Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದಲ್ಲಿ ಮಂಗಳವಾರ ಮಾದಿಗ ಸಮುದಾಯದ ಬೃಹತ್ ಸಭೆ ನಡೆಸಿ, ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತ ಯಾಚಿಸಲಾಯಿತು.ಈ ವೇಳೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ನಿಮಗೆಲ್ಲ ಅನುಕೂಲವಾಗಿದೆ. ನಿಮ್ಮ ಮಕ್ಕಳು ಸುಶಿಕ್ಷಿತರಾಗಲು ಸರಕಾರ ಶ್ರಮಿಸಿದೆ. ದಮನಿತರ ಏಳಿಗೆಗಾಗಿ ಕಾಂಗ್ರೆಸ್ ಯಾವತ್ತೂ ಮಿಡಿದಿದೆ. ಬಿಜೆಪಿ ಅಭ್ಯರ್ಥಿ ಮತ್ತು ಆ ಪಕ್ಷದಿಂದ ನಿಮಗೆ ಇಲ್ಲಿಯವರೆಗೆ ಯಾವುದೇ ಲಾಭವಾಗಿಲ್ಲ ಎಂದರು.ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ. ಹಿಂದುಳಿತ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಜನಕ್ಕೆ ನೈತಿಕತೆ ಇಲ್ಲ. ವಿಶ್ವದಲ್ಲಿ ಗೋಮಾಂಸ ರಫ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಮೊದಲು ಕಸಾಯಿಖಾನೆ ಬಂದ್ ಮಾಡಿ ಗೋಮಾತೆ ಬಗ್ಗೆ ನಿಜವಾದ ಪ್ರೀತಿ ತೋರಿಸಿ. ಚೀನಾ ಭೂಮಿ ಅತಿಕ್ರಮಿಸಿದೆ. ನಮ್ಮ ಪ್ರಧಾನಿ ದುರ್ಬಲ, ಅವರು ಯುವಕರ ತಲೆಕೆಡಿಸುತ್ತಾರೆ. ಇದೆಲ್ಲಕ್ಕೂ ಭಿನ್ನವಾಗಿರುವ ದಲಿತಪರ, ಜೀವಪರ ವ್ಯಕ್ತಿಯಾದ ಆಲಗೂರಗೆ ಮತ ಹಾಕಿ ಎಂದು ಕೋರಿದರು.ಜಿಲ್ಲಾ ಉಸ್ತುವಾರಿ, ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ…
ವಿಜಯಪುರ: ಕಾಂಗ್ರೆಸ್ ರೈತರು, ಬಡವರು, ಜನಸಾಮಾನ್ಯರಿಗೆ ಸ್ವಾವಲಂಬಿಯಾಗಿ ಬದುಕಲು ಅಭಿವೃದ್ಧಿ ಯೋಜನೆಗಳ ಮೂಲಕ ಶಕ್ತಿ ತುಂಬುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ತಿಕೋಟಾ ತಾಲೂಕಿನ ಟಕ್ಕಳಕಿ ಮತ್ತು ಜಾಲಗೇರಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.ಮುಂಬರುವ ದಿನಗಳಲ್ಲಿ ಟಕ್ಕಳಕಿ ಮತ್ತು ಜಾಲಗೇರಿ ಸುತ್ತಲಿನ ಉಳಿದ ಭಾಗಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಭಾಗದಲ್ಲಿ ಹೊಲಗಾಲುವೆ ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಈ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು. ಕಾಂಗ್ರೆಸ್ ರೈತರು, ಬಡವರು, ಜನಸಾಮಾನ್ಯರಿಗೆ ಸ್ವಾವಲಂಬಿಯಾಗಿ ಬದುಕಲು ಅಭಿವೃದ್ಧಿ ಯೋಜನೆಗಳ ಮೂಲಕ ಶಕ್ತಿ ತುಂಬುತ್ತಿದೆ. ಕಾಂಗ್ರೆಸ್ ಸ್ವಾತಂತ್ರ್ಯದ ಹೋರಾಟಕ್ಕಾಗಿ ಉದಯಿಸಿದ ಪಕ್ಷ. ಆದರೆ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಅದು ಬ್ರಿಟೀಷರ ಪರವಾಗಿದ್ದ ಪಕ್ಷ.…
“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಕಾರ್ಮಿಕರು ಎಂದರೆ ಯಾರು?.. ತಮ್ಮ ದೈನಂದಿನ ಹೊಟ್ಟೆಪಾಡಿನ ಜೀವನಕ್ಕಾಗಿ ದುಡಿಯುವ ಸರ್ಕಾರಿ, ಅರೆಸರಕಾರಿ, ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಜನಸಮೂಹ.ಅಸಂಘಟಿತವಾಗಿ ಈ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾಗ ಇವರಿಗೆ ಯಾವುದೇ ಕೆಲಸದ ಭದ್ರತೆ ಇರುತ್ತಿರಲಿಲ್ಲ. ದಿನಕ್ಕೆ 16 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಇತ್ತು. ರಜಾ ಸೌಲಭ್ಯ, ನಿಯಮಿತ ಸಂಬಳ, ಆರೋಗ್ಯ ವಿಮೆ, ಹೆಣ್ಣು ಮಕ್ಕಳಿಗೆ ಹೆರಿಗೆ ರಜೆ ಹೀಗೆ ಯಾವುದೇ ಸೌಲಭ್ಯಗಳು ಇರುತ್ತಿರಲಿಲ್ಲ. ದುಡಿಯುವ ವರ್ಗಕ್ಕೆ ಮೂಲಭೂತ ಅವಶ್ಯಕತೆಗಳನ್ನು ಕೂಡ ಪೂರೈಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ. ಬಂಡವಾಳ ಶಾಹಿಗಳ ಹಿಡಿತದಲ್ಲಿ ಕೂಲಿ ಕಾರ್ಮಿಕರು, ದಿನಗೂಲಿಗಳು ಕಾರ್ಯನಿರ್ವಹಿಸುವಂತಹ ಪರಿಸ್ಥಿತಿಯಲ್ಲಿ ಶ್ರೀಮಂತ ಉದ್ಯಮಿಗಳು ಅವರನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದರು. ಅತ್ಯಂತ ಕಡಿಮೆ ಸಂಬಳ ನೀಡಿ ದಿನದ ಮೂರನೇ ಎರಡು ಭಾಗ ಸಮಯ ಅಂದರೆ ಸುಮಾರು 16 ಗಂಟೆಗಳ ಕಾಲ ಕೆಲಸ ನಿರ್ವಹಿಸಬೇಕಾದಂತಹ ಪರಿಸ್ಥಿತಿ ಕಾರ್ಮಿಕರದು. ಆರೋಗ್ಯ ದೃಷ್ಟಿಯಿಂದ ಇದು ಹಾನಿಕಾರಕವಾಗಿದ್ದು ಕಾರ್ಮಿಕರು ದೈಹಿಕ, ಮಾನಸಿಕ ಮತ್ತು ಆರ್ಥಿಕ ಅನಾನುಕೂಲಕ್ಕೆ ಒಳಗಾದರು.17…
Udayarashmi kannada daily newspaper
– ಇಲಾಹಿ ಇ. ಜಮಖಂಡಿಚಿಮ್ಮಡ: ಚುನಾವಣಾ ಕಾವು ಒಂದೆಡೆ ಏರುತಿದ್ದರೆ ಈ ಭಾಗದ ತಾಪಮಾನ ಅಪಾಯ ಮಟ್ಟದಲ್ಲಿ ಹೆಚ್ಚುತ್ತಿರುವುದರಿಂದ ಮಕ್ಕಳು, ವಯೋವ್ರದ್ದರು, ಅನಾರೋಗ್ಯ ಪೀಡಿತರು ಈ ಬಿಸಿಲ ತಾಪದಿಂದ ಬಳಲುತಿದ್ದಾರೆ.ಗ್ರಾಮದ ಮುಖ್ಯ ರಸ್ತೆಗಳಂತೂ ಜನರಿಲ್ಲದೇ ಬಿಕೋ ಎನ್ನುತ್ತಿವೆ.ಬೆಳಿಗ್ಗೆ ಎಂಟು ಘಂಟೆಯಿಂದಲೇ ಏರಿಕೆಯಾಗುತ್ತಿರುವ ಬಿಸಿಲಿನ ಪ್ರಖರತೆ ಮದ್ಯಾಹ್ನ ೧ ಘಂಟೆ ಎನ್ನುವಷ್ಟರಲ್ಲಿ ಅಪಾಯಮಟ್ಟ ತಲುಪುತ್ತಿದೆ. ಮದ್ಯರಾತ್ರಿಯಲ್ಲೂ ತೀವ್ರ ಧಗೆಯಿಂದ ನಿದ್ರೆಯಿಲ್ಲದೆ ಜನರು ಬಳಲುವಂತಾಗಿದ್ದು, ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ.ಈ ಮೊದಲು ನಗರ ಪ್ರದೇಶಗಳಿಗೆ ಮಾತ್ರ ಸಿಮಿತವಾಗಿರುತಿದ್ದ ತಾಪಮಾನ ಏರಿಕೆ ಇದೀಗ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಿದೆ, ಇದಕ್ಕೆ ಗ್ರಾಮಗಳಲ್ಲಿ ಕಾಡಿನಂತೆ ಬೆಳೆದ ಮರಗಳಿಗೆ ಕೊಡಲಿ ಏಟು ಬಿದ್ದಿರುವುದು, ಗ್ರಾಮದ ಗಲ್ಲಿ ಗಲ್ಲಿಗಳು ಕಾಂಕ್ರೀಟ್ ಕಾಡಿನಂತಾಗಿರುವುದು ಕಾರಣ. ಹಳೆಯ ಕಾಲದ ಮನೆಗಳ ಛಾವಣಿಗೆ ತಾಪಮಾನ ಹೀರಿಕೊಳ್ಳುವ ಶಕ್ತಿಯುಳ್ಳ ಮಣ್ಣಿನ ಮೇಲಮುದ್ದಿ, ಕಟ್ಟಿಗೆಯಿಂದ ಖಡೇಪಾಟ, ಪ್ರತೀ ಬಚ್ಚಲುಗಳಿಗೆ ಇಂಗುಗುಂಡಿ ನಿರ್ಮಾಣ ಮಾಡಲಾಗುತಿತ್ತು. ಆದರೆ ಈಗಿನ ಮನೆಗಳಿಗೆ ತಾಪಮಾನ ಹೆಚ್ಚಿಸುವ ಪತ್ರಾಸ ಮೇಲ್ಛಾವಣಿ, ಕಾಂಕ್ರೀಟ್ ಸ್ಲ್ಯಾಬ್ ಹಾಕಿಸುತ್ತಿರುವುದರಿಂದ…
ಚಿಮ್ಮಡ: ಹಲವಾರು ಸೌಲಭ್ಯಗಳನ್ನು ನೀಡಿರುವ ಕಾಂಗ್ರೆಸ್ ಬಡವರು, ನೇಕಾರರಿಗೆ ಮಾತೃಪಕ್ಷ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.ಗ್ರಾಮದ ಅಶೋಕ ಧಡೂತಿಯವರ ಮನೆಯ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನೇಕಾರರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿದ್ದು ಕಾಂಗ್ರೆಸ್, ಆಶ್ರಯ ಮನೆಗಳ ೩೨ ಕೋಟಿ ಸಾಲವನ್ನುಬರಕಾಸ್ತು ಮಾಡಿದ್ದು, ನೇಕಾರರಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಕಾಂಗ್ರೆಸ್ ಪಕ್ಷವಾಗಿದೆ. ಆದರೆ ಕೇಂದ್ರ ಬಿಜೆಪಿ ಸರಕಾರ ದಿನಬಳಕೆಯ ಎಲ್ಲ ವಸ್ತುಗಳ ಬೆಲೆಯೇರಿಸುವ ಮೂಲಕ ಬಡವರನ್ನು ಲೂಟಿ ಹೊಡೆಯುತ್ತಿದೆ, ರೈತರನ್ನು ಕೇವಲವಾಗಿ ಕಾಣುವ ಇವರು ಆಯ್ದ ಕೆಲವು ಉದ್ಯಮಿಗಳಿಗೆ ಮಾತ್ರ ಭರಪೂರ ನೆರವು ನೀಡುತ್ತಿದ್ದಾರೆ ಕಾಂಗ್ರೆಸ್ ಆಭ್ಯರ್ಥಿ ಸಂಯುಕ್ತಾ ಪಾಟೀಲ ಅವರಿಗೆ ಮತ ನೀಡುವ ಮೂಲಕ ಬಡವರು, ಮದ್ಯಮವರ್ಗದ ವಿರೋಧಿ ಬಿಜೆಪಿ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.ನೇಕಾರ ಧುರೀಣ ರವೀಂದ್ರ ಕಲಬುರ್ಗಿ ಮಾತನಾಡಿ ರೈತರು, ನೇಕಾರರು, ಬಡವರು, ಮಧ್ಯಮವರ್ಗದವರಿಗೆ ಪಂಚ ಗ್ಯಾರಂಟಿ ಮೂಲಕ ಪ್ರತಿಯೊಂದು ಮನೆಗಳಿಗೆ ಸರಕಾರದ ಸೌಲಭ್ಯಗಳು ತಲುಪುತ್ತಿವೆ ಎಂದರು.ನೆಕಾರರ…
ಇಂಡಿ: ಪಕ್ಷಾತೀತವಾಗಿ ಸಮಾಜದ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಶ್ರೇಯಸ್ಸು ಕಾಂಗ್ರೆಸ್ಗೆ ಸಲ್ಲುತ್ತದೆ. ಇವು ರಾಷ್ಟ್ರಕ್ಕೆ ಮಾದರಿಯಾದ ಯೋಜನೆಗಳಾಗಿವೆ‘ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವಿದ ಮೋಮಿನ ಹೇಳಿದರು.ಪಟ್ಟಣದ ವಾರ್ಡ್ ನಂ 16 ಗೋಡವಾಣ ಗಲ್ಲಿ ಹಾಗೂ ಕಾಲೆಪ್ಲಾಟ ನಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಮಾಡಿ ಮತಯಾಚನೆ ಮಾಡಿ ಮಾತನಾಡಿದರು.‘₹56 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಗ್ಯಾರಂಟಿ ಯೋಯೋಜನೆಗಳಿಗಾಗಿ ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರ ಅವರನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು‘ ಎಂದು ಮನವಿ ಮಾಡಿದರು.ಬಿಜೆಪಿ ಪಕ್ಷ ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗ ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ…
ಮುದ್ದೇಬಿಹಾಳ: ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಮತದಾನ ಬಹುಮುಖ್ಯ ಪಾತ್ರ ವಹಿಸಿದ್ದು, ಮತದಾನದಿಂದ ಯಾರು ವಂಚಿತರಾಗದೆ ಮೇ-೦೭ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಎಸ್.ಕಲ್ಮನಿ ಹೇಳಿದರು.ಪಟ್ಟಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ನಡೆದ “ಮತದಾನ ಜಾಗೃತಿ ತಾಲೂಕು ಮಟ್ಟದ ಕಾಲ್ನಡಿಗೆ ಜಾಥಾ”ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ನಗರ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಕುರಿತು ಅರಿವು ಮೂಡಿಸುವುದರ ಜೊತೆಗೆ ಅವರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಬಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿಹಿಡಯಬೇಕು. ಪ್ರತಿಯೊಬ್ಬ ಪ್ರಜೆಗೂ ತನ್ನ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಾಗಿದೆ. ಪ್ರಜೆಗಳ ಆಯ್ಕೆಯಿಂದ ಸದೃಢ ಸರ್ಕಾರಗಳ ರಚನೆಯಾಗುತ್ತದೆ. ಆಸೆ,…
ಬಸವನಬಾಗೇವಾಡಿ: ಚುನಾವಣೆಯ ಆಯೋಗ ನೀಡಿದ ಮಾರ್ಗದರ್ಶಿಯಂತೆ ಚುನಾವಣೆಗೆ ನಿಯುಕ್ತಿಗೊಂಡ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಲೋಕಸಭೆ ಚುನಾವಣೆಯು ಸುಸೂತ್ರವಾಗಿ ನಡೆಯುವಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಸಾರ್ವತ್ರಿಕ ಲೋಕಸಭಾ ಚುನಾವಣೆಯ ಜನರಲ್ ಅಬ್ಜರರ್ವರ್ (ಸಾಮಾನ್ಯ ವೀಕ್ಷಕ)ಡಾ.ರತನಕಣ್ವರ್ ಗಾಧವಿಚಾರನ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿರುವ ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಇರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಚುನಾವಣೆಯ ಮತದಾನ ದಿನ ಯಾವುದೇ ರೀತಿಯಲ್ಲಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಮತಯಂತ್ರಗಳಲ್ಲಿ ರಿಪೇರಿ ಕಂಡು ಬಂದರೆ ತಕ್ಷಣವೇ ಸೆಕ್ಟರ್ ಅಧಿಕಾರಿಗಳು ತ್ವರಿತವಾಗಿ ಅದನ್ನು ರಿಪೇರಿ ಮಾಡುವ ಕ್ರಮ ತೆಗೆದುಕೊಂಡು ಮತದಾನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯು ಸುಗಮವಾಗಿ ನಡೆಯುವಂತೆ ಎಲ್ಲ ಅಧಿಕಾರಿಗಳ ತಂಡ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದರು.ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ., ಬಸವನಬಾಗೇವಾಡಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಬಸವನಬಾಗೇವಾಡಿ ತಾಲೂಕು ಪಂಚಾಯಿತಿ…
ಬಸವನಬಾಗೇವಾಡಿ: ಮತಕ್ಷೇತ್ರದಲ್ಲಿ ಮೂರು ದಿನಗಳ ಕಾಲ ನಡೆದ ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಶೇ. 93.18ರಷ್ಟು ಮತದಾನವಾಗಿದೆ. 85 ಕ್ಕೂ ಹೆಚ್ಚು ವಯಸ್ಸಾದ 332 ಮತದಾರರಲ್ಲಿ 307 ಮತದಾರರು ತಮ್ಮ ಮತದಾನ ಚಲಾಯಿಸಿದರೆ, 123 ವಿಕಲಚೇತನ ಮತದಾರರಲ್ಲಿ 117 ವಿಕಲಚೇತನ ಮತದಾರರು ತಮ್ಮ ಮತದಾನ ಮಾಡಿದ್ದಾರೆ. 85ಕ್ಕೂ ಹೆಚ್ಚು ವಯಸ್ಸಾದ 332 ಮತದಾರರು, 123 ವಿಕಲಚೇತನ ಮತದಾರರು ಸೇರಿ ಒಟ್ಟು 455 ಮತದಾರರು ಮತಕ್ಷೇತ್ರದಲ್ಲಿ ತಮ್ಮ ಹೆಸರು ನೋಂದಣಿ ಮಾಡಿದ್ದರು. ಇದರಲ್ಲಿ ೪೨೪ ಮತದಾರರು ತಮ್ಮ ಮತದಾನ ಮಾಡುವ ಮೂಲಕ ಶೇ.93.18 ರಷ್ಟು ಮತದಾನವಾಗಿದೆ. ಇದರಲ್ಲಿ 6 ವ್ಯಕ್ತಿಗಳು ಮೃತರಾಗಿದ್ದಾರೆ.25 ಜನ ಮತದಾರರು ಗೈರು ಉಳಿದುಕೊಂಡಿದ್ದಾರೆ. ಗೈರು ಇದ್ದ ಮತದಾರರ ಮನೆಗೆ ನಮ್ಮ ಅಧಕಾರಿಗಳ ತಂಡ ಎರಡು ಸಲ ಭೇಟಿ ನೀಡಿದರೂ ಅವರು ಲಭ್ಯವಾಗಿಲ್ಲ ಎಂದು ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ತಿಳಿಸಿದ್ದಾರೆ.
