Author: editor.udayarashmi@gmail.com

ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ | ತುಘಲಕ್ ದರ್ಬಾರ | ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ಮುದ್ದೇಬಿಹಾಳ: ಹಣ-ಹೆಂಡದ, ಅಧಿಕಾರದ ತೋಳ್ಬಲದಿಂದ ಜಾತಿಯ ವಿಷಬೀಜವನ್ನು ಬಿತ್ತಿ ಚುನಾವಣೆಯನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷದವರಿದ್ದರು. ಆದರೆ ಕಾಲ ಬದಲಾಗಿದೆ. ಜನತೆ ಜಾಗ್ರತರಾಗಿದ್ದಾರೆ. ಯಾವುದು ಸರಿ ಯಾವುದು ತಪ್ಪು ಎಂದು ತಿಳಿದುಕೊಳ್ಳುವ ಶಕ್ತಿ ಅವರಲ್ಲಿದೆ. ಹಾಗಾಗಿ ಮತ್ತೊಮ್ಮೆ ಮೋದಿಜೀ ಅವರನ್ನು ಬೆಂಬಲಿಸಲು ರಾಜ್ಯದ ೨೮ ಕ್ಷೇತ್ರಗಳಲ್ಲಿ ಭಾಜಪಾ ಅಭ್ಯರ್ಥಿಗಳಿಗೆ ಮತ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದರು.ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಪಾಪರ ಆಗಿದೆ. ಸಂಪೂರ್ಣ ತುಘಲಕ್ ದರ್ಬಾರ ನಡೆಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ನಂತರ ಕಣ್ಣಿಗೆ ಕಾಣುವ ಯಾವ ಕಾಮಗಾರಿಗೂ ಚಾಲನೆ ಕೊಟ್ಟಿಲ್ಲ. ಜನ ಕೊಟ್ಟ ತೆರಿಗೆ ಹಣ ಎಲ್ಲಿ ಹೋಗಿದೆ? ರಾಜ್ಯದಲ್ಲಿ ದರೋಡೆ ನಡೀತಾ ಇದೆ. ನಮ್ಮ ಅವಧಿಯ ಪ್ರಮುಖ ಯೋಜನೆಗಳನ್ನು ನಿಲ್ಲಿಸಲಾಗಿದೆ. ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆ…

Read More

ವಿಜಯಪುರ: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ ಗುರುವಾರ ಅನಿರೀಕ್ಷಿತವಾಗಿ ಬಾಲಕಾರ್ಮಿಕ ದಾಳಿ ಕೈಗೊಂಡು ಮೂವರು ಬಾಲಕರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು.ದಾಳಿಯಲ್ಲಿ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನುರ್, ೨ ನೆ ವೃತ್ತದ ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ, ಶಿಕ್ಷಣ ಇಲಾಖೆಯ ಸಿ ಆರ್ ಪಿ ಜೆ.ಎಂ. ಕರಜಗಿ, ಹೆಚ್ಚುವರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ, ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಕುಮಾರಿ ನೀಲಮ್ಮ ಎಚ್ ಖೆಡಗಿ, ಮಕ್ಕಳ ಸಹಾಯವಾಣಿಯ ಮಂದಾಕಿನಿ ನಾಗಠಾಣ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Read More

ವಿಜಯಪುರ: ವಿಜಯಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ ರಸ್ತೆ ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಈ ಬಗ್ಗೆ ಸಂಚಾರ ಪೊಲೀಸ್ ಠಾಣೆ ಗುನ್ನೆ ನಂಬರ ೯೦/೨೦೨೪ ಕಲಂ ೨೭೯.೩೦೪(ಎ) ಐಪಿಸಿ ಪ್ರಕಾರ ಪ್ರಕರಣ ದಾಖಲಾಗಿದೆ.ಅಪಘಾತದಲ್ಲಿ ಮೃತನಾದ ವ್ಯಕ್ತಿಯ ಹೆಸರು ವಿಳಾಸ ತಿಳಿದು ಬಂದಿಲ್ಲ, ಅಂದಾಜು ೩೭ ವರ್ಷದವನಾಗಿದ್ದು, ೫.೬ ಪೂಟ ಎತ್ತರವಾಗಿದ್ದು, ಉದ್ದನೆಯ ಮುಖ ಸಾದಗಪ್ಪು ಬಣ್ಣ, ಬಿಳಿ ಕಪ್ಪು ಬಣ್ಣದ ಪೂಲ್ ತೋಳಿನ ಚೆಕ್ ಶರ್ಟ ಬಿಳಿ ಬಣ್ಣದ ಹಾಪ್ ಶರ್ಟ. ಕಪ್ಪು ಬಣ್ಣದ ಜೀನ್ಸ ಪ್ಯಾಂಟ ಹಾಕಿದ್ದು ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ಈ ರೀತಿ ಚಹರೆ ಪಟ್ಟಿಯುಳ್ಳ ವ್ಯಕ್ತಿಯ ಬಗ್ಗೆ ಯಾವುದಾದರು ಮಾಹಿತಿ ಕಂಡು ಬಂದಲ್ಲಿ ಕೂಡಲೇ ಸಂಚಾರಿ ಪಿ.ಎಸ್ ಪೋನ ನಂ: ೦೮೩೫೨-೨೫೨೬೦೦ ಅಥವಾ ೯೪೮೦೮೦೪೨೪೬ಪೊಲೀಸ ಕಂಟ್ರೋಲ ರೂಂ ನಂ: ೦೮೩೫೨-೨೫೦೮೪೪-೨೫೦೭೫೧ ಸಂಪರ್ಕಿಸಲು ವಿಜಯಪುರ ಸಂಚಾರ ಪೊಲೀಸ್ ಠಾಣೆಯ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.೨೮ ರಂದು ಬೆಳಗ್ಗೆ ೮ ಗಂಟೆಗೆ ದರಬಾರ ಹೈಸ್ಕೂಲ್ ಆವರಣದ ಮತಗಟ್ಟೆಯಲ್ಲಿ ಚುನಾವಣಾ ಧ್ವಜಾರೋಹಣ ಹಾಗೂ ನಮ್ಮ ನಡೆ ಮತಗಟ್ಟೆ ಕಡೆ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಗ್ಗೆ ೮ ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಧ್ವಜಾರೋಹಣ ನೇರವೇರಿಸಿ ಮತದಾನ ಜಾಗೃತಿ ಕುರಿತು ಸಂದೇಶ ನೀಡಿ, ಸಹಿ ಅಭಿಯಾನ ನಡೆಸುವರು.ಕಾರ್ಯಕ್ರಮದಲ್ಲಿ ಚುನಾವಣಾ ವೀಕ್ಷಕರಾದ ಡಾ. ರತನ್‌ಕನ್ವರ್ ಎಚ್. ಗಡವಿಚರಣ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಉಪಸ್ಥಿತರಿರಲಿದ್ದಾರೆ.ಅಂದು ಬೆಳಗ್ಗೆ ೭.೧೫ರಿಂದ ಕಂದಗಲ್ ಹನುಮಂತರಾಯ ರಂಗಮಂದಿರ ಆವರಣದಿಂದ ದರಬಾರ ಹೈಸ್ಕೂಲ್ ಒಳ ಆವರಣದ ವರೆಗೆ ವಿವಿಧ…

Read More

೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಮತದಾನ ಜಾಗೃತಿ ವಿಜಯಪುರ: ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗವು ಮನೆಯಲ್ಲಿಯೇ ಕುಳಿತು ಮತದಾನ ಮಾಡಲು ಮಹತ್ತರ ಅವಕಾಶವನ್ನು ಕಲ್ಪಿಸಿದೆ. ಆದ್ದರಿಂದ ತಾವುಗಳು ಯಾವುದೇ ತೊಂದರೆಗೊಳಗಾಗದೇ ಮನೆಯಲ್ಲಿಯೇ ಇದ್ದು ಮತದಾನ ಮಾಡಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ. ಆರ್. ಮುಂಡರಗಿ ಹೇಳಿದರು.ಅವರು ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ವತಿಯಿಂದ ಶುಕ್ರವಾರ ವಿಜಯಪುರ ನಗರದ ಗ್ಯಾಂಗ್ ಬಾವಡಿ ಹಾಗೂ ಎಪಿಎಂಸಿ ಹತ್ತಿರ ಅಕ್ಕಮಹಾದೇವಿ ರೋಡ್ ವ್ಯಾಪ್ತಿಗಳಲ್ಲಿ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡುವಂತೆ ಮನವಿ ಮಾಡಿ, ಮನೆಗಳ ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಮತದಾನ ಕುರಿತು ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಮನೆಯ ಬಾಗಿಲಿಗೆ ಅಧಿಕಾರಿಗಳ ತಂಡವು ಮತದಾನ ಪ್ರಕ್ರಿಯೆ ನಡೆಸಲು ಬರಲಿದ್ದಾರೆ. ಈ ಮತದಾನ ಪ್ರಕ್ರಿಯೆಯು ಏ.೨೭ರಿಂದ ಏ.೨೯ರವರೆಗೆ…

Read More

ವಿಜಯಪುರ: ಜಿಲ್ಲೆಯಲ್ಲಿ ಒಟ್ಟು ೫ ಕೇಂದ್ರಗಳಲ್ಲಿ ಏಪ್ರೀಲ್ ೨೯ ರಿಂದ ಮೇ ೧೬ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೨ ನಡೆಯಲಿವೆ. ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯೋನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಭಗಣದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ-೨ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ದಿನದಂದು ಜಿಲ್ಲಾ ಖಾಜಾನೆ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಗಳನ್ನು ಪಡೆದು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ೫ ರೂಟ್‌ಗಳನ್ನು ಮಾಡಲಾಗಿದೆ. ಇದಕ್ಕಾಗಿ ತಹಶೀಲ್ದಾರರು, ಉಪತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಜಯಪುರ ಸರಕಾರಿ/ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು/ಹಿರಿಯ ಉಪನ್ಯಾಸಕರನ್ನು ತ್ರಿಸದಸ್ಯ ಸಮಿತಿಯ ಸದಸ್ಯರನ್ನಾಗಿ ಜಿಲ್ಲಾಧಿಕಾರಿ ಯವರು ನೇಮಕ ಮಾಡಿದ್ದಾರೆ ಎಂದು ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ನಿಗಧಿಪಡಿಸಿದ ಕೋಠಡಿಯಲ್ಲಿಯೇ ಗೌಪ್ಯ ಬಂಡಲ್‌ಗಳನ್ನು ಮುಖ್ಯ ಅಧೀಕ್ಷಕರು ಹಾಗೂ ಸಹ ಮುಖ್ಯ ಅಧೀಕ್ಷಕರಿಗೆ ಸಿಸಿ ಟಿವಿ ಕಣ್ಗಾವಲಿನಲ್ಲಿಯೇ ಹಸ್ತಾಂತರಿಸಬೇಕು. ಜಿಲ್ಲಾ ಖಜಾನೆಯಿಂದ ಗೌಪ್ಯ…

Read More

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ೮೫ ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿ ಹಿರಿ ಹಿರಿ ಹಿಗ್ಗಿದರು.ಜಿಲ್ಲೆಯ ಲೋಕಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ ೨೭ ರಂದು ಮನೆಯಿಂದ ಮತದಾನ ಮಾಡಲು ಒಪ್ಪಿಗೆ ಪತ್ರ ನೀಡಿರುವ ೮೫ ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರ ಮನೆಗಳಿಗೆ ವೇಳಾಪಟ್ಟಿ ಮತ್ತು ರೂಟ್ ಮ್ಯಾಪ್ ಸಿದ್ದಪಡಿಸಿಕೊಂಡಿರುವ ಮತಗಟ್ಟೆ ಸಿಬ್ಬಂದಿ ತೆರಳಿ ಮತದಾನ ಪ್ರಕ್ರಿಯೆಗಳನ್ನು ನಡೆಸಿದರು.ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯ ಕುಂಟೋಜಿ ಗ್ರಾಮದ ೭೭ ವರ್ಷದ ವಿಶೇಷ ಚೇತನರಾದ ಮಹಾದೇವಿ ಹಿರೇಮಠ ಅವರು, ಅಧಿಕಾರಿಗಳು ತಿಳಿಸಿದ ಮಾದರಿಯಲ್ಲಿಯೇ ಮತಪತ್ರವನ್ನು ಬಿಡಿಸಿ, ಮತ ಹಾಕಿ, ಸಂಬಂಧಪಟ್ಟ ಲಕೋಟೆಯಲ್ಲಿಯೇ ಮತಪತ್ರವನ್ನು ಹಾಕಿದರು. ನಂತರ ಮಾತನಾಡಿದ ಅವರು, ಕಾಲು ಮುರಿದ ಕಾರಣ ನಡೆಯಲು ಸಾಧ್ಯವಿಲ್ಲವಾಗಿದ್ದು ಮನೆ ಬಳಿಗೆ ನನ್ನ ಬಂದು ನನ್ನ ಮತ ಪಡೆದದ್ದು ‘ಬಾಳಾ ಛಲೋ…

Read More

ವಿಜಯಪುರ: ಬೇಸಿಗೆಯ ಈ ಸಂದರ್ಭದಲ್ಲಿ ನೀರು ಆಹಾರ ಇಲ್ಲದೆ ನರಳುತ್ತಿದ್ದ ಪ್ರಾಣಿ ಪಕ್ಷಿಗಳಿಗೆ ಮಾನವೀಯ ದೃಷ್ಟಿಯಿಂದ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಕ್ಕಳಾದ ಮಲ್ಲಿಕಾರ್ಜುನ ಕತ್ನಳ್ಳಿ, ಅನುಶ್ರೀ-ಶ್ರೀನಿಧಿ ಬಂಡೆ, ಅನಿತಾ ಸಮಗೊಂಡ, ಮಲ್ಲು ಗೋರನಾಳ, ರಾಕೇಶ, ರವಿ,ಸೃಷ್ಟಿ ಸಮಗೊಂಡ, ಶಬರೀಶ ಸಮಗೊಂಡ ಅವರು ನೀರು ಮತ್ತು ಆಹಾರ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.ಬೇಸಿಗೆಯಲ್ಲಿ ಜನರೇ ನೀರಿಗಾಗಿ ಪರದಾಡುತ್ತಾರೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಸ್ಥಿತಿ ಹೇಳತೀರದು. ಎಲ್ಲರೂ ಪಕ್ಷಿಗಳ ರಕ್ಷಣೆಗೆ ಮುಂದಾಗಬೇಕೆಂದು ಮಕ್ಕಳು ಮನವಿ ಮಾಡಿದರು.’ಬೇಸಿಗೆ ಬಂದಿದೆ. ಪಕ್ಷಿಗಳು ಬಾಯಾರುತ್ತಿವೆ. ನಿಮ್ಮನೆ ಸುತ್ತಮುತ್ತ, ಟೆರೇಸಿನ ಮೇಲೆ ತೆರೆದ ಮಡಿಕೆ, ಹೂಜಿಯಲ್ಲಿ ನೀರಿಡಿ. ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ’-ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದರ್ಭದಲ್ಲಿ ವ್ಯರ್ಥವಾಗಿ ಉಳಿದಿದ್ದ ಮಿನರಲ್ ವಾಟರ್ ಪ್ಲಾಸ್ಟಿಕ್ ಬಾಟಲುಗಳಿಂದ ನಾಗಠಾಣದಮಕ್ಕಳು ಸ್ವತಃ ಈ ಪರಿಕರಗಳನ್ನು ತಯಾರಿಸಿ, ಗಿಡಗಳಿಗೆ ತೂಗು ಹಾಕಿದ್ದು, ವಿಶೇಷವಾಗಿತ್ತು.ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಆವರಣದಲ್ಲಿ ಇರುವ ಗಿಡಮರಗಳಲ್ಲಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ, ಪ್ರತಿದಿನ ಸಂಜೆಯ…

Read More

ಕೆಪಿಸಿಸಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಅಭಿಮತ ವಿಜಯಪುರ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಅಲಗೂರ ಅವರು ಒಬ್ಬ ವಿದ್ಯಾವಂತ ಉತ್ತಮ ಅಭ್ಯರ್ಥಿಯಾಗಿದ್ದುಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲ ಗಂಗಾಮತಸ್ಥ ಸಮುದಾಯ, ಬೆಸ್ತ ಜನಾಂಗ, ಸಾಂಪ್ರದಾಯಿಕ ಮೀನುಗಾರರು ಸೇರಿದಂತೆ ಎಲ್ಲ ವರ್ಗಗಳೂ ಅವರನ್ನು ಬೆಂಬಲಿಸಬೇಕೆಂದು ಕೆಪಿಸಿಸಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಕರೆ ನೀಡಿದರು.ಶನಿವಾರ ನಗರದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ‍್ಯ ಪೂರ‍್ವದಲ್ಲಿ ಹಾಗೂ ಸ್ವಾತಂತ್ರ‍್ಯ ನಂತರದ ಅಭಿವೃದ್ಧಿಯ ಪಥದಲ್ಲಿ ತನ್ನದೇ ಆದ ಚಾಪನ್ನು ಮೂಡಿಸುತ್ತಾ ಬಂದಿದೆ ಎಂದರು.ಜಗತ್ತಿನಲ್ಲಿ ಸುಳ್ಳಿಗೆ ಆಸ್ಕರ್ ಪ್ರಶಸ್ತಿ ಏನಾದರೂ ಇದ್ದರೆ ಅದು ನಮ್ಮ ನರೇಂದ್ರ ಮೋದಿ ಅವರಿಗೆ ಸಿಗುತ್ತದೆ. ಯಾಕೆಂದರೆ ಪ್ರತಿಯೊಬ್ಬ ನಾಗರಿಕನ ಖಾತೆಗೆ ರೂ.೧೫ ಲಕ್ಷ ಹಣ ಹಾಕುವ ಭರವಸೆ ನೀಡಿ ಹತ್ತು ವರ್ಷಗಳೇ ಕಳೆದರೂ ಸಹ ದೇಶದ ಯಾವೊಬ್ಬ ನಾಗರೀಕನಿಗೂ ಹತ್ತು ರೂಪಾಯಿ ಸಹ ಖಾತೆಗೆ ಬಂದಿಲ್ಲ. ವರ್ಷಕ್ಕೆ ೨ ಲಕ್ಷ ಉದ್ಯೋಗ ನೀಡುವ…

Read More

ದೇವರಹಿಪ್ಪರಗಿ: ಬಿ.ಎಲ್.ಡಿ.ಇ ಸಂಸ್ಥೆಯ ದಿ.ಎ.ಬಿ.ಸಾಲಕ್ಕಿ ಪ್ರೌಢಶಾಲೆಯ ೧೯೯೦-೯೧ನೇ ಸಾಲಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರ ಗುರುವಂದನಾ ಹಾಗೂ ಸ್ನೇಹಿತರ ಸಮ್ಮೀಲನ ಕಾರ್ಯಕ್ರಮ ಇಂದು (ಭಾನುವಾರ) ಜರುಗಲಿದೆ.ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಬೆಂಗಳೂರು ಮಾರತಹಳ್ಳಿ ವಿಭೂತಿಪುರ ವೀರಸಿಂಹಾಸನ ಸಂಸ್ಥಾನಮಠದ ಮಹಾಂತಲಿಂಗ ಸ್ವಾಮೀಜಿ ಹಾಗೂ ಎಮ್ಮಿಗನೂರ ಹಂಪಿಸಾವಿರದೇವರಮಠದ ವಾಮದೇವ ಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಎ.ಆರ್.ಭತಗುಣಕಿ ವಹಿಸಲಿದ್ದಾರೆ. ಉದ್ಘಾಟಕರಾಗಿ ನಿವೃತ್ತ ಪ್ರಾಚಾರ್ಯ ಎಸ್.ಬಿ.ಮಿರ್ಜಿ ಆಗಮಿಸಲಿದ್ದು, ತಹಶೀಲ್ದಾರ ಪ್ರಕಾಶ ಸಿಂದಗಿ, ಅಂಕಣಕಾರ ಮಂಜುನಾಥ ಜುನಗೊಂಡ, ಪ್ರಾಚಾರ್ಯ ವ್ಹಿ.ಎಮ್.ಪಾಟೀಲ, ಬಿ.ಜಿ.ಅರಳಿಮಟ್ಟಿ ಸೇರಿದಂತೆ ನಿವೃತ್ತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ, ಶಿಕ್ಷಕಿಯರ ಬಳಗ ಭಾಗವಹಿಸಲಿದೆ. ನಂತರ ದೀಪಕ ಮೆಲೊಡೀಸ್ ಇವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಸ್ನೇಹಿತರ ಬಳಗದ ಪ್ರಕಟಣೆ ತಿಳಿಸಿದೆ

Read More