Author: editor.udayarashmi@gmail.com

ಬ್ರಹ್ಮದೇವನಮಡು: ಸಿಂದಗಿ ತಾಲೂಕು ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದಲ್ಲಿ ಕಲ್ಶಾಣದೇಶ್ವರ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಾಸಾದ್ವಿ ಶಿವಶರಣಿ ಹೇಮರಡ್ಡಿ ಮಲ್ಲಮ್ಮನವರ ಮಹಾ ಪುರಾಣ ಕಾಯ೯ಕ್ರಮದಲ್ಲಿ ಮೆ.೩ರಂದು ರಾತ್ರಿ ೮ಗಂಟೆಗೆ ಶ್ರೀದೇವಿ ಹಾಗೂ ಮುತೈದೆಯರ ಉಡಿ ತುಂಬುವ ಕಾಯ೯ಕ್ರಮ ನಡೆಯಲಿದೆ. ಸಾಸನೂರ ತುಂಬಗಿ ಮಡಿವಾಳೇಶ್ವರ ಮಠದ ಮಹಾಂತಲಿಂಗ ಶಿವಾಚಾಯ೯ರು ದಿವ್ಶ ಸಾನಿಧ್ಶ ವಹಿಸುವರು. ನಿವೃತ್ತ ಕೃಷಿ ಅಧಿಕಾರಿ ಶಿವಾನಂದ ಹಿರೇಮಠ ಸಮ್ಮುಖ ವಹಿಸುವರು. ಸಚಿವ ಶರಣಬಸಪ್ಪ ದಶ೯ನಾಪೂರ ಪತ್ನಿ ಭಾರತಿ ದಶ೯ನಾಪೂರ, ಸಿಂದಗಿ ಶಾಸಕ ಅಶೋಕ ಮನಗೂಳಿ ಪತ್ನಿ ನಾಗರತ್ನಾ ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ ಪತ್ನಿ ಲಲಿತಾ ಭೂಸನೂರ, ಜೇವಗಿ೯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಪತ್ನಿ ನಾಗವೇಣಿ ಪಾಟೀಲ, ಶಶಿಕಲಾ ದಂಡಪ್ಪ ಸಾಹು ಮುಖ್ಶಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಮಠದ ಒಡೆಯ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ ತಿಳಿಸಿದ್ದಾರೆ.

Read More

ಸಿಂದಗಿ: ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರಿಗೆ ಮತ ನೀಡಿ ಎಂದು ನಾಗರತ್ನ ಮನಗೂಳಿ ಮನವಿ ಮಾಡಿಕೊಂಡರು.ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ಮನೆ ಮನೆಗೂ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣೆಯಲ್ಲಿ ರಾಜು ಆಲಗೂರ ಅವರ ಗೆಲುವು ನಿಶ್ಚಿತ. ಕಾಂಗ್ರೆಸ್ ಪಕ್ಷ ಎಲ್ಲ ಗ್ಯಾರಂಟಿಗಳನ್ನು ನೀಡುವ ಮೂಲಕ ನುಡಿದಂತೆ ನಡೆದಿದೆ ಎಂದರು.ಈ ವೇಳೆ ಸುನಂದಾ ಯಂಪುರೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Read More

ಇಂಡಿ: ಪಟ್ಟಣದಲ್ಲಿ ಮನೆ ನಿರ್ಮಿಸಬೇಕಾದರೆ ಕಟ್ಟಡ ಪರವಾನಿಗೆಗೆ ಅನುಮತಿ ಕೇಳಿದರೆ ಆರು ತಿಂಗಳಾದರೂ ಅನುಮತಿ ಸಿಗದ ದುಸ್ಥಿತಿ ಇಲ್ಲಿಯ ಪುರಸಭೆಯಲ್ಲಿದ್ದು ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.ಪುರಸಭೆಯಲ್ಲಿ ಅನುಮತಿ ಪಡೆದು ಕಟ್ಟಡ ಕಟ್ಟಬೇಕಾದರೆ ಸಂಬಂಧಪಟ್ಟ ಇಂಜಿನಿಯರ್ ಹತ್ತಿರ ಕಟ್ಟಡದ ನೀಲ ನಕ್ಷೆ ಹಾಗೂ ಅಂದಾಜು ಮೊತ್ತದ ಪ್ರತಿ ಸೇರಿದಂತೆ ಕಟ್ಟಡ ಪರವಾನಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಆರು ತಿಂಗಳ ಹಿಂದೆಯೇ ಅರ್ಜಿ ಸಲ್ಲಿಸಿದರೂ ಸಹ ಅನುಮತಿ ಸಿಗುತ್ತಿಲ್ಲ. ಹೀಗಾಗಿ ಇಂಡಿ ಪಟ್ಟಣದಲ್ಲಿ ಮನೆ ಕಟ್ಟಲು ಅನುಮತಿಗಾಗಿ ಜನ ಹರಸಾಹಸದ ಪಡುತ್ತಿರುವ ಘಟನೆ ನಡೆಯುತ್ತಿದೆ.ಪುರಸಭೆಯವರನ್ನು ಕೇಳಿದರೆ ನಾವು ವಿಜಯಪುರದ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಅರ್ಜಿ ಕಳುಹಿಸಿದ್ದೇವೆ. ಅವರು ಅಪ್ರುವಲ್ ನೀಡಿದ ನಂತರ ನಮಗೆ ಮುಂದಿನ ಕ್ರಮ ಕೈಗೊಳ್ಳಲು ಬರುತ್ತದೆ ಅಲ್ಲಿಯವರೆಗೂ ನಾವೇನು ಮಾಡೋಕೆ ಆಗೋಲ್ಲ ಅಂತಾರೆ ಪುರಸಭೆ ಸಿಬ್ಬಂದಿ.ಒಟ್ಟಿನಲ್ಲಿ ಈ ಅಧಿಕಾರಿಗಳ ತಿಕ್ಕಾಟದ ಮಧ್ಯ ಮನೆ ಕಟ್ಟುವ ಕನಸು ಹೊತ್ತಿರುವ ಜನರ ಪರಿಪಾಟಲು ಹೇಳತೀರದಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಈ…

Read More

ದೇವರಹಿಪ್ಪರಗಿ: ದಿ: ೦೩ ರಂದು(ಇಂದು) ೩೩ ಕೆ.ವ್ಹಿ ಕಡ್ಲೇವಾಡ ಪಿಸಿಎಚ್ ನಲ್ಲಿ ಲೈನ್ ಕ್ರಾಸಿಂಗ್ ಇರುವುದರಿಂದ ಸದರಿ ವಿದ್ಯುತ್ ಕೇಂದ್ರಗಳಲ್ಲಿ ಬೆಳಿಗ್ಗೆ ೯.೦೦ ಗಂಟೆಯಿಂದ ಮಧ್ಯಾನ್ಹ ೧೨.೦೦ ಗಂಟೆಯವರೆಗೆ ೩೩/೧೧ ಕೆ.ವ್ಹಿ ಕಡ್ಲೇವಾಡ ವಿದ್ಯುತ್ ಉಪ ಕೇಂದ್ರದ ಎಲ್ಲಾ ೧೧ ಕೆವ್ಹಿ ಫಿಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ದೇವರಹಿಪ್ಪರಗಿ ಇವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಸಿಂದಗಿ: ೨೦೨೪ರ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಸಿಂದಗಿ ನಗರಕ್ಕೆ ಮೇ.೦೩ರಂದು ಸಾಯಂಕಾಲ ೪ಗಂಟೆಗೆ ಸಚಿವ ಬೈರತಿ ಸುರೇಶ ಆಗಮಿಸಿ ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಹಾಲುಮತ ಸಮಾಜದ ಮುಖಂಡರ ಸಭೆ ನಡೆಸಲಿದ್ದಾರೆ.ಕಾರಣ ಸಮಾಜದ ಎಲ್ಲ ಯುವಕರು, ಹಿರಿಯರು, ಮುಖಂಡರು ಮತ್ತು ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಿಡಗುಂದಿ: ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ತಾಲ್ಲೂಕಿನ ಬಸವನಬಾಗೇವಾಡಿ ಕ್ರಾಸ್ ಬಳಿ ಬುಧವಾರ ಸಂಜೆ ಜರುಗಿದೆ.ಮೃತ ವ್ಯಕ್ತಿ ಬೇನಾಳ ಎನ್ ಎಚ್ ಗ್ರಾಮದ ಯಲಗೂರದಪ್ಪಗೌಡ ಗುರುಪಾದಪ್ಪಗೌಡ ಪಾಟೀಲ (65).ಆಸ್ತಿ ವಿವಾದ ಸೇರಿದಂತೆ ನಾನಾ ಕಾರಣಗಳಿಂದ ಅದೇ ಗ್ರಾಮದ ಕಿರಣಕುಮಾರ ವಿಠ್ಠಲ ಬೋರಣ್ಣವರ (23) ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ನಿಡಗುಂದಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ನಿಡಗುಂದಿ ಪೊಲೀಸರು ತಿಳಿಸಿದ್ದಾರೆ.ಬುಧವಾರ ಸಂಜೆ ಡಾಬಾವೊಂದರಲ್ಲಿ ಊಟಕ್ಕೆ ಕುಳಿತಿದ್ದ ಯಲಗೂರದಪ್ಪಗೌಡನ ಮೇಲೆ ಕಿರಣಕುಮಾರ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ ಎನ್ನಲಾಗಿದೆ.ತೀವ್ರ ಗಾಯಗೊಂಡ ಯಲಗೂರದಪ್ಪನನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬುಧವಾರ ರಾತ್ರಿಯೇ ಯಲಗೂರದಪ್ಪಗೌಡ ಮೃತಪಟ್ಟ ಎಂದು ನಿಡಗುಂದಿ ಪೊಲೀಸರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ವಿಜಯಪುರ ಎಸ್ ಪಿ ಋಷಿಕೇಷ ಸೋನಾವಾಲೆ, ಹೆಚ್ಚುವರಿ ಎಸ್ ಪಿ ಶಂಕರ ಮಾರಿಹಾಳ, ಸಿ.ಪಿ. ಐ. ಶರಣಗೌಡ ಗೌಡರ ಭೇಟಿ ನೀಡಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ವಿಜಯಪುರ ಜಿಲ್ಲಾ ಬಂಜಾರಾ ಸ್ವಾಭಿಮಾನ ಸಮಾವೇಶ | ಎಂಎಲ್ಸಿ ಪ್ರಕಾಶ ರಾಠೋಡ ಗಂಭೀರ ಆರೋಪ ವಿಜಯಪುರ: ಕಾಂಗ್ರೆಸ್ ನಮಗೆ ಎಸ್ಸಿ ಮೀಸಲಾತಿ ನೀಡಿದ್ದರಿಂದ ನಾವು ಶಿಕ್ಷಣ, ಉದ್ಯೋಗ ಸೇರಿದಂತೆ ಸರ್ವ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗಿದೆ. ಬಿಜೆಪಿಯವರು ವಿಶೇಷವಾಗಿ ರಮೇಶ ಜಿಗಜಿಣಗಿ ಹಾಗೂ ಗೋವಿಂದ ಕಾರಜೋಳ ಸದಾಶಿವ ಆಯೋಗದ ಹೆಸರಿನಲ್ಲಿ ಬಂಜಾರಾ ಸಮಾಜದ ಮೀಸಲಾತಿಯನ್ನು ಕಸಿಯಲು ಹೊರಟಿದ್ದರು. ನಮ್ಮ ಸಮುದಾಯವನ್ನು ಅತ್ಯಂತ ಕೀಳಾಗಿ ಕಂಡಿರುವ ಇವರಿಗೆ ತಕ್ಕ ಪಾಠ ಕಲಿಸಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಮತ ಹಾಕಿ ಗೆಲ್ಲಿಸಿ ಸ್ವಾಭಿಮಾನ ತೋರಿಸೋಣ ಎಂದು ವಿಧಾನ ಪರಿಷತ್ ಶಾಸಕ ಪ್ರಕಾಶ ರಾಠೋಡ ಹೇಳಿದ್ದಾರೆ.ಗುರುವಾರ ನಗರದಲ್ಲಿ ನಡೆದ ವಿಜಯಪುರ ಜಿಲ್ಲಾ ಬಂಜಾರಾ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದರು.ಇದು ಸ್ವಾಭಿಮಾನದ ಚುನಾವಣೆ. ನಮ್ಮ ಸಮುದಾಯದ ಮತ ಬೇಡ ಎಂದು ಹೇಳಿರುವ ಸಂಸದ ರಮೇಶ ಜಿಗಜಿಣಗಿಗೆ ಯಾಕೆ ಮತ ಹಾಕಬೇಕು? ಮುಖ್ಯಮಂತ್ರಿ ಸಿದ್ಧರಾಮಯ್ಯ ತಾಂಡಾಗಳುನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಂಡಿದ್ದಾರೆ. ಅಲ್ಲದೇ, ನಮ್ಮ…

Read More

ವಿಜಯಪುರ: ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.ಈ ಪ್ರಕರಣದಿಂದ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಆಗಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ತಪ್ಪು ಮಾಡಿದ ಯಾರಿಗೇ ಆಗಲಿ ಶಿಕ್ಷೆಯಾಗಲೇಬೇಕು. ಸರ್ಕಾರ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದರು.ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಯ ಕಾರಣದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ 11 ಬಿಜೆಪಿ ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್ 3 ಸ್ಥಾನಗಳಲ್ಲಿ ಮುಂಚೂಣಿಯಲ್ಲಿದೆ. ಎರಡನೇ ಹಂತದ ಕ್ಷೇತ್ರಗಳಲ್ಲೂ ಬಿಜೆಪಿ ಮುಂದಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್ ಅಭಿವೃದ್ಧಿ ಆಧಾರಿತ ಚುನಾವಣೆ ಪ್ರಚಾರ ಮಾಡದೆ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜಕೀಕರಣಗೊಳಿಸುತ್ತಿದೆ ಎಂದು ದೂರಿದರು.ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ದೂರದ ಕೊಲ್ಕತ್ತಾ ನಗರದಲ್ಲಿ ಪತ್ತೆಯಾಗಿದ್ದಾನೆ. ಈ…

Read More

ಇಂಚಗೇರಿಯಲ್ಲಿ ಸಮಾವೇಶ | ೧೦ ಸಾವಿರಕ್ಕೂ ಅಧಿಕ ಪಂಚಮಸಾಲಿಗರ ಪಾಲ್ಗೊಳ್ಳುವಿಕೆ | ಮುಖಂಡ ಸಂಗಮೇಶ ಬಬಲೇಶ್ವರ ಮಾಹಿತಿ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿಯಲ್ಲಿ ಮೇ.4 ರಂದು ಸಂಜೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲು ಪಂಚಮಸಾಲಿ ಸಮುದಾಯದ ಸಮಾವೇಶ ಹಮ್ಮಿಕೊಂಡಿರುವುದಾಗಿ ಸಮುದಾಯದ ಮುಖಂಡ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಶುಭಶ್ರಿ ಫಂಕ್ಷನ್ ಹಾಲ್ ನಲ್ಲಿ ಗುರುವಾರದ ನಡೆದ ಪಂಚಮಸಾಲಿ ಸಮಾಜದ ಮುಖಂಡರ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈ ಸಮಾವೇಶದ ಮುಖ್ಯ ಉದ್ದೇಶ ನಾವು ಕಾಂಗ್ರೆಸ್ ಪಕ್ಷಕ್ಕೆ ಏಕೆ ಮತ ಹಾಕಬೇಕು ಎಂಬುದಾಗಿದ್ದು, ಅಂದು ಈ ಕುರಿತು ಚಿಂತನ-ಮಂಥನ ನಡೆಯಲಿದೆ. ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಶಾಸಕ ವಿನಯ ಕುಲಕರ್ಣಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಸಿಂದಗಿ ಶಾಸಕ ಅಶೋಕ ಮನಗೂಳಿ, ಆಳಂದ ಶಾಸಕ ಬಿ.ಆರ್.ಪಾಟೀಲ, ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ನಾಡಿನ ಮತ್ತು ಜಿಲ್ಲೆಯ ಹಲವು ಮುಖಂಡರು ಸಮಾವೇಶದಲ್ಲಿ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭವಿಷ್ಯ ವಿಜಯಪುರ: ಈ ಸಲ ವಿಜಯಪುರದಲ್ಲಿ ಬದಲಾವಣೆ ನಿಶ್ಚಿತ, ಕಾಂಗ್ರೆಸ್ ದಿಗ್ವಿಜಯ ಸಾಧಿಸುವುದು ಖಚಿತ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಬುಧವಾರ ಮುಸ್ಸಂಜೆ ಮಮದಾಪುರ ಮತ್ತು ಜೈನಾಪುರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.ಹಾಲಿ ಸಂಸದ ರಮೇಶ ಜಿಗಜಿಣಗಿ ಮೂರು ಬಾರಿ ಸಂಸದರಾದರೂ ಸಿಕ್ಕ ಅವಕಾಶವನ್ನು ಅಭಿವೃದ್ಧಿಗೆ ಬಳಸದೇ ಕಾಲಹರಣ ಮಾಡಿದ್ದಾರೆ. ಇದನ್ನು ಅರಿತಿರುವ ಮತದಾರರು ಈ ಬಾರಿ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ. ವಿಜಯಪುರದಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ದಿಗ್ವಿಜಯ ಖಚಿತ. ಎಲ್ಲರೂ ಕೈ ಹಿಡಿಯಿರಿ. ಅಭಿವೃದ್ಧಿಯತ್ತ ಮುನ್ನಡೆಯಿರಿ. ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಗೆಲ್ಲಿಸಿ ನಮ್ಮೆಲ್ಲರ ಕೈ ಬಲಪಡಿಸಿ ಎಂದು ಅವರು ಕರೆ ನೀಡಿದರು.ಮಮದಾಪುರದಲ್ಲಿ ಮಾತನಾಡಿದ ಅವರು, ಈಗಾಗಲೇ ಮಮದಾಪುರ ಬಳಿ ಅರಣ್ಯ ಅಭಿವೃದ್ಧಿ ಪಡಿಸಲಾಗುತ್ತಿದೆ‌. ಪೂಜ್ಯ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಹಸಿರೀಕರಣಕ್ಕೆ ಒತ್ತು…

Read More