Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯಾರ್ಥಿ ನಿಲಯದಲ್ಲಿ ಶುಚಿತ್ವದ ಆಹಾರ, ಶುದ್ಧ ನೀರು, ಸ್ವಚ್ಛ ಗಾಳಿಯ ಸಹಿತ ಸಮಗ್ರ ಉತ್ತಮ ವಾತಾವರಣಕ್ಕೆ ಸಿಬ್ಬಂದಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಹಾರ ಸೇವಿಸಿ ಐವರು ವಿದ್ಯಾರ್ಥಿನೀಯರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸೋಮವಾರ ಭೇಟಿ ನೀಡಿ ವಿದ್ಯಾರ್ಥಿನೀಯರ ಆರೋಗ್ಯ ವಿಚಾರಿಸಿ, ನಿಲಯ ಪರಿಶೀಲಿಸಿ ಮಾತನಾಡಿದರು. ಮನೆ, ಮನೆಯವರನ್ನು ಬಿಟ್ಟು ವಿದ್ಯಾಭ್ಯಾಸಕ್ಕಾಗಿ ನಿಲಯಗಳಲ್ಲಿ ಅಭ್ಯಸಿಸುವ ಮಕ್ಕಳ ಜವಾಬ್ದಾರಿ ನಿಲಯ ಪಾಲಕರು ಹಾಗೂ ಸಿಬ್ಬಂದಿಯದಾಗಿದೆ. ವಿದ್ಯಾರ್ಥಿಗಳ ಆಹಾರ, ನೀರು, ಸ್ವಚ್ಛತೆಯ ಕುರಿತು ಸಿಬ್ಬಂದಿಯ ನಿರ್ಲಕ್ಷö್ಯ ಎಂದಿಗೂ ಸಹಿಸಲಾಗದು ಎಂದು ಹೇಳುತ್ತಾ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಮತ್ತು ಇಂಥ ಘಟನೆಗಳು ಮತ್ತೇ ಮರುಕಳಿಸದಂತೆ ಎಚ್ಚರಿಕೆ ನೀಡಿ, ಎಲ್ಲ ವಿದ್ಯಾರ್ಥಿನೀಯರ ಬಗ್ಗೆ ಕಾಳಜಿ ವಹಿಸಲು ಸೂಚಿಸಿದರು.ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ ಜಡಿಮಠ, ನಿಲಯ ಪಾಲಕಿ ದಫೇದಾರ, ಮಹಾಂತೇಶ ವಂದಾಲ, ಅಜೀತ ರಾಠೋಡ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಇಂಜನಿಯರಿಂಗ್ ಮಹಾವಿದ್ಯಾಲಯದಲ್ಲಿ ಇದೇ ದಿನಾಂಕ ೨೧ ರಿಂದ ಮೂರು ದಿನಗಳ ಕಾಲ ೪ನೇ ಕರ್ನಾಟಕ ರಾಜ್ಯ ಪೀಡಿಯಾಟ್ರಿಕ್ ಮತ್ತು ೩೯ನೇ ದಕ್ಷಿಣ ವಲಯ ಪೆಡಿಕಾನ್ ೨೦೨೫ ಸಮ್ಮೇಳನ ಆಯೋಜಿಸಲಾಗಿದೆ ಎಂದು ಐಎಪಿ ಅಧ್ಯಕ್ಷ ಡಾ.ಎಸ್.ವಿ. ಪಾಟೀಲ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಕ್ಕಳ ಆರೋಗ್ಯ ವಿಷಯದಲ್ಲಿ ಅನೇಕ ಸಂಶೋಧನೆಗಳು ನಡೆಯುತ್ತಿವೆ, ಈ ಎಲ್ಲ ವಿಷಯಗಳ ಸಮಗ್ರ ಚಿಂತನ ಮಂಥನ ನಡೆಸುವ ನಿಟ್ಟಿನಲ್ಲಿ ಈ ಸಮಾವೇಶಗಳು ಮಹತ್ವ ಪಡೆದಿದ್ದು, ಈ ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ವಿಜಯಪುರ ಬಿಎಲ್ಡಿಇ ವೈದ್ಯಕೀಯ ವಿವಿ ಆತಿಥ್ಯದಲ್ಲಿ ವಿಜಯಪುರದಲ್ಲಿ ಮೊದಲ ಬಾರಿಗೆ ಈ ಸಮಾವೇಶ ನಡೆಯಲಿದ್ದು, ಡಾ.ಬಿದರಿ ಅವರ ಅಶ್ವಿನಿ ಇನ್ಸಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಐಎಪಿ ಕರ್ನಾಟಕ ಹಾಗೂ ಜಿಲ್ಲಾ ಘಟಕದ ಸಹಯೋಗದಲ್ಲಿ ಈ ಸಮಾವೇಶ ಆಯೋಜಿಸಲಾಗುತ್ತಿದೆ.`ಪ್ರತಿ ಮಗುವಿಗಾಗಿ ಜ್ಞಾನ, ನವೀನತೆ ಮತ್ತು ಆರೈಕೆಯನ್ನು ಏಕೀಕರಿಸುವುದು’ ಎಂಬ ವಿಷಯಾಧಾರಿತ ಈ ಸಮ್ಮೇಳನದಲ್ಲಿ ಕರ್ನಾಟಕ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಈ ಬಾರಿ ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ ಸುಂಬಡ ಆಗ್ರಹಿಸಿದರು.ಕಳೆದ 20 ವರ್ಷಗಳ ಬಳಿಕ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದು ಅವರಿಂದ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದ್ದು. ಜಿಲ್ಲೆಯ ಗಡಿಭಾಗದ ಸಿಂದಗಿ ಮತಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದಂತೆ ಆಗುತ್ತದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ ಸಿಂದಗಿ ಕ್ಷೇತ್ರಕ್ಕೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಿದಂತಾಗುತ್ತದೆ ಅದಕ್ಕಾಗಿ ಸಿಂದಗಿ ಶಾಸಕ ಅಶೋಕ ಮನಗೂಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರಲ್ಲಿ ಪಾಲ್ಗೋಳ್ಳಲು ನೋಂದಣಿಗೆ ನವೆಂಬರ್ 19 ಬುಧವಾರ ಸಂಜೆ 5 ಗಂಟೆಯ ವರೆಗೆ ಕೊನೆಯ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಕೂಡಲೇ ಹೆಸರು ನೋಂದಾಯಿಸಬೇಕು ಎಂದು ನೋಂದಣಿ ಸಮಿತಿಯ ಡಾ. ರಾಜು ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಹಳಷ್ಟು ಜನರು ಕುಟುಂಬ ಸಮೇತ ಹೆಸರು ನೋಂದಣಿ ಮಾಡಿಸಿದ್ದಾರೆ. ಸರಕಾರಿ ಹಿರಿಯ ಅಧಿಕಾರಿಗಳು, ನಾನಾ ಕ್ಷೇತ್ರಗಳ ಗಣ್ಯರು, ಖ್ಯಾತ ಕ್ರೀಡಾಪಟುಗಳೂ ಕೂಡ ಹೆಸರು ನೋಂದಾಯಿಸಿದ್ದಾರೆ. ಅಲ್ಲದೇ, ಈಗಲೂ ಸಾಕಷ್ಟು ಜನ ಹೆಸರು ನೋಂದಾಯಿಸಲು ಉತ್ಸುಕರಾಗಿದ್ದಾರೆ.ಈ ಬಾರಿಯ ಓಟವನ್ನು ಮತ್ತಷ್ಟು ಆಕರ್ಷಣೀಯವಾಗಿಸಲು ಮತ್ತು ಹೆಚ್ಚೆಚ್ಚು ಜನರು ಪಾಲ್ಗೋಳ್ಳಲು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ಹೀಗಾಗಿ ಅಸಕ್ತರು ಕೂಡಲೇ ಹೆಸರು ನೋಂದಾಯಿಸುವ ಮೂಲಕ ಜಲ, ವೃಕ್ಷ, ಶಿಕ್ಷಣ, ಆರೋಗ್ಯ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಈ ಓಟದಲ್ಲಿ ಪಾಲ್ಗೋಳ್ಳಬೇಕು ಎಂದು ಡಾ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತಾಶ್ರಯದಲ್ಲಿ ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನವೆಂಬರ್ 20 ರಂದು ಗುರುವಾರ ವಾಕಥಾನ್ ಮತ್ತು ಉಚಿತ ಮೂಲವ್ಯಾಧಿ ತಪಾಸಣೆ–ಚಿಕಿತ್ಸೆ ಶಿಬಿರ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ನಗರದ ಗಾಂಧಿಚೌಕಿನಿಂದ ಗಗನ ಮಹಲ ವರೆಗೆ ವಾಕಥಾನ್ ನಡೆಯಲಿದೆ. ನಂತರ ಗಗನಮಹಲ್ ಉದ್ಯಾನದಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ ಓಪಿಡಿ ಸಂಖ್ಯೆ 10ರಲ್ಲಿ ಮೂಲವ್ಯಾಧಿ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ಆಯೋಜಿಸಲಾಗಿದೆ.ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ, ಶಸ್ತ್ರ ಚಿಕಿತ್ಸೆ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಹುಣಶ್ಯಾಳ ಪಿಸಿ ಗ್ರಾಮದಐಶ್ವರ್ಯ ಶರಣಯ್ಯ ವಸ್ತ್ರದವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ (ಪ್ರೌಢಶಾಲಾ ವಿಭಾಗ) ಗುಂಡು ಎಸೆತ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಶಿವಮೊಗ್ಗದಲ್ಲಿ ಇದೇ ನ.೧೯ ರಂದು ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ.
ಟಿಪ್ಪು ಕ್ರಾಂತಿ ಸೇನೆಯ ಸಂಸ್ಥಾಪಕ ಅಧ್ಯಕ್ಷ ದಸ್ತಗೀರ ಮುಲ್ಲಾ ಸ್ವಾಗತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದಲ್ಲಿ ರೂ.೬೪ ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸಾಮಾಜಿಕ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾಡಲಿಕ್ಕೆ ೬೦ ಸಮುದಾಯ ಭವನಗಳನ್ನು ರಾಜ್ಯ ಸರಕಾರ ಮಂಜೂರು ಮಾಡಿ ಆದೇಶ ಮಾಡಿದ್ದಕ್ಕೆ ಸ್ವಾಗತಿಸುತ್ತೇವೆ ಎಂದು ಟಿಪ್ಪು ಕ್ರಾಂತಿ ಸೇನೆಯ ಸಂಸ್ಥಾಪಕಾಧ್ಯಕ್ಷ ದಸ್ತಗೀರ ಮುಲ್ಲಾ ಸ್ವಾಗತಿಸಿದ್ದಾರೆ.ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಈ ದೇಶದಲ್ಲಿ ಕೆಲವಂದಿಷ್ಟು ತಾಂತ್ರಿಕ ದೋಷಗಳಾಗಿದ್ದು, ಆ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕೆಂದು ಈ ಮೂಲಕ ಸರ್ಕಾರದ ಗಮನ ಸೆಳೆಯುವ ಕಾರ್ಯ ಮಾಡುತ್ತಿದ್ದೇವೆ. ಅಲ್ಪಸಂಖ್ಯಾತರು ಎಂದು ಸಂಭೋದಿಸುವಾಗ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ/ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಎಷ್ಟು ಧರ್ಮಗಳು ಅಥವಾ ಸಮುದಾಯಗಳು ಬರುತ್ತವೆ ಎನ್ನುವುದನ್ನು ಗಮನದಲ್ಲಿಟ್ಟು ಮಂಜೂರು ಮಾಡಬೇಕಾಗಿತ್ತು. ಆದರೆ ಇಲ್ಲಿ ಆ ಕೆಲಸ ಆಗಿಲ್ಲ. ಎನ್ನುವುದಕ್ಕೆ ಒಂದಷ್ಟು ವಿಷಗಳು ಎದ್ದು ಕಾಣುತ್ತಿವೆ. ಮಂಜೂರಾದ ರೂ.೬೪ಕೋಟಿ ವೆಚ್ಚದ ಭವನಗಳು ವಕ್ಫ್ ಆಸ್ತಿಯ ಜಾಗೆಯಲ್ಲಿ ಸ್ಥಳವನ್ನು ಗುರುತಿಸಲಾಗಿದೆ.ವಕ್ಫ್ ಆಸ್ತಿಯು…
ಗುಮ್ಮಟ ನಗರಿಯಲ್ಲಿ ಅವಿಸ್ಮರಣೀಯ ಸಮ್ಮಿಲನ | 40 ವರ್ಷದ ಬಳಿಕ ಗುರು-ಶಿಷ್ಯರ ಅಪೂರ್ವ ಸಂಗಮ ಉದಯರಶ್ಮಿ ದಿನಪತ್ರಿಕೆ ವರದಿ: ಗುಲಾಬಚಂದ ಜಾಧವವಿಜಯಪುರ: ಸುದೀರ್ಘ ನಾಲ್ಕು ದಶಕಗಳ ಪಯಣದ ನಂತರ ಕಲಿಸಿದ ಗುರು, ಕಲಿತ ಶಿಷ್ಯರ ಅಪೂರ್ವ ಪುನರುಜ್ಜೀವನ ಚೈತ್ರದ ಭಾವ ಬೆಸುಗೆಯ ಮಿಲನಗೊಂಡ ಅವಿಸ್ಮರಣೀಯ ಸವಿಘಳಿಗೆ ವಿಜಯಪುರ ನಗರದಲ್ಲಿ ಅನವರಣಿಸಿತು.ನಗರದ ಬಿಎಲ್ ಡಿಇ ಸಂಸ್ಥೆಯ ಎ.ಎಸ್.ಪಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕಲಿತ 1984-85 ನೇ ಸಾಲಿನ ಬಿಕಾಂ ವಿಭಾಗದ ವಿದ್ಯಾರ್ಥಿ,ವಿದ್ಯಾರ್ಥಿನಿಯರ ಸ್ನೇಹ ಸಮ್ಮೇಳನ ಹಾಗೂ ಹೋಟೆಲ್ ಗ್ಯಾಲಕ್ಸಿ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.ಗಣ್ಯಮಾನ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಳೆಯ ಭಾವಾಂತರಂಗದ ಸವಿ ಮೊನಚುಗಳನ್ನು ಖುಷಿಯಿಂದ ತೆರೆದಿಟ್ಟರು. ಶಿಷ್ಯಸಹಪಾಠಿಗಳು ಅಂದಿನ ವ್ಯಾಸಂಗ ಅವಧಿಯಲ್ಲಿನ ಹಳೆ ಭಾವಗಳಿಗೆ ಜೀವ ತುಂಬಿ ಮನಸ್ಸು ಹಸಿಗೊಳಿಸಿಕೊಂಡರು. ತುಂಟಾಟತನದ ಹರಟೆ-ರಗಳೆ, ನೋವು-ನಲಿವಿನ ಖುಷಿಯೋಲ್ಲಾಸದ ಕ್ಷಣಗಳ ಭಾವಬುತ್ತಿ ತೆರೆದಿಟ್ಟರು.ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಳೇ ವಿದ್ಯಾರ್ಥಿಗಳು ಒಂದೇ ಕಡೆ ಸೇರಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ “ಗುರು-ಶಿಷ್ಯರ” ಪವಿತ್ರಭಾವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ವಂದೇ ಮಾತರಂ ಗೀತೆ ೧೫೦ ವಸಂತಗಳ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕರ್ತರು ಸುಶ್ರಾವ್ಯವಾಗಿ ವಂದೇ ಮಾತರಂ ಗೀತೆಯನ್ನು ಹಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆ ಹಾಡಿದಾಗ ದೇಶಭಕ್ತಿ ಭಾವ ಜಾಗೃತಗೊಳ್ಳುತ್ತದೆ, ಅಷ್ಟೊಂದು ದೇಶಾಭಿಮಾನ ಆ ಗೀತೆಯಲ್ಲಿ ಪ್ರತಿಬಿಂಬಿಸುತ್ತದೆ, ವಂದೇ ಮಾತರಂ ಗೀತೆ ಹಾಡುವಾಗ ಪ್ರತಿ ಪದದಲ್ಲೂ ದೇಶಭಕ್ತಿ ವೃದ್ಧಿಸುತ್ತದೆ, ದೇಶಭಕ್ತಿಯನ್ನೇ ಉಸಿರಾಗಿಸಿಕೊಂಡಿದ್ದ ಬಂಕೀಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆ ನಮ್ಮ ಭಾರತ ಭೂಮಿಗೆ ಗೌರವ ಸಲ್ಲಿಸುವ ಒಂದು ಮಹೋನ್ನತ ಗೀತೆ ಎಂದರು.ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ ಮಾತನಾಡಿ, ನಮ್ಮನೆಲ್ಲವನ್ನು ಸಲಹುತ್ತಿರುವ ಭಾರತ ಮಾತೆಯ ಭವ್ಯತೆಯನ್ನು ಸಾರುವ ವಂದೇ ಮಾತರಂ ದೇಶಭಕ್ತಿಯ ಪ್ರತೀಕ, ಸ್ವಾತಂತ್ರ್ಯ ಹೋರಾಟದ ವೇಳೆ ದೇಶಾಭಿಮಾನದ ಭಾವವನ್ನು ಬೆಳೆಸಿದ ವಂದೇ ಮಾತರಂ ಗೀತೆಯನ್ನು ನಾವು ನಿತ್ಯ ಪಠಿಸಬೇಕು, ನಮ್ಮ ದೇಶದ ಭವ್ಯ ಸಂಸ್ಕೃತಿ, ಭೌಗೋಳಿಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಾಲಕರ ಸಭೆಗಳು ಮಕ್ಕಳ ಶಿಕ್ಷಣಕ್ಕೆ ನಿರ್ಣಾಯಕವಾಗಿವೆ. ಅವು ಪಾಲಕರು ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಮಗುವಿನ ಶೈಕ್ಷಣಿಕ, ಸಾಮಾಜಿಕ ಮತ್ತು ಭಾವನಾತ್ಮಕ ಪ್ರಗತಿಯನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತವೆ ಎಂದು ಮುಖ್ಯೋಪಾಧ್ಯಾಯ ಎಸ್.ವಾಯ್. ಪ್ರೌಢ ಶಾಲೆ ಮಿರಗಿಯ ವೈ.ಜಿ.ಬಿರಾದಾರ ಹೇಳಿದರು.ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಡಿಯಲ್ಲಿ ಪಾಲಕರ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪಾಲಕರ ಸಭೆಗಳು ಪಾಲಕರು ತಮ್ಮ ಮಗುವಿನ ಸಾಮರ್ಥ್ಯ ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು, ಕಾಲೇಜಿನಲ್ಲಿ ತೊಡಗಿಸಿಕೊಳ್ಳಲು ಹಾಗೂ ಮನೆ ಮತ್ತು ಕಾಲೇಜಿನ ನಡುವಿನ ಬಲವಾದ ಪಾಲುದಾರಿಕೆಯನ್ನು ಬೆಳೆಸಲು ಸಹಾಯ ಮಾಡುತ್ತವೆ ಎಂದರು.ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿ ಪೋಷಕರು—ಕಾಲೇಜು—ವಿದ್ಯಾರ್ಥಿಗಳು ಈ ಮೂರು ಅಂಗಗಳು ಒಂದೇ ದಿಕ್ಕಿನಲ್ಲಿ ನಡೆದು ಸಹಕಾರ ನೀಡಿದಾಗ ಮಾತ್ರ ಶಿಕ್ಷಣದ ನಿಜವಾದ ಗುರಿ ಸಾಧನೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಪಾಲಕರ ಸಭೆಗಳು ಶೈಕ್ಷಣಿಕ ಗುಣಮಟ್ಟ ಸುಧಾರಣೆಯ ಪ್ರಮುಖ ಸಾಧನವಾಗಿವೆ.” ಎಂದರು..ಡಾ.ಎಸ್.ಬಿ.ಜಾಧವ , ಡಾ.ಸುರೇಂದ್ರ ಕೆ, ಡಾ.ವಿಶ್ವಾಸ…
