Author: editor.udayarashmi@gmail.com

ದೇಶದ ಸುರಕ್ಷತೆ ಮೋದಿಯಿಂದ ಮಾತ್ರ ಸಾಧ್ಯ :ಯತ್ನಾಳ ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.4 ರ ಭೂತನಾಳ ತಾಂಡಾದಲ್ಲಿ ಮನೆ ಮನೆಗೆ ತೆರಳಿ ಯುವ ನಾಯಕರಾದ ರಾಮನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಮತಯಾಚಿಸಿದರು.ನಂತರ ದುರ್ಗಾದೇವಿ ದೇವಸ್ಥಾನ ಹತ್ತಿರ ನಡೆದ ಸಭೆಯಲ್ಲಿ ಭಾಗವಹಿಸಿ, ಈ ಚುನಾವಣೆ ಕೇವಲ ಅಧಿಕಾರಕ್ಕಾಗಿ ಅಲ್ಲ, ಬದಲಾಗಿ ದೇಶದ ಸುರಕ್ಷತೆ, ಸನಾತನ ಧರ್ಮ ಉಳಿಸಲು, ಅಭಿವೃದ್ಧಿಗಾಗಿ ನಡೆಯಲಿದೆ. ವಿಶ್ವ ನಾಯಕರಾದ ಪ್ರಧಾನಿ ಮೋದಿಯವರಿಂದ ಮಾತ್ರ ಜಗದ್ಗುರು ಭಾರತ ನಿರ್ಮಾಣ ಸಾಧ್ಯ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ. ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಲು ನಾವೆಲ್ಲರೂ ಕಂಕಣಬದ್ದರಾಗೋಣ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ಕೂಡ ಅವಶ್ಯಕ ಎಂದು ಹೇಳಿದರು.ಮುಖಂಡರಾದ ವಿವೇಕಾನಂದ ಡಬ್ಬಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ.ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

Read More

ಶ್ರೀ ಸಿದ್ಧೇಶ್ವರ ಮೆಡಿಕಲ್ ೨೪/೭ ಎರಡು ವರ್ಷ ಪೂರೈಸಿದ ಸಾರ್ಥಕ ಸಂಭ್ರಮ ವಿಜಯಪುರ: ವ್ಯಾಪಾರದಲ್ಲಿ ನೈತಿಕತೆ ಇದ್ದಲ್ಲಿ ಗ್ರಾಹಕರ ಹೃದಯವನ್ನು ಗೆಲ್ಲಬಹುದು ಎನ್ನುವುದಕ್ಕೆ ಈ ಎರಡು ವರ್ಷಗಳಲ್ಲಿ ನಗರದ ಶ್ರೀ ಸಿದ್ಧೇಶ್ವರ ಮೆಡಿಕಲ್ ೨೪/೭ ನ ಕಾರ್ಯವೈಖರಿ ಒಂದು ಅತ್ಯುತ್ತಮವಾದ ಉದಾಹರಣೆಯಾಗಿದೆ.ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳರ ಅಪೇಕ್ಷೆಯಂತೆ ಸ್ಥಾಪನೆಯಾದ ಈ ಮಳಿಗೆ ಇಂದು ಜನಪರ ಮೆಡಿಕಲ್ ಆಗಿ ಗುರುತಿಸಿಕೊಂಡಿದ್ದು ಇಡೀ ತಂಡದ ದಕ್ಷ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರ ನ ನಿರ್ದೇಶಕ ರಾಮನಗೌಡ ಬ. ಪಾಟೀಲ್ ಯತ್ನಾಳ ಅವರು ಹೇಳಿದರು.ನಗರದ ಸಿದ್ಧೇಶ್ವರ ದೇವಸ್ಥಾನದ ಹತ್ತಿರ ಇರುವ ಶ್ರೀ ಸಿದ್ಧೇಶ್ವರ ಮೆಡಿಕಲ್ ೨೪/೭ ಪ್ರಾರಂಭಗೊಂಡು ಎರಡು ವರ್ಷಗಳನ್ನು ಪೂರೈಸಿದ್ದರ ಪ್ರಯುಕ್ತವಾಗಿ ಆಯೋಜಿಸಲಾಗಿದ್ದ ಸಾರ್ಥಕ ಸಂಭ್ರಮ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು; ಯಾವುದೇ ಕೆಲಸವಾಗಲಿ ಅದನ್ನು ನಿಷ್ಠೆಯಿಂದ ಮಾಡಬೇಕು. ವ್ಯಾಪಾರದಲ್ಲಿ ಸಹ ಪಾರದರ್ಶಕತೆಯ ಜೊತೆಗೆ ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಶೀಘ್ರದಲ್ಲಿ ಗ್ರಾಹಕರ…

Read More

ಬಸವನಬಾಗೇವಾಡಿ: ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಲಾರ್ವಾ ಸಮೀಕ್ಷೆಯನ್ನು ಶುಕ್ರವಾರ ಕೈಗೊಂಡರು. ಪ್ರತಿಯೊಂದು ಮನೆಗೆ ತೆರಳಿ ನೀರು ಸಂಗ್ರಹ ಮಾಡುವ ತಾಣಗಳನ್ನು ವೀಕ್ಷಿಸಿದರು.ಲಾರ್ವಾ ಇರುವ ತಾಣಗಳನ್ನು ಖಾಲಿ ಮಾಡಿಸಿ ಜನರಿಗೆ ನೀರು ಸಂಗ್ರಹ ಮಾಡುವ ತಾಣಗಳನ್ನು ಆಗಾಗ ಸ್ವಚ್ಛ ಗೊಳಿಸುವಂತೆ ಹೇಳುವ ಮೂಲಕ ಜನರು ತಮ್ಮ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳಬೇಕು. ಲಾರ್ವಾ ಬಿಟ್ಟರೆ ಡೆಂಗ್ಯೂದಂತಹ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಜನರು ಆರೋಗ್ಯ ಸಂರಕ್ಷಣೆಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ ಹದಿಮೂರ ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಬಾಗೇವಾಡಿ, ಸೋಮೇಶ ಮಾನಶೆಟ್ಟಿ, ಶಿವಾನಂದ ಕಾಖಂಡಕಿ, ಮಲೇರಿಯಾ ತಂತ್ರಜ್ಞ ಮೇಲ್ವಿಚಾರಕ ಸಂಜು ಸಜ್ಜನ ಇದ್ದರು.

Read More

ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿ. ಬಿ ಗ್ರಾಮದ ಡಾ. ಬಸವರಾಜ ಹಡಪದ ಅವರಿಗೆ ದೇವರಹಿಪ್ಪರಗಿಯ ಬಸವ ಶರಣ ಸಂಗಮ ಸೇವಾ ಸಮಿತಿ ಕೊಡಮಾಡುವ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಮೇ.10 ಬಸವ ಜಯಂತಿ ದಿನದಂದು ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.

Read More

ಬಸವನಬಾಗೇವಾಡಿ: ಪಟ್ಟಣದ ಅಗಸಿ ಮೇಲಗಡೆ ಬಸವೇಶ್ವರ-ಮೂಲನಂದೀಶ್ವರ ಭಾವಚಿತ್ರ(ಪೋಟೋ)ವನ್ನು ಶನಿವಾರ ದುರಸ್ತಿ ಮಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಗಸಿ ಮೇಲಗಡೆ ಪುನರ್ ಅಳವಡಿಸಲಾಯಿತು.ಮೂಲನಂದೀಶ್ವರ-ಬಸವೇಶ್ವರ ಭಾವಚಿತ್ರವು ಅಗಸಿ ಒಳಗಡೆ ಇರುವ ಅಂಗಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಹಾನಿಯಾಗಿತ್ತು. ಭಾವಚಿತ್ರದ ಗ್ಲಾಸ್ ಒಡೆದುಹೋಗಿ ೨-೩ ದಿನವಾಗಿದ್ದರೂ ಹಾನಿ ಮಾಡಿದವರಾಗಲಿ ಇಲ್ಲವೇ ಅಂಗಡಿಯ ಮಾಲೀಕರಾಗಲಿ ಇದನ್ನು ಸರಿಪಡಿಸಿದೇ ಬೇಜವಾಬ್ದಾರಿ ವಹಿಸಿದ್ದನ್ನು ಹಾಗೂ ಭಾವಚಿತ್ರಕ್ಕೆ ಅಪಮಾನ ಮಾಡಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಅವರು ಶುಕ್ರವಾರ ಖಂಡಿಸಿ ಎರಡು ದಿನಗಳಲ್ಲಿ ಈ ಭಾವಚಿತ್ರದ ಗ್ಲಾಸ್ ಹಾಕಿ ಅಗಸಿ ಮೇಲಗಡೆ ಭಾವಚಿತ್ರ ಅಳವಡಿಸದೇ ಹೋದರೆ ಕರವೇಯಿಂದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.ಇವರ ಪ್ರತಿಭಟನೆ ಫಲವಾಗಿ ಇಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಟ್ಟಣದ ಹಿರಿಯರು, ಮುಖಂಡರು ಸೇರಿ ಭಾವಚಿತ್ರ(ಪೋಟೋ)ದ ಗ್ಲಾಸ್ ಹಾಕಿಸಿ ದುರಸ್ತಿಗೊಳಿಸಿ ಮತ್ತೆ ಅದೇ…

Read More

ಬಸವನಬಾಗೇವಾಡಿ: ಈ ಸಲ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಮತದಾರರು ನಮ್ಮ ಪರ ಇದ್ದಾರೆ. ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿವೆ. ನಮ್ಮ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಅಂದಾಜು ೧ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಈ ಸಲ ಲೋಕಸಭೆ ಪ್ರವೇಶಿಸಿ ಜನಪರ ಕೆಲಸ ಮಾಡುವ ವಿಶ್ವಾಸ ಇದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಲೋಕಸಭಾ ಚುನಾವಣಾ ಕಾರ್ಯಾಲಯದ ಮುಂಭಾಗ ಶನಿವಾರ ಬೈಕ್ ರ್ಯಾಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ರಾಜು ಆಲಗೂರ ಅವರು ಎರಡು ಸಲ ಶಾಸಕರಾಗಿ, ಪಕ್ಷದ ಜಿಲ್ಲಾಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದಾರೆ. ಇವರು ಲೋಕಸಭೆಯಲ್ಲಿ ಜಿಲ್ಲೆಯ ಜನತೆಯ ಪರವಾಗಿ ಧ್ವನಿಯಾಗಿ, ಜನಪರ ಸಮಸ್ಯೆಗಳ ಪರ ಮಾತನಾಡುವ ವ್ಯಕ್ತಿಯಾಗಿದ್ದಾರೆ. ಇವರನ್ನು ಮತದಾರರು ಆಯ್ಕೆ ಮಾಡಿದರೆ ಖಂಡಿತ ಜಿಲ್ಲೆಯ ಅಭಿವೃದ್ಧಿಯಾಗುವದರಲ್ಲಿ ಸಂದೇಹವಿಲ್ಲ ಎಂದರು.ಈ…

Read More

ಚಿಕ್ಕೋಡಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ಅಮಿತ್ ಶಾ ಅವರು ಲೋಕಸಭೆ ಚುನಾವಣಾ ಪ್ರಚಾರದ ಭಾಗವಾಗಿ ಶುಕ್ರವಾರ ಕರ್ನಾಟಕದ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಕೇವಲ 10 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ದನನೀಯ ಸ್ಥಿತಿಗೆ ತಂದಿದೆ ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳಲ್ಲಿ, ಕಾಂಗ್ರೆಸ್ ನೇತೃತ್ವದ ಸರ್ಕಾರವು ಕರ್ನಾಟಕ ರಾಜ್ಯವನ್ನು ಪ್ರಕ್ಷುಬ್ಧತೆ ಮತ್ತು ಅವ್ಯವಸ್ಥೆಯತ್ತ ಕೊಂಡೊಯ್ಯಿತು.ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ನೀಡುತ್ತಿದ್ದ ರೂ. 4,000 ಧನಸಹಾಯವನ್ನು ಏಕಾಏಕಿ ಸ್ಥಗಿತಗೊಳಿಸಿರುವುದು ಕೃಷಿ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ. ಇಂತಹ ದೂರದೃಷ್ಟಿಯಿಲ್ಲದ ನೀತಿಗಳು ಸಾಮಾನ್ಯ ಜನರಿಗೆ ದ್ರೋಹ ಮಾಡುವುದಲ್ಲದೆ, ಆಡಳಿತದಲ್ಲಿ ಕಾಂಗ್ರೆಸ್ನ ಬದ್ಧತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ.ಇದಲ್ಲದೆ, ‘ಲವ್ ಜಿಹಾದ್’ ವಿಷಯದ ಸುತ್ತಲಿನ ಸವಾಲುಗಳ ಸಂಕೇತವಾದ ನೇಹಾ ಪ್ರಕರಣಕ್ಕೆ ನ್ಯಾಯ ನೀಡಲು ಸಾಧ್ಯವಾಗದಿರುವುದು ಕಾಂಗ್ರೆಸ್ನ ಅಸಮರ್ಥತೆಯನ್ನು ಬಹಿರಂಗಪಡಿಸುತ್ತದೆ. ನೇಹಾ ಅವರಂತಹ ಸಂತ್ರಸ್ತರಿಗೆ ಪಕ್ಷವು ನ್ಯಾಯವನ್ನು ನೀಡಲು…

Read More

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3 ರ ಭಾವಸಾರ ನಗರದಲ್ಲಿ ಪಾಲಿಕೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಉಮೇಶ ವಂದಾಲ‌ ನೇತೃತ್ವದಲ್ಲಿ ಮನೆಮನೆಗೆ ತೆರಳಿ ಕರಪತ್ರ ಹಂಚುವ ಮೂಲಕ ಬಿಜೆಪಿ ಪರ ಮತಯಾಚಿಸಲಾಯಿತು.ಈ ವೇಳೆ ಬಿಜೆಪಿ ಮುಖಂಡರಾದ ಶ್ರೀಧರ ಪಾಣೆಗಾವಿ, ಈಶ್ವರ ಬಸವರಾಜ, ನಿಖಿಲ ಚಿನಿವಾಲ, ಶಾಮ ಸೂರ್ಯವಂಶಿ, ಶಶಿಕುಮಾರ ಸನಕಿ, ಹರ್ಷಿತ್, ಜಾಧವ, ಕಂಪ್ಲಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಮೇ.೭ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಎಲ್ಲಾ ೨೦೮೫ ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಮೆ.೫ ರ ಸಂಜೆ ೬ ರಿಂದ ಮೇ ೭ ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಕಲಂ ೧೪೪ ಪ್ರತಿಭಂದಕಾಜ್ಞೆ ಜಾರಿ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.ಮೇ ೫ ರಂದು ಸಂಜೆ ೬ ರಿಂದ ಮತದಾನ ಮುಗಿಯವವರೆಗೂ ೫ಕ್ಕಿಂತ ಹೆಚ್ಚು ಜನರು ಗುಂಪು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರಗಿಸುವುದು ನಿಷೇಧಿಸಿದೆ. ಅದಲ್ಲದೇ, ಶಸ್ತ್ರಾಸ್ತಗಳನ್ನು ತೆಗೆದುಕೊಂಡು ಸಂಚರಿಸುವುದು, ಮತಗಟ್ಟೆಗಳ ೧೦೦ ಮೀಟರ್ ಸುತ್ತಮುತ್ತ ರಾಜಕೀಯ ಪಕ್ಷಗಳ ಪೋಸ್ಟರ್, ಬ್ಯಾನರ್ ಹಾಗೂ ಪ್ರಚಾರ, . ಸಾರ್ವಜನಿಕವಾಗಿ ಪ್ರಚೋಧನಕಾರಿ ಹೇಳಿಕೆ, ವ್ಯಕ್ತಿಗಳ ತೇಜೋವಧೆ, ಮತಗಟ್ಟೆಯ ಸುತ್ತಮುತ್ತ ಧ್ವನಿವರ್ಧಕಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿಸಲಾಗಿದೆ.ಮೇ ೬, ೭ ರಂದು ಸಂತೆ , ಜಾತ್ರೆ , ಉತ್ಸವ ನಿಷೇಧವಿಜಯಪುರ ಮೇ ೪ (ಕರ್ನಾಟಕ ವಾರ್ತೆ):…

Read More

ದೇವರಹಿಪ್ಪರಗಿ: ದೇಶದ ಸಮಸ್ತ ಜನತೆಗೆ ನೀಡಿದ ಎಲ್ಲಾ ಭರವಸೆಗಳು ಸೇರಿದಂತೆ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಮೂರನೆಯ ಬಾರಿಗೆ ಪ್ರಧಾನಿ ಮೋದಿಜಿ ಗದ್ದುಗೆಯೇರುವುದು ನಿಶ್ಚಿತ ಎಂದು ವಿಜಯಪುರ ಮತಕ್ಷೇತ್ರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪ್ರಚಾರದ ಅಂಗವಾಗಿ ಜರುಗಿದ ರೋಡ್ ಶೋದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಇಂದು ಭಾರತ ಪ್ರಬಲ ಆರ್ಥಿಕಶಕ್ತಿಯಾಗಿ ಬೆಳೆದು ನಿಂತಿದೆ. ನೆರೆಯ ಬದ್ಧವೈರಿ ಪಾಕಿಸ್ತಾನ ಜನತೆ ಕೂಡಾ ಮೋದಿಯವರನ್ನು ಕೊಂಡಾಡುತ್ತಿದೆ. ಇಂದು ಭಾರತದಲ್ಲಿ ದೇಶವಿರೋಧಿ ಚಟುವಟಿಕೆಗಳಿಗೆ ಕಾಂಗ್ರೆಸ್ ಅವಕಾಶ ನೀಡುತ್ತಿದೆ. ಇದಕ್ಕೆ ವಿಧಾನಸೌಧದಲ್ಲಿ ವಿರೋಧಿ ರಾಷ್ಟçಪರ ಜಿಂದಾಬಾದ್ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನೀಯ ಹತ್ಯೆ ಪ್ರಕರಣಗಳೇ ಸಾಕ್ಷಿ. ಇಂಥ ಘಟನೆಗಳನ್ನು ಕಾಂಗ್ರೆಸ್ ನಾಯಕರು ಪದೇಪದೇ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ದೇಶ ವಿರೋಧಿನೀತಿಗೆ ನಿದರ್ಶನವಾಗಿದೆ ಎಂದು ಹೇಳುತ್ತಾ ಡಿ.ಕೆ.ಶಿವಕುಮಾರ, ಶಿವಾನಂದ ಪಾಟೀಲರ ಹೇಳಿಕೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ನೋಟ್‌ಬ್ಯಾನ್ ನಂತರ ಪಾಕಿಸ್ತಾನದ ದಿವಾಳಿತನ,…

Read More