Author: editor.udayarashmi@gmail.com

ದೇವರಹಿಪ್ಪರಗಿ: ಡೆಂಗ್ಯೂ, ಚಿಕನ್‌ಗುನ್ಯಾ ರೋಗಗಳು ಸೊಳ್ಳೆಗಳಿಂದ ಹರಡುವ ರೋಗಗಳಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ತಾಲ್ಲೂಕು ಹಾಗೂ ಸ್ಥಳೀಯ ಆಡಳಿತ ಅಗತ್ಯವಾದ ಕ್ರಮವಹಿಸಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಗುರುವಾರ ಜರುಗಿದ ಡೆಂಗ್ಯೂ, ಚಿಕನ್‌ಗುನ್ಯಾ ಸೇರಿದಂತೆ ಮಳೆಗಾಲದಲ್ಲಿ ಹರಡುವ ರೋಗಗಳ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಟಣದ ಎಲ್ಲ ವಾರ್ಡಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಈಗಾಗಲೇ ಫಾಗಿಂಗ್ ಆರಂಭಿಸಲಾಗಿದೆ. ಜೊತೆಗೆ ಮಳೆನೀರು ಒಂದೆಡೇ ಸಂಗ್ರಹವಾಗದಂತೆ ಕ್ರಮವಹಿಸಲಾಗುತ್ತಿದೆ. ಜೊತೆಗೆ ಸಾರ್ವಜನಿಕರಿಗೆ ಈ ರೋಗಗಳ ಕುರಿತು ಸೂಕ್ತ ಮಾಹಿತಿ ಒದಗಿಸಿ ಎಚ್ಚರಿಕೆ ವಹಿಸಲು ಮುಂದಾಗುವಂತೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಿಬ್ಬಂದಿಗೆ ಸೂಚಿಸಿದರು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಬ್ಬೀರ್ ರೇವೂರಕರ್, ಸಿಎಚ್‌ಓ ಸಚೀನ ಪಾಟೀಲ ಮಾತನಾಡಿ, ಡೆಂಗ್ಯೂ, ಚಿಕನ್‌ಗುನ್ಯಾ ಹರಡುವ ಬಗೆ, ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳು, ಬಳಕೆಯಿಲ್ಲದ ಟಾಯರ್, ತೆಂಗಿನಚಿಪ್ಪುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು. ರೋಗಗಳಿಗೆ ದೊರೆಯುವ…

Read More

ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ವಿವಿಧ ನರ್ಸಿಂಗ್ ಕಾಲೇಜಗಳು ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಏರ್ಪಡಿಸಿದ ಜಿಲ್ಲಾಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಜನಜಾಗೃತಿ ರ‍್ಯಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ ಹುಬ್ಬಳಿ ರವರು ಜಂಟಿಯಾಗಿ ಹಸಿರು ನಿಶಾನೆ ತೋರಿಸಿ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ ಅವರು ಮಾತನಾಡಿ ಮಿತಿಮೀರಿದ ಜನಸಂಖ್ಯೆ ದೇಶದ ಅಭಿವೃದ್ದಿಗೆ ಮಾರಕವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರಲ್ಲೂ ತಿಳುವಳಿಕೆ ಮೂಡಬೇಕು ಅಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ…

Read More

ವಿಜಯಪುರ: ಪ್ರಸಕ್ತ ೨೦೨೪-೨೫ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯಪುರ ಜಿಲ್ಲೆಗೆ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (ಖWಃಅIS) ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ. ಬೆಳೆ ಸಾಲ ಪಡೆದ ರೈತರುಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಝರಾಕ್ಸ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಲು ಕೋರಿದೆ.ದ್ರಾಕ್ಷಿ ಬೆಳೆಗೆ ವಿಮೆ ನೊಂದಾಯಿಸಿಕೊಳ್ಳಲು ಕೊನೆಯ ದಿನಾಂಕ: ೧೫-೦೭-೨೦೨೪, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ರೂ. ೧೪,೦೦೦ ರೂ.ಗಳಾಗಿರುತ್ತದೆ. ರೈತರು ಕಡ್ಡಾಯವಾಗಿ ಎಫ್‌ಐಡಿ, ಹಾಗೂ ಎನ್‌ಪಿಸಿಐ ಸಿಡಿಂಗ್ ಮಾಡಿಸಿರಬೇಕು.ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆ, ಅಗ್ರಿಕಲ್ಚರ ಇನ್ಸುರನ್ಸ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: ೮೮೯೯೮೮೭೮೭೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ – ೯೫೩೫೧೮೫೯೯೯,…

Read More

ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ವಿಜಯಪುರ: ರೈತರಿಂದ ಕಬ್ಬನ್ನು ಪಡೆದುಕೊಂಡು ಕಬ್ಬಿನ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ಬಬಲೇಶ್ವರ ತಾಲೂಕಿನ ಕಾರಜೋಳ ಬಸವೇಶ್ವರ ಶುಗರ್ಶ್ ಸಕ್ಕರೆ ಕಾರ್ಖಾನೆಯ ಚರ-ಸ್ಥಿರಾಸ್ಥಿಗಳನ್ನು ಹರಾಜು ಹಾಕಿ ರೈತರ ಬಾಕಿ ಹಣ ಪಾವತಿ ಮಾಡಲು ಸಕ್ಕರೆ ಕಾರ್ಖಾನೆಯನ್ನು ಪರಿಶೀಲಿಸಿ ಮೌಲ್ಯಮಾಪನ ಮಾಡಲು ವಿಜಯಪುರ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ೧೦ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಬಬಲೇಶ್ವರ ತಾಲೂಕಿನ ಬಸವೇಶ್ವರ ಶುಗರ್ಸ್ ಕಾರಜೋಳ ಸಕ್ಕರೆ ಕಾರ್ಖಾನೆಯವರು ಕಳೆದ ಸಾಲಿನ ೨೦೨೩-೨೪ನೇ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ರೈತರಿಂದ ಕಬ್ಬನ್ನು ಪಡೆದು, ನುರಿಸಿ ಇನ್ನೂ ೪೮.೦೦ ಕೋಟಿ ರೂ. ಹಣವನ್ನು ರೈತರಿಗೆ ಪಾವತಿ ಬಾಕಿ ಉಳಿಸಿಕೊಂಡಿದ್ದರಿಂದ ಸಕ್ಕರೆ (ನಿಯಂತ್ರಣ) ಆದೇಶ ೧೯೬೬ರ ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಪ್ರಕಾರ ಜಿಲ್ಲಾಧಿಕಾರಿಗಳ ವರದಿ ಮೇರೆಗೆ ಬಾಕಿ ವಸೂಲಾತಿ ಮಾಡಲು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶಕರು ಬೆಂಗಳೂರು ಇವರು ಆದೇಶ…

Read More

ವಿಜಯಪುರ: ಲಸಿಕೆಯಿಂದ ಯಾವುದೇ ಮಕ್ಕಳು ವಂಚಿತವಾಗದಂತೆ ನೋಡಿಕೊಂಡು ಶಾಲೆಯಿಂದ ಹೊರಗುಳಿದ, ಅಂಗನವಾಡಿ ಕೇಂದ್ರದ ಮಕ್ಕಳು ಸೇರಿದಂತೆ ಪ್ರತಿ ಮನೆ-ಮನೆಗಳ ಮಾಹಿತಿ ಸಂಗ್ರಹಿಸಿ ಯಶಸ್ವಿಯಾಗಿ ಲಸಿಕಾಕರಣ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಮಹಾನಗರ ಪಾಲಿಕೆ ಮಹಾಪೌರೆ ಶ್ರೀಮತಿ ಮಹೇಜಬಿನ್ ಹೊರ್ತಿ ಅವರು ಸೂಚಿಸಿದರು.ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮುಂಜಾಗೃತಾ ಕ್ರಮವಾಗಿ ವಿವಿಧ ಲಸಿಕಾ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ಪಾಲಿಸಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಲಸಿಕಾಕರಣ ಮತ್ತು ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಸೂಚಿಸಿದರು.ಪಾಲಿಕೆ ವ್ಯಾಪ್ತಿಯ ೩೫ ವಾರ್ಡಗಳಲ್ಲಿ ಜವಾಬ್ದಾರಿಯುತವಾಗಿ ತಮ್ಮ ವ್ಯಾಪ್ತಿಯ ಸ್ಥಿತಿಗತಿ, ಮಕ್ಕಳ ಜನಸಂಖ್ಯೆ, ಅಂಗನವಾಡಿ ಕೇಂದ್ರಗಳು, ಶಾಲೆಗಳನ್ನು ಗುರುತಿಸಿ ಯಾವುದೇ ಮಕ್ಕಳು ಲಸಿಕಾಕರಣದಿಂದ ಹೊರಗುಳಿಯದಂತೆ ಲಸಿಕೆ ನೀಡಲು ಪ್ರಚಾರ ಹಾಗೂ ಪ್ರತಿ ಮನೆಗಳ ಮಾಹಿತಿಯನ್ನು ಸಂಗ್ರಹಿಸಿ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ…

Read More

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ ಚರ್ಚಿಸಿದ ಶಾಸಕ ಯತ್ನಾಳ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಆಗುವ ನಷ್ಟದ ಬಗ್ಗೆ ಸ್ವತಃ ರಾಜ್ಯ ಸರ್ಕಾರದ ವಿತ್ತ ಇಲಾಖೆ ಎಚ್ಚರಿಸಿದರೂ ಸಹ ಈ ರೀತಿಯಾದ ಯೋಜನೆಗಳನ್ನು ಅನುಷ್ಠಾನಗೊಳಿಸಿರುವುದರಿಂದ ರಾಜ್ಯ ದಿವಾಳಿ ಆಗುವುದರ ಬಗ್ಗೆ ವಿತ್ತ ಸಚಿವರಿಗೆ ತಿಳಿಸಿ, ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಬಳಸಿ ಕೂಡಲೇ ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಅಂಡ್ ಬಜೆಟ್ ಮ್ಯಾನೇಜ್ಮೆಂಟ್ ಆಕ್ಟ್ ಕಾಯ್ದೆಯಡಿ ರಾಜ್ಯ ಸರ್ಕಾರದ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಯಿತು.ಇದಲ್ಲದೆ, ಅಕ್ಕಿ ವಿತರಣೆಯಲ್ಲೂ ರಾಜ್ಯ ತಪ್ಪು ಹೆಜ್ಜೆ ಇಡುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಆದರೆ, ಎಷ್ಟು ಬೋಗಸ್ ಕಾರ್ಡ್ ಗಳು ವಿತರಣೆಯಾಗಿದೆ ಎಂಬ…

Read More

ನಿಡಗುಂದಿ: ಸರ್ಕಾರಿ ಪ್ರೌಡಶಾಲೆ ಕಮದಾಳ ಪ್ಲಾಟ್ ದಲ್ಲಿ ಋತು ಚಕ್ರ ಸಮಯದಲ್ಲಿ ಶುಚಿತ್ವ ನಿರ್ವಹಣೆ ಮತ್ತು ಋತು ಬಂಧದ ಕುರಿತು ಅರಿವು ಅವಶ್ಯ ಎಂದು ಹಿರಿಯ ಉಪನ್ಯಾಸಕಿ ಗೀತಾಂಜಲಿ ಹೇಳಿದರು.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪೂರ, ತಾಲುಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಬಸವನಬಾಗೇವಾಡಿ, ಸಮುದಾಯ ಆರೋಗ್ಯ ಕೇಂದ್ರ ನಿಡಗುಂದಿ ಹಾಗು ಸರ್ಕಾರಿ ಪ್ರೌಡಶಾಲೆ ಕಮದಾಳ ಪ್ಲಾಟ್ ಇವರ ಸಂಯುಕ್ತ ಆಶ್ರಯದಲ್ಲಿ, ರಾಜ್ಯ ಆರೋಗ್ಯ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳ ಕ್ಷೇತ್ರ ಅಧ್ಯಯನ ಕಾರ್ಯಕ್ರಮದ ಅಂಗವಾಗಿ ಜರುಗಿದ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡುತ್ತಾ ಅವರು, ಋತು ಚಕ್ರದ ಕಾಲಾವದಿ,ಆ ಅವದಿಯಲ್ಲಿಯ ತೊಂದರೆಗಳು, ಮೂಡನಂಬಿಕೆಗಳಿಂದ ಆಗುವ ದುಷ್ಟ್ಪರಿಣಾಮಗಳು, ಶುಚಿತ್ವ ಕಾಪಾಡುವ ಕುರಿತು ಹಾಗು ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ನೀಡಿದರು.ತಾಲುಕಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗು ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶಕ ಎಸ್ ಎಸ್ ಮೇಟಿ, ರಾಜ್ಯ ಆರೋಗ್ಯ ಸಂಸ್ಥೆಯ ಕ್ಷೇತ್ರ ಅಧ್ಯಯನವು ನಮ್ಮ ಗ್ರಾಮಿಣ ಹೆಣ್ಣುಮಕ್ಕಳಲ್ಲಿ ಋತು ಚಕ್ರದ ಬಗ್ಗೆ…

Read More

ಮೂಲ ಸ್ಥಳದಲ್ಲಿ ಪುನಃ ಪುತ್ಥಳಿ ಸ್ಥಾಪಿಸಲು ಪ್ರತಿಭಟನಾಕಾರರ ಆಗ್ರಹ ವಿಜಯಪುರ: ನವದೆಹಲಿಯ ಐತಿಹಾಸಿಕ ಹಳೆಯ ಸಂಸತ್ ಭವನದ ಮುಂದೆ ಇದ್ದ ಛತ್ರಪತಿ ಶಿವಾಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗಳನ್ನು ತೆರುವುಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷ ತುಳಸಿರಾಮ ಹರಿಜನ ಹೇಳಿದರು.ಅವರು ವಿಜಯಪುರ ನಗರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯಿಂದ ಛತ್ರಪತಿ ಶಿವಾಜಿ ಮಹಾರಾಜರ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಇತರ ಮಹಾನ್ ನಾಯಕರ ಪುತ್ಥಳಿಗಳನ್ನು ಕೇಂದ್ರ ಸರ್ಕಾರ ತೆರವುಗೊಳಿಸಿರುವುದನ್ನು ಖಂಡಿಸಿ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು.ಭಾರತೀಯ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ವಿಶ್ವಮಾನ್ಯ ಅಮೂಲ್ಯ ರತ್ನಗಳೆಂದರೆ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು. ಅಂತಹ ಮಹಾನ್ ನಾಯಕರಿಗೆ ಗೌರವ ಸಲ್ಲಿಸುವ ದ್ಯೋತಕವಾಗಿ ಹಿಂದಿನ ನಾಯಕರು ರಾಷ್ಟ್ರದ ಐತಿಹಾಸಿಕ ಸಂಸತ್ ಭವನದ ಮುಂದೆ ಪುತ್ಥಳಿಗಳನ್ನು…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ | ನಾಗೇಂದ್ರ ಅವರ ಮನೆ ಸೇರಿದಂತೆ ೪ ಕಡೆ ಇಡಿ ದಾಳಿ | ರಾಜ್ಯ ಸರ್ಕಾರಕ್ಕೆ ಎದುರಾಗಲಿರುವ ಸಂಕಷ್ಟ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಂತರ ವಶಕ್ಕೆ ಪಡೆದಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿಗಳಿಗೂ ಹೆಚ್ಚಿನ ಅವ್ಯವಹಾರದ ಹಿನ್ನೆಲೆಯಲ್ಲಿ, ನಾಗೇಂದ್ರ ಅವರ ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ, ಸಂಬಂಧಿಸಿದ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ನಾಲ್ಕು ಕಡೆ ಇಡಿ ದಾಳಿ ನಡೆಸಿತ್ತು.ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಶಾಸಕ ನಾಗೇಂದ್ರ ಹಾಗೂ ಕಾಂಗ್ರೆಸ್‌ ಶಾಸಕ ಬಸವನಗೌಡ ದದ್ದಲ್‌ ಅವರ ನಿನ್ನೆಯ ಸುಧೀರ್ಘ ವಿಚಾರಣೆಯ ಬೆನ್ನಲ್ಲೇ ಇಡಿ ಅಧಿಕಾರಿಗಳು ಇಂದು…

Read More

ಬಾಗಲಕೋಟ: ಹವಾಮಾನ ವೈಪರೀತ್ಯದಿಂದಾಗಿ ರೈತರು ಪ್ರಕೃತಿಯೊಂದಿಗೆ ಹೊಂದಿಕೊಂಡು ಬೇಸಾಯ ಮಾಡುತ್ತಿದ್ದು, ಅವರ ಕಷ್ಟಕಾರ್ಪಣ್ಯಗಳಿಗೆ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಅಧಿಕಾರಿಗಳು ಮತ್ತು ವಿಜ್ಞಾನಿಗಳು ನಿರಂತರವಾಗಿ ಸ್ಪಂದಿಸುತ್ತಿದ್ದಾರೆ ಎಂದು ಬಾಗಲಕೋಟ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಲಕ್ಷ್ಮಣ ಕಳ್ಳೆನ್ನವರ ಹೇಳಿದರು.ಅವರಿಂದು ಬಾಗಲಕೋಟ ತಾಲೂಕಿನ ಶಾರದಾಳ ಗ್ರಾಮದ ಪ್ರಗತಿಪರ ರೈತ ನಿಂಗಪ್ಪ ಅರಕೇರಿ ಇವರ ಕ್ಷೇತ್ರದಲ್ಲಿ (೦೯-೦೭-೨೦೨೪ ರಂದು) ಹಮ್ಮಿಕೊಂಡ ದ್ವೈಮಾಸಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ರೈತರಿಗೆ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವದು, ಸಕಾಲದಲ್ಲಿ ಪರಿಕರಗಳನ್ನು ಪೂರೈಸುವದು, ವಿವಿಧ ಬೆಳೆಗಳಲ್ಲಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲು ಮಿನಿಕಿಟ್ ವಿತರಿಸುವದು, ಸಮಸ್ಯಾತ್ಮಕ ಕ್ಷೇತ್ರಗಳಿಗೆ ವಿಜ್ಞಾನಿಗಳೊಂದಿಗೆ ಭೇಟಿ ನೀಡಿ ಪರಿಹಾರ ಒದಗಿಸುವದು, ಒಟ್ಟಾರೆಯಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಲಾಖೆ ಸದಾ ಸನ್ನದ್ದವಾಗಿದೆ ಎಂದರು.ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಸೂಕ್ತ ಸಲಹೆಗಳನ್ನು ನೀಡಲು ಪ್ರತಿ ಎರಡು ತಿಂಗಳಿಗೊಮ್ಮೆ ಜಿಲ್ಲೆಯ ಅಧಿಕಾರಿಗಳಿಗೆ ಕೃಷಿಯಲ್ಲಾದ ನೂತನ ತಾಂತ್ರಿಕತೆಗಳ ಕುರಿತು ಪರಸ್ಪರ ಚರ್ಚಿಸಿ ಮಾಹಿತಿ ನೀಡಲಾಗುವದು. ಇದನ್ನು ಆಧರಿಸಿ ಅಧಿಕಾರಿಗಳು ರೈತರ…

Read More