Author: editor.udayarashmi@gmail.com

ವಿಜಯಪುರದಲ್ಲಿ ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ ವಿಜಯಪುರ: ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಗುರುವಾರ ನಗರದಲ್ಲಿ ನಡೆದ ಬಂಜಾರಾ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿ, ನೀವು ಶ್ರಮ ಜೀವಿಗಳು, ಗಟ್ಟಿಗರು. ಬಸವಣ್ಣನವರ ಕಾಯಕ ಪರಂಪರೆಯಂತೆ ಇದ್ದೀರಿ. ನಿಮ್ಮ ಸಂಸ್ಕೃತಿ ಬಿಟ್ಟಿಲ್ಲ ಎಂದರು.ನಿಮಗೆ ಮೀಸಲಾತಿ ಕೊಡಿಸುವಲ್ಲಿ ಇಂದಿರಾಗಾಂಧಿ, ದೇವರಾಜ ಅರಸು ಅವರ ಶ್ರಮ ಕಾರಣ. ಇತ್ತೀಚೆಗೆ ತಾಂಡಾ ಅಭಿವೃದ್ಧಿ ಯೋಜನೆಗಳಿಂದ ನಿಮ್ಮ ಏಳಿಗೆಗೆ ಯತ್ನಿಸಿದ್ದೇವೆ. ಸಿದ್ದರಾಮಯ್ಯರು ಇಲ್ಲಿನ ನಿಡೋಣಿಗೆ ಬಂದಾಗ ಅಲ್ಲೇ ಸೇವಾಲಾಲರ ಜಯಂತಿ ಘೋಷಣೆ ಮಾಡಲಾಗಿತ್ತು. ಹಾಗೆಯೇ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಬದಲಾಯಿಸಿದ್ದು ನಮ್ಮ ಸರಕಾರ ಎಂದರು.ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುವುದಾಗಿ ಹೇಳಿದ ಸಚಿವ ಪಾಟೀಲರು, ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು. ಇಡೀ ರಾಜ್ಯದಲ್ಲಿ ನಿಮ್ಮ ಸೌಖ್ಯವನ್ನು…

Read More

ಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​​ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು.ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ…

Read More

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ | ಪ್ರಧಾನಿಗೆ ಸಿಎಂ ಪತ್ರ | ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಆಗ್ರಹ ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ಬುಧವಾರ (ಮೇ 1, 2024) ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್‌ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ. ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್‌ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.“ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, 2024ರ…

Read More

ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಒಂದು ದಟ್ಟವಾದ ಕಾಡಿನಲ್ಲಿ ಸಿಂಹಗಳ ಸುಂದರವಾದ ಕುಟುಂಬವೊಂದು ವಾಸಿಸುತ್ತಿತ್ತು. ಪ್ರತೀ ದಿನವೂ ತನ್ನ ಕುಟುಂಬದ ಸದಸ್ಯರಿಗೆ ಅಗತ್ಯವಿರುವ ಆಹಾರವನ್ನು ಗಂಡು ಸಿಂಹವೇ ಬೇಟೆಯಾಡಿ ತಂದು ಎಲ್ಲಾ ಸದಸ್ಯರಿಗೂ ನೀಡುತ್ತಿತ್ತು. ಗಂಡು ಸಿಂಹವು ಪ್ರತೀ ದಿನ ಬೇಟೆಯಾಡಿ ಮಾಂಸವನ್ನು ತಂದರೆ ಹೆಣ್ಣು ಸಿಂಹವು ಬೇಟೆಯನ್ನು ಹಂಚಿ ಎಲ್ಲಾ ಸದಸ್ಯರಿಗೂ ನೀಡುತ್ತಿತ್ತು. ಒಂದು ದಿನ ಸುಂದರವಾದ ಸಂಸಾರದಲ್ಲಿ ಅಪಸ್ವರ ಎದುರಾಯಿತು. ಗಂಡು ಸಿಂಹ ಮತ್ತು ಹೆಣ್ಣು ಸಿಂಹ ಇಬ್ಬರ ನಡುವೆ ಯಾರು ಮೇಲು ಎಂಬ ಚರ್ಚೆಯು ಪ್ರಾರಂಭವಾಯಿತು. ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಮರದ ಮೇಲೆ ಕುಳಿತು ಸಿಂಹಗಳ ಜಗಳವನ್ನು ಗಮನಿಸಿದ ರಣಹದ್ದೊಂದು ಎರಡು ಸಿಂಹಗಳ ಪೈಕಿ ಯಾರು ಮೇಲೆಂದು ನಿರ್ಧರಿಸಲು ಒಂದು ಉಪಾಯವನ್ನು ಹೇಳಿಕೊಟ್ಟಿತು. ಅದೇನೆಂದರೆ ಪ್ರತಿ ದಿನವೂ ಬೇಟೆಯನ್ನು ಹಿಡಿಯಲು ಗಂಡು ಸಿಂಹವು ಹೋದರೆ, ಈ ಬಾರಿ ಹೆಣ್ಣು…

Read More

ಆಲಮಟ್ಟಿ: ಇಲ್ಲಿಯ ನರ್ಸರಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ನಾಗಶೆಟ್ಟಿ ಮಾತನಾಡಿ,ಕಾರ್ಮಿಕ ಸಂಘಟನೆಗಳು ಪ್ರಮುಖವಾಗಿ ಆಚರಿಸುವ ಸಾರ್ವಜನಿಕ ಉತ್ಸವದ ದಿನವೇ ಕಾರ್ಮಿಕ ದಿನವಾಗಿದೆ. ಈ ದಿನದಂದು ಪ್ರಪಂಚದ ನೂರಾರು ರಾಷ್ಟ್ರಗಳಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ. 20ನೇ ಶತಮಾನದಲ್ಲಿ ಕಾರ್ಮಿಕ ಸಂಘಟನೆಗಳ ಪ್ರಭಾವದಿಂದಾಗಿ ಭಾರತದಲ್ಲಿಯೂ ಈ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕಾರ್ಮಿಕ ದಿನದ ಇತಿಹಾಸ, ಬೆಳವಣಿಗೆ, ಅದರ ಹಿನ್ನಲೆ ಕುರಿತು ವಿವರಿಸಿದರು.ಆರ್.ಎಂ.ಜಿ.ಎಫ್.ಅಧ್ಯಕ್ಷ ನೇತಾಜಿ ಗಾಂಧಿ ಮಾತನಾಡಿ, ಶ್ರಮಜೀವಿಗಳಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಪೂರ್ವದ 1923ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಈ ದಿನವನ್ನು ಆಚರಿಸಲು ಆರಂಭಿಸಲಾಯಿತು.ದಿನಕ್ಕೆ 8 ತಾಸು ಕೆಲಸದ ಅವಧಿಯನ್ನು ನಿಗದಿ ಮಾಡಬೇಕು ಎನ್ನುವ ಆಗ್ರಹದೊಂದಿಗೆ ಶುರುವಾದ ಚಳವಳಿಗೆ ಯಶಸ್ಸು ಸಿಕ್ಕಿತು. ಕಾರ್ಮಿಕರ ಕೊಡುಗೆ ಮತ್ತು ಅವರ ತ್ಯಾಗವನ್ನು ಈ ದಿನ ಸ್ಮರಿಸಲಾಗುತ್ತದೆ. ಕಾರ್ಮಿಕರ ತ್ಯಾಗವನ್ನು ಮನಗಂಡ ಮಹಾತ್ಮ ಗಾಂಧೀಜಿಯವರು 1918ರಲ್ಲಿ ಅಹಮದಾಬಾದ್ ಹತ್ತಿ ಗಿರಣಿ ಮಾಲೀಕರ ವಿರುದ್ಧ ಸತ್ಯಾಗ್ರಹ…

Read More

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ…

Read More

– ಜಯಶ್ರೀ .ಜೆ. ಅಬ್ಬಿಗೇರಿ,ಇಂಗ್ಲೀಷ ಉಪನ್ಯಾಸಕರು, ಬೆಳಗಾವಿ, ಮೊ.೯೪೪೯೨೩೪೧೪೨ ಸಮಯಪಾಲನೆಕೆಲವರಿಗೆ ಬಾಗಿಲಿನಿಂದ ಹೊರಬರಲು ಕಷ್ಟವಾಗುತ್ತದೆ. ಕೆಲವು ನಿಮಿಷಗಳಲ್ಲಿ ಗಡಿಯಾರವನ್ನು ಮುಂದಕ್ಕೆ ಹೊಂದಿಸುವುದು ಬೇಗನೆ ಹೊರಡಲು ಸಹಾಯ ಮಾಡಬಹುದು. ಕೆಲಸಕ್ಕೆ ತಡವಾಗಿ ಹೋಗುವುದು ನೀವು ಕೆಲಸಕ್ಕೆ ಮೀಸಲಾಗಿಲ್ಲ ಎಂಬುದನ್ನು ಸೂಚಿಸುತ್ತದೆ. ಸಮಯಕ್ಕೆ ಸರಿಯಾಗಿ ಅಥವಾ ಮುಂಚಿತವಾಗಿ ಇರುವ ಅಭ್ಯಾಸವನ್ನು ಬೆಳಸಿಕೊಳ್ಳಿ ಇದು ನಿಮಗೆ ಕೆಲಸಕ್ಕೆ ಮಾನಸಿಕವಾಗಿ ಸಿದ್ಧರಾಗಲು ಅವಕಾಶ ನೀಡುತ್ತದೆ. ಅಂದಿನ ಕೆಲಸದ ಸಂಕ್ಷಿಪ್ತ ಟಿಪ್ಪಣಿ ಪರಿಶೀಲಿಸಲು ಸಾಧ್ಯವಾಗುವುದು. ಸಮಯ ಅಮೂಲ್ಯ ಮೌಲ್ಯ. ಅದನ್ನು ಬುದ್ಧಿವಂತಿಕೆಯಿಂದ ಬಳಸಿ. ’ನೀವು ಇಂದು ಮಾಡಬಹುದಾದ ಕೆಲಸವನ್ನು ನಾಳೆಯವರೆಗೂ ಬಿಡಬೇಡಿ.’ ಎಂಬುದು ಬೆಂಜಮಿನ್ ಫ್ರಾಂಕ್ಲಿನ್ ಹೇಳಿದ ಮಾತು. ಸಮಯವು ಹಣವೆಂಬುದನ್ನು ಗಮನದಲ್ಲಿರಿಸಿ ಫ್ರಾಂಕ್ಲಿನ್ ಇದನ್ನು ನುಡಿದಿರಬಹುದು. ಕಾರ್ಯಗಳನ್ನು ಸಮಯೋಚಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸಿ. ಬಲವಾದ ಕೆಲಸದ ನೀತಿಯನ್ನು ಹೊಂದಿದ ಜನರು ತಮ್ಮ ಕೆಲಸವನ್ನು ಮುಂದೂಡುವುದಿಲ್ಲ.ವೃತ್ತಿಪರತೆವೃತ್ತಿಪರತೆಯೆಂದರೆ ನೀವು ಧರಿಸುವ ಗರಿ ಗರಿಯಾದ ಬಿಳಿ ಶರ್ಟ್ ಹಾಗೂ ಟೈ ಅಲ್ಲ. ಅದನ್ನು ಮೀರಿದ ನಿಮ್ಮ ವರ್ತನೆ ಮೌಲ್ಯಗಳು ಮತ್ತು ನಡವಳಿಕೆಯನ್ನು…

Read More

ವಿಜಯಪುರ: ಭವದ ಭಾವೈಕತೆಯ ಭಗವಂತ ಸಿದ್ದಿಪುರುಷ ವಿಶ್ವಾರಾಧ್ಯರ ಉತ್ತಮ ತತ್ವ ಚಿಂತನೆಗಳು ಜೀವನದಲ್ಲಿ ಅಳವಡಿಕೆಯಾಗಲಿ ಎಂದು ಸಾರಂಗಮಠ-ಗಚ್ಚಿನಮಠ ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ಶ್ರೀ ಬಸಯ್ಯ ಮುತ್ಯಾನ ಹಿರೇಮಠದ ಜಾತ್ರೆ ಹಾಗೂ ಜಗನ್ಮಾತೆ ಶ್ರೀದೇವಿ ಜಾತ್ರಾ ಮಹೋತ್ಸವ ಅಂಗವಾಗಿಸಿದ್ದಕುಲ ಚಕ್ರವರ್ತಿ ಶ್ರೀ ವಿಶ್ವಾರಾಧ್ಯರ ಪುರಾಣ ಪ್ರವಚನ ಕಾರ್ಯಕ್ರಮ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಧರ್ಮದ ತಳಹದಿಯ ಮೇಲೆ ಸುಂದರ ಬದುಕು ಕಟ್ಟಿಕೊಂಡು ಮಕ್ಕಳಿಗೆ ಬಾಲ್ಯದಲ್ಲಿಯೇ ಆಚಾರ – ವಿಚಾರ ಸಂಸ್ಕಾರಗಳು ಅವರಿಗೆ ಪಾಲಕರು ಕಲಿಸಬೇಕು ಎಂದರು.ಕನ್ನೊಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಕಾರ್ಯಕ್ರಮದ ನೇತೃತ್ವವಹಿಸಿ ಆಶೀರ್ವಚನ ನೀಡಿ ಅವರು ಮಾತನಾಡಿ ನಮ್ಮ ಸುಂದರ ಬದುಕನ್ನು ಹಸನುಗೊಳಿಸಲು ಸಿದ್ದಕುಲ ಚಕ್ರವರ್ತಿ ಶ್ರೀ ವಿಶ್ವಾರಾಧ್ಯರ ಪುರಾಣ ಪ್ರವಚನಗಳಲ್ಲಿ ಬರುವ ಸಾರವಂಶಗಳು ಜೀವನದಲ್ಲಿ ಅವಳವಡಿಸಿಕೊಳ್ಳಬೇಕು ಎಂದರು.ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ ಹಾಗೂ ಅಳ್ಳಗಿ ಗ್ರಾಮದ ಪ್ರವಚನಕಾರ ಶರಣಯ್ಯ ಶಾಸ್ತ್ರಿ ಮಾತನಾಡಿ, ಶ್ರೀ ಬಸಯ್ಯ…

Read More

ಸಿಂದಗಿ: ಕಾರ್ಮಿಕ ವರ್ಗದ ಶ್ರಮ ಮತ್ತು ಸಮರ್ಪಣೆಯನ್ನು ಗುರುತಿಸುವುದು, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಮಿಕ ದಿನದ ಉದ್ದೇಶ ಎಂದು ಡಿವಾಯ್‌ಎಫ್‌ಐ ತಾಲೂಕ ಅಧ್ಯಕ್ಷ ರಮೇಶ ಸಾಸಾಬಾಳ ಹೇಳಿದರು.ತಾಲೂಕಿನ ಬೋರಗಿ ಗ್ರಾಮದ ನರೇಗಾ ಕೂಲಿ ಕಾರ್ಮಿಕರ ಮಧ್ಯದಲ್ಲಿ ಸಿಐಟಿಯು ತಾಲೂಕು ಸಮಿತಿ ವತಿಯಿಂದ ಹಮ್ಮಿಕೊಂಡ ಕಾರ್ಮಿಕ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಮಿಕ ವರ್ಗದ ಕೊಡುಗೆಯನ್ನು ಸ್ಮರಿಸಲು ಮತ್ತು ತೀವ್ರ ಹಾಗೂ ಅಸುರಕ್ಷಿತ ಪರಿಸರದಲ್ಲಿ ಕಾರ್ಯನಿರ್ವಹಿಸುವವರ ಕಷ್ಟಗಳನ್ನು ಆಲಿಸಲು ಪ್ರಪಂಚದಾದ್ಯಂತ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಸಿಐಟಿಯು ತಾಲೂಕಾಧ್ಯಕ್ಷೆ ಪ್ರತಿಭಾ ಕೂರಡಿ. ಸರಸ್ವತಿ ಮಠ, ಬಿಸಿ ಊಟದ ತಾಲೂಧ್ಯಕ್ಷೆ ಬಿಸ್ಮಿಲ್ಲಾ, ಬೋರಗಿ ಗ್ರಾಮದ ಶಾಂಭವಿ, ಗುರುಬಾಯಿ, ಬಸವರಾಜ, ಸಾವಿತ್ರಿ ಬಡಿಗೇರ ಸೇರಿದಂತೆ ನರೇಗಾ ಕೂಲಿ ಕಾರ್ಮಿಕರು, ಸಿಯುಟಿಐ ಮತ್ತು ಡಿವಾಯ್‌ಎಫ್‌ಐನ್ ಪದಾಧಿಕಾರಿಗಳು ಇದ್ದರು.

Read More