Author: editor.udayarashmi@gmail.com

ವಿಜಯಪುರ: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಅಭ್ಯರ್ಥಿಯಾದ ರಮೇಶ ಜಿಗಜಿಣಗಿಯವರ ಪರವಾಗಿ ಇಂದು ನಗರ ಶಾಸಕರ ಚಿರಂಜೀವಿಯಾದ ರಾಮನಗೌಡ ಪಾಟೀಲ ಅವರ ನೇತೃತ್ವದಲ್ಲಿ ಚುನಾವಣಾ ಪ್ರಚಾರವನ್ನು ಶಿವಶಕ್ತಿ ನಗರ, ಪಾಣಿ ನಗರ, ಸರಸ್ವತಿ ನಗರ, ಸಾಯಿಸಮರ್ಥ ನಗರ, ರಾಜರತ್ನ ಕಾಲನಿ, ಮಿಣಿಮಾದರ ಓಣಿ, ರಜಪೂತ ಗಲ್ಲಿಯಲ್ಲಿ ಬಿರುಸಿನ ಪ್ರಚಾರ ಹಮ್ಮಿಕೊಳ್ಳಲಾಗಿದೆ.ಈ ಸಮಯದಲ್ಲಿ ರಾಮನಗೌಡ ಪಾಟೀಲ ರವರು ಮಾತನಾಡಿದ ೨೦೧೪ ಮತ್ತು ೨೦೧೯ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೇಶದ ಜನತೆ ಪೂರ್ಣ ಬಹುಮತ ನೀಡಿದ್ದು, ಬಿಜೆಪಿ ೧೦ ವರ್ಷಗಳಿಂದ ಪೂರ್ಣ ಬಹುಮತದ ಸರ್ಕಾರ ನಡೆಸುತ್ತಿದೆ, ಆದರೆ ಒಂದು ಬಾರಿಯೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ನಂತೆ ತುರ್ತು ಪರಿಸ್ಥಿತಿ ಘೋಷಿಸಿಲ್ಲ ಅಥವಾ ಅವಧಿಯನ್ನು ವಿಸ್ತರಿಸಿಲ್ಲ. ಅದರ ಬದಲಿಗೆ ಮೋದಿ ನೇತೃತ್ವದ ಮತ್ತು ಅಮಿತ್ ಶಾ ಅವರ ಕೌಶಲ್ಯಪೂರ್ಣ ಮಾರ್ಗದರ್ಶನದ ಈ ಸರ್ಕಾರ ಪೂರ್ಣ ಬಹುಮತವನ್ನು ೩೭೦ ನೇ ವಿಧಿಯನ್ನು ತೆಗೆದುಹಾಕಲು, ತ್ರಿವಳಿ ತಲಾಖ್ ರದ್ದುಗೊಳಿಸಲು, ಬ್ರಿಟಿಷರು ಮಾಡಿದ ಕಾನೂನುಗಳನ್ನು ಬದಲಾಯಿಸಲು, ಕರೋನಾ ಸಾಂಕ್ರಾಮಿಕ ಸಮಯದಲ್ಲಿ…

Read More

ಚಿಮ್ಮಡ: ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆಯ ಹೊಡೆತಕ್ಕೆ ನಲುಗುತಿದ್ದ ದೇಶವನ್ನು ನರೆಂದ್ರ ಮೋದಿಯವರು ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿಗೆ ತಂದು ನಿಲ್ಲಿಸಿದ್ದು ಅಂಥಹ ವಿಶ್ವ ನಾಯಕನನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಪಿ.ಸಿ. ಗದ್ದಿಗೌಡರಿಗೆ ಮತನೀಡಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಗ್ರಾಮದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಬ್ರಹತ್ ರೋಡಷೋನಲ್ಲಿ ಭಾಗವಹಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು. ರಾಮಮಂದಿರ ನಿರ್ಮಾಣಕ್ಕೆ ಪದೇ ಪದೇ ತೊಡಕು ತಂದಿಡುತಿದ್ದ ಕಾಂಗ್ರೆಸ್, ಮೋದಿ ಪ್ರಧಾನಿಯಾಗುತಿದ್ದಂತೆಯೇ ಮಂದಿರ ನಿರ್ಮಾಣದೊಂದಿಗೆ ದೇಶದಲ್ಲಿ ಅಭಿವೃದ್ದಿ ಪರ್ವವೇ ಪ್ರಾರಂಭವಾಗಿದ್ದು ಯಾವುದೇ ಜಾತಿ ಧರ್ಮ ನೋಡದೇ ಅಭಿವೃದ್ದಿಯೊಂದೇ ಗುರಿಯಾಗಿಸಿಕೊಂಡಿರುವ ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಮತ ನೀಡುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದರು.ಶಾಸಕ ಸಿದ್ದು ಸವದಿ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಆಸ್ತಿನ್ನು ಸರ್ವೇ ಮಾಡಿಸಿ ಬಹು ಸಂಖ್ಯಾತರು ಹಗಲು ರಾತ್ರಿ ದುಡಿದು ಗಳಿಸಿದ ಶೇ. ೫೫ ಆಸ್ತಿಯನ್ನು ರೋಹಿಂಗ್ಯಾ ಮುಸ್ಲೀಮರಿಗೆ ಹಂಚಲಿದ್ದಾರೆ,ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರಕಾರ ಬಡವರಿಂದ ೧೦ ಸಾವಿರ ನಾನಾರೂಪದಲ್ಲಿ…

Read More

ಝಳಕಿ: ನರೇಂದ್ರ ಮೋದಿ ಅವರ ನಾಯಕತ್ವ ದೇಶದ ಭದ್ರತೆ ವಿಚಾರದಲ್ಲಿ ಅನಿವಾರ್ಯವಾಗಿದೆ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು,ವಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಗೆಲ್ಲಿಸಿ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಹೇಳಿದರು.ಸಮೀಪದ ಜೇವೂರ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಹಾಗೂ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ನಡೆ,ನುಡಿ ಮತ್ತು ಅವರ ತಾಯಿ ಗುಣ ಹೊಂದಿದವರು ಅವರು ಸಕಾರಾತ್ಮಕ ಗುಣದವರು ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.ಪ್ರತಿ ಮನೆಗಳಲ್ಲಿ ಸಿಕ್ಕ…

Read More

ಇಂಡಿ: ತಾಲೂಕ ಆಡಳಿತ ಇಂಡಿ , ತಾಲೂಕ ಸ್ವೀಪ್ ಸಮಿತಿ ಇಂಡಿ ಮತ್ತು ಪುರ ಸಭೆ ಇಂಡಿ ಸಹಯೋಗದೊಂದಿಗೆ ವಿಶೇಷ ಚೇತನರಿಂದ ಇಂಧನ ಚಾರಿತ ವಾಹನಗಳ ಬ್ಯೆಕ್ ರ‍್ಯಾಲಿಯು ನಗರದ ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ನಿಲಗಂಗಾ ಬಬಲಾದ ಮತ್ತು ಉಪ ವಿಭಾಗಾಧಿಕಾರಿಗಳು ಅಭಿದ್ ಗದ್ಯಾಳರವರು ಹಸಿರು ನಿಶಾನೆ ತೋರಿಸುವವರ ಮೂಲಕ ಚಾಲನೆ ನೀಡಿದರು.ಅಂಬೇಡ್ಕರ್ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಕೆ ಇ ಬಿ, ಸರ್ಕಾರಿ ತಾಲೂಕ ಆಸ್ಪತ್ರೆ, ಬಸವೇಶ್ವರ , ಅಂಬೇಡ್ಕರ್ , ಮಹಾವೀರ್ ಸರ್ಕಲ್, ಪೊಲೀಸ್ ಸ್ಟೇಷನ್ ಮಾರ್ಗವಾಗಿ ತಾಪಂ ಕಾರ್ಯಾಲಯದಲ್ಲಿ ಮುಕ್ತಾಯಗೊಳ್ಳಲಾಯಿತು ಸುಮಾರು ೨ ಕಿಲೋ ಮೀಟರ್ ಬೈಕ್ ರ‍್ಯಾಲಿ ಮಾಡಲಾಯಿತು.ಹಿರೇರೂಗಿ ಮತ್ತು ಬಳ್ಳೊಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ಬಬಲಾದ ರವರು ಸುಮಾರು ೭೦ ಕ್ಕೂ ಹೆಚ್ಚು ತ್ರಿ ಚಕ್ರ ವಾಹನಗಳ ಸವಾರರರಿಗೆ ಹಾಗೂ ಅವರ ಜೊತೆ ಕುಳಿತಿರುವ ಒಟ್ಟು ೧೫೦ ಕ್ಕೂ ನಾಗರಿಕರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.ಜಿಲ್ಲಾ ವೀಕಲ…

Read More

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಹಿರೇಮಠದಲ್ಲಿ ಮೇ.೦೫ ರಿಂದ ೧೨ರವರೆಗೆ ಶ್ರೀ ಜಗದ್ಗುರು ದಾರುಕಾಚಾರ್ಯ ಜಾತ್ರಾ ಮಹೋತ್ಸವ, ಬಸವ ಮಹಾಪುರಾಣ ಹಾಗೂ ಲಿಂ.ಪೂಜ್ಯ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ೧೧೦ನೆಯ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಸಂಚಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೇ ೦೫ರಂದು ಜರುಗಲಿರುವ ಕನ್ನೊಳ್ಳಿಯ ಶ್ರೀ ಸಿದ್ದಲಿಂಗ ಜ್ಞಾನಜ್ಯೋತಿ ವಿದ್ಯಾಪ್ರಸಾರ ಸಂಘದ ಅಡಿಯಲ್ಲಿ ನೂತನವಾಗಿ ಪ್ರಾರಂಭವಾಗುವ ಮಾತೃಶ್ರೀ ಬಸಲಿಂಗಮ್ಮ ಬಾಳಪ್ಪ ಭೂಸನೂರ ಕಲಾ, ವಾಣಿಜ್ಯ ಪಪೂ ಕಾಲೇಜಿನ ಉದ್ಘಾಟನಾ ಸಮಾರಂಭದ ಪಾವನ ಸಾನಿಧ್ಯವನ್ನು ಶ್ರೀಶೈಲ ಪೀಠದ ಶ್ರೀಶ್ರೀಶ್ರೀ ೧೦೦೮ ಜಗದ್ಗುರು ಡಾ.ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳ ಅವರು ವಹಿಸಿಲಿದ್ದಾರೆ. ಸಮ್ಮುಖವನ್ನು ಬಂಥನಾಳ ವೃಷಭಲಿಂಗ ಮಹಾಸ್ವಾಮಿಗಳು, ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಉಪದೇಶಾಮೃತವನ್ನು ಕೊಣ್ಣೂರು ಹೊರಗಿನಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಗುಣದಾಳ ವಿವೇಕಾನಂದ ದೇವರು ನೀಡುವರು. ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಿಕೊಳ್ಳಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಶಾಸಕ ರಮೇಶ ಭೂಸನೂರ ನೇರವೇರಿಸುವರು. ಮುಖ್ಯ ಅತಿಥಿಗಳಾಗಿ…

Read More

ಸಿಂದಗಿ: ಬಡತನ ನಿರ್ಮೂಲನೆ ನುಡಿ ಕಾಂಗ್ರೆಸ್ ಪಕ್ಷದ್ದಾದರೇ ಬಡವರನ್ನೇ ನಿರ್ಮೂಲನೆ ಮಾಡುವುದು ಬಿಜೆಪಿಯ ಗುರಿಯಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು.ಪಟ್ಟಣದ ೨ನೆಯ ವಾರ್ಡಿನಲ್ಲಿ ಕಾಂಗ್ರೇಸ್ ಮುಖಂಡ ರಾಜು ಕೂಚಬಾಳ ಹಮ್ಮಿಕೊಂಡ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪಚುನಾವಣೆಯ ಸಂದರ್ಭದಲ್ಲಿ ನಾನು ಈ ಕಾಲೋನಿಗೆ ನಿವಾಸಿಗಳ ಕಷ್ಟಗಳನ್ನು ನಾನು ಆಲಿಸಿ ಹೋಗಿದ್ದೆ. ನಮ್ಮ ಪಕ್ಷ ೫ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ. ಪ್ರಸ್ತುತ ವಾಸವಿರುವ ೮ನೂರು ಕುಟುಂಬಗಳಿಗೂ ಸುಸಜ್ಜಿತ ಮನೆ ನಿರ್ಮಿಸಿಕೊಡುವುದರಲ್ಲಿ ಶ್ರಮವಹಿಸುವೆ.ಈ ವೇಳೆ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿದರು. ಈ ವೇಳೆ ರಾಜು ಕೂಚಬಾಳ, ಕೆಪಿಸಿಸಿ ಸಂಯೋಜಕಿ ರುಕ್ಷನಾ ಉಸ್ತಾದ, ರಮೇಶ ಗುಬ್ಬೇವಾಡ, ಹಣಮಂತ ಸುಣಗಾರ, ರಾಜಶೇಖರ ಚೌರ, ಶರಣಪ್ಪ ಸುಲ್ಪಿ, ಶರಣಗೌಡ ಪಾಟೀಲ, ಗೋಲ್ಲಾಳ ಬಂಕಲಗಿ, ಅಂಬಿಕಾ ಪಾಟೀಲ, ಭಾರತಿ ಹೊಸಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More

ಇಂಡಿ: ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಸರ್ವಸಮುದಾಯದ ಮೇಲೆ ಅಪಾರ ಪ್ರೀತಿ,ಕಾಳಜಿ ಹೊಂದಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ದಿಯ ಕನಸು ಹೊತ್ತಿರುವ ಅವರಿಗೆ ಜಿಲ್ಲೆಯ ಎಲ್ಲ ಸಮುದಾಯದವರು ಬೆಂಬಲ ನೀಡುವುದರ ಮೂಲಕ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗುತ್ತಾರೆ.ತಾಲೂಕಿನಲ್ಲಿ ಮುಸ್ಲೀಮ ಸಮುದಾಯದ ಹಲವು ಜನರಿಗೆ ಚಿರಪರಿಚಿತರಾಗಿರುವ ಅವರಿಗೆ ಮುಸ್ಲೀಮ ಸಮುದಾಯದ ಬಹುತೇಕ ಮತಗಳು ಲಭಿಸಲಿವೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೊರ್ಚಾ ತಾಲೂಕು ಉಪಾಧ್ಯಕ್ಷ ಸಿಕಂದರ ಬೊರಾಮಣಿ ಹೇಳಿದರು.ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಜಿಲ್ಲೆಯಲ್ಲಿ ಸರ್ವಸಮುದಾಯದವರು ಶಾಂತಿಯುತವಾಗಿ,ಅನೋನ್ಯತೆಯಿಂದ ಇರಬೇಕಾದರೆ ಅದಕ್ಕೆ ಕಾರಣ ರಮೇಶ ಜಿಗಜಿಣಗಿ ಅವರು ಹೇಳಿದರು.ಕಾಂಗ್ರೆಸ್‌ ಪಕ್ಷ ಮುಸ್ಲೀಮ ಸಮುದಾಯವನ್ನು ಕೇವಲ ಮತಕ್ಕಾಗಿ ಬಳಕೆ ಮಾಡಿಕೊಂಡು, ಅವರ ಅಭಿವೃದ್ದಿಗಾಗಿ ಕಿಂಚತ್ತೂ ಚಿಂತನೆ ಮಾಡಿರುವುದಿಲ್ಲ. ರಮೇಶ ಜಿಗಜಿಣಗಿ ಅವರು ಸಭ್ಯ, ಸರಳ, ಸೌಜನ್ಯಯುತ ರಾಜಕಾರಣಿಯಾಗಿದ್ದು, ರಾಜಕೀಯ ಮುತ್ಸದ್ದಿಯಾಗಿ,ಅಜಾತಶತ್ರುವಾಗಿ ಜಿಲ್ಲೆ,ನಾಡಿನಲ್ಲಿ ರಾಜಕಾರಣ ಮಾಡುತ್ತಿದ್ದು, ಅವರ ಗೆಲುವು ನಿಶ್ಚೀತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ಇಂಡಿ: ತಾಲೂಕಿನ ಹಾಲುಮತ ಸಮಾಜ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಲಾಗಿದೆ. ಹಂಜಗಿಯಲ್ಲಿ ನಡೆದ ಸಮಾಜದ ಸಭೆಯಲ್ಲಿ ತಾಲೂಕಿನ ಎಲ್ಲ ಹಾಲುಮತ ಸಮಾಜದವರು ಒಗ್ಗಟ್ಟು ಪ್ರದರ್ಶಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲ ಪಡಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದರ ಮೂಲಕ ಬೆಂಬಲ ಸೂಚಿಸಲು ತೀರ್ಮಾನಿಸಲಾಗಿದೆ ಎಂದು ಹಾಲುಮತ ಸಮಾಜದ ತಾಲೂಕು ಮುಖಂಡ ಜಟ್ಟೆಪ್ಪ ರವಳಿ ಹೇಳಿದರು.ಅವರು ತಾಲೂಕಿನ ಹಂಜಗಿ ಗ್ರಾಮದಲ್ಲಿ ಹಾಲುಮತ ಸಮಾಜದ ಮುಖಂಡರ ಒಗ್ಗಟ್ಟು ಪ್ರದರ್ಶನ ನಂತರ ನಡೆದ ಸಭೆಯಲ್ಲಿ ಮಾತನಾಡಿದರು.ಹಾಲುಮತ ಸಮಾಜದ ನಾಯಕ ಸಿದ್ದರಾಮಯ್ಯನವರನ್ನು ಜೆಡಿಎಸ್‌ ಪಕ್ಷ ಹೊರಹಾಕಿದ ಮೇಲೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ರಾಜಕೀಯವಾಗಿ ಬೆಳೆಸಿದ್ದು ಅಲ್ಲದೆ,ರಾಜ್ಯದ ಎರಡು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಕಾಂಗ್ರೆಸ್‌ ಪಕ್ಷ,ಜೆಡಿಎಸ್‌ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯನವರನ್ನು ಕಠಿಣವಾಗಿ ನಡೆಸಿಕೊಂಡಿದ್ದು, ಅವರನ್ನು ಪ್ರೀತಿಯಿಂದ ಬರಮಾಡಿಕೊಂಡಿದ್ದು ಕಾಂಗ್ರೆಸ್‌ ಪಕ್ಷ ಎಂದು ಹೇಳಿದ ಅವರು, ಹಾಲುಮತ ಸಮಾಜದ ಇನ್ನೊಬ್ಬ ನಾಯಕನಾದ ಕೆ.ಎಸ್‌.ಈಶ್ವರಪ್ಪನವರಿಗೆ ಕಳೆದ ವಿಧಾನಸಭೆ ಚುನಾವಣೆ ಹಾಗೂ ಸಧ್ಯದ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್‌ ನೀಡದೇ…

Read More

ಇಂಡಿ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಭಾಜಪ ಕಾರ್ಯಕರ್ತರು ಶುಕ್ರವಾರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಕೇಂದ್ರ ಸರಕಾರದ ಸಾಧನೆಗಳ ಕರಪತ್ರವನ್ನು ವಿತರಿಸಿ ಮತಯಾಚನೆ ಮಾಡಿದರು.ಈ ಸದಂದರ್ಭದಲ್ಲಿ ಭಾಜಪ ಮುಖಂಡರಾದ ಅನೀಲ ಜಮಾದಾರ ಮಾತನಾಡಿ, ಮೇ.೭ ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಸುಭದ್ರ ದೇಶ ಕಟ್ಟುವಲ್ಲಿ ನಾವು-ನೀವೆಲ್ಲ ಕೈ ಜೋಡಿಸೋಣ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ಅವರಿಗೆ ಮತದಾನ ಮಾಡೋಣ ಎಂದರು.ಸ್ಥಳೀಯ ಕಾರ್ಯಕರ್ತರಾದ ಅಶೋಕ ಬಳಬಟ್ಟಿ ಮಾಧವರಾವ ಪವಾರ ಮಾತನಾಡಿ, ಬಿಜೆಪಿ ಸರಕಾರ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿಗೆ ಯಾವುದೇ ಪೊಳ್ಳು ಗ್ಯಾರೆಂಟಿಗಳಿಗೆ ಕಿವಿಗೊಡದೆ, ದೇಶದ ಉಳಿವಿಗಾಗಿ ನಾವೆಲ್ಲರೂ ಕಡ್ಡಾಯವಾಗಿ ಬಿಜೆಪಿಗೆ ಮತದಾನ ಮಾಡೋಣ ಎಂದರು.ಭೀಮಾಶಂಕರ ಆಳೂರ, ಶ್ರೀಶೈಲ ಸೀತಿಮನಿ, ರಾಜಕುಮಾರ ಜಾಧವ, ಪ್ರಭು ಜಾಧವ, ಪ್ರಭಾಕರ ವಾಲೀಕಾರ, ಗೋಪಾಲ ಬೆನಕನಳ್ಳಿ, ನಿಂಗಪ್ಪ ಹೂಗಾರ, ರಸೂಲ್‌ಪಟೇಲ್ ಮಸಳಿ ಸೇರಿದಂತೆ ಇನ್ನಿತರರು ಇದ್ದರು.

Read More

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದರು.ಲೋಕಸಭಾ ಚುನಾವಣೆ ಹಿನ್ನೆಲೆ‌ ಅವರು ಬಿಜೆಪಿ‌‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ನಗರದ ಡೋಹರ ಗಲ್ಲಿ‌ ಹಾಗೂ ಅಗಸರ ಗಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಬಿಜೆಪಿ ಪರ ಮತಯಾಚಿಸಿದರು. ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅತ್ಯುತ್ಸಾಹದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಮ್ಮ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಕಳೆದ ಅವಧಿಗಿಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಕಳೆದ ಹತ್ತು ವರ್ಷಗಳ ಮೋದಿಯವರ ಆಡಳಿತದಲ್ಲಿ ಇಡಿ ವಿಶ್ವವೇ ತಿರುಗಿ ನೋಡುವಂತೆ ದೇಶದಲ್ಲಾಗಿರುವ ಬದಲಾವಣೆ, ಅಭಿವೃದ್ಧಿ ಗಮನಿಸಿರುವ ಜನ ಮೋದಿ‌ ಆಡಳಿತ ಮೆಚ್ಚಿಕೊಂಡು ಈ‌ ಬಾರಿಯೂ ಬಿಜೆಪಿ ಬೆಂಬಲಿಸಲಿದ್ದು, ಗುರಿಯಂತೆ ಬಿಜೆಪಿ‌ 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇಮ್ಮಡಿಗೊಳಿಸಿದೆ ಎಂದರು.ಈ…

Read More