Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆಂದು ರಾಜ್ಯ ಬಿಜೆಪಿ ಹೇಳಿದೆ.ಬರ ಪರಿಹಾರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಅಲ್ಲದೆ, ಪ್ರಧಾನಿ ಮೋದಿಯವರನ್ನು ಕೊಂಡಾಡಿದೆ.ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ. ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದೆ.ಇದೇ ವೇಳೆ ಸುರ್ಜೇವಾಲಾ ವಿರುದ್ಧವೂ ವಾಗ್ದಾಳಿ…
ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೆ ಭಾನುವಾರ ಬೆಳಗ್ಗೆ ಪ್ರತಿಭಟನೆಗೆ ನಡೆಸಲು ನಿರ್ಧರಿಸಿದೆ.ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೆ ಅತ್ಯಂತ ಕಡಿಮೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರದ ನಡೆ ವಿರೋಧಿಸಿ ಭಾನುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕೇಂದ್ರದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಬಹಳ ಕಡಿಮೆ ಬರ ಪರಿಹಾರ ಕೊಟ್ಟಿದ್ದಾರೆಂದು ಮಹಾತ್ಮ ಗಾಂಧಿ ಪ್ರತಿಮೆ ಎದುರು ನಮ್ಮ ಪಕ್ಷದ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾನೂ ಭಾಗವಹಿಸುತ್ತೇನೆ ಎಂದರು.223 ತಾಲೂಕುಗಳಲ್ಲಿ ಬರವಿದೆ. 120 ವರ್ಷಗಳ ಇತಿಹಾಸದಲ್ಲಿ ಹೀಗಾಗಿರಲಿಲ್ಲ. ಬೆಂಗಳೂರಿಗೆ ನೀರಿನ ಬವಣೆ ಹೆಚ್ಚಾಗಿತ್ತು.…
ಝಳಕಿ: ಭವ್ಯ ಭಾರತ ನಿರ್ಮಾಣ ಮಾಡಲು ಯುವಕರು ರಾಷ್ಟ್ರೀಯತೆ ಬೇಳೆಸಿಕೊಳ್ಳಬೇಕು ಅದರ ಜೊತೆಗೆ ಸನಾತನ ಧರ್ಮ ಸಂಸ್ಕೃತಿ ಉಳಿವಿಗಾಗಿ ಮಠ ಮಾನ್ಯಗಳಿಗೆ ಗೌರವ ಕೊಡಬೇಕು ಎಂದು ಯುವ ಮುಖಂಡ ರಾಘವೇಂದ್ರ ಕಾಪಸೆ ಹೇಳಿದರು.ಸಮೀಪದ ಗುಂದವಾನ ಗ್ರಾಮದಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಿದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟಡ ಉದ್ಘಾಟನೆ, ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಮತ್ತು ಧರ್ಮ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಧರ್ಮದ ಮಾರ್ಗದಲ್ಲಿ ಸಾಗುವವರ ದಾರಿ ಸುಗಮವಾಗಿರುತ್ತದೆ. ಕಷ್ಟದಲ್ಲಿ ಎಲ್ಲರೂ ಕೈ ಬಿಟ್ಟರೂ ಧರ್ಮ ಎಂದಿಗೂ ಕೈ ಬಿಡುವುದಿಲ್ಲ. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಆರೋಗ್ಯವೇ ನಿಜವಾದ ಭಾಗ್ಯವಾಗಿದೆ. ಸರಾಯಿ, ಗುಟಕಾ, ಬೀಡಿ ಇವೆಲ್ಲವುಗಳನ್ನು ಗ್ರಾಮದ ಹಿರಿಯರು ಹೊರಹಾಕಿಸಿ ಆರೋಗ್ಯದ ಅರಿವು ಮೂಡಿಸಬೇಕು ಎಂದರು.ದಿವ್ಯ ಸಾನಿಧ್ಯ ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಭಗವತ್ಪಾಂಗಳ, ಅಭಿನವ ಮುರಘೇಂದ್ರ ಶಿವಾಚಾರ್ಯರು, ಗುರು ಗುರುಪಾದೇಶ್ವರ ಶಿವಾಚಾರ್ಯರು, ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಚಂದ್ರಶೇಖರ ಶಿವಾಚಾರ್ಯರು, ಮಲ್ಲಿಕಾರ್ಜುನ ಶಿವಾಚಾರ್ಯರು, ಡಾ.ಸಿದ್ಧಲಿಂಗ ಶಿವಾಚಾರ್ಯರು, ಮಡಿವಾಳಯ್ಯ ಶಾಸ್ತ್ರಿಗಳು, ಮಹಾಂತೇಶ ಹಿರೇಮಠ ಸ್ವಾಮೀಜಿ…
ತಾಳಿಕೋಟಿ: ಪಟ್ಟಣದ ಶ್ರೀ ಎಚ್.ಎಸ್. ಪಾಟೀಲ ಸ್ವತಂತ್ರ ಪದವಿ ಪೂರ್ವ ಮಹಾ ವಿದ್ಯಾಲಯ ಹಾಗೂ ಪ್ರಗ್ಯಾ ಐಐಟಿ ಮೆಡಿಕಲ್ ಅಕಾಡೆಮಿ ದಾವಣಗೆರೆ ಇವರ ಸಹಯೋಗದಲ್ಲಿ ಪಿಯುಸಿಯಲ್ಲಿ ಸೈನ್ಸ್ ಮಾಡಬೇಕೆನ್ನುವ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಸರ್ಚ್ ಎಕ್ಷಾಮ 2024 ಹಮ್ಮಿಕೊಳ್ಳಲಾಗಿದೆ. ಮುಂಜಾನೆ 10:30 ರಿಂದ 11:30 ರವರೆಗೆ ಶ್ರೀ ಎಚ್ಎಸ್ ಪಾಟೀಲ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಈ ಪರೀಕ್ಷೆಯಲ್ಲಿ ಒಟ್ಟು 60 ಅಂಕಗಳಿದ್ದು ವಿಜ್ಞಾನ ಗಣಿತ ಹಾಗೂ ಇಂಗ್ಲೀಷ್ ವಿಷಯಗಳು ಇರುವವು. ಈ ಪರೀಕ್ಷೆಯಲ್ಲಿ ಶೇ. 55 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಶೇ.100 ರಷ್ಟು ವಿನಾಯತಿ ನೀಡಲಾಗುವುದು.ಶೇ.50 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜ ಶುಲ್ಕದಲ್ಲಿ ಶೇ. 50 ವಿನಾಯಿತಿ ಇರುವುದು.ಶೇ.40 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 20 ರಷ್ಟು ವಿನಾಯತಿ ನೀಡಲಾಗುವುದು. ಕೇವಲ 100 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುವುದು. ಆಸಕ್ತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರೊಂದಿಗೆ ಪರೀಕ್ಷೆಯಲ್ಲಿ…
ಇಂಡಿ: ಮೋದಿಯವರ ದೂರದೃಷ್ಟಿತ್ವ ದೇಶದ ಚಿತ್ರಣವನ್ನೇ ಬದಲಾಯಿಸಲಿದೆ. ಅವರು ೧೦ ವರ್ಷಗಳಿಂದ ದೇಶದ ಅಭಿವೃದ್ದಿಗಾಗಿ ನಿರಂತರ ಶ್ರಮಿಸಿದ್ದಾರೆ. ಹಾಗಾಗಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಬೇಕೆಂದು ವಿಜಯಪುರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.ಅವರು ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣೆ ಪ್ರಚಾರದಲ್ಲಿ ಮಾತನಾಡಿದರು.ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ವಿಜಯಪುರ ಜಿಲ್ಲೆಗೆ ಒಂದು ಲಕ್ಷ ಕೋಟಿ ರೂ ಅನುದಾನ ತಂದು ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ, ಕುಡಿಯುವ ನೀರಿನ ಪ್ರತಿ ಹಳ್ಳಿಗಳಿಗೆ ಜಲಜೀವನ ಮಿಷನ್,ಕೂಡ್ಲಗಿಯಲ್ಲಿ ಎನ್.ಟಿ.ಪಿ.ಸಿ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಿದ್ದೇನೆ ಎಂದರು.ವಿಪ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ಲೋಕಸಭಾ ಚುನಾವಣೆ ದೇಶದ ಭದ್ರತೆ, ದೇಶದ ಭವಿಷ್ಯ ನಿರ್ಧರಿಸಲಿದೆ. ಮೋದಿಯವರು ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತದ ಮೂಲಕ ಒಂದೇ ಒಂದು ಕಪ್ಪು ಚಿಕ್ಕೆ ಇಲ್ಲದಂತೆ ಆಡಳಿತ ಮಾಡಿದ್ದಾರೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ಕೂಚಬಾಳ ಮಾತನಾಡಿ, ಹಿಂದಿನ ಯುಪಿಎ ಹಗರಣದಲ್ಲಿ ೨ ಜಿ ಹಗರಣ…
ಇಂಡಿ: ಮಹಿಳಾ ಸಂಘದವರ ವೇಷದಲ್ಲಿ ಇಬ್ಬರು ನಕಲಿ ಮ್ಯಾನೇಜರ್, ಮಹಿಳೆಯರಿಗೆ ಹಣದ ಆಮಿಷ ತೋರಿಸಿ ಲಕ್ಷಗಟ್ಲೆ ಹಣದ ಜೊತೆ ವಂಚಕರು ಫರಾರಿಯಾಗಿದ್ದಾರೆ ಎಂಬ ವದಂತಿ ತಾಲೂಕಿನಾದ್ಯಂತ ಹಬ್ಬಿದೆ.ತಾಲೂಕಿನಲ್ಲಿ ಜನ ಅಭಿವೃದ್ಧಿ ಮಹಿಳಾ ಸ್ವ ಸಹಾಯ ಸಂಘ ಎಂಬ ಹೆಸರಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಸಿಂದಗಿ ರಸ್ತೆಯ ಅಶೋಕ್ಗೌಡ ಕಾಂಪ್ಲೆಕ್ಸನಲ್ಲಿ ಈ ನಕಲಿ ಸಂಘದ ಕಚೇರಿಯನ್ನು ಸ್ಥಾಪಿಸಲಾಗಿತ್ತು ಎಂಬ ಮಾಹಿತಿ ಇದೆ.ಇಂಡಿ ತಾಲೂಕಿನ ಪ್ರತಿ ಹಳ್ಳಿಗಳಿಗೆ ಹೋಗಿ ಹೆಣ್ಣು ಮಕ್ಕಳ ಹತ್ತು ಜನರ ಒಂದು ಗುಂಪು ಮಾಡಿದರೆ ನಿಮಗೆ ಪ್ರತಿಯೊಬ್ಬರಿಗೂ ೧೫೦೦೦೦ ಲಕ್ಷ ರೂ ಹಣ ನಿಮ್ಮ ಖಾತೆಗೆ ೩ ದಿನಗಳಲ್ಲಿ ಜಮಾ ಮಾಡುತ್ತೇವೆ. ೧೫೦೦೦೦ ರ ದಲ್ಲಿ ೧೫೦೦೦ ಸಾವಿರ ಸಬ್ಸಿಡಿ ಲೆಕ್ಕದಲ್ಲಿ ಇರುತ್ತೆ ಮುಂಗಡವಾಗಿ ಎಲ್ಲರೂ ತಲಾ ೫೨೦೦ ರಂತೆ ಮೊದಲಿಗೆ ಕೊಡಬೇಕು ಅಂತ ಹೇಳಿ ತಲಾ ೫೨೦೦ ರಂತೆ ವಂಚಿಸಿ ಜನರಿಗೆ ಮೋಸ ಮಾಡಿ ಪರಾರಿ ಆಗಿದ್ದಾರೆನಿಮ್ಮ ಸಾಲದ ಪ್ರಕ್ರಿಯೆ ಮುಗಿಯಲು ೮ ದಿನ ಬೇಕಾಗುತ್ತದೆ…
ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೨ ರ ದರ್ಗಾ ರಸ್ತೆಯಲ್ಲಿರುವ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿ. ನಿದೇರ್ಶಕರಾದ ರಾಮನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ವಿಜಯಪುರ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಮತಯಾಚಿಸಿದರು.ಈ ವೇಳೆ ಮಾತನಾಡಿದ ಅವರು, ಭಾರತ ದೇಶವನ್ನು ವಿಶ್ವಗುರು ಆಗಿ ಮಾಡುವ ಶಕ್ತಿ ಪ್ರಧಾಮಮಂತ್ರಿಗಳಾದ ಮೋದಿಯವರಿಂದ ಮಾತ್ರ ಸಾಧ್ಯ. ಹೀಗಾಗಿ ಇಡೀ ದೇಶ ಅವರನ್ನು ಬೆಂಬಲಿಸುತ್ತಿದೆ. ಅವರು ಮತ್ತೆ ಪ್ರಧಾನಿಯಾದರೆ ದೇಶ ಸುರಕ್ಷಿತವಾಗಿರುವುದಲ್ಲದೆ, ಅಭಿವೃದ್ಧಿ ಪಥದತ್ತ ದೇಶ ಸಾಗಲಿದೆ. ಹೀಗಾಗಿ ನಾವು ನಮ್ಮ ಜಿಲ್ಲೆಯಿಂದ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ಕಳಿಸೋಣ ಎಂದರು.ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಾ ಅಕ್ಕ, ರಾಜ ಯೋಗಿ ಬ್ರಹ್ಮಕುಮಾರ ಗಂಗಾಧರ ಅಣ್ಣ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹಾಗೂ…
ಬಸವನಬಾಗೇವಾಡಿ: ಈ ಸಲ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಎನ್.ಡಿ.ಎ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ 1 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ. ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ, ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ರೈಲು ಮೇಲುಸೇತುವೆ, ಎನ್.ಟಿ.ಪಿ.ಸಿ ಹತ್ತು ಹಲುವಾರು ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಹೆಚ್ಚಿನ ಬಲ ಬಂದಿದೆ. ಜಿಲ್ಲೆಯಲ್ಲಿ ಎಲ್ಲ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಗ್ಗಟ್ಟಾಗಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಈ ಸಲ ನರೇಂದ್ರ ಮೋದಿ ಪ್ರದಾನ ಮಂತ್ರಿ ಆಗುವದು ಕೂಡ ನಿಶ್ಚಿತ. ದೇಶದಲ್ಲಿ ಎನ್.ಡಿ.ಎ ಮೈತ್ರಿಕೂಟ 400 ಕ್ಕಿಂತ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ನಿಕಟ ಪೂರ್ವ ಮಂಡಲ ಅಧ್ಯಕ್ಷ ಬಿ. ಕೆ. ಕಲ್ಲೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠವು ೨೦೨೪ ನೇ ಸಾಲಿನಿಂದ ಗುರು ಮಹಾಂತೇಶ್ವರ ಶ್ರೀ ಪ್ರಶಸ್ತಿ ನೀಡಲು ಆರಂಭಿಸಿದ್ದು. ಈ ಸಾಲಿನ ಪ್ರಶಸ್ತಿಯನ್ನು ಸಮಾಜ ಸೇವಕ, ಪ್ರಥಮ ದರ್ಜೆ ಗುತ್ತಿಗೆದಾರ ಎಸ್.ಎಸ್.ಆಲೂರು ಅವರಿಗೆ ಶ್ರೀಮಠವು ನೀಡಲು ನಿರ್ಧರಿಸಿದೆ. ಮೇ.೮ ರಂದು ಬೆಳಗ್ಗೆ ೧೧ ಗಂಟೆಗೆ ಶ್ರೀಮಠದಲ್ಲಿ ಆಯೋಜನೆಗೊಂಡಿರುವ ಶ್ರೀಗುರುಮಹಾಂತೇಶ್ವರ ೭೫ ನೇ ಯಾತ್ರಾಮಹೋತ್ಸವ, ಶ್ರೀಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೩ ನೇ ಸಂಸ್ಮರಣೋತ್ಸವ ಸಮಾರಂಭದಲ್ಲಿ ಶ್ರೀಮಠದ ಪಟ್ಟಾಧ್ಯಕ್ಷ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಾಡಿನ ವಿವಿಧ ಮಠಾಧೀಶರರ ಸಾನಿಧ್ಯದಲ್ಲಿ, ವಿವಿಧ ಸಚಿವರ, ವಿವಿಧ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ೧೧ ಸಾವಿರ ನಗದು, ಕಂಚಿನ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಒಳಗೊಂಡಿದೆ. ಇದೇ ಸಂದರ್ಭದಲ್ಲಿ ೧೦ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ೨೬ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರೂ.೨ ಸಾವಿರ ಮೌಲ್ಯದ ಬ್ಯಾಗ್, ನೋಟ್ಪುಸ್ತಕ ವಿವಿಧ ಪಠ್ಯಪರಿಕರಗಳನ್ನು ವಿದ್ಯಾರ್ಥಿ ವೇತನರೂಪದಲ್ಲಿ ಶ್ರೀಗಳು ನೀಡಲಿದ್ದಾರೆ ಎಂದು…
ಬಸವನಬಾಗೇವಾಡಿ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡಜನತೆ ಆರೋಗ್ಯ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಜಯಪುರ ಸಂಗಮೇಶ್ವರ ಆಸ್ಪತ್ರೆಯ ಡಾ.ಎಸ್.ಎಸ್.ಪಾಟೀಲ ಹೇಳಿದರು.ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ನಂದಿ ಮಠದ ಗುರುವೀರಸಿದ್ಧ ಶಿವಯೋಗಿಗಳ ೭೪ ನೇ ಜಾತ್ರಾಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಯವರ ದ್ವಿತೀಯ ಪುಣ್ಯಾರಾಧನೆಯಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ನಮ್ಮಲ್ಲಿ ವಾಂತಿ, ಬೇಧಿ, ಟೈಪಾಯಿಡ್, ಕ್ಷಯ, ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು. ಈಚೆಗ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ, ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ.ಇವು ಶ್ರೀಮಂತ ಕಾಯಿಲೆಗಳಾಗಿದ್ದು. ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು…
