Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲಕೇರಿ: ಲೋಕಸಭಾ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದ ಮತದಾನವಾಗುವಂತೆ ಮಾಡಲು ಕಲಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲಾಯಿತು.ಕಲಕೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸನಗೌಡ ಚೌಧರಿ, ಗ್ರಾಪಂ ಅಧ್ಯಕ್ಷ ರಾಜಅಹ್ಮದ ಸಿರಸಗಿ, ಶ್ರೀಶೈಲ ನಾಯ್ಕೋಡಿ, ಮುಖ್ಯಗುರುಗಳಾದ ಜೆ..ಬಿ.ಕುಲಕರ್ಣಿ, ಎಸ್.ಬಿ.ಪಟ್ಟಣಶೆಟ್ಟಿ, ಯಾಕುಬ ಸಿರಸಗಿ, ಬಿಎಲ್ಓ ಗಳಾದ ಡಿ.ಬಿ.ಅಡಕಿ, ಶರಣಮ್ಮ ಬಿರಾದಾರ, ಕೆ.ಎಮ್.ಕೇಸರಿ, ಎನ್.ಕೆ.ನಾಯ್ಕೋಡಿ, ಬಿ.ಎಮ್.ಚಿಗರಿ, ಗ್ರಾಪಂ ಸಿಬ್ಬಂದಿ ಶ್ರೀಶೈಲ ಮಾದರ, ಇರಗಂಟೆಪ್ಪ ಮೋಪಗಾರ, ರವಿ ಬಡಿಗೇರ, ಗ್ರಾಮಸ್ಥರಾದ ಈರಣ್ಣ ಗುಮಶೆಟ್ಟಿ, ಪಾಯಸಾಗರ ಜಗಶೆಟ್ಟಿ, ಜಗದೀಶ ವಡ್ಡೊಡಗಿ ಸೇರಿದಂತೆ ಇತರರು ಇದ್ದರು.
ಕೆರುಟಗಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ | ಸಿಂದಗಿ-ಕಲಕೇರಿ ರಸ್ತೆ ಬಂದ್ ಮಾಡಿ ಧರಣಿ ಸತ್ಯಾಗ್ರಹ ಕಲಕೇರಿ: ಸಮೀಪದ ಕೆರುಟಗಿ ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಹಾಗೂ ವಲಯ ಶಾಖೆ ಕಲಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೆರುಟಗಿ ಗ್ರಾಮದಲ್ಲಿ ಸಿಂದಗಿ-ಕಲಕೇರಿ ಮುಖ್ಯರಸ್ತೆ ಬಂದ ಮಾಡಿ ಪ್ರತಿಭಟನೆ ಮಾಡಲಾಯಿತು.ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿದ್ದು, ಸ್ಥಳೀಯ ಆಡಳಿತ ಹಾಗೂ ತಾಲೂಕಾ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ಕರ್ನಾಟಕ ಸರ್ಕಾರ ಬೇಸಿಗೆಯ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯೋಜನೆಗಳನ್ನು ರೂಪಿಸಿದ್ದು ಹಾಗೂ ವಿಶೇಷ ಅನುದಾನ ಮಂಜೂರಾತಿ ಇದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ೭೫ ವರ್ಷಗಳು ಗತಿಸಿದರೂ ಸಾರ್ವಜನಿಕರಿಗೆ ಕುಡಿಯುವ ನೀರಿನ್ನು ಒದಗಿಸಲು ಆಗುತ್ತಿಲ್ಲ, ಇದು ಇಂದಿನ ಸರ್ಕಾರಕ್ಕೆ ಮತ್ತು ಗ್ರಾಮಾಡಳಿತಕ್ಕೆ ನಾಚಿಕೆಯಾಗುವ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಆಡಳಿತ ವ್ಯವಸ್ಥೆ ಖಂಡಿಸಿ ಖಾಲಿ ಕೊಡಗಳನ್ನು ಇಟ್ಟುಕೊಂಡು ಮಹಿಳೆಯರು ಹಾಗೂ ಗ್ರಾಮಸ್ಥರು ಸುಮಾರು ಮೂರು…
ಇಂಡಿ: ದೇಶ ಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಕಂಪೆನರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.ತಾಲೂಕಿನ ತಾಂಬಾದಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶ ಉಳಿಸಿ ಬೆಳೆಸಿದವರ ಕೊಡುಗೆ ಬಹಳವಿದೆ. ಈಗ ಹತ್ತು ವರ್ಷದಿಂದ ದೇಶ ಪ್ರೇಮವನ್ನು ಕಲಿಸಿಕೊಡಲಾಗುತ್ತಿದೆ. ಮೋದಿಯವರ ರೊಟ್ಟಿ ತವೆ ಮೇಲೆ ಹೊತ್ತುತ್ತಿದೆ. ಅದನ್ನು ತಿರುವಿ ಹಾಕಬೇಕು ಎಂದು ಮಾರ್ಮಿಕವಾಗಿ ಹೇಳಿದರು.ನೀವು ರಾಜು ಆಲಗೂರರಿಗೆ ಓಟು ಹಾಕಿ ಎನ್ನಲು ನಮಗೆ ನೈತಿಕ ಹಕ್ಕಿದೆ. ನಮ್ಮ ಅಭ್ಯರ್ಥಿ ಅಭಿವೃದ್ಧಿ ಪರ ಚಿಂತಕರಾಗಿದ್ದಾರೆ. ನೀವು ಈ ಸಲ ಬದಲಾವಣೆ ತನ್ನಿ, ದೇಶದಲ್ಲೂ ಬದಲಾವಣೆ ಖಂಡಿತ ಆಗಲಿದೆ. ಯಾವ ಕೆಲಸವೂ ಮಾಡದೇ ಇರುವ ಕಾರಣ ಮೋದಿಯವರ ವರ್ಚಸ್ಸು ಮುಗಿದಿದೆ ಎಂದು ಹೇಳಿದರು.ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ಬಹು ದೊಡ್ಡ…
ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ, ಇಂಡಿ ಮತ್ತು ಸಿಂದಗಿಯಲ್ಲಿ ಪಿಆರ್ಒ ಎಪಿಆರ್ಒ ಮತ್ತು ಪಿಒ ಗಳಿಗಾಗಿ ಏರ್ಪಡಿಸಲಾಗಿದ್ದ ಚುನಾವಣಾ ತರಬೇತಿಯ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಟಿ. ಭೂಬಾಲನ್ ಅವರು ಮಂಗಳವಾರದಂದು ಭೇಟಿ ನೀಡಿ ಅಗತ್ಯವಾದ ಸಲಹೆ ಸೂಚನೆ ಮತ್ತು ಮಾರ್ಗದರ್ಶನ ನೀಡಿದರು.
ವಿಜಯಪುರ: ರಾಜ್ಯ ಸ್ವೀಪ್ ಸಮೀತಿಯ ನೋಡಲ್ ಅಧಿಕಾರಿ ಪಿ ಎಸ್ ವಸ್ತ್ರದ ಅವರು ಮೇ.೧ ರಂದು ವಿಜರಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಸಂಜೆ ೪ಗಂಟೆಗೆ ಬೀದರ್ ನಿಂದ ವಿಜಯಪುರಕ್ಕೆ ಆಗಮಿಸಿ ವಿಜಯಪುರ ಜಿಲ್ಲೆಯಲ್ಲಿ ಕಡಿಮೆ ಮತದಾನ ಪ್ರಮಾಣವಿರುವ ಕ್ಲಸ್ಟರ್ ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮೀತಿ ಅಧಿಕಾರಿಗಳೋಂದಿಗೆ ಸಭೆ ನಡೆಸುವರು.
ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ ಕಾಂಬಳೆ ಘೋಷಣೆ ಇಂಡಿ: ಸಧ್ಯ ಆಲಮಟ್ಟಿ ಆಣೆಕಟ್ಟಿನ ಎತ್ತರ ೫೧೯ ಮೀ. ಇದ್ದು ನಾನು ಸಂಸದನಾಗಿ ಆಯ್ಕೆ ಯಾದರೆ ೫೨೪ ಮೀ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಜಿತೇಂದ್ರ ಕಾಂಬಳೆ ಹೇಳಿದರು.ಅವರು ಮಂಗಳವಾರ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇಂಡಿ ತಾಲೂಕು ಮೇಲಿಂದ ಮೇಲೆ ಬರಗಾಲಕ್ಕೆ ತುತ್ತಾಗುತ್ತಿದ್ದು ಈ ಭಾಗದ ಕೆಲವು ಪ್ರದೇಶ ನೀರಾವರಿಯಿಂದ ವಂಚಿತವಾಗಿದೆ. ಈ ಭಾಗದ ರೈತರ ಜೀವನ ಹಸನಾಗಿಸಲು ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಮೀ ಆಗಲು ಪ್ರಯತ್ನಿಸುವೆ ಎಂದರು.ಆಲಮಟ್ಟಿ ಆಣೆಕಟ್ಟು ಎತ್ತರ ೫೨೪ ಮೀ ಆದರೆ ವಿಜಯಪುರ ಭಾಗದ ಗುತ್ತಿ ಬಸವಣ್ಣ, ಮುಳವಾಡ, ರೇವಣಸಿದ್ದೇಶ್ವರ, ಇಂಡಿ ಶಾಖಾ ಕಾಲುವೆ,ಚಿಮ್ಮಲಗಿ ಯೋಜನೆ ಎಲ್ಲ ಕಾಲುವೆಗಳಲ್ಲಿ ಮತ್ತು ಇಂಡಿ ತಾಲೂಕಿನ ಕಾಲುವೆಯ ಕೊನೆಯ ಭಾಗದವರಿಗೂ ನೀರು ಬರುತ್ತದೆ ಎಂದರು.ನಮ್ಮ ದೇಶವು ಪ್ರಜಾ ಸತ್ತಾತ್ಮಕ ಮತ್ತು ಜಾತ್ಯಾತೀತ ರಾಷ್ಟ್ರವಾಗಿದೆ. ನಮ್ಮ ಸಂವಿಧಾನವನ್ನು ಬದಲಾಯಿಸುವ ಸಂಚು ನಡೆದಿದ್ದು ಹಾಗಾದರೆ ನಾವು ರಕ್ತ…
ಸಾಲಮನ್ನಾ-ವಿಮೆ-ಕೆರೆಗೆ ನೀರು-ಕಬ್ಬಿನ ಬಿಲ್-ಜಾನುವಾರಗಳಿಗೆ ಮೇವು ಒದಗಿಸಲು ಆಗ್ರಹ ವಿಜಯಪುರ: ಮುಂಗಾರು, ಹಿಂಗಾರು ಸಂಪೂರ್ಣ ಕೈಕೊಟ್ಟಿರುವುದರಿಂದ ನಾಡಿನ ರೈತಕುಲ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಈ ವರ್ಷದ ಅತೀ ಹೆಚ್ಚು ಬಿಸಿಲಿನ ಕಾರಣದಿಂದ ಜನ ಜಾನುವಾರುಗಳು ಹನಿ ನೀರಿಗಾಗಿ ಪರದಾಡುವಂತಾಗಿದೆ. ಆದ್ದರಿಂದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರಕಾರ ಬರ ಪರಿಹಾರ ಕೊಡಬೇಕು, ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಪ್ಪಾ ಪೂಜಾರಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.ಮಂಗಳವಾರ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲೆಯ ಎಲ್ಲಾ ೧೩ ತಾಲೂಕುಗಳಿಂದ ಆಗಮಿಸಿದ ರೈತರು ನಗರದ ಗಾಂಧಿ ವೃತ್ತದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿ ಹೋರಾಟ ಮಾಡಿದರು, ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ…
ತಾಳಿಕೋಟಿ: ಕರ್ನಾಟಕ ಸರಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಮೇ1ರಂದು ತಾಳಿಕೋಟಿ ಪಟ್ಟಣಕ್ಕೆ ಆಗಮಿಸಲಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಬೂಬ ಚೋರಗಸ್ತಿ ಅವರು ತಿಳಿಸಿದ್ದಾರೆ. ಮಧ್ಯಾಹ್ನ 12:00 ಘಂಟೆಗೆ ಪಟ್ಟಣದ ಶ್ರೀ ಸಂಗಮೇಶ್ವರ ನೂತನ ಸಭಾ ಭವನದಲ್ಲಿ ಹಮ್ಮಿಕೊಂಡ ತಾಳಿಕೋಟಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜ ಬಾಂಧವರ ಸಭೆಯಲ್ಲಿ ಭಾಗವಹಿಸುವ ಅವರು ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಇವರ ಪರ ಮತಯಾಚನೆ ಮಾಡಲಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ .ಎಸ್. ನಾಡಗೌಡ (ಅಪ್ಪಾಜಿ) ಸಭೆಯ ಅಧ್ಯಕ್ಷತೆಯನ್ನು ವಹಿಸುವರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ವಿದ್ಶಾಥಿ೯ಗಳಿಬ್ಬರು ಗೆಳೆಯರೊಂದಿಗೆ ಭಾವಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.ಗ್ರಾಮದ ಶ್ರೀ ಸಿದ್ದರಾಮ ಸ್ವಾಮೀಜಿ ಕಾಲೇಜಿನ ಪಿಯುಸಿ ವಿದ್ಶಾಥಿ೯ ಸೋಮಶೇಖರ ಅಶೋಕ ಆಲಮೇಲ (೧೭), ಮಂಗಳೂರಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಗ್ರಾಮದ ವಿದ್ಶಾಥಿ೯ ಮಲೀಕ್ ಹಷನಸಾಬ ನದಾಫ್ ( ೧೭) ಮೃತಪಟ್ಟಿದ್ದಾರೆ.ಕಲಕೇರಿ ಪೋಲಿಸ್ ಠಾಣೆಯ ವ್ಶಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ”- ವಿವೇಕಾನಂದ. ಎಚ್.ಕೆ. ಬೆಂಗಳೂರು ಇಂಗ್ಲೇಂಡಿನ ಮ್ಯಾಂಚೆಸ್ಟರ್ ನ ಬಟ್ಟೆ ಗಿರಣಿಗಳು, ದಕ್ಷಿಣ ಆಫ್ರಿಕಾದ ಚಿನ್ನದ ಗಣಿಗಳು, ಚೀನಾದ ಕಬ್ಬಿಣದ ಅದಿರ ಗಣಿಗಳು, ಅರೇಬಿಯನ್ ಮರುಭೂಮಿಯ ಕೂಲಿಗಳು, ಬ್ರೆಜಿಲ್ ಕಾಫಿ ತೋಟದ ಕಾರ್ಮಿಕರು, ಸುಡಾನ್, ಇಥಿಯೋಪಿಯಾದ ಗುಲಾಮರು, ಇಟಲಿಯ ಕ್ವಾರಿಯ ಕಲ್ಲುಗಣಿ ಶ್ರಮಿಕರು, ಅಮೆರಿಕದ ಹಾಲಿವುಡ್ನ ಸಿನೆಮಾ ಕೆಲಸಗಾರರು, ಹಾಂಕಾಂಗ್ ನ ಹೋಟೆಲ್ ಕಾರ್ಮಿಕರು, ಆಸ್ಟ್ರೇಲಿಯಾ ದ್ವೀಪಗಳ ಮೀನುಗಾರರು, ಬಾಂಗ್ಲಾದೇಶದ ಬಿರು ಬಿಸಿಲಿನಲ್ಲಿ ನಡೆದಾಡುವ ಟಾಂಗಾವಾಲಾಗಳು, ಟಿಬೆಟ್ಟಿನ ದುರ್ಗಮ ರಸ್ತೆಗಳಲ್ಲಿ ವಾಹನ ಚಲಾಯಿಸುವ ಚಾಲಕರು, ಸಿರಿಯಾದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಾದಿಯರು, ಉತ್ತರ ಕೊರಿಯಾದ ಸರ್ವಾಧಿಕಾರಕ್ಕೆ ನಲುಗಿ ಉಸಿರಾಡಲು ಕಷ್ಟ ಪಡುತ್ತಿರುವ ಸ್ವತಂತ್ರ ಜೀವಿಗಳು, ಭಾರತದ ಮ್ಯಾನ್ ಹೋಲ್ ಗಳಲ್ಲಿ ಕೆಲಸ ಮಾಡುವ ನನ್ನದೇ ಅಣ್ಣ ತಮ್ಮಂದಿರು, ಮುಂಬಯಿನ ರೈಲ್ವೆ ಕೂಲಿಗಳು, ಸೂರತ್ ನ ಬಟ್ಟೆ ಗಿರಣಿಗಳ ಕೆಲಸಗಾರರು, ವಿಶಾಖಪಟ್ಟಣದ ಮೀನುಗಾರರು, ಕೊಯಮತ್ತೂರಿನ ಪಟಾಕಿ ತಯಾರಕರು, ಮಂಗಳೂರಿನ ಬೀಡಿ ಕಟ್ಟುವವರು, ಕೇರಳದ ಚಹಾ ತೋಟದ ದಿನಗೂಲಿಗಳು, ದೆಹಲಿಯ…
