Author: editor.udayarashmi@gmail.com

ವಿಜಯಪುರ: ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಆಲಗೂರ ಗೆಲುವು ಸೂರ್ಯ ಚಂದ್ರ ಉದಯಿಸುವಷ್ಟೇ ಸತ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭವಿಷ್ಯ ನುಡಿದರು.ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳ ಯಶಸ್ಸು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಶ್ರೀ ರಕ್ಷೆಯಾಗಲಿವೆ ಎಂದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ನುಡಿದಂತೆ ನಡೆದಿದೆ, ಈ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ದೊಡ್ಡ ಸಂಕಲ್ಪ ಮಾಡಿದ್ದು, ಜನತೆ ಆಶೀರ್ವಾದ ದೊರಕುವುದು ಶತಸಿದ್ದ ಎಂದರು.ವಿಜಯಪುರ ಜಿಲ್ಲೆಯನ್ನು ಮೂರು ಬಾರಿ ಸಂಸತ್ ನಲ್ಲಿ ಪ್ರತಿನಿಧಿಸಿದ ರಮೇಶ ಜಿಗಜಿಣಗಿ ಅವರ ವಿರುದ್ಧ ಆಡಳಿತ ಅಲೆ ಇದೆ, ಅವರು ಗ್ರಾಮೀಣ ಭಾಗಕ್ಕೆ ಸಂಚರಿಸಿಲ್ಲ, ಜನರ ಸಮಸ್ಯೆಗೆ ಸ್ಪಂದಿಸಿಲ್ಲ, ಹೀಗಾಗಿ ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಾತ್ರಿ ಎಂದರು. ಅಷ್ಟೇ ಅಲ್ಲ 1 ಲಕ್ಷ ಮತಗಳ ಅಂತರದಿಂದ ಪ್ರೊ.ರಾಜು ಆಲಗೂರ ಗೆಲುವು ಸಾಧಿಸುವುದು ನಿಶ್ಚಿತ ಎಂದರು.ನದಿಗಳ ಜೋಡಣೆ ದಿ.ಅಟಲ್ ಬಿಹಾರಿ ವಾಜಪೇಯಿ…

Read More

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ ವಿಜಯಪುರ: ಚುನಾವಣೆಯಲ್ಲಿ ಪ್ರಸ್ತಾಪಿಸಲು ಅಭಿವೃದ್ಧಿ ವಿಚಾರಗಳಿಲ್ಲದ ಕಾರಣ ಪ್ರಧಾನಿ ನರೇಂದ್ರ ಮೋದಿ ಗಾಬರಿಯಾಗಿದ್ದು, ಮಾತಿನಲ್ಲಿಯೇ ಮೋಡಿ ಮಾಡುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ತಿಕೋಟಾ ತಾಲೂಕಿನ ಬರಟಗಿ ಮತ್ತು ಹಂಚನಾಳ ಪಿ. ಎಚ್. ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.ದೊಡ್ಡ ಇತಿಹಾಸ ಹೊಂದಿರುವ ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ತ್ಯ ತಂದು ಕೊಟ್ಟಿದೆ. ಸ್ವಾತಂತ್ರ್ಯ ನಂತರದಲ್ಲಿ ಹಸಿರು, ಕೈಗಾರಿಕೆ, ಕ್ಷೀರ, ಶಿಕ್ಷಣ, ಔದ್ಯೋಗಿಕ ಕ್ರಾಂತಿ ಮೂಲಕ ಭಾರತೀಯರು ಬದುಕು ಕಟ್ಟಿಕೊಳ್ಳುವ ಕೆಲಸ ಮಾಡಿದೆ. ಆದರೆ, ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಬಿಜೆಪಿಯವರು ತಾವು ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ. ಸ್ವಾತಂತ್ರ್ಯ ಸಂದರ್ಭದಲ್ಲಿ ನಾವು ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವು. ಆದರೆ, ಅಂದಿನ ಪ್ರಧಾನಿ ಜವಾಹರಲಾಲ ನೆಹರು…

Read More

ಬಾಗಲಕೋಟೆ ಪ್ರಚಾರಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ಬಾಗಲಕೋಟೆ: ಕರ್ನಾಟಕ ಸರ್ಕಾರವನ್ನು ವಸೂಲಿ ಗ್ಯಾಂಗ್ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.ಸೋಮವಾರ ಬಾಗಲಕೋಟೆಯ ನವನಗರದ ತೋಟಗಾರಿಕೆ ವಿವಿ ಆವರಣದ ಬಳಿ ಬಿಜೆಪಿ ಆಯೋಜಿಸಿದ್ದ ಚುನಾವಣಾ ಪ್ರಚಾರಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಇದೊಂದು ಲೂಟಿಕೋರ ಸರ್ಕಾರ ಎಂದು ಆರೋಪಿಸಿದರು.ಕರ್ನಾಟಕ ಲೂಟಿ ಮಾಡುತ್ತಿರುವವರಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾ ನಡೆಯುತ್ತಿದೆ ಎಂದು ದೂರಿದ ಅವರು, ಅದರಲ್ಲಿಯೂ ಕಮೀಷನ್ ವ್ಯವಹಾರ ನಡೆಯುತ್ತಿದೆ. ಅಷ್ಟಾದರೂ ಅವರಿಗೆ ತೃಪ್ತಿ ಇಲ್ಲ ಎಂದರು.ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಪ್ರಸ್ತಾಪಿಸಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ ರಾಜಕಾರಣ ಮಾಡುತ್ತಿದೆ. ಯುವತಿಯ ವ್ಯಕ್ತಿತ್ವದ ಮೇಲೆ ಕಾಂಗ್ರೆಸಿಗರು ದಾಳಿ ಮಾಡಿದ್ದರು. ಹನಮಾನ್ ಚಾಲೀಸ್ ಹೇಳುವವರ ಮೇಲೆ ದಾಳಿ ಆಗುತ್ತೆ. ಅದರಲ್ಲಿಯೂ ಕಾಂಗ್ರೆಸ್ ಸರ್ಕಾರ…

Read More

ವಿಜಯಪುರ: ಅಕ್ರಮವಾಗಿ ಲಾರಿಯಲ್ಲಿ ಅಫೀಮ್ ಹಾಗೂ ಗಾಂಜಾ ಸಾಗಾಟ ವೇಳೆ ಪೊಲೀಸರು ದಾಳಿಗೈದು ಲಾರಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಶಿರಾಡೋಣ ಗ್ರಾಮದಲ್ಲಿ ನಡೆದಿದೆ.ದೆಹಲಿಯ ಮೂಲದ ಬಶೀರ್ ಅಹ್ಮದ್ ಬಂಧಿತ ಆರೋಪಿ. ಇನ್ನು ಬಂಧಿತ ಆರೋಪಿಯಿಂದ 10 ಕೆಜಿ ಗಾಂಜಾ, 30 ಕೆಜಿ ಅಫೀಮ್,ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ: ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಲಾಭರಹಿತ ಸಂಸ್ಥೆಯಾದ ಫೌಂಡೇಶನ್ ಫಾರ್ ಇನೋವೇಶನ್ ಗೆ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ವಾಣಿಜ್ಯೋದ್ಮಮ ಮಂಡಳಿ ಇನಕ್ಲೂಸಿವ್ ಟೆಕ್ನಾಲಜಿ ಬ್ಯೂಸಿನೆಸ್ ಇನಕ್ಯೂಬೇಟರ್ ಸ್ಥಾಪನೆಗೆ ರೂ. 3.92 ಕೋಟಿ ಅನುದಾನ ನೀಡಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಇನಕ್ಲೂಸಿವ್ ಟಕ್ನಾಲಜಿ ಬ್ಯೂಸಿನೆಸ್ ಇನಕ್ಯೂಬೇಟರ್ ಸ್ಥಾಪನೆಗೆ ಒಟ್ಟು ರೂ. 5 ಕೋ. ಅಗತ್ಯವಿತ್ತು. ಈಗ ಕೇಂದ್ರ ಸರಕಾರ ರೂ. 3.92 ಕೋ. ಹಣ ಬಿಡುಗಡೆ ಮಾಡಲಿದ್ದು, ಉಳಿದ ರೂ. 1.08 ಕೋ. ಹಣವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಭರಿಸಲಿದೆ. ವೈದ್ಯಕೀಯ ಕಾಲೇಜು ಕೇಂದ್ರದಿಂದ ಈ ಯೋಜನೆಯಡಿ ಅನುದಾನ ಪಡೆಯುತ್ತಿರುವುದು ಅತೀ ವಿರಳವಾಗಿದ್ದು, ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿಗೆ ಇದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ತಿಳಿಸಿದ್ದಾರೆ.ಈ ಕೇಂದ್ರ ಸ್ಥಾಪನೆಯಿಂದ ಸ್ಟಾರ್ಟಅಪ್ ಪ್ರಾರಂಭಿಸುವ ಕನಸು ಕಾಣುವ ಉದಯೋನ್ಮುಖ ಯುವ…

Read More

ವಿಜಯಪುರ: ಇಂಡಿ ಕ್ಷೇತ್ರದ ಅಥರ್ಗಾದಲ್ಲಿ ಭಾನುವಾರ ರಾತ್ರಿ ನಡೆದ ಪ್ರಚಾರ ಸಭೆ ಕಾಂಗ್ರೆಸ್‌ಗೆ ಮತ್ತಷ್ಟು ಆತ್ಮವಿಶ್ವಾಸ ತುಂಬಿತು. ಜತೆಗೆ ಬಿಜೆಪಿ ಅಭ್ಯರ್ಥಿಯ ಈ ಊರಲ್ಲೇ ಸರಾಗವಾಗಿ ಸಾಗಿರುವ ಕಾಂಗ್ರೆಸ್‌ನ ಪ್ರಚಾರ ರಥದ ವೇಗ ಇನ್ನೂ ಹೆಚ್ಚಿತು.ಸಭೆಯಲ್ಲಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ, ನೀವು ನಿಮ್ಮೂರವರಿಗೆ ಬಹಳ ಅವಕಾಶ, ಅಧಿಕಾರ ನೀಡಿದ್ದೀರಿ. ಆದರೆ ನಿಮಗೆ ಅವರು ವಾಪಸು ಏನು ಕೊಟ್ಟರು? ಸುಮಾರು ಐವತ್ತು ವರ್ಷಗಳಿಂದ ಅಧಿಕಾರ ಅನುಭವಿಸಿದರೂ ನಿಮ್ಮ ಏಳ್ಗೆಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಜಿಗಜಿಣಗಿ ಅವರು ಶ್ರಮಿಸಲಿಲ್ಲ. ನಾವು ತಾಲೂಕಿನ ಕೆರೆಗಳನ್ನು ತುಂಬಿಸಿದ್ದೇವೆ, ನಿಂಬೆ ಅಭಿವೃದ್ಧಿ ನಿಗಮ ಮಾಡಿದ್ದೇವೆ. ರಸ್ತೆ, ಇಂಡಿ ಪಟ್ಟಣಕ್ಕೆ ನಿರಂತರ ನೀರು ಕೊಟ್ಟಿದ್ದೇವೆ. ಮುಂದೂ ಅನೇಕ ಕೆಲಸಗಳು, ಶಾಶ್ವತ ನೀರಾವರಿ ಯೋಜನೆ ಆಗಲಿದೆ ಎಂದು ಹೇಳಿದರು.ಪ್ರಾಧ್ಯಾಪಕರಾಗಿ ನಿಮ್ಮೂರಲ್ಲೇ ಸೇವೆ ಮಾಡಿರುವ ಆಲಗೂರರು ವಿದ್ಯಾವಂತ, ಪ್ರಬುದ್ಧರಾಗಿದ್ದಾರೆ. ಅವರಿಗೆ ಅವಕಾಶ ಸಿಕ್ಕರೆ ಸಂಸತ್‌ನಲ್ಲಿ ನಿಮ್ಮ ದನಿಯಾಗಲಿದ್ದಾರೆ. ಅವರೊಬ್ಬ ಉತ್ತಮ ಸಂಸದೀಯ ಪಟುವಾಗಲಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲೂ ನಮ್ಮದೇ ಸರಕಾರವಿದ್ದರೆ ಸಮಗ್ರ ಬದಲಾವಣೆ…

Read More

ವಿಜಯಪುರ: ಜಿಲ್ಲೆಯ ಇಂಡಿ, ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಭಾನುವಾರ ಸಂಜೆ ಸಿದ್ದಲಿಂಗೇಶ್ವರ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಶಂಕರಲಿಂಗೇಶ್ವರ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ಲಚ್ಯಾಣ ಗ್ರಾಮದ ಸಾಬು ಊರ್ಫ ಸೋಬರಾವ ಮಹಾದೇವ ಶಿಂಧೆ (50), ಅಭಿಷೇಕ ಧನರಾಜ ಮುಜಗೊಂಡ (15) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗೇಂದ್ ಶಿವಾಜಿ ಕಟಕದೊಂಡ ( 50 ) ಅವರನ್ನು ವಿಜಯಪುರದ ಬಿಎಲ್‌ಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಿಗ್ಗೆ ಅಸುನೀಗಿದ್ದಾರೆ.ತೇರು ಎಳೆಯುವಾಗ ಹಗ್ಗ ಹರಿದಿದ್ದು ತೇರಿನ ರಭಸಕ್ಕೆ ಮೂವರು ತೇರಿನ ಗಾಲಿಯ ಕೆಳಗೆ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲೋಕಸಭಾ ಚುನಾವಣೆ-೨೦೨೪ | ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಚಾಲನೆ ವಿಜಯಪುರ: ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಭವಿಷ್ಯದ ಆಲೋಚನೆಯೊಂದಿಗೆ ಪ್ರತಿಯೊಬ್ಬರು ಮೇ.೭ ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ದರಬಾರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಮತದಾನದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ನೀಡಿದ ಅಧಿಕಾರವನ್ನು ಕಳೆದುಕೊಳ್ಳಬಾರದು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. ೧೮ ವರ್ಷ ತುಂಬಿದ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಹೇಳಿದರು.ನಮ್ಮ ದೇಶವನ್ನು…

Read More

ಢವಳಗಿ: ಕರ್ನಾಟಕ ವೆಟರ್ನರಿ ಕೌನ್ಸಿಲ್ ಬೆಂಗಳೂರು ಮತ್ತು ಕರ್ನಾಟಕ ಕೋಳಿ ಸಾಕಾಣಿಕೆದಾರರು ಮತ್ತು ತಳಿಗಾರರ ಸಂಘ ಬೆಂಗಳೂರು ಅವರು ವಿಶ್ವ ಪಶು ವೈಧ್ಯಕಿಯ ದಿನಾಚರಣೆಯ ಸಂದರ್ಭದಲ್ಲಿ ಪಶು ವೈಧ್ಯಕೀಯ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗಮನಿಸಿ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಪಶು ಇಲಾಖೆಯ ವೈಧ್ಯಾಧಿಕಾರಿ ಸಂಗನಗೌಡ ಎನ್ ಬಿರಾದಾರ ಅವರಿಗೆ ಕರ್ನಾಟಕ ವೈಧ್ಯಕೀಯ ಪರಿಷತ್ತು ಹೆಬ್ಬಾಳ, ಬೆಂಗಳೂರಿನಲ್ಲಿ ಎಪ್ರೀಲ್ ೨೭ ರಂದು ೨೦೨೪ನೇ ಸಾಲಿನ ಅತ್ಯುತ್ತಮ ಪಶುವೈದ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Read More

ಢವಳಗಿ: ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಎಪ್ರಿಲ್ 27ರಂದು ನಡೆದ ರಾಜ್ಯ ಮಟ್ಟದ ತರಬಂಡಿ ಸ್ಪರ್ಧೆಯಲ್ಲಿ(ಉತ್ತರ ಕರ್ನಾಟಕದ ಪ್ರಸಿದ್ಧ ಸ್ಪರ್ಧೆ ) ರೂಢಗಿ ಗ್ರಾಮದ ಶ್ರೀಶೈಲ ದೊಡಮನಿ ಮತ್ತು ಬ್ಯಾಲ್ಯಾಳ ಗ್ರಾಮದ ಅವ್ವನಗೌಡ ಗ್ವಾತಗಿ ಅವರ ಎತ್ತುಗಳು ಕಮೀಟಿಯ ನಿಗದಿತ ಸಮಯದಲ್ಲಿ 1335.1 ಅಡಿ ದೂರ ಕ್ರಮಿಸಿ ವಿಜಯಮಾಲೆ ಧರಿಸಿಕೊಂಡು ಸ್ಪ್ಲೇಂಡರ್ ಪ್ಲಸ್ ಬೈಕ್ ತಮ್ಮದಾಗಿಸಿಕೊಂಡವು.ಶ್ರೀ ಪವಾಡ ಬಸವೇಶ್ವರರ ಜಾತ್ರಾ ಕಮೀಟಿಯ ಅಧ್ಯಕ್ಷ ಕೆ ವಾಯ್ ಬಿರಾದಾರ, ಶ್ರೀಶೈಲ ಮೇಟಿ, ಅಪ್ಪುದನಿ ನಾಡಗೌಡ, ವಿರೇಶ ಮಂಕಣಿ, ನಾಗರಾಜ ತಂಗಡಗಿ, ಬಸವರಾಜ ಮಂಕಣಿ, ನಾಗರಾಜ ಕಮತರ, ರಾಜು ಮೇಟಿ , ಸದಾಶಿವ ಸುಳಿಭಾವಿ, ಬಸವರಾಜ ಸಜ್ಜನ, ಆನಂದ ಬೀಳಗಿ ಮತ್ತು ಜಾತ್ರಾ ವ್ಯವಸ್ಥಾಪಕ ಮಂಡಳಿಯ ಸದಸ್ಯರು ಸೇರಿಕೊಂಡು ಪ್ರಥಮ ಸ್ಥಾನದಿಂದ 10ನೆ ಸ್ಥಾನದವರಗೆ ಬಹುಮಾನವನ್ನು ವಿತರಿಸಿದರು ಸ್ಪರ್ಧೆಯಲ್ಲಿ ಒಟ್ಟು 26 ಜೋಡಿ ಎತ್ತುಗಳು ಭಾಗವಹಿಸಿದ್ದವು.ಸುತ್ತಮುತ್ತಲಿನ ಗ್ರಾಮದ ಅಭಿಮಾನಿಗಳು ಮತ್ತು ಬೆಂಬಲಿಗರು ಪಟಾಕಿ ಸಿಡಿಸಿ ಗುಲಾಲು…

Read More