Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ಸಾಲೋಟಗಿಯ ಶ್ರೀ ಶಿವಯೋಗೀಶ್ವರರ ಜಾತ್ರೆ ಕುರಿತು ರವಿವಾರ ರಾತ್ರಿ ನೀರಾಟ ನಡೆಯಿತು.ಹಿನ್ನೆಲೆ: ಶ್ರೀ ಶಿವಯೋಗೀಶ್ವರರ ಮಾತಾ ಪಿತ್ರಗಳ ಅಭಿಪ್ಸೆಯ ಮೇರೆಗೆ ಶಿವಯೋಗೀಶ್ವರರ ಮದುವೆಯು ಗಂಗಾಂಬಿಕೆಯೊಂದಿಗೆ ನಡೆಯುವ ಸಂದರ್ಭದಲ್ಲಿ ಮದುವೆ ಜೋಡಿಯನ್ನು ಸುರಿಗೆ ಸುತ್ತಿ ಮಧು ವರರ ಮೇಲೆ ಸುರಿಗೆ ನೀರನ್ನು ಹಾಕುವಾಗ ಅಜನ್ಮ ಬ್ರಹ್ಮಚಾರಿಗಳಾದ ಶಿವಯೋಗೀಶ್ವರರು ಮದುವೆಯನ್ನು ನಿರಾಕರಿಸಿ ಮದುವೆ ಮಂಟಪದಿಂದ ಹೊರ ಹೋಗುತ್ತಾರೆ. ದಾಂಪತ್ಯದ ಸಂಬಂಧ ಬಿಟ್ಟು ಶಿವಯೋಗೀಶ್ವರ ಹೋಗಬೇಡೆಂದು ಕಳಸಿಗಳಲ್ಲಿ ತುಂಬಿದ ಸುರಿಗೆ ನೀರನ್ನು ಎರಚುತ್ತಾರೆ. ಶಿವಯೋಗಿಶ್ವರರು ಅಲ್ಲಿಂದ ದೂರ ಹೋಗಲಾಗಿ ಸುರುಗೆ ನೀರು ಗಂಗಾAಬಿಕೆಯ ಮೇಲೆಮಾತ್ರ ಬಿಳುತ್ತದೆ.ಈ ಸನ್ನಿವೇಶವೇನೀರಾಟದ ರೂಪದಲ್ಲಿಧಾರ್ಮಿಕ ಆಧ್ಯಾತ್ಮಿಕಮತ್ತು ಸಾಂಸ್ಕೃತಿಕ ಸಂಕೇತವಾಗಿದೆ.ರವಿವಾರ ಒಳಗಿನ ಗುಡಿಯಿಂದಶಿವಯೋಗೀಶ್ವರರ ಉತ್ಸವಮೂರ್ತಿಯನ್ನುಭವ್ಯ ಮೆರವಣೆಗೆಯಲ್ಲಿ ಹೊರಗಿನ ಗುಡಿಗೆ ಒಯ್ದು ಗದ್ದುಗೆಯಲ್ಲಿಕೂಡಿಸಿದ ನಂತರ ಸರಿಯಾಗಿ ರಾತ್ರಿ ಒಂದು ಗಂಟೆಗೆನೀರಾಟ ಪ್ರಾರಂಭವಾಯಿತು. ಗಂಗಾಂಬಿಕೆಯನ್ನು ಸಂಕೇತಿಸುವ ಗಂಗಮ್ಮನ ಬಿಂದಿಗೆಯ ಬಾಯಿಯನ್ನು ಶ್ರೀಗಂಧದ ನೀಳವಾದೆಲೆಯುಕ್ತ ಚಬಕಿಗಳಿಂದೊಂದು ಹನಿ ನೀರೂ ಒಳಗಿಳಿಯದಂತೆ ಭದ್ರ ಪಡಿಸುತ್ತಾರೆ. ಹೊರಗಿನ ಗುಡಿಯ ಮುಂದೆ ಮತ್ತು ಹಿಂದೆ ಇರುವ ಎರಡು ಬಾವಿಗಳಿಂದ ಭಕ್ತರು…
ಬಸವನಬಾಗೇವಾಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರಾರ್ಥವಾಗಿ ಮೇ. ೧ ರಂದು ತಾಲೂಕಿನ ಮುತ್ತಗಿ ಗ್ರಾಮದ ಮಾರುತೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ೯ ಗಂಟೆಗೆ ಹಮ್ಮಿಕೊಂಡಿರುವ ಪ್ರಚಾರ ಸಭೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬಸವನಬಾಗೇವಾಡಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಚಾರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ. ಈ ಸಭೆಗೆ ಮತಕ್ಷೇತ್ರದ ರೆಡ್ಡಿ ಸಮುದಾಯ ಸೇರಿದಂತೆ ಬಸವನಬಾಗೇವಾಡಿ ಮತಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿಕೊಂಡ ಅವರು, ಈಗಾಗಲೇ ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಜಿಲ್ಲೆಯಲ್ಲಿ ಆಗಿರುವ ಮತ್ತು…
ಬಸವನಬಾಗೇವಾಡಿ: ಇಂದಿನ ಕಾಲದಲ್ಲಿ ಪುರಾಣ ಮತ್ತು ಪ್ರವಚನಗಳಿಂದ ನಾವು ಧರ್ಮ, ಸಂಸ್ಕ್ರತಿ, ಮಹಾತ್ಮರ ಮತ್ತು ಶರಣರ ತತ್ವ-ಸಿದ್ಧಾಂತಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಜನರು ಭಾಗವಹಿಸಿ ಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯಬೇಕೆಂದು ವಡವಡಗಿ ನಂದಿಮಠದ ವೀರಸಿದ್ದ ಸ್ವಾಮೀಜಿ ಹೇಳಿದರು.ತಾಲೂಕಿನ ವಡವಡಗಿ ಗ್ರಾಮದ ನಂದಿಮಠದ ಗುರುವೀರಸಿದ್ಧ ಶಿವಯೋಗಿಗಳ ೭೪ ನೇ ಜಾತ್ರಾಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಯವರ ದ್ವಿತೀಯ ಪುಣ್ಯಾರಾಧನೆಯಂಗವಾಗಿ ಹಮ್ಮಿಕೊಂಡಿದ್ದ ಜಗದ್ಗುರು ಸಾವಳಗಿ ಶಿವಲಿಂಗೇಶ್ವರ ಪುರಾಣ ಮಂಗಲೋತ್ಸವದಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾತ್ರೆ ಸೇರಿದಂತೆ ವಿವಿಧ ಸಂದರ್ಭದಲ್ಲಿ ಹಮ್ಮಿಕೊಳ್ಳುವ ಪುರಾಣ-ಪ್ರವಚನ ಕಾರ್ಯಕ್ರಮದಲ್ಲಿ ಜನರು ಭಾಗವಹಿಸಿ ಪ್ರವಚನಕಾರರು ಹೇಳುವ ಆಧ್ಯಾತ್ಮಿಕ ಸಂದೇಶಗಳನ್ನು ತಿಳಿದುಕೊಂಡು ಸಮಾಜದಲ್ಲಿ ಉತ್ತಮರಾಗಿ ಬಾಳಬೇಕು. ಯುವಜನಾಂಗ ಯಾವುದೇ ದುಶ್ಚಟಗಳಿಗೇ ದಾಸರಾಗದೇ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಡೆಗೆ ಗಮನ ಹರಿಸಬೇಕು. ಇಂದು ಬಸವಾದಿ ಶರಣರ ಆದರ್ಶಮಯ ಜೀವನ ನಮಗೆ ಮಾದರಿಯಾಗಿದೆ. ಇಂತಹ ಶರಣರ ಜೀವನವನ್ನು ನಾವೆಲ್ಲರೂ ಅನುಸರಿಸಬೇಕಿದೆ. ಶ್ರೀಮಠದ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಯವರು ಭಕ್ತರೊಂದಿಗೆ ಇದ್ದ ಬಾಂಧವ್ಯ…
ಅನಧಿಕೃತ ಮನೆ ನಿರ್ಮಾಣ ತಡೆಗೆ ರೈತ ಸಂಘ ಮನವಿ ದೇವರಹಿಪ್ಪರಗಿ: ಗ್ರಾಮದಲ್ಲಿ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವ ಮನೆಯ ನಿರ್ಮಾಣ ತಡೆದು ರೈತರಿಗೆ ಅನುಕೂಲ ಮಾಡಿಕೊಡುವಂತೆ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ದೇವೂರ ಗ್ರಾಮದ ರೈತಸಂಘದ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ರಸ್ತೆಯಲ್ಲಿ ಮನೆ ನಿರ್ಮಾಣ ಮಾಡುತ್ತಿರುವ ಕುರಿತು ಗಮನ ಸೆಳೆದರು. ಈ ಸಂದರ್ಭದಲ್ಲಿ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಪಾಟೀಲ ಮಾತನಾಡಿ, ದೇವೂರ ಗ್ರಾಮದಲ್ಲಿ ಜಟ್ಟಿಂಗರಾಯ ಮತ್ತು ಯಲ್ಲಮ್ಮನ ದೇವಸ್ಥಾನಗಳ ಮೂಲಕ ಸರ್ಕಾರಿ ನಕಾಶೆಯಲ್ಲಿರುವಂತೆ ರಿ.ಸ.ನಂ ೧ ರಿಂದ ೨೬ ರವರೆಗಿನ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಬೂಮಾ ಗುಲಾಬ್ ನಧಾಫ್ ಎಂಬುವವರು ಸಾರ್ವಜನಿಕ ಕೈಪಂಪು ಮುಚ್ಚಿ ಅದರ ಮೇಲೆ ಅನಧಿಕೃತ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ಎರಡು ವರ್ಷಗಳ ಹಿಂದೆಯೇ ತಹಶೀಲ್ದಾರರಿಗೆ ಮನವಿ ಮಾಡಿ ಮನೆ ನಿರ್ಮಾಣ ತಡೆಯಲಾಗಿತ್ತು.…
ಇಂಡಿ: ಇತ್ತೀಚೆಗೆ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಸಿಕ್ಕಿಕೊಂಡಿದ್ದ ಬಾಲಕ ಸಾತ್ವಿಕನನ್ನು ಉಳಿಸಿಕೊಳ್ಳುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಇಂಡಿ ತಾಲೂಕ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅವರನ್ನು ಲಚ್ಯಾಣ ಡಿಎಡ್ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.ಸಾಮಾಜಿಕ ಕಳಕಳಿಯ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ ಗೆಳೆಯರ ಬಳಗದ ಬಸವರಾಜ ಬಬಲಾದ, ಗೋಪಾಲ ಜಾಧವ, ಬಾಳು ಪೂಜಾರಿ, ಸುಲೆಮಾನ್ ಕಸಾಯಿ, ಮಲ್ಲಿಕಾರ್ಜುನ ಜ್ಯಾಮಗೊಂಡ, ವೀರಭದ್ರಯ್ಯ ಮಠ, ಪ್ರಕಾಶ ಗೋಡೆಕರ, ಸಂತೋಷ ಪಾಟೀಲ, ಸಂಗಮೇಶ ಮುಜಗೊಂಡ, ಅಬ್ದುಲ್ ಗಣಿ ಮುಜಾವರ, ಅಪ್ಪು ವಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಜಯಪುರ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೨ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೋಮವಾರ ಭೇಟಿ ನೀಡಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದರು.ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೨ ಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಸಂಖ್ಯೆ, ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ ಮಾಡಿರುವುದು, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಕುರಿತು, ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಕೊಠಡಿಗಳಿಗೆ ಸಿಸಿ ಟಿವಿ ಮತ್ತು ವೆಬ್ ಕಾಸ್ಟಿಂಗ್ ಅಳವಡಿಸಿರುವ ಕುರಿತು ಪರಿಶೀಲಿಸಿದರು. ಬಳಿಕ ಜಿಲ್ಲಾ ಪಂಚಾಯತಿಯ ಆವರಣದಲ್ಲಿರುವ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಅಳವಡಿಸಿರುವ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ವೀಕ್ಷಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು ಹಾಗೂ ಸ್ಥಾನಿಕ ಜಾಗೃತ ದಳದವರು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ…
ಬ್ರಹ್ಮದೇವನಮಡು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ತಾಲೂಕು ಆಡಳಿತ, ತಾಲೂಕು ಸ್ಟೀಪ್ ಸಮಿತಿ ಹಾಗೂ ಹೊನ್ನಳ್ಳಿ ಗ್ರಾಪಂ ಆಶ್ರಯದಲ್ಲಿ ಮತದಾನ ಜಾಗೃತಿ ಕಾಯ೯ಕ್ರಮವನ್ನು ಭಾನುವಾರ ಏಪ೯ಡಿಸಲಾಗಿತ್ತು.ಈ ವೇಳೆ ಗ್ರಾಪಂ ಪಿಡಿಒ ಎಸ್.ಸಿ.ನಾಯ್ಕೋಡಿ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸು ನಮ್ಮ ದೇಶದ ಸಾವ೯ತ್ರಿಕ ಚುನಾವಣೆಗಳನ್ನು ಅವಲಂಬಿಸಿದೆ. ದೇಶದ ಪ್ರತಿ ಪ್ರಜೆಯೂ ಆಮಿಷಗಳಿಗೆ ಬಲಿಯಾಗದೆ ತನಗೆ ಸಂವಿಧಾನ ಬದ್ದ ಪ್ರಾಪ್ತವಾಗಿರುವ ಮತಧಿಕಾರವನ್ನು ಯೋಗ್ಶ ಅಭ್ಶಥಿ೯ಗಳ ಆಯ್ಕೆಗೆ ಚಲಾಯಿಸಬೇಕು. ಹೀಗಾಗಿ ಮೆ.೭ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಸ್ವಯಂ ಸ್ಪೂತಿ೯ಯಿಂದ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.ಮುಖ್ಶ ಶಿಕ್ಷಕ ಎನ್.ಆರ್.ಬಡಿಗೇರ, ಶಿಕ್ಷಕ ಎಸ್.ಐ.ಯಳಸಂಗಿ, ಶ್ರೀಮತಿ ಜಿನತ್ ಕೌಸರ್, ಚಾಂದಬಾಷಾ ದಗಾ೯, ಬಸವರಾಜ ಸಜ್ಜನ, ಖಾಸಿಂಮಸಾಬ್ ರಾಜೇಕೋಳ, ಜೆಟ್ಟೆಪ್ಪ ದೊಡ್ಡಮನಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಆಶಾ ಕಾಯ೯ಕತ೯ರು,ಅಂಗನವಾಡಿ ಕಾಯ೯ಕತ೯ರು ಇದ್ದರು.
ಆಲಮಟ್ಟಿ: ಡಾ.ಅಂಬೇಡ್ಕರ ಅವರು ಹಲವು ಇಲ್ಲಗಳ ಕಾಲಘಟ್ಟದಲ್ಲಿ, ಅನೇಕ ಸಾಮಾಜಿಕ ಬಹಿಷ್ಕಾರದಂತಹ ಪರಿಸ್ಥಿತಿಗಳಲ್ಲಿ ಡಾ ಅಂಬೇಡ್ಕರ ಬೆಳೆಯಲು ಶಿಕ್ಷಣವೇ ಮುಖ್ಯ ಕಾರಣ. ಈಗ ಶಿಕ್ಷಣ ಪಡೆಯಲು ಸಾಕಷ್ಟು ಅವಕಾಶಗಳಿವೆ, ಹೀಗಾಗಿ ದಲಿತರು ಶಿಕ್ಷಣವಂತರಾಗಿ, ಸಮಗ್ರ ಅಭಿವೃದ್ಧಿಯಾಗಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯದ ರಾಜ್ಯ ಸಂಘಟನಾ ಸಂಚಾಲಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಚಾಲಕ ಮರೆಪ್ಪ ಹೆಬ್ಬಾಳ ಅಭಿಪ್ರಾಯಪಟ್ಟರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯದ ವತಿಯಿಂದ ಡಾ ಅಂಬೇಡ್ಕರ ಅವರ ೧೩೩ ನೇ ಜಯಂತಿ ಅಂಗವಾಗಿ ನಡೆದ, ಪ್ರಜಾಪ್ರಭುತ್ವ ರಕ್ಷಣೆಗಾಗಿ ತಾಲ್ಲೂಕು ಮಟ್ಟದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಉಮೇಶ ಅಲಕಪುರ ಮಾತನಾಡಿ, ದಲಿತರು ಮೂಡನಂಬಿಕೆಗೆ ಹಾಗೂ ಆಮಿಷಕ್ಕೆ ಒಳಪಟ್ಟು ದೇವರುಗಳ ಹೆಸರಲ್ಲಿ ಕುರಿ, ಕೋಳಿ, ಕೋಣ ಬಲಿ ಕೊಡುವುದು, ದೇವದಾಸಿಯಂತಹ ಅನಿಷ್ಠ ಪದ್ಧತಿಯನ್ನು ತೊಡೆದು…
ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಬಾಲಕನೋರ್ವ ಕೃಷ್ಣೆಯ ಪಾಲಾದ ಘಟನೆ ಸೋಮವಾರ ತಾಲ್ಲೂಕಿನ ಯಲಗೂರ ಗ್ರಾಮದ ಜಾಕವೆಲ್ ಬಳಿ ಜರುಗಿದೆ.ಮೃತ ಯುವಕ ಬಸವನಬಾಗೇವಾಡಿ ತಾಲ್ಲೂಕಿನ ಹಂಗರಗಿ ಗ್ರಾಮದ ವೆಂಕಟೇಶ ಶರಣಪ್ಪ ಚಲವಾದಿ(೧೫) ಕಳೆದೆರೆಡು ದಿನಗಳಿಂದ ಆಲಮಟ್ಟಿಯ ಜಲಾಶಯದಿಂದ ಕೃಷ್ಣಾ ನದಿ ತಳಪಾತ್ರಕ್ಕೆ ನೀರು ಬಿಡಲಾಗುತ್ತಿದೆ. ಹೀಗಾಗಿ ಯಲಗೂರ ಜಾಕವೆಲ್ ಬಳಿ ನೀರಿನ ಹರಿವು ಇತ್ತು. ನೀರಿನ ಆಳ ಅಗಲದ ಮಾಹಿತಿ ಗೊತ್ತಿಲ್ಲದ್ದ ಬಾಲಕ ನದಿಯಲ್ಲಿ ಮುಳುಗಿದ ಎನ್ನಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ನಿಡಗುಂದಿ ಪೊಲೀಸರು, ಜಲಾಶಯದಿಂದ ನೀರು ಬಿಡುವುದನ್ನು ಕೆಲ ಕಾಲ ಬಂದ್ ಮಾಡಿಸಲಾಯಿತು. ಸ್ಥಳೀಯ ಮೀನುಗಾರರ ಜೊತೆಗೂಡಿ ಅಗ್ನಿಶಾಮಕ ದಳದ ತಂಡದವರು ಸೇರಿ ಶವ ಹುಡುಕಾಟದಲ್ಲಿ ತೊಡಗಿದ್ದರು. ಸಂಜೆಯವರೆಗೂ ಶವ ಪತ್ತೆಯಾಗಲಿಲ್ಲ.ಶುಕ್ರವಾರ ಮೃತನ ಚಿಕ್ಕಪ್ಪ ಅವರ ಮದುವೆಯಾಗಿದ್ದು, ಅದರ ಬಾಸಿಂಗ್ ಬಿಡಲು ನದಿಗೆ ಬಂದಾಗ ಈ ದುರ್ಘಟನೆ ಜರುಗಿದೆ.ನದಿ ತೀರದಲ್ಲಿ ಸಂಬಂಧಿಗಳ ರೋಧನ ಮುಗಿಲುಮುಟ್ಟಿತ್ತು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದುಗರ ಚಾವಡಿ ರಾಜೇಂದ್ರಕುಮಾರ ಬಿರಾದಾರ ಸಾಂಸ್ಕೃತಿಕ ವೇದಿಕೆಯ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮ ವಿಜಯಪುರ: ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳು, ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಸಂಭ್ರಮಗಳು, ಗಂಟಲುಬ್ಬಿ ಬಂದ ನೋವಿನ ಬಿಕ್ಕಳಿಕೆಗಳು, ನಮ್ಮವೇ ಆದ ಸಮಸ್ಯೆಗಳು, ಆಶಯಗಳು, ಹತಾಶೆಗಳು ಕಥಾವಸ್ತುಗಳಾಗಿ ಗಮನ ಸೆಳೆಯುತ್ತವೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.ಬ್ಯಾಂಕರ್ಸ್ ಕಾಲೋನಿಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಡಾ. ಎಂ.ಎಸ್.ಮಾಗಣಗೇರಿ ಕುಟುಂಬದವರು ಆಯೋಜಿಸಿದ ಓದುಗರ ಚಾವಡಿ ರಾಜೇಂದ್ರಕುಮಾರ ಬಿರಾದಾರ ಸಾಂಸ್ಕೃತಿಕ ವೇದಿಕೆಯ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ತಾಳಿಕೋಟಿಯ ಸವಿತಾ ಆರ್. ಇನಾಮದಾರ ಅವರ ‘ಅರ್ಧ ನೆನಪು ಅರ್ಧ ಕನಸು’ ಕಥಾ ಸಂಕಲನವನ್ನು ಪರಿಚಯಿಸಿ ಅವರು ಮಾತನಾಡಿದರು.ಇಲ್ಲಿನ ಕಥೆಗಳ ಭಾಷೆ ವಿಶೇಷವಾಗಿದೆ. ಉತ್ತರ ಕರ್ನಾಟಕದ ಭಾಷೆಯ ಲಯವನ್ನು ಸಮರ್ಥವಾಗಿ ಬಳಸುವುದರೊಟ್ಟಿಗೆ ಪ್ರಾದೇಶಿಕ ಅಸ್ಮಿತೆಯನ್ನು ಪ್ರತಿಷ್ಠಾಪಿಸಿ ಸೂಕ್ಷ್ಮ ಭಾವನೆಗಳಿಗೆ ಈ ಭಾಗದ ಭಾಷೆ ಹಾಗೂ ಅದರ ನುಡಿಗಟ್ಟುಗಳು ಸಮರ್ಥವಾಗಿವೆ ಎಂಬುದನ್ನು ಸಾಕ್ಷೀಕರಿಸಿದ್ದಾರೆ. ಮುಕ್ತವಾಗಿ ಒಲಿದಂತೆ ಉಲಿಯುವ ತನ್ನತನವಿರುವ ಈ ಭಾಷೆಯನ್ನು…
