Author: editor.udayarashmi@gmail.com

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ವಾರ್ಡ್ ಸಂಖ್ಯೆ 29 ಹಾಗೂ 30 ರಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸಿ ಮನೆಮನೆಗೆ ಭೇಟಿ ನೀಡಿ ಮತಪ್ರಚಾರ ನಡೆಸಲಾಯಿತು.ಮಹಾಸಂಪರ್ಕ ಅಭಿಯಾನ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ವಾರ್ಡ್ ಸಂಖ್ಯೆ 29 ಹಾಗೂ 30 ಎರಡೂ ವಾರ್ಡುಗಳ ವ್ಯಾಪ್ತಿಯಲ್ಲಿ ಪ್ರತಿ ಮನೆ ಮನೆಗೆ ತೆರಳಿ ಕಳೆದ ಹತ್ತು ವರ್ಷಗಳ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳು, ಜನಪರ ಕಾರ್ಯಕ್ರಮಗಳ ಕರಪತ್ರಗಳನ್ನು ಹಂಚಿ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಳ್ಳಲಾಯಿತು.ಈ ವೇಳೆ ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಭಾರಿ ಪ್ರಕಾಶ ಅಕ್ಕಲಕೋಟ, ವಿಜಯಪುರ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪಾಪು ಸಿಂಗ್ ರಜಪೂತ್ ಮುಖಂಡರಾದ ವಿಜಯಕುಮಾರ ಗಚ್ಚಿನಕಟ್ಟಿ, ಗಿರೀಶ ಬಿರಾದಾರ, ವೇಣುಗೋಪಾಲ ಜೋಶಿ, ವಿಜಯಪುರದ ವಿಸ್ತಾರಕರಾದ ವೀರೇಂದ್ರ ಏಕ್ಕೆಮಠ ,ವಿಕಾಸ ಪದಕಿ, ಸಚಿನ ಘಾಟಿಗೆ, ಕೋಲಕಾರ್, ಗುರುರಾಜ್ ಹಜೇರಿ, ನಿಂಗರಾಜ್ ಪಾಟೀಲ್, ಗುರು ಓಕಳಿ, ಗುಂಡು ಹಿಪ್ಪರಗಿ, ಲಕ್ಷ್ಮಣ್…

Read More

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿವೃದ್ಧಿ ಎಂದರೆ ಅಸಡ್ಡೆಯಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬಬಲೇಶ್ವರ ತಾಲೂಕಿನ ದೇವರ ಗೆಣ್ಣೂರ ಮತ್ತು ಗುಣದಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.ಅಭಿವೃದ್ಧಿ ನಮ್ಮ ಮೂಲಮಂತ್ರ. ಅದು ನಿತ್ಯ ನಿರಂತರವಾಗಿದೆ. ಕೋಮು ಭಾವನೆ ಕೆರಳಿಸುವವರಿಗೆ ತಕ್ಕ ಪಾಠ ಕಲಿಸಲು ಸರ್ವ ಜನಾಂಗದ ಶಾಂತಿಯ ತೋಟದ ಪಣತೊಟ್ಟಿರುವ ಕಾಂಗ್ರೆಸ್ಸನ್ನು ಬೆಂಬಲಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಅವರು ಹೇಳದರು.ಶಾಸಕ ಸಂಸದರಾದವರು ತಮ್ಮ ಅಧಿಕಾರವಧಿಯಲ್ಲಿ ಕನಿಷ್ಠ ಶೇ. 80 ರಷ್ಟಾದರೂ ಕೆಲಸ ಮಾಡಬೇಕು. ಆದರೆ, ಶೂನ್ಯ ಅಭಿವೃದ್ಧಿ ಮಾಡಿರುವವರಿಗೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕ್ರೀಯಾಶೀಲರಾಗಿದ್ದು, ಬಹುಭಾಷೆ ಬಲ್ಲವರಾಗಿದ್ದಾರೆ. ಇಂಥ ವಿದ್ಯಾವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಅವರು…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಎಲ್ಲಿ ನೋಡಿದರಲ್ಲಿ ಬಿಸಿಲ ಧಗೆಯಿಂದ ಒಣಗಿರುವ ಗಿಡ ಮರಗಳು, ನೆರಳು ಹುಡುಕಿ ಮಲಗುವ ಜಾನುವಾರುಗಳು, ಪಶು ಪಕ್ಷಿಗಳು.. ಇನ್ನು ಮನುಷ್ಯರದಂತೂ ಕೇಳಬೇಡಿ ಆಗೊಮ್ಮೆ ಈಗೊಮ್ಮೆ ಹುಶ್ ಎಂದು, ಅಬ್ಬ ಎಂದು ನಿಡುಸುಯ್ಯುವ ಮನುಷ್ಯರು. ದುಡ್ಡಿದ್ದವರು ಏರ್ ಕಂಡೀಷನರ್ ಗಳು ಏರ್ ಕೂಲರ್ಗಳ ಮೊರೆ ಹೋಗಿದ್ದರೆ ಉಳಿದವರು ಫ್ಯಾನುಗಳ ಮೊರೆ ಹೋಗಿದ್ದಾರೆ. ಯಾವುದಕ್ಕೂ ಕರೆಂಟ್ ಬೇಕಲ್ಲವೇ?? ಒಂದು ಕ್ಷಣ ಕರೆಂಟ್ ಹೋದರೆ ಒದ್ದಾಡುವ ಜನರ ಪರಿಸ್ಥಿತಿ ಯಾರಿಗೂ ಬೇಡ?? ಮತ್ತೆ ಕೆಲವರು ಊರ ಹೊರಗಿರುವ ಮರಗಳ ದೊಡ್ಡ ದೊಡ್ಡ ಕಟ್ಟಡಗಳ ಕೆಳಗೆ ಕುಳಿತು, ಮಲಗಿ ದಣಿವಾರಿಸಿಕೊಳ್ಳುತ್ತಾರೆ.ಈಗಾಗಲೇ ಭೂಮಿಯ ಒಡಲು ಕಾದುಹೋಗಿದೆ. ಬಿಸಿಲಿನ ಬೇಗೆಗೆ ಗಿಡ ಮರಗಳು ಸುಟ್ಟು ಹೋಗುತ್ತಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಇನ್ನು ಕೆಲವೇ ವರ್ಷಗಳಲ್ಲಿ ವಾತಾವರಣದಲ್ಲಿನ ತಾಪಮಾನವು ಇನ್ನಷ್ಟು ಹೆಚ್ಚಾಗಿ ಭೂಮಿಯ ಮೇಲಿನ ತೇವಾಂಶ ಕುಸಿದು ಹೋಗಬಹುದು. ವಿವಿಧ ಬಗೆಯ ಚರ್ಮರೋಗಗಳು ಆರೋಗ್ಯ ಸಂಬಂಧಿ ತೊಂದರೆಗಳು ಕಾಣಿಸಿಕೊಳ್ಳಬಹುದು. ಈಗಾಗಲೇ ಜನರು ಬಿಸಿಲಿನ…

Read More

ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪ | ಸುದ್ದಿಗೋಷ್ಠಿಯಲ್ಲಿ‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಬೆಂಗಳೂರು: ಪೆನ್‌ಡ್ರೈವ್‌ ವಿಡಿಯೋ ವೈರಲ್‌ ಬಳಿಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.ಈ ಕುರಿತು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ರೇವಣ್ಣ ಅವರು ಇಂದು ಅಧಿಕಾರಿಗಳ ಮುಂದೆ ಹಾಜರಾಗುತ್ತೆನೆ ಎಂದು ಹೇಳಿದ್ದಾರೆ. ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ. ನಿನ್ನೆ ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ ಎಂದು ಹೇಳಿದ್ದಾರೆ.ಇಂತಹ ಸೂಕ್ಷ್ಮ ವಿಚಾರದಲ್ಲಿ ಸ್ವಯಂ ಪ್ರೇರಿತ ದೂರು…

Read More

ಮುದ್ದೇಬಿಹಾಳ: ತಾಲೂಕಿನ’ಉದಯರಶ್ಮಿ’ ಹಾಗೂ ’ಸಂಯುಕ್ತ ಕರ್ನಾಟಕ’ ದಿನಪತ್ರಿಕೆಗಳ ವರದಿಗಾರ ಮತ್ತು ನ್ಯಾಯವಾದಿ ಚೇತನ ಶಿವಶಿಂಪಿ ಅವರ ತಂದೆ ಮಹಾದೇವಪ್ಪ ಗುರುಬಸಪ್ಪ ಶಿವಶಿಂಪಿ (೬೪) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.ಮೃತರು ಪತ್ನಿ, ಪತ್ರಕರ್ತ ಚೇತನ ಶಿವಶಿಂಪಿ ಸೇರಿದಂತೆ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಸಂತಾಪ: ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಅಹಿಲ್ಯಾಬಾಯಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ, ನಿವೃತ್ತ ಡಿವಾಯ್‌ಎಸ್‌ಪಿ ಎಸ್.ಎಸ್.ಹುಲ್ಲೂರ, ಬಾಲಾಜಿ ಶುಗರ್ಸ್ ನ ರಾಹುಲಗೌಡ ಪಾಟೀಲ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ, ನಿವೃತ್ತ ನ್ಯಾಯಾಧೀಶ ಜಿ.ಡಿ.ಇನಾಮದಾರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಹಿರಿಯ ನ್ಯಾಯವಾದಿಗಳಾದ ವಿ.ಎಂ.ನಾಗಠಾಣ, ಜೆ.ಎ.ಚಿನಿವಾರ, ಎಸ್.ಎಂ.ಗುಡದಿನ್ನಿ, ಎಂ.ಎಸ್.ನಾವದಗಿ, ಆರ್.ಬಿ.ಪಾಟೀಲ, ಎಂ.ಎಚ್.ಕ್ವಾರಿ, ಬಿ.ಎ.ನಾಡಗೌಡರ, ಎಂ.ಎ.ಮುದ್ದೇಬಿಹಾಳ ಸೇರಿ ತಾಲೂಕಿನ ಎಲ್ಲ ಪತ್ರಕರ್ತರು ಹಾಗೂ ವಕೀಲರು ಮತ್ತು…

Read More

ವಿಜಯಪುರ: ದೇಶದ ಸುರಕ್ಷತೆ, ಸನಾತನ ಹಿಂದೂ ಧರ್ಮ ಉಳಿವಿಗಾಗಿ ಹಾಗೂ ಅಭಿವೃದ್ಧಿಗೋಸ್ಕರ ವಿಶ್ವ ನಾಯಕ ನರೇಂದ್ರ ಮೋದಿಯವರನ್ನು ಮತ್ತೋಮ್ಮೆ ಪ್ರಧಾನಿಯನ್ನಾಗಿಸುವ ಸಂಕಲ್ಪದೊಂದಿಗೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಚುನಾವಣಾ ಪ್ರಚಾರಾರ್ಥವಾಗಿ ಗುರುವಾರ ಯುವ ಮುಖಂಡ ರಾಮನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಿತು.ದಕ್ಷ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಸಿಂಗಂ ಎಂಬ ಖ್ಯಾತಿ ಗಳಿಸಿರುವ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯ ಲೋಕಸಭಾ ಚುನಾವಣೆ ಸ್ಟಾರ್ ಪ್ರಚಾರಕರಾದ ಕೆ.ಅಣ್ಣಾಮಲೈ ಅವರೊಂದಿಗೆ, ಆಶ್ರಮ ರಸ್ತೆಯ ಎಂಜಿನಿಯರಿಂಗ್ ಕಾಲೇಜು ಹತ್ತಿರ ಆರಂಭಗೊಂಡ ಬೃಹತ್ ಬೈಕ್ ರ‍್ಯಾಲಿ ಸಿದ್ದೇಶ್ವರ ದೇವಸ್ಥಾನ, ಮಹಾತ್ಮ ಗಾಂಧಿ ಚೌಕ್ ಮಾರ್ಗವಾಗಿ ಮೀನಾಕ್ಷಿ ಚೌಕ್ ಗೆ ತೆರಳಿಯಿತು.ರ‍್ಯಾಲಿಯುದ್ದಕ್ಕೋ ಬೊಲೋ ಭಾರತ್ ಮಾತಾ ಕೀ ಜೈ, ಒಂದೇ ಮಾತರಂ, ಜೈ ಶ್ರೀ ರಾಮ, ಅಬ್ ಕಿ ಬಾರ್ ಮೋದಿ ಸರ್ಕಾರ್, ನರೇಂದ್ರ ಮೋದಿಯವರಿಗೆ ಜಯವಾಗಲಿ, ಬಸನಗೌಡ ಪಾಟೀಲ ಯತ್ನಾಳ ಅವರಿಗೆ…

Read More

ಚಡಚಣ: ಜಿಲ್ಲೆಯ ೧೪ ಕಡೆಗಳಿಗೆ ನೀರು ತುಂಬುವ ಯೋಜನೆಯನ್ನು ಪ್ರಾರಂಭಿಸಿದ್ದು, ರೈತರಿಗೆ ಅನುಕೂಲ ಕಲ್ಪಿಸಿರುವುದು ಕಾಂಗ್ರೆಸ್. ಕಾರಣ ರಾಜು ಆಲಗೂರರನ್ನು ಜಯಶಾಲಿಯನ್ನಾಗಿಸಿದರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿಯಾಗುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲರು ಹೇಳಿದರು.ಸಮೀಪದ ನಿವರಗಿ ಗ್ರಾಮದ ರಾಜು ಆಲಗೂರ ಪರ ಮತಯಾಚನೆಯ ಬೃಹತ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತ, ಹಾಲಿ ಸಂಸದ ರಮೇಶ ಜಿಗಜಿಣಗಿಯವರು ಎರಡು ಸಲ ಆರಿಸಿ ಬಂದರೂ, ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತ, ಅವರ ಸಾಧನೆ ಶೂನ್ಯವಾಗಿದೆ. ಕೆಲಸ ಮಾಡುವವರಿಗೆ ಮತ ನೀಡಿರಿ. ಕಾಂಗ್ರೆಸ್ ರೈತರು, ಬಡವರು, ಜನ ಸಾಮಾನ್ಯರಿಗೆ ಸ್ವಾವಲಂಬಿಯಾಗಿ ಬದುಕಲು ಅಭಿವೃದ್ಧಿ ಯೋಜನೆಗಳ ಮೂಲಕ ಶಕ್ತಿ ತುಂಬುತ್ತಿದೆ. ಬಿಜೆಪಿ ಬ್ರಿಟಿಷರ ಪರವಾಗಿದ್ದ ಪಕ್ಷ, ಬಿಜೆಪಿಯವರ ಪ್ರಶ್ನೆಗಳಿಗೆ ನಮ್ಮ ಅಭಿವೃದ್ಧಿ ಯೋಜನೆಗಳು ಉತ್ತರವಾಗಲಿದೆ. ಕಾಂಗ್ರೆಸ್ ದೇಶಕ್ಕಾಗಿ ಏನು ಮಾಡಿದೆ ಎಂದು ಕೇಳುವ ಬಿಜೆಪಿಯವರಿಗೆ ರಾಜು ಆಲಗೂರರವರಿಗೆ ಮತ ಹಾಕುವ ಮೂಲಕ ತಕ್ಕ ಪಾಠ ಕಲಿಸಬೇಕೆಂದು ಎಂ.ಬಿ.ಪಾಟೀಲ ಹೇಳಿದರು.ರಮೇಶ ಜಿಗಜಿಣಗಿ ಕೆಲಸ…

Read More

ಇಂಡಿ: ಕಾರ್ಮಿಕರು ಜಗತ್ತಿನ ಆಸ್ತಿ, ಶ್ರಮಜೀವಿಗಳು ಅವರನ್ನು ಗೌರವಿಸಲು ಅವರ ಸೇವೆ ಸ್ಮರಿಸಲು ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ದಿನಾಚರಣೆ ಆಚರಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಹೇಳಿದರು.ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಪುರಸಭೆ ಕಾರ್ಮಿಕರ ವತಿಯಿಂದ ಹಮ್ಮಿಕೊಂಡ ಕಾರ್ಮಿಕ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.ಕರ್ನಾಟಕ ಪೌರ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ ಮಾತನಾಡಿ, ಪ್ರತಿಯೊಂದು ದೇಶದ ಅರ್ಥಿಕ ಅಭಿವೃದ್ದಿ ಆ ದೇಶದ ಕಾರ್ಮಿಕರ ಮೇಲೆ ಅವಲಂಬಿತವಾಗಿದೆ. ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗದಿಂದ ಮಾತ್ರ ಆ ದೇಶ ಅರ್ಥಿಕ ಪ್ರಗತಿ ಸಾಧಿಸಿರುತ್ತದೆ ಎಂದರು.ಕಾರ್ಯಕ್ರಮದಲ್ಲಿ ಆರೋಗ್ಯ ನೀರಿಕ್ಷಕ ಸೋಮು ನಾಯಕ, ಚಂದ್ರಶೇಖರ ಕಾಲೆಭಾಗ, ಮರೆಪ್ಪ ಗುಡುಮಿ, ಮುತ್ತು ಮುರಾಳ, ಮಲ್ಲಪ್ಪ ನಡಗಡ್ಡಿ ಮತ್ತಿತರಿದ್ದರು.

Read More

ಇಂಡಿ: ಬರುವ ಮೇ ೭ ರಂದು ನಡೆಯುವ ಲೋಕಸಭೆ ಚುನಾವಣೆಯ ವೀಕ್ಷಕರಾಗಿ ಗುಜರಾತ ಡಾ|| ರತನ್ ಕುಮಾರಿ ಕನವರ್ ಮತ್ತು ಬಿಹಾರದ ಆಯ್.ಆರ್.ಎಸ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಅನುಪಕುಮಾರ ಇಂಡಿ ತಾಲೂಕಿಗೆ ಭೇಟಿ ನೀಡಿ ಇಲ್ಲಿಯ ಚುನಾವಣೆ ಪ್ರಕ್ರಿಯೆ ವೀಕ್ಷಿಸಿದರು.ಸಾಮಾನ್ಯ ವೀಕ್ಷಕರಾಗಿ ಆಗಮಿಸಿದ ಡಾ|| ರತನ್ ಕುಮಾರಿ ಹಿಂಗಣಿ ಮತ್ತು ಅಗರಖೇಡ ಚೆಕ್ ಪೋಸ್ಟ ಅದಲ್ಲಿದೆ ಮತಗಟ್ಟೆ ಕೇಂದ್ರಗಳಾದ ಲಚ್ಯಾಣ, ಬರಗುಡಿ, ಭೂಯ್ಯಾರ ಶಾಲೆಗಳ ಮತಗಟ್ಟೆ ಕೇಂದ್ರಗಳಿಗೆ, ಇಂಡಿ ವಾರ್ಡ ನಂ ೧, ತಡವಲಗಾ ಶಾಲಾ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿದರು.ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಮಸ್ಟರಿಂಗ ಮತ್ತು ಡಿ ಮಸ್ಟರಿಂದ ವ್ಯವಸ್ಥ ಪರೀಶಿಲಿಸಿದರು.ನಂತರ ಪ್ರವಾಸಿ ಮಂದಿರದಲ್ಲಿ ಸೆಕ್ಟರ್ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡರು.ಅನುಪಕುಮಾರ ಚುನಾವಣೆ ಖರ್ಚು ವೆಚ್ಚ ಪರಿಶೀಲಿಸಿದರು.ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ ಬಬಲಾದ, ಪುರಸಭೆ ಮುಖ್ಯಾಧಿಕಾರಿ ಮುಖ್ಯಾದಿಕಾರಿ ಮಹಾಂತೇಶ ಹಂಗರಗಿ, ಎಚ್.ಎಸ್.ಗುನ್ನಾಪುರ, ಹೊನ್ನುಟಗಿ ಮತ್ತಿತರಿದ್ದರು.

Read More