Author: editor.udayarashmi@gmail.com

ರಾಜ್ಯ ಎಸ್ಸಿ ಮೋರ್ಚಾ ಉಪಾಧ್ಯಕ್ಷಗೋಪಾಲ ಘಟಕಾಂಬಳೆ ಡಾ.ಬಾಬುರಾಜೇಂದ್ರ ನಾಯಕ ವಿರುದ್ಧ ಕಿಡಿ ವಿಜಯಪುರ:ಡಾ.ಬಾಬುರಾಜೇಂದ್ರ ನಾಯಕ ಅವರು ಬಿಜೆಪಿ ಲೋಕಸಭೆ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಮಾಜಿ ಸಚಿವ ಅಪ್ಪುಪಟ್ಟಣಶೆಟ್ಟಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ.ವೈದ್ಯರಾಗಿ ಯಾವರೀತಿ ಮಾತನಾಡಬೇಕು ಎಂಬ ಸೌಜನ್ಯ ಅವರಲ್ಲಿ ಇಲ್ಲ ಎಂದು ರಾಜ್ಯ ಎಸ್ಸಿ ಕೋರ್ಚಾ ಉಪಾಧ್ಯಕ್ಷ, ಗೋಪಾಲ ಘಟಕಾಂಬಳೆ ಕಿಡಿಕಾರಿದರು.ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲಿ ಬೇಕಾದರೂ ನಿಲ್ಲಲು ಅವಕಾಶ ಇದೆ. ಸಂಸದ ಜಿಗಜಿಣಗಿ ಅವತಿಗೆ ಪ್ರಜ್ಞೆ ಇಲ್ಲ ಎಂದಿದ್ದಾರೆ. ಅವರಿಗೆ ತಿಳುವಳಿಕೆಯ ಕೊರತೆ ಇದೆ.ಅವರು ನಿಲ್ಲಬಾರದು ಎಂದು ಎಲ್ಲೂ ಹೇಳಿಲ್ಲ, ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿ ಸ್ಪರ್ಧೆ ಮಾಡಿದರೂ, ನಮ್ಮ ನಾಯಕರಾಗಲಿ, ಕಾರ್ಯಕರ್ತರು ಏನೂ ಹೇಳಿಲ್ಲ. ನಮ್ಮ ನಾಯಕರಿಗೆ ಆ ಧ್ಯಾನ ಇದೆ. ನಿಮಗೆ ಬೆನ್ನು ಹತ್ತಿ ಸ್ಪರ್ದೆ ಮಾಡಬೇಡಿ ಎಂದು ಕಾಂಗ್ರೆಸ್ ನವರು ಹಿಂದೆ ತೆಗೆಸಿದ್ದಾರೆ, ಅದರ ಪರಿಜ್ಞಾನ ಇಲ್ಲದ ಕಾಂಗ್ರೆಸ್ ನವರಿಗೆ ಹೇಳಲಿ ಎಂದು ಟಾಂಗ್ ನೀಡಿದರು.ಬಿಜೆಪಿ ಪಕ್ಷಕ್ಕೆ…

Read More

ವಿಜಯಪುರ: 10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.ಬುಧವಾರ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಭಾರತದ ಆರ್ಥಿಕತೆಯನ್ನು 5 ನೇ ಸ್ಥಾನಕ್ಕೆ ತಂದಿದ್ದಾರೆ. ಈಗ ಮುಂದಿನ 5 ವರ್ಷಗಳಲ್ಲಿ ಭಾರತದ ಆರ್ಥಿಕತೆಯನ್ನು 3ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.2047 ರ ವೇಳೆಗೆ ಭಾರತದ 100ನೇ ಸ್ವಾತಂತ್ರೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಭಾರತ ವಿಶ್ವಗುರು ಆಗಲಿದೆ. ಅದರಲ್ಲಿ ಮುಸ್ಲಿಂಮರು ಕ್ರೈಸ್ತರು ಸೇರಿದಂತೆ ಎಲ್ಲ ಅಲ್ಪಸಂಖ್ಯಾತರ ಕೊಡುಗೆ ಇರಲಿದೆ ಎಂದು ತಿಳಿಸಿದರು.ಬಿಜೆಪಿ ಕೇವಲ ಹಿಂದುಗಳ ಪಕ್ಷವಲ್ಲ. ಅಲ್ಪಸಂಖ್ಯಾತರು ಕೂಡಾ ಪ್ರಧಾನಿ ಮೋದಿ ಜಾರಿಗೊಳಿಸಿದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಎಲ್ಲ ಅಲ್ಪಸಂಖ್ಯಾತರು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿದ್ದಾರೆ. ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗಲಿದೆ. ನಾವು ಕೂಡಾ ಪ್ರಧಾನಿಯಾಗಿ ಮೋದಿ ಅವರನ್ನೇ ನೋಡಬಯಸುತ್ತಿದ್ದೇವೆಂದು ತಿಳಿಸಿದರುಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ…

Read More

ವಿಜನ್ ವಿಜಯಪುರ-10 ಅಂಶಗಳಿಗೆ ಒತ್ತು” ವಿಜಯಪುರ ಕ್ಷೇತ್ರದ ಚುನಾವಣೆ ಪ್ರನಾಳಿಕೆ ಬಿಡುಗಡೆ ವಿಜಯಪುರ: ಇಲ್ಲಿಯ ಮೀಸಲು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ನಾನು ತಮ್ಮ ಆಶೀರ್ವಾದದಿಂದ ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ನನ್ನ ಅವಧಿಯಲ್ಲಿ ಜಿಲ್ಲೆಯ ಪ್ರಮುಖ ವಿಷಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸತತ ಪ್ರಯತ್ನ ಮಾಡಿ, ಜಾರಿಗೆ ತರುವಲ್ಲಿ ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಭರವಸೆ ನೀಡಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಜಿಲ್ಲೆಯ ಅಭಿವೃದ್ಧಿಗಾಗಿ “ವಿಜನ್ ವಿಜಯಪುರ-10 ಅಂಶಗಳಿಗೆ ಒತ್ತು” ಎಂಬ ತಮ್ಮ ಕ್ಷೇತ್ರದ ಚುನಾವಣೆ ಪ್ರನಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.೧. ನೀರಾವರಿ: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು ಅಗತ್ಯವಿರುವ ಕೇಂದ್ರ ಸರ್ಕಾರದಲ್ಲಿ 2010 ರಿಂದ ನೆನೆಗುದಿಗೆ ಬಿದ್ದಿರುವ ಬ್ರಿಜೇಶಕುಮಾರ ತೀರ್ಪು ಗೆಜೆಟ್ ನೋಟಿಫಿಕೇಶನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ, ಪೂರ್ಣಗೊಳಿಸುವುದು.2.ಕೃಷ್ಣಾ ನ್ಯಾಯಾದೀಕರಣ:* ಬ್ರಜೇಶ ಕುಮಾರ ಆಯೋಗ ತೀರ್ಪು 2010 ರಲ್ಲಿ ನೀಡಿ,15 ವರ್ಷಗಳು ಕಳೆದರೂ ಇನ್ನೂ…

Read More

ವಿಜಯಪುರ: ಕೇಂದ್ರದ ಮೋದಿಯವರ ಬಿಜೆಪಿ ಸರಕಾರ ದೇಶದ ಆರ್ಥಿಕ ಸ್ಥಿತಿ ಹದಗೆಡಿಸಿದ್ದಲ್ಲದೇ ಬೆಲೆ ಏರಿಕೆಯಿಂದ ಜನರ ಜೀವನವನ್ನು ದುರ್ಭರಗೊಳಿಸಿದೆ. ಈ ಸಲ ಇವರಿಗೆ ಮತ ನೀಡಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ನಗರದಲ್ಲಿ ನಡೆದ ಲಿಂಗಾಯತ ರೆಡ್ಡಿ ಸಮುದಾಯದ ಬೃಹತ್ ಸಭೆಯಲ್ಲಿ ಅವರು ಮಾತನಾಡಿ, ಈ ಭಾಗದಲ್ಲಿ ಸಚಿವ ಎಂ.ಬಿ.ಪಾಟೀಲರಿಂದ ಹದಿನೈದು ಲಕ್ಷ ಎಕರೆಯಷ್ಟು ಜಮೀನಿಗೆ ನೀರಾವರಿಯಾಗಿದೆ. ಇಷ್ಟೆಲ್ಲ ಮಾಡಿದರೂ ಏನೂ ಮಾಡದ ಬಿಜೆಪಿ ಬರೀ ಸುಳ್ಳು ಹೇಳಿಕೊಂಡು ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹೆಣ್ಣುಮಕ್ಕಳ ಉಚಿತ ಪ್ರಯಾಣದ ಮೊತ್ತ ಇನ್ನೂರು ಕೋಟಿ ರೂ. ತಲುಪಿದೆ. ಇದರಿಂದ ಮಹಿಳೆಯರಿಗೆ ಬಹಳ ಅನುಕೂಲವಾಗಿದೆ. ಇದೇ ರೀತಿ ಗೃಹ ಜ್ಯೋತಿ, ಅನ್ನ ಭಾಗ್ಯ, ಮಹಿಳೆಯರಿಗೆ ಎರಡು ಸಾವಿರ ರೂ. ನೀಡಿದ್ದು ನಮ್ಮ ಜನಾನುರಾಗಿ ನಡೆಯ ಉದ್ದೇಶ. ಮೋದಿಯವರ ಬೆಲೆ ಏರಿಕೆಯ ಸಂಕಟದಿಂದ ಜನರನ್ನು ಪಾರು ಮಾಡಲು ಈ ಗ್ಯಾರಂಟಿಗಳನ್ನು ನೀಡಲಾಗಿದೆ. ಆದರೆ ಇದರ ಪರಿವೇ ಇಲ್ಲದೆ ಇದನ್ನು ಬಿಟ್ಟಿ ಭಾಗ್ಯ ಎಂದು ಹೇಳುತ್ತಾರೆ. ಬಿಜೆಪಿಯ ಯಾವೊಂದು…

Read More

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ದೆಹಲಿಯಲ್ಲಿ ಸರಕಾರಿ ಬಂಗಲೆಯಲ್ಲಿ ವಾಸಿಸುತ್ತ ಕೇವಲ ಟಿಎ, ಡಿಎ ಪಡೆಯಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್ಸಿ ಸಮುದಾಯಕ್ಕೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ನಿವರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿಜಯಪುರ ಸಂಸದರ ಬಗ್ಗೆ ಹೇಳಿ ಹೇಳಿ ಸಾಕಾಗಿದೆ. ಜಿಲ್ಲೆಯಲ್ಲೂ ಅಭಿವೃದ್ಧಿ ಮಾಡಿಲ್ಲ. ಎಸ್.ಸಿ. ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದರೂ ಎಸ್ಸಿ, ಎಸ್ಟಿ ಸಮುದಾಯಕ್ಕೂ ನ್ಯಾಯ ಒದಗಿಸಿಲ್ಲ. ವಿಮಾನದಲ್ಲಿ ಉಚಿತವಾಗಿ ತಿರುಗಾಡುತ್ತ, ಟಿಎ, ಡಿಎ ಪಡೆದು ದೆಹಲಿಯಲ್ಲಿ ಸರಕಾರಿ ಬಂಗಲೆಯಲ್ಲಿ ಹಾಯಾಗಿ ವಾಸಿಸುವುದಕ್ಕೆ ಮಾತ್ರ ಅವರು ಸೀಮಿತರಾಗಿದ್ದಾರೆ. ಇದಷ್ಟೇ ಅವರು ಕೆಲಸ ಎಂದುಕೊಂಡಿದ್ದಾರೆ. ಮತ ಹಾಕು ಎಂದರೂ ಜನತೆ ಯೋಚನೆ ಮಾಡುತ್ತಾರೆ. ಇನ್ನು ನಿಮ್ಮ ಮತವೇ ಬೇಡ ಎಂದು ಹೇಳಿರುವ ರಮೇಶ ಜಿಗಜಿಣಗಿ ಅವರಿಗೆ ಯಾರಾದರೂ ವೋಟು ಹಾಕುತ್ತಾರಾ ಎಂದು…

Read More

ವಿಜಯಪುರ: ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಾರ್ಯಾಲಯ ಕಳೆಗಟ್ಟಿತ್ತು. ಇದಕ್ಕೆ ಕಾರಣ, ಮಂಗಳ ಮುಖಿಯರ ನಗು ಮೊಗದ ಕಲರವ.ಅವರೆಲ್ಲ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರಿಗೆ ಸ್ವಯಂ ಪ್ರೇರಣೆಯಿಂದ ಬೆಂಬಲ ಸೂಚಿಸಿ, ಶುಭ ಹರಸಲು ಬಂದಿದ್ದರು.ವಿಜಯಪುರ ಕ್ಷೇತ್ರದಲ್ಲಿ ಮಂಗಳ ಮುಖಿಯರು ಮತದಾರರಾಗಿ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಇದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸಂಘಟನೆಗಳ ಸಲಹೆಯಂತೆ ಮಂಗಳ ಮುಖಿಯರ ಕ್ಷೇಮಕ್ಕಾಗಿ ಇರುವ ಸಂಘಟನೆಗಳವರು ಆಲಗೂರರಿಗೆ ಬೆಂಬಲ ನೀಡಿದ್ದಾರೆ. ಅದಕ್ಕಾಗಿಯೇ ಇವರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಇವರಿಗೆ ಧನ್ಯವಾದ ಸಲ್ಲಿಸಿ ಮಾತನಾಡಿದ ರಾಜು ಆಲಗೂರ ಅವರು, ಕಾಂಗ್ರೆಸ್‌ಗೆ ಎಲ್ಲ ಕಡೆಯಿಂದ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಇವತ್ತು ಮಂಗಳ ಮುಖಿಯರ ಶುಭ ಹರಕೆ, ಬೆಂಬಲದಿಂದ ಮತ್ತಷ್ಟು ಖುಷಿಯಾಗಿದೆ. ಇವರ ಕ್ಷೇಮಾಭಿವೃದ್ಧಿಗೆ ಬದ್ಧ ಎಂದರು.ಮಂಗಳ ಮುಖಿಯರ ಪ್ರತಿನಿಧಿಯಾಗಿ ಪ್ರಾರ್ಥನಾ ಅಂಬಿ ಮಾತನಾಡಿ, ಸಮಾಜದ, ಉಳಿದ ಪಕ್ಷಗಳು ಸೇರಿ ಎಲ್ಲರೂ ನಮ್ಮನ್ನು ಮೊದಲಿಂದ ಕಡೆಗಣಿಸಿದ್ದಾರೆ. ಈಗ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದೇವೆ. ನಮಗೆ ವಸತಿ ಸೇರಿ…

Read More

ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ಜೊತೆಗೆ ಅಂತರ ಕಾಯ್ದುಕೊಂಡ ಅಮಿತ್ ಶಾ | ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದು ಆರೋಪ ನವದೆಹಲಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ಕ್ಲಿಪ್‌ಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.ಮಂಗಳವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಈ ವಿಷಯದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ, ಪಕ್ಷವು ಮಾತೃಶಕ್ತಿ (ತಾಯಂದಿರು ಅಥವಾ ಮಹಿಳೆಯರು) ಜೊತೆಗಿದೆ ಎಂದು ಹೇಳಿದರು.“ನಾವು ದೇಶದ ಮಾತೃಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ ಅನ್ನು ಕೇಳಲು ಬಯಸುತ್ತೇನೆ, ಯಾರ ಸರ್ಕಾರವಿದೆ? ಸರ್ಕಾರವು ಕಾಂಗ್ರೆಸ್ ಪಕ್ಷದ್ದು, ಅವರು ಇಲ್ಲಿಯವರೆಗೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಇದು ರಾಜ್ಯದ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಎನ್‌ಡಿಎ ಅಭ್ಯರ್ಥಿ…

Read More

ಮುದ್ದೇಬಿಹಾಳ: ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಲು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪರಶುರಾಮ ವನಹಳ್ಳಿ ಹೇಳಿದರು.ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಗ್ರಾ.ಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಮದಲ್ಲಿ ಅವರು ಮಾತನಾಡಿದರು.ದೇಶದ ಅಡಳಿತಕ್ಕೆ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗಿದೆ. ಈ ಹಕ್ಕನ್ನು ಯಾರೂ ಕಳೆದುಕೊಳ್ಳದೇ ಕಡ್ಡಾಯವಾಗಿ ಮಾತದಾನ ಮಾಡಿ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕು ಎಂದರು.ಗ್ರಾಮದ ಪ್ರತೀ ವಾರ್ಡಗೂ ಸಂಚರಿಸಿ ಮತದಾನದ ಜಾಗೃತಿ ಮೂಡಿಸಲಾಯಿತು. ಈ ವೇಳೆ ಕಾರ್ಯದರ್ಶಿ ಗಿರೀಶ ಬಿರಾದಾರ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಶಾಲಾ ಶಿಕ್ಷಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು.

Read More

ಸಿಂದಗಿ: ಕಾಂಗ್ರೆಸ್ ಪಕ್ಷದಲ್ಲಿ ಬಂಜಾರ ಸಮಾಜದ ನಾಯಕರಲ್ಲಿ ಒಬ್ಬರು ಎಂಎಲ್‌ಎ, ಎಂಎಲ್‌ಸಿ ಇದ್ದರೂ ಮಂತ್ರಿಸ್ಥಾನ ನೀಡದೇ ಕಾಂಗ್ರೆಸ್ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ಭೀಮಸಿಂಗ್ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ್ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಮಾಡಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ. ವಂಚಿತ ತಾಂಡಾಗಳಿಗೆ ಕಂದಾಯ ಗ್ರಾಮ ಎಂದು ಕಾಂಗ್ರೆಸ್ ಸರಕಾರ ಮಾಡಲಿಲ್ಲ. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ತಾಂಡಾಗಳನ್ನು ಕಂದಾಯ ಗ್ರಾಮ ಎಂದು ಘೋಷಣೆ ಮಾಡಿತು. ಕಾಂಗ್ರೆಸ್ ಪಕ್ಷ ೫ ಮೀಸಲು ಕ್ಷೇತ್ರಗಳಲ್ಲಿ ಒಂದು ಸಹ ಬಂಜಾರ್ ಸಮಾಜಕ್ಕೆ ಟಿಕೆಟ್ ನೀಡದಿರುವುದು ಶೋಚನೀಯ. ಸದಾಶಿವ ಆಯೋಗದಲ್ಲಿ ನಮ್ಮ ಸಮಾಜಕ್ಕೆ ನೀಡಬೇಕಾದ ಮೀಸಲಾತಿಯನ್ನು ನೀಡಿದೆ.ನಮ್ಮ ಬಂಜಾರ್ ಸಮಾಜದ ಮಣಿಕಂಠ ರಾಠೋಡ ಅವರಿಗೆ ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಮನೆತನದವರು ೧೦೦ಕ್ಕೂ ಅಧಿಕ ಕೇಸ್‌ಗಳನ್ನು ದಾಖಲಿಸುವ ಮೂಲಕ ಹಿಂಸೆ ಮಾಡಿರುವುದನ್ನು…

Read More