Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೋಕಸಭಾ ಚುನಾವಣೆ: ಸ್ವೀಪ್ ಸಮಿತಿಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶನಿವಾರ ಸಂಜೆ ನಗರದ ಸೆಟ್ ಲೈಟ್ ಬಸ್ ನಿಲ್ಲಾಣ ( ಹೊಸ ಬಸ್ ನಿಲ್ದಾಣ)ದಿಂದ ಹಮ್ಮಿಕೊಂಡ ಐತಿಹಾಸಿಕ ಪಾರಂಪರಿಕ ಟಾಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡ ಜಾಗೃತಿಯ ಟಾಂಗಾ ಅಭಿಯಾನವನ್ನು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ವಿಶೇಷವಾಗಿ ಅಲಂಕೃತಗೊಂಡ ಪಾರಂಪರಿಕ ಟಾಂಗಾದಲ್ಲಿ ಕುಳಿತು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಮತದಾನ ಜಾಗೃತಿ ವಿವಿಧ ಘೋಷಣೆಗಳನ್ನೊಂಡ ಅಲಂಕೃತವಾಗಿರುವ ಟಾಂಗಾದಲ್ಲಿ ಸ್ವತ: ರಿಷಿ ಆನಂದ ಸೇರಿದಂತೆ ವಿವಿಧ ಇಲಾಖೆಯು ಅಧಿಕಾರಿಗಳು, ರಾಯಭಾರಿಗಳಾದ ಸಹನಾ ಕೂಡಿಗನೂರ, ಸಾಕ್ಷಿ ಹಿರೇಮಠ ಸೇರಿದಂತೆ ಇತರ ಅಧಿಕಾರಿಗಳು, ಸ್ವೀಪ್ ಸಮಿತಿ ಸದಸ್ಯರು…
ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ವ್ಯಂಗ್ಯ ವಿಜಯಪುರ: ಕಾಂಗ್ರೆಸ್ ಸರ್ಕಾರದ ಸಾಧನೆ ಹಾಗೂ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಶಾಮಿಯಾನ ಹಾಕಿ ಚರ್ಚೆ ನಡೆಸಲು ನಾವು ಅನೇಕ ಬಾರಿ ಆಹ್ವಾನಿಸಿದರೂ ಕಾಂಗ್ರೆಸ್ ಪಕ್ಷ ಆಹ್ವಾನ ಸ್ವೀಕರಿಸಲಿಲ್ಲ, ಏಕೆಂದರೆ ಕಾಂಗ್ರೆಸ್ ಪಕ್ಷಕ್ಕೆ ತಾನು ಏನು ಮಾಡಿಲ್ಲ ಎಂಬುದು ಗೊತ್ತಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ವ್ಯಂಗ್ಯವಾಡಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಳ್ವಿಕೆಯಲ್ಲಿ ಕೇವಲ ನಾಲ್ಕು ನಗರಗಳಲ್ಲಿ ಮೆಟ್ರೋ ಸಂಚಾರ ಇತ್ತು, ಆದರೆ ಕೇವಲ 10 ವರ್ಷದ ಆಡಳಿತ ಅವಧಿಯಲ್ಲಿ 20 ನಗರರಗಳಲ್ಲಿ ಮೆಟ್ರೋ ಸಂಚಾರ ಆರಂಭವಾಗಿದೆ, ಕಾಂಗ್ರೆಸ್ 70 ವರ್ಷಗಳ ಆಡಳಿತದಲ್ಲಿ 628 ವಿಶ್ವವಿದ್ಯಾಲಯಗಳು ಮಾತ್ರ ಆರಂಭಗೊಂಡವು, ಆದರೆ ಮೋದಿಜಿ ಅವರು ಕೇವಲ 10 ವರ್ಷಗಳಲ್ಲಿ 1168 ಹೊಸ ವಿಶ್ವವಿದ್ಯಾಲಯ ಸ್ಥಾಪಿಸಿ ಉನ್ನತ ಶಿಕ್ಷಣಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.ಕಳೆದ ಏಳು ದಶಕಗಳ ಕಾಂಗ್ರೆಸ್ ಆಳ್ವಿಕೆಯಲ್ಲಿ ಜನಸಂಖ್ಯೆಗೆ…
ಕೊಲ್ಹಾರ: ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಮಾತನಾಡಿ, ಬಿಜೆಪಿಯವರು ಸುಳ್ಳಿನ ಮೇಲೆ ಸಾಮ್ರಾಜ್ಯ ಕಟ್ಟುತ್ತಾರೆ. ಇಲ್ಲದ್ದನ್ನು ಅಚ್ಚುಕಟ್ಟಾಗಿ ಸೃಷ್ಟಿಸುತ್ತಾರೆ. ಭ್ರಮೆಗಳನ್ನು ಬಿತ್ತಿ ಮುಗ್ಧ ಜನರ ಮತ ಕೇಳುತ್ತಾರೆ. ಇದೆಲ್ಲದರಿಂದ ಬೇಸತ್ತು ತಾವು ಬಿಜೆಪಿ ತೊರೆಯಬೇಕಾಯಿತು ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ಮೊದಲಿಂದ ದೇಶ ಪ್ರೇಮ ಮೆರೆಯುತ್ತ ಬಂದಿದೆ. ಈ ದೇಶವನ್ನು ಕಟ್ಟಿದೆ. ರಾಜ್ಯದ ಸಿದ್ದರಾಮಯ್ಯರ ಸರಕಾರ ಗ್ಯಾರಂಟಿಗಳ ಮೂಲಕ ಜನಮನವನ್ನು ಗೆದ್ದಿದೆ. ಬಡವರ ನಿತ್ಯ ಜೀವನಕ್ಕೆ ಸಹಾಯವಾಗಲಿ ಎಂದು ಭಾಗ್ಯಗಳನ್ನು ಕೊಟ್ಟಿದೆ. ಕೆಂದ್ರ ಸರಕಾರದ ಕೆಟ್ಟ ಆಡಳಿತದಿಂದ ಬೆಲೆ ಏರಿಕೆ, ಹಣದುಬ್ಬರ, ಜಿಎಸ್ಟಿ, ನೋಟ್ ಬಂದಿಯಿಂದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿತ್ತು. ಇದರಿಂದ ಸಾಮಾನ್ಯ ಜನ ತತ್ತರಿಸಿದ್ದರು. ಅವರಿಗೆಲ್ಲ ಗ್ಯಾರಂಟಿಗಳಿಂದ ಉಸಿರಾಡುವಂತಾಗಿದೆ ಎಂದರು.ಜಿಲ್ಲೆಯ ಅಭಿವೃದ್ಧಿಗಾಗಿ…
ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿವೃದ್ಧಿ ಎಂದರೆ ಅಸಡ್ಡೆಯಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬಬಲೇಶ್ವರ ತಾಲೂಕಿನ ದೇವರ ಗೆಣ್ಣೂರ ಮತ್ತು ಗುಣದಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.ಅಭಿವೃದ್ಧಿ ನಮ್ಮ ಮೂಲಮಂತ್ರ. ಅದು ನಿತ್ಯ ನಿರಂತರವಾಗಿದೆ. ಕೋಮು ಭಾವನೆ ಕೆರಳಿಸುವವರಿಗೆ ತಕ್ಕ ಪಾಠ ಕಲಿಸಲು ಸರ್ವ ಜನಾಂಗದ ಶಾಂತಿಯ ತೋಟದ ಪಣತೊಟ್ಟಿರುವ ಕಾಂಗ್ರೆಸ್ಸನ್ನು ಬೆಂಬಲಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿವೃದ್ಧಿ ಎಂದರೆ ಅಸಡ್ಡೆ ಎಂಬಂತಾಗಿದೆ. ಶಾಸಕ ಸಂಸದರಾದವರು ತಮ್ಮ ಅಧಿಕಾರವಧಿಯಲ್ಲಿ ಕನಿಷ್ಠ ಶೇ. 80 ರಷ್ಟಾದರೂ ಕೆಲಸ ಮಾಡಬೇಕು. ಆದರೆ, ಶೂನ್ಯ ಅಭಿವೃದ್ಧಿ ಮಾಡಿರುವವರಿಗೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕ್ರೀಯಾಶೀಲರಾಗಿದ್ದು, ಬಹುಭಾಷೆ ಬಲ್ಲವರಾಗಿದ್ದಾರೆ. ಇಂಥ ವಿದ್ಯಾವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ…
ವಿಜಯಪುರ: ಅಧಿಕಾರದಲ್ಲಿದ್ದಾಗ ನಾವು ಮಾಡುವ ಕೆಲಸಗಳನ್ನು ಜನ ಸ್ಮರಿಸುವಂತಿರಬೇಕು. ಆದರೆ, ಸಂಸದ ರಮೇಶ ಜಿಗಜಿಣಗಿ ಜಿಲ್ಲೆಯ ಜನ ನೆನಪಿಡುವ ಯಾವ ಕೆಲಸಗಳನ್ನೂ ಮಾಡಿಲ್ಲ ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಮತ್ತು ಕಂಬಾಗಿಯಲ್ಲಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಸಂಸದರಾಗಿ ಹೈದರಾಬಾದ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಿಸಿದರು. ಇಎಸ್ಐ ಆಸ್ಪತ್ರೆ ನಿರ್ಮಿಸಿದರು. ಪ್ರಕಾಶ ಹುಕ್ಕೇರಿ ಸಂಸದರಾಗಿ ಚಿಕ್ಕೋಡಿ ಮತಕ್ಷೇತ್ರದಲ್ಲಿ ಸವಳು- ಜವಳು ಬಗೆ ಹರಿಸುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಇದರಿಂದಾಗಿ ಜನ ಈಗಲೂ ಅವರನ್ನು ಸ್ಮರಿಸುತ್ತಾರೆ. ಇವರ ಅಭಿವೃದ್ಧಿ ಕಾರ್ಯಗಳನ್ನು ನೋಡಿಯಾದರೂ ಸಂಸದ ರಮೇಶ ಜಿಗಜಿಣಗಿ ವಿಜಯಪುರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಬೇಕಿತ್ತು. ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಂಸತ್ತಿಗೆ ಹೋಗಿ ಪ್ರಯೋಜನವಾದರೂ ಏನೂ? ಎಂದು ಅವರು ಪ್ರಶ್ನಿಸಿದರು.ಕೆಲವು ರಾಜ್ಯಗಳ ಆರ್ಥಿಕತೆ ಪ್ರವಾಸೋದ್ಯಮ ಮೇಲೆ ಹೆಚ್ಚು…
ಆಲಮಟ್ಟಿ: ಇಲ್ಲಿಯ ಕೃಷ್ಣಾ ನದಿಯ ಹಿನ್ನೀರಿನ ಬಾವಾಸಾಬ್ ಗುಡ್ಡದ ಬಳಿ ಸ್ಥಳೀಯ ಮೀನುಗಾರರೊಬ್ಬರಿಗೆ 35 ಕೆಜಿ ತೂಕದ ಬೃಹತ್ ಒಂದೇ ಮೀನು ಬಲೆಗೆ ಬಿದ್ದಿದೆ.ಆಲಮಟ್ಟಿ ಗ್ರಾಮ ಪಂಚಾಯ್ರಿ ಸದಸ್ಯ ಮೀನುಗಾರ ಮಾಸೂಬಾ ಕಟ್ಟೀಮನಿ ಅವರ ಬಲೆಗೆ ಶನಿವಾರ ಈ ಬೃಹತ್ ಗಾತ್ರದ ಮೀನು ಬಿದ್ದಿದೆ.ಶುಕ್ರವಾರ ಸಂಜೆ ಬಲೆ ಹಾಕಿ ಶನಿವಾರ ಬೆಳಿಗ್ಗೆ ಬಲೆ ತೆಗೆಯಲು ಹೋಗಿದ್ದ ಮಾಸೂಬಾ ಅವರಿಗೆ ಅಚ್ಚರಿ ಕಾದಿತ್ತು.ನಂತರ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ ಎಂಬ ಊಹೆಯೊಂದಿಗೆ ಬಲೆಯನ್ನು ಸಾವಕಾಶವಾಗಿ ತೆಪ್ಪದಲ್ಲಿ ಮೀನಿನೊಂದಿಗೆ ಹಾಕಿ, ನದಿ ದಂಡೆಗೆ ತಂದು ಬಲೆಯಿಂದ ಮೀನನ್ನು ಬೇರ್ಪಡಿಸಲಾಯಿತು.ಬೃಹತ್ ಗಾತ್ರದ ಮೀನು ನೋಡಲು ಜನ ತಂಡೋಪತಂಡವಾಗಿ ಆಗಮಿಸಿದರು.ಇದು ಕಟ್ಲಾ ಜಾತಿಗೆ ಸೇರಿದ ಮೀನಾಗಿದ್ದು, 35 ಕೆಜಿ ತೂಕ ಹೊಂದಿದೆ, ನನಗೆ ತುಂಬಾ ಖುಷಿಯಾಗಿದೆ ಎಂದು ಮೀನುಗಾರ ಮಾಸೂಬಾ ಕಟ್ಟಿಮನಿ ಹೇಳಿದರು. ಈಗ ಕಟ್ಲಾ ಮೀನು ಹೆಚ್ಚಾಗಿ ಸಿಗುತ್ತವೆ, ತಿನ್ನಲು ರುಚಿಕರವಾಗಿರುವ ಕಟ್ಲಾ ಮೀನಿಗೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೇಡಿಕೆಯಿದೆ ಎಂದು ಮಾಸೂಬಾ ತಿಳಿಸಿದರು. ಇವರ…
ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಹಳ್ಳಿಯಲ್ಲಿ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ ಹರೀಶನು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ಉದ್ದೇಶದಿಂದ ತನ್ನ ಹೆಂಡತಿ ಜೊತೆಗೆ ಪಟ್ಟಣಕ್ಕೆ ಉದ್ಯೋಗಕ್ಕೆಂದು ಬಂದನು. ಪಟ್ಟಣದಲ್ಲಿ ಈ ದಂಪತಿಗಳಿಬ್ಬರು ಬಾಡಿಗೆಯ ಮನೆಯೊಂದರಲ್ಲಿ ವಾಸವಾಗಿದ್ದರು. ಒಂದು ದಿನ ಹರೀಶನ ಹೆಂಡತಿ ಮಂಜುಳಾ ತನ್ನ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬಳು ತನ್ನ ದೈನಂದಿನ ಬಟ್ಟೆಗಳನ್ನು ಒಗೆದು ಒಣಗಲು ಹಾಕಿರುವುದನ್ನು ಕಿಟಕಿಯ ಮೂಲಕ ನೋಡಿದಳು. ಕಿಟಕಿಯ ಮೂಲಕ ಹೊರಗೆ ನೋಡಿದಾಗ ಆಕೆಯು ಒಗೆದು ಒಣಗಲು ಹಾಕಿದ್ದ ಬಟ್ಟೆಗಳು ಸ್ವಚ್ಛವಾಗಿರದೇ, ತೀರಾ ಕೊಳೆಯಾಗಿ ಇರುವುದು ಕಂಡುಬಂತು.ಬಹುಶಃ ಆಕೆಗೆ ಈಗಷ್ಟೇ ಮದುವೆ ಆಗಿರಬೇಕು, ಹಾಗಾಗಿ ಸ್ವಚ್ಛವಾಗಿ ಬಟ್ಟೆ ಒಗೆಯುವುದನ್ನು ಆಕೆಯಿನ್ನೂ ಕಲಿತಿರಲಿಕ್ಕಿಲ್ಲ, ಅಥವಾ ಬಟ್ಟೆ ಸ್ವಚ್ಛವಾಗಿ ಒಗೆಯಲು ಅಗತ್ಯವಿರುವ ಸಾಬೂನು ಮತ್ತು ಬಟ್ಟೆ ಒಗೆಯುವ ಪುಡಿ ಆಕೆಯಲ್ಲಿ ಇಲ್ಲದಿರಬಹುದು ಎಂದು ವ್ಯಂಗ್ಯವಾಗಿ ಮಂಜುಳಾ ತನ್ನ ಗಂಡನಿಗೆ ಹೇಳಿದಳು. ಪ್ರತಿದಿನವೂ ಆಕೆಯು ಒಗೆದು ಹಾಕುತ್ತಿದ್ದ ಬಟ್ಟೆಗಳು…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್. ಕೆ. ಬೆಂಗಳೂರು ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು..ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು ಮಕ್ಕಳ ಕೈಯಲ್ಲಿ ಚಪ್ಪಲಿ, ಪೊರಕೆಯಲ್ಲಿ ಹೊಡೆಸುತ್ತಾ, ಥೂ – ಛೀ ಎಂದು ಉಗಿಸುತ್ತಾ ಸ್ಟೇಷನ್ ಗೆ ಕರೆದುಕೊಂಡು ಹೋಗುತ್ತಿದ್ದರು..ಅನಂತರದಲ್ಲಿ, ಇಷ್ಟೆಲ್ಲಾ ದೊಡ್ಡ ಸಂಖ್ಯೆಯ ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಮಾಡಿದ್ದು ಬಯಲಾಗುತ್ತಿದ್ದಂತೆ ಬಹುತೇಕ ಎನ್ಕೌಂಟರ್ ಮಾಡುವ ಸಾಧ್ಯತೆ ಇತ್ತು. ಮಾಧ್ಯಮಗಳು ನನ್ನನ್ನು ಅತ್ಯಂತ ನೀಚನಂತೆ, ದುಷ್ಟ ಕ್ರಿಮಿಯಂತೆ, ಇಷ್ಟು ಕೆಳಮಟ್ಟದ ಮನುಷ್ಯ ಇಲ್ಲವೇನೋ ಎಂಬಂತೆ ಚಿತ್ರಿಸುತ್ತಿದ್ದರು. ರಾಜಕಾರಣಿಗಳು ಇದರಲ್ಲಿ ಯಾವುದೇ ರಾಜಕೀಯವಿದೆ ಎಂದು ಯಾರನ್ನೂ ದೂರುತ್ತಿರಲಿಲ್ಲ, ಪೆನ್ ಡ್ರೈವ್ ರೆಕಾರ್ಡ್ ಮಾಡಿದ್ದು ಯಾರು ? ಅದನ್ನು ಹಂಚಿದ್ದು ಯಾರು ? ಅದರಿಂದ…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್. ಕೆ, ಬೆಂಗಳೂರು? ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ..ಚುನಾವಣೆಗಳು, ಪರೀಕ್ಷಾ ಫಲಿತಾಂಶಗಳು, ಶೇರು ಮಾರುಕಟ್ಟೆ, ಬಂಗಾರದ ಬೆಲೆ, ಧಾರ್ಮಿಕ ಆಚರಣೆಗಳು, ಭ್ರಷ್ಟಾಚಾರ ಇದೆಲ್ಲವೂ ತದನಂತರ. ಮೊದಲು ಬದುಕು ಮುಖ್ಯವಲ್ಲವೇ, ಬದುಕೇ ಇಲ್ಲದೆ, ಆರೋಗ್ಯವೇ ಇಲ್ಲದ ಮೇಲೆ ಉಳಿದ ವಿಷಯಗಳನ್ನು ಚರ್ಚಿಸುವುದಾದರೂ ಹೇಗೆ, ಜೊತೆಗೆ ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಎಷ್ಟೋ ಕೆರೆಕಟ್ಟೆಗಳು ಒಣಗಿವೆ, ಕುಡಿಯಲು ಮನುಷ್ಯರಿಗೂ, ದನ ಕರುಗಳಿಗೂ, ಕಾಡುಪ್ರಾಣಿಗಳಿಗೂ ನೀರೇ ಇಲ್ಲ. ಬೆಳೆಗಳು ಸಂಪೂರ್ಣ ಒಣಗಿ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳ, ಸರ್ಕಾರಗಳ, ಆದ್ಯತೆ ಏನಾಗಿದೆ ಎಂಬುದೇ ನಾಚಿಕೆಗೇಡಿನ…
