತಿ ಎಮ್.ಸಿ. ಮುಲ್ಲಾ, ವಿಠ್ಠಲಗೌಡ ಬಿರಾದಾರ (ಗುಗ್ಗದಡ್ಡಿ), ಫಯಾಜ ಕಲಾದಗಿ, ಶ್ರೀಶೈಲ ಕೌಲಗಿ, ಪ್ರಕಾಶ ಗುಡಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More